ದೇಶ

ಟೋಲ್ ವ್ಯವಸ್ಥೆ ರದ್ದು | ಉಪಗ್ರಹ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ : ನಿತಿನ್ ಗಡ್ಕರಿ

ನವದೆಹಲಿ: ಪ್ರಸ್ತುತ ಅಸ್ತಿತ್ವದಲ್ಲಿರುವ ಟೋಲ್ ವ್ಯವಸ್ಥೆಯನ್ನು ರದ್ದುಗೊಳಿಸುವ ನಿರ್ಧಾರವನ್ನು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ತೆಗೆದುಕೊಂಡಿದ್ದಾರೆ. ಇದಕ್ಕೆ ಪರ್ಯಾಯವಾಗಿ ಉಪಗ್ರಹ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಘೋಷಿಸಲಾಗಿದೆ. ಸರಕಾರ ಟೋಲ್ ರದ್ದುಗೊಳಿಸಿ ಶೀಘ್ರದಲ್ಲೇ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನ ಪ್ರಾರಂಭಿಸಲಾಗುವುದು ಎಂದು ಅವರು ಶುಕ್ರವಾರ ಹೇಳಿದ್ದಾರೆ. ಟೋಲ್ ಸಂಗ್ರಹವನ್ನ ಹೆಚ್ಚಿಸುವುದು ಮತ್ತು ಟೋಲ್ ಪ್ಲಾಜಾಗಳಲ್ಲಿ ದಟ್ಟಣೆಯನ್ನ ಕಡಿಮೆ ಮಾಡುವುದು ಈ ವ್ಯವಸ್ಥೆಯನ್ನ ಜಾರಿಗೆ ತರುವ ಹಿಂದಿನ ಉದ್ದೇಶವಾಗಿದೆ. ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ ಅವರು, […]

ಟೋಲ್ ವ್ಯವಸ್ಥೆ ರದ್ದು | ಉಪಗ್ರಹ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ : ನಿತಿನ್ ಗಡ್ಕರಿ Read More »

ಭಾರತೀಯ ಜನತಾ ಪಾರ್ಟಿ ರಾಜ್ಯ ಉಸ್ತುವಾರಿಗಳ ನೇಮಕ

ನವದೆಹಲಿ :  ರಾಜ್ಯಸಭಾ ಸದಸ್ಯ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರವಾಲ್ ಅವರನ್ನು ರಾಜಸ್ಥಾನದ ಪಕ್ಷದ ಉಸ್ತುವಾರಿ ಮತ್ತು ಮಾಜಿ ಲೋಕಸಭಾ ಸಂಸದ ಹರೀಶ್ ದ್ವಿವೇದಿ ಅವರನ್ನು ಅಸ್ಸಾಂನ ಉಸ್ತುವಾರಿಯನ್ನಾಗಿ ಶುಕ್ರವಾರ ನೇಮಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಅರವಿಂದ್ ಮೆನನ್ ಅವರನ್ನು ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಮಾಜಿ ಸಂಸದ ರಾಜದೀಪ್ ರಾಯ್ ಅವರನ್ನು ಕ್ರಮವಾಗಿ ತಮಿಳುನಾಡು ಮತ್ತು ತ್ರಿಪುರಾದ ಉಸ್ತುವಾರಿಯ ಜವಾಬ್ದಾರಿ ವಹಿಸಿದ್ದಾರೆ. ಮೆನನ್ ಅವರಿಗೆ ಈಗಾಗಲೇ ನಿರ್ವಹಿಸಿದ

ಭಾರತೀಯ ಜನತಾ ಪಾರ್ಟಿ ರಾಜ್ಯ ಉಸ್ತುವಾರಿಗಳ ನೇಮಕ Read More »

ಕಾಠ್ಮಂಡು ವಿಮಾನ ಪಥನ | 19 ಮಂದಿ ಮೃತ್ಯು

ಕಾಠ್ಮಂಡು : ಕಾಶ್ಮೀಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಶೌರ್ಯ ಏರ್ ಲೈನ್ಸ್ ನ ವಿಮಾನ ಪತನಗೊಂಡಿದ್ದು, ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 19 ಮಂದಿಯೂ ಸಜೀವವಾಗಿ ದಹನವಾಗಿರುವ ಘಟನೆ ಬುಧವಾರ (ಜು.24) ನಡೆದಿದೆ. ಕಾಂಡುವಿನ ಪೋಗ್ರಾದಿಂದ ವಿಮಾನ ಟೇಕ್ ಆಫ್ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ವಿಮಾನದಲ್ಲಿ ಕೇವಲ ಏರ್ ಲೈನ್ಸ್ ನ ಟೆಕ್ನಿಕಲ್ ಸಿಬ್ಬಂದಿಗಳು ಮಾತ್ರ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ವಿಮಾನದಲ್ಲಿ ಬೇರೆ ಯಾವ ಪ್ರಯಾಣಿಕರು ಇಲ್ಲ ಎಂಬುದಾಗಿ ವರದಿ ವಿವರಿಸಿದ್ದು, ಸಾವು-ನೋವಿನ ಬಗ್ಗೆ

ಕಾಠ್ಮಂಡು ವಿಮಾನ ಪಥನ | 19 ಮಂದಿ ಮೃತ್ಯು Read More »

ಪಾರಿವಾಳ ರಕ್ಷಣೆಗೆ ಹೋದ ಬಾಲಕ ವಿದ್ಯುತ್ ತಂತಿ ತಗುಲಿ ಮೃತ್ಯು

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆ ಮೊಳಕಾಲ್ಕೂರು ತಾಲೂಕಿನ ಹನುಮಾಪುರ ಗ್ರಾಮದಲ್ಲಿ ವಿದ್ಯುತ್‌ ಕಂಬಕ್ಕೆ ಸಿಲುಕಿದ್ದ ಪಾರಿವಾಳವನ್ನು ರಕ್ಷಿಸಲು ಕಂಬ ಏರಿದ್ದ ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ಬಾಲಕ ರಾಮಚಂದ್ರ (12) ಎಂದು ಗುರುತಿಸಲಾಗಿದೆ. ಈತ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಗ್ರಾಮದ ವಿದ್ಯುತ್‌ ಕಂಬದಲ್ಲಿನ ತಂತಿಗೆ ಪಾರಿವಾಳವೊಂದು ಸಿಲುಕಿ ಜೀವನ್ಮರಣ ಮಧ್ಯೆ ಹೋರಾಡುತ್ತಿರುವುದನ್ನು ಗಮನಿಸಿದ ಈತ ಪಾರಿವಾಳವನ್ನು ರಕ್ಷಿಸಲೆಂದು ವಿದ್ಯುತ್ ಕಂಬ ಏರಿದ್ದ. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಪಾರಿವಾಳ ರಕ್ಷಣೆಗೆ ಹೋದ ಬಾಲಕ ವಿದ್ಯುತ್ ತಂತಿ ತಗುಲಿ ಮೃತ್ಯು Read More »

ಕೇಂದ್ರ ಬಜೆಟ್ ಮಂಡನೆ | ಆದಾಯಕ್ಕೆ ತೆರಿಗೆ ಸ್ಲ್ಯಾಬ್ ಗಳಲ್ಲಿ ಪರಿಷ್ಕರಣೆ

ದೆಹಲಿ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಕೇಂದ್ರ ಬಜೆಟ್ 2024 – 25ರಲ್ಲಿ ಆದಾಯ ತೆರಿಗೆಯ ಹೊಸ ಪದ್ಧತಿಯಲ್ಲಿ ಸ್ಟಾಂಡರ್ಡ್ ಡಿಡಕ್ಷನ್ ಮಿತಿ ಹೆಚ್ಚಳ ಮಾಡಿದರಲ್ಲದೆ, ಆದಾಯ ತೆರಿಗೆ ಸ್ಲ್ಯಾಬ್ ಗಳಲ್ಲಿ ಪರಿಷ್ಕರಣೆಯನ್ನು ಪ್ರಕಟಿಸಿದರು ಸ್ಟಾಂಡರ್ಡ್ ಡಿಡಕ್ಷನ್ 50,000 ರಿಂದ 75,000 ರೂಪಾಯಿಗೆ ಏರಿಕೆ ಪಿಂಚಣಿದಾರರಿಗೆ ಫ್ಯಾಮಿಲಿ ಪೆನ್ಶನ್ ಮಿತಿ 15,000 ರಿಂದ 25,000 ರೂಪಾಯಿಗೆ ಏರಿಕೆ ಹಳೆಯ ಟ್ಯಾಕ್ಸ್‌ ವಿವರ ಎರಡೂವರೆ ಲಕ್ಷ ರೂವರೆಗಿನ ಆದಾಯ : ತೆರಿಗೆ

ಕೇಂದ್ರ ಬಜೆಟ್ ಮಂಡನೆ | ಆದಾಯಕ್ಕೆ ತೆರಿಗೆ ಸ್ಲ್ಯಾಬ್ ಗಳಲ್ಲಿ ಪರಿಷ್ಕರಣೆ Read More »

ಆರ್ ಎಸ್ ಎಸ್ ಸೇರಲು ಇನ್ನು ಸರಕಾರಿ ನೌಕರರಿಗೆ ಮುಕ್ತ ಅವಕಾಶ | ಸದಸ್ಯತ್ವ ಪಡೆಯುವುದಕ್ಕೆ ವಿಧಿಸಲಾಗಿದ್ದ ನಿಷೇಧ ವಾಪಾಸು

ನವದೆಹಲಿ : ಕೇಂದ್ರ ಸರ್ಕಾರವು ದಶಕಗಳ ಹಿಂದೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದು ಮತ್ತು ಸದಸ್ಯತ್ವ ಪಡೆಯುವುದಕ್ಕೆ ವಿಧಿಸಲಾಗಿದ್ದ ನಿಷೇಧವನ್ನು ವಾಪಸ್ ಪಡೆದಿದೆ. ಜು. 9ರಂದೇ ಈ ಸಂಬಂಧ ಸರ್ಕಾರ ಹೊರಡಿಸಿದ್ದ ಜ್ಞಾಪನಾ ಪತ್ರ ಸೋಮವಾರ ಬಹಿರಂಗವಾಗಿದೆ. ಭಾರತೀಯ ಸೇವಾ ನಿಯಮವು 1966ರಿಂದ ಸರ್ಕಾರಿ ಸಿಬ್ಬಂದಿಗೆ ಆರ್‌ಎಸ್‌ಎಸ್‌ ಮತ್ತು ‘ಜಮಾತ್- ಎ-ಇಸ್ಲಾಮಿ’ ಸಂಘಟನೆಗಳ ಸದಸ್ಯತ್ವ ಪಡೆಯುವುದು ಮತ್ತು ಅವುಗಳ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಿತ್ತು.ಭಾರತೀಯ ಸೇವಾ ನಿಯಮವು 1966ರಿಂದ ಸರ್ಕಾರಿ ಸಿಬ್ಬಂದಿಗೆ

ಆರ್ ಎಸ್ ಎಸ್ ಸೇರಲು ಇನ್ನು ಸರಕಾರಿ ನೌಕರರಿಗೆ ಮುಕ್ತ ಅವಕಾಶ | ಸದಸ್ಯತ್ವ ಪಡೆಯುವುದಕ್ಕೆ ವಿಧಿಸಲಾಗಿದ್ದ ನಿಷೇಧ ವಾಪಾಸು Read More »

ಮ್ಯಾನ್ಮಾರ್ ನಿಂದ ಮಿಜೋರಾಂಗೆ ಅಡಿಕೆ ಕಳ್ಳ ಸಾಗಣೆ | ಸಮಗ್ರ ತನಿಖೆಗೆ ಸಿಬಿಐಗೆ

ಐಜ್ವಾಲ್: ಮ್ಯಾನ್ಮಾರ್‌ನಿಂದ ಮಿಜೋರಾಂಗೆ ಅಡಿಕೆ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸುವಂತೆ ಗುವಾಹಟಿ ಹೈಕೋರ್ಟ್‌ ಐಜ್ವಾಲ್ ಪೀಠ ಕೇಂದ್ರ ತನಿಖಾ ಸಂಸ್ಥೆಗೆ ಆದೇಶ ನೀಡಿದೆ. ಸಾಮಾಜಿಕ ಕಾರ್ಯಕರ್ತೆ ನನ್ನಮಾಚೌಂಗಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಪೀಠವು ಈ ಆದೇಶ ನೀಡಿದೆ. ‘ಮ್ಯಾನ್ಮಾರ್’ ಮೂಲದಿಂದ ಈ ಕೃತ್ಯ ನಡೆದಿರುವ ಶಂಕೆ ಇದೆ. ಅಂತಾರಾಷ್ಟ್ರೀಯ ಕಳ್ಳಸಾಗಣೆ ಪ್ರಕರಣ ಇದಾಗಿರುವುದರಿಂದ ತಾವು ಹೆಚ್ಚಿನ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ರಾಜ್ಯ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು. ಇದನ್ನು ಆಧರಿಸಿ

ಮ್ಯಾನ್ಮಾರ್ ನಿಂದ ಮಿಜೋರಾಂಗೆ ಅಡಿಕೆ ಕಳ್ಳ ಸಾಗಣೆ | ಸಮಗ್ರ ತನಿಖೆಗೆ ಸಿಬಿಐಗೆ Read More »

ಮತ್ತೆ ಕೇರಳದಲ್ಲಿ ನಿಫಾ ವೈರಸ್ ಸದ್ದು | 14 ವರ್ಷದ ಬಾಲಕನಲ್ಲಿ ಪತ್ತೆ

ಕೇರಳ : ಮತ್ತೆ ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿದ್ದು, 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಈ ನಿಟ್ಟಿನಲ್ಲಿ ಕೇರಳದಲ್ಲಿ ಹೆಚ್ಚಿನ ನಿಗಾ ವಹಿಸಲು ಎಚ್ಚರಿಕೆ ನೀಡಲಾಗಿದೆ. ಆರೋಗ್ಯ ಸಚಿವೆ ವೀಣಾ ಜಾರ್ಜ್ ನಿಫಾ ವೈರಸ್ ಕುರಿತು ನಿಗಾ ವಹಿಸಲು ಸೂಚನೆ ನೀಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 14 ವರ್ಷದ ಬಾಲಕನಲ್ಲಿ ನಿಫಾ ಸೋಂಕಿರುವುದನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯು (ಎನ್‌ಐವಿ) ದೃಢಪಡಿಸಿದೆ. ಸೋಂಕು ತಗುಲಿದ ಬಾಲಕನನ್ನು ಕೋಯಿಕ್ಕೋಡ್‌ನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ.

ಮತ್ತೆ ಕೇರಳದಲ್ಲಿ ನಿಫಾ ವೈರಸ್ ಸದ್ದು | 14 ವರ್ಷದ ಬಾಲಕನಲ್ಲಿ ಪತ್ತೆ Read More »

ಹಿರಿಯ ಪತ್ರಕರ್ತ ಈಚನೂರು ಕುಮಾರ್  ನಿಧನ

ಮೈಸೂರು : ಹಿರಿಯ ಪತ್ರಕರ್ತ, ಇತಿಹಾಸ ತಜ್ಞ ಈಚನೂರು ಕುಮಾ‌ರ್ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲಿದ್ದ ಅವರು ಶನಿವಾರ (ಜು.20) ಬೆಳಗ್ಗೆ 11:30ರ ವೇಳೆಗೆ ಮೈಸೂರಿನ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ ಪತ್ನಿ, ಪುತ್ರಿ ಅಕ್ಷರಾ, ಪುತ್ರ ಅಜಿತ್ ಇದ್ದಾರೆ. ಮಕ್ಕಳಿಬ್ಬರೂ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸುಮಾರು ಐದು ದಶಕಗಳಿಂದ ಪತ್ರಕರ್ತರಾಗಿದ್ದ ಈಚನೂರು ಕುಮಾ‌ರ್ ಅಪಾರ ಅನುಭವ ಹೊಂದಿದ್ದರು. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಈಚನೂರಿನವರಾದ ಕುಮಾರ್ ಮೈಸೂರಿನಲ್ಲೇ ಬಹುಕಾಲದಿಂದ ವಾಸವಾಗಿದ್ದರು. ಲೋಕವಾಣಿ, ನವಧ್ವನಿ, ಮೈಸೂರು ಮಿತ್ರ, ಸ್ಟಾರ್ ಆಫ್

ಹಿರಿಯ ಪತ್ರಕರ್ತ ಈಚನೂರು ಕುಮಾರ್  ನಿಧನ Read More »

ರಾಷ್ಟ್ರೀಯ ಹೆದ್ದಾರಿ 275 ರ ಸಂಪಾಜೆ-ಮಡಿಕೇರಿ ಸಂಪರ್ಕ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ

ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ಸಂಪರ್ಕ ರಸ್ತೆಯಲ್ಲಿ ಜು.18 ರಿಂದ ಜು.22 ರ ತನಕ ಪ್ರತಿದಿನ ರಾತ್ರಿ 8 ರಿಂದ ಬೆಳಿಗ್ಗೆ 6 ಗಂಟೆ ತನಕ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಸಂಪಾಜೆ-ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತಾಸಕ್ತಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ

ರಾಷ್ಟ್ರೀಯ ಹೆದ್ದಾರಿ 275 ರ ಸಂಪಾಜೆ-ಮಡಿಕೇರಿ ಸಂಪರ್ಕ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ Read More »

error: Content is protected !!
Scroll to Top