ದೇಶ

ಮಾಟಮಂತ್ರ ಮಾಡಿದ ಶಂಕೆಯಲ್ಲಿ ಒಂದೇ ಕುಟುಂಬದ ಐವರ ಹತ್ಯೆ

ರಾಯ್‌ಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ವಾಮಾಚಾರ ನಡೆಸಿದ ಶಂಕೆಯಲ್ಲಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು. ಈ ಕುಟುಂಬ ವಾಮಾಚಾರ ನಡೆಸುತ್ತಿದ್ದು, ಇದರಿಂದ ಗ್ರಾಮಸ್ಥರಿಗೆ ಹಾನಿಯಾಗುತ್ತಿದೆ ಭಾವಿಸಿ ಐವರನ್ನು ಥಳಿಸಿ ಹತ್ಯೆ ಮಾಡಿದ್ದಾರೆ. ಸೆಪ್ಟೆಂಬರ್ 15ರಂದು ಗ್ರಾಮದ ಸುಮಾರು 15 ಜನರು ಮನೆಗೆ ನುಗ್ಗಿ ಕುಟುಂಬ ಸದಸ್ಯರೆಲ್ಲರ ಮೇಲೆ ಒಬ್ಬೊಬ್ಬರಾಗಿ ಹಲ್ಲೆ ನಡೆಸಿ ಸಾಯಿಸಿದ್ದಾರೆ ಎನ್ನಲಾಗಿದೆ. ದೊಣ್ಣೆ, ಕೊಡಲಿಯಿಂದ ತೀವ್ರವಾಗಿ ಥಳಿಸಲಾಗಿದೆ. ಬಳಿಕ ಅಕ್ಕಪಕ್ಕದ […]

ಮಾಟಮಂತ್ರ ಮಾಡಿದ ಶಂಕೆಯಲ್ಲಿ ಒಂದೇ ಕುಟುಂಬದ ಐವರ ಹತ್ಯೆ Read More »

ರಾಹುಲ್‌ ಗಾಂಧಿ ನಂಬರ್‌ ಒನ್‌ ಭಯೋತ್ಪಾದಕ ಎಂದ ಕೇಂದ್ರ ಸಚಿವ

ಕಾಂಗ್ರೆಸ್‌ ನಾಯಕರು ಕೆಂಡಾಮಂಡಲ ಹೊಸದಿಲ್ಲಿ: ರಾಹುಲ್‌ ಗಾಂಧಿ ಭಾರತದ ನಂಬರ್‌ 1 ಭಯೋತ್ಪಾದಕ. ಆತ ಭಾರತೀಯನಲ್ಲ ಎಂದು ಕೇಂದ್ರ ಸಚಿವ ರವನೀತ್‌ ಸಿಂಗ್‌ ಬಿಟ್ಟು ಹೇಳಿರುವುದು ಕಾಂಗ್ರೆಸಿಗರನ್ನು ಕೆರಳಿಸಿದೆ. ಅವರ ಹೇಳಿಕೆಯನ್ನು ದುರದೃಷ್ಟಕರ ಎಂದು ಬಣ್ಣಿಸಿರುವ ಕಾಂಗ್ರೆಸ್‌ ನಾಯಕರು ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿಖ್ಖರ ಕುರಿತು ನೀಡಿದ್ದ ಹೇಳಿಕೆ ಖಂಡಿಸುವ ಭರದಲ್ಲಿ ಕೇಂದ್ರ ಸಚಿವ ರವನೀತ್‌ ನಂಬರ್‌ 1 ಭಯೋತ್ಪಾದಕ ಎಂದು ಟೀಕಿಸಿದ್ದಾರೆ. ರಾಹುಲ್‌

ರಾಹುಲ್‌ ಗಾಂಧಿ ನಂಬರ್‌ ಒನ್‌ ಭಯೋತ್ಪಾದಕ ಎಂದ ಕೇಂದ್ರ ಸಚಿವ Read More »

ಮುಂದಿನ ಅಧಿವೇಶನದಲ್ಲೇ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ?

ಹೊಸದಿಲ್ಲಿ: ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯೊಂದನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅನುಷ್ಠಾನಕ್ಕೆ ತರಲು ಹೊರಟಿದೆ. ಒಂದು ದೇಶ ಒಂದು ಚುನಾವಣೆ ಮಸೂದೆಯನ್ನು ಮುಂಬರುವ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಸರ್ಕಾರ ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ‌. ಕಳೆದ ಮಾರ್ಚ್‌ನಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಒಂದು ದೇಶ ಒಂದು ಚುನಾವಣೆ ಕಾರ್ಯಸಾಧ್ಯತೆ ಬಗ್ಗೆ ವರದಿ ನೀಡಿತ್ತು. ಯಾವಾಗಿಂದ ಆರಂಭಿಸಬೇಕು ಎಂದು ತಿಳಿಸದೆ ಇದನ್ನು ಹೇಗೆ ಅನುಷ್ಠಾನಕ್ಕೆ ತರಬಹುದು ಎಂದು

ಮುಂದಿನ ಅಧಿವೇಶನದಲ್ಲೇ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ? Read More »

ಮೂರು ಅಂತಸ್ತಿನ ಕಟ್ಟಡ ಕುಸಿತ : 10 ಮಂದಿ ಸಾವು

ಲಖನೌ: ಭಾರಿ ಮಳೆಯಿಂದಾಗಿ ಮೂರು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ 10 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನ ಜಾಕಿರ್ ಕಾಲೋನಿಯಲ್ಲಿ ನಡೆದಿದೆ.ಇದುವರೆಗೆ ಅಧಿಕಾರಿಗಳು ಒಟ್ಟು ಐವರನ್ನು ಅವಶೇಷಗಳಿಂದ ರಕ್ಷಿಸಿದ್ದಾರೆ. ಬಲಿಯಾದ 10 ಮಂದಿಯಲ್ಲಿ 1 ವರ್ಷದ ಮಗು ಸೇರಿದಂತೆ ನಾಲ್ವರು ಮಕ್ಕಳಿದ್ದರು ಎಂದು ವರದಿಯಾಗಿದೆ.ಮಳೆಯಿಂದಾಗಿ ಬಿಲ್ಡಿಂಗ್‌ ಕುಸಿದಿದೆ ಎಂದು ಮೀರತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ದೀಪಕ್ ಮೀನಾ ತಿಳಿಸಿದ್ದಾರೆ. ಭಾರಿ ಮಳೆಯ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ

ಮೂರು ಅಂತಸ್ತಿನ ಕಟ್ಟಡ ಕುಸಿತ : 10 ಮಂದಿ ಸಾವು Read More »

ರಾಜಸ್ಥಾನದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಆರು ಮಂದಿ ಮೃತ್ಯು

ನವದೆಹಲಿ: ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಕಾರೊಂದು  ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಜೈಪುರ ರಾಷ್ಟ್ರೀಯ ಹೆದ್ದಾರಿಯ ಹಿಂದೋಲಿ ಬಳಿ ಇಂದು ಮುಂಜಾನೆ 4:30 ರ ಸುಮಾರಿಗೆ ಯಾತ್ರಿಕರು – ಉತ್ತರ ಪ್ರದೇಶದ ದೇವಾಸ್ ನಿವಾಸಿಗಳು – ಸಿಕಾರ್ ಜಿಲ್ಲೆಯ ಖತು ಶ್ಯಾಮ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಮಾರುತಿ ಸುಜುಕಿ ಇಕೋ ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು

ರಾಜಸ್ಥಾನದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಆರು ಮಂದಿ ಮೃತ್ಯು Read More »

ಕಾಶ್ಮೀರ : ಇಬ್ಬರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಉಗ್ರರ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇನ್ನಿಬ್ಬರಿಗೆ ಗಾಯಗಳಾಗಿವೆ.ಇನ್ನೊಂದು ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ನಿರ್ದಿಷ್ಟ ಮಾಹಿತಿಯ ಆಧಾರದಲ್ಲಿ ಜಮ್ಮು-ಕಾಶ್ಮೀರದ ಪೊಲೀಸರು ಹಾಗೂ ಸೇನೆ ಕಿಶ್ತ್ವಾರ್ ಜಿಲ್ಲೆಯ ಚಾಟ್ರೂ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿತ್ತು. ದಿನವಿಡೀ ಶೋಧಕಾರ್ಯ ಮುಂದುವರಿದಿದ್ದು, ಮಧ್ಯಾಹ್ನ 3.30ರ ಸುಮಾರಿಗೆ ಅಡಗಿರುವ ಉಗ್ರರನ್ನು ಪತ್ತೆಹಚ್ಚಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.ಉಗ್ರರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದವರ ವಿರುದ್ಧ ಗುಂಡಿನ ದಾಳಿ ನಡೆಸಿದ್ದಾರೆ. ಆಗ ನಡೆದ ಕಾಳಗದಲ್ಲಿ

ಕಾಶ್ಮೀರ : ಇಬ್ಬರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ Read More »

ದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

5 ತಿಂಗಳ ಸೆರೆವಾಸd ಬಳಿಕ ಸಿಕ್ಕಿದ ರಿಲೀಫ್‌ ಹೊಸದಿಲ್ಲಿ : ಮದ್ಯನೀತಿ ಹಗರಣದಲ್ಲಿ ಕಳೆದ ಸುಮಾರು ಐದು ತಿಂಗಳಿಂದ ಜೈಲುಪಾಲಾಗಿದ್ದ ದಿಲ್ಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್​ ಕೊನೆಗೂ ಜಾಮೀನು ಸಿಕ್ಕಿದೆ. 156 ದಿನಗಳ ನಂತರ ಸಿಎಂ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಈ ತೀರ್ಪು ನೀಡಿದೆ.ಮದ್ಯ ನೀತಿ ಹಗರಣದಲ್ಲಿ ಬಂಧಿತರಾಗಿರುವ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ತನ್ನ

ದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್‌ಗೆ ಜಾಮೀನು ಮಂಜೂರು Read More »

ಹಿರಿಯರ ಆಯುಷ್ಮಾನ್‌ ನೋಂದಣಿಗೆ ಆ್ಯಪ್

70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯರಿಗೆ 5 ಲ.ರೂ. ತನಕ ಉಚಿತ ಚಿಕಿತ್ಸೆ ಹೊಸದಿಲ್ಲಿ: ಎಪ್ಪತ್ತು ವರ್ಷ ಮೇಲ್ಪಟ್ಟ ಎಲ್ಲರನ್ನು ಅವರ ಆದಾಯದ ತಾರತಮ್ಯವಿಲ್ಲದೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ ವ್ಯಾಪ್ತಿಗೆ ತರಲಾಗುತ್ತಿದೆ. ಆರೋಗ್ಯ ಸಚಿವಾಲಯದಿಂದ ಪಡೆದ ಮಾಹಿತಿಯ ಪ್ರಕಾರ, ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ ಪ್ರಯೋಜನಗಳನ್ನು ಪಡೆಯಲು 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಮೊಬೈಲ್ ಅಪ್ಲಿಕೇಶನ್ ಮೂಲಕ ಅರ್ಜಿ ಸಲ್ಲಿಸಬಹುದು. ಇನ್ನು ಒಂದು ತಿಂಗಳಲ್ಲಿ ಆ್ಯಪ್ ಬಿಡುಗಡೆಯಾಗಲಿದ್ದು, ಕೇಂದ್ರ ಸರ್ಕಾರ ಕೂಡ

ಹಿರಿಯರ ಆಯುಷ್ಮಾನ್‌ ನೋಂದಣಿಗೆ ಆ್ಯಪ್ Read More »

ಸೋನಿಯಾ, ರಾಹುಲ್‌ ವಿರುದ್ಧ ಅವಹೇಳನಕಾರಿ ಪೋಸ್ಟ್‌ : ಬಾಂಗ್ಲಾದೇಶದವನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಬಾಂಗ್ಲಾದೇಶ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ಎಂಬಾತನ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಸಲಾಲುದ್ದೀನ್ ಸುಹೇಬ್, ಪಾಕಿಸ್ಥಾನಿ ಐಎಸ್​ ಏಜೆಂಟ್ ರೀತಿ ಬಿಂಬಿಸಿ ಪೋಸ್ಟ್ ಹಾಕಿದ್ದ. ಕೋಮು ಸೌಹಾರ್ದತೆಗೆ ಧಕ್ಕೆ, ಶಾಂತಿ ಕದಡುವ ಪ್ರಯತ್ನಿಸಿದ ಆರೋಪದಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.‘ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಅವರು ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ

ಸೋನಿಯಾ, ರಾಹುಲ್‌ ವಿರುದ್ಧ ಅವಹೇಳನಕಾರಿ ಪೋಸ್ಟ್‌ : ಬಾಂಗ್ಲಾದೇಶದವನ ವಿರುದ್ಧ ಎಫ್‌ಐಆರ್‌ Read More »

ಮಮತಾ ಬ್ಯಾನರ್ಜಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ ರಾಜ್ಯಪಾಲರು

ಮುಖ್ಯಮಂತ್ರಿಯನ್ನು ಲೇಡಿ ಮ್ಯಾಕ್‌ಬೆತ್‌ ಎಂದು ಕರೆದ ಗವರ್ನರ್‌ ಕೋಲ್ಕತ : ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಳಿಕ ಜನರ ತೀವ್ರ ಆಕ್ರೋಶ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಅಲ್ಲಿನ ರಾಜ್ಯಪಾಲ ಸಿ.ವಿ.ಆನಂದ ಬೋಸ್‌ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.ಮಮತಾ ಬ್ಯಾನರ್ಜಿಯನ್ನು ತೀಕ್ಷ್ಣವಾಗಿ ಟೀಕಿಸಿರುವ ರಾಜ್ಯಪಾಲರು ಮುಖ್ಯಮಂತ್ರಿಯನ್ನು ಪಶ್ಚಿಮ ಬಂಗಾಳದ ಲೇಡಿ ಮ್ಯಾಕ್‌ಬೆತ್‌ ಎಂದು ಕರೆದು ಮುಖ್ಯಮಂತ್ರಿ ಜೊತೆ ಯಾವುದೇ ಸಾಮಾಜಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.ಪಶ್ಚಿಮ ಬಂಗಾಳದಲ್ಲಿ ಆರೋಗ್ಯ ಸಚಿವರೇ ಗೃಹ ಸಚಿವರಂತೆ

ಮಮತಾ ಬ್ಯಾನರ್ಜಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ ರಾಜ್ಯಪಾಲರು Read More »

error: Content is protected !!
Scroll to Top