ವಿದೇಶ

ಮುಂಬಯಿ ದಾಳಿಯ ಸೂತ್ರಧಾರ ರಾಣಾ ಭಾರತಕ್ಕೆ ಹಸ್ತಾಂತರ : ಟ್ರಂಪ್‌ ಘೋಷಣೆ

ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ ಸಂದರ್ಭದಲ್ಲಿ ಘೋಷಣೆ ವಾಷಿಂಗ್ಟನ್‌ : ಮುಂಬಯಿ ಮೇಲೆ 2008ರ ನ.26ರಂದು ನಡೆದ ಭೀಕರ ಭಯೋತ್ಪಾದಕ ದಾಳಿಯ ಸೂತ್ರಧಾರ ತಹಾವುರ್‌ ರಾಣಾನನ್ನು ಭಾರತಕ್ಕೆ ಗಡಿಪಾರು ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಒಪ್ಪಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಡೊನಾಲ್ಡ್​ ಟ್ರಂಪ್ ಅಪರಾಧಿ ರಾಣಾನನ್ನು ಭಾರತಕ್ಕೆ ಹಸ್ತಾಂತರ ಮಾಡುವ ಘೋಷಣೆ ಮಾಡಿದ್ದಾರೆ. ಕಳೆದ ತಿಂಗಳು, ಅಮೆರಿಕದ ಸುಪ್ರೀಂ ಕೋರ್ಟ್ ತಹಾವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿತ್ತು. ಪ್ರಕರಣದಲ್ಲಿ ಅವನ ಶಿಕ್ಷೆಯ ವಿರುದ್ಧ […]

ಮುಂಬಯಿ ದಾಳಿಯ ಸೂತ್ರಧಾರ ರಾಣಾ ಭಾರತಕ್ಕೆ ಹಸ್ತಾಂತರ : ಟ್ರಂಪ್‌ ಘೋಷಣೆ Read More »

ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ, ಮನೆ ಧ್ವಂಸ

ಮಾಜಿ ಪ್ರಧಾನಿ ಶೇಖ್‌ ಹಸೀನಾ ಭಾಷಣದಿಂದ ಕೆರಳಿದ ವಿರೋಧಿಗಳ ಕೃತ್ಯ ಢಾಕಾ: ದಂಗೆಯಿಂದ ಕಂಗಾಲಾಗಿರುವ ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪಲಾಯನ ಮಾಡಿ ಭಾರತದಲ್ಲಿ ಆಶ್ರಯ ಪಡೆದಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ ಮಾಡಿದ ಭಾಷಣದಿಂದ ಕೆರಳಿದ ವಿರೋಧಿ ಬಣ ರಾಜಧಾನಿ ಢಾಕಾದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸಿ ಅಪಾರ ನಾಶನಷ್ಟ ಉಂಟುಮಾಡಿದೆ. ಶೇಖ್ ಹಸೀನಾ ತಂದೆ, ಬಾಂಗ್ಲಾದೇಶ ಸಂಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ ಮತ್ತು ಅವರ ನಿವಾಸವನ್ನು ಧ್ವಂಸಗೊಳಿಸಲಾಗಿದೆ. ಮನೆಗೆ ಬೆಂಕಿ ಹಚ್ಚಿ, ಜೆಸಿಬಿ, ಕ್ರೇನ್

ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ, ಮನೆ ಧ್ವಂಸ Read More »

ಶಾಲೆಗೆ ನುಗ್ಗಿ ಯದ್ವಾತದ್ವಾ ಗುಂಡು ಹಾರಿಸಿದ ದುಷ್ಕರ್ಮಿ : ಕನಿಷ್ಠ 10 ಮಂದಿ ಸಾವು

ಜಗತ್ತಿನ ಅತ್ಯಂತ ಸುರಕ್ಷಿತ ದೇಶದಲ್ಲಿ ನಡೆದ ಆಘಾತಕಾರಿ ಘಟನೆ ಸ್ಟಾಕ್‌ಹೋಮ್‌ : ಸ್ವೀಡನ್​ನ ಶಾಲೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಯೊಬ್ಬ ಯದ್ವಾತದ್ವಾ ಗುಂಡು ಹಾರಿಸಿದ ಪರಿಣಾಮ ಕನಿಷ್ಠ 10 ಮಂದಿ ಸಾವಿಗೀಡಾಗಿದ್ದಾರೆ ಹಾಗೂ ಅನೇಕ ಮಂದಿ ಗಾಯಗೊಂಡಿದ್ದಾರೆ ಎಂದು ರಾಯ್ಟರ್ಸ್‌ ಸುದ್ದಿ ಮಾಧ್ಯಮ ವರದಿ ಮಾಡಿದೆ. ಸಾಮಾನ್ಯವಾಗಿ ಅಮೆರಿಕದಲ್ಲಿ ನಡೆಯುತ್ತಿರುವ ಈ ಮಾದರಿಯ ದಾಳಿ ಅತ್ಯಂತ ಸುರಕ್ಷಿತ ದೇಶ ಎಂದು ಅರಿಯಲ್ಪಡುವ ಸ್ವೀಡನ್‌ನಲ್ಲೂ ಸಂಭವಿಸಿರುವುದು ಆಘಾತವುಂಟು ಮಾಡಿದೆ. ಬೆಳಗ್ಗೆ ಶಾಲೆ ಶುರುವಾಗುತ್ತಿದ್ದಂತೆಯೇ ಕಾರಿನಲ್ಲಿ ಬಂದು ಯದ್ವಾತದ್ವಾ ಗುಂಡು ಹಾರಿಸಿದ್ದಾನೆ. ಒರೆಬ್ರೊ

ಶಾಲೆಗೆ ನುಗ್ಗಿ ಯದ್ವಾತದ್ವಾ ಗುಂಡು ಹಾರಿಸಿದ ದುಷ್ಕರ್ಮಿ : ಕನಿಷ್ಠ 10 ಮಂದಿ ಸಾವು Read More »

18 ಪಾಕ್‌ ಸೈನಿಕರನ್ನು ಸಾಯಿಸಿದ ಬಂಡುಕೋರರು

ಕಾರ್ಯಾಚರಣೆಯಲ್ಲಿ 23 ಬಂಡುಕೋರರ ಹತ್ಯೆ ಇಸ್ಲಾಮಾಬಾದ್‌: ಬಲೂಚಿಸ್ಥಾನದ ವಾಯುವ್ಯ ಭಾಗದಲ್ಲಿ ಪ್ರತ್ಯೇಕತಾವಾದಿ ದಂಗೆಕೋರರೊಂದಿಗಿನ ಘರ್ಷಣೆಯಲ್ಲಿ ಪಾಕಿಸ್ಥಾನದ 18 ಸೈನಿಕರು ಸಾವಿಗೀಡಾಗಿದ್ದಾರೆ. ಇದೇ ವೇಳೆ 23 ಬಂಡುಕೋರರನ್ನು ಸೈನಿಕರು ಕೊಂದಿದ್ದಾರೆ. ಅಫ್ಘಾನಿಸ್ಥಾನದ ಗಡಿಯಲ್ಲಿರುವ ಕಲಾತ್‌ನಲ್ಲಿ ಪ್ರಮುಖ ಹೆದ್ದಾರಿಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ ದಂಗೆಕೋರರ ವಿರುದ್ಧ ನಡೆಸಿದ ಗುಂಡಿನ ದಾಳಿಯಲ್ಲಿ ಸೈನಿಕರು ಪಾಕ್‌ ಸೈನಿಕರು ಮೃತಪಟ್ಟಿದ್ದಾರೆ ಎಂದು ಸೇನೆ ತಿಳಿಸಿದೆ. ಶನಿವಾರ ಬೆಳಗ್ಗಿನಿಂದ ತೊಡಗಿ ರಾತ್ರಿಯಿಡೀ ಬಂಡುಕೋರರ ವಿರುದ್ಧ ನಡೆದ ಹೋರಾಟದ ನಂತರ ಭದ್ರತಾ ಪಡೆಗಳು ರಸ್ತೆ ತಡೆಯನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾಗಿವೆ.

18 ಪಾಕ್‌ ಸೈನಿಕರನ್ನು ಸಾಯಿಸಿದ ಬಂಡುಕೋರರು Read More »

ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದ ವಿಮಾನ | 18  ಮಂದಿ ದುರ್ಮರಣ ಸಾವು..!

ವಾಷಿಂಗ್ಟನ್‌ : ಪ್ರಯಾಣಿಕರಿದ್ದ ವಿಮಾನವೊಂದು ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದರಿಂದ ಪ್ರಯಾಣಿಕರಿದ್ದ ವಿಮಾನ ನದಿಗೆ ಬಿದ್ದಿದ್ದು,18 ಮಂದಿ ಸಾವನ್ನಪ್ಪಿದ ಘಟನೆ ಅಮೆರಿಕದ ವಾಷಿಂಗ್ಟನ್ ಡಿಸಿಯ ರೊನಾಲ್ಡ್‌ ರೇಗನ್ ವಿಮಾನ ನಿಲ್ದಾಣದ ಬಳಿ ನಡೆದಿದೆ. ಅಮೆರಿಕ ಸೇನಾ ಹೆಲಿಕಾಪ್ಟರ್‌ಗೆ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಪೋಟೋಮ್ಯಾಕ್ ನದಿಗೆ ವಿಮಾನ ಬಿದ್ದಿದೆ. ಸದ್ಯ ನದಿಯಿಂದ ವಿಮಾನದಲ್ಲಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದ್ದು, 18 ಮಂದಿಯ ಮೃತದೇಹಗಳನ್ನು ಮೇಲೆತ್ತಲಾಗಿದೆ. ಅಪಘಾತಕ್ಕೀಡಾದ ವಿಮಾನವು 60 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ಕಾನ್ಸಾಸ್‌ನಿಂದ ಡಿ.ಸಿ.ಯ

ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದ ವಿಮಾನ | 18  ಮಂದಿ ದುರ್ಮರಣ ಸಾವು..! Read More »

ಪಾಕಿಸ್ಥಾನಕ್ಕೆ ಟ್ರಂಪ್‌ ಹೊಡೆತ : ನೆರವುಗಳೆಲ್ಲ ರದ್ದು

ದಿವಾಳಿಯಾಗಿ ಕಂಗಾಲಾಗಿರುವ ಪಾಕ್‌ಗೆ ಇನ್ನಷ್ಟು ಸಂಕಟ ವಾಷಿಂಗ್ಟನ್‌: ಎರಡನೇ ಬಾರಿಗೆ ಅಧ್ಯಕ್ಷರಾಗಿರುವ ಡೊನಾಲ್ಡ್ ಟ್ರಂಪ್ ಪಾಕಿಸ್ಥಾನಕ್ಕೆ ಭಾರಿ ಹೊಡೆತವನ್ನೇ ನೀಡಿದ್ದಾರೆ. ಪಾಕಿಸ್ಥಾನಕ್ಕೆ ಅಮೆರಿಕ ನೀಡುತ್ತಿದ್ದ ಕೋಟಿಗಟ್ಟಲೆ ಡಾಲರ್‌ ನೆರವನ್ನು ಟ್ರಂಪ್‌ ಸ್ಥಗಿತಗೊಳಿಸಿದ್ದಾರೆ. ಮೊದಲೇ ದಿವಾಳಿಯಾಗಿ ಕಂಗಾಲಾಗಿರುವ ಪಾಕಿಸ್ಥಾನದ ಪಾಲಿಗೆ ಟ್ರಂಪ್‌ ನಿರ್ಧಾರ ಮರ್ಮಾಘಾತವಾಗಿ ಪರಿಣಮಿಸಿದೆ.ಟ್ರಂಪ್‌ ಹೊರಡಿಸಿದ ಆದೇಶದ ನಂತರ ಪಾಕಿಸ್ಥಾನಕ್ಕೆ ಅಮೆರಿಕ ನೀಡುತ್ತಿದ್ದ ವಿದೇಶಿ ನೆರವನ್ನು ಮರುಮೌಲ್ಯಮಾಪನದ ಉದ್ದೇಶದಿಂದ ಅಮಾನತುಗೊಳಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕದ ಈ ನಿರ್ಧಾರದಿಂದ ಸಾಂಸ್ಕೃತಿಕ ಪರಂಪರೆ ಸಂರಕ್ಷಣೆ ಪ್ರೋತ್ಸಾಹಿಸುವ ಸಾಂಸ್ಕೃತಿಕ

ಪಾಕಿಸ್ಥಾನಕ್ಕೆ ಟ್ರಂಪ್‌ ಹೊಡೆತ : ನೆರವುಗಳೆಲ್ಲ ರದ್ದು Read More »

ಕೊನೆಗೂ ಭಾರತಕ್ಕೆ ಗಡಿಪಾರಾಗಲಿದ್ದಾನೆ ಮುಂಬಯಿ ಭಯೋತ್ಪಾದಕ ದಾಳಿಯ ಸೂತ್ರಧಾರ

ತಹಾವುರ್‌ ರಾಣಾನನ್ನು ಭಾರತಕ್ಕೊಪ್ಪಿಸಲು ಆದೇಶಿಸಿದ ಅಮೆರಿಕದ ಸುಪ್ರೀಂ ಕೋರ್ಟ್‌ ಹೊಸದಿಲ್ಲಿ: ಮುಂಬಯಿ ಮೇಲಿನ ಭಯೋತ್ಪಾದಕ ದಾಳಿಯ ಸೂತ್ರಧಾರ ತಹಾವುರ್‌ ರಾಣಾನನ್ನು ಭಾರತಕ್ಕೆ ಗಡಿಪಾರು ಮಾಡಿಕೊಳ್ಳಲು ಇದ್ದ ಎಲ್ಲ ಅಡೆತಡೆಗಳು ನಿವಾರಣೆಯಾಗಿವೆ. ಅಮೆರಿಕದ ಸುಪ್ರೀಂ ಕೋರ್ಟ್‌ ರಾಣಾನನ್ನು ಭಾರತಕ್ಕೆ ಗಡಿಪಾರು ಮಾಡಲು ಅನುಮತಿ ನೀಡಿದೆ. ಪಾಕಿಸ್ಥಾನ ಮೂಲದ ಕೆನಡ ಪ್ರಜೆ 2008ರಲ್ಲಿ ಮುಂಬಯಿ ಮೇಲಾದ ಭೀಕರ ಭಯೋತ್ಪಾದಕ ದಾಳಿಯ ಸೂತ್ರಧಾರ ಎನ್ನಲಾಗಿದೆ. ತನ್ನ ಗಡಿಪಾರು ಆದೇಶ ಪ್ರಶ್ನಿಸಿ ರಾಣಾ ಅಮೆರಿಕದ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದ. ಈ ಮೇಲ್ಮನವಿಯನ್ನು

ಕೊನೆಗೂ ಭಾರತಕ್ಕೆ ಗಡಿಪಾರಾಗಲಿದ್ದಾನೆ ಮುಂಬಯಿ ಭಯೋತ್ಪಾದಕ ದಾಳಿಯ ಸೂತ್ರಧಾರ Read More »

ಇಂದಿನಿಂದ ಅಮೆರಿಕದಲ್ಲಿ ಡೊನಾಲ್ಡ್‌ ಟ್ರಂಪ್‌ ರಾಜ್ಯಭಾರ

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕಾರ ; ವಿದೇಶಗಳ ಗಣ್ಯರು, ಕಂಪನಿ ಸಿಇಒಗಳು ಭಾಗಿ ವಾಷಿಂಗ್ಟನ್: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಇಂದು ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್‌ನಲ್ಲಿ ನಡೆಯುವ ಐತಿಹಾಸಿಕ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎರಡನೇ ಬಾರಿಗೆ ಟ್ರಂಪ್‌ ಅಮೆರಿಕದ ಅಧ್ಯಕ್ಷರಾಗಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸೆಲೆಬ್ರಿಟಿಗಳು, ವಿದೇಶಿ ಗಣ್ಯರು ಮತ್ತು ಕಂಪನಿಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಇಟಲಿ

ಇಂದಿನಿಂದ ಅಮೆರಿಕದಲ್ಲಿ ಡೊನಾಲ್ಡ್‌ ಟ್ರಂಪ್‌ ರಾಜ್ಯಭಾರ Read More »

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌, ಹೆಂಡತಿಗೆ 14 ವರ್ಷ ಜೈಲು

ಭ್ರಷ್ಟಾಚಾರ ಪ್ರಕರಣದಲ್ಲಿ ಸುದೀರ್ಘ ಕಾರಾಗೃಹ ವಾಸ ಇಸ್ಲಾಮಾಬಾದ್‌: ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ಥಾನದ ಮಾಜಿ ಪ್ರಧಾನಿ, ಮಾಜಿ ಕ್ರಿಕೆಟಿಗ ಇಮ್ರಾನ್‌ ಖಾನ್‌ಗೆ ಅಲ್ಲಿನ ನ್ಯಾಯಾಲಯ 14 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇಮ್ರಾನ್‌ ಜೊತೆಗೆ ಅವರ ಪತ್ನಿ ಬುಶ್ರಾ ಬೀಬಿ ಅವರಿಗೂ ಶಿಕ್ಷೆ ವಿಧಿಸಿದೆ. ಇಮ್ರಾನ್ ಖಾನ್ ಪತ್ನಿ ಬುಶ್ರಾ ಬೀಬಿಗೆ 7 ಲಕ್ಷ ರೂ. ಇಮ್ರಾನ್ ಖಾನ್‌ಗೆ 10 ಲಕ್ಷ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ದಂಡ ಪಾವತಿಸಲು ಸಾಧ್ಯವಾಗದಿದ್ದರೆ ಇಮ್ರಾನ್‌ ಆರು ತಿಂಗಳು ಮತ್ತು ಬುಶ್ರಾ ಮೂರು

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌, ಹೆಂಡತಿಗೆ 14 ವರ್ಷ ಜೈಲು Read More »

ಅದಾನಿ ಸಮೂಹವನ್ನು ಕಾಡಿದ್ದ ಹಿಂಡನ್‌ಬರ್ಗ್‌ಗೆ ಬೀಗ

ವಾಷಿಂಗ್ಟನ್‌ : ಭಾರತದ ಅಗ್ರಗಣ್ಯ ಉದ್ಯಮಿ ಗೌತಮ್‌ ಅದಾನಿಯವರ ನೇತೃತ್ವದ ಅದಾನಿ ಕಂಪನಿಗಳಿಗೆ ಇನ್ನಿಲ್ಲದಂತೆ ಕಾಟ ಕೊಟ್ಟಿದ್ದ ಹಿಂಡನ್‌ಬರ್ಗ್‌ ಸಂಸ್ಥೆಗೆ ಬೀಗ ಬಿದ್ದಿದೆ. ಹಿಂಡನ್‌ಬರ್ಗ್‌ ರೀಸರ್ಚ್‌ ಕಂಪನಿಯನ್ನು ಮುಚ್ಚುತ್ತಿರುವುದಾಗಿ ಅದರ ಸಂಸ್ಥಾಪಕ ನೇಟ್‌ ಆಂಡರ್‌ಸನ್‌ ಹೇಳಿದ್ದಾರೆ. ನಾವು ಏನು ಸಾಧಿಸಬೇಕೆಂದಿದ್ದೆವೋ ಅದನ್ನು ಸಾಧಿಸಿದ್ದೇವೆ. ಈಗ ಕಂಪನಿಯನ್ನು ಮುಚ್ಚುವ ಸಮಯ ಬಂದಿದೆ. ಈ ಸಂಸ್ಥೆಯನ್ನು ನಡೆಸಿದ್ದು ಬದುಕಿ ಅದ್ಭುತ ಸಾಹಸವಾಗಿತ್ತು ಎಂದು ನೇಟ್‌ ಹೇಳಿದ್ದಾರೆ.2023ರಲ್ಲಿ ಅದಾನಿ ಕಂಪನಿಯ ವಿರುದ್ಧ ಹಿಂಡನ್‌ಬರ್ಗ್‌ ಬಿಡುಗಡೆ ಮಾಡಿದ್ದ ವರದಿ ಇಡೀ ಜಗತ್ತಿನಲ್ಲಿ ಕೋಲಾಹಲ

ಅದಾನಿ ಸಮೂಹವನ್ನು ಕಾಡಿದ್ದ ಹಿಂಡನ್‌ಬರ್ಗ್‌ಗೆ ಬೀಗ Read More »

error: Content is protected !!
Scroll to Top