ದೇಶ

ಮೋದಿ ನಂತರ ದೇಶದ ಜನ ಪ್ರಧಾನಿಯಾಗಿ ನೋಡ ಬಯಸುವುದು ಯಾರನ್ನು ಗೊತ್ತೇ?

ಸಮೀಕ್ಷೆಯಲ್ಲಿ ಬಂದಿದೆ ಅಚ್ಚರಿಯ ಫಲಿತಾಂಶ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಮುಂಬರುವ ಸೆ.17ರಂದು 75ರ ಹರೆಯಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಉನ್ನತ ಹುದ್ದೆಯಲ್ಲಿರುವವರು 75 ವರ್ಷವಾದ ಬಳಿಕ ಸಕ್ರಿಯ ರಾಜಕಾರಣದಿಂದ ನಿರ್ಗಮಿಸಿ ಮಾರ್ಗದರ್ಶಕ ಮಂಡಲ ಸೇರುವುದು ಬಿಜೆಪಿಯಲ್ಲಿರುವ ಅಲಿಖಿತ ನಿಯಮ. ಈ ಹಿನ್ನೆಲೆಯಲ್ಲಿ ಮೋದಿಯವರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಕುತೂಹಲ ಇಡೀ ದೇಶದಲ್ಲಿ ಇದೆ. ಆದರೆ ಸದ್ಯದ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸುವಾಗ ಮೋದಿ ಪ್ರಧಾನಿ ಹುದ್ದೆ ಬಿಡುವ ಸಾಧ್ಯತೆ ಗೋಚರಿಸುತ್ತಿಲ್ಲ. ಮೂರನೇ ಅವಧಿಯಲ್ಲಿ ತುಸು ಹಿನ್ನಡೆ […]

ಮೋದಿ ನಂತರ ದೇಶದ ಜನ ಪ್ರಧಾನಿಯಾಗಿ ನೋಡ ಬಯಸುವುದು ಯಾರನ್ನು ಗೊತ್ತೇ? Read More »

ಗೌರಿ ಲಂಕೇಶ್ ಹತ್ಯೆ ಪ್ರಕರಣ | ಆರೋಪಿ ಮೋಹನ್ ನಾಯಕ್‍ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿಂದ ನಿರಾಕರಣೆ

ಹೊಸದಿಲ್ಲಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕೊಲೆ ಆರೋಪಿ ಮೋಹನ್ ನಾಯಕ್‌ ಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ಮೋಹನ್ ನಾಯಕ್‌ಗೆ ಜಾಮೀನು ನೀಡಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಸಲ್ಲಿಸಲಾದ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ. ಕರ್ನಾಟಕ ಹೈಕೋರ್ಟ್ 2023 ರ ಡಿಸೆಂಬರ್‌ನಲ್ಲಿ ನಾಯಕ್‌ಗೆ ಜಾಮೀನು ನೀಡಿತ್ತು. 2017ರಲ್ಲಿ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಡಿಸೆಂಬರ್ 7,

ಗೌರಿ ಲಂಕೇಶ್ ಹತ್ಯೆ ಪ್ರಕರಣ | ಆರೋಪಿ ಮೋಹನ್ ನಾಯಕ್‍ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿಂದ ನಿರಾಕರಣೆ Read More »

ವಿಮಾನಕ್ಕೆ ಬಾಂಬ್‌ ಬೆದರಿಕೆ : ತಿರುವನಂತಪುರ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ

ತಿರುವನಂತಪುರ : ಮುಂಬಯಿಯ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿದ್ದ ಏರ್​ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಕೇರಳದ ತಿರುವನಂತಪುರಂನಲ್ಲಿ ವಿಮಾನವನ್ನು ಕೆಳಗಿಳಿಸಲಾಯಿತು.ಬಾಂಬ್ ಬೆದರಿಕೆ ಬಂದ ನಂತರ ತಿರುವನಣತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ವಿಮಾನವನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ವಿಮಾನವು ಬೆಳಗ್ಗೆ 8 ಗಂಟೆಗೆ ವಿಮಾನ ನಿಲ್ದಾಣದಲ್ಲಿ ಇಳಿಯಿತು.ಪ್ರಯಾಣಿಕರನ್ನು ವಿಮಾನದಿಂದ ಇಳಿಸಿ ಸ್ಥಳಾಂತರಿಸಲಾಗಿದೆ. ವಿಮಾನದಲ್ಲಿ 135 ಪ್ರಯಾಣಿಕರಿದ್ದರು. ಏರ್​ ಇಂಡಿಯಾ ವಿಮಾನ 657 ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ವಿಮಾನವು

ವಿಮಾನಕ್ಕೆ ಬಾಂಬ್‌ ಬೆದರಿಕೆ : ತಿರುವನಂತಪುರ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ Read More »

ಹೆಣಗಳನ್ನು ಮಾರಾಟ ಮಾಡುತ್ತಿದ್ದ ಮೆಡಿಕಲ್‌ ಕಾಲೇಜಿನ ಪ್ರಿನ್ಸಿಪಾಲ್‌

ಕೋಲ್ಕತ: ಟ್ರೈನಿ ವೈದ್ಯೆಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆಯ ಬಳಿಕ ಕುಖ್ಯಾತವಾಗಿರುವ ಕೋಲ್ಕತದ ಸರ್ಕಾರಿ ಆರ್‌ಜಿ ಕರ್‌ ಮೆಡಿಲ್‌ ಕಾಲೇಜಿನ ಒಂದೊಂದೇ ಕರ್ಮಕಾಂಡ ಬಯಲಿಗೆ ಬರುತ್ತಿದೆ. ವೈದ್ಯೆಯ ಹತ್ಯೆಯಾದ ಬಳಿಕ ರಾಜೀನಾಮೆ ನೀಡಿರುವ ಕಾಲೇಜಿನ ಪ್ರಾಂಶುಪಾಲ ಆಸ್ಪತ್ರೆಯಲ್ಲಿ ಮೃತಪಟ್ಟವರ ಶವಗಳನ್ನು ಮಾರಾಟ ಮಾಡುವಂಥ ಹೀನ ದಂಧೆಯನ್ನು ನಡೆಸುತ್ತಿದ್ದರು ಎಂದು ಈ ಆಸ್ಪತ್ರೆಯಲ್ಲಿ ಸುಪರಿಂಟೆಂಡ್‌ ಆಗಿದ್ದ ಅಖ್ತರ್‌ ಅಲಿ ಎಂಬವರು ಬಹಿರಂಗಪಡಿಸಿದ್ದಾರೆ.ಆರ್‌ಜಿ ಕರ್‌ ಮೆಡಿಕಲ್‌ ಕಾಲೇಜಿಗೆ ಬರುತ್ತಿದ್ದ ಔಷಧ ಹಾಗೂ ವೈದ್ಯಕೀಯ ಉಪಕರಣಗಳನ್ನು ಬಾಂಗ್ಲಾದೇಶಕ್ಕೆ ಮಾರುತ್ತಿದ್ದರು. ಮೆಡಿಕಲ್‌

ಹೆಣಗಳನ್ನು ಮಾರಾಟ ಮಾಡುತ್ತಿದ್ದ ಮೆಡಿಕಲ್‌ ಕಾಲೇಜಿನ ಪ್ರಿನ್ಸಿಪಾಲ್‌ Read More »

ಬಿಸಿಸಿಐ ಐಪಿಎಲ್‌ನಿಂದ ಗಳಿಸಿದ ಲಾಭ 5,120 ಕೋಟಿ ರೂ!

ಮುಂಬಯಿ: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) 2023ರಲ್ಲಿ ಐಪಿಎಲ್‌ ಒಂದರಿಂದಲೇ ಗಳಿಸಿದ ಆದಾಯ ಬರೋಬ್ಬರಿ 5,120 ಕೋಟಿ ರೂ! ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿಯಾಗಿರುವ ಬಿಸಿಸಿಐ 2022-23ರ ವಾರ್ಷಿಕ ಹಣಕಾಸು ವರದಿಯನ್ನು ಪ್ರಕಟಿಸಿದ್ದು, ಇದರಲ್ಲಿ ಈ ಮಾಹಿತಿಯಿದೆ. 2023ರಲ್ಲಿ ಐಪಿಎಲ್‌ನಿಂದ 11,769 ಕೋಟಿ ರೂ. ಆದಾಯ ಬಿಸಿಸಿಐಗೆ ಹರಿದು ಬಂದಿದೆ. ಇದರಲ್ಲಿ ಖರ್ಷು ಕಳೆದು 5,120.13 ಕೋಟಿ ರೂ. ಉಳಿತಾಯವಾಗಿದೆ. ಐಪಿಎಲ್‌ಗೆ 6,648 ಕೋ. ರೂ. ಬಿಸಿಸಿಐ ಖರ್ಚು ಮಾಡಿದೆ.ಐಪಿಎಲ್ 2022ರ ಆದಾಯ 2,367 ಕೋಟಿ

ಬಿಸಿಸಿಐ ಐಪಿಎಲ್‌ನಿಂದ ಗಳಿಸಿದ ಲಾಭ 5,120 ಕೋಟಿ ರೂ! Read More »

ಸಾಕ್ಷ್ಯಾಧಾರ ಕೊಟ್ಟರೆ ಜಾಕೀರ್‌ ನಾಯ್ಕ್‌ ಹಸ್ತಾಂತರ: ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ

ಹೊಸದಿಲ್ಲಿ: ಮಂಗಳೂರಿನ ಕುಕ್ಕರ್‌ ಸ್ಫೋಟ, ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಸೇರಿದಂತೆ ದೇಶದಲ್ಲಿ ನಡೆದಿರುವ ಅನೇಕ ಬಾಂಬ್‌ಸ್ಫೋಟ ಕೃತ್ಯಗಳಲ್ಲಿ ಶಾಮೀಲಾಗಿರುವ ಉಗ್ರರಿಗೆ ಸ್ಫೂರ್ತಿಯಾಗಿರುವ ವಿವಾದಿತ ಇಸ್ಲಾಮಿಕ್ ಬೋಧಕ ಜಾಕೀರ್‌ ನಾಯ್ಕ್‌ನನ್ನು ಸಾಕ್ಷ್ಯಾಧಾರ ಒದಗಿಸಿದರೆ ಭಾರತಕ್ಕೆ ಹಸ್ತಾಂತರಿಸುವ ಪ್ರಸ್ತಾವ ಪರಿಗಣಿಸಲು ಮಲೇಷ್ಯಾ ಒಪ್ಪಿದೆ.ಸೂಕ್ತವಾದ ಸಾಕ್ಷ್ಯಾಧಾರ ಸಿಕ್ಕಿದರೆ ಜಾಕೀರ್‌ ನಾಯ್ಕ್‌ನನ್ನು ಹಸ್ತಾಂತರಿಸಬೇಕೆಂಬ ಭಾರತದ ಮನವಿಯನ್ನು ನಮ್ಮ ಸರ್ಕಾರ ಪರಿಗಣಿಸಬಹುದು ಎಂದು ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಹೇಳಿದ್ದಾರೆ.2022ರಲ್ಲಿ ಪ್ರಧಾನಮಂತ್ರಿ ಹುದ್ದೆ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಅನ್ವರ್ ಇಬ್ರಾಹಿಂ ಮೂರು

ಸಾಕ್ಷ್ಯಾಧಾರ ಕೊಟ್ಟರೆ ಜಾಕೀರ್‌ ನಾಯ್ಕ್‌ ಹಸ್ತಾಂತರ: ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ Read More »

ಇಂದಿನಿಂದ ಪ್ರಧಾನಿ ಮೋದಿ ಉಕ್ರೇನ್‌, ಪೋಲೆಂಡ್‌ ಪ್ರವಾಸ

ಹೊಸದಿಲ್ಲಿ: ಪೋಲೆಂಡ್‌ ಮತ್ತು ಯುದ್ಧತ್ರಸ್ತವಾಗಿರುವ ಉಕ್ರೇನ್‌ ದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಇಂದಿನಿಂದ ಪ್ರಾರಂಭವಾಗಲಿದೆ. ಇದು ಮೊರಾರ್ಜಿ ದೇಸಾಯಿ ನಂತರ 45 ವರ್ಷಗಳ ಬಳಿಕ ಯುರೋಪ್‌ ದೇಶಗಳಿಗೆ ಭಾರತದ ಪ್ರಧಾನಿಯೊಬ್ಬರು ನೀಡುವ ಮೊದಲ ಭೇಟಿ. ಈ ವರ್ಷ ಭಾರತ ಮತ್ತು ಪೋಲೆಂಡ್ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 70ನೇ ವಾರ್ಷಿಕೋತ್ಸವವೂ ಆಗಿದೆ. ಪ್ರಧಾನಿ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ ಪೋಲೆಂಡ್‌ಗೆ ಭೇಟಿ ನೀಡಲಿದ್ದಾರೆ. 45

ಇಂದಿನಿಂದ ಪ್ರಧಾನಿ ಮೋದಿ ಉಕ್ರೇನ್‌, ಪೋಲೆಂಡ್‌ ಪ್ರವಾಸ Read More »

ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್‌ ರೈಲು | ತಪ್ಪಿದ ಅನಾಹುತ

ಉತ್ತರ ಪ್ರದೇಶ  : ಸಬರಮತಿ ಎಕ್ಸ್‌ಪ್ರೆಸ್‌ ರೈಲಿನ 22 ಬೋಗಿಗಳು ಹಳಿ ತಪ್ಪಿದೆ. ಅದೃಷ್ಟವಶಾತ್ ಯವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾನ್ಸುರ್‌ ಮತ್ತು ಭೀಮಸೇನ್ ನಡುವೆ ಸಬರಮತಿ ಎಕ್ಸೆಸ್ ರೈಲಿನ 22 ಬೋಗಿಗಳು ಹಳಿ ತಪ್ಪಿದೆ. ಅದೇ ಹಳಿ ಮೇಲೆ ಮೆಮೊ ರೈಲೊಂದು ಬರುತ್ತಿತ್ತು. ಅದೃಷ್ಟವಷಾತ್ ಯಾವುದೇ ಸಾವುನೋವು ಸಂಭವಿಸಿಲ್ಲ. ಪ್ರಯಾಣಿಕರನ್ನು ಬಸ್ಸಿನ ಮೂಲಕ ಕಾನ್ಸುರ್‌ ರೈಲ್ವೆ ಸ್ಟೇಷನ್ ತಲುಪಿಸಿದ್ದೇವೆ ಎಂದು ಜಿಲ್ಲಾ ಮಾಜಿಸ್ಟ್ರೇಟ್ ರಾಕೇಶ್ ವರ್ಮಾ ತಿಳಿಸಿದ್ದಾರೆ. ಸಬರಮತಿ ಎಕ್ಸ್‌ಪ್ರೆಸ್‌) ರೈಲು ಕಾನ್ಸುರ್‌ ಹತ್ತಿರ ನಸುಕಿನ 2:35 ಗಂಟೆಗೆ

ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್‌ ರೈಲು | ತಪ್ಪಿದ ಅನಾಹುತ Read More »

19 ಕಡೆಗಳಲ್ಲಿ ಬಾಂಬ್‍ ಇಟ್ಟಿದ್ದೇವೆ | ಅಸ್ಸಾಂನ ದಂಗೆಕೋರ ಗುಂಪೊಂದರಿಂದ ಬೆದರಿಕೆ

ಅಸ್ಸಾಂ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಲು ಅಸ್ಸಾಂನ 19 ಕಡೆ ಬಾಂಬ್ ಇಟ್ಟಿದ್ದೆವು. ಆದರೆ, ತಾಂತ್ರಿಕ ದೋಷದಿಂದ ಅವುಗಳು ಸ್ಫೋಟಗೊಂಡಿಲ್ಲ ಎಂದು ಅಸ್ಸಾಂನ ದಂಗೆಕೋರ ಗುಂಪೊಂದು ತಿಳಿಸಿದೆ. ಗುವಾಹಟಿಯ 8 ಪ್ರದೇಶಗಳು ಸೇರಿದಂತೆ 19 ಸ್ಥಳಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಬೆಳಿಗ್ಗೆ 11.30ರ ಸುಮಾರಿಗೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ದಂಗೆಕೋರರ ಗುಂಪು ತಿಳಿಸಿದೆ. ಬಾಂಬ್ ಇರಿಸಲಾಗಿರುವ ಕೆಲವು ಪ್ರದೇಶಗಳ ಚಿತ್ರಗಳನ್ನೂ ಕೂಡ ನಿಷೇಧಿತ ಸಂಘಟನೆ ಹಂಚಿಕೊಂಡಿದೆ.ಅದರಲ್ಲಿ ಒಂದು ಪ್ರದೇಶವು ರಾಜಧಾನಿ ಗುವಾಹಟಿಯ ದಿಸ್ಪುರ್‌ ನ

19 ಕಡೆಗಳಲ್ಲಿ ಬಾಂಬ್‍ ಇಟ್ಟಿದ್ದೇವೆ | ಅಸ್ಸಾಂನ ದಂಗೆಕೋರ ಗುಂಪೊಂದರಿಂದ ಬೆದರಿಕೆ Read More »

ಕೆಂಪುಕೋಟೆಯ ಮೇಲೆ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ |  ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ದಿಲ್ಲಿಯ ಕೆಂಪುಕೋಟೆಯ ಮೇಲೆ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಸಂಖ್ಯಾತ ಸ್ವಾತಂತ್ರ್ಯ ಪ್ರೇಮಿಗಳ ಬಲಿದಾನಕ್ಕೊಂದು ದೊಡ್ಡ ಪ್ರಣಾಮ. ವಿಕಸಿತ ಭಾರತ 2047 ಕೇವಲ ಪದಗಳಲ್ಲ. 140 ಕೋಟಿ ಜನರ ಸಂಕಲ್ಪ ಎಂದು ಹೇಳಿದರು. ಪ್ರಕೃತಿ ವಿಕೋಪದಿಂದ ಹಲವಾರು ಮಂದಿ ತಮ್ಮ ಕುಟುಂಬ, ಆಸ್ತಿಯನ್ನು ಕಳೆದುಕೊಂಡಿದ್ದಾರೆ. ಹೊರ ರಾಷ್ಟ್ರವೂ ನಷ್ಟ ಅನುಭವಿಸಿದೆ. ಇಂದು, ನಾನು ಅವರೆಲ್ಲರಿಗೂ ನನ್ನ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ ಮತ್ತು ಈ ಬಿಕ್ಕಟ್ಟಿನ ಸಮಯದಲ್ಲಿ ಈ ರಾಷ್ಟ್ರವು ಅವರೊಂದಿಗೆ

ಕೆಂಪುಕೋಟೆಯ ಮೇಲೆ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ |  ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ Read More »

error: Content is protected !!
Scroll to Top