ವಿದೇಶ

ಜನರಿಗೆ ಮಾಂಸ ಹಂಚಲು 83 ಆನೆಗಳ ಹತ್ಯೆ!

ಬರಗಾಲದಿಂದ ಕಂಗೆಟ್ಟಿರುವ ದೇಶದಲ್ಲಿ ಆಹಾರಕ್ಕಾಗಿ ಸರಕಾರದಿಂದಲೇ ಕಾಡುಪ್ರಾಣಿಗಳ ವಧೆ ವಿಂಡ್ಹೋಕ್: ಜಗತ್ತಿನಾದ್ಯಂತ ಕಾಡುಪ್ರಾಣಿಗಳನ್ನು ರಕ್ಷಿಸಲು ಇನ್ನಿಲ್ಲದ ಪ್ರಯತ್ನಗಳನ್ನು ನಡೆಯುತ್ತಿವೆ. ಭಾರತವೂ ಸೇರಿದಂತೆ ಅನೇಕ ದೇಶಗಳಲ್ಲಿ ಕಾಡುಪ್ರಾಣಿಗಳ ಹತ್ಯೆಗೆ ಕಠಿಣ ಶಿಕ್ಷೆಯಿದೆ. ಅದರೆ ನಮೀಬಿಯಾ ಎಂಬ ಆಫ್ರಿಕಾದ ದೇಶದಲ್ಲಿ ಸರ್ಕಾರವೇ ಕಾಡುಪ್ರಾಣಿಗಳನ್ನು ಕೊಲ್ಲಲು ಆದೇಶಿಸಿದೆ. ಬರದಿಂದ ತತ್ತರಿಸಿರುವ ನಮೀಬಿಯಾ ಜನರಿಗೆ ಆಹಾರ ಒದಗಿಸಲು 83 ಆನೆಗಳು ಸಹಿತ 723 ಕಾಡುಪ್ರಾಣಿಗಳನ್ನು ಕೊಲ್ಲುವ ಯೋಜನೆ ರೂಪಿಸಿದೆ. ತೀವ್ರ ಬರಗಾಲದಿಂದ ಆಹಾರಕ್ಕಾಗಿ ಹೆಣಗಾಡುತ್ತಿರುವವರಿಗೆ ಮಾಂಸ ವಿತರಿಸುವುದಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. […]

ಜನರಿಗೆ ಮಾಂಸ ಹಂಚಲು 83 ಆನೆಗಳ ಹತ್ಯೆ! Read More »

5.35 ತಾಸು ನಡೆದ ಪಂದ್ಯ : ಟೆನಿಸ್‌ನಲ್ಲಿ ನೂತನ ದಾಖಲೆ ಸೃಷ್ಟಿ

ನ್ಯೂಯಾರ್ಕ್‌ : ಅವರಿಬ್ಬರು ಆಡಿದ್ದು ಬರೋಬ್ಬರಿ 5 ತಾಸು 35 ನಿಮಿಷ. ಪಂದ್ಯ ನೋಡುತ್ತಿದ್ದ ಪ್ರೇಕ್ಷಕರಿಗೆ ಟೆನಿಸ್‌ನ ಅಷ್ಟೂ ರೋಮಾಂಚನಗಳು ಈ ಐದೂವರೆ ತಾಸಿನಲ್ಲಿ ದೊರಕಿದೆ. ಒಂದು ಟಿ20 ಕ್ರಿಕೆಟ್‌ ಪಂದ್ಯಕ್ಕೂ ಹೆಚ್ಚು ಹೊತ್ತು ಇವರಿಬ್ಬರೇ ಆಡಿದ್ದಾರೆ.ಇದು ಟೆನಿಸ್‌ ಆಟದ ಇತಿಹಾಸದಲ್ಲೇ ಒಂದು ವಿನೂತನ ದಾಖಲೆ. ನಿನ್ನೆ ನಡೆದ ಯುಎಸ್‌ ಓಪನ್‌ ಟೂರ್ನಿಯಲ್ಲಿ ಈ ದಾಖಲೆ ಸೃಷ್ಟಿಯಾಗಿದೆ. ಬ್ರಿಟನ್‌ನ ಡ್ಯಾನ್‌ ಎವನ್ಸ್‌ ಮತ್ತು ರಷ್ಯಾದ ಕರೆನ್‌ ಕಶನೋವ್‌ ನಡುವೆ ನಡೆದ ಈ ಆಟ ಯುಎಸ್‌ ಓಪನ್‌ ಟೆನಿಸ್‌ನ

5.35 ತಾಸು ನಡೆದ ಪಂದ್ಯ : ಟೆನಿಸ್‌ನಲ್ಲಿ ನೂತನ ದಾಖಲೆ ಸೃಷ್ಟಿ Read More »

ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ : ನೂರಾರು ಮಂದಿಗೆ ಗಾಯ

ಢಾಕಾ: ಆಂತರಿಕ ದಂಗೆಯಿಂದ ತತ್ತರಿಸಿರುವ ಬಾಂಗ್ಲಾದೇಶದಲ್ಲಿ ಶಾಂತಿ ನೆಲೆಯಾಯಿತು ಎನ್ನುವಷ್ಟರಲ್ಲಿ ಮತ್ತೆ ಹಿಂಸಾಚಾರ ಶುರುವಾಗಿದೆ. ರಾಜಧಾನಿ ಢಾಕಾದಲ್ಲಿ ನಿನ್ನೆ ರಾತ್ರಿಯಿಂದೀಚೆಗೆ ಹಿಂಸಾಚಾರ ನಡೆಯುತ್ತಿದ್ದು, ಸುಮಾರು 100 ಮಂದಿ ಗಾಯಗೊಂಡಿದ್ದಾರೆ. ಢಾಕಾದಲ್ಲಿರುವ ಆಡಳಿತ ಸೌಧ ಸೆಕ್ರೆಟರಿಯೇಟ್ ಬಳಿ ಭಾನುವಾರ ರಾತ್ರಿ ವಿದ್ಯಾರ್ಥಿಗಳು ಮತ್ತು ಅನ್ಸಾರ್ ಸದಸ್ಯರ ನಡುವೆ ಹಿಂಸಾತ್ಮಕ ಘರ್ಷಣೆಗಳು ಸಂಭವಿಸಿವೆ. ರಾತ್ರಿ ಘರ್ಷಣೆ ಆರಂಭವಾಗಿದ್ದು, ಎರಡೂ ಕಡೆಯಲ್ಲಿ ಪ್ರತಿಭಟನೆಕಾರರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅನ್ಸಾರ್‌ ಸದಸ್ಯರು ನಿರಂಕುಶ ಪ್ರಭುತ್ವದ ಏಜೆಂಟ್‌ಗಳು ಎಂದು ವಿದ್ಯಾರ್ಥಿಗಳು ಕರೆದಿದ್ದಾರೆ. ಬಾಂಗ್ಲಾದೇಶದಲ್ಲಿ ಆಂತರಿಕ

ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ : ನೂರಾರು ಮಂದಿಗೆ ಗಾಯ Read More »

ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಬಸ್ | 14 ಭಾರತೀಯರು ಮೃತ್ಯು

ನೇಪಾಳ:  40 ಮಂದಿ ಭಾರತೀಯ ಪ್ರಯಾಣಿಕರಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದ ಪರಿಣಾಮ 14 ಜನರು ಮೃತಪಟ್ಟ ಘಟನೆ ನೇಪಾಳದ ತನಾಹುನ್ ಜಿಲ್ಲೆಯಲ್ಲಿ ನಡೆದಿದೆ. ನೇಪಾಳದ ತನಾಹುನ್ ಜಿಲ್ಲೆಯ ಮರ್ಸ್ಯಾಂಗ್ಲಿ ನದಿಗೆ ಬಸ್ ಉರುಳಿದೆ. ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದಾರೆ. ಉತ್ತರಪ್ರದೇಶದ ಎಫ್‌ಟಿ 7623 ನಂಬ‌ರ್ ಪ್ಲೇಟ್ ಹೊಂದಿದ್ದ ಬಸ್ ನದಿಗೆ ಬಿದ್ದಿದೆ. ತನಾಹುನ್ ಜಿಲ್ಲೆಯ ಡಿಎಸ್‌ಪಿ ದೀಪ್‌ಕುಮಾರ್ ರಾಯಾ ದೂರವಾಣಿಯ ಮೂಲಕ ದೃಢಪಡಿಸಿದ್ದಾರೆ. 40 ಭಾರತೀಯ ಪ್ರಯಾಣಿಕರಿದ್ದ ಬಸ್ ಪೋಖರಾದಿಂದ ತೆರಳುತ್ತಿತ್ತು.

ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಬಸ್ | 14 ಭಾರತೀಯರು ಮೃತ್ಯು Read More »

ಮೋದಿ ಪೋಲೆಂಡ್‌ ಪ್ರವಾಸ : ಮಹಾರಾಜ ಜಾಮ್ ಸಾಹೇಬ್‌ ಸ್ಮಾರಕಕ್ಕೆ ನಮನ

ವಾರ್ಸಾ: ಪೋಲೆಂಡ್‌ ಮತ್ತು ಉಕ್ರೇನ್‌ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಜಾಮ್ ಸಾಹಿಬ್ ಸ್ಮಾರಕಕ್ಕೆ ತೆರಳಿ ನಮಿಸಿ ಗೌರವ ಸಲ್ಲಿಸಿದ್ದಾರೆ. ಭಾರತದ ಮಹಾರಾಜ ಜಾಮ್ ಸಾಹೇಬ್‌ ಎರಡನೇ ಮಹಾ ಯುದ್ಧದ ಸಂದರ್ಭದಲ್ಲಿ ಸಾವಿರಾರು ಯಹೂದಿ ಮಕ್ಕಳ ಜೀವ ಉಳಿಸಿದ್ದರು.ಗುಜರಾತಿನ ನವನಗರದ ಮಹಾರಾಜ ಜಾಮ್ ಸಾಹೇಬ್ ಯುದ್ಧದ ಸಂದರ್ಭದಲ್ಲಿ ಪೋಲೆಂಡ್​ನಿಂದ ಭಾರತಕ್ಕೆ ಅನೇಕ ಮಕ್ಕಳನ್ನು ಕರೆತಂದು ಯಹೂದಿಗಳ ಜೀವವನ್ನು ಉಳಿಸಿದ್ದರು ಮಾತ್ರವಲ್ಲದೆ ಅವರನ್ನು ಸ್ವಂತ ಮಕ್ಕಳಂತೆ ನೋಡಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಬುಧವಾರ ಪೋಲೆಂಡ್ ತಲುಪಿದ್ದಾರೆ.

ಮೋದಿ ಪೋಲೆಂಡ್‌ ಪ್ರವಾಸ : ಮಹಾರಾಜ ಜಾಮ್ ಸಾಹೇಬ್‌ ಸ್ಮಾರಕಕ್ಕೆ ನಮನ Read More »

ಕೊಣಾಜೆಯ ಯುವಕ ವಿದೇಶದಲ್ಲಿ ಕಟ್ಟಡದಿಂದ ಬಿದ್ದು ಮೃತ್ಯು

ಕೊಣಾಜೆ:  ವಿದೇಶದಲ್ಲಿ ಕೆಲಸಕ್ಕಿದ್ದ ಕೊಣಾಜೆ ಗ್ರಾಮದ ನಡುಪದವಿನ ಯುವಕ ವಿದೇಶದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ನಡುಪದವಿನ ಉಮ್ಮರ್ ಅವರ  ಪುತ್ರ ನೌಫಲ್(25) ಮೃತ ಯುವಕ. ಅಬುಧಾಬಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಉದ್ಯೋಗದಲ್ಲಿದ್ದ ‌ನೌಫಲ್ ಕಟ್ಟಡವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವಿವಾಹಿತನಾಗಿರುವ ನೌಫಲ್ ಅವರ ಮೃತದೇಹವನ್ನು ಊರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು  ನೌಫಲ್ ಅವರ ಕೊಣಾಜೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ನಝರ್ ಷಾ ಪಟ್ಟೋರಿ ತಿಳಿಸಿದ್ದಾರೆ.

ಕೊಣಾಜೆಯ ಯುವಕ ವಿದೇಶದಲ್ಲಿ ಕಟ್ಟಡದಿಂದ ಬಿದ್ದು ಮೃತ್ಯು Read More »

ಬಾಂಗ್ಲಾದಲ್ಲಿರುವ ಹಿಂದೂಗಳ ರಕ್ಷಣೆ ಮಾಡದಿದ್ದರೆ ಭಾರತ ಬಲಿಷ್ಠ ರಾಷ್ಟ್ರವಾಗಲು ಸಾಧ್ಯವಿಲ್ಲ | ಸದ್ಗುರು

ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರ, ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿಯೆತ್ತಿರುವ ಸದ್ಗುರು ಜಗ್ಗಿ ವಾಸುದೇವ್‌, ಹಿಂದೂಗಳ ಮೇಲಿನ ದೌರ್ಜನ್ಯಗಳು ಕೇವಲ ಬಾಂಗ್ಲಾದೇಶದ ಆಂತರಿಕ ವಿಷಯವಲ್ಲ ಎಂದಿದ್ದಾರೆ. ಬಾಂಗ್ಲಾದಲ್ಲಿ ವಾಸಿಸುವ ಅಲ್ಪಸಂಖ್ಯಾತರನ್ನು ರಕ್ಷಿಸಲು ವಿಫಲವಾದರೆ ಇಂಡಿಯಾ ಅಥವಾ ಭಾರತವು ಬಲಿಷ್ಠ ರಾಷ್ಟ್ರವಾಗಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಾಂಗ್ಲಾದೇಶದಲ್ಲಿರುವ ಹಿಂದೂಗಳನ್ನು ರಕ್ಷಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಇಶಾ ಫೌಂಡೇಶನ್‌ನ ಸಂಸ್ಥಾಪಕ, ಆಧ್ಯಾತ್ಮಿಕ ಗುರುಗಳಾದ ಸದ್ಗುರು ಒತ್ತಾಯಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ‘ಹಿಂದೂಗಳ

ಬಾಂಗ್ಲಾದಲ್ಲಿರುವ ಹಿಂದೂಗಳ ರಕ್ಷಣೆ ಮಾಡದಿದ್ದರೆ ಭಾರತ ಬಲಿಷ್ಠ ರಾಷ್ಟ್ರವಾಗಲು ಸಾಧ್ಯವಿಲ್ಲ | ಸದ್ಗುರು Read More »

ಸರಕಾರಿ ಮೀಸಲಾತಿ ವಿರೋಧಿಸಿ ಬಾಂಗ್ಲಾದಲ್ಲಿ ಪ್ರತಿಭಟನೆ | 150 ಕ್ಕೂ ಅಧಿಕ ಮಂದಿ  ಮೃತ್ಯು

ಬಾಂಗ್ಲಾದೇಶ :  ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ಜು.1ರಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಢಾಕಾ ಸೇರಿದಂತೆ ದೇಶದ ವಿವಿಧೆಡೆ ನಡೆದ ಹಿಂಸಾಚಾರದಲ್ಲಿ 105 ಮಂದಿ ಮೃತಪಟ್ಟಿದ್ದು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ಧಾರೆ. ಪ್ರತಿಭಟನಾಕಾರರು ಬಾಂಗ್ಲಾದ ರಾಜಧಾನಿ ಢಾಕಾದಲ್ಲಿನ ರಾಜ್ಯ ಸರ್ಕಾರ ಸುದ್ದಿವಾಹಿನಿಗೆ ಬೆಂಕಿ ಹಚ್ಚುವ ಒಂದು ದಿನ ಮೊದಲು, ಸರ್ಕಾರಿ ಟಿವಿ ಕಚೇರಿಯಲ್ಲಿ ಪ್ರಧಾನಿ ಶೇಖ್ ಹಸೀನಾ ಅವರ ಸಂದರ್ಶನ ನಡೆದಿತ್ತು. ಈ ಸಂದರ್ಶನದಲ್ಲಿ ಅವರು, ಪ್ರತಿಭಟನಾಕಾರರು ಮೀಸಲಾತಿಯನ್ನು ಕೊನೆಗೊಳಿಸಬೇಕೆಂಬ ತಮ್ಮ ಬೇಡಿಕೆಗೆ

ಸರಕಾರಿ ಮೀಸಲಾತಿ ವಿರೋಧಿಸಿ ಬಾಂಗ್ಲಾದಲ್ಲಿ ಪ್ರತಿಭಟನೆ | 150 ಕ್ಕೂ ಅಧಿಕ ಮಂದಿ  ಮೃತ್ಯು Read More »

ಶ್ರೀಲಂಕಾ ಮಾಜಿ ಕ್ರಿಕೆಟಿಗ ಧಮ್ಮಿಕಾ ನಿರೋಶನಾ ಅಪರಿಚಿತ ವ್ಯಕ್ತಿಯ ಗುಂಡಿಗೆ ಬಲಿ

ಕೋಲಂಬೊ : ಶ್ರೀಲಂಕಾದ ಮಾಜಿ ಕ್ರಿಕೆಟಿಗರೊಬ್ಬರನ್ನು ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಧಮ್ಮಿಕಾ ನಿರೋಶನಾ (41) ಅವರನ್ನು ಮಂಗಳವಾರ ರಾತ್ರಿ  ಗಾಲೆ ಜಿಲ್ಲೆಯ ಸಣ್ಣ ಪಟ್ಟಣವಾದ ಅಂಬಲಂಗೋಡದಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸ್ಥಳೀಯ ಪೊಲೀಸರ ಪ್ರಕಾರ, ನಿರೋಶನಾ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಇದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಆತನ ಮೇಲೆ ಗುಂಡು ಹಾರಿಸಿದ್ದಾನೆ ಪೊಲೀಸರು ಇನ್ನೂ ಶಂಕಿತನನ್ನು ಬಂಧಿಸಿಲ್ಲ. ಪ್ರಸ್ತುತ ಸಮಗ್ರ ತನಿಖೆ ನಡೆಯುತ್ತಿದೆ, ಆದರೆ ಅಪರಾಧದ

ಶ್ರೀಲಂಕಾ ಮಾಜಿ ಕ್ರಿಕೆಟಿಗ ಧಮ್ಮಿಕಾ ನಿರೋಶನಾ ಅಪರಿಚಿತ ವ್ಯಕ್ತಿಯ ಗುಂಡಿಗೆ ಬಲಿ Read More »

ಅಮೇರಿಕ ಅಧ್ಯಕ್ಷ ಸ್ಥಾನ ಅಭ್ಯರ್ಥಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಭ್ಯರ್ಥಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದ ಘಟನೆ ಪೆನ್ಸಿಲ್ವೇನಿಯಾದಲ್ಲಿ ನಡೆದಿದೆ. ಗುಂಡಿನ ದಾಳಿಯಿಂದಾಗಿ ಟ್ರಂಪ್ ಬಲ ಕಿವಿಗೆ ಗಾಯವಾಗಿದೆ. ಟ್ರಂಪ್‌ ಚುನಾವಣಾ ರ್ಯಾಲಿಯಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಕೂಡಲೇ ಭದ್ರತಾ ಸಿಬ್ಬಂದಿ ಶೂಟರ್ ಸೇರಿದಂತೆ ಇಬ್ಬರನ್ನು ಗುಂಡಿಕ್ಕಿ ಸಾಯಿಸಿದ್ದಾರೆ. ಗುಂಡಿನ ದಾಳಿಯ ಬಳಿಕ ಟ್ರಂಪ್ ಮುಖ ರಕ್ತಸಿಕ್ತವಾಗಿತ್ತು. ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಟ್ರಂಪ್‌ ವೇದಿಕೆಯಲ್ಲಿ ಮಾತನಾಡುತ್ತಿದ್ದಾಗ ಗುಂಡಿನ ಸದ್ದು ಕೇಳಿಸಿದೆ.

ಅಮೇರಿಕ ಅಧ್ಯಕ್ಷ ಸ್ಥಾನ ಅಭ್ಯರ್ಥಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ಮೇಲೆ ಗುಂಡಿನ ದಾಳಿ Read More »

error: Content is protected !!
Scroll to Top