ದೇಶ

ಜೈಲರ್‌ ವಿಲನ್‌ ವಿನಾಯಕನ್‌ ವಿಮಾನ ನಿಲ್ದಾಣದಲ್ಲಿ ಬಂಧನ

ಹೈದರಾಬಾದ್‌: ರಜನಿಕಾಂತ್‌ ಅಭಿನಯದ ‘ಜೈಲರ್’ ಸಿನಿಮಾದ ವಿಲನ್, ಮಲಯಾಳಂನ ಖ್ಯಾತ ನಟ ವಿನಾಯಕನ್ ಅವರನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ವಿನಾಯಕನ್ ಅವರನ್ನು ಏರ್​ಪೋರ್ಟ್ ಪೊಲೀಸರು ಬಂಧಿಸಿದ್ದಾರೆ. ಏರ್​ಪೋರ್ಟ್​ ಭದ್ರತೆ ಸಿಬ್ಬಂದಿ (ಸಿಐಎಸ್​ಎಫ್) ನೀಡಿರುವ ದೂರಿನ ಆಧಾರದ ಮೇಲೆ ಎಫ್​ಐಆರ್ ದಾಖಲಾಗಿದೆ. ಗೋವಾಕ್ಕೆ ಹೋಗುತ್ತಿದ್ದ ವಿನಾಯಕನ್, ಕನೆಕ್ಟಿಂಗ್ ಫ್ಲೈಟ್​ ಹತ್ತಲೆಂದು ಹೈದರಾಬಾದ್​ನಲ್ಲಿ ಇಳಿದಾಗ ವಿಮಾನ ನಿಲ್ದಾಣದ ಸಿಐಎಸ್​ಎಫ್ ಸಿಬ್ಬಂದಿಯೊಂದಿಗೆ ಜಗಳವಾಡಿ, ಹಲ್ಲೆ ಮಾಡಿದ್ದಾರೆ ಎಂದು […]

ಜೈಲರ್‌ ವಿಲನ್‌ ವಿನಾಯಕನ್‌ ವಿಮಾನ ನಿಲ್ದಾಣದಲ್ಲಿ ಬಂಧನ Read More »

ಪ್ಯಾರಾಲಿಂಪಿಕ್ಸ್‌: ಟೋಕಿಯೊ ಸಾಧನೆ ಮೀರಿ ಮುನ್ನಡೆದ ಭಾರತ

ಭಾರತೀಯರಿಗೆ 3 ಚಿನ್ನದೊಂದಿಗೆ 20 ಪದಕಗಳ ಸಿಂಗಾರ ಪ್ಯಾರಿಸ್: ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಅತ್ಯುತ್ತಮ ಸಾಧನೆ ಮೆರೆದಿದೆ. ಪದಕ ಬೇಟೆಯಲ್ಲಿ ಭಾರತೀಯರು ಈಗಾಗಲೇ ಟೋಕಿಯೋ ಒಲಿಂಪಿಕ್ಸ್‌ ಸಾಧನೆಯನ್ನು ಮೀರಿ ಮುನ್ನಡೆದಿದ್ದಾರೆ. ಚಿನ್ನದಿಂದಲೇ ಪದಕ ಬೇಟೆ ಆರಂಭಿಸಿದ ಭಾರತದ ಅದ್ಭುತ ಪ್ರದರ್ಶನದೊಂದಿಗೆ ಸಾರ್ವಕಾಲಿಕ ಶ್ರೇಷ್ಠ ಪ್ರದರ್ಶನ ನೀಡಿದೆ. ಮಂಗಳವಾರ ಒಂದೇ ದಿನ 5 ಪದಕ ಗೆದ್ದಿದ್ದು, ಪ್ಯಾರಾಲಿಂಪಿಕ್ಸ್‌ನಲ್ಲೇ ಸಾರ್ವಕಾಲಿಕ ಶ್ರೇಷ್ಠ ಪ್ರದರ್ಶನ ನೀಡಿದೆ. ಭಾರತ ಪದಕಗಳ ಸಂಖ್ಯೆ 20ಕ್ಕೇರಿದೆ. ಈ ಮೂಲಕ ಟೋಕಿಯೊ ಕ್ರೀಡಾಕೂಟದಲ್ಲಿ ಗೆದ್ದಿದ್ದ 19

ಪ್ಯಾರಾಲಿಂಪಿಕ್ಸ್‌: ಟೋಕಿಯೊ ಸಾಧನೆ ಮೀರಿ ಮುನ್ನಡೆದ ಭಾರತ Read More »

2.44 ಲಕ್ಷ ನೌಕರರ ವೇತನಕ್ಕೆ ತಡೆ : ಆಸ್ತಿ ವಿವರ ನೀಡದ ಉದ್ಯೋಗಿಗಳಿಗೆ ಬಿಸಿ ಮುಟ್ಟಿಸಿದ ಸರಕಾರ

ಲಖನೌ : ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ಸರಕಾರ ಬರೋಬ್ಬರಿ 2.44 ಲಕ್ಷ ಸರ್ಕಾರಿ ನೌಕರರ ವೇತನವನ್ನು ತಡೆಹಿಡಿದಿದೆ. ಎಲ್ಲ ಸರಕಾರಿ ಉದ್ಯೋಗಿಗಳು ತಮ್ಮ ಆಸ್ತಿ ವಿವರಗಳನ್ನು ಆಗಸ್ಟ್ 31ರೊಳಗೆ ನೀಡುವಂತೆ ಸರಕಾರ ಇತ್ತೀಚೆಗೆ ಆದೇಶಿಸಿತ್ತು. ಆದರೆ ಇದುವರೆಗೂ ಸರಕಾರಿ ನೌಕರರು ಆಸ್ತಿ ವಿವರ ನೀಡದ ಕಾರಣ ಸಂಬಳ ತಡೆಹಿಡಿದು ಬಿಸಿ ಮುಟ್ಟಿಸಿದೆ.ಸರಕಾರದ ಮುಖ್ಯ ಕಾರ್ಯದರ್ಶಿ ಎಲ್ಲ ಸರಕಾರಿ ನೌಕರರು ಆಗಸ್ಟ್ 31ರೊಳಗೆ ಚರ ಮತ್ತು ಸ್ಥಿರ ಆಸ್ತಿಗಳ ವಿವರ ನೀಡುವಂತೆ ಸೂಚಿಸಿದ್ದರು. ಮಾನವ ಸಂಪದ ಪೋರ್ಟಲ್‌ನಲ್ಲಿ

2.44 ಲಕ್ಷ ನೌಕರರ ವೇತನಕ್ಕೆ ತಡೆ : ಆಸ್ತಿ ವಿವರ ನೀಡದ ಉದ್ಯೋಗಿಗಳಿಗೆ ಬಿಸಿ ಮುಟ್ಟಿಸಿದ ಸರಕಾರ Read More »

ಸಮುದ್ರದಲ್ಲಿ ಕೋಸ್ಟ್‌ಗಾರ್ಡ್‌ ಹೆಲಿಕಾಪ್ಟರ್‌ ತುರ್ತು ಲ್ಯಾಂಡಿಂಗ್‌ : ಮೂವರು ಸಿಬ್ಬಂದಿ ನಾಪತ್ತೆ

ಹೊಸದಿಲ್ಲಿ: ಭಾರತೀಯ ಕೋಸ್ಟ್‌ಗಾರ್ಡ್ ಹೆಲಿಕಾಪ್ಟರೊಂದು ಗುಜರಾತ್ ಸಮುದ್ರದಲ್ಲಿ ತುರ್ತು ಲ್ಯಾಂಡಿಂಗ್‌ ಆಗಿದ್ದು, ಅದರಲ್ಲಿದ್ದ ಇಬ್ಬರು ಪೈಲಟ್‍ಗಳು ಸೇರಿ ಮೂವರು ನಾಪತ್ತೆಯಾಗಿದ್ದಾರೆ. ಓರ್ವ ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕೋಸ್ಟ್‌ಗಾರ್ಡ್‍ನ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳ ಮುಲಕ ನಾಪತ್ತೆಯಾದ ಸಿಬ್ಬಂದಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.ಹೆಲಿಕಾಪ್ಟರ್‌ನ ಅವಶೇಷಗಳು ಪತ್ತೆಯಾಗಿದ್ದು, ಸಿಬ್ಬಂದಿಯ ಬಗ್ಗೆ ಯಾವುದೇ ಸುಳಿವು ಇನ್ನೂ ಸಿಕ್ಕಿಲ್ಲ. ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್‌ಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಮುದ್ರದಲ್ಲಿ ಕೋಸ್ಟ್‌ಗಾರ್ಡ್‌ ಹೆಲಿಕಾಪ್ಟರ್‌ ತುರ್ತು ಲ್ಯಾಂಡಿಂಗ್‌ : ಮೂವರು ಸಿಬ್ಬಂದಿ ನಾಪತ್ತೆ Read More »

‘ಐ ಲವ್ ಯೂ’ ಹೇಳಿದರೆ ಮಾತ್ರ ರಿಚಾರ್ಚ್ | ವಿದ್ಯಾರ್ಥಿನಿಯರಿಂದ ಅಂಗಡಿಯಾತನಿಗೆ ಹಿಗ್ಗಾಮುಗ್ಗ ಥಳಿತ

ರಾಜಸ್ಥಾನ: ಮೊಬೈಲ್ ರಿಚಾರ್ಚ್ ಮಾಡಲು ಮೊಬೈಲ್ ಅಂಗಡಿಗೆ ಬಂದ ಶಾಲಾ ವಿದ್ಯಾರ್ಥಿನಿಯರಿಗೆ ಮೊಬೈಲ್ ಅಂಗಡಿಯಾತ ‘ಐ ಲವ್ ಯೂ’ ಎಂದು ಹೇಳಿದರೆ ಮಾತ್ರ ರೀಚಾರ್ಚ್‍ ಮಾಡುವುದು ಹೇಳಿದ್ದರಿಂದ ಕುಪಿತಗೊಂಡ ವಿದ್ಯಾರ್ಥಿನಿಯರು ಆತನಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ರಾಜಸ್ಥಾನದ ದಿದ್ಯಾನಾ ಎಂಬಲ್ಲಿ ನಡೆದಿದೆ. ಈ ಕುರಿತು ವೀಡಿಯೋ ಇದೀಗ ವೈರಲ್ ಆಗುತ್ತಿದ್ದು, ಹುಡುಗೀರ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಒಂದಷ್ಟು ಸ್ಕೂಲ್ ಹುಡೀರು ಐ ಲವ್ ಯು ಹೇಳುವಂತೆ ಪೀಡಿಸಿದಾತನಿಗೆ ನಡು ರಸ್ತೆಯಲ್ಲಿಯೇ ಚಳಿ ಬಿಡಿಸಿದ್ದಾರೆ. ಸ್ಕೂಲ್

‘ಐ ಲವ್ ಯೂ’ ಹೇಳಿದರೆ ಮಾತ್ರ ರಿಚಾರ್ಚ್ | ವಿದ್ಯಾರ್ಥಿನಿಯರಿಂದ ಅಂಗಡಿಯಾತನಿಗೆ ಹಿಗ್ಗಾಮುಗ್ಗ ಥಳಿತ Read More »

ದನಗಳ್ಳನೆಂದು ಭಾವಿಸಿ ವಿದ್ಯಾರ್ಥಿಯನ್ನು ಗುಂಡಿಕ್ಕಿ ಕೊಂದ ಗೋರಕ್ಷಕರು

ಚಂಡೀಗಢ: ದನಗಳ್ಳನೆಂದು ಭಾವಿಸಿ ಪಿಯುಸಿ ವಿದ್ಯಾರ್ಥಿಯೊಬ್ಬನನ್ನು ಗೋರಕ್ಷಕರು ಕಾರಿನಲ್ಲಿ 30 ಕಿ.ಮೀ. ಹಿಂಬಾಲಿಸಿ ಗುಂಡಿಕ್ಕಿ ಹತ್ಯೆಗೈದ ಆಘಾತಕಾರಿ ಘಟನೆ ಹರ್ಯಾಣದ ಫರಿದಾಬಾದ್‍ನಲ್ಲಿ ನಡೆದಿದೆ.ಆರ್ಯನ್ ಮಿಶ್ರಾ ದುಷ್ಕರ್ಮಿಗಳ ದಾಳಿಗೆ ಬಲಿಯಾದ ದುರ್ದೈವಿ. ಆಗಸ್ಟ್ 23ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅನಿಲ್ ಕೌಶಿಕ್, ವರುಣ್, ಕೃಷ್ಣ, ಆದೇಶ್ ಮತ್ತು ಸೌರಭ್ ಎಂದು ಗುರುತಿಸಲಾಗಿದೆ.ರೆನಾಲ್ಟ್ ಡಸ್ಟರ್ ಮತ್ತು ಟೊಯೊಟಾ ಫಾರ್ಚುನರ್ ಕಾರುಗಳಲ್ಲಿ ಕೆಲವರು ಜಾನುವಾರುಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದಾರೆ

ದನಗಳ್ಳನೆಂದು ಭಾವಿಸಿ ವಿದ್ಯಾರ್ಥಿಯನ್ನು ಗುಂಡಿಕ್ಕಿ ಕೊಂದ ಗೋರಕ್ಷಕರು Read More »

ಅಪರಾಧಿಗಳು ನಿರ್ಭೀತಿಯಿಂದ ತಿರುಗಾಡುವುದು ಕಳವಳಕಾರಿ : ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಲ್ಲಿ: ಅಪರಾಧಿಗಳು ನಿರ್ಭೀತಿಯಿಂದ ತಿರುಗಾಡುವುದು ಹಾಗೂ ಸಂತ್ರಸ್ತರು ಅಪರಾಧಗಳನ್ನು ಮಾಡಿದಂತೆ ಭಯದಿಂದ ಬದುಕುವುದು ನಮ್ಮ ಸಾಮಾಜಿಕ ಜೀವನದ ವೈರುದ್ಧ್ಯದ ಅಂಶವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕಳವಳ ವ್ಯಕ್ತಪಡಿಸಿದ್ದಾರೆ.ಭಾರತ್ ಮಂಟಪದಲ್ಲಿ ನಡೆದ ಸುಪ್ರೀಂ ಕೋರ್ಟ್‌ನ 75ನೇ ವಾರ್ಷಿಕೋತ್ಸವದ ನೆನಪಿಗಾಗಿ ನಿನ್ನೆ ಆಯೋಜಿಸಲಾದ ಸಮ್ಮೇಳನದಲ್ಲಿ ಅವರು ಮಾತನಾಡಿದರು. ಕೋಲ್ಕತ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ, ಮಲಯಾಳಂ ಚಿತ್ರರಂಗದ ಪ್ರಸಿದ್ಧ ನಟರ ವಿರುದ್ಧ ದಾಖಲಾದ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರದ ಹತ್ತಾರು ಪ್ರಕರಣಗಳು ಭಾರತ ಮಹಿಳೆಯರನ್ನು ಹೇಗೆ

ಅಪರಾಧಿಗಳು ನಿರ್ಭೀತಿಯಿಂದ ತಿರುಗಾಡುವುದು ಕಳವಳಕಾರಿ : ರಾಷ್ಟ್ರಪತಿ ದ್ರೌಪದಿ ಮುರ್ಮು Read More »

ರಾಜಕೀಯದಲ್ಲೂ ಇದೆ ಲೈಂಗಿಕ ಶೋಷಣೆ : ಬಾಂಬ್‌ ಸಿಡಿಸಿದ ಕೇರಳದ ಕಾಂಗ್ರೆಸ್‌ ನಾಯಕಿ

ಹುದ್ದೆಗಳ, ಸ್ಥಾನಮಾನಗಳ ಆಮಿಷವೊಡ್ಡಿ ದೌರ್ಜನ್ಯ ಎಸಗುತ್ತಾರೆ ಎಂದ ನಾಯಕಿಯ ಉಚ್ಚಾಟನೆ ತಿರುವನಂತಪುರಂ: ಮಲಯಾಳಂ ಚಿತ್ರೋದ್ಯಮದಲ್ಲಿ ಲೈಂಗಿಕ ಕಿರುಕುಳದ ಆರೋಪ ಬಿರುಗಾಳಿ ಎಬ್ಬಿಸಿದ ಬೆನ್ನಿಗೆ ಈಗ ರಾಜಕೀಯದಲ್ಲೂ ಇದೇ ರೀತಿಯ ಆರೋಪ ಕೇಳಿಬಂದಿದೆ. ಕೇರಳದ ಕಾಂಗ್ರೆಸ್‌ ನಾಯಕಿಯೊಬ್ಬರು ಈ ಬಗ್ಗೆ ಮಾತನಾಡಿದ್ದು, ಕೈ ಪಡೆಯಲ್ಲಿ ಕಳವಳ ಉಂಟು ಮಾಡಿದೆ. ಕೇರಳ ರಾಜಕಾರಣದಲ್ಲೂ ಲೈಂಗಿಕ ಶೋಷಣೆ ಹಾಸುಹೊಕ್ಕಾಗಿದೆ. ಕೇರಳ ಕಾಂಗ್ರೆಸ್ ಘಟಕದಲ್ಲಿ ಕ್ಯಾಸ್ಟಿಂಗ್ ಕೌಚ್ ರೀತಿಯ ಪರಿಸ್ಥಿತಿಗಳಿವೆ ಎಂದು ಕಾಂಗ್ರೆಸ್ ನಾಯಕಿ ಸಿಮಿ ರೋಸ್‌ಬೆಲ್ ಜಾನ್ ಬಾಂಬ್‌ ಸಿಡಿಸಿದ್ದಾರೆ. ಈ

ರಾಜಕೀಯದಲ್ಲೂ ಇದೆ ಲೈಂಗಿಕ ಶೋಷಣೆ : ಬಾಂಬ್‌ ಸಿಡಿಸಿದ ಕೇರಳದ ಕಾಂಗ್ರೆಸ್‌ ನಾಯಕಿ Read More »

ಕರ್ನಾಟಕಕ್ಕೆ ರೈಲ್ವೆ ಅನುದಾನ 9 ಪಟ್ಟು ಹೆಚ್ಚಳ : ಮೋದಿ

ಈ ವರ್ಷದ ಬಜೆಟ್‌ನಲ್ಲಿ ರಾಜ್ಯಕ್ಕೆ 7,000 ಕೋ.ರೂ. ಅನುದಾನ ಹೊಸದಿಲ್ಲಿ: ರೈಲ್ವೆ ಬಜೆಟ್‌ನಲ್ಲಿ ಕರ್ನಾಟಕಕ್ಕೆ 7,000 ಕೋಟಿ ರೂ.ಗಿಂತ ಹೆಚ್ಚಿನ ಅನುದಾನ ಒದಗಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಶನಿವಾರ ಮೂರು ಹೊಸ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಉದ್ಘಾಟನೆ ವೇಳೆ ಮಾತನಾಡಿದ ಅವರು, ಈ ವರ್ಷದ ಬಜೆಟ್‌ನಲ್ಲಿ ಕರ್ನಾಟಕಕ್ಕೆ 7,000 ಕೋಟಿ ರೂ.ಗಿಂತ ಹೆಚ್ಚಿನ ಅನುದಾನ ನಿಗದಿಪಡಿಸಲಾಗಿದೆ. 2014ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಾಗಿದೆ. ಒಟ್ಟು 8 ವಂದೇ ಭಾರತ್‌ ರೈಲುಗಳು ಕರ್ನಾಟಕವನ್ನು ಸಂಪರ್ಕಿಸಿವೆ

ಕರ್ನಾಟಕಕ್ಕೆ ರೈಲ್ವೆ ಅನುದಾನ 9 ಪಟ್ಟು ಹೆಚ್ಚಳ : ಮೋದಿ Read More »

ನಟಿಯರ ಕ್ಯಾರವಾನ್‌ಗಳಲ್ಲಿ ಇರುತ್ತಿತ್ತು ಹಿಡನ್‌ ಕ್ಯಾಮರಾ : ರಾಧಿಕಾ ಹೇಳಿಕೆಯಿಂದ ಬಿರುಗಾಳಿ

ಮಲಯಾಳಂ ಚಿತ್ರರಂಗದ ಇನ್ನೊಂದು ಕರಾಳ ಮುಖ ಬಯಲುಗೊಳಿಸಿದ ನಟಿ ಚೆನ್ನೈ : ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಶೋಷಣೆ ಕುರಿತು ಹೇಮಾ ಸಮಿತಿ ಸಲ್ಲಿಸಿದ ತನಿಖಾ ವರದಿ ಬಹಿರಂಗಗೊಂಡ ಬಳಿಕ ಮಲಯಾಳಂ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗದಲ್ಲೇ ತಲ್ಲಣವುಂಟಾಗಿದೆ. ಅನೇಕ ನಟಿಯರು ನಟರು, ನಿರ್ದೇಶಕರು, ನಿರ್ಮಾಪಕರಿಂದ ತಮಗಾಗಿರುವ ಕಹಿ ಅನುಭವಗಳನ್ನು ಬಹಿರಂಗಗೊಳಿಸುತ್ತಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಂತೂ ಬಿರುಗಾಳಿಯೇ ಎದ್ದಿದ್ದು, ಹಲವು ಖ್ಯಾತ ನಟರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಈ ನಡುವೆ ಕನ್ನಡ, ಮಲಯಾಳಂ, ತಮಿಳು ಚಿತ್ರರಂಗದಲ್ಲಿ ಒಂದು ಕಾಲದಲ್ಲಿ ಜನಪ್ರಿಯ

ನಟಿಯರ ಕ್ಯಾರವಾನ್‌ಗಳಲ್ಲಿ ಇರುತ್ತಿತ್ತು ಹಿಡನ್‌ ಕ್ಯಾಮರಾ : ರಾಧಿಕಾ ಹೇಳಿಕೆಯಿಂದ ಬಿರುಗಾಳಿ Read More »

error: Content is protected !!
Scroll to Top