ದೇಶ

ಅಧಿಕಾರ ವಹಿಸಿದ ಮೊದಲ ದಿನವೇ ಕಿಸಾನ್ ಸಮ್ಮಾನ್ ಯೋಜನೆಯ‌ ಹಣ ರೈತರ ಖಾತೆಗೆ

3 ನೇ ಅವಧಿಗೆ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಲವು ಭರವಸೆಗಳನ್ನು ಜನ ಸರ್ಕಾರದ ಮೇಲಿರಿಸಿದ್ದಾರೆ. ಜೂ.9 ರಂದು ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಇಂದು ಕೆಲಸ ಆರಂಭಿಸಿದ್ದಾರೆ. ಪ್ರಧಾನಿ ಕಚೇರಿಗೆ ಆಗಮಿಸುತ್ತಿದ್ದಂತೆ ಮೋದಿಯವರು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ರೈತರ ಖಾತೆಗೆ ಬರೋಬ್ಬರಿ 20,000 ಕೋಟಿ ರೂಪಾಯಿ ಜಮೆ ಮಾಡಿಸಿದ್ದಾರೆ.ಕಿಸಾನ್ ಸಮ್ಮಾನ್ 17ನೇ ಕಂತನ್ನು ಮೋದಿ ಬಿಡುಗಡೆ ಮಾಡಿದ್ದಾರೆ. ಮೋದಿಯವರು ತಮ್ಮ ಮೂರನೇ ಅವಧಿಯ ಮೊದಲ ದಿನವೇ ಬರೋಬ್ಬರಿ 9.3 ಕೋಟಿ ರೈತರ […]

ಅಧಿಕಾರ ವಹಿಸಿದ ಮೊದಲ ದಿನವೇ ಕಿಸಾನ್ ಸಮ್ಮಾನ್ ಯೋಜನೆಯ‌ ಹಣ ರೈತರ ಖಾತೆಗೆ Read More »

ಪಶ್ಚಿಮ ಬಂಗಾಳ ವಿಧಾನಸಭಾ ಉಪಚುನಾವಣೆ : ದಿನಾಂಕ ಘೋಷಣೆ

ಪಶ್ಚಿಮ ಬಂಗಾಳ ನಾಲ್ಕು ಕ್ಷೇತ್ರಗಳು ಸೇರಿ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ ಮಾಡಿದೆ. ಜುಲೈ 10 ರಂದು ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ರುಪೌಲಿ (ಬಿಹಾರ), ರಾಯ್ಗಂಜ್, ರಣಘಾಟ್ ದಕ್ಷಿಣ, ಬಾಗ್ಡಾ ಮತ್ತು ಮಾಣಿಕ್ತಾಲಾ (ಪಶ್ಚಿಮ ಬಂಗಾಳ), ವಿಕ್ರವಂಡಿ (ತಮಿಳುನಾಡು), ಅಮರವಾರ(ಮಧ್ಯಪ್ರದೇ ಶ), ಬದರಿನಾಥ್ ಮತ್ತು ಮಂಗಳೌರ್ (ಉತ್ತರಾಖಂಡ), ಜಲಂಧರ್ ಪಶ್ಚಿಮ (ಪಂಜಾಬ್) ಮತ್ತು ಡೆಹ್ರಾ, ಹಮೀರ್ಪುರ ಮತ್ತು ನಲಗಢ (ಹಿಮಾಚಲ ಪ್ರದೇಶ) ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ನಡೆಯಲಿವೆ. ಜೂನ್

ಪಶ್ಚಿಮ ಬಂಗಾಳ ವಿಧಾನಸಭಾ ಉಪಚುನಾವಣೆ : ದಿನಾಂಕ ಘೋಷಣೆ Read More »

ಯಾತ್ರಾರ್ಥಿಗಳಿದ್ದ ಬಸ್ಸಿನ ಮೆಲೆ ಭಯೋತ್ಪಾದಕರಿಂದ ಗುಂಡಿನ ದಾಳಿ | 9 ಮಂದಿ ಮೃತ್ಯು, 33 ಮಂದಿಗೆ ಗಾಯ

ಶ್ರೀನಗರ:  ಯಾತ್ರಾರ್ಥಿಗಳಿದ್ದ ಬಸ್ಸಿನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಪರಿಣಾಮ 9 ಯಾತ್ರಿಕರು ಮೃತಪಟ್ಟು, 33 ಮಂದಿ ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ನಡೆದಿದೆ. 53 ಆಸನಗಳ ಬಸ್ ಶಿವ ಖೋರಿ ದೇವಸ್ಥಾನದಿಂದ ಕತ್ರಾ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಚಲಿಸುತ್ತಿದ್ದ ವೇಳೆಯೇ ದಾಳಿ ನಡೆಸಿದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಆಳವಾದ ಕಮರಿಗೆ ಬಿದ್ದಿದೆ. ಪೋನಿ ಪ್ರದೇಶದ ತೇರ್ಯತ್ ಗ್ರಾಮದ

ಯಾತ್ರಾರ್ಥಿಗಳಿದ್ದ ಬಸ್ಸಿನ ಮೆಲೆ ಭಯೋತ್ಪಾದಕರಿಂದ ಗುಂಡಿನ ದಾಳಿ | 9 ಮಂದಿ ಮೃತ್ಯು, 33 ಮಂದಿಗೆ ಗಾಯ Read More »

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ | ಕಣ್ತುಂಬಿಕೊಂಡ ಸಭಾಸದರು

ನವದೆಹಲಿ: ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಆಯ್ಕೆಯಾಗಿದ್ದು, ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ವಾದ್ಯದೊಂದಿಗೆ ಬರ ಮಾಡಿಕೊಳ್ಳಲಾಯಿತು. ನೆರೆದಿದ್ದ ಸಭಿಕರು ಎದ್ದುನಿಂತು ರಾಷ್ಟ್ರಪತಿಯವರಿಗೆ ಗೌರವ ಸಲ್ಲಿಸಿದರು. ಬಳಿಕ ರಾಷ್ಟ್ರಗೀತೆ ಮೊಳಗಿಸಲಾಯಿತು. ರಾಜಕೀಯ ಘಟಾನುಘಟಿಗಳ ಸಮ್ಮುಖದಲ್ಲಿ ನರೇಂದ್ರ ಮೋದಿಯವರು ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಸಂಸತ್ ಸದಸ್ಯರಾಗಿ ಆಯ್ಕೆಯಾದವರು ಪ್ರಮಾಣ ವಚನ ಸ್ವೀಕರಿಸಿದರು.

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ | ಕಣ್ತುಂಬಿಕೊಂಡ ಸಭಾಸದರು Read More »

ಅಣ್ಣಾಮಲೈಗೆ ಮೋದಿ ಸಂಪುಟಕ್ಕೆ ಸೇರ್ಪಡೆ | ಪಕ್ಷಕ್ಕೆ ಬಲವಾದ ನೆಲೆ ಒದಗಿಸುವಲ್ಲಿ ಯಶಸ್ವಿಯಾದ ಅಣ್ಣಾಮಲೈ

ಹೊಸದಿಲ್ಲಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಕೇಂದ್ರದ ನರೇಂದ್ರ ಮೋದಿ ಸಂಪುಟ ಸೇರ್ಪಡೆಯಾಗಲಿದ್ದಾರೆ. ಪಕ್ಷಕ್ಕೆ ಬಲವಾದ ನೆಲೆ ಒದಗಿಸುವಲ್ಲಿ ಅಣ್ಣಾಮಲೈ ಯಶಸ್ವಿಯಾಗಿದ್ದು, ಈ ಹಿನ್ನಲೆಯಲ್ಲಿ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ. ಇಂದು ಸಂಜೆ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭಲ್ಲಿ ಅಣ್ಣಾಮಲೈ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಅಣ್ಣಾಮಲೈಗೆ ಕೇಂದ್ರದಿಂದ ಕರೆ ಹೋಗಿದೆ. ಅಣ್ಣಾಮಲೈ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲುದ್ದೇಶಿಸಲಾಗಿದೆ. ಸಚಿವರಾಗಿ ರಾಜ್ಯಸಭೆ ಸದಸ್ಯರಾಗಲು 6 ತಿಂಗಳ ಕಾಲಾವಕಾಶ ಇದೆ. ಅಣ್ಣಾಮಲೈ ಕರ್ನಾಟಕದಲ್ಲಿ ಐಪಿಎಸ್

ಅಣ್ಣಾಮಲೈಗೆ ಮೋದಿ ಸಂಪುಟಕ್ಕೆ ಸೇರ್ಪಡೆ | ಪಕ್ಷಕ್ಕೆ ಬಲವಾದ ನೆಲೆ ಒದಗಿಸುವಲ್ಲಿ ಯಶಸ್ವಿಯಾದ ಅಣ್ಣಾಮಲೈ Read More »

ಇಂದು ಮೋದಿ ನೇತೃತ್ವದ ಎನ್‍ ಡಿಎ ಸರಕಾರ ರಚನೆ | ಮೂರನೇ ಬಾರಿಗೆ ಮೋದಿ ಪ್ರಧಾನಿ ಪಟ್ಟ ಏರಲು ಕ್ಷಣಗಣನೆ

ಹೊಸದಿಲ್ಲಿ: ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರಕಾರ ಇಂದು ಅಧಿಕಾರಕ್ಕೆ ಬರಲಿದ್ದು, ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲು ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಶುಕ್ರವಾರ ನಡೆದ ಸಭೆಯಲ್ಲಿ ಹೊಸದಾಗಿ ಆಯ್ಕೆಯಾದ ಸಂಸದರು ಸರ್ವಾನುಮತದಿಂದ ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ. ಸಂಜೆ 7.15ಕ್ಕೆ ಸಮಾರಂಭ ಶುರುವಾಗಲಿದ್ದು, ಜೂನ್ 5ರಂದು ನರೇಂದ್ರ ಮೋದಿ ರಾಷ್ಟಪತಿ ದೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ತಮ್ಮ ಮತ್ತು ಕೇಂದ್ರ ಸಚಿವ ಸಂಪುಟದ ರಾಜೀನಾಮೆಯನ್ನು ಸಲ್ಲಿಸಿದರು. ಬಳಿಕ ಅವರನ್ನು

ಇಂದು ಮೋದಿ ನೇತೃತ್ವದ ಎನ್‍ ಡಿಎ ಸರಕಾರ ರಚನೆ | ಮೂರನೇ ಬಾರಿಗೆ ಮೋದಿ ಪ್ರಧಾನಿ ಪಟ್ಟ ಏರಲು ಕ್ಷಣಗಣನೆ Read More »

ಮೋದಿ ಮೂರನೇ ಅವಧಿಗೆ  ಪ್ರಧಾನಿ | ಹಕ್ಕು ಮಂಡನೆ

ದೆಹಲಿಯಲ್ಲಿ ನಡೆದ ಎನ್ ಡಿಎ ಮೈತ್ರಿಕೂಟದ ಸಂಸದೀಯ ಪಕ್ಷದ ಸಭೆಯಲ್ಲಿ ಮೋದಿ ಅವರನ್ನು ಬಿಜೆಪಿ ಮತ್ತು ಎನ್ ಡಿಎ ನಾಯಕರಾಗಿ ಆಯ್ಕೆ ಮಾಡಲಾಗಿತ್ತು. ಇದಕ್ಕೆ ಸಂಸದೀಯ ಮಂಡಳಿ ಅನುಮೋದನೆ ಕೂಡ ನೀಡಿತ್ತು. ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ಭೇಟಿಯಾದ ಮೋದಿಯವರು, 3ನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರದ ಗದ್ದುಗೆಗೇರಲು ಸರ್ಕಾರದ ರಚನೆ ಸಂಬಂಧ ಹಕ್ಕು ಮಂಡನೆ ಮಾಡಿದ್ದಾರೆ. ತೆಲುಗು ದೇಶ ಪಕ್ಷದ ಚಂದ್ರಬಾಬು ನಾಯ್ಡು ಮತ್ತು ಜೆಡಿಯುನ ನಿತೀಶ್ ಕುಮಾರ್ ಸೇರಿದಂತೆ ಅದರ ಪಾಲುದಾರರು ನರೇಂದ್ರ ಮೋದಿಯವರನ್ನು ಪ್ರಧಾನಿ

ಮೋದಿ ಮೂರನೇ ಅವಧಿಗೆ  ಪ್ರಧಾನಿ | ಹಕ್ಕು ಮಂಡನೆ Read More »

ಮೋದಿ ಪ್ರಮಾಣ ವಚನ ಜೂನ್ 9 ಕ್ಕೆ

 ದೆಹಲಿ : ಶುಕ್ರವಾರ ನಡೆದ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು 18ನೇ ಲೋಕಸಭೆಯ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಈ ಮೂಲಕ 3ನೇ ಅವಧಿಗೆ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಪ್ರಹ್ಲಾದ್ ಜೋಶಿ ಅವರು ಜೂನ್ 9ರಂದು ನರೇಂದ್ರ ಮೋದಿ ದೇಶದ ಮುಂದಿನ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಖಚಿತಪಡಿಸಿದರು. ಸಮಾರಂಭವು ಜೂನ್ 9 ರಂದು

ಮೋದಿ ಪ್ರಮಾಣ ವಚನ ಜೂನ್ 9 ಕ್ಕೆ Read More »

ಇಂದು ಎನ್ ಡಿಎ ಸಂಸದರ ಮಹತ್ವದ ಸಭೆ | ನಾಳೆ ಮೋದಿ ಪ್ರಮಾಣ ವಚನ ಸಾಧ್ಯತೆ !

ದೆಹಲಿ:  ಇಂದು ದೆಹಲಿಯಲ್ಲಿ ಎನ್ ಡಿಎ ಸಂಸದರ ಸಭೆ ಸೇರಿ ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಮೋದಿಯವರನ್ನು ತಮ್ಮ ನಾಯಕನನ್ನಾಗಿ ಔಪಚಾರಿಕವಾಗಿ ಆಯ್ಕೆ ಮಾಡಲಿದ್ದು, ನಾಳೆ ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಆದರೆ, ಅಂತಿಮ ದಿನಾಂಕವನ್ನು ಇನ್ನೂ ಬಹಿರಂಗಪಡಿಸಿಲ್ಲ. ಈಗಾಗಲೇ ರಾಷ್ಟ್ರಪತಿ ಭವನದಲ್ಲಿ ನೂತನ ಪ್ರಧಾನಮಂತ್ರಿಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ತಯಾರಿಗಳು ಶುರುವಾಗಿವೆ. ಎನ್ ಡಿಎ ಸಂಸದರ ನಾಯಕರಾಗಿ ಮೋದಿ ಆಯ್ಕೆಯಾದ ನಂತರ, ಮೈತ್ರಿಕೂಟದ ಹಿರಿಯ ಸದಸ್ಯರಾದ ಟಿಡಿಪಿಯ ಎನ್ ಚಂದ್ರಬಾಬು

ಇಂದು ಎನ್ ಡಿಎ ಸಂಸದರ ಮಹತ್ವದ ಸಭೆ | ನಾಳೆ ಮೋದಿ ಪ್ರಮಾಣ ವಚನ ಸಾಧ್ಯತೆ ! Read More »

ಮಹಾರಾಷ್ಟ್ರ  ದೇವೇಂದ್ರ ಫಡ್ನವೀಸ್  ಉಪ ಮುಖ್ಯಮಂತ್ರಿ  ಸ್ಥಾನಕ್ಕೆ ರಾಜೀನಾಮೆ

ಲೋಕಸಭಾ ಚುನಾವಣೆ ಮಹಾರಾಷ್ಟ್ರದಲ್ಲಿ ಬಿಜೆಪಿ ತೀವ್ರ ಹಿನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ.  ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಸಂಖ್ಯೆಯು 2019 ರಲ್ಲಿ 23 ಸ್ಥಾನಗಳಿಂದ ಈ ವರ್ಷ ಕೇವಲ 9ಕ್ಕೆ ಕುಸಿದಿದೆ. ರಾಜ್ಯದ ಬಿಜೆಪಿ ನಾಯಕರ ಪೈಕಿ ಪ್ರಮುಖ ವ್ಯಕ್ತಿಯಾಗಿರುವ ಫಡ್ನವೀಸ್, ಪಕ್ಷದ ಚುನಾವಣಾ ಹಿನ್ನಡೆಯ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತು ರಾಜೀನಾಮೆ ನೀಡಿರುವುದಾಗಿ ತಿಳಿದುಬಂದಿದೆ.

ಮಹಾರಾಷ್ಟ್ರ  ದೇವೇಂದ್ರ ಫಡ್ನವೀಸ್  ಉಪ ಮುಖ್ಯಮಂತ್ರಿ  ಸ್ಥಾನಕ್ಕೆ ರಾಜೀನಾಮೆ Read More »

error: Content is protected !!
Scroll to Top