ದೇಶ

ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಬಳಕೆ ದೃಢ : ಕೋಟ್ಯಂತರ ಭಕ್ತರ ಮನಸ್ಸಿಗೆ ಘಾಸಿ

ತುಪ್ಪದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು, ಹಂದಿಯ ಕೊಬ್ಬು, ಪಾಮಾಯಿಲ್‌, ಸೋಯಾಬಿನ್‌, ಸೂರ್ಯಕಾಂತಿ ಎಣ್ಣೆ, ಮೆಕ್ಕೆಜೋಳ ಎಣ್ಣೆ ಬೆರಕೆ ತಿರುಪತಿ: ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾಡಿದ ಆರೋಪ ನಿಜ ಎನ್ನುವುದು ಲ್ಯಾಬ್‌ ಪರೀಕ್ಷೆಯಲ್ಲಿ ದೃಢಪಟ್ಟಿದೆ. ನಾಯ್ಡು ಹೇಳಿಕೆ ನಿನ್ನೆ ಇಡೀ ದೇಶದಲ್ಲಿ ಸಂಚಲನ ಉಂಟುಮಾಡಿತ್ತು. ತಿರುಪತಿ ತಿಮ್ಮಪ್ಪನ ಕೋಟ್ಯಂತರ ಭಕ್ತರ ಧಾರ್ಮಿಕ ಭಾವನೆಯ ಜೊತೆಗೆ ಹಿಂದಿನ ಆಂಧ್ರ ಪ್ರದೇಶ ಸರಕಾರ ಚೆಲ್ಲಾಟವಾಡಿದ್ದು […]

ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಬಳಕೆ ದೃಢ : ಕೋಟ್ಯಂತರ ಭಕ್ತರ ಮನಸ್ಸಿಗೆ ಘಾಸಿ Read More »

ಶಾಲೆಯಲ್ಲಿ ಈದ್‌ ಮಿಲಾದ್‌ ಆಚರಣೆ : ಪೋಷಕರ ಆಕ್ಷೇಪ

ಮಕ್ಕಳಿಗೆ ಅರಬ್‌ ಉಡುಪು ಹಾಕಿ ಕುಣಿಸಿದ್ದಕ್ಕೆ ಆಕ್ರೋಶ ಕಾರ್ಕಳ : ತಾಲೂಕಿನ ಸಚ್ಚರಿಪೇಟೆಯ ಖಾಸಗಿ ಶಾಲೆಯೊಂದರಲ್ಲಿ ಈದ್ ಮಿಲಾದ್ ಹಬ್ಬ ಆಚರಿಸಿದ ವಿಡಿಯೋ ವೈರಲ್‌ ಆದ ಬಳಿಕ ವಿವಾದ ಸೃಷ್ಟಿಯಾಗಿದೆ. ಸಚ್ಚರಿಪೇಟೆಯ ಲಯನ್ಸ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪ್ರವಾದಿ ಜನ್ಮದಿನಾಚರಣೆ ಪ್ರಯುಕ್ತ ಈದ್ ಮಿಲಾದ್ ಹಬ್ಬ ಆಚರಿಸಲಾಗಿತ್ತು. ಬಿಜೆಪಿ ಮುಖಂಡರೊಬ್ಬರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಇದರ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಅನೇಕ ಹಿಂದೂ ಮಕ್ಕಳ ಪೋಷಕರು ಶಾಲೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲೆಯಲ್ಲಿ ಈದ್‌ ಮಿಲಾದ್‌ ಆಚರಣೆ : ಪೋಷಕರ ಆಕ್ಷೇಪ Read More »

ಈತ ದೇಶದ ಶ್ರೀಮಂತ ಭಿಕ್ಷುಕ!

ಮುಂಬಯಿಯಲ್ಲಿ ಭಿಕ್ಷೆ ಬೇಡುವ ಈತನ ಬಳಿಯಿದೆ 7.5 ಕೋ. ರೂ. ಆಸ್ತಿ ಮುಂಬಯಿ : ಭಿಕ್ಷೆ ಬೇಡುವವರೆಲ್ಲ ಕಡುಬಡವರು, ಒಂದೊತ್ತಿನ ಊಟಕ್ಕೂ ಗತಿಯಿಲ್ಲದವರು ಎನ್ನುವುದು ಸಾಮಾನ್ಯವಾದ ಭಾವನೆ. ಬಹುತೇಕ ಭೀಕ್ಷುಕರು ಇದೇ ರೀತಿ ಇರುತ್ತಾರೆ. ಆದರೆ ಭಿಕ್ಷೆ ಬೇಡಿಯೇ ಕೋಟಿಗಟ್ಟಲೆ ಸಂಪತ್ತು ಗಳಿಸಿದವರೂ ಇದ್ದಾರೆ. ಈ ಪೈಕಿ ಮುಂಬಯಿಯಲ್ಲಿ ಭಿಕ್ಷೆ ಬೇಡುವ ಭರತ್‌ ಜೈನ್‌ ಎಂಬವರು ದೇಶದ ಅತ್ಯಂತ ಶ್ರೀಮಂತ ಭಿಕ್ಷುಕ ಎಂದು ಗುರುತಿಸಲ್ಪಟ್ಟಿದ್ದಾರೆ. ಇವರ ಒಟ್ಟು ಆಸ್ತಿ ಬರೋಬ್ಬರಿ 7.5 ಕೋ. ರೂ.! ಭರತ್‌ ಜೈನ್‌ಗೆ

ಈತ ದೇಶದ ಶ್ರೀಮಂತ ಭಿಕ್ಷುಕ! Read More »

ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಕೆ: ನಾಯ್ಡು ಆರೋಪ

ಕ್ಷೇತ್ರದ ಪಾವಿತ್ರ್ಯ ಕೆಡಿಸಲು ಪ್ರಯತ್ನಿಸಿದ್ದಾರೆ ಎಂದ ಆಂಧ್ರ ಸಿಎಂ ಅಮರಾವತಿ: ಕೋಟ್ಯಂತರ ಹಿಂದುಗಳು ಪರಮ ಪವಿತ್ರ ಎಂಬ ನಂಬಿಕೆಯಿಂದ ಸ್ವೀಕರಿಸುವ ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ಆರೋಪವೊಂದು ಭಾರಿ ಕೋಲಾಹಲ ಉಂಟು ಮಾಡಿದೆ. ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ ಬಳಿಕ ಈ ಕುರಿತು ದೇಶಾದ್ಯಂತ ಚರ್ಚೆ ಶುರುವಾಗಿದೆ. ಈ

ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಕೆ: ನಾಯ್ಡು ಆರೋಪ Read More »

ಇಂದಿನಿಂದ ಭಾರತ-ಬಾಂಗ್ಲಾದೇಶ ಮೊದಲ ಟೆಸ್ಟ್‌

ವಿಶ್ವ ಚಾಂಪಿಯನ್‌ಷಿಪ್‌ ಫೈನಲ್‌ಗೆ ಲಗ್ಗೆಯಿಡಲು ಮಹತ್ವದ ಸರಣಿ ಚೆನ್ನೈ : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿ ಇಂದಿನಿಂದ ಶುರುವಾಗಲಿದೆ. 5 ಪಂದ್ಯಗಳ ಈ ಸರಣಿಯಲ್ಲಿ ಮೊದಲು ಎರಡು ಟೆಸ್ಟ್ ಪಂದ್ಯಗಳನ್ನಾಡಲಾಗುತ್ತಿದ್ದು, ಇದಾದ ಬಳಿಕ ಟಿ20 ಸರಣಿ ನಡೆಯಲಿದೆ. ಈ ಸರಣಿಯ ಮೊದಲ ಟೆಸ್ಟ್ ಪಂದ್ಯ ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಗುರುವಾರದಿಂದ ಆರಂಭವಾಗಲಿದ್ದು, ಎರಡನೇ ಪಂದ್ಯ ಸೆಪ್ಟೆಂಬರ್ 27ರಿಂದ ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆಯಲಿದೆ.ಈ ಎರಡು ಟೆಸ್ಟ್ ಪಂದ್ಯಗಳು ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್​ನ

ಇಂದಿನಿಂದ ಭಾರತ-ಬಾಂಗ್ಲಾದೇಶ ಮೊದಲ ಟೆಸ್ಟ್‌ Read More »

ಕೇರಳದ ಮಲಪ್ಪುರಂನಲ್ಲಿ ಮಾಸ್ಕ್ ಕಡ್ಡಾಯ, ಶಾಲೆಗಳಿಗೆ ರಜೆ ಘೋಷಣೆ | ನಿಫಾ ವೈರಸ್‍ ಗೆ ಇಬ್ಬರು ಬಲಿ

ಕೇರಳ: ನಿಫಾ ವೈರಸ್ ಪರಿಣಾಮ ಕೇರಳದ ಮಲಪ್ಪುರಂ ಜಿಲೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ಈ ಜಿಲ್ಲೆಯ ಹಲವು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಆದೇಶ ಹೊರಡಿಸಿದೆ. ಕೇರಳದಲ್ಲಿ ನಿಫಾ ವೈರಸ್‌ನಿಂದ 2 ಸಾವು ಖಚಿತವಾಗುತ್ತಿದ್ದಂತೆ ಕೇರಳ ಸರ್ಕಾರ ಅಲರ್ಟ್ ಆಗಿದೆ. ಬೆಳಗ್ಗೆ 10 ಗಂಟೆಯಿಂದ 7 ಗಂಟೆ ವರೆಗೆ ಸಾರ್ವಜನಿಕರಿಗೆ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಬಳಿಕ ಸಾರ್ವಜನಿಕ ಪ್ರದೇಶಗಳಲ್ಲಿ ಭೇಟಿ ಸೇರಿದಂತೆ ಜನದಟ್ಟಣೆ ನಿಷೇಧಿಸಿದೆ. ಕೆಲ ಅಗತ್ಯ ವಸ್ತುಗಳಾದ ಹಾಲು ಸೇರಿದಂತೆ ಇತರ

ಕೇರಳದ ಮಲಪ್ಪುರಂನಲ್ಲಿ ಮಾಸ್ಕ್ ಕಡ್ಡಾಯ, ಶಾಲೆಗಳಿಗೆ ರಜೆ ಘೋಷಣೆ | ನಿಫಾ ವೈರಸ್‍ ಗೆ ಇಬ್ಬರು ಬಲಿ Read More »

ಜಮ್ಮು-ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತದಾನ

ಕಣಿವೆ ರಾಜ್ಯದಲ್ಲಿ ಹತ್ತು ವರ್ಷದ ಬಳಿಕ ವಿಧಾನಸಭೆ ಚುನಾವಣೆ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹತ್ತು ವರ್ಷಗಳ ಬಳಿಕ ಇದೇ ಮೊದಲ ಬಾರಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ರಾಜ್ಯದ 90 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.ಜಮ್ಮು ಮತ್ತು ಕಾಶ್ಮೀರದಲ್ಲಿ 2014ರ ಬಳಿಕ ಮೊದಲ ಅಸೆಂಬ್ಲಿ ಚುನಾವಣೆ ನಡೆಯುತ್ತಿದೆ. 2019ರಲ್ಲಿ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ತೆಗೆದುಹಾಕಿದ ನಂತರ ರಾಜ್ಯದಲ್ಲಿ ಮೊದಲ ಬಾರಿ ವಿಧಾನಸಭೆ ಚುನಾವಣೆ

ಜಮ್ಮು-ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತದಾನ Read More »

ಆತಿಷಿ ಮರ್ಲೆನಾ ದಿಲ್ಲಿ ನೂತನ ಮುಖ್ಯಮಂತ್ರಿ

ಹೊಸದಿಲ್ಲಿ: ದಿಲ್ಲಿಯ ನೂತನ ಮುಖ್ಯಮಂತ್ರಿಯಾಗಿ ಆತಿಷಿ ಮರ್ಲೆನಾ ಆಯ್ಕೆಯಾಗಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಬಳಿಕ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದ ಅರವಿಂದ ಕೇಜ್ರಿವಾಲ್‌ ಇಂದು ನಡೆದ ಮುಖ್ಯಮಂತ್ರಿ ಆಯ್ಕೆ ಸಭೆಯಲ್ಲಿ ಆತಿಷಿ ಮರ್ಲೆನಾ ಅವರ ಹೆಸರನ್ನು ಪ್ರಾಸ್ತಾವಿಸಿದ್ದು ಅದು ವಿರೋಧವಿಲ್ಲದೆ ಅಂಗೀಕಾರಗೊಂಡಿದೆ. ಈ ಮೂಲಕ ಮತೊಮ್ಮೆ ದಿಲ್ಲಿಗೆ ಮಹಿಳಾ ಮುಖ್ಯಮಂತ್ರಿಯೊಬ್ಬರು ಲಭಿಸಿದಂತಾಗಿದೆ. ಈ ಮೊದಲು ಬಿಜೆಪಿಯ ಸುಷ್ಮಾ ಸ್ವರಾಜ್‌ ಮತ್ತು ಕಾಂಗ್ರೆಸ್‌ನ ಶೀಲಾ ದೀಕ್ಷಿತ್‌ ದಿಲ್ಲಿ ಮುಖ್ಯಮಂತ್ರಿಯಾಗಿದ್ದರು.ಕೇಜ್ರಿವಾಲ್‌ ಸರಕಾರದಲ್ಲಿ ಹಣಕಾಸು, ಶಿಕ್ಷಣ ಮತ್ತಿತರ ಮಹತ್ವದ

ಆತಿಷಿ ಮರ್ಲೆನಾ ದಿಲ್ಲಿ ನೂತನ ಮುಖ್ಯಮಂತ್ರಿ Read More »

ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನ ಪರಿಗಣನೆ : ವಿ.ಸೋಮಣ್ಣ

ವಿಲೀನಗೊಳಿಸಿ ರೈಲ್ವೆ ಸೇವೆ ಸುಧಾರಿಸಲು ಕರಾವಳಿ ಜನರ ಬೇಡಿಕೆ ಬೆಂಗಳೂರು: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಬೇಕೆಂಬ ಕರಾವಳಿ ಭಾಗದ ಜನರ ಬಹುಕಾಲದ ಬೇಡಿಕೆ ಈಡೇರಲಿದೆ. ರೈಲ್ವೆ ಖಾತೆಯ ಸಹಾಯಕ ಸಚಿವ ವಿ.ಸೋಮಣ್ಣ ಅವರು ಈ ಕುರಿತು ಸುಳಿವು ನೀಡಿದ್ದಾರೆ.ಜನರಿಗೆ ನೀಡುವ ಸೇವೆಗಳನ್ನು ಸುಧಾರಿಸುವುದಕ್ಕಾಗಿ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ವಿ.ಸೋಮಣ್ಣ ಹೇಳಿದ್ದಾರೆ. ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಪುಣೆ-ಹುಬ್ಬಳ್ಳಿ ನಡುವಣ ವಂದೇ ಭಾರತ್

ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನ ಪರಿಗಣನೆ : ವಿ.ಸೋಮಣ್ಣ Read More »

ಪ್ರಧಾನಿ ನರೇಂದ್ರ ಮೋದಿಗಿಂದು ಹುಟ್ಟುಹಬ್ಬ ಸಂಭ್ರಮ

ದೇಶಾದ್ಯಂತ ಸೇವಾ ಕಾರ್ಯಗಳು, ಬಡವರಿಗೆ ನೆರವು ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಗೆ ಇಂದು 74ನೇ ಹುಟ್ಟುಹಬ್ಬದ ಸಂಭ್ರಮ. ಬಿಜೆಪಿ ನಾಯಕರು, ಹಿತೈಷಿಗಳು ಬೆಳಗ್ಗಿನಿಂದಲೇ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಲು ಪ್ರಾರಂಭಿಸಿದ್ದಾರೆ. ಹುಟ್ಟುಹಬ್ಬದಂದು ಮೋದಿ ಯಾವುದೇ ಆಚರಣೆ ಅಥವಾ ವಿಶೇಷ ಕಾರ್ಯಕ್ರಮಗಳನ್ನು ಮಾಡುವುದಿಲ್ಲ. ಆದರೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಮತ್ತು ಮೋದಿ ಅಭಿಮಾನಿಗಳು ವಿವಿಧ ಸೇವಾ ಕಾರ್ಯಗಳ ಮೂಲಕ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿಸುತ್ತಾರೆ. ಸೇವಾ ಪಾಕ್ಷಿಕ, ಸೇವಾ ಪರ್ವ, ಸ್ವಚ್ಛತೆ, ಬಡವರಿಗೆ ನೆರವು, ರಕ್ತದಾನ ಮುಂತಾದ ಸಾಮಾಜಿಕ ಸೇವೆಗಳು ಮೋದಿ

ಪ್ರಧಾನಿ ನರೇಂದ್ರ ಮೋದಿಗಿಂದು ಹುಟ್ಟುಹಬ್ಬ ಸಂಭ್ರಮ Read More »

error: Content is protected !!
Scroll to Top