ವಿದೇಶ

ಉಕ್ರೇನ್‌ ಅಧ್ಯಕ್ಷ ಜೆಲೆನ್‌ಸ್ಕಿಯನ್ನು ಶ್ವೇತಭವನದಿಂದ ಹೊರದಬ್ಬಿದ ಟ್ರಂಪ್‌

ಉಭಯ ನಾಯಕರ ದ್ವಿಪಕ್ಷೀಯ ಮಾತುಕತೆ ವೇಳೆ ಮಾತಿನ ಚಕಮಕಿ ನಾವು ಸಾವು ತಡೆಯಲು ಯತ್ನಿಸಿದರೆ, ನೀವು ಹೆಣಗಳನ್ನು ನೋಡಲು ಹೋಗುತ್ತಿದ್ದೀರಿ ಎಂದು ಕೆಂಡಾಮಂಡಲವಾದ ಟ್ರಂಪ್‌ ವಾಷಿಂಗ್ಟನ್‌ : ಅಮೆರಿಕ ಮತ್ತು ಉಕ್ರೇನ್‌ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ಉಭಯ ದೇಶಗಳ ಧ್ಯಕ್ಷರ ಮಾತಿನ ಚಕಮಕಿಯಲ್ಲಿ ಅಂತ್ಯಗೊಂಡಿದ್ದು, ವ್ಲಾದಿಮಿರ್‌ ಜೆಲೆನ್‌ಸ್ಕಿಯನ್ನು ಡೊನಾಲ್ಡ್‌ ಟ್ರಂಪ್‌ ಅಕ್ಷರಶಃ ಶ್ವೇತಭವನದಿಂದ ಹೊರದಬ್ಬಿದ್ದಾರೆ. ಉಭಯ ದೇಶಗಳ ದ್ವಪಕ್ಷೀಯ ಮಾತುಕತೆ ಸಂದರ್ಭದಲ್ಲಿ ಈಂಥ ಘಟನೆ ನಡೆದಿರುವುದು ಅಪರೂಪದ ವಿದ್ಯಮಾನದ ಎನ್ನಲಾಗಿದೆ.ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು […]

ಉಕ್ರೇನ್‌ ಅಧ್ಯಕ್ಷ ಜೆಲೆನ್‌ಸ್ಕಿಯನ್ನು ಶ್ವೇತಭವನದಿಂದ ಹೊರದಬ್ಬಿದ ಟ್ರಂಪ್‌ Read More »

ನೇಪಾಳದಲ್ಲಿ ಪ್ರಬಲ ಭೂಕಂಪ : ಗಾಬರಿಯಾದ ಜನ

ಭಾರತ, ಚೀನಾದಲ್ಲೂ ಭೂಮಿ ಕಂಪಿಸಿದ ಅನುಭವ ಕಾಠ್ಮಂಡು: ನೇಪಾಳದ ಕಾಠ್ಮಂಡುವಿನಲ್ಲಿ ಇಂದು ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ. ನೇಪಾಳದ ಪೂರ್ವ ಮತ್ತು ಮಧ್ಯ ಭಾಗಗಳಲ್ಲಿರುವ ಜನರಿಗೆ ಭೂಕಂಪದ ಅನುಭವ ಆಗಿದೆ. ಭಾರತ,ಚೀನಾ ಮತ್ತು, ಟಿಬೆಟ್‌ನ ಕೆಲವು ಭಾಗಗಳಲ್ಲೂ ಭೂಕಂಪದ ಅನುಭವ ಆಗಿದೆ.ನೇಪಾಳದ ಮಧ್ಯ ಭಾಗದಲ್ಲಿರುವ ಹಿಮಾಲಯ ಪ್ರದೇಶದಲ್ಲಿ ಸಿಂಧುಪಾಲ್ ಚೌಕ್ ಜಿಲ್ಲೆಯ ಭೈರವಕುಂಡದಲ್ಲಿ ಭೂಕಂಪದ ಕೇಂದ್ರ ಬಿಂದು ಇದೆ ಎಂದು ಹೇಳಲಾಗಿದೆ. ಭೂಕಂಪದ ಕೇಂದ್ರಬಿಂದು ಸಿಂಧುಪಾಲ್ ಚೌಕ್ ಜಿಲ್ಲೆಯ ಭೈರವಕುಂಡದಲ್ಲಿದ್ದು,

ನೇಪಾಳದಲ್ಲಿ ಪ್ರಬಲ ಭೂಕಂಪ : ಗಾಬರಿಯಾದ ಜನ Read More »

ಚಾಂಪಿಯನ್ಸ್‌ ಟ್ರೋಫಿ ಕೂಟಕ್ಕೆ ಉಗ್ರರ ಕರಿನೆರಳು : ಒಬ್ಬೊಬ್ಬ ಆಟಗಾರನಿಗೆ 100 ಪೊಲೀಸರ ಭದ್ರತೆ

13 ಸಾವಿರ ಸೈನಿಕರಿಂದ ಕಟ್ಟೆಚ್ಚರದ ಕಾವಲು ಇಸ್ಲಾಮಾಬಾದ್‌ : ಪಾಕಿಸ್ಥಾನದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್‌ ಕೂಟದ ಮೇಲೆ ಭಯೋತ್ಪಾದಕರ ಕರಿನೆರಳು ಆವರಿಸಿದೆ. ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯ (ಐಎಸ್‌ಕೆಪಿ) ಎಂಬ ಭಯೋತ್ಪಾದಕ ಸಂಘಟನೆ ವಿದೇಶಿ ಪ್ರವಾಸಿಗರನ್ನು ಅಪಹರಿಸಿ ಒತ್ತೆ ಹಣಕ್ಕೆ ಬೇಡಿಕೆ ಇಡಬಹುದು ಎಂಬ ಗುಪ್ತಚರ ಮಾಹಿತಿ ಬಂದ ಬಳಿಕ ಪಾಕಿಸ್ಥಾನದಲ್ಲಿ ಕ್ರಿಕೆಟ್‌ ಆಡುತ್ತಿರುವ ವಿದೇಶಿ ಆಟಗಾರರಿಗೆ ಜೀವ ಬೆದರಿಕೆ ಶುರುವಾಗಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಕೂಟಕ್ಕೆ ಪಾಕ್‌ ಸರಕಾರ ಭಾರಿ ಭದ್ರತೆಯ ಏರ್ಪಾಡು ಮಾಡಿದೆ.

ಚಾಂಪಿಯನ್ಸ್‌ ಟ್ರೋಫಿ ಕೂಟಕ್ಕೆ ಉಗ್ರರ ಕರಿನೆರಳು : ಒಬ್ಬೊಬ್ಬ ಆಟಗಾರನಿಗೆ 100 ಪೊಲೀಸರ ಭದ್ರತೆ Read More »

280 ಪ್ರಯಾಣಿಕರಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ : ರೋಮ್‌ನಲ್ಲಿ ತುರ್ತು ಭೂಸ್ಪರ್ಶ

ಅಮೆರಿಕದಿಂದ ದಿಲ್ಲಿಗೆ ಬರುತ್ತಿದ್ದ ಡ್ರೀಮ್‌ಲೈನರ್ ವಿಮಾನ ನವದೆಹಲಿ: ನ್ಯೂಯಾರ್ಕ್‌ನ ಜಾನ್ ಎಫ್ ಕೆ ಕೆನಡಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೊರಟ್ಟಿದ್ದ ಅಮೆರಿಕದ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿದ್ದರಿಂದ ವಿಮಾನವನ್ನು ರೋಮ್‌ನಲ್ಲಿ ಭಾನುವಾರ ಸಂಜೆ ತುರ್ತು ಭೂ ಸ್ಪರ್ಶ ಮಾಡಲಾಗಿದೆ. 280 ಪ್ರಯಾಣಿಕರಿದ್ದ ಬೋಯಿಂಗ್ 787-9 ಡ್ರೀಮ್‌ಲೈನರ್ ವಿಮಾನ ಕ್ಯಾಸ್ಪಿಯನ್ ಸಮುದ್ರದ ಮೇಲೆ ಪಶ್ಚಿಮಕ್ಕೆ ಹೋಗುವ ಮೊದಲು ಇಟಲಿಯ ಕಡೆಗೆ ತನ್ನ ಮಾರ್ಗವನ್ನು ತಿರುಗಿಸಿದೆ. ನ್ಯೂಯಾರ್ಕ್ ನಿಂದ ಶನಿವಾರ ರಾತ್ರಿ 8.30ರ ಸಮಯದಲ್ಲಿ ಟೇಕ್ ಆಫ್ ಆದ

280 ಪ್ರಯಾಣಿಕರಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ : ರೋಮ್‌ನಲ್ಲಿ ತುರ್ತು ಭೂಸ್ಪರ್ಶ Read More »

ಮೆಕ್ಸಿಕೋದ ಬೀಚ್‌ನಲ್ಲಿ ಕಂಡುಬಂತು ಜಗತ್ತಿನ ಅಂತ್ಯವನ್ನು ಸೂಚಿಸುವ ಮೀನು!

ಈ ಮೀನು ಕಾಣಿಸಿದರೆ ಬ್ರಹ್ಮಾಂಡದ ಅಂತ್ಯ ಸಮೀಪಿಸುತ್ತಿದೆ ಎಂಬ ನಂಬಿಕೆ ಮೆಕ್ಸಿಕೋ: ಮೆಕ್ಸಿಕೊದ ಬಾಜಾ ಕ್ಯಾಲಿಫೋರ್ನಿಯಾ ಸುರ್‌ ಎಂಬ ಬೀಚ್‌ನಲ್ಲಿ ಇತ್ತೀಚೆಗೆ ಕಂಡು ಬಂದ ಮೀನೊಂದು ಈ ಜಗತ್ತು ಅಂತ್ಯವಾಗುವ ಮುನ್ಸೂಚನೆ ಎಂಬ ಭೀತಿಯನ್ನು ಸೃಷ್ಟಿಸಿದೆ. ಈ ಮೀನನ್ನು ಜನರು ಕರೆಯುವುದೇ ಡೂಮ್ಸ್‌ಡೇ ಮೀನು (ಬ್ರಹ್ಮಾಂಡದ ಅಂತ್ಯವನ್ನು ಸೂಚಿಸುವ ಮೀನು) ಎಂದು. ಇದು ಜನರ ಕಣ್ಣಿಗೆ ಬೀಳುವುದೇ ಇಲ್ಲ, ಎಲ್ಲಾದರೂ ಕಂಡು ಬಂದರೆ ಜಗತ್ತಿನ ಅಂತ್ಯದ ಮುನ್ಸೂಚನೆ ಎಂಬ ನಂಬಿಕೆ ಪಾಶ್ಚಾತ್ಯರಲ್ಲಿದೆ. ಈ ಮೀನು ಇತ್ತೀಚೆಗೆ ಮೆಕ್ಸಿಕೊದ

ಮೆಕ್ಸಿಕೋದ ಬೀಚ್‌ನಲ್ಲಿ ಕಂಡುಬಂತು ಜಗತ್ತಿನ ಅಂತ್ಯವನ್ನು ಸೂಚಿಸುವ ಮೀನು! Read More »

ಇಂದಿನಿಂದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಕೂಟ

ಪಾಕಿಸ್ಥಾನ-ನ್ಯೂಜಿಲ್ಯಾಂಡ್ ನಡುವೆ ಕರಾಚಿಯಲ್ಲಿ ಇಂದು ಮೊದಲ ಪಂದ್ಯ ಇಸ್ಲಾಮಾಬಾದ್‌: ಎಂಟು ರಾಷ್ಟ್ರಗಳು ಭಾಗವಹಿಸುವ ಐಸಿಸಿ ಪ್ರಾಯೋಜಿತ ಚಾಂಪಿಯನ್ಸ್ ಟ್ರೋಫಿ ಕ್ರೀಡಾಕೂಟ ಇಂದಿನಿಂದ ಶುರುವಾಗುತ್ತಿದೆ. ಮೊದಲ ಪಂದ್ಯ ಆತಿಥೇಯ ಪಾಕಿಸ್ಥಾನ ಮತ್ತು ನ್ಯೂಜಿಲ್ಯಾಂಡ್ ನಡುವೆ ಕರಾಚಿ ಮೈದಾನದಲ್ಲಿ ಮಧ್ಯಾಹ್ನ 2.30ಕ್ಕೆ ಆರಂಭವಾಗಲಿದೆ. ಎ ಗುಂಪಿನಲ್ಲಿ ಭಾರತ, ನ್ಯೂಜಿಲ್ಯಾಂಡ್‌, ಪಾಕಿಸ್ಥಾನ, ಬಾಂಗ್ಲಾದೇಶ ಇದ್ದರೆ, ಬಿ ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ಥಾನ ಮತ್ತು ಇಂಗ್ಲೆಂಡ್‌ ತಂಡಗಳಿವೆ. ಭಾರತ ತನ್ನ ಮೊದಲ ಪಂದ್ಯವನ್ನು ದುಬೈನಲ್ಲಿ ಫೆ.20ರಂದು ಬಾಂಗ್ಲಾದೇಶದ ವಿರುದ್ಧ ಆಡಲಿದೆ ಮತ್ತು

ಇಂದಿನಿಂದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಕೂಟ Read More »

ಲ್ಯಾಂಡಿಂಗ್‌ ಆಗುವಾಗ ತಲೆಕೆಳಗಾದ ವಿಮಾನ : ಬಾವಲಿಯಂತೆ ನೇತಾಡಿದ ಪ್ರಯಾಣಿಕರು

ಟೊರೊಂಟೊ : ಕೆನಡದ ಟೊರೊಂಟೊದ ಪಿಯರ್ಸನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಡೆಲ್ಟಾ ಏರ್​ಲೈನ್ಸ್ ವಿಮಾನ ತಲೆಕೆಳಗಾಗಿದ್ದು, ಈ ಅಪಘಾತದಲ್ಲಿ 17 ಮಂದಿ ಗಾಯಗೊಂಡಿದ್ದಾರೆ. ವಿಮಾನವು ಮಿನ್ನಿಯಾಪೋಲಿಸ್‌ನಿಂದ ಟೊರೊಂಟೊಗೆ ಹಾರುತ್ತಿದ್ದಾಗ ಲ್ಯಾಂಡಿಂಗ್ ಸಮಯದಲ್ಲಿ ರನ್‌ವೇಯಲ್ಲಿ ಮಗುಚಿ ಬಿದ್ದಿದೆ. ಸ್ಥಳದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ಇತರರು ಸಣ್ಣಪುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆ. ವಿಮಾನದಲ್ಲಿ 80 ಮಂದಿ ಪ್ರಯಾಣಿಕರಿದ್ದರು. ಪ್ರಯಾಣಿಕರು ತಲೆಕೆಳಗಾದ ವಿಮಾನದಿಂದ ತೆವಳಿಕೊಂಡು ಹೊರಬರುತ್ತಿರುವ ದೃಶ್ಯ ಸೋಷಿಲ್‌ ಮೀಡಿಯಾದಲ್ಲಿ ಭಾರಿ

ಲ್ಯಾಂಡಿಂಗ್‌ ಆಗುವಾಗ ತಲೆಕೆಳಗಾದ ವಿಮಾನ : ಬಾವಲಿಯಂತೆ ನೇತಾಡಿದ ಪ್ರಯಾಣಿಕರು Read More »

ಬಿಯರ್‌ ಕ್ಯಾನ್‌ನಲ್ಲಿ ಮಹಾತ್ಮ ಗಾಂಧಿ ಚಿತ್ರ : ಭಾರತೀಯರ ಆಕ್ರೋಶ

ಮಾಸ್ಕೊ: ರಷ್ಯಾದ ಮದ್ಯ ತಯಾರಕ ಕಂಪನಿಯೊಂದು ತನ್ನ ಹೊಸ ಬ್ರ್ಯಾಂಡ್‌ನ ಬಿಯರ್‌ ಕ್ಯಾನ್‌ ಮೇಲೆ ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಚಿತ್ರ ಮುದ್ರಿಸಿ ಅವಮಾನ ಮಾಡಿದ್ದು, ಈ ಕುರಿತಾದ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ಭಾರತೀಯರ ವ್ಯಾಪಕ ಆಕ್ರೋಶಕ್ಕೆ ತುತ್ತಾಗಿದೆ. ರಷ್ಯಾದ ಬಿಯರ್ ಕ್ಯಾನ್‌ನಲ್ಲಿ ಮಹಾತ್ಮ ಗಾಂಧಿಯವರ ಚಿತ್ರವನ್ನು ಪ್ರಿಂಟ್‌ ಮಾಡಿಸಿದ್ದು ಸೋಷಿಯಲ್‌ ಮೀಡಿಯಾದಲ್ಲಿ ದೊಡ್ಡ ವಿವಾದವನ್ನು ಹುಟ್ಟುಹಾಕಿದೆ. ವರದಿಗಳ ಪ್ರಕಾರ ರೆವರ್ಟ್ ಬ್ರಾಂಡ್‌ನ ಹೇಜಿ ಐಪಿಎ ಬಿಯರ್ ಕ್ಯಾನ್‌ಗಳಲ್ಲಿ ಗಾಂಧಿಯವರ ಫೋಟೋ ಮತ್ತು ಸಹಿಯನ್ನು ಮುದ್ರಿಸಲಾಗಿದೆ.

ಬಿಯರ್‌ ಕ್ಯಾನ್‌ನಲ್ಲಿ ಮಹಾತ್ಮ ಗಾಂಧಿ ಚಿತ್ರ : ಭಾರತೀಯರ ಆಕ್ರೋಶ Read More »

ಮುಂಬಯಿ ದಾಳಿಯ ಸೂತ್ರಧಾರ ರಾಣಾ ಭಾರತಕ್ಕೆ ಹಸ್ತಾಂತರ : ಟ್ರಂಪ್‌ ಘೋಷಣೆ

ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ ಸಂದರ್ಭದಲ್ಲಿ ಘೋಷಣೆ ವಾಷಿಂಗ್ಟನ್‌ : ಮುಂಬಯಿ ಮೇಲೆ 2008ರ ನ.26ರಂದು ನಡೆದ ಭೀಕರ ಭಯೋತ್ಪಾದಕ ದಾಳಿಯ ಸೂತ್ರಧಾರ ತಹಾವುರ್‌ ರಾಣಾನನ್ನು ಭಾರತಕ್ಕೆ ಗಡಿಪಾರು ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಒಪ್ಪಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಡೊನಾಲ್ಡ್​ ಟ್ರಂಪ್ ಅಪರಾಧಿ ರಾಣಾನನ್ನು ಭಾರತಕ್ಕೆ ಹಸ್ತಾಂತರ ಮಾಡುವ ಘೋಷಣೆ ಮಾಡಿದ್ದಾರೆ. ಕಳೆದ ತಿಂಗಳು, ಅಮೆರಿಕದ ಸುಪ್ರೀಂ ಕೋರ್ಟ್ ತಹಾವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿತ್ತು. ಪ್ರಕರಣದಲ್ಲಿ ಅವನ ಶಿಕ್ಷೆಯ ವಿರುದ್ಧ

ಮುಂಬಯಿ ದಾಳಿಯ ಸೂತ್ರಧಾರ ರಾಣಾ ಭಾರತಕ್ಕೆ ಹಸ್ತಾಂತರ : ಟ್ರಂಪ್‌ ಘೋಷಣೆ Read More »

ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ, ಮನೆ ಧ್ವಂಸ

ಮಾಜಿ ಪ್ರಧಾನಿ ಶೇಖ್‌ ಹಸೀನಾ ಭಾಷಣದಿಂದ ಕೆರಳಿದ ವಿರೋಧಿಗಳ ಕೃತ್ಯ ಢಾಕಾ: ದಂಗೆಯಿಂದ ಕಂಗಾಲಾಗಿರುವ ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪಲಾಯನ ಮಾಡಿ ಭಾರತದಲ್ಲಿ ಆಶ್ರಯ ಪಡೆದಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ ಮಾಡಿದ ಭಾಷಣದಿಂದ ಕೆರಳಿದ ವಿರೋಧಿ ಬಣ ರಾಜಧಾನಿ ಢಾಕಾದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸಿ ಅಪಾರ ನಾಶನಷ್ಟ ಉಂಟುಮಾಡಿದೆ. ಶೇಖ್ ಹಸೀನಾ ತಂದೆ, ಬಾಂಗ್ಲಾದೇಶ ಸಂಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ ಮತ್ತು ಅವರ ನಿವಾಸವನ್ನು ಧ್ವಂಸಗೊಳಿಸಲಾಗಿದೆ. ಮನೆಗೆ ಬೆಂಕಿ ಹಚ್ಚಿ, ಜೆಸಿಬಿ, ಕ್ರೇನ್

ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ, ಮನೆ ಧ್ವಂಸ Read More »

error: Content is protected !!
Scroll to Top