ವಿದೇಶ

ಜೈಲಿನಲ್ಲಿ ಬಂಧಿಯಾಗಿರುವ ಇರಾನಿನ ನರ್ಗೆಸ್ ಮೊಹಮ್ಮದಿಗೆ ನೊಬೆಲ್ ಶಾಂತಿ ಪ್ರಶಸ್ತಿ!

ಸ್ಟಾಕ್ ಹೋಮ್: ಇರಾನ್‌ನಲ್ಲಿ ಮಹಿಳೆಯರ ಮೇಲಿನ ದಬ್ಬಾಳಿಕೆ, ಮಾನವ ಹಕ್ಕುಗಳು ಮತ್ತು ಎಲ್ಲರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ನರ್ಗೆಸ್ ಮೊಹಮ್ಮದಿ ಅವರಿಗೆ 2023ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿದೆ. ನರ್ಗೆಸ್ ಮೊಹಮ್ಮದಿ ಮಹಿಳಾ ಮತ್ತು ಮಾನವ ಹಕ್ಕುಗಳ ಪರ ವಕೀಲೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿದ್ದಾರೆ. ಈ ವರ್ಷದ ಶಾಂತಿ ಪ್ರಶಸ್ತಿಯು ಮಹಿಳೆಯರನ್ನು ಗುರಿಯಾಗಿಸುವ ತಾರತಮ್ಯ ಮತ್ತು ದಬ್ಬಾಳಿಕೆಯ ಪ್ರಭುತ್ವದ ಆಡಳಿತದ ನೀತಿಗಳ ವಿರುದ್ಧ ಪ್ರದರ್ಶಿಸಿದ ಲಕ್ಷಾಂತರ ಜನರನ್ನು ಗುರುತಿಸುತ್ತದೆ ಎಂದು ನೊಬೆಲ್ ಸಮಿತಿಯು ಹೇಳಿದೆ. ಅಪಾರವಾದ ವೈಯಕ್ತಿಕ […]

ಜೈಲಿನಲ್ಲಿ ಬಂಧಿಯಾಗಿರುವ ಇರಾನಿನ ನರ್ಗೆಸ್ ಮೊಹಮ್ಮದಿಗೆ ನೊಬೆಲ್ ಶಾಂತಿ ಪ್ರಶಸ್ತಿ! Read More »

ಕೊನೆಗೂ ಕ್ರಮಕ್ಕೆ ಮುಂದಾದ ಕೆನಡಾ, ಒಬ್ಬನ ಬಂಧನ! | ಭಾರತದ ಬಿಗಿಪಟ್ಟಿಗೆ ತಲೆಬಾಗಿದ ಕೆನಡಾ!

ಒಟ್ಟಾವ: ಖಲಿಸ್ತಾನಿಗಳ ವಿಚಾರದಲ್ಲಿ ಬಿಗಿ ಪಟ್ಟು ಹಿಡಿದಿರುವ ಭಾರತದ ಮುಂದೆ ತಲೆಬಾಗಿರುವ ಕೆನಡಾ, ಕೊನೆಗೂ ಕ್ರಮಕ್ಕೆ ಮುಂದಾಗಿದೆ. ದೇವಾಲಯಗಳನ್ನು ಅಪವಿತ್ರಗೊಳಿಸಿದ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 12ರಂದು, ಸರ್ರೆಯ ಲಕ್ಷ್ಮೀನಾರಾಯಣ ಮಂದಿರದ ಮುಂಭಾಗದ ಗೇಟ್ ಮತ್ತು ಡೋರ್‌ಗಳ ಮೇಲೆ ಖಲಿಸ್ತಾನಿ ಕಿಡಿಗೇಡಿಗಳು ಖಲಿಸ್ತಾನ್ ಪರ, ಹಿಂದೂ ವಿರೋಧಿ ಹಾಗೂ ಭಾರತ ವಿರೋಧಿ ಬರಹಗಳನ್ನು ಬರೆದು ಆವರಣವನ್ನು ಅಪವಿತ್ರಗೊಳಿಸಿದ್ದರು. ಆ ಬಳಿಕ ಕೆನಡಾದ ಪೊಲೀಸರು ಮಾಡಿದ ಮೊದಲ ಬಂಧನ ಇದಾಗಿದೆ. ಆಗಸ್ಟ್ 12 ಮತ್ತು

ಕೊನೆಗೂ ಕ್ರಮಕ್ಕೆ ಮುಂದಾದ ಕೆನಡಾ, ಒಬ್ಬನ ಬಂಧನ! | ಭಾರತದ ಬಿಗಿಪಟ್ಟಿಗೆ ತಲೆಬಾಗಿದ ಕೆನಡಾ! Read More »

ರಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿಗೆ ಮೂವರು ವಿಜ್ಞಾನಿಗಳು ಆಯ್ಕೆ

ಸ್ಟಾಕ್‌ಹೋಂ: ಮೌಂಗಿ ಬವೆಂಡಿ, ಲೂಯಿಸ್ ಬ್ರೂಸ್ ಮತ್ತು ಅಲೆಕ್ಸಿ ಎಕಿಮೊವ್ ಅವರಿಗೆ ಸಣ್ಣ ಕ್ವಾಂಟಮ್ ಡಾಟ್‌ಗಳ (ಅರೆವಾಹಕ ನ್ಯಾನೊಕ್ರಿಸ್ಟಲ್) ಕೆಲಸಕ್ಕಾಗಿ ಈ ಸಾಲಿನ ಪ್ರತಿಷ್ಠಿತ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್‌ನ ಪ್ರಧಾನ ಕಾರ್ಯದರ್ಶಿ ಹ್ಯಾನ್ಸ್ ಎಲೆಗ್ರೆನ್ ಅವರು ಬುಧವಾರ ಸ್ಟಾಕ್‌ಹೋಮ್‌ನಲ್ಲಿ ಪ್ರಶಸ್ತಿಯನ್ನು ಘೋಷಿಸಿದ್ದಾರೆ. ಮೂವರು ಸಂಶೋಧಕರು ಬೋಸ್ಟನ್‌ನ ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೌಂಗಿ ಬವೆಂಡಿ, ನ್ಯೂಯಾರ್ಕ್‌ನ ಕೊಲಂಬಿಯಾ ವಿಶ್ವವಿದ್ಯಾಲಯದ ಲೂಯಿಸ್ ಬ್ರೂಸ್ ಮತ್ತು ಅಲೆಕ್ಸಿ ಎಕಿಮೊವ್ ನ್ಯೂಯಾರ್ಕ್‌ನ ನ್ಯಾನೊಕ್ರಿಸ್ಟಲ್ಸ್

ರಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿಗೆ ಮೂವರು ವಿಜ್ಞಾನಿಗಳು ಆಯ್ಕೆ Read More »

ಸೇತುವೆಯಿಂದ ವಿದ್ಯುತ್ ತಂತಿ ಮೇಲೆ ಬಿದ್ದ ಬಸ್ | 21 ಮಂದಿ ಪ್ರವಾಸಿಗರ ದಾರುಣ ಸಾವು

ವೆನಿಸ್: ಕ್ಯಾಂಪ್‌ಗ್ರೌಂಡ್‌ಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಉತ್ತರ ಇಟಲಿಯ ವೆನಿಸ್ ಬಳಿಯ ಮೇಲ್ಸೇತುವೆಯಿಂದ ಉರುಳಿಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 21 ಪ್ರವಾಸಿಗರು ಮೃತಪಟ್ಟಿದ್ದಾರೆ. ಸೇತುವೆ ಮೇಲಿಂದ 30 ಅಡಿ ಆಳಕ್ಕೆ ಬೀಳುವ ವೇಳೆ ವಿದ್ಯುತ್ ತಂತಿಗಳ ಮೇಲೆ ಬಿದ್ದ ಬಸ್ಸಿಗೆ ಬೆಂಕಿ ಹತ್ತಿಕೊಂಡು ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಸ್ ಅವಘಡಕ್ಕೆ ಸಂಬಂಧಿಸಿ ”ವೆನಿಸ್‌ನ ಮೇಯರ್ ಲುಯಿಗಿ ಬ್ರುಗ್ನಾರೊ ಟ್ವಿಟರ್ ಎಕ್ಸ್‌ನಲ್ಲಿ ಇದೊಂದು ಭೀಕರ ಅವಘಡ. ನಂಬಲು ಸಾಧ್ಯವಾಗುತ್ತಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ.

ಸೇತುವೆಯಿಂದ ವಿದ್ಯುತ್ ತಂತಿ ಮೇಲೆ ಬಿದ್ದ ಬಸ್ | 21 ಮಂದಿ ಪ್ರವಾಸಿಗರ ದಾರುಣ ಸಾವು Read More »

ಖಾಸಗಿ ವಿಮಾನ ಪತನ: ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ 6 ಮಂದಿ ಮೃತ್ಯು

ಹರಾರೆ: ಖಾಸಗಿ ವಿಮಾನ ಪತನಗೊಂಡು ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ 6 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ನೈಋತ್ಯ ಜಿಂಬಾಬ್ವೆಯಲ್ಲಿ ನಡೆದಿರುವುದು ವರದಿಯಾಗಿದೆ. ಚಿನ್ನ, ಕಲ್ಲಿದ್ದಲು ಮತ್ತು ತಾಮ್ರವನ್ನು ಸಂಸ್ಕರಿಸುವ ರಿಯೋಜಿಮ್ ಗಣಿ ಕಂಪನಿಯ ಮಾಲೀಕ ಹರ್ಪಾಲ್ ರಾಂಧವಾ, ಅವರ ಮಗ ಮತ್ತು ಇತರ ನಾಲ್ವರು ವಿಮಾನ ಅಪಘಾತದಲ್ಲಿ ಮೃತಪಟ್ಟಿರುವುದಾಗಿ ʼಪಿಟಿಐʼ ವರದಿ ಮಾಡಿದೆ. ರಿಯೊಜಿಮ್ ಒಡೆತನದ ಸೆಸ್ನಾ 206 ವಿಮಾನವು ಶುಕ್ರವಾರ (ಸೆ. 29ರಂದು) ಹರಾರೆಯಿಂದ ಜಿಂಬಾಬ್ಬೆಯ ಮುರೊವಾ ವಜ್ರದ ಗಣಿ ಕಡೆಗೆ ತೆರಳುತ್ತಿದ್ದಾಗ

ಖಾಸಗಿ ವಿಮಾನ ಪತನ: ಭಾರತೀಯ ಗಣಿ ಉದ್ಯಮಿ, ಪುತ್ರ ಸೇರಿ 6 ಮಂದಿ ಮೃತ್ಯು Read More »

ಭಿಕ್ಷಾಟನೆಗಾಗಿ ಸೌದಿ ಅರೇಬಿಯಾಕ್ಕೆ ಪ್ರಯಾಣ: 16 ಮಂದಿ ಬಂಧನ

ಕರಾಚಿ: ಭಿಕ್ಷಾಟನೆಯಲ್ಲಿ ತೊಡಗಿಸಿಕೊಳ್ಳಲು ಗಲ್ಫ್ ರಾಜ್ಯಕ್ಕೆ ಪ್ರಯಾಣಿಸಲು ಪ್ರಯತ್ನಿಸಿದ್ದಕ್ಕಾಗಿ ಯಾತ್ರಿಕರ ವೇಷದಲ್ಲಿದ್ದ ಹದಿನಾರು ಪಾಕಿಸ್ತಾನಿ ಭಿಕ್ಷುಕರನ್ನು ಸೌದಿ ಅರೇಬಿಯಾ ವಿಮಾನದಿಂದ ಇಳಿಸಿ ಬಂಧಿಸಲಾಗಿದೆ ಎಂದು ಭಾನುವಾರ ಮಾಧ್ಯಮ ವರದಿಯೊಂದು ತಿಳಿಸಿದೆ. ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ ಎರಡು ದಿನಗಳ ಹಿಂದೆ ಪಂಜಾಬ್ ಪ್ರಾಂತ್ಯದ ಮುಲ್ತಾನ್‌ನಲ್ಲಿ ಸೌದಿ ವಿಮಾನದಿಂದ ಭಿಕ್ಷುಕರನ್ನು ಕೆಳಗಿಳಿಸಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. ಎಫ್‌ಐಎ ಪ್ರಕಾರ, ಒಂದು ಮಗು, 11 ಮಹಿಳೆಯರು ಮತ್ತು ನಾಲ್ವರು ಪುರುಷರು ಸೇರಿದಂತೆ 16 ಜನರನ್ನು ಒಳಗೊಂಡ ಗುಂಪು ಉಮ್ರಾ

ಭಿಕ್ಷಾಟನೆಗಾಗಿ ಸೌದಿ ಅರೇಬಿಯಾಕ್ಕೆ ಪ್ರಯಾಣ: 16 ಮಂದಿ ಬಂಧನ Read More »

ಪಾಕಿನಲ್ಲಿ ಪ್ರಬಲ ಬಾಂಬ್ ಸ್ಫೋಟ: ಸತ್ತವರೆಷ್ಟು? ಗಾಯಾಳುಗಳೆಷ್ಟು?

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 34 ಜನರು ಮೃತಪಟ್ಟಿದ್ದು ಮತ್ತು 100ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಕುರಿತು ವರದಿಯಾಗಿದೆ. ಪ್ರವಾದಿ ಮುಹಮ್ಮದ್ ಅವರ ಜನ್ಮ ವಾರ್ಷಿಕೋತ್ಸವ ಆಚರಿಸಲು ಜನರು ಸೇರುತ್ತಿದ್ದ ಬಲೂಚಿಸ್ತಾನ್ ಮಸ್ತುಂಗ್ ಜಿಲ್ಲೆಯ ಮಸೀದಿಯ ಬಳಿ ಭಾರೀ ಸ್ಫೋಟ ಸಂಭವಿಸಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಮೃತಪಟ್ಟವರಲ್ಲಿ ಮಸ್ತುಂಗ್‌ನ ಡಿಎಸ್‌ಪಿ ನವಾಜ್ ಗಶ್ಕೋರಿ ಕೂಡ ಸೇರಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಸ್ಫೋಟದ ಹೊಣೆಯನ್ನು

ಪಾಕಿನಲ್ಲಿ ಪ್ರಬಲ ಬಾಂಬ್ ಸ್ಫೋಟ: ಸತ್ತವರೆಷ್ಟು? ಗಾಯಾಳುಗಳೆಷ್ಟು? Read More »

ಪಾಕ್ ಪರಮಾಣು ಶಸ್ತ್ರಾಸ್ತ್ರ ದಾಸ್ತಾನು 200ಕ್ಕೆ ಏರಿಕೆಯಾಗುವ ಸಾಧ್ಯತೆ!: ವರದಿ

ನವದೆಹಲಿ: ಪಾಕಿಸ್ತಾನ ಶೀಘ್ರದಲ್ಲೇ ತನ್ನ ಪರಮಾಣು ಶಸ್ತ್ರಾಸ್ತ್ರಗಳ ಸಂಖ್ಯೆಯನ್ನು 200ಕ್ಕೆ ಏರಿಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂಬ ಆಘಾತಕಾರಿ ಮಾಹಿತಿಯನ್ನು ವರದಿಯೊಂದು ಹೇಳಿದೆ. ಸದ್ಯ ಸುಮಾರು 170ರಷ್ಟು ಪರಮಾಣು ಶಸ್ತ್ರಾಸ್ತ್ರ ದಾಸ್ತಾನು ಹೊಂದಿದೆ. ಪಾಕಿಸ್ತಾನವು ಪ್ರಸ್ತುತ 170 ಅಣ್ವಸ್ತ್ರ ಸಿಡಿತಲೆಗಳ ಸಂಗ್ರಹವನ್ನು ಹೊಂದಿದ್ದು, ಪಾಕಿಸ್ತಾನದಲ್ಲಿ ನಡೆಯುತ್ತಿರುವ ಹಾಲಿ ಬೆಳವಣಿಗೆಯನ್ನು ಗಮನಿಸಿದರೆ ಈ ಸಂಗ್ರಹವು 2025ರ ವೇಳೆಗೆ 200 ದಾಟುವ ಸಾಧ್ಯತೆ ಇದೆ ಎಂದು ಅಮೆರಿಕದ ಪರಮಾಣು ವಿಜ್ಞಾನಿಗಳ ಬುಲೆಟಿನ್‌ನಲ್ಲಿ ಪ್ರಕಟವಾದ ನ್ಯೂಕ್ಲಿಯರ್ ನೋಟ್‌ಬುಕ್ ಅಂಕಣದಲ್ಲಿ ಹೇಳಿದೆ. “ಪಾಕಿಸ್ತಾನವು ಈಗ

ಪಾಕ್ ಪರಮಾಣು ಶಸ್ತ್ರಾಸ್ತ್ರ ದಾಸ್ತಾನು 200ಕ್ಕೆ ಏರಿಕೆಯಾಗುವ ಸಾಧ್ಯತೆ!: ವರದಿ Read More »

ಆನೆ ಜತೆ ಇರುವೆಯ ಜಗಳ: ಕೆನಡಾಗೆ ಚುಚ್ಚಿದ ವಿಶ್ವದ ದೊಡ್ಡಣ್ಣ!! | ಭಾರತದೊಂದಿಗೆ ಕಾಲ್ಕಿರಿದು ಜಗಳಕ್ಕೆ ನಿಂತಿರುವ ಕೆನಡಾಕ್ಕೆ ಹೀಗೆನ್ನೆಲು ಕಾರಣವೇನು?

ವಾಷಿಂಗ್ಟನ್: ಭಾರತ ಹಾಗೂ ಕೆನಡಾ ನಡುವಿನ ಬಿಕ್ಕಟ್ಟಿನ ಬೆನ್ನಲ್ಲೇ, ಅಮೆರಿಕದ ಮಾಜಿ ರಕ್ಷಣಾ ಅಧಿಕಾರಿ ಮೈಕಲ್ ರುಬಿನ್ ಅವರು ಭಾರತದ ಪರ ಬ್ಯಾಟಿಂಗ್ ಮಾಡಿದ್ದಾರೆ. ಹಾಗೆಯೇ, “ಕೆನಡಾ ಭಾರತದ ಜತೆ ಸಂಘರ್ಷಕ್ಕೆ ಇಳಿದಿದೆ ಎಂದರೆ, ಅದು ಇರುವೆಯೊಂದು ಆನೆಯ ಜತೆ ಕಾಳಗಕ್ಕೆ ಇಳಿದಂತೆ” ಎಂದು ಗೇಲಿ ಮಾಡಿದ್ದಾರೆ. ““ಯಾವುದೇ ಎರಡು ದೇಶಗಳು ಸಂಘರ್ಷಕ್ಕೆ ಇಳಿದಾಗ, ರಾಜತಾಂತ್ರಿಕ ಬಿಕ್ಕಟ್ಟು ಆರಂಭವಾದಾಗ ಮೂರನೇ ದೇಶವು ಮಧ್ಯಸ್ಥಿಕೆ ವಹಿಸುವುದು ಸುಲಭ. ಆದರೆ, ಯಾವುದೇ ಒಂದು ದೇಶದ ಪರ ನಿಲ್ಲುವುದು ಕಷ್ಟ. ಈಗ

ಆನೆ ಜತೆ ಇರುವೆಯ ಜಗಳ: ಕೆನಡಾಗೆ ಚುಚ್ಚಿದ ವಿಶ್ವದ ದೊಡ್ಡಣ್ಣ!! | ಭಾರತದೊಂದಿಗೆ ಕಾಲ್ಕಿರಿದು ಜಗಳಕ್ಕೆ ನಿಂತಿರುವ ಕೆನಡಾಕ್ಕೆ ಹೀಗೆನ್ನೆಲು ಕಾರಣವೇನು? Read More »

ಮಾಲೀಕರ – ಪ್ರಾಯೋಜಕರ ವಿವಾದಕ್ಕೆ ಭಾರತದ 30 ನರ್ಸ್’ಗಳು ಜೈಲು ಪಾಲಾದರೇ?

ಕುವೈತ್: ಮಲಿಯಾದಲ್ಲಿರುವ ಖಾಸಗಿ ಕ್ಲಿನಿಕ್ ಮೇಲೆ ಕುವೈತ್ ಮಾನವ ಸಂಪನ್ಮೂಲ ಸಮಿತಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ 19 ಮಂದಿ ಕೇರಳದ ನರ್ಸ್‌ಗಳು ಸೇರಿದಂತೆ 30 ಭಾರತೀಯರು ಕಳೆದ ವಾರ ಜೈಲು ಸೇರಿದ್ದಾರೆ. ಮಲಯಾಳಿ ನರ್ಸ್‌ಗಳ ಸಂಬಂಧಿಕರ ಪ್ರಕಾರ, ಕುವೈತ್‌ನಲ್ಲಿ ವಿದೇಶಿ ರೆಸಿಡೆನ್ಸಿ ಕಾನೂನುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಭಾರತೀಯರು ಸೇರಿದಂತೆ 60 ಜನರು ದಾಳಿಯ ಸಮಯದಲ್ಲಿ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ಕುವೈತ್ ಗೃಹ ಸಚಿವಾಲಯದ ಪ್ರಕಾರ, ದಾದಿಯರು ಕುವೈತ್‌ನಲ್ಲಿ ಕೆಲಸ ಮಾಡಲು ಸೂಕ್ತವಾದ ಪರವಾನಿಗೆಗಳನ್ನು ಹೊಂದಿಲ್ಲ ಅಥವಾ ಅಗತ್ಯ

ಮಾಲೀಕರ – ಪ್ರಾಯೋಜಕರ ವಿವಾದಕ್ಕೆ ಭಾರತದ 30 ನರ್ಸ್’ಗಳು ಜೈಲು ಪಾಲಾದರೇ? Read More »

error: Content is protected !!
Scroll to Top