ದೇಶ

ಆರ್ಟಿಕಲ್ 370 ರದ್ದು: ಸುಪ್ರೀಂ ಮಹತ್ವದ ತೀರ್ಪಿಗೆ ಕ್ಷಣಗಣನೆ! | ಕಣಿವೆ ರಾಜ್ಯದಲ್ಲಿ ಬಿಗಿ ಭದ್ರತೆ

ಶ್ರೀನಗರ: ಆರ್ಟಿಕಲ್ 370 ರದ್ದಿನ ವಿರುದ್ಧ ಸುಪ್ರೀಂ ಕೋರ್ಟ್ ನಡೆಸಿದ ವಿಚಾರಣೆಯ ತೀರ್ಪು ಕೆಲವೇ ಕ್ಷಣಗಳಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. 2019ರಲ್ಲಿ ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದುಮಾಡುವ ಮೂಲಕ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿತ್ತು. ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದವು. ಹಲವು ಸುತ್ತಿನ ವಾದ-ವಿವಾದಗಳ ನಂತರ ಇಂದು ಸೋಮವಾರ ಸುಪ್ರೀಂ ಕೋರ್ಟ್ ಈ ವಿಷಯಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಲಿದೆ.  ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಈ ಹಿನ್ನೆಲೆಯಲ್ಲಿ […]

ಆರ್ಟಿಕಲ್ 370 ರದ್ದು: ಸುಪ್ರೀಂ ಮಹತ್ವದ ತೀರ್ಪಿಗೆ ಕ್ಷಣಗಣನೆ! | ಕಣಿವೆ ರಾಜ್ಯದಲ್ಲಿ ಬಿಗಿ ಭದ್ರತೆ Read More »

ಅಯೋಧ್ಯೆ ಶ್ರೀರಾಮ ದೇಗುಲದಲ್ಲಿ ಪೌರೋಹಿತ್ಯ ಸೇವೆಗೈಯಲಿದ್ದಾರೆ ಯುವ ಪುರೋಹಿತ ಮೋಹಿತ್ ಪಾಂಡೆ

ಅಯೋಧ್ಯೆ ಶೀಘ್ರದಲ್ಲೇ ಉದ್ಘಾಟನೆ ಆಗಲಿರುವ ಶ್ರೀ ರಾಮ ದೇಗುಲದಲ್ಲಿ ಶ್ರೀರಾಮನ ಪೌರೋಹಿತ್ಯ ಸೇವೆ ಮಾಡಲು ಆಯ್ಕೆಯಾದ ಯುವ ಪುರೋಹಿತ, ಸಕಲ ವೇದ ಪಾರಂಗತ ಭಾಗ್ಯವಂತ ಮೋಹಿತ್ ಪಾಂಡೆ ದೇಶದಾದ್ಯಂತ ಕರೆಯಲಾದ 3000 ಕ್ಕಿಂತಲೂ ಅಧಿಕ ಪುರೋಹಿತರ ಸಂದರ್ಶನದಲ್ಲಿ ಮತ್ತು ವೇಧಜ್ಞಾನ ಕಠಿಣ ಪರೀಕ್ಷೆಯಲ್ಲಿ ತನ್ನ ವೇದ ಮತ್ತು ಪೂಜಾ ವಿಧಿ, ವಿಧಾನಗಳ ಅಪಾರ ಪಾಂಡಿತ್ಯ ಮತ್ತು ಜ್ಞಾನದಿಂದ ಆಯ್ಕೆಯಾದ ಕೊನೆಯ 50 ಮಂದಿಯಲ್ಲಿ ಅಗ್ರಸ್ಥಾನಿಯಾಗಿ ಆಯ್ಕೆಯಾದವರು ಮೋಹಿತ್ ಪಾಂಡೆ. ಯುವ ಪುರೋಹಿತರಾಗಿದ್ದು, ಪ್ರಸ್ತುತ ಗಾಜಿಯಾಬಾದ್ ನ ಧುದೇಶ್ವರನಾಥ

ಅಯೋಧ್ಯೆ ಶ್ರೀರಾಮ ದೇಗುಲದಲ್ಲಿ ಪೌರೋಹಿತ್ಯ ಸೇವೆಗೈಯಲಿದ್ದಾರೆ ಯುವ ಪುರೋಹಿತ ಮೋಹಿತ್ ಪಾಂಡೆ Read More »

ಆಸ್ಪತ್ರೆಯ ಡಸ್ಟ್ ಬಿನ್ ನಲ್ಲಿ ನವಜಾತ ಶಿಶುವಿನ ಶವ ಪತ್ತೆ!

ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿನ ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿರುವ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದೆ. ಸಿಯಾನ್ ಆಸ್ಪತ್ರೆ ಎಂದೇ ಜನಪ್ರಿಯವಾಗಿರುವ ಲೋಕಮಾನ್ಯ ತಿಲಕ್ ಮುನ್ಸಿಪಲ್ ಜನರಲ್ ಆಸ್ಪತ್ರೆಯ ವಾಶ್ ರೂಂನ ಡಸ್ಟ್‌ಬಿನ್‌ನಲ್ಲಿ ನವಜಾತ ಶಿಶುವಿನ ಶವವೊಂದನ್ನು ಕಸ ಗುಡಿಸುವವರೊಬ್ಬರು ಪತ್ತೆ ಮಾಡಿದ್ದಾರೆ. ನಂತರ ಅದರ ಬಗ್ಗೆ ಕರ್ತವ್ಯ ನಿರತ ವೈದ್ಯರಿಗೆ ಮಾಹಿತಿ ನೀಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.  ವೈದ್ಯರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಅಪರಿಚಿತ ಮಹಿಳೆಯ ವಿರುದ್ಧ ಭಾರತೀಯ ದಂಡ

ಆಸ್ಪತ್ರೆಯ ಡಸ್ಟ್ ಬಿನ್ ನಲ್ಲಿ ನವಜಾತ ಶಿಶುವಿನ ಶವ ಪತ್ತೆ! Read More »

ಅಕ್ಬರುದ್ದಿನ್ ಓವೈಸಿ ತೆಲಂಗಾಣದ ಹಂಗಾಮಿ ಸ್ಪೀಕರ್: ವಿರೋಧ

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿ ತೆಲಂಗಾಣದಲ್ಲಿ ಸರ್ಕಾರ ರಚನೆ ಮಾಡಿದೆ. ಇದೀಗ ಎಐಎಂಐಎಂ ಶಾಸಕ ಅಕ್ಬರುದ್ದಿನ್ ಓವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ. ಈ ನಿರ್ಧಾರಕ್ಕೆ ಇದೀಗ ತೀವ್ರ ವಿರೋಧ ವ್ಯಕ್ತವಾಗಿದೆ. ಅಕ್ಬರುದ್ದಿನ್ ಓವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿದ ನಿರ್ಧಾರವನ್ನು ವಿರೋಧಿಸಿದ ಬಿಜೆಪಿ ಶಾಸಕರು, ಅವರಿಂದ ಪ್ರಮಾಣ ವಚನ ಸ್ವೀಕರಿಸಲೂ ನಿರಾಕರಿಸಿದ್ದಾರೆ. ಓವೈಸಿ ಅವರಿಂದ ಪಕ್ಷದ ಶಾಸಕರು ಪ್ರಮಾಣ ವಚನ ಸ್ವೀಕರಿಸುವುದಿಲ್ಲ ಎಂದು

ಅಕ್ಬರುದ್ದಿನ್ ಓವೈಸಿ ತೆಲಂಗಾಣದ ಹಂಗಾಮಿ ಸ್ಪೀಕರ್: ವಿರೋಧ Read More »

ಈರುಳ್ಳಿ ರಫ್ತಿನ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಈರುಳ್ಳಿ ರಫ್ತಿನ ಮೇಲೆ ಸಂಪೂರ್ಣ ನಿಷೇಧ ಹೇರಿದೆ. ಈ ಕ್ರಮ 31 ಮಾರ್ಚ್ 2024ರವರೆಗೆ ಜಾರಿಯಲ್ಲಿರಲಿದೆ. ಈರುಳ್ಳಿ, ಟೊಮೇಟೊ ಬೆಲೆ ಏರಿಕೆಯಿಂದ ಥಾಲಿ ಬೆಲೆ ಏರಿಕೆಯಾಗಿದೆ ಎಂಬ ಸುದ್ದಿ ದಿನದ ಹಿಂದೆಯಷ್ಟೇ ಬಂದಿತ್ತು. ಕಳೆದ ಅಕ್ಟೋಬರ್‌ನಲ್ಲಿ ಈರುಳ್ಳಿ ಶತಮಾನದ ಗಡಿ ದಾಟಿದಾಗ ಸರ್ಕಾರ ಈರುಳ್ಳಿ ರಫ್ತಿಗೆ ಕನಿಷ್ಠ ಬೆಲೆ ನಿಗದಿ ಮಾಡಿತ್ತು. ಬೆಲೆಗಳನ್ನು ಎಷ್ಟು ನಿಗದಿಪಡಿಸಲಾಗಿದೆ ಎಂದರೆ ಆ ಬೆಲೆಗೆ ಪ್ರಪಂಚದಾದ್ಯಂತ ಭಾರತೀಯ ಈರುಳ್ಳಿಯನ್ನು ಖರೀದಿಸಲು ಯಾರು ಮುಂದೆ ಬಂದಿಲ್ಲ. ಹೀಗಾಗಿ ಇದರಿಂದಾಗಿ ಈರುಳ್ಳಿ

ಈರುಳ್ಳಿ ರಫ್ತಿನ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ Read More »

ಸೋನಿಯಾ ಗಾಂಧಿಗೆ 77ನೇ ಹುಟ್ಟುಹಬ್ಬ | ಪ್ರಧಾನಿ ಸೇರಿದಂತೆ ಗಣ್ಯರಿಂದ ಶುಭಾಶಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ 77ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ‘ಶ್ರೀಮತಿ ಸೋನಿಯಾ ಗಾಂಧಿಜಿ ಅವರಿಗೆ ಅವರ ಜನ್ಮದಿನದ ಶುಭಾಶಯಗಳು. ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ದೊರಕಲಿ’ ಎಂದು ಪ್ರಧಾನಿ ಮೋದಿ ಶನಿವಾರ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದು, ‘ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಜಿ ಅವರಿಗೆ ಅವರ ಜನ್ಮದಿನದ ಶುಭಾಶಯಗಳು. ತುಳಿತಕ್ಕೊಳಗಾದ ವ್ಯಕ್ತಿಗಳ

ಸೋನಿಯಾ ಗಾಂಧಿಗೆ 77ನೇ ಹುಟ್ಟುಹಬ್ಬ | ಪ್ರಧಾನಿ ಸೇರಿದಂತೆ ಗಣ್ಯರಿಂದ ಶುಭಾಶಯ Read More »

ಆರ್ಟಿಕಲ್ 370 ರದ್ದು: ಡಿ. 11ರಂದು ತೀರ್ಪು!

ನವದೆಹಲಿ: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿ ಸಂವಿಧಾನ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಪೂರ್ಣಗೊಳಿಸಿದೆ. ಕೇಂದ್ರ ಸರಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿ ಹಲವು ಅರ್ಜಿಗಳು ದಾಖಲಾಗಿತ್ತು. ಇವುಗಳ ವಿಚಾರಣೆ ನಡೆಸಿರುವ ಸುಪ್ರೀಂ, ತೀರ್ಪನ್ನು ಡಿ. 11ಕ್ಕೆ ಕಾಯ್ದಿರಿಸಿದೆ. ಕೇಂದ್ರ ಸರಕಾರ 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ರದ್ದು ಮಾಡಿ ಐತಿಹಾಸಿಕ ನಿರ್ಧಾರವನ್ನು ಘೋಷಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರ,

ಆರ್ಟಿಕಲ್ 370 ರದ್ದು: ಡಿ. 11ರಂದು ತೀರ್ಪು! Read More »

ಬೇಲ್ ಪಡೆದು ಆ್ಯಸಿಡ್ ದಾಳಿ ನಡೆಸಿದ ಅತ್ಯಾಚಾರದ ಆರೋಪಿ!!

ಅತ್ಯಾಚಾರ ನಡೆಸಿದ ಆರೋಪಿಯೊಬ್ಬ ಜಾಮೀನಿನ ಮೇಲೆ ಜೈಲಿಂದ ಹೊರಬಂದು ತನ್ನ ಮೇಲೆ ಆರೋಪ ಹೊರಿಸಿದ್ದ ಮಹಿಳೆಯ ಅಪ್ರಾಪ್ತ ಮಗಳ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ ಮಧ್ಯದೆಹಲಿಯಲ್ಲಿ ನಡೆದಿದೆ. ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಅತ್ಯಾಚಾರ ಆರೋಪಿಯನ್ನು ಪ್ರೇಮ್ ಸಿಂಗ್‌ ಎಂದು ಗುರುತಿಸಲಾಗಿದೆ. ಕುಟುಂಬದವರ ವಿವಾಹದಲ್ಲಿ ಪಾಲ್ಗೊಳ್ಳಲು ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿತ್ತು. ಗುರುವಾರ ಸಂಜೆ ತನ್ನ ಮೇಲೆ ಆರೋಪ ಹೊರಿಸಿದ್ದ ಮಹಿಳೆಯ ಬಳಿಗೆ ತೆರಳಿ ದೂರನ್ನು ಹಿಂಪಡೆಯುವಂತೆ ಕೇಳಿದ್ದಾನೆ. ಅದನ್ನು ನಿರಾಕರಿಸಿದ್ದಕ್ಕೆ ಆತ

ಬೇಲ್ ಪಡೆದು ಆ್ಯಸಿಡ್ ದಾಳಿ ನಡೆಸಿದ ಅತ್ಯಾಚಾರದ ಆರೋಪಿ!! Read More »

ಲೋಕಸಭೆಯಿಂದ ಟಿಎಂಸಿಯ ಮಹುವಾ ಮೊಹಿತ್ರಾ ಉಚ್ಛಾಟನೆ!

ಹೊಸದಿಲ್ಲಿ: ಕೆಲವು ದಿನಗಳಿಂದ ಚರ್ಚೆಯಲ್ಲಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಹಿತ್ರಾ ಅವರನ್ನು ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿದೆ. ಮಹುವಾ ಮೊಹಿತ್ರಾ ಉಚ್ಛಾಟನೆಗೆ ನೈತಿಕ ಸಮಿತಿಯು ಶಿಫಾರಸು ಮಾಡಿತ್ತು. ಸಂಸತ್ ನಲ್ಲಿ ಪ್ರಶ್ನೆ ಕೇಳಲು ಮಹುವಾ ಮೊಹಿತ್ರಾ ಹಣ ಪಡೆದಿದ್ದಾರೆಂದು ಆರೋಪಿಸಲಾಗಿತ್ತು. ಸಂಸತ್ತಿನ ನೈತಿಕ ಸಮಿತಿಯು ಈ ಪ್ರಕರಣದಲ್ಲಿ ಮಹುವಾ ಮೊಯಿತ್ರಾ ಅವರನ್ನು ತಪ್ಪಿತಸ್ಥರೆಂದು ವರದಿ ನೀಡಿದೆ. ಅಲ್ಲದೆ ಸಂಸತ್ತಿನ ಕೆಳಮನೆಯಿಂದ ಅವರನ್ನು ಹೊರಹಾಕಲು ಶಿಫಾರಸು ಮಾಡಿತು. ಲೋಕಸಭೆಯಲ್ಲಿ ಸಂಸದೀಯ ವ್ಯವಹಾರಗಳ ಸಚಿವರು ಮಂಡಿಸಿದ ಮಹುವಾ ಮೊಹಿತ್ರಾ ಅವರನ್ನು

ಲೋಕಸಭೆಯಿಂದ ಟಿಎಂಸಿಯ ಮಹುವಾ ಮೊಹಿತ್ರಾ ಉಚ್ಛಾಟನೆ! Read More »

ಶೋಭಾ ಕರಂದ್ಲಾಜೆಗೆ ಕೇಂದ್ರದ ಹೆಚ್ಚುವರಿ ಖಾತೆ!

ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿರುವ ಕೇಂದ್ರ ಸಚಿವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರು ಹೊಂದಿದ್ದ ಖಾತೆಗಳನ್ನು ಸಂಪುಟದ ಇತರ ಸದಸ್ಯರಿಗೆ ಮರುಹಂಚಿಕೆ ಮಾಡಲಾಗಿದೆ. ಈ ಪೈಕಿ ಶೋಭಾ ಕರಂದ್ಲಾಜೆ ಹಾಗೂ ರಾಜೀವ್ ಚಂದ್ರಶೇಖರ್ ಅವರಿಗೆ ಹೆಚ್ಚುವರಿ ಜವಾಬ್ದಾರಿಯ ಹೊಣೆ ಸಿಕ್ಕಿದೆ. ಶೋಭಾ ಕರಂದ್ಲಾಜೆ ಅವರಿಗೆ ಆಹಾರ ಸಂಸ್ಕರಣೆ ಖಾತೆ, ರಾಜೀವ್ ಚಂದ್ರಶೇಖರ್ ಅವರಿಗೆ ಜಲಶಕ್ತಿ ಖಾತೆಯನ್ನು ನೀಡಲಾಗಿದೆ. ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವರಾಗಿದ್ದ ನರೇಂದ್ರ ಸಿಂಗ್ ತೋಮರ್ ಅವರ ಖಾತೆಯನ್ನು ಅರ್ಜುನ್ ಮುಂಡಾ

ಶೋಭಾ ಕರಂದ್ಲಾಜೆಗೆ ಕೇಂದ್ರದ ಹೆಚ್ಚುವರಿ ಖಾತೆ! Read More »

error: Content is protected !!
Scroll to Top