ದೇಶ

ಆರೋಗ್ಯ ಅಧಿಕಾರಿಯ ಮೃತದೇಹ ಶೌಚಾಲಯದಲ್ಲಿ ಪತ್ತೆ !

ಮಂಜೇಶ್ವರ: ಆರೋಗ್ಯ ಅಧಿಕಾರಿಯೊಬ್ಬರ ಮೃತದೇಹ ಶೌಚಾಲಯದಲ್ಲಿ ಪತ್ತೆಯಾದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಪತ್ತನಂತ್ತಿಟ್ಟದ ಮನೋಜ್ (45) ಎಂಬವರ ಶವ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಮಂಜೇಶ್ವರ ಬ್ಲಾಕ್ ಪಂಚಾಯತ್ ಕುಟುಂಬ ಕಲ್ಯಾಣ ಕೇಂದ್ರದ ಆರೋಗ್ಯಾಧಿಕಾರಿ ಆಗಿದ್ದ ಮನೋಜ್ ಅವರು ಮಂಜೇಶ್ವರ ಎಸ್ ಐ ಟಿ ಶಾಲಾ ಸಮೀಪದ ವಸತಿ ಗೃಹದಲ್ಲಿ ವಾಸವಾಗಿದ್ದರು. ದುರ್ವಾಸನೆ ಕಂಡು ಬಂದ ಹಿನ್ನಲೆಯಲ್ಲಿ ಪರಿಸರ ವಾಸಿಗಳು ಗಮನಿಸಿದಾಗ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ಓರ್ವರೇ ಈ ಕೊಠಡಿಯಲ್ಲಿದ್ದರು ಎನ್ನಲಾಗಿದೆ. ಎರಡು ದಿನಗಳ ಹಿಂದೆ ಹೃದಯಘಾತದಿಂದ […]

ಆರೋಗ್ಯ ಅಧಿಕಾರಿಯ ಮೃತದೇಹ ಶೌಚಾಲಯದಲ್ಲಿ ಪತ್ತೆ ! Read More »

ಇವಿಎಂ ಹ್ಯಾಕ್ ಮಾಡಲು ಅಸಾಧ್ಯ   l ಮಸ್ಕ್‌ ಹೇಳಿಕೆಗೆ ಕೇಂದ್ರ ಮಾಜಿ ಸಚಿವ ತಿರುಗೇಟು

ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳು ಹೀನಾಯವಾಗಿ ಸೋತಿದ್ದರೆ ಖಂಡಿತ ಮತಯಂತ್ರಗಳನ್ನು ದೂಷಿಸುವ ಕಾರ್ಯ ನಡೆಯುತ್ತಿತ್ತು. ಆದರೆ ಫಲಿತಾಂಶ ಪ್ರಕಟವಾದಾಗ ಪ್ರತಿಪಕ್ಷಗಳೂ ಕೂಡ ಸಾಧನೆ ಮಾಡಿದ ಕಾರಣ ಮತಯಂತ್ರಗಳು ಬಚಾವಾಗಿದ್ದವು. ಆದರೆ ಫಲಿತಾಂಶ ಪ್ರಕಟವಾಗಿ, ಸರಕಾರವೂ ರಚನೆಯಾದ ಬಳಿಕ ಈಗ ಮತಯಂತ್ರಗಳ ಬಗ್ಗೆ ಚರ್ಚೆ ಶುರು ಮಾಡಿದ್ದಾರೆ. ಈ ಚರ್ಚೆಗೆ ಕಾರಣರಾಗಿರುವವರು ಟೆಸ್ಲಾ ಕಂಪನಿಯ ಎಲಾನ್ ಮಸ್ಕ್ ಚುನಾವಣೆಗಳಲ್ಲಿ ಬಳಸುವ ಇವಿಎಂ ಯಂತ್ರಗಳ ಬಗ್ಗೆ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ್ದು, ಹ್ಯಾಕರ್‌ಗಳು ಕೃತಕ ಬುದ್ಧಿಮತ್ತೆ ಬಳಸಿಕೊಂಡು ಇವಿಎಂ ಗಳನ್ನು

ಇವಿಎಂ ಹ್ಯಾಕ್ ಮಾಡಲು ಅಸಾಧ್ಯ   l ಮಸ್ಕ್‌ ಹೇಳಿಕೆಗೆ ಕೇಂದ್ರ ಮಾಜಿ ಸಚಿವ ತಿರುಗೇಟು Read More »

ಇತಿಹಾಸ ಪ್ರಸಿದ್ಧ ಶ್ರೀ ಅನಂತಪುರ ದೇವಸ್ಥಾನದಲ್ಲಿ ಮೊಸಳೆ ಬಬಿಯಾನ ಪ್ರತ್ಯಕ್ಷ | ಪುಳಕಿತರಾದ ಭಕ್ತಾದಿಗಳು

ಕಾಸರಗೋಡು: ಇತಿಹಾಸ ಪ್ರಸಿದ್ದ ಕಾಸರಗೋಡು ಜಿಲ್ಲೆಯ ಪ್ರಸಿದ್ದ ದೇವಾಲಯ ಶ್ರೀ ಅನಂತಪುರ ದೇವಾಲಯದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದ ಮರಿ ಮೊಸಳೆ ಮೊದಲ ಬಾರಿಗೆ ಜೂ 14 ರಂದು ದೇವಾಲಯದ ಪ್ರಾಂಗಣವೇರಿ ಗರ್ಭಗುಡಿಯ ಹತ್ತಿರವೇ ವಿಶ್ರಾಂತಿ ಪಡೆಯುವ ಮೂಲಕ ಮರಿ ಬಬಿಯಾನ ದರ್ಶನ ನೀಡಿದೆ. ಇದರಿಂದ ಭಕ್ತಾದಿಗಳು ಪುಳಕಿತಗೊಂಡರು. ಮರಿ ಬಬಿಯಾ ವಿಶ್ರಾಂತಿ ಪಡೆಯಲು ಬಂದ ಸಮಯದಲ್ಲಿ ಕ್ಷೇತ್ರದ ನಡೆ (ದಾರಿ) ಮುಚ್ಚಿತ್ತು. ಸಂಜೆ ಬಂದು ಕ್ಷೇತ್ರದ ನಡೆ ತೆರೆದ ದೇವಾಲಯದ ಅರ್ಚಕರಿಗೆ ಈ ಪುಣ್ಯ ದೃಶ್ಯ ಗೋಚರವಾಗಿದ್ದು, ತಮ್ಮ

ಇತಿಹಾಸ ಪ್ರಸಿದ್ಧ ಶ್ರೀ ಅನಂತಪುರ ದೇವಸ್ಥಾನದಲ್ಲಿ ಮೊಸಳೆ ಬಬಿಯಾನ ಪ್ರತ್ಯಕ್ಷ | ಪುಳಕಿತರಾದ ಭಕ್ತಾದಿಗಳು Read More »

ಎಚ್‌.ಡಿ. ಕುಮಾರಸ್ವಾಮಿ  ಶಾಸಕ ಸ್ಥಾನಕ್ಕೆ  ರಾಜಿನಾಮೆ

ಇತ್ತೀಚೆಗೆ ಸಂಸದರಾಗಿ ಆಯ್ಕೆಯಾದ ಕೇಂದ್ರಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಚನ್ನಪಟ್ಟಣ ಕ್ಷೇತ್ರದಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಎಚ್‌.ಡಿ. ಕುಮಾರಸ್ವಾಮಿ ಶನಿವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಅವರು ಸಂಸದ ಸ್ಥಾನ ಉಳಿಸಿಕೊಳ್ಳಲು ನಿರ್ಧರಿಸಿದ್ದು, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತೀಚೆಗೆ ಮುಕ್ತಾಯವಾದ ಲೋಕಸಭೆ

ಎಚ್‌.ಡಿ. ಕುಮಾರಸ್ವಾಮಿ  ಶಾಸಕ ಸ್ಥಾನಕ್ಕೆ  ರಾಜಿನಾಮೆ Read More »

ಸ್ಮೃತಿ ವನದಲ್ಲಿ 4.6 ಲಕ್ಷ ಗಿಡ ಬೆಳೆಸಿದ ಸುಳ್ಯದ ಡಾ.ಆರ್.ಕೆ.ನಾಯರ್ l ಒಲಿಯಿತು ಯುನೆಸ್ಕೋ ಪ್ರಶಸ್ತಿ

ಮುಂಬೈ : ಗುಜರಾತ್‌ನ ಭುಜ್‌ನಲ್ಲಿ ನಿರ್ಮಿಸಿರುವ ಭೂಕಂಪ ಸ್ಮಾರಕ ಸ್ಮೃತಿ ವನಕ್ಕೆ ಯುನೆಸ್ಕೋ ಪ್ರಶಸ್ತಿ. ಸ್ಮೃತಿ ವನದಲ್ಲಿ 4.60 ಲಕ್ಷ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ  ಹಸಿರು ಪರಿಸರ ನಿರ್ಮಾಣ ಮಾಡಿರುವ ಸುಳ್ಯದವರಾದ ಪರಿಸರ ತಜ್ಞ ಡಾ. ಆರ್.ಕೆ.ನಾಯರ್ ಅವರಿಗೆ ಇದು ಹೆಮ್ಮೆಯ ಕ್ಷಣ. ಯುನೆಸ್ಕೋ ಪ್ರತಿ ವರ್ಷ ವಾಸ್ತುಶಿಲ್ಪ, ಪ್ರಕೃತಿ ಸಂರಕ್ಷಣೆ ಮತ್ತು ವಿನ್ಯಾಸ ಕ್ಷೇತ್ರದ ವಿಶ್ವದ ಪ್ರತಿಷ್ಠಿತ 7 ಸ್ಥಳಗಳನ್ನು, ಸ್ಮಾರಕಗಳನ್ನು ಗುರುತಿಸಿ ಪ್ರಿಕ್ಸ್ ವರ್ಸೈಲ್ಸ್ ಪ್ರಶಸ್ತಿ ನೀಡಲಾಗುತ್ತದೆ.  ವಿಶ್ವದ ಏಳು ಅತ್ಯಂತ ಸುಂದರವಾದ

ಸ್ಮೃತಿ ವನದಲ್ಲಿ 4.6 ಲಕ್ಷ ಗಿಡ ಬೆಳೆಸಿದ ಸುಳ್ಯದ ಡಾ.ಆರ್.ಕೆ.ನಾಯರ್ l ಒಲಿಯಿತು ಯುನೆಸ್ಕೋ ಪ್ರಶಸ್ತಿ Read More »

ಜು. 22 : ಕೇಂದ್ರ ಬಜೆಟ್ ಮಂಡನೆ ಸಾಧ್ಯತೆ

ನರೇಂದ್ರ ಮೋದಿ ನೇತೃತ್ವದ  3ನೇ ಅವಧಿಯ ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ಜು. 22 ರಂದು ಮಂಡನೆಯಾಗುವ ಸಾಧ್ಯತೆಗಳು ಇವೆ. 18ನೇ ಲೋಕಸಭೆಯ ವಿಶೇಷ 8 ದಿನಗಳ ಸಂಸತ್ ಅಧಿವೇಶನ ಇದೇ ಜೂನ್ 24 ರಂದು ಪ್ರಾರಂಭವಾಗಿ ಜುಲೈ 3 ರವರೆಗೆ ಇರಲಿದೆ .ಈ ಅಧಿವೇಶನವು ಹೊಸದಾಗಿ ಚುನಾಯಿತ ಸದಸ್ಯರ ಪ್ರಮಾಣ ವಚನ ಸ್ವೀಕಾರ, ಸ್ಪೀಕರ್ ಆಯ್ಕೆ, ರಾಷ್ಟ್ರಪತಿಗಳ ಭಾಷಣ ಮತ್ತು ನಂತರದ ಚರ್ಚೆಗಳನ್ನು ಒಳಗೊಂಡಿರುತ್ತದೆ. ಸಂಸತ್ತಿನ ಹೊಸ ಸದಸ್ಯರು ಜೂನ್ 24 ಮತ್ತು 25 ರಂದು

ಜು. 22 : ಕೇಂದ್ರ ಬಜೆಟ್ ಮಂಡನೆ ಸಾಧ್ಯತೆ Read More »

ಬಕ್ರೀದ್ ಹಬ್ಬದಂದು ಎಲ್ಲೆಂದರಲ್ಲಿ ನಮಾಜ್ ಮಾಡುವುದು, ಪ್ರಾಣಿಬಲಿ ಕೊಡುವಂತಿಲ್ಲ | ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

ಲಖನೌ: ಬಕ್ರೀದ್ ಹಬ್ಬದಂದು ಎಲ್ಲೆಂದರಲ್ಲಿ ನಮಾಜ್ ಮಾಡುವುದು, ಪ್ರಾಣಿಬಲಿ ಕೊಡುವುದು ಮಾಡುವಂತಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮುಸ್ಲಿಂ ಸಮೂಹಕ್ಕೆ ಖಡಕ್ ಸಂದೇಶವೊಂದನ್ನು ನೀಡಿದ್ದು, ಜೂನ್ 17 ರಂದು ದೇಶದ ಎಲ್ಲೆಡೆ ಮುಸ್ಲಿಂ ಸಮೂಹದವರು ಬಕ್ರೀದ್ ಹಬ್ಬವನ್ನು ಆಚರಿಸುತ್ತಾರೆ. ಈ ವೇಳೆ ಅವರು ಎಲ್ಲೆಂದರಲ್ಲಿ ಕುಳಿತು ನಮಾಜ್ ಮಾಡುವುದು ಹಾಗೂ ಪ್ರಾಣಿಗಳನ್ನು ಬಲಿ ಕೊಡುವ ಕೆಲಸ ಮಾಡುತ್ತಾರೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತದೆ. ಹಾಗಾಗಿ ಮುಸ್ಲಿಂರು ರಸ್ತೆಗಳಲ್ಲಿ ನಮಾಜ್ ಮಾಡುವಂತಿಲ್ಲ. ಅದಕ್ಕಾಗಿ

ಬಕ್ರೀದ್ ಹಬ್ಬದಂದು ಎಲ್ಲೆಂದರಲ್ಲಿ ನಮಾಜ್ ಮಾಡುವುದು, ಪ್ರಾಣಿಬಲಿ ಕೊಡುವಂತಿಲ್ಲ | ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ Read More »

ವಿಷ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ಧನ್ಯಶ್ರೀ ಮೃತ್ಯು

ಕಾಸರಗೋಡು: ವಿಷ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಪದವಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಕಾಸರಕೋಟಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮಂಗಳೂರಿನ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿ, ಆಯಾಲಾ ಹಾಗೂ ಆಟೋ ಚಾಲಕ ನುರೇಶ್ ದಂಪತಿ ಪುತ್ರಿ ಯುಡುಪುಲುವಿನ ಧನ್ಯಶ್ರೀ (19) ಮೃತಪಟ್ಟವರು. ಕೆಲ ದಿನಗಳ ಹಿಂದೆ ಧನ್ಯಶ್ರೀ ಅವರು ಹೊಟ್ಟೆ ನೋವಿನಿಂದಾಗಿ ವೈದ್ಯರನ್ನು ನೋಡಿದ್ದರು. ಔಷಧ ಸೇವಿಸಿದ ಬಳಿಕ ನೋವು ಕಡಿಮೆಯಾಗಿ ನಂತರ ನೋವು ಕಾಣಿಸಿಕೊಂಡು ದೇರಳಕಟ್ಟೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಯೇ ಧನ್ಯಶ್ರೀ ಅವರು ವಿಷ ಸೇವಿಸಿರುವುದಾಗಿ

ವಿಷ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ಧನ್ಯಶ್ರೀ ಮೃತ್ಯು Read More »

ತಿರುಮಲ ತಿರುಪತಿಯಲ್ಲಿ ‘ಗೋವಿಂದ ಗೋವಿಂದ’ ಘೋಷ ಮೊಳಗಬೇಕೇ ಹೊರತು ರಾಜಕೀಯ ಹೇಳಿಕೆಗಳಲ್ಲ : ಚಂದ್ರಬಾಬು ನಾಯ್ಡು

ತಿರುಮಲ ದೇವಸ್ಥಾನ ಹಿಂದೂಗಳಿಗೆ ಸೇರಿದ್ದು ಇಲ್ಲಿ ‘ಗೋವಿಂದ ಗೋವಿಂದ’ ಎಂಬ ಘೋಷ ಮೊಳಗಬೇಕೇ ಹೊರತು ರಾಜಕೀಯ ಹೇಳಿಕೆಗಳು ಕೇಳಬಾರದು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಹೇಳಿದ್ದಾರೆ. ಗುರುವಾರ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದ ಬಳಿಕ ಅವರು ತಿರುಮಲ ಬೆಟ್ಟದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ತಿಳಿಸಿದರು. ತಿರುಮಲ ಒಂದು ಪವಿತ್ರ ಕ್ಷೇತ್ರ, ದೇವಸ್ಥಾನದ ಪಾವಿತ್ರ್ಯತೆಯನ್ನು ರಕ್ಷಿಸಬೇಕು ಹೀಗಾಗಿ ತಿರುಪತಿಯಲ್ಲಿ ಏಡುಕುಂಡಲವಾಡ ಸ್ವಾಮಿ ಗೋವಿಂದ ಗೋವಿಂದ ಎಂಬ ಘೋಷ ಮಾತ್ರ

ತಿರುಮಲ ತಿರುಪತಿಯಲ್ಲಿ ‘ಗೋವಿಂದ ಗೋವಿಂದ’ ಘೋಷ ಮೊಳಗಬೇಕೇ ಹೊರತು ರಾಜಕೀಯ ಹೇಳಿಕೆಗಳಲ್ಲ : ಚಂದ್ರಬಾಬು ನಾಯ್ಡು Read More »

ವಿಶ್ವದ 4ನೇ ಅತೀ ದೊಡ್ಡ ಭಾರತೀಯ ಸೇನೆಯ ಮುಖ್ಯಸ್ಥರಾಗಿ ಲೆ.ಜ.ಉಪೇಂದ್ರ ದ್ವಿವೇದಿ ನೇಮಕ

ದೆಹಲಿ: ವಿಶ್ವದ 4ನೇ ಅತಿ ದೊಡ್ಡ ಸೇನೆಯಾದ ಭಾರತೀಯ ಸೇನೆಯ ಹೊಸ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿಯವರನ್ನು ಸರಕಾರ ನೇಮಕ ಮಾಡಿದೆ. ಹಾಲಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಸಿ ಪಾಂಡೆಯವರ ಅಧಿಕಾರಾವಧಿ ಜೂನ್ 30ಕ್ಕೆ ಮುಕ್ತಾಯವಾಗಲಿರುವ ಹಿನ್ನಲೆಯಲ್ಲಿ ದ್ವಿವೇದಿ ಅವರನ್ನು ನೇಮಕ ಮಾಡಲಾಗಿದೆ. ಪರಮ ವಿಶಿಷ್ಟ ಸೇವಾ ಪದಕ ಪುರಸ್ಕೃತರಾಗಿರುವ ದ್ವಿವೇದಿ, ಪ್ರಸ್ತುತ ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಜೂ.30 ರಂದು ಸಂಜೆ ಜನರಲ್ ಪಾಂಡೆಯವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ. 1964ರಲ್ಲಿ ಜನಿಸಿದ

ವಿಶ್ವದ 4ನೇ ಅತೀ ದೊಡ್ಡ ಭಾರತೀಯ ಸೇನೆಯ ಮುಖ್ಯಸ್ಥರಾಗಿ ಲೆ.ಜ.ಉಪೇಂದ್ರ ದ್ವಿವೇದಿ ನೇಮಕ Read More »

error: Content is protected !!
Scroll to Top