ವಿದೇಶ

ಶ್ವೇತಭವನದ ಬಳಿಯೇ ಸೈನಿಕರ ಮೇಲೆ ಉಗ್ರನಿಂದ ದಾಳಿ

ಇದು ಭಯೋತ್ಪಾದನಾ ಕೃತ್ಯ ಎಂದು ಘೋಷಿಸಿದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಾಷಿಂಗ್ಟನ್‌ : ಅಮೆರಿಕದ ಅಧ್ಯಕ್ಷರ ಅಧಿಕೃತ ನಿವಾಸವಾದ ಶ್ವೇತಭವನದ ಬಳಿಯೇ ಇಬ್ಬರು ಸೈನಿಕರ ಮೇಲೆ ಮಾರಣಾಂತಿಕ ದಾಳಿ ನಡೆದಿದ್ದು, ಅಮೆರಿಕಾದ್ಯಂತ ಕಳವಳಕ್ಕೆ ಕಾರಣವಾಗಿದೆ. ಇಬ್ಬರು ರಾಷ್ಟ್ರೀಯ ಗಾರ್ಡ್ ಸದಸ್ಯರ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ದಾಳಿ ನಡೆಸಿದಾತ ಅಫಘಾನಿಸ್ಥಾನ ಮೂಲದ ಭಯೋತ್ಪಾದಕ ಎನ್ನಲಾಗಿದೆ. ಗಾಯಗೊಂಡ ಇಬ್ಬರು ಸೈನಿಕರನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದು ಭಯೋತ್ಪಾದನಾ ಕೃತ್ಯ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ ಎಂದು ಅಧ್ಯಕ್ಷ […]

ಶ್ವೇತಭವನದ ಬಳಿಯೇ ಸೈನಿಕರ ಮೇಲೆ ಉಗ್ರನಿಂದ ದಾಳಿ Read More »

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಜೈಲಿನಲ್ಲೇ ಕೊಲೆ?

ಸೇನಾ ಮುಖ್ಯಸ್ಥ ಅಸೀಮ್‌ ಮುನೀರ್‌ ಕೊಲೆ ಮಾಡಿಸಿದ್ದಾರೆ ಎಂದು ವರದಿ ಇಸ್ಲಾಮಾಬಾದ್: ಭ್ರಷ್ಟಾಚಾರದ ಆರೋಪದಡಿ ಜೈಲು ಸೇರಿರುವ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಕ್ರಿಕೆಟಿಗ ಇಮ್ರಾನ್ ಖಾನ್ ಅವರನ್ನು ಜೈಲಿನಲ್ಲೇ ನಿಗೂಢವಾಗಿ ಕೊಲೆಮಾಡಲಾಗಿದೆ ಎಂಬ ಸುದ್ದಿಯೊಂದು ನಿನ್ನೆಯಿಂದೀಚೆಗೆ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅಫಘಾನಿಸ್ಥಾನದ ಮಾಧ್ಯಮಗಳಲ್ಲಿ ಇಮ್ರಾನ್‌ ಖಾನ್‌ ಕೊಲೆಯಾಗಿರುವ ಸುದ್ದಿ ಪ್ರಕಟವಾಗಿದೆ ಎನ್ನಲಾಗುತ್ತಿದೆ. ಪಾಕ್‌ನ ಸೇನಾ ದಂಡನಾಯಕ ಅಸೀಮ್‌ ಮುನೀರ್‌ ಅವರೇ ಈ ಕೊಲೆಯನ್ನು ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಇಮ್ರಾನ್‌ ಕೊಲೆ ಸುದ್ದಿ ಪಾಕಿಸ್ತಾನದ ಸಾಮಾಜಿಕ ವಲಯದಲ್ಲಿ ಭಾರೀ ಸಂಚಲನ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಜೈಲಿನಲ್ಲೇ ಕೊಲೆ? Read More »

ಹಾಂಕಾಂಗ್‌ ಗಗನಚುಂಬಿ ಕಟ್ಟಡಗಳಲ್ಲಿ ಭೀಕರ ಬೆಂಕಿ ದುರಂತ : 44 ಮಂದಿ ಸಜೀವ ದಹನ

7 ಬಹುಮಹಡಿ ಕಟ್ಟಡಗಳಿಗೆ ವ್ಯಾಪಿಸಿದ ಬೆಂಕಿ; 279 ಮಂದಿ ನಾಪತ್ತೆ ಹಾಂಕಾಂಗ್‍: ಹಾಂಗ್‌ಕಾಂಗ್‌ನ ತೈಪೊ ಜಿಲ್ಲೆಯಲ್ಲಿ ಹಲವು ಗಗನಚುಂಬಿ ಕಟ್ಟಡಗಳಲ್ಲಿ ಸಂಭವಿಸಿದ ಭೀಕರ ಅಗ್ನಿದುರಂತದಲ್ಲಿ ಕನಿಷ್ಠ 44 ಮಂದಿ ಸಜೀವ ದಹನವಾಗಿದ್ದು, 270ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಈ ಬೆಂಕಿ ಆಕಸ್ಮಿಕಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಅನೇಕ ಗಗನಚುಂಬಿ ಕಟ್ಟಡಗಳಿರುವ ಬೃಹತ್‌ ವಸತಿ ಸಮುಚ್ಚಯದಲ್ಲಿ ಬುಧವಾರ ಈ ಭೀಕರ ದುರಂತ ಸಂಭವಿಸಿದ್ದು, ಕನಿಷ್ಠ 7 ಗಗನಚುಂಬಿ ಕಟ್ಟಡಗಳು ಬೆಂಕಿಯಿಂದ ಸಂಪೂರ್ಣ ನಾಶವಾಗಿವೆ. ರಕ್ಷಣಾ ಕಾರ್ಯ

ಹಾಂಕಾಂಗ್‌ ಗಗನಚುಂಬಿ ಕಟ್ಟಡಗಳಲ್ಲಿ ಭೀಕರ ಬೆಂಕಿ ದುರಂತ : 44 ಮಂದಿ ಸಜೀವ ದಹನ Read More »

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಫೋಟ : ದೆಹಲಿ ತಲುಪಿದ ಬೂದಿ

12 ಸಾವಿರ ವರ್ಷಗಳ ಬಳಿಕ ಸ್ಫೊಟಿಸಿದ ಜ್ವಾಲಾಮುಖಿ ನವದೆಹಲಿ : ಇಥಿಯೋಪಿಯಾದ ಹೈಲಿ ಗುಬ್ಬಿ ಜ್ವಾಲಾಮುಖಿ 12 ಸಾವಿರ ವರ್ಷಗಳ ಬಳಿಕ ಸ್ಫೋಟಗೊಂಡಿದ್ದು, ಇದರ ಬೂದಿ ಸೋಮವಾರ ರಾತ್ರಿ ದೆಹಲಿ ತಲುಪಿದೆ. ಹವಾಮಾನ ಇಲಾಖೆ ಈವಿದ್ಯಮಾನವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಮೊದಲೇ ದೆಹಲಿ ವಾಯುಮಾಲಿನ್ಯ ಸಮಸ್ಯೆಯಿಂದ ಬಳಲುತ್ತಿದೆ. ಇದರೊಂದಿಗೆ ಜ್ವಾಲಾಮುಖಿಯ ಬೂದಿಯೂ ಸೇರಿಕೊಂಡರೆ ಪರಿಸ್ಥಿತಿ ಬಿಗಡಾಯಿಸುವ ಆತಂಕವಿದೆ. ಮೋಡದಂತಿರುವ ಬೂದಿ ವಾಯುವ್ಯ ಭಾರತದ ಕಡೆಗೆ ಗಂಟೆಗೆ ಸುಮಾರು 130 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಚಲಿಸುತ್ತಿದೆ. ಭಾನುವಾರ ಜ್ವಾಲಾಮುಖಿ ಸ್ಫೋಟಗೊಂಡ

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಫೋಟ : ದೆಹಲಿ ತಲುಪಿದ ಬೂದಿ Read More »

ಶಾಲೆಯಿಂದ 215 ಮಕ್ಕಳು, 12 ಶಿಕ್ಷಕರನ್ನು ಅಪಹರಿಸಿದ ಬಂಡುಕೋರರು

ನೈಜೀರಿಯಾ : ನೈಜೀರಿಯಾದ ನೈಜರ್ ರಾಜ್ಯದ ಕ್ಯಾಥೋಲಿಕ್ ಶಾಲೆಗೆ ನುಗ್ಗಿದ ಶಸ್ತ್ರಸಜ್ಜಿತ ದುಷ್ಕರ್ಮಿಗಳು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 12 ಶಿಕ್ಷಕರನ್ನು ಅಪಹರಿಸಿದ್ದಾರೆ. ಅಗ್ವಾರಾ ಸ್ಥಳೀಯ ಸರ್ಕಾರಿ ಪ್ರದೇಶದಲ್ಲಿರುವ ಪಾಪಿರಿ ಸಮುದಾಯದ ಸೈಂಟ್‌ ಮೇರಿ ಶಾಲೆಯಲ್ಲಿ ಈ ದಾಳಿ ನಡೆದಿದೆ. ನೈಜೀರಿಯಾದ ಕ್ರಿಶ್ಚಿಯನ್ ಅಸೋಸಿಯೇಷನ್ ​​ಪ್ರಕಾರ, ಬಂದೂಕುಧಾರಿಗಳು ಶಾಲೆಗೆ ನುಗ್ಗಿ 215 ಮಕ್ಕಳು ಮತ್ತು ವಿದ್ಯಾರ್ಥಿಗಳು ಹಾಗೂ 12 ಶಿಕ್ಷಕರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ. ಘಟನೆಯ ನಂತರ ಈ ಪ್ರದೇಶದಲ್ಲಿ ಭೀತಿ ಮತ್ತು ಭಯದ ವಾತಾವರಣವಿತ್ತು ಎಂದು ನೈಜರ್

ಶಾಲೆಯಿಂದ 215 ಮಕ್ಕಳು, 12 ಶಿಕ್ಷಕರನ್ನು ಅಪಹರಿಸಿದ ಬಂಡುಕೋರರು Read More »

ಮಕ್ಕಾ ಅಪಘಾತ : ಮೃತ ಭಾರತೀಯರ ಸಂಖ್ಯೆ 45ಕ್ಕೇರಿಕೆ

ಹುಬ್ಬಳ್ಳಿಯ ಓರ್ವ ವ್ಯಕ್ತಿಯೂ ಸಾವು ನವದೆಹಲಿ : ಸೌದಿ ಅರೇಬಿಯಾದ ಮಕ್ಕಾ ಮತ್ತು ಮದೀನಾ ನಡುವೆ ಸೋಮವಾರ ನಸುಕಿನ ವೇಳೆ ಸಂಭವಿಸಿದ ಬಸ್ ಅಪಘಾತದಲ್ಲಿ ಒಟ್ಟು 45 ಮಂದಿ ಭಾರತೀಯರು ಸಾವನ್ನಪ್ಪಿದ್ದು, ಈ ಪೈಕಿ ಓರ್ವ ಕನ್ನಡಿಗ ಕೂಡ ಸೇರಿದ್ದಾರೆ ಎಂದು ತಿಳಿದುಬಂದಿದೆ. ಸೌದಿ ಅರೇಬಿಯಾದ ಮೆಕ್ಕಾ-ಮದೀನಾ ರಸ್ತೆಯಲ್ಲಿ ಬಸ್ ಹಾಗೂ ಡೀಸಿಲ್‌ ಟ್ಯಾಂಕರ್ ನಡುವೆ ಡಿಕ್ಕಿಯಾದ ರಭಸಕ್ಕೆ ಬಸ್ ಹೊತ್ತಿ ಉರಿದಿತ್ತು. ದುರ್ಘಟನೆಯಲ್ಲಿ 45 ಮಂದಿ ಭಾರತೀಯರು ಸಜೀವ ದಹನವಾಗಿದ್ದಾರೆ. ಬಸ್ಸಿನಲ್ಲಿದ್ದ 46 ಜನರಲ್ಲಿ 43

ಮಕ್ಕಾ ಅಪಘಾತ : ಮೃತ ಭಾರತೀಯರ ಸಂಖ್ಯೆ 45ಕ್ಕೇರಿಕೆ Read More »

ಭಾರತವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದ ಶೇಖ್‌ ಹಸೀನಾ ಮರಣದಂಡನೆ ತೀರ್ಪು

ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದ ಮಾಜಿ ಪ್ರಧಾನಿಯನ್ನು ಗಡಿಪಾರು ಮಾಡಲಾಗುತ್ತದೆಯೇ? ನವದೆಹಲಿ : ಬಾಂಗ್ಲಾದೇಶದ ದೇಶಭ್ರಷ್ಟ ಮಾಜಿ ಪ್ರಧಾನಮಂತ್ರಿ ಶೇಖ್ ಹಸೀನಾ ಅವರಿಗೆ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪ ಹೊರಿಸಿ ಬಾಂಗ್ಲಾದ ನ್ಯಾಯಾಲಯ ಮರಣದಂಡನೆ ವಿಧಿಸಿದ ತೀರ್ಪು ಭಾರತವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದೆ. ಕಳೆದ ವರ್ಷ ಜುಲೈ-ಆಗಸ್ಟ್ ತಿಂಗಳಲ್ಲಿ ನಡೆದ ವಿದ್ಯಾರ್ಥಿ ಹೋರಾಟದ ಸಂದರ್ಭದಲ್ಲಿ ನಡೆದ ಹಿಂಸಾಚಾರ ಮತ್ತು ನರಮೇಧಕ್ಕೆ ಸಂಬಂಧಿಸಿದಂತೆ ಢಾಕಾದ ಅಂತಾರಾಷ್ಟ್ರೀಯ ಅಪರಾಧಗಳ ಟ್ರಿಬ್ಯೂನಲ್‌ ಈ ಐತಿಹಾಸಿಕ ತೀರ್ಪನ್ನು ನೀಡಿದೆ. ಪ್ರಸ್ತುತ ಶೇಖ್‌ ಹಸೀನಾ ಭಾರತದಲ್ಲಿ

ಭಾರತವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದ ಶೇಖ್‌ ಹಸೀನಾ ಮರಣದಂಡನೆ ತೀರ್ಪು Read More »

ಪಾಕಿಸ್ತಾನದಲ್ಲಿ ಜಾಫರ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಮತ್ತೆ ದಾಳಿ : ಹಲವು ಸೈನಿಕರ ಸಾವು

ಬಾಂಬ್‌ ಸ್ಫೋಟಿಸಿ ರೈಲಿನ ಹಳಿತಪ್ಪಿಸಿದ ಬಂಡುಕೋರರು ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಕ್ವೆಟ್ಟಾದಿಂದ ಪೇಶಾವರಕ್ಕೆ ಹೋಗುತ್ತಿದ್ದ ಜಾಫರ್ ಎಕ್ಸ್‌ಪ್ರೆಸ್ ಮೇಲೆ ಮತ್ತೆ ದಾಳಿ ನಡೆದಿದೆ. ಸಿಬಿ ಜಿಲ್ಲೆಯ ಬಳಿಯ ನಾಸಿರಾಬಾದ್ ಪ್ರದೇಶದಲ್ಲಿ ಜಾಫರ್ ಎಕ್ಸ್‌ಪ್ರೆಸ್ ಮೇಲೆ ಈ ದಾಳಿ ನಡೆಸಲಾಗಿದೆ. ಈ ಬಾರಿ ಬಾಂಬ್‌ ಸ್ಫೋಟದಲ್ಲಿ ಜಾಫರ್ ಎಕ್ಸ್‌ಪ್ರೆಸ್‌ನ ಹಲವಾರು ಬೋಗಿಗಳು ಹಳಿತಪ್ಪಿವೆ. ಬಲೂಚ್ ರಿಪಬ್ಲಿಕನ್ ಗಾರ್ಡ್‌ (ಬಿಆರ್‌ಜಿ) ಬಂಡುಕೋರರ ಗುಂಪು ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಈ ದಾಳಿಯಲ್ಲಿ ಹಲವಾರು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಅವರು

ಪಾಕಿಸ್ತಾನದಲ್ಲಿ ಜಾಫರ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಮತ್ತೆ ದಾಳಿ : ಹಲವು ಸೈನಿಕರ ಸಾವು Read More »

ಹಾರುತ್ತಿರುವಾಗಲೇ ಸ್ಫೋಟಗೊಂಡು ಪತನವಾದ ವಿಮಾನ : 7 ಮಂದಿ ಸಾವು

10 ಲಕ್ಷ ಲೀಟರ್‌ ಪೆಟ್ರೋಲ್‌ ಸ್ಫೋಟಿಸಿ ಮಹಾದುರಂತ; ಹಲವಾರು ಮನೆಗಳು ಬೆಂಕಿಗಾಹುತಿ ವಾಷಿಂಗ್ಟನ್‌: ಅಮೆರಿಕದ ಕೆಂಟುಕಿಯ ಲೂಯಿಸ್‌ವಿಲ್ಲೆಯಲ್ಲಿರುವ ಏರ್‌ಪೋರ್ಟ್‌ನಿಂದ ಹೊರಟಿದ್ದ ಮೂವರಿದ್ದ ಸರಕು ಸಾಗಣೆ ವಿಮಾನವೊಂದು ಹಾರುವಾಗಲೇ ಅಪಘಾತಕ್ಕೀಡಾಗಿ ಸ್ಫೋಟಗೊಂಡಿದೆ. ದುರಂತದಲ್ಲಿ ಕನಿಷ್ಠ 7 ಮಂದಿ ಸಾವು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. ವಿಮಾನಪತನಗೊಂಡ ಪ್ರದೇಶದ ಸುತ್ತ ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚಿಮ್ಮಿದೆ. ದುರಂತದಲ್ಲಿ ಹಲವಾರು ಮನೆಗಳು ಸುಟ್ಟು ನಾಶವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಘಟನೆ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ವಿಮಾನ ನಿಲ್ದಾಣವನ್ನ ಮುಚ್ಚಿದ್ದು, ಸುತ್ತಮುತ್ತ

ಹಾರುತ್ತಿರುವಾಗಲೇ ಸ್ಫೋಟಗೊಂಡು ಪತನವಾದ ವಿಮಾನ : 7 ಮಂದಿ ಸಾವು Read More »

ಹಾರುತ್ತಿರುವಾಗಲೇ ಸ್ಫೋಟಗೊಂಡು ಪತನವಾದ ವಿಮಾನ : 7 ಮಂದಿ ಸಾವು

10 ಲಕ್ಷ ಲೀಟರ್‌ ಪೆಟ್ರೋಲ್‌ ಸ್ಫೋಟಿಸಿ ಮಹಾದುರಂತ; ಹಲವಾರು ಮನೆಗಳು ಬೆಂಕಿಗಾಹುತಿ ವಾಷಿಂಗ್ಟನ್‌: ಅಮೆರಿಕದ ಕೆಂಟುಕಿಯ ಲೂಯಿಸ್‌ವಿಲ್ಲೆಯಲ್ಲಿರುವ ಏರ್‌ಪೋರ್ಟ್‌ನಿಂದ ಹೊರಟಿದ್ದ ಮೂವರಿದ್ದ ಸರಕು ಸಾಗಣೆ ವಿಮಾನವೊಂದು ಹಾರುವಾಗಲೇ ಅಪಘಾತಕ್ಕೀಡಾಗಿ ಸ್ಫೋಟಗೊಂಡಿದೆ. ದುರಂತದಲ್ಲಿ ಕನಿಷ್ಠ 7 ಮಂದಿ ಸಾವು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. ವಿಮಾನಪತನಗೊಂಡ ಪ್ರದೇಶದ ಸುತ್ತ ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚಿಮ್ಮಿದೆ. ದುರಂತದಲ್ಲಿ ಹಲವಾರು ಮನೆಗಳು ಸುಟ್ಟು ನಾಶವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಘಟನೆ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ವಿಮಾನ ನಿಲ್ದಾಣವನ್ನ ಮುಚ್ಚಿದ್ದು, ಸುತ್ತಮುತ್ತ

ಹಾರುತ್ತಿರುವಾಗಲೇ ಸ್ಫೋಟಗೊಂಡು ಪತನವಾದ ವಿಮಾನ : 7 ಮಂದಿ ಸಾವು Read More »

error: Content is protected !!
Scroll to Top