ದೇಶ

ಬಾಲಿವುಡ್‌ ನಟ ಗೋವಿಂದ ಕಾಲಿಗೆ ಗುಂಡೇಟು

ರಿವಾಲ್ವರ್‌ ಸ್ವಚ್ಛಗೊಳಿಸುವಾಗ ಸಿಡಿದ ಬುಲೆಟ್‌ ಮುಂಬಯಿ: ಬಾಲಿವುಡ್‌ನ ಜನಪ್ರಿಯ ನಟ ಗೋವಿಂದ ಕಾಲಿಗೆ ಗುಂಡೇಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಗೆಂದು ಅವರ ಕಾಲಿಗೆ ಯಾರೂ ಗುಂಡು ಹಾರಿಸಿಲ್ಲ, ತನ್ನದೇ ಲೇಸೆನ್ಸ್‌ ಇರುವ ರಿಲಾಲ್ವರ್‌ನಿಂದ ಹಾರಿದ ಗುಂಡಿನಿಂದ ಗೋವಿಂದ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಮಂಗಳವಾರ ಬೆಳಗ್ಗೆ ಗೋವಿಂದ ಅವರ ಕಾಲಿಗೆ ಅವರದೇ ರಿವಾಲ್ವರ್‌ನಿಂದ ಹಾರಿದ ಗುಂಡು ತಗುಲಿದ ಹಿನ್ನೆಲೆಯಲ್ಲಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ಆಕಸ್ಮಿಕವಾಗಿ ಅವರ ರಿವಾಲ್ವರ್‌ನಿಂದ ಗುಂಡು ಹಾರಿದೆ ಎನ್ನಲಾಗಿದೆ.ಮುಂಜಾನೆ 4.45ಕ್ಕೆ ಈ ಘಟನೆ ನಡೆದಿದೆ. ಕೋಲ್ಕತಕ್ಕೆ ಹೋಗುವ […]

ಬಾಲಿವುಡ್‌ ನಟ ಗೋವಿಂದ ಕಾಲಿಗೆ ಗುಂಡೇಟು Read More »

ಗ್ಯಾಸ್‌ ಸಿಲಿಂಡರ್‌ ಬೆಲೆ 48.50 ರೂ. ಏರಿಕೆ

ಹೊಸದಿಲ್ಲಿ : ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿ ನವರಾತ್ರಿ ಹೊತ್ತಲ್ಲಿ ಗ್ರಾಹಕರಿಗೆ ಶಾಕ್ ನೀಡಿವೆ. 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 48.50 ರೂ. ಹೆಚ್ಚಿಸಲಾಗಿದೆ. ದಿಲ್ಲಿಯಲ್ಲಿ 19 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 1740 ರೂ ಆಗಿದೆ. ಆದರೆ ಗೃಹ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.ಅಕ್ಟೋಬರ್ 1, 2024ರಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಮುಂಬೈನಲ್ಲಿ ರೂ 1692.50, ಕೋಲ್ಕತ್ತಾದಲ್ಲಿ 1850.50 ರೂ.

ಗ್ಯಾಸ್‌ ಸಿಲಿಂಡರ್‌ ಬೆಲೆ 48.50 ರೂ. ಏರಿಕೆ Read More »

ಮಿಥುನ್‌ ಚಕ್ರವರ್ತಿಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಘೋಷಣೆ

ಅ.8ರಂದು ರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದಾನ ಮುಂಬಯಿ: ಬಾಲಿವುಡ್‌ನ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಸಿನಿಮಾ ರಂಗದಲ್ಲಿ ಶ್ರೇಷ್ಠ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಅ.8ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 74ರ ಹರೆಯದ ಮಿಥುನ್‌ ಚಕ್ರವರ್ತಿಗೆ ಪ್ರಶಸ್ತಿ ಪ್ರದಾನಿಸಲಾಗುವುದು. ಈ ಕುರಿತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮಿಥುನ್ ಅವರ ಗಮನಾರ್ಹ ಸಿನಿಮಾ ಪ್ರಯಾಣ ತಲೆಮಾರಿಗೆ

ಮಿಥುನ್‌ ಚಕ್ರವರ್ತಿಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಘೋಷಣೆ Read More »

ರಾಮ ಮಂದಿರ ಉದ್ಘಾಟನೆಯನ್ನು ನಾಚ್‌ ಗಾನ ಕಾರ್ಯಕ್ರಮ ಎಂದ ರಾಹುಲ್‌ ಗಾಂಧಿ

ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠೆ ಮತ್ತು ಲೋಕಾರ್ಪಣೆ ಸಮಾರಂಭವನ್ನು ನಾಚ್ ಗಾನ ಕಾರ್ಯಕ್ರಮ ಎಂದು ಕರೆದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮತ್ತೊಮ್ಮೆ ಹಿಂದುಗಳ ಧಾರ್ಮಿಕ ನಂಬಿಕೆಯನ್ನು ನೋಯಿಸಿದ್ದಾರೆ.ಧಾರ್ಮಿಕ ಕಾರ್ಯಕ್ರಮವನ್ನು ನೃತ್ಯ-ಕುಣಿತದ ಕಾರ್ಯಕ್ರಮ ಎಂದು ಕರೆದ ರಾಹುಲ್‌ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭ ನಾಚ್ ಗಾನ ಕಾರ್ಯಕ್ರಮವಾಗಿತ್ತು. ಕರೆಯಬೇಕಿದ್ದವರನ್ನು ಬಿಟ್ಟು ಅಮಿತಾಬ್ ಬಚ್ಚನ್, ಅದಾನಿ ಮತ್ತು ಅಂಬಾನಿಯಂತಹ ದೊಡ್ಡ ವ್ಯಕ್ತಿಗಳು ಹಾಗೂ ಹಣವಿದ್ದ ವ್ಯಕ್ತಿಗಳನ್ನು ಆಹ್ವಾನಿಸಲಾಗಿತ್ತು. ರಾಮ

ರಾಮ ಮಂದಿರ ಉದ್ಘಾಟನೆಯನ್ನು ನಾಚ್‌ ಗಾನ ಕಾರ್ಯಕ್ರಮ ಎಂದ ರಾಹುಲ್‌ ಗಾಂಧಿ Read More »

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಗಲ್ಲು

ಪೋಕ್ಸೊ ಅಡಿ ಮರಣ ದಂಡನೆ ವಿಧಿಸಿದ ದೇಶದ ಮೊದಲ ಪ್ರಕರಣ ಗುವಾಹಟಿ: ಇಲ್ಲಿನ ಸರ್ಕಾರಿ ವಸತಿ ಶಾಲೆಯೊಂದರಲ್ಲಿ 2014ರಿಂದ 2022ರ ನಡುವೆ 21 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಹಾಸ್ಟೆಲ್‌ ವಾರ್ಡನ್‌ ಯುಮ್ಕೆನ್‌ ಬಾಗ್ರಾ ಎಂಬಾತನಿಗೆ ಅರುಣಾಚಲ ಪ್ರದೇಶದ ವಿಶೇಷ ನ್ಯಾಯಾಲಯ ಗುರುವಾರ ಗಲ್ಲು ಶಿಕ್ಷೆ ವಿಧಿಸಿದೆ.ಮಕ್ಕಳು ದೂರು ನೀಡಿದರೂ ಅಪರಾಧವನ್ನು ವರದಿ ಮಾಡುವಲ್ಲಿ ವಿಫಲರಾದ ಮಾಜಿ ಮುಖ್ಯಶಿಕ್ಷಕ ಸಿಂಗ್ತುಂಗ್ ಯೋರ್ಪೆನ್ ಮತ್ತು ಹಿಂದಿ ಶಿಕ್ಷಕಿ ಮಾರ್ಬೊಮ್ ನ್ಗೊಮ್ದಿರ್ ಅವರಿಗೆ ಪೋಕ್ಸೊ ಕಾಯ್ದೆ ಅಡಿ 20

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಗಲ್ಲು Read More »

ಅ.2ರಂದು ಸೂರ್ಯ ಗ್ರಹಣ : ಭಾರತದಲ್ಲಿ ಗೋಚರವಿಲ್ಲ

ಸೂರ್ಯನ ಸುತ್ತ ಕೆಂಪು ಉಂಗುರ ಆಕೃತಿ ರಚನೆ ಹೊಸದಿಲ್ಲಿ : ಮುಂಬರುವ ಅಕ್ಟೋಬರ್‌ 2ರಂದು ಆಂಶಿಕ ಸೂರ್ಯ ಗ್ರಹಣ ಸಂಭವಿಸಲಿದೆ. ಆದರೆ ಈ ಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ನಾಸಾದ ವೆಬ್‌ಸೈಟ್‌ನಲ್ಲಿರುವ ಮಾಹಿತಿ ಪ್ರಕಾರ ಸೂರ್ಯ ಗ್ರಹಣ ಭಾರತೀಯ ಕಾಲಮಾನ ರಾತ್ರಿ 9.21ಕ್ಕೆ ಹಿಡಿದು ಅ.3ರಂದು ನಸುಕಿನ 3.17ಕ್ಕೆ ಬಿಡಲಿದೆ.ಹಿಂದೂ ಕ್ಯಾಲೆಂಡರ್ ಪ್ರಕಾರ ಇದು ಭಾದ್ರಪದ ಮಾಸದ ಅಮವಾಸ್ಯೆ ಪಿತೃಪಕ್ಷದ ಕೊನೆಯ ದಿನ. ಸೂರ್ಯ ಗ್ರಹಣ ಭಾರತದಲ್ಲಿ ಗೋಚರಿಸದಿದ್ದರೂ ಇದರ ಪರಿಣಾಮ ಇರುತ್ತದೆ ಎಂದು ಭಾರತೀಯ ಶಾಸ್ತ್ರ ಗ್ರಂಥಗಳು

ಅ.2ರಂದು ಸೂರ್ಯ ಗ್ರಹಣ : ಭಾರತದಲ್ಲಿ ಗೋಚರವಿಲ್ಲ Read More »

ಅ.5ಕ್ಕೆ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಕಂತು ಬಿಡುಗಡೆ

ದಸರಾ ಹಬ್ಬದ ಸಂದರ್ಭದಲ್ಲಿ ಕೇಂದ್ರದಿಂದ ರೈತರಿಗೆ ಗಿಫ್ಟ್‌ ಹೊಸದಿಲ್ಲಿ: ದಸರಾ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರಕಾರ ರೈತರಿಗೆ ಉಡುಗೊರೆಯೊಂದನ್ನು ನೀಡಲಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವರ್ಷಕ್ಕೆ ಮೂರು ಬಾರಿ ನೀಡಲಾಗುವ ಕಂತಿನ ಹಣ ಅಕ್ಟೋಬರ್ 5ಕ್ಕೆ ಬರಲಿದೆ.ಈವರೆಗೆ 17 ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಅ. 5ಕ್ಕೆ 18ನೇ ಕಂತಿನ ಹಣ ಬಿಡುಗಡೆ ಆಗಲಿದೆ. ಜೂನ್ 18ಕ್ಕೆ 17ನೇ ಕಂತಿನ ಹಣ ಬಿಡುಗಡೆ ಆಗಿತ್ತು. 2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಎಲ್ಲ ನೋಂದಾಯಿತ

ಅ.5ಕ್ಕೆ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಕಂತು ಬಿಡುಗಡೆ Read More »

ಮುಂಬಯಿಯಲ್ಲಿ ಮಹಾಮಳೆ : 4 ಮಂದಿ ಸಾವು

ಅನಾಹುತಗಳ ಸರಮಾಲೆ ಸೃಷ್ಟಿಸಿದ ಮಳೆ ಮುಂಬಯಿ: ಮುಂಬಯಿ ಮಹಾನಗರ ಸೇರಿ ಮಹಾರಾಷ್ಟ್ರದ ವಿವಿಧೆಡೆ ನಿನ್ನೆಯಿಂದೀಚೆಗೆ ಸುರಿಯುತ್ತಿರುವ ಮಹಾಮಳೆ ಅನಾಹುತಗಳ ಸರಮಾಲೆಯನ್ನು ಸೃಷ್ಟಿಸಿದೆ. ಮಳೆಗೆ ಮುಂಬಯಿಯಲ್ಲಿ ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ. ಬುಧವಾರ ಸಂಜೆ ಹೊತ್ತಿಗೆ ಮಳೆ ಶುರುವಾಗಿದ್ದು, ಸತತವಾಗಿ 5 ತಾಸು ಸುರಿದಿದೆ. ಮುಂಬಯಿ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ 200 ಮಿ.ಮೀ ಗಿಂತ ಹೆಚ್ಚು ಮಳೆಯಾಗಿದೆ.ಭಾರಿ ಮಳೆಯ ಹಿನ್ನೆಲೆಯಲ್ಲಿ ನಿನ್ನೆಯೇ ಮುಂಬಯಿ ಮತ್ತು ಥಾಣೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರೈಲು, ರಸ್ತೆ ಸಂಚಾರ ವ್ಯತ್ಯಯಗೊಂಡು ಜನರು ತಡರಾತ್ರಿಯವರೆಗೂ

ಮುಂಬಯಿಯಲ್ಲಿ ಮಹಾಮಳೆ : 4 ಮಂದಿ ಸಾವು Read More »

ತಿರುಪತಿ ವಿವಾದ : ವಿಶ್ವ ಹಿಂದೂ ಪರಿಷತ್ ಖಂಡನೆ

ಪುತ್ತೂರು: ತಿರುಪತಿ ದೇವಸ್ಥಾನದ ಲಡ್ಡು ಸಿದ್ಧಪಡಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಯ ಕೊಬ್ಬು ಪತ್ತೆಯಾಗಿರುವುದಕ್ಕೆ ವಿಶ್ವ ಹಿಂದೂ ಪರಿಷತ್ ಭಾರೀ ಆಕ್ರೋಶ ವ್ಯಕ್ತಪಡಿಸಿದೆ. ವಿಶ್ವ ಹಿಂದೂ ಪರಿಷತ್ ನ ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಈ ಕುರಿತು ಮಾತನಾಡಿ, ತಿರುಪತಿ ದೇವಸ್ಥಾನ ಹಿಂದೂಗಳ ಒಂದು ಶ್ರದ್ಧಾ ಕೇಂದ್ರ. ಇಲ್ಲಿ ಪ್ರಸಾದ ರೂಪದಲ್ಲಿ ಸಿಗುವಂತ ಲಡ್ಡು ಅತ್ಯಂತ ಮಹತ್ವಪೂರ್ಣವಾದದ್ದು. ಹೀಗಿರುವಾಗ ಪವಿತ್ರವಾದ ಲಡ್ಡು ಪ್ರಸಾದವನ್ನ ಅಪವಿತ್ರಗೊಳಿಸಿದ್ದಂತಹ ಜಗನ್ ಮೋಹನ್ ರೆಡ್ಡಿ ನೇತೃತ್ವದ ಹಿಂದಿನ ಸರ್ಕಾರ ಮಾಡಿರುವುದು ಇದೀಗ ಬೆಳಕಿಗೆ ಬಂದಿದೆ.

ತಿರುಪತಿ ವಿವಾದ : ವಿಶ್ವ ಹಿಂದೂ ಪರಿಷತ್ ಖಂಡನೆ Read More »

ಲಾಪತಾ ಲೇಡಿಸ್ ಸಿನಿಮಾ ಆಸ್ಕರ್ ಅವಾರ್ಡ್‍ಗೆ ಆಯ್ಕೆ

ಲಾಪತಾ ಲೇಡಿಸ್’ ಸಿನಿಮಾ ‘ಆಸ್ಕರ್ 2025’ಗೆ ಭಾರತದಿಂದ ಅಧಿಕೃತವಾಗಿ ಆಯ್ಕೆ ಆಗಿದೆ. ಕಿರಣ್ ರಾವ್ ನಿರ್ದೇಶನದ ಈ ಚಿತ್ರವನ್ನು ಆಮಿರ್ ಖಾನ್ ಅವರು ನಿರ್ಮಾಣ ಮಾಡಿದ್ದಾರೆ. ಈ ವರ್ಷದ ಆರಂಭದಲ್ಲಿ ರಿಲೀಸ್ ಆದ ಈ ಚಿತ್ರ ಎಲ್ಲರಿಂದ ಮೆಚ್ಚುಗೆ ಪಡೆಯಿತು. ಒಟ್ಟಿನಲ್ಲಿ ರಿಲೀಸ್ ಆದ ಬಳಿಕ ಮತ್ತೊಂದಷ್ಟು ಮಂದಿ ಈ ಚಿತ್ರವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಲಾಪತಾ ಲೇಡಿಸ್’ ಸಿನಿಮಾ ಮಹಿಳೆಯರ ಸಬಲೀಕರಣದ ಬಗ್ಗೆ ಇದೆ. ಈ ಸಿನಿಮಾದಲ್ಲಿ ನಿಶಾಂಶಿ ಗೋಯಲ್, ಪ್ರತಿಭಾ ರಾಂತಾ, ಸ್ಪರ್ಶ್ ಶ್ರೀವಾಸ್ತವ, ಚಾಯಾ

ಲಾಪತಾ ಲೇಡಿಸ್ ಸಿನಿಮಾ ಆಸ್ಕರ್ ಅವಾರ್ಡ್‍ಗೆ ಆಯ್ಕೆ Read More »

error: Content is protected !!
Scroll to Top