ವಿದೇಶ

ಅಫಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ : ಹಲವು ಮಂದಿ ಸಾವು

6.3 ತೀವ್ರತೆಯ ಭೂಕಂಪದಿಂದ ಅನೇಕ ಕಟ್ಟಡಗಳು ಧರಾಶಾಯಿ ಕಾಬೂಲ್ : ಆಫ್ಘಾನಿಸ್ತಾನದಲ್ಲಿ ಸೋಮವಾರ ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿ ಕನಿಷ್ಠ 7 ಮಂದಿ ಸಾವನ್ನಪ್ಪಿ 150ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅನೇಕ ಕಟ್ಟಡಗಳು ಧರೆಗುರುಳಿವೆ. ಸೋಮವಾರ ಮುಂಜಾನೆ ಉತ್ತರ ಅಫ್ಘಾನಿಸ್ತಾನದ ಮಜಾರ್-ಎ ಶರೀಫ್ ನಗರದ ಬಳಿ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಹತ್ತಾರು ಕಟ್ಟಡಗಳು ನೆಲಕ್ಕುರುಳಿವೆ. ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿ ಸುಮಾರು 150 ಜನರು ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಅಧಿಕಾರಿಗಳು ಸೋಮವಾರ […]

ಅಫಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ : ಹಲವು ಮಂದಿ ಸಾವು Read More »

ಸೂಪರ್‌ ಮಾರ್ಕೆಟ್‌ನಲ್ಲಿ ಭೀಕರ ಸ್ಫೋಟ : 23 ಮಂದಿ ಸಾವು

ಸ್ಫೋಟದ ವೇಳೆ ಬಿಡುಗಡೆಯಾದ ವಿಷಾನಿಲದಿಂದಲೂ ಹಲವರು ಮೃತ ಮೆಕ್ಸಿಕೋ ಸಿಟಿ: ಉತ್ತರ ಮೆಕ್ಸಿಕೋದ ಸೂಪರ್‌ ಮಾರ್ಕೆಟ್‌ನಲ್ಲಿ ಭೀಕರ ಸ್ಫೋಟ ಸಂಭವಿಸಿ ಮಕ್ಕಳು ಸೇರಿದಂತೆ 23 ಮಂದಿ ಸಾವನ್ನಪ್ಪಿದ್ದಾರೆ. ಹರ್ಮೊಸಿಲ್ಲೊದ ವಾಲ್ಡೋ ಡಿಪಾರ್ಟ್‌ಮೆಂಟಲ್‌ ಸ್ಟೋರ್‌ನಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ 11 ಮಂದಿ ಗಾಯಗೊಂಡಿದ್ದು, ಅವರನ್ನು ನಗರದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಫೋಟದ ವೇಳೆ ಬಿಡುಗಡೆಯಾದ ವಿಷಕಾರಿ ಅನಿಲ ಉಸಿರಾಟದಿಂದ ಹೆಚ್ಚಿನ ಮಂದಿ ಸಾವಿಗೀಡಾಗಿದ್ದಾರೆ ಎಂದು ವಿಧಿವಿಜ್ಞಾನ ವೈದ್ಯಕೀಯ ಸೇವೆಯ ರಾಜ್ಯದ ಅಟಾರ್ನಿ ಜನರಲ್‌ ಗುಸ್ತಾವೋ ಸಲಾಸ್‌ ಮಾಹಿತಿ

ಸೂಪರ್‌ ಮಾರ್ಕೆಟ್‌ನಲ್ಲಿ ಭೀಕರ ಸ್ಫೋಟ : 23 ಮಂದಿ ಸಾವು Read More »

ಸೌದಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಭಾರತೀಯ ಯುವಕ ಆಕಸ್ಮಿಕ ಸಾವು

ಲಿಕ್ಕರ್‌ ಗ್ಯಾಂಗ್‌ ಜೊತೆ ಎನ್‌ಕೌಂಟರ್‌ ನಡೆದಾಗ ಸ್ಥಳದಲ್ಲಿದ್ದ ಯುವಕನಿಗೆ ಬಡಿದ ಗುಂಡು ನವದೆಹಲಿ: ಸೌದಿ ಅರೇಬಿಯಾದ ಜೆದ್ದಾದಲ್ಲಿ ಕಳೆದ ಅ.16ರಂದು ಪೊಲೀಸರು ಹಾಗೂ ಮದ್ಯ ಸ್ಮಗ್ಲಿಂಗ್‌ ಗ್ಯಾಂಗ್ ಮಧ್ಯೆ ನಡೆದ ಗುಂಡಿನ ಕಾಳಗದಲ್ಲಿ ಜಾರ್ಖಂಡ್ ಮೂಲದ ಯುವಕ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಮೃತ ಯುವಕನನ್ನು ವಿಜಯ್ ಕುಮಾರ್ ಮಹತೊ (26) ಎಂದು ಗುರುತಿಸಲಾಗಿದ್ದು, ಜಾರ್ಖಂಡ್‌ನ ಈತ ಗಿರಿಧ್ ಜಿಲ್ಲೆಯ ದುಮ್ರಿ ತಾಲೂಕಿನ ಮಧ್ ಗೋಪಾಲಿ ಪಂಚಾಯ್ತಿ ವ್ಯಾಪ್ರಿಯ ಧೂದ್‌ಪಾನಿಯಾ ಗ್ರಾಮದವರು. ಟವರ್ಲೈನ್ ಫಿಟ್ಟರ್ ಆಗಿ ಕಳೆದ ಒಂಬತ್ತು

ಸೌದಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಭಾರತೀಯ ಯುವಕ ಆಕಸ್ಮಿಕ ಸಾವು Read More »

ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗಿನಿಂದ ಉದ್ಯಮಿಯ ಹತ್ಯೆ

ಹಫ್ತಾ ಹಣ ಕೊಡದ ಕಾರಣಕ್ಕೆ ಗುಂಡಿಕ್ಕಿ ಕೊಲೆ ಒಟ್ಟಾವ: ಕುಖ್ಯಾತ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಕೆನಡಾದಲ್ಲಿ ಭಾರತೀಯ ಮೂಲದ ಅಬಾಟ್ಸ್‌ಫೋರ್ಡ್ ಕೈಗಾರಿಕೋದ್ಯಮಿಯೊಬ್ಬರನ್ನು ಹತ್ಯೆ ಮಾಡಿದೆ ಮತ್ತು ಪಂಜಾಬಿ ಗಾಯಕನ ಮನೆಯ ಮೇಲೆ ಗುಂಡು ಹಾರಿಸಿದೆ. ರಾಜಸ್ಥಾನದ ಪೊಲೀಸರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಕ್ರಿಯ ಸದಸ್ಯ ಜಗದೀಪ್ ಸಿಂಗ್ ಅಲಿಯಾಸ್ ಜಗ್ಗಾನನ್ನು ಅಮೆರಿಕದಲ್ಲಿ ಬಂಧಿಸಿದ್ದರು. ಅದರ ಬೆನ್ನಲ್ಲೇ ಈ ಎರಡು ದಾಳಿಗಳು ನಡೆದಿವೆ. ಬಿಷ್ಣೋಯ್ ಗ್ಯಾಂಗ್ ಸದಸ್ಯ ಗೋಲ್ಡಿ ಧಿಲ್ಲೋನ್, ಭಾರತೀಯ ಮೂಲದ ಕೈಗಾರಿಕೋದ್ಯಮಿ ದರ್ಶನ್ ಸಿಂಗ್ ಸಹಸಿ

ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗಿನಿಂದ ಉದ್ಯಮಿಯ ಹತ್ಯೆ Read More »

ಕದನ ವಿರಾಮ ಉಲ್ಲಂಘಿಸಿದ ಹಮಾಸ್‌ : ಇಸ್ರೇಲ್‌ ದಾಳಿಯಲ್ಲಿ 30 ಮಂದಿ ಬಲಿ

ಮೃತದೇಹ ಹಸ್ತಾಂತರದಲ್ಲಿ ಕಳ್ಳಾಟವಾಡಿದ್ದಕ್ಕೆ ಪ್ರತೀಕಾರವಾಗಿ ಗಾಜಾಪಟ್ಟಿ ಮೇಲೆ ಭೀಕರ ದಾಳಿ ಟೆಲ್‌ ಅವೀವ್‌: ಹಮಾಸ್‌ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕೆ ಸಿಟ್ಟಾಗಿರುವ ಇಸ್ರೇಲ್‌ ನಡೆಸಿದ ಭೀಕರ ದಾಳಿಗೆ ಗಾಜಾಪಟ್ಟಿಯಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ. ಇಸ್ರೇಲ್‌ ಉತ್ತರ ಗಾಜಾದ ಹಲವಾರು ಜಾಗಗಳನ್ನು ಗುರಿಯಾಗಿಸಿ ಇಸ್ರೇಲ್‌ ವಾಯು ದಾಳಿ ನಡೆಸಿದೆ. ಮಧ್ಯ ಗಾಜಾಪಟ್ಟಿಯಲ್ಲಿರುವ ಬುರೈಜ್ ನಿರಾಶ್ರಿತರ ಶಿಬಿರದಲ್ಲಿ ಮನೆ ಮೇಲೆ ದಾಳಿ ನಡೆಸಿದ ಐದು ಜನರು ಸಾವನ್ನಪ್ಪಿದ್ದಾರೆ. ದಕ್ಷಿಣ ನಗರ ಖಾನ್ ಯೂನಿಸ್‌ನಲ್ಲಿ, ಮತ್ತೊಂದು ದಾಳಿಯಲ್ಲಿ ಇಬ್ಬರು ಮಕ್ಕಳು ಮತ್ತು

ಕದನ ವಿರಾಮ ಉಲ್ಲಂಘಿಸಿದ ಹಮಾಸ್‌ : ಇಸ್ರೇಲ್‌ ದಾಳಿಯಲ್ಲಿ 30 ಮಂದಿ ಬಲಿ Read More »

ನಟ ಸಲ್ಮಾನ್‌ ಖಾನ್‌ಗೆ ಭಯೋತ್ಪಾದಕನ ಪಟ್ಟ ಕಟ್ಟಿದ ಪಾಕಿಸ್ತಾನ

ಬಲೂಚಿಸ್ತಾನ ಹೇಳಿಕೆಗೆ ಪ್ರತಿಯಾಗಿ ನಟನನ್ನು ಉಗ್ರರ ಪಟ್ಟಿಗೆ ಸೇರ್ಪಡೆ ಮುಂಬೈ: ನಟ ಸಲ್ಮಾನ್ ಖಾನ್ ಅವರನ್ನು ಪಾಕಿಸ್ತಾನ ಸರ್ಕಾರ ಭಯೋತ್ಪಾದಕರ ಪಟ್ಟಿಗೆ ಸೇರಿಸಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹಬ್ಬಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಬಲೂಚಿಸ್ತಾನ ಬಗ್ಗೆ ನೀಡಿದ ಹೇಳಿಕೆಯಿಂದ ರೊಚ್ಚಿಗೆದ್ದಿರುವ ಪಾಕಿಸ್ತಾನ ಸರ್ಕಾರ ಸಲ್ಮಾನ್‌ ಖಾನ್‌ಗೆ ಭಯೋತ್ಪಾದಕನ ಪಟ್ಟಕಟ್ಟಿದೆ. ಸಲ್ಮಾನ್ ಖಾನ್ ಇತ್ತೀಚೆಗೆ ಸೌದಿ ಅರೇಬಿಯಾದ ರಾಜಧಾನಿ ರಿಯಾಧ್​​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತದ ಸಿನಿಮಾಗಳ ಬಗ್ಗೆ ಮಾತನಾಡುವಾಗ ಪಾಕಿಸ್ತಾನದ ಬಗ್ಗೆ ಪ್ರಸ್ತಾಪಿಸಿದ್ದರು. ಈಗ

ನಟ ಸಲ್ಮಾನ್‌ ಖಾನ್‌ಗೆ ಭಯೋತ್ಪಾದಕನ ಪಟ್ಟ ಕಟ್ಟಿದ ಪಾಕಿಸ್ತಾನ Read More »

ಪ್ರಧಾನಿ ಮೋದಿ ಹತ್ಯೆಗೆ ನಡೆದಿತ್ತಾ ಸಂಚು?

ಚೀನದಲ್ಲಿ ಸಾಯಿಸಲು ಸಂಚು ಮಾಡಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಬಹಿರಂಗ ರಷ್ಯಾ ಅಧ್ಯಕ್ಷ ಪುಟಿನ್‌ ಅವರಿಂದ ವಿಫಲಗೊಂಡಿತು ಸಂಚು ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಲು ನಡೆದಿತ್ತಾ ಸಂಚು? ಹೀಗೊಂದು ಸುದ್ದಿ ನಿನ್ನೆಯಿಂದೀಚೆಗೆ ಭಾರಿ ಸದ್ದು ಮಾಡುತ್ತಿದೆ. ಕಳೆದ ತಿಂಗಳು ಚೀನಾದಲ್ಲಿ ನಡೆದ ಶಾಂಘೈ ಸಹಕಾರ ಸಂಘದ ಸಭೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ನಡೆಸಲಾಗಿತ್ತು ಎಂಬ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದೆ. ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ವಿರುದ್ಧ ಇಂಥಹದ್ದೊಂದು

ಪ್ರಧಾನಿ ಮೋದಿ ಹತ್ಯೆಗೆ ನಡೆದಿತ್ತಾ ಸಂಚು? Read More »

ಪಾಕಿಸ್ತಾನ ವಾಯುದಾಳಿಗೆ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಸಾವು

ಕದನ ವಿರಾಮ ಇರುವಾಗಲೇ ದಾಳಿ-ತ್ರಿಕೋನ ಸರಣಿಯಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದ ಎಸಿಬಿ ಕಾಬೂಲ್: ಪಾಕಿಸ್ತಾನದ ಗಡಿಯಲ್ಲಿರುವ ಅಫ್ಘಾನಿಸ್ತಾನದ ಪಕ್ತಿಕಾ ಪ್ರಾಂತ್ಯದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಮೂವರು ಆಫ್ಘನ್ ಕ್ರಿಕೆಟಿಗರು ಸೇರಿದಂತೆ ಕನಿಷ್ಠ ಎಂಟು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಉಭಯ ದೇಶಗಳ ನಡುವೆ ಈಗಾಗಲೇ ಹದಗೆಟ್ಟಿರುವ ಸಂಬಂಧವನ್ನು ಮತ್ತಷ್ಟು ಬಿಗಡಾಯಿಸಿದೆ. ಆಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ಎಸಿಬಿ) ಪ್ರಕಾರ, ಮುಂದಿನ ತಿಂಗಳು ಪಾಕಿಸ್ತಾನ ಮತ್ತು ಶ್ರೀಲಂಕಾ ವಿರುದ್ಧ ನಡೆಯಲಿರುವ ತ್ರಿಕೋನ ಸರಣಿಯಲ್ಲಿ ಭಾಗವಹಿಸಲು ಆಟಗಾರರು ಉರ್ಗುನ್‌ನಿಂದ ಪಕ್ತಿಕಾ

ಪಾಕಿಸ್ತಾನ ವಾಯುದಾಳಿಗೆ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಸಾವು Read More »

ಅಫಘಾನಿಸ್ತಾನ ಮೇಲೆ ಪಾಕಿಸ್ತಾನ ಮತ್ತೆ ಕ್ಷಿಪಣಿ ದಾಳಿ

ಗಡಿ ಭಾಗದ ದೇಶಗಳಲ್ಲಿ ಯುದ್ಧದ ಕಾರ್ಮೋಡ ಕಾಬೂಲ್‌: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ದಾಳಿ ಮತ್ತು ಪ್ರತಿದಾಳಿ ನಡೆಸಲಾರಂಭಿಸಿದ್ದು, ಜಗತ್ತಿನಲ್ಲಿ ಇನ್ನೊಂದು ಯುದ್ಧದ ಕಾರ್ಮೋಡ ಕವಿದಿದೆ. ಕಾಬೂಲ್‌ ಮೇಲೆ ವಾಯುದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತಾಲಿಬಾನ್‌ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಮತ್ತೊಂದು ಸುತ್ತಿನ ಕ್ಷಿಪಣಿ ದಾಳಿ ನಡೆಸಿದೆ. ಅಫ್ಘಾನ್‌- ಪಾಕ್‌ ಗಡಿಯಾಗಿರುವ ಡುರಾಂಡ್‌ ಲೈನ್‌ನಲ್ಲಿ ನಡೆದ ಘರ್ಷಣೆಯಲ್ಲಿ 12 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನ ಸೇನೆ ಗಡಿಯಲ್ಲಿ ಸ್ಥಾಪಿಸಿದ್ದ 12 ಔಟ್‌ಪೋಸ್ಟಿಂಗ್‌ಗಳನ್ನ ಅಫಘಾನಿಸ್ತಾನ ವಶಪಡಿಸಿಕೊಂಡಿದೆ

ಅಫಘಾನಿಸ್ತಾನ ಮೇಲೆ ಪಾಕಿಸ್ತಾನ ಮತ್ತೆ ಕ್ಷಿಪಣಿ ದಾಳಿ Read More »

ಭಾರತದ ನೆಲದಲ್ಲಿ ನಿಂತು ಪಾಕ್‌ಗೆ ಶಾಂತಿಯ ಸಂದೇಶ ರವಾನಿಸಿದ ಅಫ್ಘಾನ್ ಸಚಿವ ಮುತ್ತಕಿ

ನವದೆಹಲಿ: ಉಗ್ರರ ಗುಂಪುಗಳನ್ನು ಅಫ್ಘಾನಿಸ್ತಾನ ಸಂಪೂರ್ಣವಾಗಿ ನಿರ್ನಾಮ ಮಾಡಿದ್ದು, ಇದೇ ರೀತಿಯ ಶಾಂತಿಯ ಹಾದಿಯನ್ನು ಪಾಕಿಸ್ತಾನ ತುಳಿಯಬೇಕು ಎಂದು ಭಾರತದ ನೆಲದಲ್ಲಿ ನಿಂತು ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. LET, ಜೈಶ್ ಎ ಮೊಹಮ್ಮದ್‌ನಂತಹ ಉಗ್ರ ಗುಂಪುಗಳು ಈ ಹಿಂದೆ ಅಫ್ಘಾನಿಸ್ತಾನ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದವು. ಆದರೆ ಕಳೆದ ನಾಲ್ಕು ವರ್ಷಗಳಲ್ಲಿ ಅವುಗಳೆಲ್ಲವನ್ನೂ ಸಂಪೂರ್ಣ ನಿರ್ನಾಮ ಮಾಡಲಾಗಿದೆ. ಪ್ರಸ್ತುತ ಅಫ್ಘಾನ್‌ನಲ್ಲಿ ಯಾವ ಭಯೋತ್ಪಾದಕರೂ ಇಲ್ಲ. ಅವರ ನಿಯಂತ್ರಣದಲ್ಲಿ ತುಂಡು ಭೂಮಿಯೂ

ಭಾರತದ ನೆಲದಲ್ಲಿ ನಿಂತು ಪಾಕ್‌ಗೆ ಶಾಂತಿಯ ಸಂದೇಶ ರವಾನಿಸಿದ ಅಫ್ಘಾನ್ ಸಚಿವ ಮುತ್ತಕಿ Read More »

error: Content is protected !!
Scroll to Top