ದೇಶ

ರಾಜ್ಯಾದ್ಯಂತ ಗ್ಯಾಸ್‌ ಸಿಲಿಂಡರ್‌ಗೆ ಹಾಹಾಕಾರ : ಮೆನು ಕಡಿತ ಮಾಡಿದ ಹೋಟೆಲ್‌ಗಳು

ಸಾವಿರಾರು ಮಾಲೀಕರು, ಲಕ್ಷಾಂತರ ಕಾರ್ಮಿಕರಿಗೆ ಸಂಕಷ್ಟ ಸ್ಥಿತಿ ಮಂಗಳೂರು : ಮಧ್ಯಪ್ರಾಚ್ಯದ ಯುದ್ಧದಿಂದಾಗಿ ರಾಜ್ಯದಲ್ಲಿ ಎದುರಾಗಿರುವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಕೊರತೆ ಹೋಟೆಲ್ ಮಾಲೀಕರನ್ನು ಸಂಕಷ್ಟಕ್ಕೆ ದೂಡಿದೆ. ಕರಾವಳಿಯೂ ಸೇರಿದಂತೆ ರಾಜ್ಯಾದ್ಯಂತ ಕಮರ್ಷಿಯಲ್‌ ಸಿಲಿಂಡರ್‌ ಸಿಗದೆ ಹೋಟೆಲ್‌, ಬೇಕರಿ, ಕ್ಯಾಂಟೀನ್‌ ಮಾಲೀಕರು ಒದ್ದಾಡುತ್ತಿದ್ದಾರೆ. ಈಗಾಗಲೇ ಕೆಲವು ಹೋಟೆಲ್‌ಗಳು ಅನಿವಾರ್ಯವಾಗಿ ಮುಚ್ಚಿವೆ. ಸಿಲಿಂಡರ್ ಸಿಗದೆ ಅಡುಗೆ ಮಾಡುವುದು ಅಸಾಧ್ಯವಾಗಿದ್ದು, ಇನ್ನೂ ಹಲವು ಹೋಟೆಲ್‌ಗಳು ಮುಚ್ಚುವ ಹಂತಕ್ಕೆ ತಲುಪಿವೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಬಹುತೇಕ ಹೋಟೆಲ್‌ಗಳನ್ನು ಮುಚ್ಚಬೇಕಾಗಬಹುದು ಎಂದು ಹೋಟೆಲ್‌ […]

ರಾಜ್ಯಾದ್ಯಂತ ಗ್ಯಾಸ್‌ ಸಿಲಿಂಡರ್‌ಗೆ ಹಾಹಾಕಾರ : ಮೆನು ಕಡಿತ ಮಾಡಿದ ಹೋಟೆಲ್‌ಗಳು Read More »

ದೇಶಾದ್ಯಂತ ಗ್ಯಾಸ್‌ ಕೋಲಾಹಲ : ಸಿಲಿಂಡರ್‌ ಬುಕ್ಕಿಂಗ್‌ ಅವಧಿ 25 ದಿನಕ್ಕೆ ಹೆಚ್ಚಳ

ಯುದ್ಧದಿಂದಾಗಿ ಗ್ಯಾಸ್‌ ಸಿಗುವುದಿಲ್ಲ ಎಂಬ ಆತಂಕದಿಂದ ಸಿಲಿಂಡರ್‌ ಸಂಗ್ರಹಿಸಲು ಮುಂದಾದ ಜನ ನವದೆಹಲಿ : ಇಸ್ರೇಲ್‌, ಅಮೆರಿಕ ಹಾಗೂ ಇರಾನ್‌ ನಡುವಿನ ಯುದ್ಧದಿಂದ ದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್‌ ಬೆಲೆ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‌ ಮತ್ತು ಗೃಹ ಬಳಕೆಯ ಎಲ್‌ಪಿಜಿ ಸರಬರಾಜಿನ ಮೇಲೆ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಅಭಾವ ತಲೆದೋರಿದೆ. ಬೆಂಗಳೂರು, ತಮಿಳುನಾಡು ಸೇರಿದಂತೆ ವಿವಿಧ ನಗರಗಳಲ್ಲಿ ಗ್ಯಾಸ್‌ ಅಭಾವದಿಂದ ಹೋಟೆಲ್‌ಗಳನ್ನು ಬಂದ್‌ ಮಾಡುವ

ದೇಶಾದ್ಯಂತ ಗ್ಯಾಸ್‌ ಕೋಲಾಹಲ : ಸಿಲಿಂಡರ್‌ ಬುಕ್ಕಿಂಗ್‌ ಅವಧಿ 25 ದಿನಕ್ಕೆ ಹೆಚ್ಚಳ Read More »

ಕುಣಿದು ಕುಪ್ಪಳಿಸಿದ ಟೀಂ ಇಂಡಿಯಾ ಸದಸ್ಯರು: ಸಂಭ್ರಮಾಚರಣೆಯ ಫೋಟೊ ಆಲ್ಬಂ

ಅಹಮದಾಬಾದ್‌: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿ ಟ್ರೋಫಿ ತನ್ನದಾಗಿಸಿಕೊಂಡಿತು. ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡ ಮೊದಲು ಬ್ಯಾಟಿಂಗ್ ಮಾಡಿ 255 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿತು. ಆ ಬಳಿಕ ಗುರಿ ಹಿಂಬಾಲಿಸಿದ ಮಿಚೆಲ್ ಸ್ಯಾಂಟ್ನರ್ ನೇತೃತ್ವದ ನ್ಯೂಜಿಲೆಂಡ್‌ ತಂಡವನ್ನು ಕೇವಲ 159 ರನ್‌ಗಳಿಗೆ ಆಲೌಟ್ ಮಾಡಿತು. ಇಡೀ ದೇಶ ಟೀಂ ಇಂಡಿಯಾದ ಈ ಗೆಲುವನ್ನು ಸಂಭ್ರಮಿಸುತ್ತಿದೆ. ಎಲ್ಲೆಡೆ

ಕುಣಿದು ಕುಪ್ಪಳಿಸಿದ ಟೀಂ ಇಂಡಿಯಾ ಸದಸ್ಯರು: ಸಂಭ್ರಮಾಚರಣೆಯ ಫೋಟೊ ಆಲ್ಬಂ Read More »

ಸಹೋದರಿಯ ಸಾವಿನ ದುಃಖದ ನಡುವೆ ಆಡಿ ಭಾರತವನ್ನು ಗೆಲ್ಲಿಸಿದ ಇಶಾನ್‌ ಕಿಶನ್‌

ಅಕ್ಕ, ಬಾವ ಅಪಘಾತಕ್ಕೆ ಬಲಿಯಾಗಿದ್ದರೂ ನೋವು ನುಂಗಿ ಅಮೋಘವಾಗಿ ಆಡಿದ ಇಶಾನ್‌ ಕಿಶನ್‌ ಅಹ್ಮದಾಬಾದ್‌: ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವಿರುದ್ಧ ಟೀಮ್ ಇಂಡಿಯಾ 96 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಆದರೆ ಈ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಆಟಗಾರ ಇಶಾನ್‌ ಕಿಶನ್‌ ಸಹೋದರಿಯ ಸಾವಿನ ದುಃಖದಲ್ಲೇ ಆಡಿದ್ದರು ಎಂಬ ವಿಚಾರ ಈಗ

ಸಹೋದರಿಯ ಸಾವಿನ ದುಃಖದ ನಡುವೆ ಆಡಿ ಭಾರತವನ್ನು ಗೆಲ್ಲಿಸಿದ ಇಶಾನ್‌ ಕಿಶನ್‌ Read More »

ಟಿ20 ಚಾಂಪಿಯನ್‌ ಭಾರತ ತಂಡಕ್ಕೆ ಮೋದಿ ಅಭಿನಂದನೆ

ಸೂರ್ಯಕುಮಾರ್‌ ಪಡೆಗೆ ಬರೋಬ್ಬರಿ 27 ಕೋ. ರೂ. ಬಹುಮಾನ ಮೊತ್ತ ನವದೆಹಲಿ: ಟಿ20 ವಿಶ್ವಕಪ್ ಗೆದ್ದುಕೊಂಡಿರುವ ಟೀಂ ಇಂಡಿಯಾಕ್ಕೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಂದ್ಯ ಮುಗಿದ ಬೆನ್ನಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಮೋದಿ, ಈ ಗೆಲುವು ಅಸಾಧಾರಣ ಕೌಶಲ, ದೃಢ ನಿಶ್ಚಯ ಮತ್ತು ಟೀಂ ವರ್ಕ್ ಅನ್ನು ಪ್ರತಿಬಿಂಬಿಸುತ್ತದೆ. ಈ ಗೆಲುವಿನಿಂದ ಪ್ರತಿಯೊಬ್ಬ ಭಾರತೀಯನ ಹೃದಯ ಹೆಮ್ಮೆ ಮತ್ತು ಸಂತೋಷದಿಂದ ತುಂಬಿದೆ ಎಂದು ಶ್ಲಾಘಿಸಿದ್ದಾರೆ. ಆರಂಭದಲ್ಲಿ ಬ್ಯಾಟರ್‌ಗಳ ವಿಸ್ಫೋಟಕ ಬ್ಯಾಟಿಂಗ್ ನಂತರ ಬೌಲರ್‌ಗಳ ಬೆಂಕಿ ಬೌಲಿಂಗ್‌ನಿಂದ

ಟಿ20 ಚಾಂಪಿಯನ್‌ ಭಾರತ ತಂಡಕ್ಕೆ ಮೋದಿ ಅಭಿನಂದನೆ Read More »

ಟೀಮ್‌ ಇಂಡಿಯಾ ಟಿ20 ಕ್ರಿಕೆಟ್‌ ಸಾರ್ವಭೌಮ

ಸತತ ಎರಡನೇ ಬಾರಿ ಚಾಂಪಿಯನ್‌ ಪಟ್ಟ ಅಲಂಕರಿಸಿದ ಭಾರತ 96 ರನ್‌ಗಳ ಅಮೋಘ ಗೆಲುವಿನೊಂದಿಗೆ ಹಲವು ವಿಶ್ವ ದಾಖಲೆ ಬರೆದ ಸೂರ್ಯ ಪಡೆ ಅಹಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೇಂಡ್‌ ವಿರುದ್ಧ ಅಮೋಘ 96 ರನ್‌ಗಳ ಗೆಲುವು ದಾಖಲಿಸುವ ಮೂಲಕ ಭಾರತ ಹಲವು ವಿಶ್ವದಾಖಲೆಗಳನ್ನು ಬರೆದಿದೆ. ಸೂರ್ಯಕುಮಾರ್‌ ಯಾದವ್‌ ನೇತೃತ್ವದ ತಂಡ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್‌ ಗೆದ್ದ ತಂಡ ಎಂಬ ಅಪೂರ್ವ ದಾಖಲೆ ಭಾರತದ ಪಾಲಾಗಿದೆ.

ಟೀಮ್‌ ಇಂಡಿಯಾ ಟಿ20 ಕ್ರಿಕೆಟ್‌ ಸಾರ್ವಭೌಮ Read More »

ಟಿ20 ವಿಶ್ವಕಪ್‌ : ಭಾರತ-ನ್ಯೂಜಿಲೆಂಡ್‌ ಫೈನಲ್‌ ಕಾದಾಟಕ್ಕೆ ಶುರುವಾಗಿದೆ ಕ್ಷಣಗಣನೆ

ಯಾರೇ ಗೆದ್ದರೂ ಕ್ರಿಕೆಟ್‌ ಜಗತ್ತಿನಲ್ಲಿ ಹೊಸ ಇತಿಹಾಸ ರಚನೆ ಅಹದಾಬಾದ್‌: ಟಿ20 ವಿಶ್ವಕಪ್‌ನ ಫೈನಲ್‌ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಈ ಅಂತಿಮ ಪಂದ್ಯ ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ತಂಡ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಲು ಕಾತರವಾಗಿದ್ದರೆ, ನ್ಯೂಜಿಲೆಂಡ್ ಚೊಚ್ಚಲ ಟ್ರೋಫಿಗಾಗಿ ಎದುರು ನೋಡುತ್ತಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲವಾದ್ದರಿಂದ ಈ ಪಂದ್ಯ

ಟಿ20 ವಿಶ್ವಕಪ್‌ : ಭಾರತ-ನ್ಯೂಜಿಲೆಂಡ್‌ ಫೈನಲ್‌ ಕಾದಾಟಕ್ಕೆ ಶುರುವಾಗಿದೆ ಕ್ಷಣಗಣನೆ Read More »

ಕೊಚ್ಚಿಯಲ್ಲಿ ಲಂಗರು ಹಾಕಿದ ಇರಾನ್‌ನ ಸಮರ ನೌಕೆ

ಕೊಚ್ಚಿ ಬಂದರಿನಲ್ಲಿ ಕೆಲವು ದಿನಗಳಿಂದ ನಿಂತಿರುವ ಯುದ್ಧನೌಕೆ ನವದೆಹಲಿ: ಇರಾನಿನ ಯುದ್ಧ ನೌಕೆಯನ್ನು ಅಮೆರಿಕ ಮುಳುಗಿಸಿದ ಬೆನ್ನಲ್ಲೇ ಭಾರತ ಇರಾನಿನ ಇನ್ನೊಂದು ಹಡಗನ್ನು ಕೊಚ್ಚಿಯಲ್ಲಿ ತುರ್ತಾಗಿ ನಿಲ್ಲಿಸಲು ಅನುಮತಿ ನೀಡಿದ ವಿಚಾರ ಬೆಳಕಿಗೆ ಬಂದಿದೆ. ಇರಾನ್ ಯುದ್ಧನೌಕೆ IRIS ದೇನಾವನ್ನು ಅಮೆರಿಕದ ಜಲಾಂತರ್ಗಾಮಿ ನೌಕೆ ಮುಳುಗಿಸುವ ಕೆಲವು ದಿನಗಳ ಮೊದಲು IRIS Lavan ಭಾರತದಲ್ಲಿ ನಿಲ್ಲಿಸಲು ಅನುಮತಿ ಕೇಳಿತು. ಇರಾನಿನ ವಿನಂತಿಯನ್ನು ಸ್ವೀಕರಿಸಿದ ಭಾರತ ಕೊಚ್ಚಿಯಲ್ಲಿ ನಿಲ್ಲಿಸಲು ಅನುಮತಿ ನೀಡಿದೆ. ಹಡಗಿನಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡು ಬಂದಿದ್ದರಿಂದ

ಕೊಚ್ಚಿಯಲ್ಲಿ ಲಂಗರು ಹಾಕಿದ ಇರಾನ್‌ನ ಸಮರ ನೌಕೆ Read More »

ಗೃಹ ಬಳಕೆ ಸಿಲಿಂಡರ್‌ ಬೆಲೆ ದಿಢೀರ್‌ 60 ರೂ. ಏರಿಕೆ

ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ ಮತ್ತೆ 115 ರೂ. ಹೆಚ್ಚಳ ನವದೆಹಲಿ: ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟು ಉಳಿದ ದೇಶಗಳ ಮೇಲೆ ನೇರ ಪರಿಣಾಮ ಬೀರಲಾರಂಭಿಸಿದೆ. BHಳ ಸಮಯದ ಬಳಿಕ ಭಾರತದಲ್ಲಿ ಗೃಹಬಳಕೆಯ ಸಿಲಿಂಡರ್‌ ಬೆಲೆ ಹೆಚ್ಚಿಸಲಾಗಿದೆ. ಇದರ ಜೊತೆಗೆ ವಾಣಿಜ್ಯ ಬಳಕೆ ಸಿಲಿಂಡರ್‌ ಬೆಲೆಯೂ ಹೆಚ್ಚಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ. ಹೆಚ್ಚಿಸಲಾಗಿದ್ದು, ಇದರೊಂದಿಗೆ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 853 ರೂ.ನಿಂದ 913ಕ್ಕೆ ಏರಿಕೆಯಾಗಿದೆ. ಅದೇ ರೀತಿ

ಗೃಹ ಬಳಕೆ ಸಿಲಿಂಡರ್‌ ಬೆಲೆ ದಿಢೀರ್‌ 60 ರೂ. ಏರಿಕೆ Read More »

ರಾಜ್ಯಪಾಲರು, ಲೆಫ್ಟಿನೆಂಟ್‌ ಗವರ್ನರ್‌ಗಳ ಬದಲಾವಣೆ

ರಾಷ್ಟ್ರಪತಿ ಭವನದಿಂದ ನೂತನ ನೇಮಕಾತಿ ಆದೇಶ ನವದೆಹಲಿ : ರಾಷ್ಟ್ರಪತಿ ಭವನ ಶುಕ್ರವಾರದಂದು ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರ ಹಾಗೂ ಲೆಫ್ಟಿನೆಂಟ್ ಗವರ್ನರ್‌ಗಳ ಪುನರ್‌ವ್ಯವಸ್ಥೆಯನ್ನು ಘೋಷಿಸಿದೆ. ದೆಹಲಿ, ಲಡಾಖ್, ತೆಲಂಗಾಣ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಹಿಮಾಚಲ ಪ್ರದೇಶ ಹಾಗೂ ನಾಗಾಲ್ಯಾಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಬದಲಾವಣೆಗಳನ್ನು ಮಾಡಲಾಗಿದೆ. ರಾಷ್ಟ್ರಪತಿ ಕಚೇರಿ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಹಲವು ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳನ್ನು ವರ್ಗಾವಣೆ ಮಾಡಲಾಗಿದ್ದು, ಕೆಲವರನ್ನು ಹೊಸ

ರಾಜ್ಯಪಾಲರು, ಲೆಫ್ಟಿನೆಂಟ್‌ ಗವರ್ನರ್‌ಗಳ ಬದಲಾವಣೆ Read More »

error: Content is protected !!
Scroll to Top