ದೇಶ

ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ‘ಕೈ’ ಗೆ ರಾಜೀನಾಮೆ

ಆಯೋಧ್ಯೆ: ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ನಾನು ರಾಮಮಂದಿರಕ್ಕೆ ಭೇಟಿ ನೀಡಿದ ಬಳಿಕ ಪಕ್ಷದಲ್ಲೇ ಟೀಕೆ ಮಾಡಲಾಗುತ್ತಿದೆ. ಜತೆಗೆ ಪಕ್ಷದಲ್ಲಿ ಪುರುಷರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಹೆಣ್ಣುಮಕ್ಕಳಿಗೆ ಗೌರವ ನೀಡುತ್ತಿಲ್ಲ ಎಂದು ಆರೋಪಿಸಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂಬುದಾಗಿ ರಾಧಿಕಾ ಖೇರ ತಿಳಿಸಿದ್ದಾರೆ. ಪ್ರತಿಯೊಬ್ಬ ಹಿಂದೂವಿಗೂ ರಾಮಮಂದಿರವು ಪವಿತ್ರ ಹಾಗೂ ಶ್ರದ್ಧಾ ಕೇಂದ್ರವಾಗಿದೆ. ಹಾಗಾಗಿ ನಾನು ರಾಮಮಂದಿರಕ್ಕೆ ಭೇಟಿ ನೀಡಿದೆ. ನಾನು ಕಾಂಗ್ರೆಸ್‌ಗೆ 22 […]

ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ‘ಕೈ’ ಗೆ ರಾಜೀನಾಮೆ Read More »

ವಾಯುಪಡೆ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕ ದಾಳಿ : ಓರ್ವ ಹುತಾತ್ಮ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಐವರು IAF ಅಧಿಕಾರಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ಸೈನಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಧಂಪುರದ ಕಮಾಂಡ್ ಆಸ್ಪತ್ರೆಗೆ ಹೆಲಿಕಾಪ್ಟ‌ರ್ ಮೂಲಕ ರವಾನೆ ಮಾಡಲಾಗಿದೆ. ಉಗ್ರರು ಸುಮಾರು 30 ಸುತ್ತು ಗುಂಡು ಹಾರಿಸಿದ್ದಾರೆ. ದಾಳಿ ನಡೆಸಿದ ಬಳಿಕ ಉಗ್ರರು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಶಾಸಿತಾರ್ ಬಳಿಯ

ವಾಯುಪಡೆ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕ ದಾಳಿ : ಓರ್ವ ಹುತಾತ್ಮ Read More »

ನಾಮಪತ್ರ ಸಲ್ಲಿಕೆ ಬೆನ್ನಲ್ಲೇ ರಾಹುಲ್ ವಿರುದ್ಧ ಪ್ರತಿಭಟನೆ

ಉತ್ತರಪ್ರದೇಶ : ರಾಯಬರೇಲಿ ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ ಬೆನ್ನಲ್ಲೇ ರಾಹುಲ್‌ ವಿರುದ್ಧ ಪ್ರತಿಭಟನೆ ಕೂಡ ನಡೆದಿದೆ. ಶುಕ್ರವಾರ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ಹಾಗೂ ಪಕ್ಷದ ಮುಖಂಡರ ಜೊತೆ ತೆರಳಿ ರಾಯಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಮೇಥಿ ಬಿಟ್ಟು ರಾಯಬರೇಲಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ಮೋದಿ, ಅಮಿತ್‌ ಶಾ ಸೇರಿ ಅನೇಕ ಬಿಜೆಪಿ ನಾಯಕರು ಟೀಕಿಸಿದ್ದು, ಅಮೇಥಿಯಿಂದ ಓಡಿದ ರಾಹುಲ್‌ ಈಗ ರಾಯಬರೇಲಿ ತಲುಪಿದ್ದಾರೆ ಎಂದು ಅಣಕಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಬೆನ್ನಲ್ಲೇ ರಾಹುಲ್ ವಿರುದ್ಧ ಪ್ರತಿಭಟನೆ Read More »

ಕೋವಿಶೀಲ್ಡ್ ಪಡೆದ ಬಳಿಕ ಇಬ್ಬರು ಹೆಣ್ಣು ಮಕ್ಕಳು ಮೃತ್ಯು | ಕಾನೂನು ಸಮರಕ್ಕೆ ಸಜ್ಜಾದ ಮಕ್ಕಳ ಹೆತ್ತವರು

ಕೊರೊನಾ ಸಮಯದಲ್ಲಿ ಭಾರೀ ಸುದ್ದಿಯಲ್ಲಿದ್ದ ಔಷಧಿಗಳ ತಯಾರಿಕಾ ಸಂಸ್ಥೆ Oxford-AstraZeneca, ಆಘಾತಕಾರಿ ಮಾಹಿತಿ ಒಂದನ್ನು ಕೊನೆಗೂ ಕೋರ್ಟ್ ಮುಂದೆ ಒಪ್ಪಿಕೊಂಡಿರುವ ಬೆನ್ನಲ್ಲೇ ಭಾರತದಲ್ಲಿ ಹೆಣ್ಣು ಮಕ್ಕಳನ್ನು ಕಳೆದುಕೊಂಡ ಪೋಷಕರು ಕಾನೂನು ಸಮರಕ್ಕೆ ಸಜ್ಜಾಗಿದ್ದಾರೆ. ಔಷಧಿ ತಯಾರಿಕಾ ಕಂಪೆನಿಯು ತಾನು ಅಭವೃದ್ಧಿಪಡಿಸಿ ಕೋಟ್ಯಾಂತರ ಜನರಿಗೆ ನೀಡಿರುವ ಕೊರೊನಾ ಲಸಿಕೆಯು ಗಂಭೀರ ಅಡ್ಡಪರಿಣಾಮ ಉಂಟುಮಾಡಬಹುದು ಎಂದು ಲಂಡನ್ ಕೋರ್ಟ್‌ನಲ್ಲಿ ಹೇಳಿದೆ. ಇದೀಗ ಭಾರತದ ಇಬ್ಬರು ಹೆಣ್ಮಕ್ಕಳ ಪೋಷಕರು ಕೋವಿಶೀಲ್ಡ್ ಲಸಿಕೆಯನ್ನು ಒದಗಿಸಿದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ವಿರುದ್ಧ

ಕೋವಿಶೀಲ್ಡ್ ಪಡೆದ ಬಳಿಕ ಇಬ್ಬರು ಹೆಣ್ಣು ಮಕ್ಕಳು ಮೃತ್ಯು | ಕಾನೂನು ಸಮರಕ್ಕೆ ಸಜ್ಜಾದ ಮಕ್ಕಳ ಹೆತ್ತವರು Read More »

ಭೋಜ್ ಪುರಿ ನಟಿ ಅಮೃತಾ ಪಾಂಡೆ ನೇಣಿಗೆ ಶರಣು !

ಬಿಹಾರ್ :  ಬಿಹಾರದ ಭಾಗಲ್‌ಪುರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಭೋಜ್‌ಪುರಿ ನಟಿ ಅಮೃತಾ ಪಾಂಡೆ ಶವವಾಗಿ ಪತ್ತೆಯಾಗಿದ್ದಾರೆ. ಅಮೃತಾ ತನ್ನ ಸೀರೆಯಿಂದ ತಮ್ಮ ನಿವಾಸದ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಮೃತಾ ಪಾಂಡೆ ಅವರು ತನ್ನ ಪತಿಯೊಂದಿಗೆ ನೆಲೆಸಿದ್ದರು. ಕೆಲ ದಿನಗಳ ಹಿಂದೆ ಸಂಬಂಧಿಕರ ಮದುವೆಯ ಹಿನ್ನೆಲೆಯಲ್ಲಿ ಬಿಹಾರದ ಭಾಗಲ್‌ಪುರಕ್ಕೆ ಭೇಟಿ ನೀಡಿದ್ದರು. ಆದರೆ ಭಾಗಲ್‌ಪುರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸಾವನ್ನಪ್ಪಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಆದರೆ, ಆತ್ಮಹತ್ಯೆ ಮಾಡಿಕೊಳ್ಳುವುದಕ್ಕಿಂತ ಕೆಲವೇ ಗಂಟೆ ಮುಂಚೆ ಅಮೃತಾ ಪಾಂಡೆ ವಾಟ್ಸ್‌

ಭೋಜ್ ಪುರಿ ನಟಿ ಅಮೃತಾ ಪಾಂಡೆ ನೇಣಿಗೆ ಶರಣು ! Read More »

ವಾಟ್ಸ್ಆ್ಯಪ್ ಬಳಕೆದಾರರಿಗೆ ಚಾಟ್ ಎನ್‍ ಕ್ರಿಪ್ಟ್ ಭೇದಿಸಲು ಹೊರಟ ಭಾರತ ಸರಕಾರ | ಭಾರತದಿಂದ ನಿರ್ಗಮಿಸುವುದಾಗಿ ದೆಹಲಿ ಹೈಕೋರ್ಟ್‍ ಗೆ ತಿಳಿಸಿದ ವಾಟ್ಸಪ್

ಮೆಟಾ ಒಡೆತನದ ವಾಟ್ಸ್ಆ್ಯಪ್ ತನ್ನ ಬಳಕೆದಾರರಿಗೆ ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಸೇವೆಯನ್ನ ಒದಗಿಸುತ್ತಿದೆ. ಮುಂದಿನ ದಿನಗಳಲ್ಲಿ ಚಾಟ್ ಎನ್‌ಕ್ರಿಪ್ಟ್ ಅನ್ನು ಭೇದಿಸಲು ಹೊರಟಿದೆ. ಇದು ಬಳಕೆದಾರರಿಗೆ ಅಸುರಕ್ಷಿತವಾಗಿದೆ. ಈ ಹಿನ್ನಲೆಯಲ್ಲಿ  ಭಾರತದಿಂದ ನಿರ್ಗಮಿಸುವುದಾಗಿ ದೆಹಲಿ ಹೈಕೋರ್ಟ್‌ಗೆ ವಾಟ್ಸ್ ಆ್ಯಪ್ ತಿಳಿಸಿದೆ. ಭಾರತ ಸರ್ಕಾರ ವಾಟ್ಸ್ಆ್ಯಪ್ ಗೌಪ್ಯತೆಯ ದೃಷ್ಟಿಯ ವಿಚಾರವಾಗಿ ಹೋರಾಡುತ್ತಿದೆ. ಅದರಲ್ಲೂ ಚಾಟ್, ಕರೆ, ವೀಡಿಯೋ ಕರೆಗಳನ್ನು ಸುರಕ್ಷಿತವಾಗಿರಿಸಲು ವಾಟ್ಸ್ಆ್ಯಪ್ ಹೋರಾಡುತ್ತಲೇ ಬಂದಿದೆ. ಆದರೆ ಸರಕಾರ ಸಂದೇಶದ ಮೂಲವನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ದೆಹಲಿ ಕೋರ್ಟ್ ಮೊರೆ ಹೋಗಿದೆ. ಮೆಟಾ-ಮಾಲೀಕತ್ವದ

ವಾಟ್ಸ್ಆ್ಯಪ್ ಬಳಕೆದಾರರಿಗೆ ಚಾಟ್ ಎನ್‍ ಕ್ರಿಪ್ಟ್ ಭೇದಿಸಲು ಹೊರಟ ಭಾರತ ಸರಕಾರ | ಭಾರತದಿಂದ ನಿರ್ಗಮಿಸುವುದಾಗಿ ದೆಹಲಿ ಹೈಕೋರ್ಟ್‍ ಗೆ ತಿಳಿಸಿದ ವಾಟ್ಸಪ್ Read More »

ಲೋಕಸಭಾ ಚುನಾವಣೆ : ಸೂರತ್ ನಲ್ಲಿ ಅವಿರೋಧ ಆಯ್ಕೆ ಮೂಲಕ ಖಾತೆ ತೆರೆದ ಬಿಜೆಪಿ

ನವದೆಹಲಿ: ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗುವ ಮೂಲಕ 2024 ರ ಲೋಕಸಭೆಯಲ್ಲಿ ಬಿಜೆಪಿ ಮೊದಲ ಖಾತೆಯನ್ನು ತೆರೆದಿದೆ. ಈ ಹಿಂದೆ ಕಾಂಗ್ರೆಸ್ ಅಭ್ಯರ್ಥಿ ನಿಲೇಶ್ ಕುಂಬಾನಿ ಅವರ ನಾಮಪತ್ರಕ್ಕೆ ಸಹಿ ಹಾಕಿಲ್ಲ ಎಂದು ಅವರ ಪ್ರಸ್ತಾಪಕರು ಹೇಳಿದ ನಂತರ ಚುನಾವಣಾ ಆಯೋಗ ಅವರ ನಾಮಪತ್ರವನ್ನು ತಿರಸ್ಕರಿಸಿತ್ತು. ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಿಲೇಶ್ ಕುಂಭಾನಿ ಅವರ ನಾಮಪತ್ರವೂ ತಿರಸ್ಕೃತಗೊಂಡಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುರೇಶ್ ಪಡ್ವಾಲ ಅವರಿಗೂ

ಲೋಕಸಭಾ ಚುನಾವಣೆ : ಸೂರತ್ ನಲ್ಲಿ ಅವಿರೋಧ ಆಯ್ಕೆ ಮೂಲಕ ಖಾತೆ ತೆರೆದ ಬಿಜೆಪಿ Read More »

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಮಹೇಶ್ ಪುಚ್ಚಪ್ಪಾಡಿ,  ಕಾರ್ಯದರ್ಶಿಯಾಗಿ ವೆಂಕಟಗಿರೀಶ್ ಸಿ.ಜಿ

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ನೂತನ ಅಧ್ಯಕ್ಷರಾಗಿ ಗುತ್ತಿಗಾರು ಕಮಿಲದ ಮಹೇಶ್ ಪುಚ್ಚಪ್ಪಾಡಿ ಹಾಗೂ ಕಾರ್ಯದರ್ಶಿಯಾಗಿ ಕೋಡಪದವು ಕೆಲಿಂಜದ ವೆಂಕಟಗಿರೀಶ್ ಸಿ.ಜಿ. ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಶಂ. ನಾ. ಖಂಡಿಗೆ ಪೆರ್ಲ, ಎಂ.ಡಿ. ವಿಜಯಕುಮಾರ್ ಮಡಪ್ಪಾಡಿ ಹಾಗೂ ಜತೆ ಕಾರ್ಯದರ್ಶಿಯಾಗಿ ಸಾಯಿಶೇಖರ್ ಕರಿಕಳ ಪಂಜ ಆಯ್ಕೆಯಾದರು. ಸಂಘದ ನಿಕಟಪೂರ್ವ ಅಧ್ಯಕ್ಷ ಅಶೋಕ್ ಕಿನಿಲ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಮಹೇಶ್ ಪುಚ್ಚಪ್ಪಾಡಿ,  ಕಾರ್ಯದರ್ಶಿಯಾಗಿ ವೆಂಕಟಗಿರೀಶ್ ಸಿ.ಜಿ Read More »

ಸಂಭ್ರಮದ ಶ್ರೀ ರಾಮ ನವಮಿ | ಅಯೋಧ್ಯೆ ಶ್ರೀ ರಾಮಲಲ್ಲಾನಿಗೆ ಸೂರ್ಯ ಕಿರಣದ ತಿಲಕ

ಅಯೋಧ್ಯೆ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದಲ್ಲಿ ಶ್ರೀರಾಮನವಮಿ ಸಂಭ್ರಮ ಮುಗಿಲು ಮುಟ್ಟಿದೆ. ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಬಳಿಕ ಮೊದಲ ರಾಮನವಮಿಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಶ್ರೀರಾಮ ನವಮಿಯಂದು ಬಾಲರಾಮನಿಗೆ ಸೂರ್ಯ ರಶ್ಮಿ ಸ್ಪರ್ಶವಾಗಿದೆ.  ಸೂರ್ಯವಂಶದ ರಘುರಾಮನಿಗೆ ಸೂರ್ಯ ಭಗವನನಿಂದ ಅಭಿಷೇಕ ಮಾಡಲಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ರಾಮಲಲ್ಲಾನಿಗೆ ಸೂರ್ಯ ರಶ್ಮಿ ಸ್ಪರ್ಶ ಮಾಡಿದ್ದು, ಸುಮಾರು 70 ಮಿ.ಮೀ ಉದ್ದದ ತಿಲಕ ಹಣೆ ಮೇಲೆ ಮೂಡಿದೆ.

ಸಂಭ್ರಮದ ಶ್ರೀ ರಾಮ ನವಮಿ | ಅಯೋಧ್ಯೆ ಶ್ರೀ ರಾಮಲಲ್ಲಾನಿಗೆ ಸೂರ್ಯ ಕಿರಣದ ತಿಲಕ Read More »

ರಾಮಾಯಣ ಪುಸ್ತಕ ಅರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ್‌

ಅಯೋಧ್ಯೆ: ಅಯೋಧ್ಯೆಯ ಪ್ರಭು ಶ್ರೀರಾಮನಿಗೆ ಸುಮಾರು 151 ಕೆಜಿ ತೂಕದ ರಾಮಚರಿತ ಮಾನಸ ಪ್ರತಿಯನ್ನು 5 ಕೋಟಿ ಮೊತ್ತದಲ್ಲಿ ತಯಾರಿಸಿದ್ದು, ಇದಕ್ಕೆ ಏಳು ಕೆಜಿ ಚಿನ್ನದ ಲೇಪನ ಮಾಡಲಾಗಿದೆ. ಬಾಲ ರಾಮನಿಗೆ 24 ಕ್ಯಾರೆಟ್ ಚಿನ್ನದ ರಾಮಾಯಣವನ್ನು ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ್‌ ಅವರು ಸಮರ್ಪಿಸಿದ್ದಾರೆ.24 ಕ್ಯಾರೆಟ್ ಚಿನ್ನದ ಲೇಪನದಿಂದ ಕೂಡಿರುವ ರಾಮಚರಿತ ಮಾನಸ 10,902 ಕಾವ್ಯಗಳನ್ನು ಒಳಗೊಂಡಿದೆ. ಈ ಚಿನ್ನದ ಕೃತಿಯಲ್ಲಿ ಸುಮಾರು 480 ರಿಂದ 500 ಪುಟಗಳು ಇವೆ ಎಂದು ಮೂಲಗಳು ತಿಳಿಸಿವೆ.

ರಾಮಾಯಣ ಪುಸ್ತಕ ಅರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ್‌ Read More »

error: Content is protected !!
Scroll to Top