ದೇಶ

ಉಗ್ರರ ದಾಳಿಗೆ ಬಲಿಯಾದ ಪ್ರವಾಸಿಗರ ನೆನಪಿಗಾಗಿ ಪಹಲ್ಗಾಮ್‌ನಲ್ಲಿ ಸ್ಮಾರಕ ನಿರ್ಮಾಣ

ಬೈಸರನ್‌ ಕಣಿವೆಯಲ್ಲಿ ಶಾಶ್ವತ ಸ್ಮಾರಕ ನಿರ್ಮಿಸಿ ಮುಗ್ಧರಿಗೆ ಗೌರವ ಎಂದು ಸಿಎಂ ಘೋಷಣೆ ಶ್ರೀನಗರ: ಬೈಸರನ್ ಕಣಿವೆಯಲ್ಲಿ ನಡೆದ ದಾಳಿಯಲ್ಲಿ ಮೃತರಾದ 26 ಪ್ರವಾಸಿಗರ ನೆನಪಿಗಾಗಿ ಪಹಲ್ಗಾಮ್‌ನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಘೋಷಿಸಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಾತನಾಡಿದ ಅವರು, ಏ.22ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಹಿಂದೂಗಳ ನರಮೇಧದಲ್ಲಿ 26 ನಾಗರಿಕರು ಬಲಿಯಾಗಿದ್ದರು. ಈ 26 ಜನರಿಗೆ ಶಾಶ್ವತ ಗೌರವ ಸಲ್ಲಿಸುವ ಸ್ಮರಣಾರ್ಥ ಸ್ಮಾರಕವನ್ನು ಸ್ಥಾಪಿಸುವುದಾಗಿ […]

ಉಗ್ರರ ದಾಳಿಗೆ ಬಲಿಯಾದ ಪ್ರವಾಸಿಗರ ನೆನಪಿಗಾಗಿ ಪಹಲ್ಗಾಮ್‌ನಲ್ಲಿ ಸ್ಮಾರಕ ನಿರ್ಮಾಣ Read More »

ಐಪಿಎಲ್‌ : ಮುಗಿದ ಲೀಗ್‌ ಹಂತ; ಮೇ 29ರಿಂದ ಪ್ಲೇ ಆಫ್‌ ಪಂದ್ಯಗಳು

ಆರ್‌ಸಿಬಿ, ಪಂಜಾಬ್‌, ಗುಜರಾತ್‌, ಮುಂಬೈ ತಂಡಗಳ ನಡುವೆ ಹಣಾಹಣಿ ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್​ನ ಲೀಗ್ ಹಂತದ ಪಂದ್ಯಗಳು ನಿನ್ನೆಗೆ ಮುಗಿದಿದ್ದು, ಪ್ಲೇಆಫ್ ಪಂದ್ಯಗಳು ಮೇ 29ರಿಂದ ಶುರುವಾಗಲಿವೆ. ಈ ಸುತ್ತಿನಲ್ಲಿ ಒಟ್ಟು ನಾಲ್ಕು ಪಂದ್ಯಗಳು ನಡೆಯಲಿವೆ. ಅಂದರೆ ಮೊದಲ ಮೂರು ಮ್ಯಾಚ್​ಗಳು ಫೈನಲ್​ಗಾಗಿ ನಡೆಯಲಿರುವ ಅರ್ಹತಾ ಪಂದ್ಯಗಳು. ಇದಾದ ಬಳಿಕ ಜೂನ್ 3 ರಂದು ಫೈನಲ್ ಮ್ಯಾಚ್ ನಡೆಯಲಿದೆ. 10 ತಂಡಗಳಲ್ಲಿ ಅತ್ಯಧಿಕ ಗೆಲುವು ದಾಖಲಿಸಿದ ನಾಲ್ಕು ತಂಡಗಳು ಮುಂದಿನ ಹಂತಕ್ಕೇರಿವೆ. ಅದರಂತೆ ದ್ವಿತೀಯ ಸುತ್ತಿನಲ್ಲಿ

ಐಪಿಎಲ್‌ : ಮುಗಿದ ಲೀಗ್‌ ಹಂತ; ಮೇ 29ರಿಂದ ಪ್ಲೇ ಆಫ್‌ ಪಂದ್ಯಗಳು Read More »

ಕಮಲಹಾಸನ್‌ರ ಥಗ್‌ಲೈಫ್‌ ಸಿನಿಮಾಕ್ಕೆ ಕನ್ನಡಿಗರ ಪ್ರತಿಭಟನೆಯ ಬಿಸಿ

ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು ಎಂದು ಹೇಳಿ ಕನ್ನಡಿಗರನ್ನು ಕೆರಳಿಸಿರುವ ನಟ ಬೆಂಗಳೂರು: ಕಮಲಹಾಸನ್ ಅವರ ತಮಿಳಿನಿಂದಲೇ ಕನ್ನಡ ಹುಟ್ಟಿದೆ ಎಂಬ ಹೇಳಿಕೆ ಕನ್ನಡಿಗರ ಸ್ವಾಭಿಮಾನವನ್ನು ಕೆರಳಿಸಿದೆ. ನಿನ್ನೆಯಿಂದೀಚೆಗೆ ಮಾಧ್ಯಮಗಳಲ್ಲಿ ಮತ್ತು ಸೋಷಿಯಲ್‌ ಮೀಡಿಯಾಗಳಲ್ಲಿ ಕಮಲ ಹಾಸನ್‌ ಹೇಳಿಕೆ ವಿರುದ್ಧ ಭಾರಿ ಚರ್ಚೆ ನಡೆಯುತ್ತಿದೆ. ನಟನ ಮುಂಬರುವ ಥಗ್‌ಲೈಫ್‌ ಚಿತ್ರದ ಬಿಡುಗಡೆಯನ್ನು ತಡೆಯಬೇಕೆಂದು ಅನೇಕ ಕನ್ನಡ ಪರ ಹೋರಾಟಗಾರರು ಕರೆ ಕೊಟ್ಟಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಖ್ಯಾತ ಗಾಯಕ ಸೋನು ನಿಗಮ್ ಕನ್ನಡಿಗರನ್ನು ಕೆರಳಿಸುವ ಕೆಲಸ ಮಾಡಿದ್ದರು.

ಕಮಲಹಾಸನ್‌ರ ಥಗ್‌ಲೈಫ್‌ ಸಿನಿಮಾಕ್ಕೆ ಕನ್ನಡಿಗರ ಪ್ರತಿಭಟನೆಯ ಬಿಸಿ Read More »

ನಕಲ್‌ ಕರ್ನೆ ಲಿಯೆ ಅಕಲ್‌ ಚಾಹಿಯೆ : ವಿದೇಶಿ ನೆಲದಲ್ಲಿ ಪಾಕಿಸ್ತಾನವನ್ನು ಲೇವಡಿ ಮಾಡಿದ ಓವೈಸಿ

ನಕಲಿ ಫೋಟೊ ಉಡುಗೊರೆ ಕೊಟ್ಟು ಜಗತ್ತಿನೆದುರು ಅಪಹಾಸ್ಯಕ್ಕೀಡಾದ ಪಾಕ್‌ ನವದೆಹಲಿ : ಪಾಕಿಸ್ತಾನದ ಪ್ರಧಾನಮಂತ್ರಿ ಶಹಬಾಜ್‌ ಷರೀಫ್‌ಗೆ ಅಲ್ಲಿನ ಸೇನಾ ಮುಖ್ಯಸ್ಥ ಅಸೀಮ್‌ ಮುನೀರ್‌ ನೀಡಿದ ಫೋಟೊ ಇಡೀ ಜಗತ್ತಿನಲ್ಲಿ ನಗೆಪಾಟಲಾಗಿದೆ. ಚೀನದ 2019ರ ಮಿಲಿಟರಿ ಡ್ರಿಲ್‌ನ ಫೋಟೊವನ್ನು ಆಪರೇಷನ್‌ ಸಿಂಧೂರ ಸಂದರ್ಭದಲ್ಲಿ ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಸಿಕ್ಕಿದ ಗೆಲುವು ಎಂದು ಹೇಳಿಕೊಂಡು ಸನ್ಮಾನ ಸಮಾರಂಭದಲ್ಲಿ ಮುನೀರ್‌ ಈ ಫೋಟೊವನ್ನು ಪ್ರಧಾನಿಗೆ ಉಡುಗೊರೆ ನೀಡಿದ್ದರು. ಕ್ಷಣಾರ್ಧದಲ್ಲಿ ಈ ಫೋಟೊದ ಅಸಲಿ ಮೂಲ ಪತ್ತೆಯಾಗಿದ್ದು, ಪಾಕಿಸ್ತಾನದ ಸೇನೆ ಇನ್ನಿಲ್ಲದಂತೆ

ನಕಲ್‌ ಕರ್ನೆ ಲಿಯೆ ಅಕಲ್‌ ಚಾಹಿಯೆ : ವಿದೇಶಿ ನೆಲದಲ್ಲಿ ಪಾಕಿಸ್ತಾನವನ್ನು ಲೇವಡಿ ಮಾಡಿದ ಓವೈಸಿ Read More »

ಸಾಲದ ಹೊರೆಯಿಂದ ನೊಂದು ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ

ಕಾರಿನೊಳಗೆ ಕುಳಿತು ವಿಷ ಸೇವಿಸಿದ ಇಡೀ ಕುಟುಂಬ ಹರ್ಯಾಣ: ಸಾಲ ಹೊರೆಯಿಂದ ನೊಂದು ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹರ್ಯಾಣದ ಪಂಚಕುಲದಲ್ಲಿ ನಡೆದಿದೆ. ಡೆಹ್ರಾಡೂನ್​ನ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಜೀವ ಬಿಟ್ಟಿದ್ದಾರೆ. ಸೆಕ್ಟರ್ 27ರಲ್ಲಿ ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನೊಳಗೆ ಶವಗಳು ಇರುವುದು ಪತ್ತೆಯಾಗಿದೆ. ಕುಟುಂಬವು ಭಾರಿ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದರಿಂದ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಹೇಳಲಾಗಿದೆ. ಡೆಹ್ರಾಡೂನ್‌ನ ನಿವಾಸಿ ಪ್ರವೀಣ್ ಮಿತ್ತಲ್ ಪಂಚಕುಲದ ಬಾಗೇಶ್ವರ

ಸಾಲದ ಹೊರೆಯಿಂದ ನೊಂದು ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ Read More »

ಗುಜರಾತಿಗೆ ಮೋದಿ 82 ಸಾವಿರ ಕೋಟಿ ರೂ. ಮೊತ್ತದ ಯೋಜನೆಗಳ ಕೊಡುಗೆ

ಎರಡು ದಿನದಲ್ಲಿ ಹಲವು ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ತನ್ನ ತವರು ರಾಜ್ಯವಾದ ಗುಜರಾತಿನಲ್ಲಿ ಎರಡು ದಿನಗಳಲ್ಲಿ ಬರೋಬ್ಬರಿ 82,000 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಇಂದಿನಿಂದ ಮೋದಿ ಎರಡು ದಿನಗಳ ಗುಜರಾತ್‌ ಪ್ರವಾಸ ಕೈಗೊಳ್ಳಲಿದ್ದು, ಈ ಸಂದರ್ಭದಲ್ಲಿ ಹಲವು ಬೃಹತ್‌ ಯೋಜನೆಗಳ ಲೋಕಾರ್ಪಣೆ, ಶಂಕುಸ್ಥಾಪನೆ ಮುಂತಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆಪರೇಷನ್‌ ಸಿಂಧೂರ್‌ ಬಳಿಕ ಮೊದಲು ಬಾರಿ ಮೋದಿ ತವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ದಾಹೋಡ್‌ನಲ್ಲಿ ರೈಲು ಇಂಜಿನ್‌ ಉತ್ಪಾದನೆ

ಗುಜರಾತಿಗೆ ಮೋದಿ 82 ಸಾವಿರ ಕೋಟಿ ರೂ. ಮೊತ್ತದ ಯೋಜನೆಗಳ ಕೊಡುಗೆ Read More »

ಮೂರು ವರ್ಷದ ಬಳಿಕ ಮರಳಿದ ಕೊರೊನ : ಕೇರಳದಲ್ಲಿ ಗರಿಷ್ಠ ಪ್ರಕರಣ

ಮತ್ತೆ ಟೆಸ್ಟಿಂಗ್, ಮಾಸ್ಕ್, ಐಸೋಲೇಷನ್ ನಿಯಮಗಳು ಶುರು ನವದೆಹಲಿ: ಕೊರೊನ ಸೋಂಕು ಮೂರು ವರ್ಷಗಳ ಮತ್ತೆ ದೇಶಕ್ಕೆ ಕಾಲಿಟ್ಟಿದೆ. 2022ರಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಒಮಿಕ್ರಾನ್ ತಳಿಯ ಜೆಎನ್1 ಪ್ರಭೇದ ಮತ್ತೆ ಹಾವಳಿ ಶುರು ಮಾಡಿದೆ. ಜೆಎನ್1 ಉಪ ತಳಿಗಳಾದ ಎನ್‌ಬಿ.1.8.1 ಮತ್ತು ಎಲ್‌ಎಫ್.7 ತಳಿಗಳ ಕಾಟ ಶುರುವಾಗಿದೆ. ಸಿಂಗಾಪುರ, ಹಾಂಕಾಂಗ್, ಥೈಲ್ಯಾಂಡ್‌ ಸೇರಿ ದಕ್ಷಿಣ ಏಷ್ಯಾದಲ್ಲಿ ಕಾಣಿಸಿಕೊಂಡಿರುವ ವೈರಾಣು ಭಾರತಕ್ಕೂ ಕಾಲಿಟ್ಟಿದ್ದು, ಹಲವು ರಾಜ್ಯಗಳಲ್ಲಿ ಪ್ರಕರಣಗಳ ಸಂಖ್ಯೆ ನಿಧಾನಗತಿಯಲ್ಲಿ ಏರುತ್ತಿದೆ. ಕರ್ನಾಟಕದಲ್ಲಿ ಒಟ್ಟು 35 ಕೋವಿಡ್ ಸಕ್ರಿಯ

ಮೂರು ವರ್ಷದ ಬಳಿಕ ಮರಳಿದ ಕೊರೊನ : ಕೇರಳದಲ್ಲಿ ಗರಿಷ್ಠ ಪ್ರಕರಣ Read More »

ಅಮಿತ್‌ ಷಾ ನಿಂದನೆ : ರಾಹುಲ್‌ ಗಾಂಧಿಗೆ ಜಾಮೀನು ರಹಿತ ವಾರಂಟ್‌ ಜಾರಿ

ಹೊಸದಿಲ್ಲಿ: ಕಾಂಗ್ರೆಸ್ ಸಂಸದ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತೆ ಕಾನುನಿನ ಉರುಳಿನಲ್ಲಿ ಸಿಲುಕಿದ್ದಾರೆ. ಕೆಂದ್ರ ಗೃಹ ಸಚಿವ ಅಮಿತ್‌ ಷಾ ಅವರನ್ನು ನಿಂದಿಸಿದ ಪ್ರಕರಣದಲ್ಲಿ ಸಂಕಷ್ಟಕ್ಕೆ ಗುರಿಯಾಗಿದ್ದು, ಜಾರ್ಖಂಡ್‌ನ ಚೈಬಸ ಸಂಸದ-ಶಾಸಕರ ನ್ಯಾಯಾಲಯ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ. ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವುದರಿಂದ ರಾಹುಲ್ ಗಾಂಧಿಗೆ ವಿನಾಯಿತಿ ನೀಡಬೇಕು ಎಂಬ ಅವರ ಪರ ವಕೀಲರ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಜೂನ್ 16ರಂದು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಬೇಕು ಎಂದು ರಾಹುಲ್ ಗಾಂಧಿ ಅವರಿಗೆ

ಅಮಿತ್‌ ಷಾ ನಿಂದನೆ : ರಾಹುಲ್‌ ಗಾಂಧಿಗೆ ಜಾಮೀನು ರಹಿತ ವಾರಂಟ್‌ ಜಾರಿ Read More »

24 ತಾಸಿನೊಳಗೆ ಕೇರಳ ಪ್ರವೇಶಿಸಲಿದೆ ಮುಂಗಾರು

16 ವರ್ಷಗಳ ಬಳಿಕ ಬೇಗನೇ ಶುರುವಾಗುತ್ತಿದೆ ಮಳೆಗಾಲ ಮಂಗಳೂರು : ಕರಾವಳಿಯಾದ್ಯಂತ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿರುವಂತೆಯೇ ಅಧಿಕೃತವಾಗಿ ಮುಂಗಾರು ಆಗಮನಕ್ಕೂ ವೇದಿಕೆ ಸಿದ್ಧವಾಗಿದೆ. ಹವಾಮಾನ ಇಲಾಖೆ ನೀಡಿದ ಹೊಸ ಮುನ್ಸೂಚನೆಯಂತೆ ಇನ್ನು 24 ತಾಸಿನೊಳಗೆ ಮುಂಗಾರು ಕೇರಳ ಪ್ರವೇಶಿಸಲಿದೆ. ಕಳೆದ 16 ವರ್ಷಗಳ ಬಳಿಕ ಮುಂಗಾರು ಇಷ್ಟು ಬೇಗ ಬರುತ್ತಿರುವುದು ಇದೇ ಮೊದಲು. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಒತ್ತಡ ಕುಸಿತ ಪರಿಸ್ಥಿತಿಯಿಂದಾಗಿ ಕಳೆದ 5-6 ದಿನಗಳಿಂದ ಕೇರಳ, ಕರ್ನಾಟಕ ಸೇರಿದಂತೆ ಪಶ್ಚಿಮ ಕರಾವಳಿಯಾದ್ಯಂತ ಮುಂಗಾರು ಪೂರ್ವ

24 ತಾಸಿನೊಳಗೆ ಕೇರಳ ಪ್ರವೇಶಿಸಲಿದೆ ಮುಂಗಾರು Read More »

ನೀರು ಕೊಡದಿದ್ದರೆ ಉಸಿರು ನಿಲ್ಲಿಸುತ್ತೇವೆ : ಪಾಕ್‌ ಮಿಲಿಟರಿ ವಕ್ತಾರನ ಗೊಡ್ಡು ಬೆದರಿಕೆ

ಸಿಂಧು ನದಿ ನೀರಿಗಾಗಿ ಪರಿತಪಿಸುತ್ತಿರುವ ಪಾಕಿಸ್ಥಾನ ಇಸ್ಲಾಮಾಬಾದ್:‌ ಕದನ ವಿರಾಮಕ್ಕೆ ಅಂಗಲಾಚಿದ್ದ ಪಾಕಿಸ್ತಾನ ಪರಿಸ್ಥಿತಿ ತುಸು ಸಹಜ ಸ್ಥಿತಿ ಬರುತ್ತಿರುವಂತೆಯೇ ತನ್ನ ಕಂತ್ರಿ ಬುದ್ಧಿ ತೋರಿಸಲಾರಂಭಿಸಿದೆ. ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಭಯೋತ್ಪಾದಕ ಹಫೀಜ್ ಸಯೀದ್‌ನಂತೆ ಭಾರತಕ್ಕೆ ಬೆದರಿಕೆ ಹಾಕಿದ್ದಾನೆ. ಸಿಂಧೂ ಜಲ ಒಪ್ಪಂದವನ್ನು ಭಾರತ ರದ್ದುಗೊಳಿಸಿದ್ದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ ಭಾರತ ನೀರು ನೀಡದಿದ್ದರೆ ನಾವು ಅವರ ಉಸಿರು ನಿಲ್ಲಿಸುತ್ತೇವೆ ಎಂಬ ಗೊಡ್ಡು ಬೆದರಿಕೆ ಹಾಕಿದ್ದಾನೆ. ಪಾಕಿಸ್ತಾನದ ವಿಶ್ವವಿದ್ಯಾಲಯವೊಂದರಲ್ಲಿ

ನೀರು ಕೊಡದಿದ್ದರೆ ಉಸಿರು ನಿಲ್ಲಿಸುತ್ತೇವೆ : ಪಾಕ್‌ ಮಿಲಿಟರಿ ವಕ್ತಾರನ ಗೊಡ್ಡು ಬೆದರಿಕೆ Read More »

error: Content is protected !!
Scroll to Top