ದೇಶ

ಇಸ್ರೇಲ್ ಮತ್ತು ಇರಾನ್ ಯುದ್ಧ ಸನ್ನಿಹಿತ | ಇಸ್ರೇಲ್ ನಿಂದ ನಿರೀಕ್ಷಣಾ ಯುದ್ಧ  ಸಾಧ್ಯತೆ

3 ಆಗೋಸ್ತು 2024ರ ಶನಿವಾರ, ಇರಾನ್ ಮಿಲಿಟರಿಯು ಇಸ್ರೇಲ್ ಮೇಲೆ ‘ನೂರಾರು’ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಒಳಗೊಂಡ ವೈಮಾನಿಕ ದಾಳಿಯನ್ನು ಪ್ರಾರಂಭಿಸಿತು. ಸಿರಿಯಾದಲ್ಲಿರುವ ಇರಾನ್ ಕಾನ್ಸುಲೇಟ್ ಮೇಲೆ ಇಸ್ರೇಲ್ ಪಡೆ ದಾಳಿ ನಡೆಸಿ ಹೆಜ್ಬುಲ್ಲಾ ಉಗ್ರ ಸಂಘಟನೆಯ ಪ್ರಮುಖನನ್ನು ಹೊಡೆದುರುಳಿಸಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ ನಿಂದ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. 7 ಅಕ್ಟೋಬರ್ 2023 : ಇರಾನ್ ಬೆಂಬಲಿತ ಭಯೋತ್ಪಾದಕ ಗುಂಪು ಹಮಾಸ್ ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿತು. ಇದಕ್ಕೆ ಪ್ರತಿಯಾಗಿ […]

ಇಸ್ರೇಲ್ ಮತ್ತು ಇರಾನ್ ಯುದ್ಧ ಸನ್ನಿಹಿತ | ಇಸ್ರೇಲ್ ನಿಂದ ನಿರೀಕ್ಷಣಾ ಯುದ್ಧ  ಸಾಧ್ಯತೆ Read More »

ಡಿಜೆ ವಾಹನಕ್ಕೆ ತಗುಲಿದ ಹೈಟೆನ್ಷನ್ ತಂತಿ | 9 ಮಂದಿ ಮೃತ್ಯು, ಹಲವಾರು ಮಂದಿಗೆ ಗಾಯ

ಬಿಹಾರ : ಡಿಜೆ ವಾಹನಕ್ಕೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ವಿದ್ಯುತ್ ಶಾಕ್‍ ನಿಂದ 9 ಮಂದಿ ಮೃತಪಟ್ಟು, ಹಲವಾರು ಮಂದಿ ಗಾಯಗೊಂಡ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಸುಲ್ತಾನ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಧ್ಯರಾತ್ರಿ ವೇಳೆ ಡಿಜೆ ವಾಹನ ಸಂಚರಿಸುವಾಗ ಹೈಟೆನ್ಸನ್ ತಂತ್ತಿಗೆ ಸಿಲುಕಿದೆ. ಪರಿಣಾಮ ಸಾವು-ನೋವು ಸಂಭವಿಸಿದೆ. ಡಿಜೆ ವಾಹನವು ತುಂಬಾ ಎತ್ತರವಾಗಿತ್ತು. ರಾತ್ರಿ ವೇಳೆ ಹೈಟೆನ್ಷನ್ ತಂತಿ ಅಡ್ಡಲಾಗಿ ಹಾದು ಹೋಗಿದ್ದು ಕಾಣಿಸಿಲ್ಲ. ತಂತಿ ತಾಗಿದೊಡನೆ 9 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಡಿಜೆ ವಾಹನಕ್ಕೆ ತಗುಲಿದ ಹೈಟೆನ್ಷನ್ ತಂತಿ | 9 ಮಂದಿ ಮೃತ್ಯು, ಹಲವಾರು ಮಂದಿಗೆ ಗಾಯ Read More »

ಓದಲು ಹಠ ಹಿಡಿದ ಮಗ | ಗೋಣಿ ಚೀಲದಲ್ಲಿ ಕಟ್ಟಿ ಮಗನನ್ನು ಕೆರೆಗೆ ಎಸೆದ ತಂದೆ

ಹೈದ್ರಾಬಾದ್ : ಮಕ್ಕಳು ಮಾತು ಕೇಳಲ್ಲ, ಓದು ಅಂದ್ರೆ ರಚ್ಚೆ ಹಿಡಿತಾವೆ, ಹೋಮ್‌ವರ್ಕ್ ಮಾಡು ಅಂದ್ರೆ ನೆಪ ತಗಿತಾವೆ. ಅದಕ್ಕೆ ಅವರನ್ನು ರಮಿಸಿ, ಮುದ್ದು ಮಾಡಿ, ಕೊನೆಗೆ ಗದರಿಸಿಯಾದ್ರೂ ಓದಲು ಕೂರಿಸುವ ತಂದೆ ತಾಯಿ ನಮಗೆ ಕಾಣ ಸಿಗ್ತಾರೆ, ಆದ್ರೆ ಇದಕ್ಕೆ ಅಪವಾದ ಎಂಬಂತೆ ಘಟನೆಯೊಂದು ನಡೆದಿದೆ. ತೆಲಂಗಾಣದ ಮೆಹಬೂಬ್‌ ನಗರದಲ್ಲಿರುವ ಕೊಲ್ಲಾಪುರದಲ್ಲಿ ಒಬ್ಬ ತಂದೆ ತನ್ನ ಮಗ ಸರಿಯಾಗಿ ಓದುತ್ತಿಲ್ಲ, ಹೇಳಿದ ಮಾತು ಕೇಳುತ್ತಿಲ್ಲ ಎಂದು ಗೋಣಿ ಚಿಲದಲ್ಲಿ ಕಟ್ಟಿ ಕೆರೆಗೆ ಎಸೆದಿದ್ದಾನೆ. ಮೆಹಬೂಬ ನಗರದ

ಓದಲು ಹಠ ಹಿಡಿದ ಮಗ | ಗೋಣಿ ಚೀಲದಲ್ಲಿ ಕಟ್ಟಿ ಮಗನನ್ನು ಕೆರೆಗೆ ಎಸೆದ ತಂದೆ Read More »

ಬರೋಬ್ಬರಿ 52 ವರ್ಷಗಳ ಬಳಿಕ ಹಾಕಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಭಾರತ | ಐತಿಹಾಸಿಕ ಸಾಧನೆ

ಬರೋಬ್ಬರಿ 52 ವರ್ಷಗಳ ಬಳಿಕ ಪ್ಯಾರಿಸ್ ಒಲಿಂಪಿಕ್ಸ್ 2024ರ ಪುರುಷರ ಹಾಕಿ ಪೂಲ್ ಬಿ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 3-2 ಗೋಲುಗಳಿಂದ ಸೋಲಿಸುವ ಮೂಲಕ ಭಾರತದ ಹಾಕಿ ತಂಡವು ಐತಿಹಾಸಿಕ ಸಾಧನೆ ಮಾಡಿದೆ. 1972ರ ಒಲಿಂಪಿಕ್ಸ್ ನಂತರ ಭಾರತವು ಹಾಕಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿದ್ದು ಇದೇ ಮೊದಲು. ಕಳೆದ ಬಾರಿ ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡವು ರಜತ ಪದಕ ಜಯಿಸಿತ್ತು. ಭಾರತ ಪರ ಅಭಿಷೇಕ್ ಮತ್ತು ಹರ್ಮನ್‌ಪ್ರೀತ್ ಸಿಂಗ್ (2) ಗೋಲು ಗಳಿಸಿದರು. ಥಾಮಸ್ ಕ್ರೇಗ್ ಮತ್ತು

ಬರೋಬ್ಬರಿ 52 ವರ್ಷಗಳ ಬಳಿಕ ಹಾಕಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಭಾರತ | ಐತಿಹಾಸಿಕ ಸಾಧನೆ Read More »

ವಯನಾಡ್ ಮೆಪ್ಪಾಡಿಯಲ್ಲಿ ಭಾರೀ ಭೂಕುಸಿತ | 143 ಮಂದಿ ಸಾವು, 130 ಕ್ಕೂ ಅಧಿಕ ಮಂದಿಗೆ ಗಾಯ | ಸೇನೆಯಿಂದ ಸಾವಿರಾರು ಮಂದಿಯ ರಕ್ಷಣೆ

ವಯನಾಡ್: ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಸಂಭವಿಸಿದ ಭಾರಿ ಭೂಕುಸಿತದಲ್ಲಿ ಕನಿಷ್ಠ 143 ಜನರು ಸಾವನ್ನಪ್ಪಿದ್ದು, ಸುಮಾರು 130 ಜನರು ಗಾಯಗೊಂಡಿದ್ದಾರೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ವಯನಾಡ್ನಲ್ಲಿ ಭೂಕುಸಿತಗಳು ಸಂಭವಿಸಿದ ಕಾರಣ ಎನ್‌ ಆರ್‌ಎಫ್ ಮತ್ತು ಸೇನೆ ಸೇರಿದಂತೆ ಅನೇಕ ಏಜೆನ್ಸಿಗಳನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಜಿಲ್ಲೆಯ ಮುಂಡಕ್ಷೆ, ಚೂರಲ್ಮಾಲಾ, ಅಟ್ಠಮಾಲಾ ಮತ್ತು ನೂಲ್ಕುಳ ಜಿಲ್ಲೆಗಳು ಜಿಲ್ಲೆಯಲ್ಲಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಾಗಿವೆ. ಚಾಲಿಯಾರ್ ನದಿಯಲ್ಲಿ ಹಲವಾರು ಜನರು ಕೊಚ್ಚಿ ಹೋಗಿದ್ದಾರೆ ಎಂದು

ವಯನಾಡ್ ಮೆಪ್ಪಾಡಿಯಲ್ಲಿ ಭಾರೀ ಭೂಕುಸಿತ | 143 ಮಂದಿ ಸಾವು, 130 ಕ್ಕೂ ಅಧಿಕ ಮಂದಿಗೆ ಗಾಯ | ಸೇನೆಯಿಂದ ಸಾವಿರಾರು ಮಂದಿಯ ರಕ್ಷಣೆ Read More »

ಕೇರಳದ ವಯನಾಡ್‍ ನಲ್ಲಿ ಭಾರೀ ಭೂಕುಸಿತ

ವಯನಾಡ್: ಭಾರೀ ಭೂಕುಸಿತ ಸಂಭವಿಸಿದ ಪರಿಣಾಮ ಹಲವಾರು ಮಂದಿ ಸಿಲುಕಿರುವ ಘಟನೆ ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ನಡೆದಿದೆ. ಹಲವಾರು ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಮುಂಜಾನೆ ಭಾರಿ ಭೂಕುಸಿತ ಸಂಭವಿಸಿದ್ದು, ವರದಿಗಳ ಪ್ರಕಾರ, ನೂರಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಅಗ್ನಿಶಾಮಕ ಮತ್ತು ಎನ್ಸಿಆರ್ಎಫ್ ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಮತ್ತೊಂದು ಎನ್ಸಿಆರ್‌ಎಫ್ ತಂಡವು ವಯನಾಡಿಗೆ ತೆರಳುತ್ತಿದ್ದು. ಹೆಚ್ಚುವರಿಯಾಗಿ ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು

ಕೇರಳದ ವಯನಾಡ್‍ ನಲ್ಲಿ ಭಾರೀ ಭೂಕುಸಿತ Read More »

6 ನೂತನ ರಾಜ್ಯಪಾಲರ ನೇಮಕ | ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನೇಮಕ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 6 ಮಂದಿ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. ಮೈಸೂರಿನ ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ಮೇಘಾಲಯದ ರಾಜ್ಯಪಾಲರಾಗಿ, ಗುಜರಾತ್‌ನ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಕೈಲಾಸನಾಥನ್ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್, ಮಹಾರಾಷ್ಟ್ರದ ಮಾಜಿ ಸ್ಟಾಪೀಕರ್ ಹರಿಭಾವು ಬಾಗಡೆ ಅವರನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ, ಮಾಜಿ ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಅವರು ಜಾರ್ಖಂಡ್‌ಗೆ ಹಾಗೂ ಬಿಜೆಪಿಯ ಹಿರಿಯ ನಾಯಕ ಒಪಿ ಮಾಥುರ್ ಅವರನ್ನು ಸಿಕ್ಕಿಂನ ರಾಜ್ಯಪಾಲರನ್ನಾಗಿ, ತ್ರಿಪುರಾ ಮಾಜಿ ಸಿಎಂ

6 ನೂತನ ರಾಜ್ಯಪಾಲರ ನೇಮಕ | ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನೇಮಕ Read More »

ನವಿಮುಂಬಯಿಯಲ್ಲಿ ಬಹು ಮಹಡಿ ಕಟ್ಟಡ ಕುಸಿತ | ಕಟ್ಟಡದಡಿ ಹಲವಾರು ಮಂದಿ ಸಿಲುಕಿರುವ ಶಂಕೆ

ಮುಂಬಯಿ: ಬಹು ಮಹಡಿಯ ಕಟ್ಟಡವೊಂದು ಕುಸಿದ ಪರಿಣಾಮ ಹಲವಾರು ಮಂದಿ ಅಡಿಯಲ್ಲಿ ಸಿಲುಕಿರುವ ಘಟನೆ ನವಿಮುಂಬಯಿಯಲ್ಲಿ ಇಂದು ಮುಂಜಾನೆ ನಡೆದಿದೆ. ನವಿ ಮುಂಬಯಿಯ ಶಹಬಾಜ್ ಎಂಬಲ್ಲಿ ಇಂದು ಮುಂಜಾನೆ ಸುಮಾರು 5 ಗಂಟೆ ಸಮಯಕ್ಕೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಹಲವಾರು ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ನವಿಮುಂಬಯಿ ಮಹಾನಗರ ಪಾಲಿಕೆ ಆಯುಕ್ತ ಕೈಲಾಸ್ ಶಿಂಧೆ ತಿಳಿಸಿದ್ದಾರೆ. ಕಟ್ಟಡದಲ್ಲಿ 13 ಫ್ಲಾಟ್‌ಗಳಿದ್ದು 24 ಕುಟುಂಬಗಳು ವಾಸವಾಗಿದ್ದವು ಎಂದು

ನವಿಮುಂಬಯಿಯಲ್ಲಿ ಬಹು ಮಹಡಿ ಕಟ್ಟಡ ಕುಸಿತ | ಕಟ್ಟಡದಡಿ ಹಲವಾರು ಮಂದಿ ಸಿಲುಕಿರುವ ಶಂಕೆ Read More »

ಲವ್‍ ಜಿಹಾದಿ ಪ್ರಕರಣ | ಬದಿಯಡ್ಕ ಪೊಲೀಸ್ ಠಾಣಾ ಎದುರು ವಿಹಿಂಪ ನಿಂದ ಪ್ರತಿಭಟನೆ

ಬದಿಯಡ್ಕ: ಲವ್ ಜಿಹಾದಿ ಪ್ರಕರಣವೊಂದನ್ನು ವಿರೋಧಿಸಿ  ವಿಶ್ವ ಹಿಂದೂ ಪರಿಷತ್ ವತಿಯಿಂದ ಬದಿಯಡ್ಕ ಠಾಣಾ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕೆಲವು ದಿನಗಳ ಹಿಂದೆ ಕೇರಳದ ಅನ್ಯ ಕೋಮಿನ ಯುವಕನೋರ್ವ ಮಂಗಳೂರಿನ ಹಿಂದೂ ಯುವತಿಯನ್ನು ಯಾಮಾರಿಸಿ ಮದುವೆಯಾದ ಘಟನೆ ಕೇರಳ ಮೂಲದಲ್ಲಿ ನಡೆದಿತ್ತು. ಇದೊಂದು ಲವಜಿಹಾದ್ ಪ್ರಕರಣವಾಗಿದ್ದು, ಈ ಪ್ರಕರಣವನ್ನು ವಿರೋಧಿಸಿ ಹಿಂದೂ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದವು. ಈ ಬಗ್ಗೆ ಬದಿಯಡ್ಕ ಠಾಣಾ ಮುಂಭಾಗದಲ್ಲಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆ ನಡೆಸಲು ಠಾಣೆಯು

ಲವ್‍ ಜಿಹಾದಿ ಪ್ರಕರಣ | ಬದಿಯಡ್ಕ ಪೊಲೀಸ್ ಠಾಣಾ ಎದುರು ವಿಹಿಂಪ ನಿಂದ ಪ್ರತಿಭಟನೆ Read More »

ಟೋಲ್ ವ್ಯವಸ್ಥೆ ರದ್ದು | ಉಪಗ್ರಹ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ : ನಿತಿನ್ ಗಡ್ಕರಿ

ನವದೆಹಲಿ: ಪ್ರಸ್ತುತ ಅಸ್ತಿತ್ವದಲ್ಲಿರುವ ಟೋಲ್ ವ್ಯವಸ್ಥೆಯನ್ನು ರದ್ದುಗೊಳಿಸುವ ನಿರ್ಧಾರವನ್ನು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ತೆಗೆದುಕೊಂಡಿದ್ದಾರೆ. ಇದಕ್ಕೆ ಪರ್ಯಾಯವಾಗಿ ಉಪಗ್ರಹ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಘೋಷಿಸಲಾಗಿದೆ. ಸರಕಾರ ಟೋಲ್ ರದ್ದುಗೊಳಿಸಿ ಶೀಘ್ರದಲ್ಲೇ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನ ಪ್ರಾರಂಭಿಸಲಾಗುವುದು ಎಂದು ಅವರು ಶುಕ್ರವಾರ ಹೇಳಿದ್ದಾರೆ. ಟೋಲ್ ಸಂಗ್ರಹವನ್ನ ಹೆಚ್ಚಿಸುವುದು ಮತ್ತು ಟೋಲ್ ಪ್ಲಾಜಾಗಳಲ್ಲಿ ದಟ್ಟಣೆಯನ್ನ ಕಡಿಮೆ ಮಾಡುವುದು ಈ ವ್ಯವಸ್ಥೆಯನ್ನ ಜಾರಿಗೆ ತರುವ ಹಿಂದಿನ ಉದ್ದೇಶವಾಗಿದೆ. ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ ಅವರು,

ಟೋಲ್ ವ್ಯವಸ್ಥೆ ರದ್ದು | ಉಪಗ್ರಹ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ : ನಿತಿನ್ ಗಡ್ಕರಿ Read More »

error: Content is protected !!
Scroll to Top