ದೇಶ

ಬ್ಯಾಂಕಿಗೆ 13,850 ಕೋ. ರೂ. ವಂಚಿಸಿದ ಉದ್ಯಮಿ ಮೆಹುಲ್‌ ಚೋಕ್ಸಿ ಬೆಲ್ಜಿಯಂನಲ್ಲಿ ಬಂಧನ

2019ರಲ್ಲಿ ದೇಶ ಬಿಟ್ಟು ಪಲಾಯನ ಮಾಡಿದ್ದ ಪ್ರತಿಷ್ಠಿತ ವಜ್ರೋದ್ಯಮಿ ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,000 ಕೋ.ರೂ.ಗೂ ಹೆಚ್ಚು ಮೊತ್ತ ವಂಚಿಸಿ ಪಲಾಯನ ಮಾಡಿದ್ದ ಪ್ರತಿಷ್ಠಿತ ವಜ್ರೋದ್ಯಮಿ ಮೆಹುಲ್ ಚೋಕ್ಸಿಯನ್ನು ಬೆಲ್ಜಿಯಂ ದೇಶದಲ್ಲಿ ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಭಾರತೀಯ ತನಿಖಾ ಸಂಸ್ಥೆಗಳ ಕೋರಿಗೆ ಮೇರೆಗೆ ಏಪ್ರಿಲ್‌ 12ರಂದು ಮೆಹುಲ್‌ ಚೋಕ್ಸಿಯನ್ನು ಬೆಲ್ಜಿಯಂನ ಆಸ್ಪತ್ರೆಯಲ್ಲಿ ಬಂಧಿಸಲಾಯಿತು ಎಂದು ತಿಳಿದುಬಂದಿದೆ. ಅವನನ್ನು ಭಾರತಕ್ಕೆ ಕರೆತರಲು ತನಿಖಾ ಸಂಸ್ಥೆಗಳು ಸಿದ್ಧತೆ ಮಾಡಿಕೊಳ್ಳುತ್ತಿವೆ. ಕಾನೂನು ಹೋರಾಟ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಎಂದು ಮೂಲಗಳು […]

ಬ್ಯಾಂಕಿಗೆ 13,850 ಕೋ. ರೂ. ವಂಚಿಸಿದ ಉದ್ಯಮಿ ಮೆಹುಲ್‌ ಚೋಕ್ಸಿ ಬೆಲ್ಜಿಯಂನಲ್ಲಿ ಬಂಧನ Read More »

ಪಶ್ಚಿಮ ಬಂಗಾಳ : ಮೂವರು ಸಾವು; 150ಕ್ಕೂ ಅಧಿಕ ಬಂಧನ

ವಕ್ಫ್‌ ಕಾಯಿದೆ ವಿರೋಧಿ ಪ್ರತಿಭಟನೆ ವೇಳೆ ಭಾರಿ ಹಿಂಸಾಚಾರ ಕೋಲ್ಕತ್ತಾ: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆ ಮುಂದುವರಿದಿದೆ. ತಂದೆ ಮತ್ತು ಮಗ ಸೇರಿ ಈವರೆಗೆ ಒಟ್ಟು ಮೂವರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಶುಕ್ರವಾರದ ಪ್ರಾರ್ಥನೆಯ ನಂತರ ಭುಗಿಲೆದ್ದ ಹಿಂಸಾಚಾರ ಮುರ್ಷಿದಾಬಾದ್‌ ಜಿಲ್ಲೆಯ ಹಲವು ಭಾಗಗಳಿಗೆ ವ್ಯಾಪಿಸಿದ್ದು, ಅಪಾರ ಪ್ರಮಾಣದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿವೆ. ಕಳೆದ ರಾತ್ರಿ ಪೊಲೀಸರು, ಅರೆಸೇನಾ ಪಡೆಗಳು ಸಂಪೂರ್ಣ ಗಸ್ತು ತಿರುಗಿದ್ದು, ಸುತಿ,

ಪಶ್ಚಿಮ ಬಂಗಾಳ : ಮೂವರು ಸಾವು; 150ಕ್ಕೂ ಅಧಿಕ ಬಂಧನ Read More »

ನ್ಯಾಶನಲ್‌ ಹೆರಾಲ್ಡ್‌ ಹಗರಣ : ಕಾಂಗ್ರೆಸ್‌ನ 661 ಕೋ. ರೂ. ಆಸ್ತಿ ಜಪ್ತಿ ಪ್ರಕ್ರಿಯೆ ಶುರು

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಆರೋಪಿಗಳಾಗಿರುವ ಪ್ರಕರಣ ನವದೆಹಲಿ : ನ್ಯಾಶನಲ್‌ ಹೆರಾಲ್ಡ್‌ ಭ್ರಷ್ಟಾಚಾರ ಕೇಸಿಗೆ ಸಂಬಂಧಪಟ್ಟಂತೆ ಕಾಂಗ್ರೆಸ್‌ನ 600 ಕೋಟಿ ರೂ.ಗೂ ಮಿಕ್ಕಿದ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಪ್ರಾರಂಭಿಸಿದೆ.ಕಾಂಗ್ರೆಸ್ ನಿಯಂತ್ರಿತ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ವಿರುದ್ಧದ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಜಪ್ತಿ ಮಾಡಲಾಗಿರುವ 661 ಕೋಟಿ ರೂಪಾಯಿ ಮೌಲ್ಯದ ಸ್ಥಿರ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಾರಿ ನಿರ್ದೇಶನಾಲಯ ಶನಿವಾರ ನೋಟಿಸ್ ಜಾರಿ ಮಾಡಿದೆ. ದೆಹಲಿಯ ಐಟಿಒದಲ್ಲಿರುವ ಹೆರಾಲ್ಡ್ ಹೌಸ್, ಮುಂಬಯಿಯ

ನ್ಯಾಶನಲ್‌ ಹೆರಾಲ್ಡ್‌ ಹಗರಣ : ಕಾಂಗ್ರೆಸ್‌ನ 661 ಕೋ. ರೂ. ಆಸ್ತಿ ಜಪ್ತಿ ಪ್ರಕ್ರಿಯೆ ಶುರು Read More »

ಕಾಶ್ಮೀರ : ಉಗ್ರರ ಜೊತೆ ಗುಂಡಿನ ಕಾಳಗದಲ್ಲಿ ಓರ್ವ ಯೋಧ ಹುತಾತ್ಮ

ಎರಡು ಕಾರ್ಯಾಚರಣೆಯಲ್ಲಿ ಐವರು ಉಗ್ರರ ಹತ್ಯೆ ಶ್ರೀನಗರ: ಕಾಶ್ಮೀರದಲ್ಲಿ ಮತ್ತೆ ಉಗ್ರರು ನುಸುಳಿಕೊಂಡು ಬರುವ ಕೃತ್ಯಗಳು ಶುರುವಾಗಿದ್ದು, ಶುಕ್ರವಾರ ತಡರಾತ್ರಿ ಗಡಿ ದಾಟಿ ಬರಲು ಯತ್ನಿಸಿದ ಉಗ್ರರ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಯೋಧ ತೀವ್ರ ಗಾಯಗೊಂಡು ಬಳಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಉಗ್ರರ ನುಸುಳಿ ಬರುವ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಈ ಪ್ರದೇಶವನ್ನು ಭದ್ರತಾ ಪಡೆ ಸುತ್ತುವರಿದಿದ್ದು, ತೀವ್ರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸೇನೆಯ ಮೂಲಗಳು ತಿಳಿಸಿದೆ.ಜಮ್ಮುವಿನ ಅಕ್ನೂರ್‌ ವಲಯದ ಭಟ್ಟಲ್‌ ಎಂಬಲ್ಲಿ ಉಗ್ರರು ಗಡಿದಾಟಿ ಬರುತ್ತಿರುವ

ಕಾಶ್ಮೀರ : ಉಗ್ರರ ಜೊತೆ ಗುಂಡಿನ ಕಾಳಗದಲ್ಲಿ ಓರ್ವ ಯೋಧ ಹುತಾತ್ಮ Read More »

ವಕ್ಫ್‌ ಕಾಯಿದೆ ವಿರೋಧಿಸಿ ಪ್ರತಿಭಟನೆ ವೇಳೆ ರೈಲುಗಳಿಗೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

ಪಶ್ಚಿಮ ಬಂಗಾಳದಲ್ಲಿ ಇಡೀ ದಿನ ನಡೆದ ಹಿಂಸಾಚಾರ ಕೋಲ್ಕತ್ತಾ: ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಮುಸ್ಲಿಮರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ನಿಲ್ದಾಣದಲ್ಲಿ ನಿಂತಿದ್ದ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿ ಎರಡು ರೈಲುಗಳನ್ನು ಜಖಂಗೊಳಿಸಿದ್ದಾರೆ.ಶುಕ್ರವಾರ ಮಧ್ಯಾಹ್ನ ಪ್ರತಿಭಟನೆ ನಡೆದಿತ್ತು. ರಾತ್ರಿ ಪ್ರತಿಭಟನೆ ಹಿಂಸಚಾರಕ್ಕೆ ತಿರುಗಿದೆ. ಘಟನೆಯ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ದಾಳಿಯಲ್ಲಿ ಕೆಲವು ಪ್ರಯಾಣಿಕರು ಮತ್ತು ಏಳರಿಂದ ಹತ್ತು ಪೊಲೀಸರು ಗಾಯಗೊಂಡಿದ್ದಾರೆ. ಹಿಂಸಾಚಾರವನ್ನು ನಿಯಂತ್ರಿಸಲು ಗಡಿ ಭದ್ರತಾ

ವಕ್ಫ್‌ ಕಾಯಿದೆ ವಿರೋಧಿಸಿ ಪ್ರತಿಭಟನೆ ವೇಳೆ ರೈಲುಗಳಿಗೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ Read More »

ಚಿನ್ನದ ಬೆಲೆ ಎರಡು ದಿನದಲ್ಲಿ 5 ಸಾವಿರ ರೂ. ಹೆಚ್ಚಳ

ನವದೆಹಲಿ: ಅಮೆರಿಕದ ಸುಂಕ ಸಮರದ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾದ ತಲ್ಲಣದಿಂದಾಗಿ ಕೆಲವು ದಿನಗಳಿಂದ ಇಳಿಯುತ್ತಿದ್ದ ಚಿನ್ನದ ಬೆಲೆ ಕಳೆದೆರಡು ದಿನಗಳಿಂದ ಮತ್ತೆ ಏರಿಕೆಯಾಗತೊಡಗಿದೆ. ಶುಕ್ರವಾರ ಒಂದೇ ದಿನ 2000 ರೂ. ಏರಿಕೆಯಾಗಿದೆ. ಗುರುವಾರವೂ 2940 ರೂ. ಹೆಚ್ಚಳವಾಗಿತ್ತು. ಇದರಿಂದ ಎರಡೇ ದಿನದಲ್ಲಿ ಚಿನ್ನದ ಬೆಲೆ ಸುಮಾರು 5,000 ರೂ.ಯಷ್ಟು ಏರಿದಂತಾಗಿದೆ. ಬೆಲೆ ಇಳಿಕೆಯಿಂದ ತುಸು ಖುಷಿಯಾಗಿದ್ದ ಚಿನ್ನಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಚಿಂತೆ ಕಾಡಲಾರಂಭಿಸಿದೆ.ಮುಂಬಯಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 87,450 ರೂ.ಗೆ

ಚಿನ್ನದ ಬೆಲೆ ಎರಡು ದಿನದಲ್ಲಿ 5 ಸಾವಿರ ರೂ. ಹೆಚ್ಚಳ Read More »

ಉಗ್ರ ತಹಾವುರ್‌ ರಾಣಾ 18 ದಿನ ಎನ್‌ಐಎ ಕಸ್ಟಡಿಗೆ

ತಡರಾತ್ರಿ ತನಕ ವಿಚಾರಣೆ ನಡೆಸಿ ಮುಂಜಾನೆ ಆದೇಶ ನೋಡಿದ ಕೋರ್ಟ್‌ ನವದೆಹಲಿ: ಮುಂಬೈ ದಾಳಿಯ ಸಂಚುಕೋರ, 64 ವರ್ಷ ವಯಸ್ಸಿನ ತಹವುರ್‌ ರಾಣಾನನ್ನು ದೆಹಲಿಯ ವಿಶೇಷ ನ್ಯಾಯಾಲಯ 18 ದಿನಗಳ ಮಟ್ಟಿಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಶಕ್ಕೊಪ್ಪಿಸಿದೆ. ಅಮೆರಿಕದಿಂದ ಗಡಿಪಾರುಗೊಂಡಿದ್ದ ಉಗ್ರ ರಾಣಾನನ್ನು ಗುರುವಾರ ಸಂಜೆ 6.30ಕ್ಕೆ ಭಾರತಕ್ಕೆ ಕರೆತರಲಾಗಿತ್ತು.ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವಿಶೇಷ ವಿಮಾನದಿಂದ ರಾಣಾನನ್ನು ಇಳಿಸಿದ ಕೂಡಲೇ ವಿಮಾನ ನಿಲ್ದಾಣದಲ್ಲೇ ಅವನ ಬಂಧನದ ಔಪಚಾರಿಕತೆಯನ್ನು ಪೂರೈಸಿ ಪಟಿಯಾಲ ಹೌಸ್‌ನ ಕೋರ್ಟ್‌ನ ಎನ್‌ಐಎ

ಉಗ್ರ ತಹಾವುರ್‌ ರಾಣಾ 18 ದಿನ ಎನ್‌ಐಎ ಕಸ್ಟಡಿಗೆ Read More »

ಇನ್ನು ಎಲ್ಲೆಡೆಗೆ ಆಧಾರ್‌ ಕಾರ್ಡ್‌ ಕೊಂಡೊಯ್ಯುವ ಅಗತ್ಯವಿಲ್ಲ

ಡೇಟಾ ಸೋರಿಕೆ ತಡೆಗಟ್ಟಲು ಹೊಸ ಆಧಾರ್‌ ಆ್ಯಪ್ ಬಿಡುಗಡೆ ಮಾಡಿದ ಸರಕಾರ ನವದೆಹಲಿ: ಈಗ ಪ್ರತಿಯೊಂದಕ್ಕೂ ಕೆಲಸಕ್ಕೂ ಆಧಾರ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಸರಕಾರಿ ಮಾತ್ರವಲ್ಲದೆ ಕೆಲವು ಖಾಸಗಿ ಸಂಸ್ಥೆಗಳ ಕೆಲಸಗಳಿಗೂ ಆಧಾರ್‌ ಕೊಡಬೇಕಾಗುತ್ತದೆ. ಇಂಥ ಸಂದರ್ಭದಲ್ಲಿ ಆಧಾರ್‌ ಮಾಹಿತಿ ದುರುಪಯೋಗವಾಗುವ ಭೀತಿ ಇರುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಸಂಪೂರ್ಣ ಸುರಕ್ಷಿತವಾಗಿರುವ ಆಧಾರ್‌ ಆ್ಯಪ್ ಒಂದನ್ನು ಅಭಿವೃದ್ಧಿಪಡಿಸಿದ್ದು, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ಹೊಸ ಆ್ಯಪ್ ಬಿಡುಗಡೆ ಮಾಡಿದ್ದಾರೆ. ಈ ಆ್ಯಪ್ ಇದ್ದರೆ ಆಧಾರ್

ಇನ್ನು ಎಲ್ಲೆಡೆಗೆ ಆಧಾರ್‌ ಕಾರ್ಡ್‌ ಕೊಂಡೊಯ್ಯುವ ಅಗತ್ಯವಿಲ್ಲ Read More »

ಯಾಸಿನ್‌ ಭಟ್ಕಳ್‌ ಸಹಿತ ಐವರು ಉಗ್ರರ ಗಲ್ಲುಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌

2013ರಲ್ಲಿ ಹೈದರಾಬಾದ್‌ನಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣದ ಅಪರಾಧಿಗಳು ಹೈದರಾಬಾದ್‌: ಹೈದರಾಬಾದ್‌ನಲ್ಲಿ 2013ರಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಂಡಿಯನ್‌ ಮುಜಾಹಿದಿನ್‌ ಉಗ್ರ ಯಾಸಿನ್ ಭಟ್ಕಳ್ ಸೇರಿ ಐವರು ಅಪರಾಧಿಗಳಿಗೆ ನೀಡಿದ್ದ ಮರಣದಂಡನೆಯನ್ನು ತೆಲಂಗಾಣ ಹೈಕೋರ್ಟ್ ಎತ್ತಿಹಿಡಿದಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್‌ನ ಈ ಐವರು ಭಯೋತ್ಪಾದಕರು 2013ರಲ್ಲಿ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದರು. ಈ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿ, 131 ಜನರು ಗಾಯಗೊಂಡಿದ್ದರು. ನ್ಯಾಯಮೂರ್ತಿಗಳಾದ ಲಕ್ಷ್ಮಣ್ ಮತ್ತು ಪಿ. ಶ್ರೀಸುಧಾ

ಯಾಸಿನ್‌ ಭಟ್ಕಳ್‌ ಸಹಿತ ಐವರು ಉಗ್ರರ ಗಲ್ಲುಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್‌ Read More »

ಮುಂಬಯಿ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್‌ ರಾಣಾ ಭಾರತಕ್ಕೆ ಗಡಿಪಾರು

ಬಿಗುಭದ್ರತೆಯಲ್ಲಿ ಕರೆತರುತ್ತಿರುವ ಅಧಿಕಾರಿಗಳು, ತಡರಾತ್ರಿ ಬಂದಿಳಿಯುವ ಸಾಧ್ಯತೆ ನವದೆಹಲಿ : ವಾಣಿಜ್ಯ ನಗರಿ ಮುಂಬಯಿ ಮೇಲೆ 2008ರಲ್ಲಾದ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್‌ ರಾಣಾ ಕೊನೆಗೂ ಅಮೆರಿಕದಿಂದ ಗಡಿಪಾರು ಆಗಿದ್ದು, ಇಂದು ಅಧಿಕಾರಿಗಳು ಅವನನ್ನು ಭಾರತಕ್ಕೆ ಕರೆತರುತ್ತಿದ್ದಾರೆ. ತನಿಖಾಧಿಕಾರಿಗಳ ಜೊತೆ ವಿಶೇಷ ಭದ್ರತಾ ತಂಡವೊಂದು ತಹಾವುರ್‌ ರಾಣಾನನ್ನು ಭಾರತಕ್ಕೆ ಕರೆತರುತ್ತಿದೆ. ತಡರಾತ್ರಿ ಅಥವಾ ನಾಳೆ ನಸುಕಿನ ಹೊತ್ತು ಅವರ ವಿಮಾನ ಭಾರತದಲ್ಲಿ ಬಂದಿಳಿಯಲಿದೆ. ತಹಾವುರ್‌ ರಾಣಾನನ್ನು ಯಾವ ಜೈಲಿನಲ್ಲಿಡಲಾಗುತ್ತದೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಆದರೆ ದಿಲ್ಲಿಯ

ಮುಂಬಯಿ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್‌ ರಾಣಾ ಭಾರತಕ್ಕೆ ಗಡಿಪಾರು Read More »

error: Content is protected !!
Scroll to Top