ದೇಶ

ದಲಿತ ಯುವಕನ ಮೇಲೆ ಹಲ್ಲೆಗೆ ಮುಂದಾದ ಎಂ ಇಲೆವೆನ್ ಕಂಪನಿ ಎಂಡಿ | ಮಾಜಿ ಸಚಿವ ಸಹಿತ ಪೋಲಿಸರ ಎದುರು ದರ್ಪ ತೋರಿದ ಎಂಡಿ

ನಂದಿಕೂರು ದೇವರಕಾಡು ನಾಶ ಪಡಿಸಿದ ಪ್ರದೇಶದಲ್ಲಿ ಜನ ವಿರೋಧಿಯಾಗಿ ಅಸ್ತಿತ್ವಕ್ಕೆ ಬರಲು ಹವಣಿಸುತ್ತಿರುವ ಎಂ ಇಲೆವೆನ್ ಕಂಪನಿಯ ಸಾಧಕ ಬಾಧಕಗಳನ್ನು ತಿಳಿಯಲು ಕಂಪನಿಗೆ ಮಾಜಿ ಸಚಿವರ ತಂಡದೊಂದಿಗೆ ಹೋಗಿದ್ದ ದಲಿತ ಮುಖಂಡರೊರ್ವರಿಗೆ ಕಂಪನಿಯ ಮಾಲಕ ಎನ್ನಲಾದ ವ್ಯಕ್ತಿ ಹಲ್ಲೆ ನಡೆಸಲು ಮುಂದಾದ ಘಟನೆ ನಡೆದಿದೆ. ಸಾರ್ವಜನಿಕ ಸಭೆಯನ್ನು ನಡೆಸದೆ ಸ್ಥಳೀಯರಿಗೆ ಕಂಪನಿಯ ಸಾಧಕ ಬಾಧಕಗಳನ್ನು ತಿಳಿಸದೆ ಏಕಾಏಕಿ ತಲೆ ಎತ್ತಲು ಮುಂದಾಗಿರುವ ಬಯೋ ಡಿಸೇಲ್ ಉತ್ಪಾದನಾ ಕಂಪನಿ ಇದಾಗಿದ್ದು, ಇಲ್ಲಿ ಅಭದ್ರತೆ ಕಾಡುತ್ತಿದೆ. ಕಂಪನಿಯಿಂದ ಹೊರ ಬಿಡುವ […]

ದಲಿತ ಯುವಕನ ಮೇಲೆ ಹಲ್ಲೆಗೆ ಮುಂದಾದ ಎಂ ಇಲೆವೆನ್ ಕಂಪನಿ ಎಂಡಿ | ಮಾಜಿ ಸಚಿವ ಸಹಿತ ಪೋಲಿಸರ ಎದುರು ದರ್ಪ ತೋರಿದ ಎಂಡಿ Read More »

ರಷ್ಯಾದಲ್ಲಿ ಚರ್ಚ್, ಪ್ರಾರ್ಥನಾ ಮಂದಿರಗಳ ಮೇಲೆ ಉಗ್ರರ ಅಟ್ಟಹಾಸ : 15 ಮಂದಿ ಮೃತ್ಯು

ಮಾಸ್ಕೊ: ರಷ್ಯಾದ ಮೇಲೆ ಉಗ್ರ ದಾಳಿಯಾಗಿದೆ. ಉಗ್ರರು ಯಹೂದಿಗಳ ಪ್ರಾರ್ಥನಾ ಮಂದಿರ ಹಾಗೂ ಎರಡು ಆರ್ಥಡಾಕ್ಸ್ ಚರ್ಚ್ ಮೇಲೆ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳ ಮೇಲೂ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ಚರ್ಚ್ ಪಾದ್ರಿಯ ಶಿರಚ್ಛೇದ ಮಾಡಿದ್ದಾರೆ. ಭೀಕರ ದಾಳಿಯಲ್ಲಿ ಪಾದ್ರಿ, ಪೊಲೀಸರು ಸೇರಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. 40ಕ್ಕೂ ಹೆಚ್ಚು ಮಂದಿಯನ್ನು ಉಗ್ರರು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ. ಉತ್ತರ ರಷ್ಯಾದ ಕೌಕಾಸ್ ವಲಯದಲ್ಲಿ ಈ ದಾಳಿ ನಡೆದಿದೆ. ಪ್ರತಿ ದಾಳಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.

ರಷ್ಯಾದಲ್ಲಿ ಚರ್ಚ್, ಪ್ರಾರ್ಥನಾ ಮಂದಿರಗಳ ಮೇಲೆ ಉಗ್ರರ ಅಟ್ಟಹಾಸ : 15 ಮಂದಿ ಮೃತ್ಯು Read More »

ಇಂದಿನಿಂದ ಸಂಸತ್ತಿನ ಅಧಿವೇಶನ

ಹೊಸದಿಲ್ಲಿ : ಹದಿನೆಂಟನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ.  ಜುಲೈ 3ರವರೆಗೆ ನಡೆಯಲಿರುವ ಅಧಿವೇಶನದ ಮೊದಲ ಎರಡು ದಿನಗಳಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಬುಧವಾರ ನಡೆಯಲಿದ್ದು, ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನೀಟ್-ಯುಜಿ ಪತ್ರಿಕೆ ಸೋರಿಕೆ, ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಮುಂದೂಡಿಕೆ ವಿಚಾರದಲ್ಲಿ ಸರ್ಕಾರದ ಮೇಲೆ ಮುಗಿಬೀಳಲು ಪ್ರತಿಪಕ್ಷಗಳು ತಂತ್ರ ರೂಪಿಸಿದ್ದು, ಮೊದಲ ದಿನವೇ ಗದ್ದಲ ನಡೆಯುವ ಸಾಧ್ಯತೆ

ಇಂದಿನಿಂದ ಸಂಸತ್ತಿನ ಅಧಿವೇಶನ Read More »

ಸರಕಾರಿ ನೌಕರರು ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗದಿದ್ದಲ್ಲಿ‌ ಅರ್ಧ ದಿನ ಸಂಬಳ ಕಡಿತ l ಕೇಂದ್ರದಿಂದ ಸುತ್ತೋಲೆ

ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಚಾಟೀ ಬೀಸಿದೆ. ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳು ಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು ದಾಖಲಿಸಲು ಸುತ್ತೊಲೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆ ವರೆಗೆ ತೆರೆದಿರುತ್ತವೆ. ಆದರೆ ಕಿರಿಯ ಹಂತದ ಉದ್ಯೋಗಿಗಳು ತಡವಾಗಿ ಬರುವುದು ಮತ್ತು ಬೇಗನೆ ಹೊರಡುವುದು ಸಹಜವಾಗಿದೆ. ಇದರಿಂದ ಸಾರ್ವಜನಿಕ ಕೆಲಸಗಳು ಸೇರಿದಂತೆ, ಜನರಿಗೆ ಅನಾನುಕೂಲವಾಗಿದೆ. ಈ ಹಿನ್ನೆಲೆಯಲ್ಲಿ ಹಾಜರಾತಿಯನ್ನು

ಸರಕಾರಿ ನೌಕರರು ಕಚೇರಿಗೆ ಸರಿಯಾದ ಸಮಯಕ್ಕೆ ಹಾಜರಾಗದಿದ್ದಲ್ಲಿ‌ ಅರ್ಧ ದಿನ ಸಂಬಳ ಕಡಿತ l ಕೇಂದ್ರದಿಂದ ಸುತ್ತೋಲೆ Read More »

ಇಂದು ನಿಗದಿ ಪಡಿಸಿದ್ದ ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ

ನವದೆಹಲಿ : ರಾಷ್ಟ್ರೀಯ ಪರೀಕ್ಷಾ ಮಂಡಳಿ ಇಂದು ನಿಗದಿ ಪಡಿಸಿದ್ದ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ. ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ನೀಟ್-ಯುಜಿ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮುಖ್ಯಸ್ಥ ಸುಬೋದ್ ಕುಮಾರ್ ಸಿಂಗ್ ಅವರನ್ನ ಶನಿವಾರ ರಾತ್ರಿ ಹುದ್ದೆಯಿಂದ ವಜಾಗೊಳಿಸಲಾಗಿದೆ. ಇನ್ನು 1985ರ ಬ್ಯಾಚ್ ನಿವೃತ್ತ ಅಧಿಕಾರಿ ಪ್ರದೀಪ್ ಸಿಂಗ್ ಕರೋಲಾ ಅವರನ್ನು ನಿಯಮಿತ ಮುಖ್ಯಸ್ಥರನ್ನು ನೇಮಿಸುವವರೆಗೆ ಅಥವಾ

ಇಂದು ನಿಗದಿ ಪಡಿಸಿದ್ದ ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ Read More »

ರಾಮ್ ಲಲ್ಲಾ ಪ್ರತಿಮೆ ಪ್ರತಿಷ್ಠಾಪನೆ ಮಾಡಿದ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ಇನ್ನಿಲ್ಲ

ಅಯೋಧ್ಯೆ : ರಾಮಮಂದಿರದಲ್ಲಿ ರಾಮ್ ಲಲ್ಲಾ ಪ್ರತಿಮೆ ಪ್ರತಿಷ್ಠಾಪನೆ ನೆರವೇರಿಸಿದ್ದ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ (86) ದೀರ್ಘಕಾಲದಿಂದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಲಕ್ಷ್ಮೀಕಾಂತ್ ದೀಕ್ಷಿತ್ ಅವರು ವಾರಣಾಸಿಯ ಮೀರ್ ಘಾಟ್ ನ ಸಾಂಗೋದ್ ಕಾಲೇಜಿನಲ್ಲಿ ಹಿರಿಯ ಪ್ರಾಧ್ಯಾಪಕರಾಗಿದ್ದರು. ಆಚಾರ್ಯ ಲಕ್ಷ್ಮೀಕಾಂತ್ ಅವರು ಕಾಶಿಯ ಯಜುರ್ವೇದದ ಶ್ರೇಷ್ಠ ವಿದ್ವಾಂಸರಲ್ಲಿ ಒಬ್ಬರಾಗಿದ್ದು, ಆರಾಧನೆಯಲ್ಲೂ ಪರಿಣಿತರಾಗಿದ್ದರು. ಅವರು ತಮ್ಮ ಚಿಕ್ಕಪ್ಪ ಗಣೇಶ್ ದೀಕ್ಷಿತ್ ಭಟ್ ಅವರಿಂದ ವೇದಗಳು ಮತ್ತು ಆಚರಣೆಗಳಲ್ಲಿ ದೀಕ್ಷೆ ಪಡೆದು ಬಳಿಕ ಅವರ ಕುಟುಂಬವು ಹಲವಾರು ತಲೆಮಾರುಗಳ ಹಿಂದೆ ಕಾಶಿಯಲ್ಲಿ

ರಾಮ್ ಲಲ್ಲಾ ಪ್ರತಿಮೆ ಪ್ರತಿಷ್ಠಾಪನೆ ಮಾಡಿದ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ಇನ್ನಿಲ್ಲ Read More »

ಜಮ್ಮು-ಕಾಶ್ಮೀರದ ದಾಲ್ ಸರೋವರದಲ್ಲಿ ಪ್ರಧಾನಿ ಮೋದಿಯಿಂದ ಯೋಗ ಪ್ರದರ್ಶನ | 7 ಸಾವಿರ ಮಂದಿ ಪಾಲ್ಗೊಳ್ಳುವ ಮೂಲಕ ಯೋಗ ಪ್ರದರ್ಶನ

ಜಮ್ಮು-ಕಾಶ್ಮೀರ: 10ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ‌ಜಮ್ಮು ಮತ್ತು ಕಾಶ್ಮೀರದ ದಾಲ್‌ ಸರೋವರ ತೀರದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶಿಸಿದರು. ಈ ಬಾರಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ವಸ್ತು ವಿಷಯದಡಿ ಆಚರಿಸಲಾಗುತ್ತಿದ್ದು, ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಉದ್ದೇಶವಾಗಿದೆ. 3ನೇ ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಜಮ್ಮು

ಜಮ್ಮು-ಕಾಶ್ಮೀರದ ದಾಲ್ ಸರೋವರದಲ್ಲಿ ಪ್ರಧಾನಿ ಮೋದಿಯಿಂದ ಯೋಗ ಪ್ರದರ್ಶನ | 7 ಸಾವಿರ ಮಂದಿ ಪಾಲ್ಗೊಳ್ಳುವ ಮೂಲಕ ಯೋಗ ಪ್ರದರ್ಶನ Read More »

ಹಳೆಯ ಕಟ್ಟಡ ಹಠಾತ್ತನೆ ಕುಸಿತ | ಹಲವರು ಗಂಭೀರ | ಮೂವರು ಸಿಲುಕಿಕೊಂಡಿರುವ ಶಂಕೆ

ಮಡಿಕೇರಿ : ಹಳೆಯ ಕಟ್ಟಡವೊಂದು ಹಠಾತ್ತನೆ ಕುಸಿದು ಬಿದ್ದಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪ ಪಟ್ಟಣದಲ್ಲಿ ಇಂದು ನಡೆದಿದೆ. ಇಂದು ಮಧ್ಯಾಹ್ನ ಕಟ್ಟಡ ಕುಸಿದುಬಿದ್ದು ನೆಲಸಮಗೊಂಡಿದೆ. ಅಗ್ನಿ ಶಾಮಕದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೂವರನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವವರನ್ನು ಮೈಸೂರು ಆಸ್ಪತೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನೂ ಮೂವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ.

ಹಳೆಯ ಕಟ್ಟಡ ಹಠಾತ್ತನೆ ಕುಸಿತ | ಹಲವರು ಗಂಭೀರ | ಮೂವರು ಸಿಲುಕಿಕೊಂಡಿರುವ ಶಂಕೆ Read More »

ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನ | ಮೋದಿಯವರಿಂದ ಜಮ್ಮು ಕಾಶ್ಮೀರ ದಲ್ಲಿ ಯೋಗ

ಹೊಸದಿಲ್ಲಿ: ಪ್ರತಿವರ್ಷ ಜೂನ್ 21ರ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಬಾರಿಯದ್ದು 10ನೇ ಅಂತಾರಾಷ್ಟ್ರೀಯ ಯೋಗ ದಿನ. ಈ ವರ್ಷದ ಥೀಮ್ ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂದಾಗಿದೆ. ಜೂನ್ 21ರಂದು ಪ್ರಧಾನಿ ಮೋದಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗಾಸನ ಮಾಡಲಿದ್ದಾರೆ. ಇಂದೇ ಮೋದಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದು ಅಲ್ಲಿ ಎರಡು ದಿನಗಳ ಕಾರ್ಯಕ್ರಮ ನಿಗದಿಯಾಗಿದೆ. ಶಿಲಾನ್ಯಾಸ, ಯೋಜನೆಗಳ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳು ಎರಡು

ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನ | ಮೋದಿಯವರಿಂದ ಜಮ್ಮು ಕಾಶ್ಮೀರ ದಲ್ಲಿ ಯೋಗ Read More »

ಅಯೋಧ್ಯೆ ರಾಮ ಮಂದಿರದಲ್ಲಿ ಗುಂಡಿನ ದಾಳಿ | ಕರ್ತವ್ಯ ನಿರತ ಎಸ್ಎಸ್ಎಫ್ ಯೋಧ ಮೃತ್ಯು

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್ಎಸ್ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಬುಧವಾರ ಬೆಳಗ್ಗೆ 5.25ಕ್ಕೆ ಈ ಘಟನೆ ನಡೆದಿದ್ದು, ಗುಂಡಿಗೆ ಬಲಿಯಾದ ಯೋಧ ಅಂಬೇಡ್ಕರ್ ನಗರದ ನಿವಾಸಿ ಶತ್ರುಘ್ನ ವಿಶ್ವಕರ್ಮ(25) ಎಂದು ತಿಳಿದು ಬಂದಿದೆ. ಮಂದಿರದ ಆವರಣದಲ್ಲಿ ಗುಂಡಿನ ಸದ್ದು ಕೇಳಿದ ಸಹ ಸಿಬ್ಬಂದಿ ಅಲ್ಲಿಗೆ ಓಡಿ ಬಂದಿದ್ದಾರೆ, ಅಷ್ಟರಲ್ಲಾಗಲೆ ಯೋಧ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ಯೋಧನ ಸಾವು

ಅಯೋಧ್ಯೆ ರಾಮ ಮಂದಿರದಲ್ಲಿ ಗುಂಡಿನ ದಾಳಿ | ಕರ್ತವ್ಯ ನಿರತ ಎಸ್ಎಸ್ಎಫ್ ಯೋಧ ಮೃತ್ಯು Read More »

error: Content is protected !!
Scroll to Top