ದೇಶ

ವಯನಾಡಿನಲ್ಲಿ ಪ್ರಿಯಾಂಕ ವಾಡ್ರಾ V/S ನವ್ಯಾ ಹರಿದಾಸ್‌

ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ತಿರುವನಂತಪುರ: ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌-ಮುಸ್ಲಿಂ ಲೀಗ್‌ ಅಭ್ಯರ್ಥಿ ಪ್ರಿಯಾಂಕ ಗಾಂಧಿ ವಾಡ್ರಾ ವಿರುದ್ಧ ಬಿಜೆಪಿ ತನ್ನ ಫಯರ್‌ ಬ್ರಾಂಡ್‌ ನಾಯಕಿ ನವ್ಯಾ ಹರಿದಾಸ್‌ ಅವರನ್ನು ಕಣಕ್ಕಿಳಿಸಿದೆ.ರಾಯ್​ಬರೇಲಿ ಮತ್ತು ವಯನಾಡು ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ ವಯನಾಡಿನ ಬದಲು ರಾಯ್​ಬರೇಲಿಯನ್ನು ಆಯ್ಕೆ ಮಾಡಿಕೊಂಡಿದ್ದರು. ಈ ಕಾರಣದಿಂದ ತೆರವಾಗಿದ್ದ ಕೇರಳದ ವಯನಾಡು ಕ್ಷೇತ್ರದ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆಗೆ ಭಾರತೀಯ […]

ವಯನಾಡಿನಲ್ಲಿ ಪ್ರಿಯಾಂಕ ವಾಡ್ರಾ V/S ನವ್ಯಾ ಹರಿದಾಸ್‌ Read More »

ಪ್ರಹ್ಲಾದ ಜೋಶಿ ಸಹೋದರ-ಸಹೋದರಿ ವಿರುದ್ಧ 2 ಕೋಟಿ ರೂ. ವಂಚನೆ ದೂರು

ನನಗೆ ಸಹೋದರಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ ಜೋಶಿ ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮೀ ಜೋಶಿ ಸೇರಿ ಮೂವರ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮಿ ಜೋಶಿ ಹಾಗೂ ಗೋಪಾಲ್ ಜೋಶಿ ಮಗ ಅಜಯ್ ಜೋಶಿ ಭರವಸೆ ನೀಡಿ ಎರಡು ಕೋಟಿ ರೂಪಾಯಿ

ಪ್ರಹ್ಲಾದ ಜೋಶಿ ಸಹೋದರ-ಸಹೋದರಿ ವಿರುದ್ಧ 2 ಕೋಟಿ ರೂ. ವಂಚನೆ ದೂರು Read More »

ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿನ್ನದಾಗಲಿದೆ – ಸಲ್ಮಾನ್‌ಗೆ ಮತ್ತೆ ಧಮಕಿ

ಮುಂಬಯಿ ಪೊಲೀಸರ ವಾಟ್ಸಪ್‌ಗೆ ಸಂದೇಶ ಹಾಕಿ ಬೆದರಿಕೆ ಮುಂಬಯಿ: 5 ಕೋಟಿ ರೂ. ಕೊಡು, ಇಲ್ಲದಿದ್ದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿನಗೆ ಬರಲಿದೆ ಎಂದು ನಟ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಬಂದಿದೆ. ಮುಂಬಯಿ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದ್ದು, ಇದರಿಂದ ನಟ ಮತ್ತಷ್ಟು ಬೆದರುವಂತಾಗಿದೆ.ಈ ಸಂದೇಶವನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು 5 ಕೋಟಿ ರೂ.

ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿನ್ನದಾಗಲಿದೆ – ಸಲ್ಮಾನ್‌ಗೆ ಮತ್ತೆ ಧಮಕಿ Read More »

ರೈಲು ಟಿಕೆಟ್‌ ಮುಂಗಡ ಬುಕ್ಕಿಂಗ್‌ ಅವಧಿ 60 ದಿನಕ್ಕೆ ಇಳಿಕೆ

ನವೆಂಬರ್‌ 1ರಿಂದಲೇ ಹೊಸ ನಿಯಮ ಜಾರಿ ಹೊಸದಿಲ್ಲಿ : ರೈಲ್ವೆ ಇಲಾಖೆ ಟಿಕೆಟ್‌ ಮುಂಗಡ ಕಾದಿರಿಸುವ ಅವಧಿಯನ್ನು 4 ತಿಂಗಳಿಂದ 2 ತಿಂಗಳಿಗೆ ಇಳಿಸಿದೆ. ಅಂದರೆ ಇನ್ನು ಮುಂದೆ 4 ತಿಂಗಳು ಮುಂಚಿತವಾಗಿಯೇ ಟ್ರೈನ್‌ ಟಿಕೆಟ್‌ ಬುಕ್‌ ಮಾಡಿಡಲು ಸಾಧ್ಯವಿಲ್ಲ. ಈ ಬದಲಾವಣೆ ನ.1ರಿಂದಲೇ ಜಾರಿಯಾಗಲಿದೆ. ಆದರೆ ಅಕ್ಟೋಬರ್ 31ರ ಮೊದಲು 120 ದಿನಗಳ ಬುಕ್ಕಿಂಗ್‌ ಮಾನ್ಯವಾಗಿರುತ್ತದೆ ಎಂದು ರೈಲ್ವೇ ಸ್ಪಷ್ಟಪಡಿಸಿದೆ. ಪರಿಷ್ಕೃತ ಬದಲಾವಣೆಗಳು ವಿಭಿನ್ನ ಮುಂಗಡ ಕಾಯ್ದಿರಿಸುವಿಕೆಯ ಮಿತಿಗಳನ್ನು ಹೊಂದಿರುವ ತಾಜ್ ಎಕ್ಸ್‌ಪ್ರೆಸ್ ಮತ್ತು ಗೋಮತಿ

ರೈಲು ಟಿಕೆಟ್‌ ಮುಂಗಡ ಬುಕ್ಕಿಂಗ್‌ ಅವಧಿ 60 ದಿನಕ್ಕೆ ಇಳಿಕೆ Read More »

ಸಲ್ಮಾನ್‌ ಖಾನ್‌ ಹತ್ಯೆಗೆ ಪಾಕಿಸ್ಥಾನದಿಂದ ಎಕೆ 47 ಬಂದೂಕು ಖರೀದಿ

25 ಲ.ರೂ. ಸುಪಾರಿ ನೀಡಿ ಕೊಲೆಗೆ ಪ್ಲಾನ್‌ ಮುಂಬಯಿ: ಬಾಲಿವುಡ್‌ ನಟ ಸಲ್ಮಾನ್ ಖಾನ್ ಅವರನ್ನು ಮಹಾರಾಷ್ಟ್ರದ ಪನ್ವೇಲ್‌ನಲ್ಲಿರುವ ಅವರ ಫಾರ್ಮ್‌ಹೌಸ್ ಬಳಿ ಹತ್ಯೆ ಮಾಡಲು 25 ಲಕ್ಷ ರೂ. ಸುಪಾರಿ ಪಡೆಯಲಾಗಿತ್ತು ಎಂಬ ಶಾಕಿಂಗ್‌ ವಿಚಾರ ಮುಂಬೈ ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಸಲ್ಮಾನ್‌ ಖಾನ್‌ ಹತ್ಯೆ ಯತ್ನ ಪ್ರಕರಣದ ಐವರು ಆರೋಪಿಗಳ ವಿರುದ್ಧ ಮಹಾರಾಷ್ಟ್ರದ ನವಿಮುಂಬಯಿ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಇದರಲ್ಲಿ ಸಲ್ಮಾನ್‌ ಹತ್ಯೆಗೆ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸುಪಾರಿ ಪಡೆದುಕೊಂಡಿದೆ

ಸಲ್ಮಾನ್‌ ಖಾನ್‌ ಹತ್ಯೆಗೆ ಪಾಕಿಸ್ಥಾನದಿಂದ ಎಕೆ 47 ಬಂದೂಕು ಖರೀದಿ Read More »

ನ್ಯಾಯದೇವತೆ ಇನ್ನು ಕಣ್ತೆರೆದು ನೋಡುತ್ತಾಳೆ!

ಕೋರ್ಟ್‌ಗಳಲ್ಲಿ ನ್ಯಾಯದೇವತೆಯ ಕಣ್ಣಿನ ಪಟ್ಟಿ ಬಿಚ್ಚಿದ ಮೂರ್ತಿ ಸ್ಥಾಪನೆಗೆ ಸೂಚನೆ ಹೊಸದಿಲ್ಲಿ: ಯಾರೂ ಇನ್ನು ಮುಂದೆ ನ್ಯಾಯ ಕುರುಡು ಎಂದು ಹೇಳುವಂತಿಲ್ಲ. ಯಾಕೆಂದರೆ ಕೋರ್ಟ್‌ಗಳಲ್ಲಿ ಇನ್ನು ನ್ಯಾಯದೇವತೆ ಎಲ್ಲರನ್ನೂ ಕಣ್ತೆರೆದು ನೋಡುತ್ತಾಳೆ. ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಿದ ನ್ಯಾಯದೇವತೆ ಪ್ರತಿಮೆಯನ್ನು ಬದಲಾಯಿಸಲಾಗಿದೆ. ನ್ಯಾಯಾಲಯಕ್ಕೆ ಬರುವ ಯಾರೇ ಆಗಿರಲಿ ಯಾವುದೇ ಬೇಧವಿಲ್ಲದೆ ನೋಡುವ ಸಂಕೇತವಾಗಿ ನ್ಯಾಯದೇವತೆ ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಲಾಗಿರುತ್ತದೆ. ಆದರೆ ಇನ್ನು ಮುಂದೆ ನ್ಯಾಯದೇವತೆ ಕಣ್ಣಿಗೆ ಕಪ್ಪು ಪಟ್ಟಿ ಕಟ್ಟುವಂತಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್‌

ನ್ಯಾಯದೇವತೆ ಇನ್ನು ಕಣ್ತೆರೆದು ನೋಡುತ್ತಾಳೆ! Read More »

ಆನ್‌ಲೈನ್‌ ನೋಂದಣಿ ಇಲ್ಲದಿದ್ದರೂ ಸಿಗಲಿದೆ ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನ

ಜನಾಕ್ರೋಶಕ್ಕೆ ಮಣಿದು ನಿಯಮ ಸಡಿಲಿಸಿದ ಕೇರಳ ಸರಕಾರ ತಿರುವನಂತಪುರ: ಈ ಸಲ ಶಬರಿಮಲೆಯಲ್ಲಿ ಆನ್‌ಲೈನ್‌ ನೋಂದಣಿ ಮಾಡಿಸಿಕೊಂಡವರಿಗೆ ಮಾತ್ರ ದೇವರ ದರ್ಶನ ಅವಕಾಶ ಎಂಬ ನಿಯಮಕ್ಕೆ ವ್ಯಕ್ತವಾದ ಭಾರಿ ಆಕ್ರೋಶಕ್ಕೆ ಮಣಿದಿರುವ ಕೇರಳ ಸರಕಾರ ಈಗ ಆನ್‌ಲೈನ್‌ ನೋಂದಣಿ ಇಲ್ಲದೇ ಇದ್ದರೂ ಸ್ಪಾಟ್‌ ನೋಂದಣಿ ಮೂಲಕ ದರ್ಶನ ಪಡೆಯಲು ಅವಕಾಶ ಕಲ್ಪಿಸಿದೆ. ಇದರಿಂದ ದರ್ಶನ ತಪ್ಪಿಸಿಕೊಳ್ಳುವ ಆತಂಕದಲ್ಲಿದ್ದ ಭಕ್ತರು ನಿರಾಳವಾಗಿದ್ದಾರೆ.ನೋಂದಣಿ ಇಲ್ಲದೇ ಏಕಾಏಕಿ ಬರುವ ಭಕ್ತರನ್ನು ನಿಯಂತ್ರಿಸಿ ನೂಕುನುಗ್ಗಲು ಆಗುವುದನ್ನು ತಪ್ಪಿಸುವ ಉದ್ದೇಶದಿಂದ ಕೇರಳ ಸರ್ಕಾರ ಶಬರಿಮಲೆ

ಆನ್‌ಲೈನ್‌ ನೋಂದಣಿ ಇಲ್ಲದಿದ್ದರೂ ಸಿಗಲಿದೆ ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನ Read More »

ಇಸ್ರೇಲ್‌ ಪೇಜರ್‌ ಸ್ಫೋಟಿಸಿದಂತೆ ಮೋದಿ ಇವಿಎಂ ಹ್ಯಾಕ್‌ ಮಾಡಬಹುದು : ಕಾಂಗ್ರೆಸ್‌

ಬಿಜೆಪಿ ಇವಿಎಂ ಜೊತೆ ಆಟವಾಡುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್‌ ನಾಯಕ ಹೊಸದಿಲ್ಲಿ: ಇಸ್ರೇಲ್‌ ಉಗ್ರರ ಪೇಜರ್‌ ಸ್ಫೋಟಿಸಿದಂತೆ ನರೇಂದ್ರ ಮೋದಿ ಇವಿಎಂ ಹ್ಯಾಕ್‌ ಮಾಡಬಹುದು ಎಂದು ಕಾಂಗ್ರೆಸ್‌ ಅನುಮಾನ ವ್ಯಕ್ತಪಡಿಸಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ಇಸ್ರೇಲ್ ಪೇಜರ್‌ ಮತ್ತು ವಾಕಿಟಾಕಿ ಬಳಸಿ ಜನರನ್ನು ಕೊಲ್ಲಲು ಸಾಧ್ಯವಾದರೆ ಇವಿಎಂ ಅನ್ನು ಏನು ಬೇಕಾದರೂ ಮಾಡಬಹುದು. ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ ಎಂದು ಹೇಳಿದ್ದಾರೆ.ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳು ಪೇಪರ್ ಬ್ಯಾಲೆಟ್

ಇಸ್ರೇಲ್‌ ಪೇಜರ್‌ ಸ್ಫೋಟಿಸಿದಂತೆ ಮೋದಿ ಇವಿಎಂ ಹ್ಯಾಕ್‌ ಮಾಡಬಹುದು : ಕಾಂಗ್ರೆಸ್‌ Read More »

ಸಲ್ಮಾನ್‌ ಖಾನ್‌ಗೆ ಪ್ರಾಣ ಭೀತಿ : ಭದ್ರತೆ Y+ಗೇರಿಕೆ

ಬಾಬಾ ಸಿದ್ದಿಕಿ ಹತ್ಯೆ ನಂತರ ನಟನಿಗೆ ದಿನದ 24 ತಾಸು ಸಶಸ್ತ್ರ ಪೊಲೀಸರ ಸರ್ಪಗಾವಲು ಮುಂಬಯಿ: ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಆಪ್ತರಾಗಿದ್ದ ಮಾಜಿ ಸಚಿವ ಬಾಬಾ ಸಿದ್ದಿಕಿಯನ್ನು ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ ಹತ್ಯೆ ಮಾಡಿದ ಬಳಿಕ ನಟ ಪ್ರಾಣ ಭೀತಿ ಎದುರಿಸುತ್ತಿದ್ದು, ಅವರ ಭದ್ರತೆಯನ್ನು Y+ ಕ್ಯಾಟಗರಿಗೆ ಏರಿಸಲಾಗಿದೆ.ಪೊಲೀಸ್ ಬೆಂಗಾವಲು ವಾಹನ ಈಗ ದಿನದ 24 ತಾಸು ಸಲ್ಮಾನ್ ಖಾನ್ ಅವರ ವಾಹನದ ಜೊತೆಗೆ ಇರಲಿದೆ. ಎಲ್ಲ ಶಸ್ತ್ರಾಸ್ತ್ರಗಳನ್ನು ಬಳಸಲು ತರಬೇತಿ ಪಡೆದ ಪೊಲೀಸ್‌ ಸಿಬ್ಬಂದಿ

ಸಲ್ಮಾನ್‌ ಖಾನ್‌ಗೆ ಪ್ರಾಣ ಭೀತಿ : ಭದ್ರತೆ Y+ಗೇರಿಕೆ Read More »

ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆಗೆ ಇಂದು ಮುಹೂರ್ತ ನಿಗದಿ

ಬಿಜೆಪಿ, ಕಾಂಗ್ರೆಸ್‌ ಪಾಲಿಗೆ ಮಾಡು ಇಲ್ಲವೆ ಮಡಿ ಹೋರಾಟದ ಕಣ ಹೊಸದಿಲ್ಲಿ: ಹರ್ಯಾಣ ಮತ್ತು ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಮುಗಿದ ಬೆನ್ನಿಗೆ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆ ಎದುರಾಗಿದ್ದು, ಇದರ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಇಂದು ಮಧ್ಯಾಹ್ನ 3.30ಕ್ಕೆ ಪ್ರಕಟಿಸಲಿದೆ.288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದ್ದು, 81 ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಯು 2025ರ ಜನವರಿ 5ರಂದು ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ.ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನಾ ಮತ್ತು ಎನ್‌ಸಿಪಿ ಆಡಳಿತಾರೂಢ

ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆಗೆ ಇಂದು ಮುಹೂರ್ತ ನಿಗದಿ Read More »

error: Content is protected !!
Scroll to Top