ವಿದೇಶ

ಮೋದಿ ಪೋಲೆಂಡ್‌ ಪ್ರವಾಸ : ಮಹಾರಾಜ ಜಾಮ್ ಸಾಹೇಬ್‌ ಸ್ಮಾರಕಕ್ಕೆ ನಮನ

ವಾರ್ಸಾ: ಪೋಲೆಂಡ್‌ ಮತ್ತು ಉಕ್ರೇನ್‌ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಜಾಮ್ ಸಾಹಿಬ್ ಸ್ಮಾರಕಕ್ಕೆ ತೆರಳಿ ನಮಿಸಿ ಗೌರವ ಸಲ್ಲಿಸಿದ್ದಾರೆ. ಭಾರತದ ಮಹಾರಾಜ ಜಾಮ್ ಸಾಹೇಬ್‌ ಎರಡನೇ ಮಹಾ ಯುದ್ಧದ ಸಂದರ್ಭದಲ್ಲಿ ಸಾವಿರಾರು ಯಹೂದಿ ಮಕ್ಕಳ ಜೀವ ಉಳಿಸಿದ್ದರು.ಗುಜರಾತಿನ ನವನಗರದ ಮಹಾರಾಜ ಜಾಮ್ ಸಾಹೇಬ್ ಯುದ್ಧದ ಸಂದರ್ಭದಲ್ಲಿ ಪೋಲೆಂಡ್​ನಿಂದ ಭಾರತಕ್ಕೆ ಅನೇಕ ಮಕ್ಕಳನ್ನು ಕರೆತಂದು ಯಹೂದಿಗಳ ಜೀವವನ್ನು ಉಳಿಸಿದ್ದರು ಮಾತ್ರವಲ್ಲದೆ ಅವರನ್ನು ಸ್ವಂತ ಮಕ್ಕಳಂತೆ ನೋಡಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಬುಧವಾರ ಪೋಲೆಂಡ್ ತಲುಪಿದ್ದಾರೆ. […]

ಮೋದಿ ಪೋಲೆಂಡ್‌ ಪ್ರವಾಸ : ಮಹಾರಾಜ ಜಾಮ್ ಸಾಹೇಬ್‌ ಸ್ಮಾರಕಕ್ಕೆ ನಮನ Read More »

ಕೊಣಾಜೆಯ ಯುವಕ ವಿದೇಶದಲ್ಲಿ ಕಟ್ಟಡದಿಂದ ಬಿದ್ದು ಮೃತ್ಯು

ಕೊಣಾಜೆ:  ವಿದೇಶದಲ್ಲಿ ಕೆಲಸಕ್ಕಿದ್ದ ಕೊಣಾಜೆ ಗ್ರಾಮದ ನಡುಪದವಿನ ಯುವಕ ವಿದೇಶದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ನಡುಪದವಿನ ಉಮ್ಮರ್ ಅವರ  ಪುತ್ರ ನೌಫಲ್(25) ಮೃತ ಯುವಕ. ಅಬುಧಾಬಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಉದ್ಯೋಗದಲ್ಲಿದ್ದ ‌ನೌಫಲ್ ಕಟ್ಟಡವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವಿವಾಹಿತನಾಗಿರುವ ನೌಫಲ್ ಅವರ ಮೃತದೇಹವನ್ನು ಊರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು  ನೌಫಲ್ ಅವರ ಕೊಣಾಜೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ನಝರ್ ಷಾ ಪಟ್ಟೋರಿ ತಿಳಿಸಿದ್ದಾರೆ.

ಕೊಣಾಜೆಯ ಯುವಕ ವಿದೇಶದಲ್ಲಿ ಕಟ್ಟಡದಿಂದ ಬಿದ್ದು ಮೃತ್ಯು Read More »

ಬಾಂಗ್ಲಾದಲ್ಲಿರುವ ಹಿಂದೂಗಳ ರಕ್ಷಣೆ ಮಾಡದಿದ್ದರೆ ಭಾರತ ಬಲಿಷ್ಠ ರಾಷ್ಟ್ರವಾಗಲು ಸಾಧ್ಯವಿಲ್ಲ | ಸದ್ಗುರು

ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರ, ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿಯೆತ್ತಿರುವ ಸದ್ಗುರು ಜಗ್ಗಿ ವಾಸುದೇವ್‌, ಹಿಂದೂಗಳ ಮೇಲಿನ ದೌರ್ಜನ್ಯಗಳು ಕೇವಲ ಬಾಂಗ್ಲಾದೇಶದ ಆಂತರಿಕ ವಿಷಯವಲ್ಲ ಎಂದಿದ್ದಾರೆ. ಬಾಂಗ್ಲಾದಲ್ಲಿ ವಾಸಿಸುವ ಅಲ್ಪಸಂಖ್ಯಾತರನ್ನು ರಕ್ಷಿಸಲು ವಿಫಲವಾದರೆ ಇಂಡಿಯಾ ಅಥವಾ ಭಾರತವು ಬಲಿಷ್ಠ ರಾಷ್ಟ್ರವಾಗಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಾಂಗ್ಲಾದೇಶದಲ್ಲಿರುವ ಹಿಂದೂಗಳನ್ನು ರಕ್ಷಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಇಶಾ ಫೌಂಡೇಶನ್‌ನ ಸಂಸ್ಥಾಪಕ, ಆಧ್ಯಾತ್ಮಿಕ ಗುರುಗಳಾದ ಸದ್ಗುರು ಒತ್ತಾಯಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ‘ಹಿಂದೂಗಳ

ಬಾಂಗ್ಲಾದಲ್ಲಿರುವ ಹಿಂದೂಗಳ ರಕ್ಷಣೆ ಮಾಡದಿದ್ದರೆ ಭಾರತ ಬಲಿಷ್ಠ ರಾಷ್ಟ್ರವಾಗಲು ಸಾಧ್ಯವಿಲ್ಲ | ಸದ್ಗುರು Read More »

ಸರಕಾರಿ ಮೀಸಲಾತಿ ವಿರೋಧಿಸಿ ಬಾಂಗ್ಲಾದಲ್ಲಿ ಪ್ರತಿಭಟನೆ | 150 ಕ್ಕೂ ಅಧಿಕ ಮಂದಿ  ಮೃತ್ಯು

ಬಾಂಗ್ಲಾದೇಶ :  ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ಜು.1ರಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಢಾಕಾ ಸೇರಿದಂತೆ ದೇಶದ ವಿವಿಧೆಡೆ ನಡೆದ ಹಿಂಸಾಚಾರದಲ್ಲಿ 105 ಮಂದಿ ಮೃತಪಟ್ಟಿದ್ದು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ಧಾರೆ. ಪ್ರತಿಭಟನಾಕಾರರು ಬಾಂಗ್ಲಾದ ರಾಜಧಾನಿ ಢಾಕಾದಲ್ಲಿನ ರಾಜ್ಯ ಸರ್ಕಾರ ಸುದ್ದಿವಾಹಿನಿಗೆ ಬೆಂಕಿ ಹಚ್ಚುವ ಒಂದು ದಿನ ಮೊದಲು, ಸರ್ಕಾರಿ ಟಿವಿ ಕಚೇರಿಯಲ್ಲಿ ಪ್ರಧಾನಿ ಶೇಖ್ ಹಸೀನಾ ಅವರ ಸಂದರ್ಶನ ನಡೆದಿತ್ತು. ಈ ಸಂದರ್ಶನದಲ್ಲಿ ಅವರು, ಪ್ರತಿಭಟನಾಕಾರರು ಮೀಸಲಾತಿಯನ್ನು ಕೊನೆಗೊಳಿಸಬೇಕೆಂಬ ತಮ್ಮ ಬೇಡಿಕೆಗೆ

ಸರಕಾರಿ ಮೀಸಲಾತಿ ವಿರೋಧಿಸಿ ಬಾಂಗ್ಲಾದಲ್ಲಿ ಪ್ರತಿಭಟನೆ | 150 ಕ್ಕೂ ಅಧಿಕ ಮಂದಿ  ಮೃತ್ಯು Read More »

ಶ್ರೀಲಂಕಾ ಮಾಜಿ ಕ್ರಿಕೆಟಿಗ ಧಮ್ಮಿಕಾ ನಿರೋಶನಾ ಅಪರಿಚಿತ ವ್ಯಕ್ತಿಯ ಗುಂಡಿಗೆ ಬಲಿ

ಕೋಲಂಬೊ : ಶ್ರೀಲಂಕಾದ ಮಾಜಿ ಕ್ರಿಕೆಟಿಗರೊಬ್ಬರನ್ನು ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಧಮ್ಮಿಕಾ ನಿರೋಶನಾ (41) ಅವರನ್ನು ಮಂಗಳವಾರ ರಾತ್ರಿ  ಗಾಲೆ ಜಿಲ್ಲೆಯ ಸಣ್ಣ ಪಟ್ಟಣವಾದ ಅಂಬಲಂಗೋಡದಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸ್ಥಳೀಯ ಪೊಲೀಸರ ಪ್ರಕಾರ, ನಿರೋಶನಾ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಇದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಆತನ ಮೇಲೆ ಗುಂಡು ಹಾರಿಸಿದ್ದಾನೆ ಪೊಲೀಸರು ಇನ್ನೂ ಶಂಕಿತನನ್ನು ಬಂಧಿಸಿಲ್ಲ. ಪ್ರಸ್ತುತ ಸಮಗ್ರ ತನಿಖೆ ನಡೆಯುತ್ತಿದೆ, ಆದರೆ ಅಪರಾಧದ

ಶ್ರೀಲಂಕಾ ಮಾಜಿ ಕ್ರಿಕೆಟಿಗ ಧಮ್ಮಿಕಾ ನಿರೋಶನಾ ಅಪರಿಚಿತ ವ್ಯಕ್ತಿಯ ಗುಂಡಿಗೆ ಬಲಿ Read More »

ಅಮೇರಿಕ ಅಧ್ಯಕ್ಷ ಸ್ಥಾನ ಅಭ್ಯರ್ಥಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಭ್ಯರ್ಥಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದ ಘಟನೆ ಪೆನ್ಸಿಲ್ವೇನಿಯಾದಲ್ಲಿ ನಡೆದಿದೆ. ಗುಂಡಿನ ದಾಳಿಯಿಂದಾಗಿ ಟ್ರಂಪ್ ಬಲ ಕಿವಿಗೆ ಗಾಯವಾಗಿದೆ. ಟ್ರಂಪ್‌ ಚುನಾವಣಾ ರ್ಯಾಲಿಯಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಕೂಡಲೇ ಭದ್ರತಾ ಸಿಬ್ಬಂದಿ ಶೂಟರ್ ಸೇರಿದಂತೆ ಇಬ್ಬರನ್ನು ಗುಂಡಿಕ್ಕಿ ಸಾಯಿಸಿದ್ದಾರೆ. ಗುಂಡಿನ ದಾಳಿಯ ಬಳಿಕ ಟ್ರಂಪ್ ಮುಖ ರಕ್ತಸಿಕ್ತವಾಗಿತ್ತು. ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಟ್ರಂಪ್‌ ವೇದಿಕೆಯಲ್ಲಿ ಮಾತನಾಡುತ್ತಿದ್ದಾಗ ಗುಂಡಿನ ಸದ್ದು ಕೇಳಿಸಿದೆ.

ಅಮೇರಿಕ ಅಧ್ಯಕ್ಷ ಸ್ಥಾನ ಅಭ್ಯರ್ಥಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ಮೇಲೆ ಗುಂಡಿನ ದಾಳಿ Read More »

ಭೂಕುಸಿತದಿಂದ ನೇಪಾಳದಲ್ಲಿ 7 ಭಾರತೀಯರು ನಾಪತ್ತೆ | ಜೀವ ಉಳಿಸಿಕೊಳ್ಳಲು ಬಸ್ಸಿನಿಂದ ಹಾರಿದ ಮೂವರು

ನೇಪಾಳ: ಭಾರೀ ಭೂಕುಸಿತದ ಸಂದರ್ಭದಲ್ಲಿ ಎರಡು ಬಸ್ಸುಗಳು ತ್ರಿಶೂಲಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿ, ಏಳು ಮಂದಿ ಭಾರತೀಯರು ಸೇರಿದಂತೆ 65 ಮಂದಿ ನಾಪತ್ತೆಯಾದ ಘಟನೆ ನೇಪಾಳದ ಚಿತ್ವಾನ್‌ ಎಂಬ ಪ್ರದೇಶದಲ್ಲಿ ನಡೆದಿದೆ. ಏಂಜೆಲ್ ಬಸ್ ಮತ್ತು ಗಣಪತಿ ಡಿಲಕ್ಸ್ ಬಸ್‌ಗಳು ಗೌರ್ ಮಾರ್ಗವಾಗಿ ಕಲ್ಮಂಡುವಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೆಳಿಗ್ಗೆ 3.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ನಾರಾಯಣಘಾಟ್- ಮುಗ್ಗಿಂಗ್ ರಸ್ತೆಯ ಸಿಮಾಲ್‌ಲಾಲ್ ಪ್ರದೇಶದಲ್ಲಿ ತುಂಬಿ ಹರಿಯುತ್ತಿದ್ದ ನದಿಗೆ ಭೂಕುಸಿತದಿಂದಾಗಿ ಪ್ರಯಾಣಿಕರು ತಳ್ಳಲ್ಪಟ್ಟರು ಎನ್ನಲಾಗಿದೆ. ಈ ಪೈಕಿ ಏಳು

ಭೂಕುಸಿತದಿಂದ ನೇಪಾಳದಲ್ಲಿ 7 ಭಾರತೀಯರು ನಾಪತ್ತೆ | ಜೀವ ಉಳಿಸಿಕೊಳ್ಳಲು ಬಸ್ಸಿನಿಂದ ಹಾರಿದ ಮೂವರು Read More »

ಹಳಿ ದಾಟುತ್ತಿದ್ದ ಆನೆಗೆ ರೈಲು ಡಿಕ್ಕಿ | ಕಾಲು ಕಳೆದುಕೊಂಡು ತೆವಳುತ್ತಾ ಸಾಗಿ ಪ್ರಾಣಬಿಟ್ಟ ಆನೆ

ಅಸ್ಸಾಂ: ಹಳಿ ದಾಟುತ್ತಿದ್ದ ಆನೆಯೊಂದಕ್ಕೆ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಅಸ್ಸಾಂನ ಮೊರಿಗಾಂವ್ ಜಿಲ್ಲೆಯ ಜಾಗಿರೋಡ್ ರೈಲು ನಿಲ್ದಾಣದ ಸಮೀಪದಲ್ಲಿ ನಡೆದಿದೆ. ಆನೆಗೆ ರೈಲು ಡಿಕ್ಕಿಯಾದ ಪರಿಣಾಮ 2 ಕಾಲು ಕಳೆದುಕೊಂಡ ಆನೆ ತೆವಳುತ್ತಾ ಸಾಗಿ ಪ್ರಾಣಬಿಟ್ಟಿದೆ. ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ವೇಗವಾಗಿ ತೆರಳುತ್ತಿದ್ದ ವೇಳೆ ಎರಡು ಆನೆಗಳು ಹಳಿ ದಾಟುತ್ತಿತ್ತು. ಒಂದು ಆನೆ ಕೂದಲೆಳೆಯುವ ಅಂತರದಲ್ಲಿ ಹಳಿ ದಾಟಿದರೆ ಅದರ ಹಿಂದಿದ್ದ ಈ ಆನೆಗೆ ರೈಲು ಡಿಕ್ಕಿಯಾಗಿದೆ. ರೈಲು ಡಿಕ್ಕಿಯಾದ ಪರಿಣಾಮ ಆನೆ ಗಂಭೀರವಾಗಿ ಗಾಯಗೊಂಡಿದೆ.

ಹಳಿ ದಾಟುತ್ತಿದ್ದ ಆನೆಗೆ ರೈಲು ಡಿಕ್ಕಿ | ಕಾಲು ಕಳೆದುಕೊಂಡು ತೆವಳುತ್ತಾ ಸಾಗಿ ಪ್ರಾಣಬಿಟ್ಟ ಆನೆ Read More »

6 ದಿನ ಸೋಶಿಯಲ್ ಮೀಡಿಯಾ ನಿಷೇಧ

ಪಾಕಿಸ್ತಾನ: 6 ದಿನಗಳ ಕಾಲ ವ್ಯಾಟ್ಸ್‌ಆ್ಯಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್ ಸೇರಿದಂತೆ ಎಲ್ಲಾ ಸೋಶಿಯಲ್ ಮೀಡಿಯಾ ಬಳಕೆಯನ್ನು ನಿಷೇಧಿಸಲಾಗಿದೆ. ಕಳೆದ ನಾಲ್ಕು ತಿಂಗಳಿಂದ ಎಕ್ಸ್ ನಿಷೇಧಿಸಿರುವ ಪಾಕಿಸ್ತಾನ ಇದೀಗ ಫೇಸ್‌ಬುಕ್, ವ್ಯಾಟ್ಸಾಪ್, ಇನ್‌ಸ್ಟಾಗ್ರಾಂ, ಟಿಕ್‌ಟಾಕ್, ಯೂಟ್ಯೂಬ್ ಸೇರಿದಂತೆ ಎಲ್ಲಾ ಸೋಶಿಯಲ್ ಮೀಡಿಯಾ ಮುಂದಿನ 6 ದಿನ ಸಂಪೂರ್ಣ ಬಂದ್ ಮಾಡಲಾಗಿದೆ. ಜುಲೈ 13ರಿಂದ 18ರ ವರೆಗೆ ಪಾಕಿಸ್ತಾನದಲ್ಲಿ ಸೋಶಿಯಲ್ ಮೀಡಿಯಾಗೆ ನಿರ್ಬಂಧ ವಿಧಿಸಲಾಗಿದೆ. ರಂಜಾನ್‌ ತಿಂಗಳಲ್ಲಿ ದ್ವೇಷಕಾರ ಮಾಹಿತಿಗಳು, ವಿಡಿಯೋ, ಫೋಟೋಗಳು, ಸಂದೇಶ ಹರಡದಂತೆ ತಡೆಯಲು ಪಾಕಿಸ್ತಾನ

6 ದಿನ ಸೋಶಿಯಲ್ ಮೀಡಿಯಾ ನಿಷೇಧ Read More »

ವಿಶ್ವಸುಂದರಿ ಪಟ್ಟ ಪಡೆದ ಕನ್ನಡತಿ | ಅಮೇರಿಕಾದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಶೃತಿ ಹೆಗಡೆ

ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಯುವತಿಯೊಬ್ಬಳು ವಿಜೇತರಾಗಿದ್ದಾರೆ. ಮುಂಡಿಗೆಸರ ಅಷ್ಟೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ, ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜಿನಲ್ಲಿ ಚರ್ಮ ರೋಗ ತಜ್ಞೆಯಾಗಿ ಎಂ.ಡಿ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವೃತ್ತಿಯಲ್ಲಿ ವೈದ್ಯೆಯಾಗಿದ್ದರು ಈಕೆ ಭರತನಾಟ್ಯ ಕಲಾವಿದೆಯಾಗಿ, ದುಬೈ, ಮಾಲ್ಮೀಮ್ಸ್, ಭೂತಾನ್ ಸೇರಿದಂತೆ ಅನೇಕ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾರೆ. ಈಗಾಗಲೇ ಕೆಲವು ಕನ್ನಡ ಧಾರಾವಾಹಿ, ಕನ್ನಡ

ವಿಶ್ವಸುಂದರಿ ಪಟ್ಟ ಪಡೆದ ಕನ್ನಡತಿ | ಅಮೇರಿಕಾದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಶೃತಿ ಹೆಗಡೆ Read More »

error: Content is protected !!
Scroll to Top