ದೇಶ

ಅಡಿಕೆ ಮೇಲೆ ಮತ್ತೆ ಕ್ಯಾನ್ಸರ್‌ ತೂಗುಗತ್ತಿ | ಬಾಯಿಕ್ಯಾನ್ಸರ್‌ಗೆ ಮುಖ್ಯ ಕಾರಣ ಅಡಿಕೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ

ಮಂಗಳೂರು : ಕರಾವಳಿ ಜನರ ಆರ್ಥಿಕತೆಯ ಜೀವನಾಡಿಯಾಗಿರುವ ಅಡಿಕೆ ಮೇಲೆ ಮತ್ತೆ ಕ್ಯಾನ್ಸರ್‌ ತೂಗುಗತ್ತಿ ನೇತಾಡಲಾರಂಭಿಸಿದೆ. ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ)ಯ ಅಂಗ ಸಂಸ್ಥೆ ಇಂಟರ್‌ನ್ಯಾಷನಲ್‌ ಏಜೆನ್ಸಿ ಫಾರ್‌ ರೀಸರ್ಚ್ ಆ್ಯಂಡ್‌ ಕ್ಯಾನ್ಸರ್‌(ಐಎಆರ್‌ಸಿ) ಅಡಿಕೆ ಬಳಕೆ ನಿಯಂತ್ರಿಸಿದರೆ ವಿಶ್ವದಲ್ಲಿ ಬಾಯಿ ಕ್ಯಾನ್ಸರ್‌ ಪ್ರಮಾಣವನ್ನು ಬಹುತೇಕ ತಗ್ಗಿಸಬಹುದು ಎಂದು ಇತ್ತೀಚೆಗೆ ವರದಿ ನೀಡಿದೆ. ಈ ವರದಿ ಅಡಿಕೆ ಬಳಕೆ ಮೇಲೆ ನಿಯಂತ್ರಣ ಹೇರಲು ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಬೆಳೆಗಾರರಲ್ಲಿ ಆತಂಕ ಮೂಡಿದೆ. ಇಂಟರ್‌ ನ್ಯಾಷನಲ್‌ ಏಜೆನ್ಸಿ ಫಾರ್‌ ರೀಸರ್ಚ್ ಆ್ಯಂಡ್‌ […]

ಅಡಿಕೆ ಮೇಲೆ ಮತ್ತೆ ಕ್ಯಾನ್ಸರ್‌ ತೂಗುಗತ್ತಿ | ಬಾಯಿಕ್ಯಾನ್ಸರ್‌ಗೆ ಮುಖ್ಯ ಕಾರಣ ಅಡಿಕೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ Read More »

ನರೇಂದ್ರ ಮೋದಿಗೆ ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ | ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್‌ಗೆ ಪಾತ್ರರಾದ ಪ್ರಧಾನಿ

ಹೊಸದಿಲ್ಲಿ : ನೈಜೀರಿಯಾ ಸರ್ಕಾರ ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್’ ಪುರಸ್ಕಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿ ಗೌರವಿಸಿದೆ. ಇದು ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವವಾಗಿದೆ. ಆ ಮೂಲಕ ಈ ಗೌರವ ಪಡೆದ ಎರಡನೇ ವಿದೇಶಿ ಗಣ್ಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ. ನೈಜೀರಿಯಾ ಅಧ್ಯಕ್ಷ ಬೋಲಾ ಅಹ್ಮದ್ ತಿನುಡು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಬಳಿಕ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ

ನರೇಂದ್ರ ಮೋದಿಗೆ ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ | ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್‌ಗೆ ಪಾತ್ರರಾದ ಪ್ರಧಾನಿ Read More »

ಸಗಣಿ ರಾಶಿಯಡಿಯಲ್ಲಿತ್ತು ಲಕ್ಷಗಟ್ಟಲೆ ರೂಪಾಯಿ!

ಭುವನೇಶ್ವರ:ಸಗಣಿ ರಾಶಿಯಲ್ಲಿ ಬಚ್ಚಿಟ್ಟಿದ್ದ 20 ಲಕ್ಷ ರೂ.ಯನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಒಡಿಶಾದ ಬಾಲಾಸೋರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಹೈದರಾಬಾದ್ ಮತ್ತು ಒಡಿಶಾ ಪೊಲೀಸ್ ತಂಡ ದಾಳಿ ನಡೆಸಿ ಕಮರ್ದಾ ಪೊಲೀಸ್ ಠಾಣಾ ವ್ಯಾಪ್ತಿಯ ಬಡಮಂಡರುಣಿ ಗ್ರಾಮದಲ್ಲಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗೋಪಾಲ್ ಎಂಬಾತ ಹೈದರಾಬಾದ್‌ನ ಕೃಷಿ ಆಧಾರಿತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಕಂಪನಿಯ ಲಾಕರ್‌ನಿಂದ 20 ಲಕ್ಷಕ್ಕೂ ಹೆಚ್ಚು ಹಣವನ್ನು ಕಳ್ಳತನ ಮಾಡಿದ್ದ. ಬಳಿಕ ತನ್ನ ಸೋದರ ಮಾವ ರವೀಂದ್ರ ಬೆಹೆರಾ ಮೂಲಕ

ಸಗಣಿ ರಾಶಿಯಡಿಯಲ್ಲಿತ್ತು ಲಕ್ಷಗಟ್ಟಲೆ ರೂಪಾಯಿ! Read More »

ಗೂಗಲ್‌ ಮ್ಯಾಪ್‌ ಅವಾಂತರ : ಮಿನಿ ಬಸ್‌ ಅಪಘಾತಕ್ಕೀಡಾಗಿ ಇಬ್ಬರು ಸಾವು

ತಿರುವನಂತಪುರ: ಗೂಗಲ್‌ ಮ್ಯಾಪ್‌ ನಂಬಿ ಹೋಗಿ ಮಿನಿ ಬಸ್‌ ಅಪಘಾತಕ್ಕೀಡಾಗಿ ಇಬ್ಬರು ರಂಗ ಕಲಾವಿದರು ದಾರುಣವಾಗಿ ಮೃತ್ಯುವಿಡಾಗಿರುವ ಘಟನೆ ಕೇರಳದಲ್ಲಿ ನಿನ್ನೆ ಸಂಭವಿಸಿದೆ. ಕಣ್ಣೂರು ಸಮೀಪದ ಕೆಲಕಮ್ ಬಳಿ ನಿನ್ನೆ ಈ ಅಪಘಾತ ಸಂಭವಿಸಿದೆ. ರಂಗಭೂಮಿಯ ಪ್ರಮುಖ ನಟಿಯರಾಗಿ ಗುರುತಿಸಿಕೊಂಡಿದ್ದ ಕಾಯಂಕುಲಂನ ಅಂಜಲಿ ಮತ್ತು ಕರುನಾಗಪಲ್ಲಿಯ ಜೆಸ್ಸಿ ಮೋಹನ್ ಸಾವನ್ನಪ್ಪಿರುವ ದುರ್ದೈವಿಗಳು.ಮಿನಿ ಬಸ್ ಚಾಲಕ ಗೂಗಲ್ ಮ್ಯಾಪ್ ಸಹಾಯದಿಂದ ಬಸ್ ಚಲಾಯಿಸುತ್ತಿದ್ದರು. ಗೂಗಲ್‌ ಮ್ಯಾಪ್‌ ಎಲ್ಲೆಲ್ಲೋ ಕರೆದುಕೊಂಡು ಹೋಗಿ ಇಕ್ಕಟ್ಟಿನ ಮಾರ್ಗಕ್ಕೆ ತಲುಪಿಸಿದೆ. ಮಾರ್ಗ ಕಡಿದಾಗಿದ್ದರಿಂದ ಅಪಘಾತ

ಗೂಗಲ್‌ ಮ್ಯಾಪ್‌ ಅವಾಂತರ : ಮಿನಿ ಬಸ್‌ ಅಪಘಾತಕ್ಕೀಡಾಗಿ ಇಬ್ಬರು ಸಾವು Read More »

ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ನವಜಾತ ಶಿಶುಗಳು ಜೀವಂತ ದಹನ

ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡು ಸಂಭವಿಸಿದ ಭೀಕರ ದುರಂತ ಲಖನೌ : ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 10 ನವಜಾತ ಶಿಶುಗಳು ಸಜೀವ ದಹನವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡಿದ್ದು, ನಂತರ ಬೆಂಕಿಯ ಕೆನ್ನಾಲಿಗೆ ನವಜಾತ ಶಿಶುಗಳ ತೀವ್ರ ನಿಗಾ ಘಟಕಕ್ಕೆ ಹರಡಿದೆ. ಬೆಂಕಿ ಹೊತ್ತಿಕೊಂಡಾಗ ಕಂಗೆಟ್ಟ ಮಕ್ಕಳ ಪೋಷಕರು ಜೋರಾಗಿ ಕಿರುಚಾಡತೊಡಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಕೂಡ ಆಘಾತಗೊಂಡಿದ್ದು,

ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ನವಜಾತ ಶಿಶುಗಳು ಜೀವಂತ ದಹನ Read More »

ಸಿದ್ದಿಕಿ ಸಾವನ್ನು ದೃಢಪಡಿಸಿಕೊಳ್ಳಲು ಆಸ್ಪತ್ರೆ ಎದುರೇ ಕಾದು ಕುಳಿತಿದ್ದ ಹಂತಕ

ಕೊಲೆ ಮಾಡಿ ಬಟ್ಟೆ ಬದಲಾಯಿಸಿ ಮರಳಿ ಅಲ್ಲಿಗೆ ಬಂದಿದ್ದ ಶೂಟರ್‌ ಮುಂಬಯಿ : ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್‌ ಗೌತಮ್‌ ಎಂಬಾತನನ್ನು ಮುಂಬಯಿ ಪೊಲೀಸರು ಇತ್ತೀಚೆಗೆ ನೇಪಾಳದ ಗಡಿಯಲ್ಲಿ ಬಂಧಿಸಿದ್ದಾರೆ. ಈತನ ವಿಚಾರಣೆಯಿಂದ ಕೊಲೆಯ ಸಂಚಿನ ರಹಸ್ಯಗಳು ಬಯಲಾಗುತ್ತಿವೆ. ಸಿದ್ದಿಕಿಗೆ ಗುಂಡಿಕ್ಕಿದ ಬಳಿಕ ಈತ ಅವರು ಸತ್ತಿರುವುದನ್ನು ದೃಢಪಡಿಸಿಕೊಳ್ಳುವ ಸಲುವಾಗಿ ಆಸ್ಪತ್ರೆ ಎದುರು ಅರ್ಧ ತಾಸಿಗೂ ಹೆಚ್ಚು ಹೊತ್ತು ಕಾದು ಕುಳಿತಿದ್ದನಂತೆ.ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ ಮಾಡಿದ ಈ ಹತ್ಯೆ

ಸಿದ್ದಿಕಿ ಸಾವನ್ನು ದೃಢಪಡಿಸಿಕೊಳ್ಳಲು ಆಸ್ಪತ್ರೆ ಎದುರೇ ಕಾದು ಕುಳಿತಿದ್ದ ಹಂತಕ Read More »

ಟಿಪ್ಪುವಿನ ಖಡ್ಗ 3.4 ಕೋ.ರೂ.ಗೆ ಏಲಂ

ಬ್ರಿಟಿಷರಿಗೆ ಉಡುಗೊರೆಯಾಗಿ ನೀಡಿದ್ದ ಖಡ್ಗ ಹೊಸದಿಲ್ಲಿ: ಟಿಪ್ಪು ಸುಲ್ತಾನ್‌ಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ. ಈ ಖಡ್ಗ ಟಿಪ್ಪು ಸುಲ್ತಾನ್‌ನ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು.ಬೋನ್‌ಹ್ಯಾಮ್‌ ಹರಾಜು ಸಂಸ್ಥೆ ಈ ಮಾಹಿತಿಯನ್ನು ಹಂಚಿಕೊಂಡಿದೆ. ಟಿಪ್ಪು 1799ರಲ್ಲಿ ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಸೋತ ನಂತರ ಆತನ ಖಡ್ಗವನ್ನು ಆಗಿನ ಬ್ರಿಟಿಷ್‌ ಸೇನೆಯ ಕ್ಯಾಪ್ಟನ್‌ ಜೇಮ್ಸ್‌ ಆಂಡ್ರ್ಯೂ ಡಿಕ್‌ ಎಂಬಾತನಿಗೆ ಉಡುಗೊರೆಯಾಗಿ ನೀಡಿದ್ದ.ಈ ಖಡ್ಗದ ಮೂಲವನ್ನು ಸೆರಿಂಗಪಟ್ಟಂ ಕದನದಲ್ಲಿ ಗುರುತಿಸಬಹುದು. ‘ಸ್ಟೀಲ್ ತಲ್ವಾರ್’ ಮೈಸೂರಿನ ವಿಶಿಷ್ಟ ಲಕ್ಷಣವಾದ

ಟಿಪ್ಪುವಿನ ಖಡ್ಗ 3.4 ಕೋ.ರೂ.ಗೆ ಏಲಂ Read More »

ನಾಳೆ ತೆರೆಯಲಿದೆ ಶಬರಿಮಲೆ ಸನ್ನಿಧಾನದ ಬಾಗಿಲು | ಶನಿವಾರದಿಂದ ಮಂಡಲ ಯಾತ್ರೆ ಶುರು

ಶಬರಿಮಲೆ : ವಾರ್ಷಿಕ ಮಂಡಲ ಮತ್ತು ಮಕರ ಜ್ಯೋತಿ ಯಾತ್ರೆಗಾಗಿ ಶಬರಿಮಲೆ ಅಯ್ಯಪ್ಪ ದೇಗುಲದ ಬಾಗಿಲನ್ನು ನ.15ರಂದು ತೆರೆಯಲಾಗುವುದು. ನ.16ರಿಂದ ಭಕ್ತರಿಗೆ ಅಯ್ಯಪ್ಪನ ದರ್ಶನ ಲಭ್ಯವಾಗಲಿದೆ. ಈ ಋತುವಿನ ಯಾತ್ರೆಗಾಗಿ ಅನೇಕ ಬದಲಾವಣೆಗಳೊಂದಿಗೆ ಕೇರಳ ಸರಕಾರ ಸರ್ವ ಸಿದ್ಧತೆಗಳನ್ನು ನಡೆಸಿದೆ.ನಾಳೆ ಸಂಜೆ 4 ಗಂಟೆಗೆ ಮುಖ್ಯಮೇಲ್‌ಶಾಂತಿ ಪಿ.ಎನ್‌.ಮಹೇಶ್‌ ನಂಬೂದಿರಿಯವರು ಶಬರಿಮಲೆ ಗರ್ಭಗೃಹದ ಬಾಗಿಲು ತೆರೆದು ಪೂಜೆ ನೆರವೇರಿಸುವುದರೊಂದಿಗೆ ಈ ವರ್ಷದ ಯಾತ್ರೆ ವಿದ್ಯುಕ್ತವಾಗಿ ಆರಂಭವಾಗಲಿದ್ದು ನಂತರ 62 ದಿನ ಅಯ್ಯಪ್ಪನ ದರ್ಶನಕ್ಕಾಗಿ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸಲಿದ್ದಾರೆ.ಶನಿವಾರ ನಸುಕಿನ

ನಾಳೆ ತೆರೆಯಲಿದೆ ಶಬರಿಮಲೆ ಸನ್ನಿಧಾನದ ಬಾಗಿಲು | ಶನಿವಾರದಿಂದ ಮಂಡಲ ಯಾತ್ರೆ ಶುರು Read More »

ಶಬರಿಮಲೆ ಯಾತ್ರೆಗೆ ದೇವಸ್ವಂ ಬೋರ್ಡ್‌ ಮಾರ್ಗಸೂಚಿ ಬಿಡುಗಡೆ

ಇರುಮಡಿ ಕಟ್ಟಿನಲ್ಲಿ ಈ ವಸ್ತುಗಳು ಇರಲೇಬಾರದು ಎಂದು ಸೂಚನೆ ಶಬರಿಮಲೆ : ಮಂಡಲ ಮತ್ತು ಮಕರ ವಿಳಕ್ಕು ಯಾತ್ರೆಗೈಯ್ಯುವ ಅಯ್ಯಪ್ಪ ಭಕ್ತರ ಇರುಮುಡಿಯಲ್ಲಿ ಏನೇನು ಇರಬೇಕು ಮತ್ತು ಇರಬಾರದು ಎಂಬುದರ ಕುರಿತು ಕೇರಳದ ದೇವಸ್ವಂ ಬೋರ್ಡ್‌ ಮಾರ್ಗಸೂಚಿಯೊಂದನ್ನು ಬಿಡುಗಡೆಗೊಳಿಸಿದೆ. ಶಬರಿಮಲೆಯ ಮುಖ್ಯ ಅರ್ಚಕ ಕಂಡರಾರು ರಾಜೀವಾರು ನೀಡಿದ ಸೂಚನೆ ಪ್ರಕಾರ ಈ ಮಾರ್ಗಸೂಚಿ ಹೊರಡಿಸಲಾಗಿದೆ ಎಂದು ದೇವಸ್ವಂ ಬೋರ್ಡ್‌ ಹೇಳಿಕೊಂಡಿದೆ.ಶಬರಿಮಲೆ ಯಾತ್ರೆಗೈಯ್ಯುವವರು ಇಡುಮುಡಿ ಹೊತ್ತುಕೊಂಡು ಸಾಗಬೇಕಾಗುತ್ತದೆ. ಇರುಮುಡಿಯನ್ನು ಮುಂದಿನ ಕಟ್ಟು ಮತ್ತು ಹಿಂದಿನ ಕಟ್ಟು ಎಂದು ಎರಡು

ಶಬರಿಮಲೆ ಯಾತ್ರೆಗೆ ದೇವಸ್ವಂ ಬೋರ್ಡ್‌ ಮಾರ್ಗಸೂಚಿ ಬಿಡುಗಡೆ Read More »

ಅಲ್‌ ಖೈದಾ ನಂಟಿನ ಶಂಕೆ : ಬಾಂಗ್ಲಾದೇಶ ಪ್ರಜೆಗಳಿಗೆ ಎನ್‌ಐಎ ಶೋಧ

ಕರ್ನಾಟಕ ಸೇರಿ ಒಂಬತ್ತು ರಾಜ್ಯಗಳಲ್ಲಿ ಎನ್‌ಐಎ ದಾಳಿ ಬೆಂಗಳೂರು : ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಅಲ್‌ ಖೈದಾ ಜಾಲವನ್ನು ಬಯಲಿಗೆಳೆಯುವ ನಿಟ್ಟಿನಲ್ಲಿ ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿ, ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಭಾರತವನ್ನು ಅಸ್ಥಿರಗೊಳಿಸಲು ಅಲ್​ ಖೈದಾ ಉಗ್ರ ಸಂಘಟನೆಯ ಸಂಚು ಮಾಡಿರುವ ಕುರಿತು ಖಚಿತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದಾರೆ.

ಅಲ್‌ ಖೈದಾ ನಂಟಿನ ಶಂಕೆ : ಬಾಂಗ್ಲಾದೇಶ ಪ್ರಜೆಗಳಿಗೆ ಎನ್‌ಐಎ ಶೋಧ Read More »

error: Content is protected !!
Scroll to Top