ದೇಶ

ಮೊದಲ ಟೆಸ್ಟ್‌ : ಭಾರತಕ್ಕೆ 280 ರನ್‌ಗಳ ಭರ್ಜರಿ ಗೆಲುವು

ಅಶ್ವಿನ್‌ ಸ್ಪಿನ್‌ ಮೋಡಿಗೆ ಮಕಾಡೆ ಮಲಗಿದ ಬಾಂಗ್ಲಾ ಹುಲಿಗಳು ಚೆನ್ನೈ: ಸ್ಪಿನ್‌ ಮಾಂತ್ರಿಕ ರವಿಚಂದ್ರನ್‌ ಅಶ್ವಿನ್‌ ಅವರ ಆಲ್‌ರೌಂಡರ್‌ ಪ್ರದರ್ಶನದಿಂದಾಗ ಬಾಂಗ್ಲಾದೇಶ ವಿರುದ್ಧ ಆಡಿದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ 280 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.ಚೆನ್ನೈಯ ಚಿಪಾಕ್‌ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ದಿನದಾಟದಲ್ಲಿ ಕಠಿಣ ಗುರಿ ಬೆನ್ನಟ್ಟಿದ ಬಾಂಗ್ಲಾ, ಭಾರತದ ಸ್ಪಿನ್‌ ಮಾಂತ್ರಿಕರ ದಾಳಿಗೆ ಮಕಾಡೆ ಮಲಗಿತು. 158 ರನ್‌ಗಳಿಗೆ 4 […]

ಮೊದಲ ಟೆಸ್ಟ್‌ : ಭಾರತಕ್ಕೆ 280 ರನ್‌ಗಳ ಭರ್ಜರಿ ಗೆಲುವು Read More »

ಮಣಿಪುರ: ಸಚಿವರ ಪಿಎ ಕಿಡ್ನಾಪ್‌

ಇಂಫಾಲ: ಮಣಿಪುರದ ಗ್ರಾಹಕ ವ್ಯವಹಾರಗಳ ಸಚಿವ ಎಲ್. ಸುಸಿಂದ್ರೋ ಅವರ ಆಪ್ತ ಸಹಾಯಕನನ್ನು(ಪಿಎ) ಇಂಫಾಲ ಪೂರ್ವ ಜಿಲ್ಲೆಯ ಅವರ ನಿವಾಸದ ಬಳಿಯೇ ದುಷ್ಕರ್ಮಿಗಳ ಗುಂಪೊಂದು ಅಪಹರಿಸಿದೆ.ಎಸ್. ಸೊಮೊರೆಂಡ್ರೊ (43) ಅಪಹರಣವಾಗಿರುವ ಪಿಎ. ಘಟನೆಯ ಹೊಣೆಯನ್ನು ಯಾವುದೇ ಗುಂಪು ಹೊತ್ತುಕೊಂಡಿಲ್ಲ. ದುಷ್ಕರ್ಮಿಗಳ ಗುಂಪಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.ಗುರುವಾರ ರಾತ್ರಿ ಬಿಷ್ಣುಪುರ ಜಿಲ್ಲೆಯ ಮಾಜಿ ಮುಖ್ಯ ಕಾರ್ಯದರ್ಶಿ ಓಯಿನಮ್ ನಬಕಿಶೋರ್ ಅವರ ನಿವಾಸದ ಮೇಲೂ ಶಸ್ತ್ರಸಜ್ಜಿತ ದಾಳಿಕೋರರು ಕನಿಷ್ಠ 5 ಸುತ್ತು ಗುಂಡು ಹಾರಿಸಿದ್ದ

ಮಣಿಪುರ: ಸಚಿವರ ಪಿಎ ಕಿಡ್ನಾಪ್‌ Read More »

ರಾಹುಲ್‌ ಗಾಂಧಿ ವಿರುದ್ಧ ಮೂರು ಎಫ್‌ಐಆರ್‌ ದಾಖಲು

ಹೊಸದಿಲ್ಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಸಿಖ್ಖರ ಕುರಿತು ನೀಡಿದ ಹೇಳಿಕೆ ಖಂಡಿಸಿ ಛತ್ತೀಸ್‌ಗಢದ ಬಿಜೆಪಿ ನಾಯಕರು ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ.ರಾಯ್ಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು, ಬಿಲಾಸ್‌ಪುರ ಜಿಲ್ಲಾ ಸಿವಿಲ್ ಲೈನ್ಸ್ ಠಾಣೆಯಲ್ಲಿ ಹಾಗೂ ದುರ್ಗ್ ಜಿಲ್ಲೆಯ ಕೋಟ್ಬಾಲಿ ಪೊಲೀಸ್ ಠಾಣೆಯಲ್ಲಿ ಒಂದು ಎಫ್‌ಐಆ‌ರ್ ದಾಖಲಿಸಲಾಗಿದೆ. ಬಿಜೆಪಿ ನಾಯಕರು ನೀಡಿದ ದೂರಿನ ಮೇರೆಗೆ ರಾಹುಲ್ ಗಾಂಧಿ ವಿರುದ್ಧ ಬಿಎನ್‌ಎಸ್‌ ಸೆಕ್ಷನ್ 299 ಮತ್ತು 302ರ

ರಾಹುಲ್‌ ಗಾಂಧಿ ವಿರುದ್ಧ ಮೂರು ಎಫ್‌ಐಆರ್‌ ದಾಖಲು Read More »

ಇಂದಿನಿಂದ ಮೋದಿ ಅಮೆರಿಕ ಪ್ರವಾಸ

ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ ಮೂರು ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ. ವಿಶ್ವದ ಬೇರೆ ನಾಯಕರೊಂದಿಗೆ ಅಮೆರಿಕದ ವಿಲ್ಮಿಂಗ್ಟನ್‌ಗೆ ಆಗಮಿಸಲಿರುವ ಪ್ರಧಾನಿ ಮೋದಿಯವರು ಅಮೆರಿಕ ಅಧ್ಯಕ್ಷ ಜೋ ಬೈಡನ್ ತವರು ರಾಜ್ಯ ಡೆಲವಾರೆಯಲ್ಲಿ ನಡೆಯಲಿರುವ ಕ್ವಾಡ್ ಶೃಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಭಾರತ, ಆಸ್ಟ್ರೇಲಿಯ ಮತ್ತು ಜಪಾನ್ ನಾಯಕರಿಗೆ ಆತಿಥ್ಯ ನೀಡಲಿರುವ ಅಧ್ಯಕ್ಷ ಜೋ ಬೈಡನ್ ನಂತರ ಪ್ರತ್ಯೇಕ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.ಮೋದಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿರುವ ಸಂದರ್ಭದಲ್ಲಿ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿ ಕಚೇರಿ,

ಇಂದಿನಿಂದ ಮೋದಿ ಅಮೆರಿಕ ಪ್ರವಾಸ Read More »

ತಿರುಪತಿ ಲಡ್ಡು ವಿವಾದ : ಗುಣಮಟ್ಟ ಪರಿಶೀಲನೆಗೆ ಸಮಿತಿ ರಚನೆ

ಹೈದರಾಬಾದ್‌: ತಿರುಪತಿ ದೇವಳದ ಲಡ್ಡು ಪ್ರಸಾದದಲ್ಲಿ ದನದ ಮತ್ತು ಮೀನಿನ ಕೊಬ್ಬು ಸೇರಿಸಲಾಗಿದೆ ಎಂಬ ವಿಚಾರ ಬಯಲಾಗಿ ಕೋಲಾಹಲ ಉಂಟಾದ ಬೆನ್ನಿಗೆ ಲಡ್ಡು ಪ್ರಸಾದಕ್ಕೆ ಬಳಸುವ ತುಪ್ಪದ ಗುಣಮಟ್ಟ ಪರೀಕ್ಷಿಸಲು ದೇವಸ್ಥಾನದ ಆಡಳಿತ ಮಂಡಳಿ ಸಮಿತಿಯೊಂದನ್ನು ರಚಿಸಿದೆ. ಡಾ.ಸುರೇಂದ್ರನಾಥ್, ಡಾ.ವಿಜಯ್ ಭಾಸ್ಕರ್ ರೆಡ್ಡಿ, ಡಾ.ಸ್ವರ್ಣಲತಾ ಮತ್ತು ಡಾ.ಮಹದೇವನ್ ಅವರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಜೆ.ಶ್ಯಾಮಲಾ ರಾವ್ ತಿಳಿಸಿದ್ದಾರೆ. ಟೆಂಡರ್‌ಗಳಲ್ಲಿ ಗುಣಮಟ್ಟದ

ತಿರುಪತಿ ಲಡ್ಡು ವಿವಾದ : ಗುಣಮಟ್ಟ ಪರಿಶೀಲನೆಗೆ ಸಮಿತಿ ರಚನೆ Read More »

ತಿರುಪತಿ ಲಡ್ಡಿಗೆ ದನದ ಕೊಬ್ಬು ಮೀನಿನೆಣ್ಣೆ | ವಿಶ್ವ ಹಿಂದೂ ಪರಿಷದ್ ತೀವ್ರ ಖಂಡನೆ | ಕಠಿಣ ಶಿಕ್ಷೆಗೆ ಆಗ್ರಹ

ಮಂಗಳೂರು: ಪ್ರಪಂಚದಾದ್ಯಂತ  ತಿರುಪತಿ ವೆಂಕಟರಮಣನ ಮೇಲೆ ಅತೀವ ಭಕ್ತಿ ಭಾವ ಇದ್ದು ಅಲ್ಲಿಯ ಪ್ರಸಾದವನ್ನು ತಿರುಪತಿ ದೇವರ ಪ್ರತೀಕದಂತೆ ನೋಡುತ್ತಾರೆ. ಪ್ರಸಾದವನ್ನು  ದನದ ಕೊಬ್ಬು ಮತ್ತು ಮೀನಿನೆಣ್ಣೆ ಉಪಯೋಗಿಸಿ ತಯಾರಿಸಿದ್ದು ಸಮಸ್ತ ಹಿಂದೂ ಸಮಾಜಕ್ಕೆ ಅತೀವ ನೋವು ತಂದಿದೆ. ಇದನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ. ಇದಕ್ಕೆ ಕಾರಣಕರ್ತರಾಗಿದ್ದ ಹಿಂದಿನ ಮುಖ್ಯಮಂತ್ರಿ ಜಗನ್ ರವರ ಸರಕಾರದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆಂದು ಸಿ ಬಿ ಐ ಮೂಲಕ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು

ತಿರುಪತಿ ಲಡ್ಡಿಗೆ ದನದ ಕೊಬ್ಬು ಮೀನಿನೆಣ್ಣೆ | ವಿಶ್ವ ಹಿಂದೂ ಪರಿಷದ್ ತೀವ್ರ ಖಂಡನೆ | ಕಠಿಣ ಶಿಕ್ಷೆಗೆ ಆಗ್ರಹ Read More »

ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಬಳಕೆ ದೃಢ : ಕೋಟ್ಯಂತರ ಭಕ್ತರ ಮನಸ್ಸಿಗೆ ಘಾಸಿ

ತುಪ್ಪದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು, ಹಂದಿಯ ಕೊಬ್ಬು, ಪಾಮಾಯಿಲ್‌, ಸೋಯಾಬಿನ್‌, ಸೂರ್ಯಕಾಂತಿ ಎಣ್ಣೆ, ಮೆಕ್ಕೆಜೋಳ ಎಣ್ಣೆ ಬೆರಕೆ ತಿರುಪತಿ: ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾಡಿದ ಆರೋಪ ನಿಜ ಎನ್ನುವುದು ಲ್ಯಾಬ್‌ ಪರೀಕ್ಷೆಯಲ್ಲಿ ದೃಢಪಟ್ಟಿದೆ. ನಾಯ್ಡು ಹೇಳಿಕೆ ನಿನ್ನೆ ಇಡೀ ದೇಶದಲ್ಲಿ ಸಂಚಲನ ಉಂಟುಮಾಡಿತ್ತು. ತಿರುಪತಿ ತಿಮ್ಮಪ್ಪನ ಕೋಟ್ಯಂತರ ಭಕ್ತರ ಧಾರ್ಮಿಕ ಭಾವನೆಯ ಜೊತೆಗೆ ಹಿಂದಿನ ಆಂಧ್ರ ಪ್ರದೇಶ ಸರಕಾರ ಚೆಲ್ಲಾಟವಾಡಿದ್ದು

ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಬಳಕೆ ದೃಢ : ಕೋಟ್ಯಂತರ ಭಕ್ತರ ಮನಸ್ಸಿಗೆ ಘಾಸಿ Read More »

ಶಾಲೆಯಲ್ಲಿ ಈದ್‌ ಮಿಲಾದ್‌ ಆಚರಣೆ : ಪೋಷಕರ ಆಕ್ಷೇಪ

ಮಕ್ಕಳಿಗೆ ಅರಬ್‌ ಉಡುಪು ಹಾಕಿ ಕುಣಿಸಿದ್ದಕ್ಕೆ ಆಕ್ರೋಶ ಕಾರ್ಕಳ : ತಾಲೂಕಿನ ಸಚ್ಚರಿಪೇಟೆಯ ಖಾಸಗಿ ಶಾಲೆಯೊಂದರಲ್ಲಿ ಈದ್ ಮಿಲಾದ್ ಹಬ್ಬ ಆಚರಿಸಿದ ವಿಡಿಯೋ ವೈರಲ್‌ ಆದ ಬಳಿಕ ವಿವಾದ ಸೃಷ್ಟಿಯಾಗಿದೆ. ಸಚ್ಚರಿಪೇಟೆಯ ಲಯನ್ಸ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪ್ರವಾದಿ ಜನ್ಮದಿನಾಚರಣೆ ಪ್ರಯುಕ್ತ ಈದ್ ಮಿಲಾದ್ ಹಬ್ಬ ಆಚರಿಸಲಾಗಿತ್ತು. ಬಿಜೆಪಿ ಮುಖಂಡರೊಬ್ಬರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಇದರ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಅನೇಕ ಹಿಂದೂ ಮಕ್ಕಳ ಪೋಷಕರು ಶಾಲೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲೆಯಲ್ಲಿ ಈದ್‌ ಮಿಲಾದ್‌ ಆಚರಣೆ : ಪೋಷಕರ ಆಕ್ಷೇಪ Read More »

ಈತ ದೇಶದ ಶ್ರೀಮಂತ ಭಿಕ್ಷುಕ!

ಮುಂಬಯಿಯಲ್ಲಿ ಭಿಕ್ಷೆ ಬೇಡುವ ಈತನ ಬಳಿಯಿದೆ 7.5 ಕೋ. ರೂ. ಆಸ್ತಿ ಮುಂಬಯಿ : ಭಿಕ್ಷೆ ಬೇಡುವವರೆಲ್ಲ ಕಡುಬಡವರು, ಒಂದೊತ್ತಿನ ಊಟಕ್ಕೂ ಗತಿಯಿಲ್ಲದವರು ಎನ್ನುವುದು ಸಾಮಾನ್ಯವಾದ ಭಾವನೆ. ಬಹುತೇಕ ಭೀಕ್ಷುಕರು ಇದೇ ರೀತಿ ಇರುತ್ತಾರೆ. ಆದರೆ ಭಿಕ್ಷೆ ಬೇಡಿಯೇ ಕೋಟಿಗಟ್ಟಲೆ ಸಂಪತ್ತು ಗಳಿಸಿದವರೂ ಇದ್ದಾರೆ. ಈ ಪೈಕಿ ಮುಂಬಯಿಯಲ್ಲಿ ಭಿಕ್ಷೆ ಬೇಡುವ ಭರತ್‌ ಜೈನ್‌ ಎಂಬವರು ದೇಶದ ಅತ್ಯಂತ ಶ್ರೀಮಂತ ಭಿಕ್ಷುಕ ಎಂದು ಗುರುತಿಸಲ್ಪಟ್ಟಿದ್ದಾರೆ. ಇವರ ಒಟ್ಟು ಆಸ್ತಿ ಬರೋಬ್ಬರಿ 7.5 ಕೋ. ರೂ.! ಭರತ್‌ ಜೈನ್‌ಗೆ

ಈತ ದೇಶದ ಶ್ರೀಮಂತ ಭಿಕ್ಷುಕ! Read More »

ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಕೆ: ನಾಯ್ಡು ಆರೋಪ

ಕ್ಷೇತ್ರದ ಪಾವಿತ್ರ್ಯ ಕೆಡಿಸಲು ಪ್ರಯತ್ನಿಸಿದ್ದಾರೆ ಎಂದ ಆಂಧ್ರ ಸಿಎಂ ಅಮರಾವತಿ: ಕೋಟ್ಯಂತರ ಹಿಂದುಗಳು ಪರಮ ಪವಿತ್ರ ಎಂಬ ನಂಬಿಕೆಯಿಂದ ಸ್ವೀಕರಿಸುವ ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ಆರೋಪವೊಂದು ಭಾರಿ ಕೋಲಾಹಲ ಉಂಟು ಮಾಡಿದೆ. ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ ಬಳಿಕ ಈ ಕುರಿತು ದೇಶಾದ್ಯಂತ ಚರ್ಚೆ ಶುರುವಾಗಿದೆ. ಈ

ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಕೆ: ನಾಯ್ಡು ಆರೋಪ Read More »

error: Content is protected !!
Scroll to Top