ದೇಶ

ಎಚ್‌.ಡಿ. ಕುಮಾರಸ್ವಾಮಿ  ಶಾಸಕ ಸ್ಥಾನಕ್ಕೆ  ರಾಜಿನಾಮೆ

ಇತ್ತೀಚೆಗೆ ಸಂಸದರಾಗಿ ಆಯ್ಕೆಯಾದ ಕೇಂದ್ರಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಚನ್ನಪಟ್ಟಣ ಕ್ಷೇತ್ರದಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಎಚ್‌.ಡಿ. ಕುಮಾರಸ್ವಾಮಿ ಶನಿವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಅವರು ಸಂಸದ ಸ್ಥಾನ ಉಳಿಸಿಕೊಳ್ಳಲು ನಿರ್ಧರಿಸಿದ್ದು, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತೀಚೆಗೆ ಮುಕ್ತಾಯವಾದ ಲೋಕಸಭೆ […]

ಎಚ್‌.ಡಿ. ಕುಮಾರಸ್ವಾಮಿ  ಶಾಸಕ ಸ್ಥಾನಕ್ಕೆ  ರಾಜಿನಾಮೆ Read More »

ಸ್ಮೃತಿ ವನದಲ್ಲಿ 4.6 ಲಕ್ಷ ಗಿಡ ಬೆಳೆಸಿದ ಸುಳ್ಯದ ಡಾ.ಆರ್.ಕೆ.ನಾಯರ್ l ಒಲಿಯಿತು ಯುನೆಸ್ಕೋ ಪ್ರಶಸ್ತಿ

ಮುಂಬೈ : ಗುಜರಾತ್‌ನ ಭುಜ್‌ನಲ್ಲಿ ನಿರ್ಮಿಸಿರುವ ಭೂಕಂಪ ಸ್ಮಾರಕ ಸ್ಮೃತಿ ವನಕ್ಕೆ ಯುನೆಸ್ಕೋ ಪ್ರಶಸ್ತಿ. ಸ್ಮೃತಿ ವನದಲ್ಲಿ 4.60 ಲಕ್ಷ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ  ಹಸಿರು ಪರಿಸರ ನಿರ್ಮಾಣ ಮಾಡಿರುವ ಸುಳ್ಯದವರಾದ ಪರಿಸರ ತಜ್ಞ ಡಾ. ಆರ್.ಕೆ.ನಾಯರ್ ಅವರಿಗೆ ಇದು ಹೆಮ್ಮೆಯ ಕ್ಷಣ. ಯುನೆಸ್ಕೋ ಪ್ರತಿ ವರ್ಷ ವಾಸ್ತುಶಿಲ್ಪ, ಪ್ರಕೃತಿ ಸಂರಕ್ಷಣೆ ಮತ್ತು ವಿನ್ಯಾಸ ಕ್ಷೇತ್ರದ ವಿಶ್ವದ ಪ್ರತಿಷ್ಠಿತ 7 ಸ್ಥಳಗಳನ್ನು, ಸ್ಮಾರಕಗಳನ್ನು ಗುರುತಿಸಿ ಪ್ರಿಕ್ಸ್ ವರ್ಸೈಲ್ಸ್ ಪ್ರಶಸ್ತಿ ನೀಡಲಾಗುತ್ತದೆ.  ವಿಶ್ವದ ಏಳು ಅತ್ಯಂತ ಸುಂದರವಾದ

ಸ್ಮೃತಿ ವನದಲ್ಲಿ 4.6 ಲಕ್ಷ ಗಿಡ ಬೆಳೆಸಿದ ಸುಳ್ಯದ ಡಾ.ಆರ್.ಕೆ.ನಾಯರ್ l ಒಲಿಯಿತು ಯುನೆಸ್ಕೋ ಪ್ರಶಸ್ತಿ Read More »

ಜು. 22 : ಕೇಂದ್ರ ಬಜೆಟ್ ಮಂಡನೆ ಸಾಧ್ಯತೆ

ನರೇಂದ್ರ ಮೋದಿ ನೇತೃತ್ವದ  3ನೇ ಅವಧಿಯ ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ಜು. 22 ರಂದು ಮಂಡನೆಯಾಗುವ ಸಾಧ್ಯತೆಗಳು ಇವೆ. 18ನೇ ಲೋಕಸಭೆಯ ವಿಶೇಷ 8 ದಿನಗಳ ಸಂಸತ್ ಅಧಿವೇಶನ ಇದೇ ಜೂನ್ 24 ರಂದು ಪ್ರಾರಂಭವಾಗಿ ಜುಲೈ 3 ರವರೆಗೆ ಇರಲಿದೆ .ಈ ಅಧಿವೇಶನವು ಹೊಸದಾಗಿ ಚುನಾಯಿತ ಸದಸ್ಯರ ಪ್ರಮಾಣ ವಚನ ಸ್ವೀಕಾರ, ಸ್ಪೀಕರ್ ಆಯ್ಕೆ, ರಾಷ್ಟ್ರಪತಿಗಳ ಭಾಷಣ ಮತ್ತು ನಂತರದ ಚರ್ಚೆಗಳನ್ನು ಒಳಗೊಂಡಿರುತ್ತದೆ. ಸಂಸತ್ತಿನ ಹೊಸ ಸದಸ್ಯರು ಜೂನ್ 24 ಮತ್ತು 25 ರಂದು

ಜು. 22 : ಕೇಂದ್ರ ಬಜೆಟ್ ಮಂಡನೆ ಸಾಧ್ಯತೆ Read More »

ಬಕ್ರೀದ್ ಹಬ್ಬದಂದು ಎಲ್ಲೆಂದರಲ್ಲಿ ನಮಾಜ್ ಮಾಡುವುದು, ಪ್ರಾಣಿಬಲಿ ಕೊಡುವಂತಿಲ್ಲ | ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

ಲಖನೌ: ಬಕ್ರೀದ್ ಹಬ್ಬದಂದು ಎಲ್ಲೆಂದರಲ್ಲಿ ನಮಾಜ್ ಮಾಡುವುದು, ಪ್ರಾಣಿಬಲಿ ಕೊಡುವುದು ಮಾಡುವಂತಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮುಸ್ಲಿಂ ಸಮೂಹಕ್ಕೆ ಖಡಕ್ ಸಂದೇಶವೊಂದನ್ನು ನೀಡಿದ್ದು, ಜೂನ್ 17 ರಂದು ದೇಶದ ಎಲ್ಲೆಡೆ ಮುಸ್ಲಿಂ ಸಮೂಹದವರು ಬಕ್ರೀದ್ ಹಬ್ಬವನ್ನು ಆಚರಿಸುತ್ತಾರೆ. ಈ ವೇಳೆ ಅವರು ಎಲ್ಲೆಂದರಲ್ಲಿ ಕುಳಿತು ನಮಾಜ್ ಮಾಡುವುದು ಹಾಗೂ ಪ್ರಾಣಿಗಳನ್ನು ಬಲಿ ಕೊಡುವ ಕೆಲಸ ಮಾಡುತ್ತಾರೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತದೆ. ಹಾಗಾಗಿ ಮುಸ್ಲಿಂರು ರಸ್ತೆಗಳಲ್ಲಿ ನಮಾಜ್ ಮಾಡುವಂತಿಲ್ಲ. ಅದಕ್ಕಾಗಿ

ಬಕ್ರೀದ್ ಹಬ್ಬದಂದು ಎಲ್ಲೆಂದರಲ್ಲಿ ನಮಾಜ್ ಮಾಡುವುದು, ಪ್ರಾಣಿಬಲಿ ಕೊಡುವಂತಿಲ್ಲ | ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ Read More »

ವಿಷ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ಧನ್ಯಶ್ರೀ ಮೃತ್ಯು

ಕಾಸರಗೋಡು: ವಿಷ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಪದವಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಕಾಸರಕೋಟಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮಂಗಳೂರಿನ ಕಾಲೇಜೊಂದರಲ್ಲಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿ, ಆಯಾಲಾ ಹಾಗೂ ಆಟೋ ಚಾಲಕ ನುರೇಶ್ ದಂಪತಿ ಪುತ್ರಿ ಯುಡುಪುಲುವಿನ ಧನ್ಯಶ್ರೀ (19) ಮೃತಪಟ್ಟವರು. ಕೆಲ ದಿನಗಳ ಹಿಂದೆ ಧನ್ಯಶ್ರೀ ಅವರು ಹೊಟ್ಟೆ ನೋವಿನಿಂದಾಗಿ ವೈದ್ಯರನ್ನು ನೋಡಿದ್ದರು. ಔಷಧ ಸೇವಿಸಿದ ಬಳಿಕ ನೋವು ಕಡಿಮೆಯಾಗಿ ನಂತರ ನೋವು ಕಾಣಿಸಿಕೊಂಡು ದೇರಳಕಟ್ಟೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಯೇ ಧನ್ಯಶ್ರೀ ಅವರು ವಿಷ ಸೇವಿಸಿರುವುದಾಗಿ

ವಿಷ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿ ಧನ್ಯಶ್ರೀ ಮೃತ್ಯು Read More »

ತಿರುಮಲ ತಿರುಪತಿಯಲ್ಲಿ ‘ಗೋವಿಂದ ಗೋವಿಂದ’ ಘೋಷ ಮೊಳಗಬೇಕೇ ಹೊರತು ರಾಜಕೀಯ ಹೇಳಿಕೆಗಳಲ್ಲ : ಚಂದ್ರಬಾಬು ನಾಯ್ಡು

ತಿರುಮಲ ದೇವಸ್ಥಾನ ಹಿಂದೂಗಳಿಗೆ ಸೇರಿದ್ದು ಇಲ್ಲಿ ‘ಗೋವಿಂದ ಗೋವಿಂದ’ ಎಂಬ ಘೋಷ ಮೊಳಗಬೇಕೇ ಹೊರತು ರಾಜಕೀಯ ಹೇಳಿಕೆಗಳು ಕೇಳಬಾರದು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಹೇಳಿದ್ದಾರೆ. ಗುರುವಾರ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದ ಬಳಿಕ ಅವರು ತಿರುಮಲ ಬೆಟ್ಟದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ತಿಳಿಸಿದರು. ತಿರುಮಲ ಒಂದು ಪವಿತ್ರ ಕ್ಷೇತ್ರ, ದೇವಸ್ಥಾನದ ಪಾವಿತ್ರ್ಯತೆಯನ್ನು ರಕ್ಷಿಸಬೇಕು ಹೀಗಾಗಿ ತಿರುಪತಿಯಲ್ಲಿ ಏಡುಕುಂಡಲವಾಡ ಸ್ವಾಮಿ ಗೋವಿಂದ ಗೋವಿಂದ ಎಂಬ ಘೋಷ ಮಾತ್ರ

ತಿರುಮಲ ತಿರುಪತಿಯಲ್ಲಿ ‘ಗೋವಿಂದ ಗೋವಿಂದ’ ಘೋಷ ಮೊಳಗಬೇಕೇ ಹೊರತು ರಾಜಕೀಯ ಹೇಳಿಕೆಗಳಲ್ಲ : ಚಂದ್ರಬಾಬು ನಾಯ್ಡು Read More »

ವಿಶ್ವದ 4ನೇ ಅತೀ ದೊಡ್ಡ ಭಾರತೀಯ ಸೇನೆಯ ಮುಖ್ಯಸ್ಥರಾಗಿ ಲೆ.ಜ.ಉಪೇಂದ್ರ ದ್ವಿವೇದಿ ನೇಮಕ

ದೆಹಲಿ: ವಿಶ್ವದ 4ನೇ ಅತಿ ದೊಡ್ಡ ಸೇನೆಯಾದ ಭಾರತೀಯ ಸೇನೆಯ ಹೊಸ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿಯವರನ್ನು ಸರಕಾರ ನೇಮಕ ಮಾಡಿದೆ. ಹಾಲಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಸಿ ಪಾಂಡೆಯವರ ಅಧಿಕಾರಾವಧಿ ಜೂನ್ 30ಕ್ಕೆ ಮುಕ್ತಾಯವಾಗಲಿರುವ ಹಿನ್ನಲೆಯಲ್ಲಿ ದ್ವಿವೇದಿ ಅವರನ್ನು ನೇಮಕ ಮಾಡಲಾಗಿದೆ. ಪರಮ ವಿಶಿಷ್ಟ ಸೇವಾ ಪದಕ ಪುರಸ್ಕೃತರಾಗಿರುವ ದ್ವಿವೇದಿ, ಪ್ರಸ್ತುತ ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಜೂ.30 ರಂದು ಸಂಜೆ ಜನರಲ್ ಪಾಂಡೆಯವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ. 1964ರಲ್ಲಿ ಜನಿಸಿದ

ವಿಶ್ವದ 4ನೇ ಅತೀ ದೊಡ್ಡ ಭಾರತೀಯ ಸೇನೆಯ ಮುಖ್ಯಸ್ಥರಾಗಿ ಲೆ.ಜ.ಉಪೇಂದ್ರ ದ್ವಿವೇದಿ ನೇಮಕ Read More »

ಅಧಿಕಾರ ವಹಿಸಿದ ಮೊದಲ ದಿನವೇ ಕಿಸಾನ್ ಸಮ್ಮಾನ್ ಯೋಜನೆಯ‌ ಹಣ ರೈತರ ಖಾತೆಗೆ

3 ನೇ ಅವಧಿಗೆ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಲವು ಭರವಸೆಗಳನ್ನು ಜನ ಸರ್ಕಾರದ ಮೇಲಿರಿಸಿದ್ದಾರೆ. ಜೂ.9 ರಂದು ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಇಂದು ಕೆಲಸ ಆರಂಭಿಸಿದ್ದಾರೆ. ಪ್ರಧಾನಿ ಕಚೇರಿಗೆ ಆಗಮಿಸುತ್ತಿದ್ದಂತೆ ಮೋದಿಯವರು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ರೈತರ ಖಾತೆಗೆ ಬರೋಬ್ಬರಿ 20,000 ಕೋಟಿ ರೂಪಾಯಿ ಜಮೆ ಮಾಡಿಸಿದ್ದಾರೆ.ಕಿಸಾನ್ ಸಮ್ಮಾನ್ 17ನೇ ಕಂತನ್ನು ಮೋದಿ ಬಿಡುಗಡೆ ಮಾಡಿದ್ದಾರೆ. ಮೋದಿಯವರು ತಮ್ಮ ಮೂರನೇ ಅವಧಿಯ ಮೊದಲ ದಿನವೇ ಬರೋಬ್ಬರಿ 9.3 ಕೋಟಿ ರೈತರ

ಅಧಿಕಾರ ವಹಿಸಿದ ಮೊದಲ ದಿನವೇ ಕಿಸಾನ್ ಸಮ್ಮಾನ್ ಯೋಜನೆಯ‌ ಹಣ ರೈತರ ಖಾತೆಗೆ Read More »

ಪಶ್ಚಿಮ ಬಂಗಾಳ ವಿಧಾನಸಭಾ ಉಪಚುನಾವಣೆ : ದಿನಾಂಕ ಘೋಷಣೆ

ಪಶ್ಚಿಮ ಬಂಗಾಳ ನಾಲ್ಕು ಕ್ಷೇತ್ರಗಳು ಸೇರಿ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ ಮಾಡಿದೆ. ಜುಲೈ 10 ರಂದು ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ರುಪೌಲಿ (ಬಿಹಾರ), ರಾಯ್ಗಂಜ್, ರಣಘಾಟ್ ದಕ್ಷಿಣ, ಬಾಗ್ಡಾ ಮತ್ತು ಮಾಣಿಕ್ತಾಲಾ (ಪಶ್ಚಿಮ ಬಂಗಾಳ), ವಿಕ್ರವಂಡಿ (ತಮಿಳುನಾಡು), ಅಮರವಾರ(ಮಧ್ಯಪ್ರದೇ ಶ), ಬದರಿನಾಥ್ ಮತ್ತು ಮಂಗಳೌರ್ (ಉತ್ತರಾಖಂಡ), ಜಲಂಧರ್ ಪಶ್ಚಿಮ (ಪಂಜಾಬ್) ಮತ್ತು ಡೆಹ್ರಾ, ಹಮೀರ್ಪುರ ಮತ್ತು ನಲಗಢ (ಹಿಮಾಚಲ ಪ್ರದೇಶ) ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ನಡೆಯಲಿವೆ. ಜೂನ್

ಪಶ್ಚಿಮ ಬಂಗಾಳ ವಿಧಾನಸಭಾ ಉಪಚುನಾವಣೆ : ದಿನಾಂಕ ಘೋಷಣೆ Read More »

ಯಾತ್ರಾರ್ಥಿಗಳಿದ್ದ ಬಸ್ಸಿನ ಮೆಲೆ ಭಯೋತ್ಪಾದಕರಿಂದ ಗುಂಡಿನ ದಾಳಿ | 9 ಮಂದಿ ಮೃತ್ಯು, 33 ಮಂದಿಗೆ ಗಾಯ

ಶ್ರೀನಗರ:  ಯಾತ್ರಾರ್ಥಿಗಳಿದ್ದ ಬಸ್ಸಿನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಪರಿಣಾಮ 9 ಯಾತ್ರಿಕರು ಮೃತಪಟ್ಟು, 33 ಮಂದಿ ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ನಡೆದಿದೆ. 53 ಆಸನಗಳ ಬಸ್ ಶಿವ ಖೋರಿ ದೇವಸ್ಥಾನದಿಂದ ಕತ್ರಾ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಚಲಿಸುತ್ತಿದ್ದ ವೇಳೆಯೇ ದಾಳಿ ನಡೆಸಿದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಆಳವಾದ ಕಮರಿಗೆ ಬಿದ್ದಿದೆ. ಪೋನಿ ಪ್ರದೇಶದ ತೇರ್ಯತ್ ಗ್ರಾಮದ

ಯಾತ್ರಾರ್ಥಿಗಳಿದ್ದ ಬಸ್ಸಿನ ಮೆಲೆ ಭಯೋತ್ಪಾದಕರಿಂದ ಗುಂಡಿನ ದಾಳಿ | 9 ಮಂದಿ ಮೃತ್ಯು, 33 ಮಂದಿಗೆ ಗಾಯ Read More »

error: Content is protected !!
Scroll to Top