ದೇಶ

ಹೆಣಗಳನ್ನು ಮಾರಾಟ ಮಾಡುತ್ತಿದ್ದ ಮೆಡಿಕಲ್‌ ಕಾಲೇಜಿನ ಪ್ರಿನ್ಸಿಪಾಲ್‌

ಕೋಲ್ಕತ: ಟ್ರೈನಿ ವೈದ್ಯೆಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆಯ ಬಳಿಕ ಕುಖ್ಯಾತವಾಗಿರುವ ಕೋಲ್ಕತದ ಸರ್ಕಾರಿ ಆರ್‌ಜಿ ಕರ್‌ ಮೆಡಿಲ್‌ ಕಾಲೇಜಿನ ಒಂದೊಂದೇ ಕರ್ಮಕಾಂಡ ಬಯಲಿಗೆ ಬರುತ್ತಿದೆ. ವೈದ್ಯೆಯ ಹತ್ಯೆಯಾದ ಬಳಿಕ ರಾಜೀನಾಮೆ ನೀಡಿರುವ ಕಾಲೇಜಿನ ಪ್ರಾಂಶುಪಾಲ ಆಸ್ಪತ್ರೆಯಲ್ಲಿ ಮೃತಪಟ್ಟವರ ಶವಗಳನ್ನು ಮಾರಾಟ ಮಾಡುವಂಥ ಹೀನ ದಂಧೆಯನ್ನು ನಡೆಸುತ್ತಿದ್ದರು ಎಂದು ಈ ಆಸ್ಪತ್ರೆಯಲ್ಲಿ ಸುಪರಿಂಟೆಂಡ್‌ ಆಗಿದ್ದ ಅಖ್ತರ್‌ ಅಲಿ ಎಂಬವರು ಬಹಿರಂಗಪಡಿಸಿದ್ದಾರೆ.ಆರ್‌ಜಿ ಕರ್‌ ಮೆಡಿಕಲ್‌ ಕಾಲೇಜಿಗೆ ಬರುತ್ತಿದ್ದ ಔಷಧ ಹಾಗೂ ವೈದ್ಯಕೀಯ ಉಪಕರಣಗಳನ್ನು ಬಾಂಗ್ಲಾದೇಶಕ್ಕೆ ಮಾರುತ್ತಿದ್ದರು. ಮೆಡಿಕಲ್‌ […]

ಹೆಣಗಳನ್ನು ಮಾರಾಟ ಮಾಡುತ್ತಿದ್ದ ಮೆಡಿಕಲ್‌ ಕಾಲೇಜಿನ ಪ್ರಿನ್ಸಿಪಾಲ್‌ Read More »

ಬಿಸಿಸಿಐ ಐಪಿಎಲ್‌ನಿಂದ ಗಳಿಸಿದ ಲಾಭ 5,120 ಕೋಟಿ ರೂ!

ಮುಂಬಯಿ: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) 2023ರಲ್ಲಿ ಐಪಿಎಲ್‌ ಒಂದರಿಂದಲೇ ಗಳಿಸಿದ ಆದಾಯ ಬರೋಬ್ಬರಿ 5,120 ಕೋಟಿ ರೂ! ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿಯಾಗಿರುವ ಬಿಸಿಸಿಐ 2022-23ರ ವಾರ್ಷಿಕ ಹಣಕಾಸು ವರದಿಯನ್ನು ಪ್ರಕಟಿಸಿದ್ದು, ಇದರಲ್ಲಿ ಈ ಮಾಹಿತಿಯಿದೆ. 2023ರಲ್ಲಿ ಐಪಿಎಲ್‌ನಿಂದ 11,769 ಕೋಟಿ ರೂ. ಆದಾಯ ಬಿಸಿಸಿಐಗೆ ಹರಿದು ಬಂದಿದೆ. ಇದರಲ್ಲಿ ಖರ್ಷು ಕಳೆದು 5,120.13 ಕೋಟಿ ರೂ. ಉಳಿತಾಯವಾಗಿದೆ. ಐಪಿಎಲ್‌ಗೆ 6,648 ಕೋ. ರೂ. ಬಿಸಿಸಿಐ ಖರ್ಚು ಮಾಡಿದೆ.ಐಪಿಎಲ್ 2022ರ ಆದಾಯ 2,367 ಕೋಟಿ

ಬಿಸಿಸಿಐ ಐಪಿಎಲ್‌ನಿಂದ ಗಳಿಸಿದ ಲಾಭ 5,120 ಕೋಟಿ ರೂ! Read More »

ಸಾಕ್ಷ್ಯಾಧಾರ ಕೊಟ್ಟರೆ ಜಾಕೀರ್‌ ನಾಯ್ಕ್‌ ಹಸ್ತಾಂತರ: ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ

ಹೊಸದಿಲ್ಲಿ: ಮಂಗಳೂರಿನ ಕುಕ್ಕರ್‌ ಸ್ಫೋಟ, ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಸೇರಿದಂತೆ ದೇಶದಲ್ಲಿ ನಡೆದಿರುವ ಅನೇಕ ಬಾಂಬ್‌ಸ್ಫೋಟ ಕೃತ್ಯಗಳಲ್ಲಿ ಶಾಮೀಲಾಗಿರುವ ಉಗ್ರರಿಗೆ ಸ್ಫೂರ್ತಿಯಾಗಿರುವ ವಿವಾದಿತ ಇಸ್ಲಾಮಿಕ್ ಬೋಧಕ ಜಾಕೀರ್‌ ನಾಯ್ಕ್‌ನನ್ನು ಸಾಕ್ಷ್ಯಾಧಾರ ಒದಗಿಸಿದರೆ ಭಾರತಕ್ಕೆ ಹಸ್ತಾಂತರಿಸುವ ಪ್ರಸ್ತಾವ ಪರಿಗಣಿಸಲು ಮಲೇಷ್ಯಾ ಒಪ್ಪಿದೆ.ಸೂಕ್ತವಾದ ಸಾಕ್ಷ್ಯಾಧಾರ ಸಿಕ್ಕಿದರೆ ಜಾಕೀರ್‌ ನಾಯ್ಕ್‌ನನ್ನು ಹಸ್ತಾಂತರಿಸಬೇಕೆಂಬ ಭಾರತದ ಮನವಿಯನ್ನು ನಮ್ಮ ಸರ್ಕಾರ ಪರಿಗಣಿಸಬಹುದು ಎಂದು ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಹೇಳಿದ್ದಾರೆ.2022ರಲ್ಲಿ ಪ್ರಧಾನಮಂತ್ರಿ ಹುದ್ದೆ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಅನ್ವರ್ ಇಬ್ರಾಹಿಂ ಮೂರು

ಸಾಕ್ಷ್ಯಾಧಾರ ಕೊಟ್ಟರೆ ಜಾಕೀರ್‌ ನಾಯ್ಕ್‌ ಹಸ್ತಾಂತರ: ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ Read More »

ಇಂದಿನಿಂದ ಪ್ರಧಾನಿ ಮೋದಿ ಉಕ್ರೇನ್‌, ಪೋಲೆಂಡ್‌ ಪ್ರವಾಸ

ಹೊಸದಿಲ್ಲಿ: ಪೋಲೆಂಡ್‌ ಮತ್ತು ಯುದ್ಧತ್ರಸ್ತವಾಗಿರುವ ಉಕ್ರೇನ್‌ ದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಇಂದಿನಿಂದ ಪ್ರಾರಂಭವಾಗಲಿದೆ. ಇದು ಮೊರಾರ್ಜಿ ದೇಸಾಯಿ ನಂತರ 45 ವರ್ಷಗಳ ಬಳಿಕ ಯುರೋಪ್‌ ದೇಶಗಳಿಗೆ ಭಾರತದ ಪ್ರಧಾನಿಯೊಬ್ಬರು ನೀಡುವ ಮೊದಲ ಭೇಟಿ. ಈ ವರ್ಷ ಭಾರತ ಮತ್ತು ಪೋಲೆಂಡ್ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 70ನೇ ವಾರ್ಷಿಕೋತ್ಸವವೂ ಆಗಿದೆ. ಪ್ರಧಾನಿ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ ಪೋಲೆಂಡ್‌ಗೆ ಭೇಟಿ ನೀಡಲಿದ್ದಾರೆ. 45

ಇಂದಿನಿಂದ ಪ್ರಧಾನಿ ಮೋದಿ ಉಕ್ರೇನ್‌, ಪೋಲೆಂಡ್‌ ಪ್ರವಾಸ Read More »

ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್‌ ರೈಲು | ತಪ್ಪಿದ ಅನಾಹುತ

ಉತ್ತರ ಪ್ರದೇಶ  : ಸಬರಮತಿ ಎಕ್ಸ್‌ಪ್ರೆಸ್‌ ರೈಲಿನ 22 ಬೋಗಿಗಳು ಹಳಿ ತಪ್ಪಿದೆ. ಅದೃಷ್ಟವಶಾತ್ ಯವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾನ್ಸುರ್‌ ಮತ್ತು ಭೀಮಸೇನ್ ನಡುವೆ ಸಬರಮತಿ ಎಕ್ಸೆಸ್ ರೈಲಿನ 22 ಬೋಗಿಗಳು ಹಳಿ ತಪ್ಪಿದೆ. ಅದೇ ಹಳಿ ಮೇಲೆ ಮೆಮೊ ರೈಲೊಂದು ಬರುತ್ತಿತ್ತು. ಅದೃಷ್ಟವಷಾತ್ ಯಾವುದೇ ಸಾವುನೋವು ಸಂಭವಿಸಿಲ್ಲ. ಪ್ರಯಾಣಿಕರನ್ನು ಬಸ್ಸಿನ ಮೂಲಕ ಕಾನ್ಸುರ್‌ ರೈಲ್ವೆ ಸ್ಟೇಷನ್ ತಲುಪಿಸಿದ್ದೇವೆ ಎಂದು ಜಿಲ್ಲಾ ಮಾಜಿಸ್ಟ್ರೇಟ್ ರಾಕೇಶ್ ವರ್ಮಾ ತಿಳಿಸಿದ್ದಾರೆ. ಸಬರಮತಿ ಎಕ್ಸ್‌ಪ್ರೆಸ್‌) ರೈಲು ಕಾನ್ಸುರ್‌ ಹತ್ತಿರ ನಸುಕಿನ 2:35 ಗಂಟೆಗೆ

ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್‌ ರೈಲು | ತಪ್ಪಿದ ಅನಾಹುತ Read More »

19 ಕಡೆಗಳಲ್ಲಿ ಬಾಂಬ್‍ ಇಟ್ಟಿದ್ದೇವೆ | ಅಸ್ಸಾಂನ ದಂಗೆಕೋರ ಗುಂಪೊಂದರಿಂದ ಬೆದರಿಕೆ

ಅಸ್ಸಾಂ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಲು ಅಸ್ಸಾಂನ 19 ಕಡೆ ಬಾಂಬ್ ಇಟ್ಟಿದ್ದೆವು. ಆದರೆ, ತಾಂತ್ರಿಕ ದೋಷದಿಂದ ಅವುಗಳು ಸ್ಫೋಟಗೊಂಡಿಲ್ಲ ಎಂದು ಅಸ್ಸಾಂನ ದಂಗೆಕೋರ ಗುಂಪೊಂದು ತಿಳಿಸಿದೆ. ಗುವಾಹಟಿಯ 8 ಪ್ರದೇಶಗಳು ಸೇರಿದಂತೆ 19 ಸ್ಥಳಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಬೆಳಿಗ್ಗೆ 11.30ರ ಸುಮಾರಿಗೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ದಂಗೆಕೋರರ ಗುಂಪು ತಿಳಿಸಿದೆ. ಬಾಂಬ್ ಇರಿಸಲಾಗಿರುವ ಕೆಲವು ಪ್ರದೇಶಗಳ ಚಿತ್ರಗಳನ್ನೂ ಕೂಡ ನಿಷೇಧಿತ ಸಂಘಟನೆ ಹಂಚಿಕೊಂಡಿದೆ.ಅದರಲ್ಲಿ ಒಂದು ಪ್ರದೇಶವು ರಾಜಧಾನಿ ಗುವಾಹಟಿಯ ದಿಸ್ಪುರ್‌ ನ

19 ಕಡೆಗಳಲ್ಲಿ ಬಾಂಬ್‍ ಇಟ್ಟಿದ್ದೇವೆ | ಅಸ್ಸಾಂನ ದಂಗೆಕೋರ ಗುಂಪೊಂದರಿಂದ ಬೆದರಿಕೆ Read More »

ಕೆಂಪುಕೋಟೆಯ ಮೇಲೆ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ |  ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ದಿಲ್ಲಿಯ ಕೆಂಪುಕೋಟೆಯ ಮೇಲೆ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಸಂಖ್ಯಾತ ಸ್ವಾತಂತ್ರ್ಯ ಪ್ರೇಮಿಗಳ ಬಲಿದಾನಕ್ಕೊಂದು ದೊಡ್ಡ ಪ್ರಣಾಮ. ವಿಕಸಿತ ಭಾರತ 2047 ಕೇವಲ ಪದಗಳಲ್ಲ. 140 ಕೋಟಿ ಜನರ ಸಂಕಲ್ಪ ಎಂದು ಹೇಳಿದರು. ಪ್ರಕೃತಿ ವಿಕೋಪದಿಂದ ಹಲವಾರು ಮಂದಿ ತಮ್ಮ ಕುಟುಂಬ, ಆಸ್ತಿಯನ್ನು ಕಳೆದುಕೊಂಡಿದ್ದಾರೆ. ಹೊರ ರಾಷ್ಟ್ರವೂ ನಷ್ಟ ಅನುಭವಿಸಿದೆ. ಇಂದು, ನಾನು ಅವರೆಲ್ಲರಿಗೂ ನನ್ನ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ ಮತ್ತು ಈ ಬಿಕ್ಕಟ್ಟಿನ ಸಮಯದಲ್ಲಿ ಈ ರಾಷ್ಟ್ರವು ಅವರೊಂದಿಗೆ

ಕೆಂಪುಕೋಟೆಯ ಮೇಲೆ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ |  ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ Read More »

ಸ್ವಾತಂತ್ರ್ಯ ದಿನಾಚರಣೆ ಮನೆ ಮನೆಯ ಹಬ್ಬವಾಗಲಿ

78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಪ್ರತಿ ವರ್ಷದಂತೆ ಈ ವರ್ಷವೂ ಸಂಭ್ರಮದಿಂದ ಸ್ವಾತಂತ್ರ್ಯ ಆಚರಿಸಲಾಗುತ್ತದೆ. ಸುಮಾರು 200 ವರ್ಷಗಳ ಕಾಲ ಬ್ರಿಟಿಷರ ಅಳ್ವಿಕೆಯಿಂದ ಭಾರತಕ್ಕೆ ಸ್ವಾತಂತ್ರ್ಯ ದೊರೆತ ದಿನವಿದು. ನಮ್ಮ ಪ್ರೀತಿಯ ಮಾತೃಭೂಮಿಗಾಗಿ ಅನೇಕ ಸ್ವಾತಂತ್ರ್ಯ ಹೋರಾಟಗಾರರು ವೀರರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ದಿನವಾಗಿದೆ. ಸ್ವಾತಂತ್ರ್ಯ ದಿನ ಕೇವಲ ಆಗಸ್ಟ್ 15ಕ್ಕೆ ಮಾತ್ರ ಸೀಮಿತವಾಗಿಲ್ಲ, ಸ್ವಾತಂತ್ರ್ಯ ದಿನಾಚರಣೆ ವರ್ಷಕ್ಕೊಮ್ಮೆ ಬಂದರೂ ನಾವು ನಮ್ಮ ಸಂವಿಧಾನದ ಕಾನೂನಿಗೆ ಒಳಪಟ್ಟು ಪ್ರತಿ ದಿನ ಸ್ವಾತಂತ್ರ್ಯ ಹೊಂದಿರುತ್ತೇವೆ.

ಸ್ವಾತಂತ್ರ್ಯ ದಿನಾಚರಣೆ ಮನೆ ಮನೆಯ ಹಬ್ಬವಾಗಲಿ Read More »

ವಯನಾಡಿನಲ್ಲಿ ಭೂಕುಸಿತ | ಮುಂಡಕ್ಕೆ ಮತ್ತು ಚೂರಲ್‌ ಮಲೆಯ ಶಾಖೆಗಳಲ್ಲಿನ ಸಾಲ ಮನ್ನಾ ಮಾಡಲು ಸರ್ಕಾರಿ ಸ್ವಾಮ್ಯದ ಕೇರಳ ಬ್ಯಾಂಕ್ ನಿರ್ಧಾರ

ವಯನಾಡ್: ವಯನಾಡಿನ ಭೂಕುಸಿತ ಪೀಡಿತ ಪ್ರದೇಶಗಳಾದ ಮುಂಡಕ್ಕೆ ಮತ್ತು ಚೂರಲ್‌ ಮಲೆಯ ತನ್ನ ಶಾಖೆಗಳಲ್ಲಿನ ಸಾಲ ಮನ್ನಾ ಮಾಡಲು ಸರ್ಕಾರಿ ಸ್ವಾಮ್ಯದ ಕೇರಳ ಬ್ಯಾಂಕ್ ನಿರ್ಧರಿಸಿದೆ. ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ ಮನೆ, ಆಸ್ತಿಪಾಸ್ತಿಗಳನ್ನು ಕಳೆದುಕೊಂಡು ನಿರಾಶ್ರಿತರಾಗಿರುವ ಕುಟುಂಬಗಳಿಗೆ ಕೇರಳ ಸರ್ಕಾರ ತುರ್ತು ಆರ್ಥಿಕ ನೆರವನ್ನು ಘೋಷಿಸಿದೆ. ನಿತ್ಯ 300 ರೂ. ಹಣವನ್ನು ಸಂತ್ರಸ್ತ ಕುಟುಂಬಗಳಿಗೆ ನೀಡಲು ನಿರ್ಧರಿಸಿದೆ. ಈ ನೆರವು ಪ್ರತಿ ಕುಟುಂಬದ ಗರಿಷ್ಠ ಇಬ್ಬರಿಗೆ ಸಿಗಲಿದೆ. ಒಂದು ವೇಳೆ ಕುಟುಂಬದ ಸದಸ್ಯರು ಅನಾರೋಗ್ಯಕ್ಕೆ ತುತ್ತಾಗಿದ್ದರೆ,

ವಯನಾಡಿನಲ್ಲಿ ಭೂಕುಸಿತ | ಮುಂಡಕ್ಕೆ ಮತ್ತು ಚೂರಲ್‌ ಮಲೆಯ ಶಾಖೆಗಳಲ್ಲಿನ ಸಾಲ ಮನ್ನಾ ಮಾಡಲು ಸರ್ಕಾರಿ ಸ್ವಾಮ್ಯದ ಕೇರಳ ಬ್ಯಾಂಕ್ ನಿರ್ಧಾರ Read More »

ವಯನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ | ವೈಮಾನಿಕ ಸಮೀಕ್ಷೆ

ವಯನಾಡ್: ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿ ನೀಡಿ ದುರಂತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡರು. ಕಣ್ಣೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಹೆಲಿಕಾಪ್ಟರ್ ಮೂಲಕ ವಯನಾಡ್ ತಲುಪಿದರು. ನಂತರ ಭೂಕುಸಿತ ಸಂಭವಿಸಿದ ಮುಂಡಕ್ಕೆ- ಚೂರಲ್ಮಲ-ಪುಂಚಿರಿಮಟ್ಕಂ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಾಯಿತು. ಪ್ರಧಾನಮಂತ್ರಿಯವರೊಂದಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇಂದ್ರ ಸಚಿವ ಸುರೇಶ್ ಗೋಪಿ ಮತ್ತಿತರರು ಉಪಸ್ಥಿತರಿದ್ದರು. ಶಿಬಿರದಲ್ಲಿರುವವರನ್ನು ಮೋದಿ ಖುದ್ದಾಗಿ

ವಯನಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ | ವೈಮಾನಿಕ ಸಮೀಕ್ಷೆ Read More »

error: Content is protected !!
Scroll to Top