ದೇಶ

ಮಹಾಕುಂಭಮೇಳಕ್ಕೆ ಎಐ, ಡಿಜಿಟಲ್‌ ಸ್ಪರ್ಶ

ಸಾರಿಗೆ, ಭದ್ರತೆ, ವಸತಿ, ಪಾರ್ಕಿಂಗ್‌, ಸಾರಿಗೆ ಎಲ್ಲದಕ್ಕೂ ಆಧುನಿಕ ತಂತ್ರಜ್ಞಾನ ಬಳಕೆ ಪ್ರಯಾಗ್‌ರಾಜ್‌ : ಹನ್ನೆರಡು ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭಮೇಳಕ್ಕೆ ಪ್ರಯಾಗ್‌ರಾಜ್‌ ನಗರ ಸಜ್ಜಾಗುತ್ತಿದೆ. ಉತ್ತರ ಪ್ರದೇಶ ಸರಕಾರ ಕಳೆದ ಐದಾರು ತಿಂಗಳಿನಿಂದಲೇ ಕುಂಭಮೇಳಕ್ಕಾಗಿ ತಯಾರಿ ನಡೆಸುತ್ತಿದ್ದು, ಈ ಸಲದ ಕುಂಭಮೇಳ ಸಂಪೂರ್ಣವಾಗಿ ಡಿಜಿಟಲ್‌ ತಂತ್ರಜ್ಞಾನದ ಸ್ಪರ್ಶದೊಂದಿಗೆ ನಡೆಯುತ್ತಿರುವುದು ವಿಶೇಷ. ಭಕ್ತರಿಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಸೌಲಭ್ಯ ಕಲ್ಪಿಸಲು ಸರಕಾರ ಸಿದ್ಧತೆ ಮಾಡಿಕೊಂಡಿದೆ. ಸಾರಿಗೆ, ಭದ್ರತೆ, ವಸತಿ, ಪಾರ್ಕಿಂಗ್‌… ಹೀಗೆ ಪ್ರತಿಯೊಂದನ್ನು ಕೂಡ ಅತ್ಯಾಧುನಿಕ ತಂತ್ರಜ್ಞಾನ ಬಳಸಿ […]

ಮಹಾಕುಂಭಮೇಳಕ್ಕೆ ಎಐ, ಡಿಜಿಟಲ್‌ ಸ್ಪರ್ಶ Read More »

ಪೆರ್ಲ ಅಂಗಡಿ ಕಟ್ಟಡವೊಂದರಲ್ಲಿ ತಡ ರಾತ್ರಿ ಅಗ್ನಿ ಅವಘಡ | ಹೊತ್ತಿ ಉರಿದ ಐದು ಅಂಗಡಿಗಳು

ಪೆರ್ಲ : ಪೇಟೆಯ ಕಟ್ಟಡವೊಂದಕ್ಕೆ ನಿನ್ನೆ ತಡ ರಾತ್ರಿ ಬೆಂಕಿ ಹೊತ್ತಿದ್ದು, ಐದು ಅಂಗಡಿಗಳು ಸಂಪೂರ್ಣವಾಗಿ  ಉರಿದು ನಾಶವಾದ ಘಟನೆ ನಡೆದಿದೆ. ಇಲ್ಲಿನ ಬದಿಯಡ್ಕ ಪುತ್ತೂರು ರಸ್ತೆಯ ಎಡಭಾಗದಲ್ಲಿರುವ ಪೂಜಾ ಫ್ಯಾನ್ಸಿ, ಪೈಗಳ ಕ್ಲೋತ್ ಸ್ಟೋರ್ ಸಹಿತ ಪೇಪರ್ ವಿತರಣ ಸೆಂಟರ್,ಪ್ರವೀಣ್ ಆಟೋಮೊಬೈಲ್ಸ್,ಸದಾತ್ ಸ್ಟೋರ್, ಗೌತಮ್ ಕೋಲ್ಡ್ ಹೌಸ್ ಎಂಬಿ ಅಂಗಡಿ ಮುಂಗಟ್ಟು ಈ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದೂ ಸಂಪೂರ್ಣ ಬೆಂಕಿಗೆ ಅಹುತಿಯಾಗಿದೆ. ಮಧ್ಯರಾತ್ರಿ 12 ಗಂಟೆಯ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಸೇರಿದ ಬಳಿಕ ಅಗ್ನಿಶಾಮಕ ದಳಕ್ಕೆ

ಪೆರ್ಲ ಅಂಗಡಿ ಕಟ್ಟಡವೊಂದರಲ್ಲಿ ತಡ ರಾತ್ರಿ ಅಗ್ನಿ ಅವಘಡ | ಹೊತ್ತಿ ಉರಿದ ಐದು ಅಂಗಡಿಗಳು Read More »

ಶಬರಿಮಲೆ : ಅಯ್ಯಪ್ಪನ ಪವಿತ್ರ ತಂಗ ಅಂಗಿ ಮೆರವಣಿಗೆ ಆರಂಭ

ಡಿ.25ರಂದು ಮಂಡಲ ಪೂಜೆಗೆ ಸನ್ನಿಧಾನ ತಲುಪಲಿರುವ ಪವಿತ್ರ ಆಭರಣ ಶಬರಿಮಲೆ : ಶಬರಿಮಲೆ ವಾರ್ಷಿಕ ಯಾತ್ರೆಯ ಒಂದು ಪ್ರಮುಖ ಅಂಗವಾಗಿರುವ ತಂಗ ಅಂಗಿಯ ಮೆರವಣಿಗೆ ಇಂದು ಶುರುವಾಗಿದೆ. ಪತ್ತನತಿಟ್ಟಂ ಜಿಲ್ಲೆಯ ಆರಣ್ಮುಲದಲ್ಲಿ ಪಾರ್ಥಸಾರಥಿ ದೇಗುಲದಿಂದ ಸಕಲ ವಿಧಿವಿಧಾನಗಳೊಂದಿಗೆ ಅಯ್ಯಪ್ಪನ ಪವಿತ್ರ ಆಭರಣಗಳನ್ನು ಮಂಡಲ ಪೂಜೆಗಾಗಿ ಶಬರಿಮಲೆಗೆ ತರುವ ಯಾತ್ರೆ ಇದು.ತಂಗ ಅಂಗಿ ಅಥವಾ ಪವಿತ್ರ ಆಭರಣಗಳನ್ನು ಮಂಡಲ ಪೂಜೆ ಸಂದರ್ಭದಲ್ಲಿ ಅಯ್ಯಪ್ಪನಿಗೆ ತೊಡಿಸಿ ಅಲಂಕರಿಸಲಾಗುತ್ತದೆ. ಡಿ.25ರಂದು ಈ ಮೆರವಣಿಗೆ ಸನ್ನಿಧಾನ ತಲುಪಲಿದೆ. ಈ ಒಡವೆಗಳನ್ನು ತೊಡಿಸಿದ ಬಳಿಕ

ಶಬರಿಮಲೆ : ಅಯ್ಯಪ್ಪನ ಪವಿತ್ರ ತಂಗ ಅಂಗಿ ಮೆರವಣಿಗೆ ಆರಂಭ Read More »

ಡಾಗ್‌ ಫೈಟಿಂಗ್‌ ಮೇಲೆ ಬೆಟ್ಟಿಂಗ್‌!

ಫಾರ್ಮ್‌ ಹೌಸ್‌ನಲ್ಲಿ ನಡೆಯುತ್ತಿತ್ತು ನಾಯಿಗಳ ಕಾದಾಟದ ವಿಲಕ್ಷಣ ಪಂದ್ಯ ಜೈಪುರ: ಕೋಳಿಅಂಕ, ಕುದುರೆ ರೇಸ್‌ನಲ್ಲಿ ಬೆಟ್ಟಿಂಗ್‌ ನಡೆಯುವುದು ಗೊತ್ತು, ಆದರೆ ಇಲ್ಲಿ ನಾಯಿಗಳ ಕಾದಾಟದ ಮೇಲೆ ಬೆಟ್ಟಿಂಗ್‌ ಕಟ್ಟುವ ವಿಚಿತ್ರ ಪಂದ್ಯವೊಂದು ನಡೆಯುತ್ತಿದೆ. ರಾಜಸ್ಥಾನದ ಜೈಪುರ ಸಮೀಪ ಇಂಥದ್ದೊಂದು ವಿಲಕ್ಷಣ ಮತ್ತು ಕ್ರೂರ ಪಂಂದ್ಯ ನಡೆದು ಅದರ ಮೇಲೆ ಲಕ್ಷಗಟ್ಟಲೆ ಬೆಟ್ಟಿಂಗ್‌ ನಡೆಸಲಾಗುತ್ತಿತ್ತು. ಈ ಸಂಬಂಧ 80ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಜೈಪುರ ಹನುಮಾನ್‌ಗಢ ಎಂಬಲ್ಲಿ ಫಾರ್ಮ್‌ ಹೌಸ್‌ ಒಂದರಲ್ಲಿ ಡಾಗ್‌ ಫೈಟ್‌ ನಡೆಯುತ್ತಿತ್ತು ಎಂದು ಪೊಲೀಸರು

ಡಾಗ್‌ ಫೈಟಿಂಗ್‌ ಮೇಲೆ ಬೆಟ್ಟಿಂಗ್‌! Read More »

ಇಂದಿನಿಂದ ಪ್ರಧಾನಿ ಮೋದಿ ಕುವೈಟ್‌ ಪ್ರವಾಸ

43 ವರ್ಷಗಳ ಬಳಿಕ ಭಾರತದ ಪ್ರಧಾನಿಯ ಐತಿಹಾಸಿಕ ಭೇಟಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕುವೈಟ್‌ ಪ್ರವಾಸ ಕೈಗೊಳ್ಳಲಿದ್ದು, ಭಾರಾತದ ಪ್ರಧಾನಿಯೊಬ್ಬರು 43 ವರ್ಷಗಳ ಕುವೈಟ್‌ಗೆ ಭೇಟಿ ನೀಡುತ್ತಿರುವ ಕಾರಣಕ್ಕೆ ಈ ಪ್ರವಾಸ ವಿಶೇಷ ಎನಿಸಿದೆ. ಮೋದಿ ಡಿಸೆಂಬರ್ 21 ಮತ್ತು 22 ರಂದು ಕುವೈಟ್‌ಗೆ ಭೇಟಿ ನೀಡಲಿದ್ದಾರೆ. ಕುವೈಟ್‌ನಲ್ಲಿ ಭಾರತ ಮೂಲದ ಲಕ್ಷಗಟ್ಟಲೆ ಮಂದಿ ನೌಕರಿ ಮಾಡುತ್ತಿದ್ದು, ಉಭಯ ರಾಷ್ಟ್ರಗಳ ನಡುವಣ ಸಂಬಂಧ ವೃದ್ಧಿಯಿಂದ ಇಲ್ಲಿರುವ ಭಾರತೀಯರಿಗೆ ಒಳಿತಾಗಲಿದೆ. ಕುವೈಟ್‌ನ

ಇಂದಿನಿಂದ ಪ್ರಧಾನಿ ಮೋದಿ ಕುವೈಟ್‌ ಪ್ರವಾಸ Read More »

ರಾಹುಲ್‌ ಗಾಂಧಿ ವಿರುದ್ಧ ಕ್ರೈಂ ಬ್ರಾಂಚ್‌ ತನಿಖೆ

ಬಿಜೆಪಿ ಸಂಸದರನ್ನು ತಳ್ಳಿ ಗಾಯಗೊಳಿಸಿದ ಪ್ರಕರಣ ಹೊಸದಿಲ್ಲಿ: ಸಂಸತ್ತಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಸಂಸದರ ನಡುವೆ ನಡೆದ ತಳ್ಳಾಟ ಮತ್ತು ರಾಹುಲ್‌ ಗಾಂಧಿ ತಳ್ಳಿದಾಗ ಬಿಜೆಪಿಯ ಇಬ್ಬರು ಸಂಸದರು ಬಿದ್ದು ಗಾಯಗೊಂಡಿರುವ ಪ್ರಕರಣದ ತನಿಖೆಯನ್ನು ದಿಲ್ಲಿಯ ಕ್ರೈಂಬ್ರಾಂಚ್‌ ನಡೆಸಲಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ದಾಖಲಿಸಿದ ಪ್ರಕರಣಗಳ ತನಿಖೆಯನ್ನು ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ ಎಂದು ದಿಲ್ಲಿ ಪೊಲೀಸರು ಹೇಳಿದ್ದಾರೆ.ಬಿಜೆಪಿ ನೀಡಿದ ದೂರಿನ ಆಧಾರದಲ್ಲಿ ಸಂಸದ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗುರುವಾರ ಸಂಸತ್ತಿನ ಆವರಣದಲ್ಲಿ ನಡೆದ ಗದ್ದಲದ

ರಾಹುಲ್‌ ಗಾಂಧಿ ವಿರುದ್ಧ ಕ್ರೈಂ ಬ್ರಾಂಚ್‌ ತನಿಖೆ Read More »

ಎಲ್ಲ ಕಡೆ ಮಂದಿರ-ಮಸೀದಿ ವಿವಾದ ಬೇಡ : ಮೋಹನ್‌ ಭಾಗವತ್‌ ಕಿವಿಮಾತು

ಎಲ್ಲ ಧರ್ಮಗಳ ಜೊತೆಗೆ ಸಾಮರಸ್ಯದಿಂದ ಬಾಳಲು ಸಲಹೆ ಪುಣೆ : ಎಲ್ಲೆಂದರಲ್ಲಿ ರಾಮ ಮಂದಿರದಂತಹ ವಿವಾದಗಳನ್ನು ಹುಟ್ಟುಹಾಕಬೇಡಿ ಎಂದು ಆರ್‌ಎಸ್‌ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ಕಿವಿಮಾತು ಹೇಳಿದ್ದಾರೆ. ಪುಣೆಯಲ್ಲಿ ವಿಶ್ವಗುರು ಭಾರತ ಕುರಿತ ಉಪನ್ಯಾಸದಲ್ಲಿ ಪಾಲ್ಗೊಂಡ ಅವರು, ಭಾರತ ಎಲ್ಲ ಧರ್ಮಗಳು ಮತ್ತು ಸಿದ್ಧಾಂತಗಳ ಸಾಮರಸ್ಯದ ಸಹಬಾಳ್ವೆಗೆ ಮಾದರಿಯಾಗಬೇಕು ಎಂದು ಹೇಳಿದರು. ಉತ್ತರ ಪ್ರದೇಶದ ಸಂಭಾಲ್‌ನ ಶಾಹಿ ಜಾಮಾ ಮಸೀದಿ ಮತ್ತು ರಾಜಸ್ಥಾನದ ಅಜ್ಮೇರ್ ಷರೀಫ್‌ನಂತಹ ಧಾರ್ಮಿಕ ಸ್ಥಳಗಳ ಮೂಲದ ಬಗ್ಗೆ ಇತ್ತೀಚಿನ ವಿವಾದಗಳ ಹಿನ್ನೆಲೆಯಲ್ಲಿ

ಎಲ್ಲ ಕಡೆ ಮಂದಿರ-ಮಸೀದಿ ವಿವಾದ ಬೇಡ : ಮೋಹನ್‌ ಭಾಗವತ್‌ ಕಿವಿಮಾತು Read More »

ರಾಹುಲ್‌ ಗಾಂಧಿ ತಳ್ಳಿದಾಗ ಬಿದ್ದು ಗಾಯಗೊಂಡ ಬಿಜೆಪಿ ಸಂಸದ

ಸಂಸತ್‌ ಆವರಣದಲ್ಲಿ ಪ್ರತಿಭಟನೆ ವೇಳೆ ಹೈಡ್ರಾಮಾ ಹೊಸದಿಲ್ಲಿ: ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ನೀಡಿದ ಹೇಳಿಕೆ ಬಿಜೆಪಿ-ಕಾಂಗ್ರೆಸ್‌ ನಡುವೆ ಕಿಚ್ಚು ಹೊತ್ತಿಸಿದೆ. ಇಂದು ಉಭಯ ಪಕ್ಷಗಳು ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಭಾರಿ ಹೈಡ್ರಾಮಾ ನಡೆದಿದೆ. ಬಿಜೆಪಿ ಸಂಸದ ಪ್ರತಾಪ್‌ ಸಾರಂಗಿ ಕುಸಿದು ಬಿದ್ದಿದ್ದು, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರನ್ನು ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್‌ ಪ್ರತಿಭಟನೆ ವಿರೋಧಿಸಿ ಬಿಜೆಪಿ ಸದಸ್ಯರು ಪ್ರತಿಭಟಿಸುತ್ತಿದ್ದ ವೇಳೆ ಪ್ರತಾಪ್‌

ರಾಹುಲ್‌ ಗಾಂಧಿ ತಳ್ಳಿದಾಗ ಬಿದ್ದು ಗಾಯಗೊಂಡ ಬಿಜೆಪಿ ಸಂಸದ Read More »

ಮುಂಬಯಿ ದೋಣಿ ದುರಂತ : ಮೃತರ ಸಂಖ್ಯೆ 13ಕ್ಕೇರಿಕೆ

ಎಲಿಫೆಂಟಾ ಕೇವ್ಸ್‌ಗೆ ಪ್ರಯಾಣಿಕರನ್ನು ಒಯ್ಯುತ್ತಿದ್ದ ದೋಣಿಗೆ ನೌಕಾಪಡೆಯ ಸ್ಪೀಡ್‌ ಬೋಟ್‌ ಡಿಕ್ಕಿಯಾಗಿ ಅವಘಡ ಮುಂಬಯಿ: ಮುಂಬಯಿಯ ಗೇಟ್‌ವೇ ಆಫ್ ಇಂಡಿಯಾ ಬಳಿ ಪ್ರಯಾಣಿಕರನ್ನು ಒಯ್ಯುತ್ತಿದ್ದ ದೋಣಿ ಮಗುಚಿ ಬಿದ್ದ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೇರಿದೆ. ರಕ್ಷಿಸಲ್ಪಟ್ಟ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೃತರಲ್ಲಿ 10 ಪ್ರಯಾಣಿಕರು ಮತ್ತು ಮೂವರು ನೌಕಾಪಡೆ ಸಿಬ್ಬಂದಿ ಸೇರಿದ್ದಾರೆ. ಗೇಟ್‌ವೇ ಆಫ್ ಇಂಡಿಯಾದಿಂದ ಎಲಿಫೆಂಟಾ ಕೇವ್ಸ್‌ಗೆ ದೋಣಿಯಲ್ಲಿ ಪ್ರಯಾಣಿಸುತ್ತಿದ್ದಾಗ ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 4 ಸೇನಾ ಹೆಲಿಕಾಪ್ಟರ್‌ಗಳು,

ಮುಂಬಯಿ ದೋಣಿ ದುರಂತ : ಮೃತರ ಸಂಖ್ಯೆ 13ಕ್ಕೇರಿಕೆ Read More »

ಅಂತಾರಾಷ್ಟ್ರೀಯ ಕ್ರಿಕೆಟಿಗ ಸ್ಪಿನ್ನರ್‌ ಅಶ್ವಿನ್‌ ವಿದಾಯ

ಟೀಮ್ ಇಂಡಿಯಾದ ಯಶಸ್ವಿ ಬೌಲರ್‌ನ ಕ್ರಿಕೆಟ್‌ ಯಾನ ಮುಕ್ತಾಯ ಹೊಸದಿಲ್ಲಿ : ಭಾರತ ಕ್ರಿಕೆಟ್‌ ತಂಡದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ 14 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅನ್ನು ಅಂತ್ಯಗೊಳಿಸಿದ್ದಾರೆ. ಅವರು ಇನ್ನು ಐಪಿಎಲ್​ನಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ಅಶ್ವಿನ್‌ 106 ಟೆಸ್ಟ್ ಪಂದ್ಯಗಳಲ್ಲಿ 200 ಇನಿಂಗ್ಸ್​ಗಳಲ್ಲಿ

ಅಂತಾರಾಷ್ಟ್ರೀಯ ಕ್ರಿಕೆಟಿಗ ಸ್ಪಿನ್ನರ್‌ ಅಶ್ವಿನ್‌ ವಿದಾಯ Read More »

error: Content is protected !!
Scroll to Top