ದೇಶ

ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ : ರಾಷ್ಟ್ರಪತಿ ದ್ರೌಪದಿ ಮುರ್ಮು

70 ವರ್ಷ ಮೇಲ್ಪಟ್ಟ ಎಲ್ಲಾ ಭಾರತೀಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದೆಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ(ಜೂ.28) ಹೇಳಿದ್ದಾರೆ. ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, ‘ಸರ್ಕಾರವು ಆರೋಗ್ಯ ಕ್ಷೇತ್ರದಲ್ಲಿ ಮತ್ತೊಂದು ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಅದರ ಅನ್ವಯ 70 ವರ್ಷ ಮೇಲ್ಪಟ್ಟ ಎಲ್ಲಾ ವೃದ್ಧರು ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆಯ ಪ್ರಯೋಜನ ಪಡೆಯುತ್ತಾರೆ’ ಎಂದರು. ಆಯುಷ್ಮಾನ್ ಭಾರತ್- ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿ 55 […]

ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ : ರಾಷ್ಟ್ರಪತಿ ದ್ರೌಪದಿ ಮುರ್ಮು Read More »

ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆರೋಗ್ಯದಲ್ಲಿ ವ್ಯತ್ಯಯ : ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಜಿಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರನ್ನು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್ ) ಆಸ್ಪತ್ರೆಗೆ ದಾಖಲಿಸಲಾಗಿದೆ. 96 ವರ್ಷದ ಅಡ್ವಾಣಿ ವಯೋಸಹಜ ಅವರು ಕಾಯಿಲೆಯಿಂದ ಬಳಲುತ್ತಿದ್ದಾರೆ. ಆದರೆ, ಅನಾರೋಗ್ಯದ ನಿಖರ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಜನವರಿಯಲ್ಲಿ ಮಾಜಿ ಉಪ ಪ್ರಧಾನಿಗೆ ದೇಶದ ಅತ್ಯುನ್ನತ ಗೌರವ ಭಾರತ ರತ್ನ ಪ್ರಶಸ್ತಿ ಪ್ರಕಟಿಸಲಾಗಿತ್ತು. ಮಾ.31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯಲ್ಲಿರುವ ಬಿಜೆಪಿ

ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆರೋಗ್ಯದಲ್ಲಿ ವ್ಯತ್ಯಯ : ಆಸ್ಪತ್ರೆಗೆ ದಾಖಲು Read More »

ಲೋಕ ಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ

ನವದೆಹಲಿ : ಮೂರು ಬಾರಿ ಸಂಸದರಾಗಿದ್ದ ಬಿಜೆಪಿಯ ಓಂ ಬಿರ್ಲಾ ಅವರು 18ನೇ ಲೋಕಸಭೆಯ ಸ್ಪೀಕರ್ ಆಗಿ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನ ಎಂಟು ಬಾರಿ ಕೇರಳದ ಮಾವೇಲಿಕರ ಕೋಡಿಕುನ್ನಿಲ್ ಸುರೇಶ್ ಅವರನ್ನು ಸೋಲಿಸಿ ಸ್ಪೀಕರ್ ಆಗಿ ಮರು ಆಯ್ಕೆಗೊಂಡಿದ್ದಾರೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ ವಿರೋಧ ಪಕ್ಷಗಳ ಹಕ್ಕನ್ನು ಕಸಿದುಕೊಂಡಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ 48 ವರ್ಷಗಳ ನಂತರ ಲೋಕಸಭಾಧ್ಯಕ್ಷ ಸ್ಥಾನಕ್ಕೆ ಇಂದು ಸ್ಪರ್ಧೆ ನಡೆಯಿತು. ಓಂ ಬಿರ್ಲಾ

ಲೋಕ ಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ Read More »

ಲೋಕಸಭೆ : ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ

ಹೊಸದಿಲ್ಲಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ವಿರೋಧ ಪಕ್ಷಗಳ ನಾಯಕರ ಸಭೆಯ ನಂತರ ಘೋಷಿಸಿದ್ದಾರೆ. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಪತ್ರ ಬರೆದು ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವ ನಿರ್ಧಾರವನ್ನು ತಿಳಿಸಿದ್ದಾರೆ. ಉಳಿದ ಪದಾಧಿಕಾರಿಗಳನ್ನು ಬಳಿಕ ಆಯ್ಕೆ ಮಾಡಲಾಗುವುದು ಎಂದು

ಲೋಕಸಭೆ : ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ Read More »

ಅಮರನಾಥ ಯಾತ್ರಿಕರಿಗೆ ಭಯೋತ್ಪಾದಕ ದಾಳಿ ಬೆದರಿಕೆ | ಜಮ್ಮು ಕಾಶ್ಮೀರದಲ್ಲಿ ಬಿಗಿ ಭದ್ರತೆ

ಜಮ್ಮು ಕಾಶ್ಮೀರ: ಜೂ. 29ರಿಂದ ಪ್ರಸಿದ್ಧ ಅಮರನಾಥ ಯಾತ್ರೆ ಪ್ರಾರಂಭವಾಗುತ್ತಿದೆ. ಈ ಹಿನ್ನೆಲೆ ಜಮ್ಮು-ಕಾಶ್ಮೀರದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಅಮರನಾಥ ಬೇಸ್ ಕ್ಯಾಂಪ್ ಗೂ 3 ಹಂತದ ಭದ್ರತೆ ಒದಗಿಸಲಾಗಿದ್ದು, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ 260 ಡಿಗ್ರಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದ್ದಾರೆ. ಯಾತ್ರೆ ಸಾಗುವ ಹೆದ್ದಾರಿಯ ಸುರಕ್ಷತೆ ಖಾತರಿಗಾಗಿ ವಾಹನಗಳನ್ನು ಪರಿಶೀಲಿಸಲು 60 ಕ್ಯಾಮರಾಗಳು, ಬಾಡಿ ಸ್ಕ್ಯಾನರ್ ಗಳನ್ನು ಅಳವಡಿಸಲಾಗಿದೆ. ಜೊತೆಗೆ ರಂಭಾನ್ ಜಿಲ್ಲೆಯ ಉಧಂಪುರದಿಂದ ಬನಿಹಾಲ್

ಅಮರನಾಥ ಯಾತ್ರಿಕರಿಗೆ ಭಯೋತ್ಪಾದಕ ದಾಳಿ ಬೆದರಿಕೆ | ಜಮ್ಮು ಕಾಶ್ಮೀರದಲ್ಲಿ ಬಿಗಿ ಭದ್ರತೆ Read More »

ನೇಪಾಳ ವಿರೋಧಿ ಶಕ್ತಿಗಳಿಂದ ವಿರೋಧವಿದ್ದರೂ ನೇಪಾಳವು ಹಿಂದೂ ರಾಷ್ಟ್ರದತ್ತ ಮುಂದೆ ಸಾಗುತ್ತಿದೆ : ವಿಶ್ವ ಹಿಂದೂ ಮಹಾಸಂಘದ ಹಿರಿಯ ಉಪಾಧ್ಯಕ್ಷ ಶಂಕರ ಖರಾಲ

ಗೋವಾ: ಇಂದು, ನೇಪಾಳದಲ್ಲಿ ಬಹುಸಂಖ್ಯಾತ ಹಿಂದೂ ಸಮಾಜವಿದ್ದರೂ ಹಿಂದೂಗಳು ಮಾತ್ರ ಚೀನಾ, ಯುರೋಪ ಯೂನಿಯನ ಮುಂತಾದ ವಿದೇಶಿ ಶಕ್ತಿಗಳ ಆರ್ಥಿಕ ಸಹಾಯದಿಂದಾಗಿ ಅವರ ಆಲೋಚನೆಗಳಿಗೆ ಅನುಗುಣವಾಗಿ ಕಾರ್ಯ ಮಾಡುತ್ತಿದ್ದಾರೆ ಎಂದು ನೇಪಾಳದ ವಿಶ್ವ ಹಿಂದೂ ಮಹಾಸಂಘದ ಹಿರಿಯ ಉಪಾಧ್ಯಕ್ಷ ಶಂಕರ ಖರಾಲ ಆರೋಪಿಸಿದ್ದಾರೆ. ಅವರು ಗೋವಾ ಪೋಂಡಾ `ಶ್ರೀ ರಾಮನಾಥ ದೇವಸ್ಥಾನದ ಶ್ರೀ ವಿದ್ಯಾಧಿರಾಜ ಸಭಾಂಗಣದಲ್ಲಿ ಆಯೋಜಿಸಲಾದ ಜಾಗತಿಕ ಮಟ್ಟದ ಹಿಂದೂ ಸಂಘಟನೆ ವಿಷಯದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಭಾರತದ ಮೂಲಭೂತವಾದಿ ಎಡಪಂಥೀಯ ಸಿದ್ಧಾಂತದ ಕೆಲವು ವಿಶ್ವವಿದ್ಯಾಲಯಗಳಿಂದ 

ನೇಪಾಳ ವಿರೋಧಿ ಶಕ್ತಿಗಳಿಂದ ವಿರೋಧವಿದ್ದರೂ ನೇಪಾಳವು ಹಿಂದೂ ರಾಷ್ಟ್ರದತ್ತ ಮುಂದೆ ಸಾಗುತ್ತಿದೆ : ವಿಶ್ವ ಹಿಂದೂ ಮಹಾಸಂಘದ ಹಿರಿಯ ಉಪಾಧ್ಯಕ್ಷ ಶಂಕರ ಖರಾಲ Read More »

ಕನ್ನಡದಲ್ಲಿ ಪ್ರಮಾಣವಚನ ಮಾಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ | ಪ್ರಮಾಣ ವಚನ ಹೇಗೆ ಮಾಡಿದರು ? ಇಲ್ಲಿದೆ ಡಿಟೈಲ್ಸ್

ಹೊಸದಿಲ್ಲಿ: ದಕ್ಷಿಣ ಕನ್ನಡ ಜಿಲ್ಲಾ ಸಂಸದ ಬ್ರಿಜೇಶ್ ಚೌಟ ಅವರು ಸೋಮವಾರ ಪ್ರಮಾನವಚನ ಸ್ವೀಕಾರ ಮಾಡಿದರು. ಅವರು ಕನ್ನಡ ಭಾಷೆಯಲ್ಲಿ ತುಳುನಾಡಿನ ಎಲ್ಲ ದೈವ ದೇವರುಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸೋಮವಾರ ಸಂಸತ್ನಲ್ಲಿ ಮೊದಲ ಲೋಕಸಭೆ ಅಧಿವೇಶನ ಆರಂಭವಾಗಿದ್ದು,  ಪದ್ಧತಿಯಂತೆ ಎಲ್ಲಾ ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಬೋಧಿಸಲಾಯಿತು. ಪ್ರಮಾಣ ವಚನದದ ಕೊನೆಯಲ್ಲಿ “ಮಾತೆರೆಗ್ಲಾ ಸೋಲೈಲು” (ಎಲ್ಲರಿಗೂ ಧನ್ಯವಾದಗಳು) ಎಂದು ತುಳುವಿನಲ್ಲಿ ಹೇಳುವ ಮೂಲಕ ತುಳು ಭಾಷೆಯ ಬಗೆಗಿನ ತನ್ನ

ಕನ್ನಡದಲ್ಲಿ ಪ್ರಮಾಣವಚನ ಮಾಡಿದ ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ | ಪ್ರಮಾಣ ವಚನ ಹೇಗೆ ಮಾಡಿದರು ? ಇಲ್ಲಿದೆ ಡಿಟೈಲ್ಸ್ Read More »

ದಲಿತ ಯುವಕನ ಮೇಲೆ ಹಲ್ಲೆಗೆ ಮುಂದಾದ ಎಂ ಇಲೆವೆನ್ ಕಂಪನಿ ಎಂಡಿ | ಮಾಜಿ ಸಚಿವ ಸಹಿತ ಪೋಲಿಸರ ಎದುರು ದರ್ಪ ತೋರಿದ ಎಂಡಿ

ನಂದಿಕೂರು ದೇವರಕಾಡು ನಾಶ ಪಡಿಸಿದ ಪ್ರದೇಶದಲ್ಲಿ ಜನ ವಿರೋಧಿಯಾಗಿ ಅಸ್ತಿತ್ವಕ್ಕೆ ಬರಲು ಹವಣಿಸುತ್ತಿರುವ ಎಂ ಇಲೆವೆನ್ ಕಂಪನಿಯ ಸಾಧಕ ಬಾಧಕಗಳನ್ನು ತಿಳಿಯಲು ಕಂಪನಿಗೆ ಮಾಜಿ ಸಚಿವರ ತಂಡದೊಂದಿಗೆ ಹೋಗಿದ್ದ ದಲಿತ ಮುಖಂಡರೊರ್ವರಿಗೆ ಕಂಪನಿಯ ಮಾಲಕ ಎನ್ನಲಾದ ವ್ಯಕ್ತಿ ಹಲ್ಲೆ ನಡೆಸಲು ಮುಂದಾದ ಘಟನೆ ನಡೆದಿದೆ. ಸಾರ್ವಜನಿಕ ಸಭೆಯನ್ನು ನಡೆಸದೆ ಸ್ಥಳೀಯರಿಗೆ ಕಂಪನಿಯ ಸಾಧಕ ಬಾಧಕಗಳನ್ನು ತಿಳಿಸದೆ ಏಕಾಏಕಿ ತಲೆ ಎತ್ತಲು ಮುಂದಾಗಿರುವ ಬಯೋ ಡಿಸೇಲ್ ಉತ್ಪಾದನಾ ಕಂಪನಿ ಇದಾಗಿದ್ದು, ಇಲ್ಲಿ ಅಭದ್ರತೆ ಕಾಡುತ್ತಿದೆ. ಕಂಪನಿಯಿಂದ ಹೊರ ಬಿಡುವ

ದಲಿತ ಯುವಕನ ಮೇಲೆ ಹಲ್ಲೆಗೆ ಮುಂದಾದ ಎಂ ಇಲೆವೆನ್ ಕಂಪನಿ ಎಂಡಿ | ಮಾಜಿ ಸಚಿವ ಸಹಿತ ಪೋಲಿಸರ ಎದುರು ದರ್ಪ ತೋರಿದ ಎಂಡಿ Read More »

ರಷ್ಯಾದಲ್ಲಿ ಚರ್ಚ್, ಪ್ರಾರ್ಥನಾ ಮಂದಿರಗಳ ಮೇಲೆ ಉಗ್ರರ ಅಟ್ಟಹಾಸ : 15 ಮಂದಿ ಮೃತ್ಯು

ಮಾಸ್ಕೊ: ರಷ್ಯಾದ ಮೇಲೆ ಉಗ್ರ ದಾಳಿಯಾಗಿದೆ. ಉಗ್ರರು ಯಹೂದಿಗಳ ಪ್ರಾರ್ಥನಾ ಮಂದಿರ ಹಾಗೂ ಎರಡು ಆರ್ಥಡಾಕ್ಸ್ ಚರ್ಚ್ ಮೇಲೆ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳ ಮೇಲೂ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ಚರ್ಚ್ ಪಾದ್ರಿಯ ಶಿರಚ್ಛೇದ ಮಾಡಿದ್ದಾರೆ. ಭೀಕರ ದಾಳಿಯಲ್ಲಿ ಪಾದ್ರಿ, ಪೊಲೀಸರು ಸೇರಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. 40ಕ್ಕೂ ಹೆಚ್ಚು ಮಂದಿಯನ್ನು ಉಗ್ರರು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ. ಉತ್ತರ ರಷ್ಯಾದ ಕೌಕಾಸ್ ವಲಯದಲ್ಲಿ ಈ ದಾಳಿ ನಡೆದಿದೆ. ಪ್ರತಿ ದಾಳಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.

ರಷ್ಯಾದಲ್ಲಿ ಚರ್ಚ್, ಪ್ರಾರ್ಥನಾ ಮಂದಿರಗಳ ಮೇಲೆ ಉಗ್ರರ ಅಟ್ಟಹಾಸ : 15 ಮಂದಿ ಮೃತ್ಯು Read More »

ಇಂದಿನಿಂದ ಸಂಸತ್ತಿನ ಅಧಿವೇಶನ

ಹೊಸದಿಲ್ಲಿ : ಹದಿನೆಂಟನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ.  ಜುಲೈ 3ರವರೆಗೆ ನಡೆಯಲಿರುವ ಅಧಿವೇಶನದ ಮೊದಲ ಎರಡು ದಿನಗಳಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಬುಧವಾರ ನಡೆಯಲಿದ್ದು, ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನೀಟ್-ಯುಜಿ ಪತ್ರಿಕೆ ಸೋರಿಕೆ, ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಮುಂದೂಡಿಕೆ ವಿಚಾರದಲ್ಲಿ ಸರ್ಕಾರದ ಮೇಲೆ ಮುಗಿಬೀಳಲು ಪ್ರತಿಪಕ್ಷಗಳು ತಂತ್ರ ರೂಪಿಸಿದ್ದು, ಮೊದಲ ದಿನವೇ ಗದ್ದಲ ನಡೆಯುವ ಸಾಧ್ಯತೆ

ಇಂದಿನಿಂದ ಸಂಸತ್ತಿನ ಅಧಿವೇಶನ Read More »

error: Content is protected !!
Scroll to Top