ದೇಶ

ದೇಶದ ಜನತೆಗೆ ನರೇಂದ್ರ ಮೋದಿಯಿಂದ ‘ಅಕ್ಷಯ ತೃತೀಯ’ ದ ಶುಭಾಶಯ

 ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ದೇಶದಾದ್ಯಂತ ಎಲ್ಲಾ ಕುಟುಂಬಗಳಿಗೆ ಅಕ್ಷಯ ತೃತೀಯದ ಶುಭಾಶಯಗಳನ್ನು ಕೋರಿದ್ದಾರೆ. ”ದೇಶದ ಎಲ್ಲಾ ಕುಟುಂಬಗಳಿಗೆ ಅಕ್ಷಯ ತೃತೀಯ ದಿನದಂದು ಹಾರ್ದಿಕ ಶುಭಾಶಯಗಳು. ದಾನವನ್ನು ಪ್ರೇರೇಪಿಸುವ ಈ ಶುಭ ಸಂದರ್ಭವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತರಲಿ ಎಂದು ನಾನು ಭಾವಿಸುತ್ತೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು “ಅಕ್ಷಯ ತೃತೀಯದ ಪವಿತ್ರ ಹಬ್ಬದ ಹಾರ್ದಿಕ […]

ದೇಶದ ಜನತೆಗೆ ನರೇಂದ್ರ ಮೋದಿಯಿಂದ ‘ಅಕ್ಷಯ ತೃತೀಯ’ ದ ಶುಭಾಶಯ Read More »

ಮೇ 10 ರಿಂದ ಕೇದಾರನಾಥ ದೇವಾಲಯ ಭಕ್ತರ  ದರ್ಶನಕ್ಕೆ ಮುಕ್ತ

ಕೇದಾರನಾಥ : ಕೇದಾರನಾಥ ಧಾಮದಲ್ಲಿ ಭಾನುವಾರದಿಂದ ವಿಶೇಷ ಪೂಜೆಗಳು ಆರಂಭವಾಗಿದೆ. ಮೇ 10 ರಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಾನುವಾರ ಸಂಜೆ ಉಖಿಮಠದ ಓಂಕಾರೇಶ್ವರ ದೇವಸ್ಥಾನದಲ್ಲಿ ಭೈರವನಾಥ ದೇವರಿಗೆ ಅರ್ಚಕರು ವಿಶೇಷ ಪೂಜೆ ಸಲ್ಲಿಸಿದರು. ಸೋಮವಾರ ಉಖಿಮಠದ  ಓಂಕಾರೇಶ್ವರ ದೇವಸ್ಥಾನದಿಂದ  ಪಂಚಮುಖಿ ಭೋಗಮೂರ್ತಿ ಪಲ್ಲಕಿ ಯಾತ್ರೆ ಆರಂಭವಾಯಿತು. ಇದೇ ತಿಂಗಳ 9ರಂದು ಕೇದಾರನಾಥ ಧಾಮ ತಲುಪಲಿದೆ. ಈ ತಿಂಗಳ 10 ರಂದು ಬೆಳಿಗ್ಗೆ 7 ಗಂಟೆಗೆ ಕೇದಾರನಾಥ ಧಾಮದ ಬಾಗಿಲು ಭಕ್ತರಿಗೆ ಪೂಜೆಗಾಗಿ ತೆರೆಯಲಾಗುತ್ತದೆ. ರುದ್ರಪ್ರಯಾಗದಲ್ಲಿರುವ 

ಮೇ 10 ರಿಂದ ಕೇದಾರನಾಥ ದೇವಾಲಯ ಭಕ್ತರ  ದರ್ಶನಕ್ಕೆ ಮುಕ್ತ Read More »

ತವರು ರಾಜ್ಯ ಗುಜರಾತ್ ನಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ

ಗಾಂಧೀನಗರ : ದೇಶದ ಸಾರ್ವತ್ರಿಕ ಚುನಾವಣೆಗೆ ಇಂದು ಮೂರನೇ ಹಂತದ ಮತದಾನ ನಡೆಯುತ್ತಿದ್ದು, ತವರು ರಾಜ್ಯವಾದ ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ನಿಶಾನ್‌ ಹಿರಿಯ ಪ್ರಾಥಮಿಕ ಶಾಲೆಯಲ್ಲಿದ್ದ ಮತಗಟ್ಟೆಗೆ ತೆರಳಿ ಪ್ರಧಾನಿ ಮೋದಿ ಅವರು ಮತ ಚಲಾಯಿಸಿದ್ದಾರೆ. ಮಂಗಳವಾರ ಬೆಳಗ್ಗೆ ರಾಜಭವನದಿಂದ ಹೊರಟು ಪ್ರಧಾನಿ ಮತ ಚಲಾಯಿಸಿದರು. ಮತದಾನ ಮಾಡಿ ಬೆರಳು ತೋರಿಸಿ ಮತದಾನ ಮಾಡುವಂತೆ ಪ್ರೇರೇಪಿಸಿದರು. ಇಂದು ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ

ತವರು ರಾಜ್ಯ ಗುಜರಾತ್ ನಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ Read More »

ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ | ವೀಡಿಯೋ ಜೆಡಿಎಸ್ ಪಕ್ಷ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅವಧಿಯದ್ದಾಗಿವೆ : ಪ್ರಧಾನಿ ಮೋದಿ

ಹೊಸದಿಲ್ಲಿ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವೀಡಿಯೊ  ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್ ರೇವಣ್ಣ ಅವರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಅಂತಹ ವ್ಯಕ್ತಿಗಳಿಗೆ ಸಹನೆ ತೋರಬೇಕಾದ ಅಗತ್ಯ ಇಲ್ಲ. ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರವೇ  ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದೆ  ಎಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮಾತನಾಡಿರುವ ಮೋದಿ,

ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ | ವೀಡಿಯೋ ಜೆಡಿಎಸ್ ಪಕ್ಷ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅವಧಿಯದ್ದಾಗಿವೆ : ಪ್ರಧಾನಿ ಮೋದಿ Read More »

ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ‘ಕೈ’ ಗೆ ರಾಜೀನಾಮೆ

ಆಯೋಧ್ಯೆ: ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ನಾನು ರಾಮಮಂದಿರಕ್ಕೆ ಭೇಟಿ ನೀಡಿದ ಬಳಿಕ ಪಕ್ಷದಲ್ಲೇ ಟೀಕೆ ಮಾಡಲಾಗುತ್ತಿದೆ. ಜತೆಗೆ ಪಕ್ಷದಲ್ಲಿ ಪುರುಷರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಹೆಣ್ಣುಮಕ್ಕಳಿಗೆ ಗೌರವ ನೀಡುತ್ತಿಲ್ಲ ಎಂದು ಆರೋಪಿಸಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂಬುದಾಗಿ ರಾಧಿಕಾ ಖೇರ ತಿಳಿಸಿದ್ದಾರೆ. ಪ್ರತಿಯೊಬ್ಬ ಹಿಂದೂವಿಗೂ ರಾಮಮಂದಿರವು ಪವಿತ್ರ ಹಾಗೂ ಶ್ರದ್ಧಾ ಕೇಂದ್ರವಾಗಿದೆ. ಹಾಗಾಗಿ ನಾನು ರಾಮಮಂದಿರಕ್ಕೆ ಭೇಟಿ ನೀಡಿದೆ. ನಾನು ಕಾಂಗ್ರೆಸ್‌ಗೆ 22

ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ‘ಕೈ’ ಗೆ ರಾಜೀನಾಮೆ Read More »

ವಾಯುಪಡೆ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕ ದಾಳಿ : ಓರ್ವ ಹುತಾತ್ಮ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಐವರು IAF ಅಧಿಕಾರಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ಸೈನಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಧಂಪುರದ ಕಮಾಂಡ್ ಆಸ್ಪತ್ರೆಗೆ ಹೆಲಿಕಾಪ್ಟ‌ರ್ ಮೂಲಕ ರವಾನೆ ಮಾಡಲಾಗಿದೆ. ಉಗ್ರರು ಸುಮಾರು 30 ಸುತ್ತು ಗುಂಡು ಹಾರಿಸಿದ್ದಾರೆ. ದಾಳಿ ನಡೆಸಿದ ಬಳಿಕ ಉಗ್ರರು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಶಾಸಿತಾರ್ ಬಳಿಯ

ವಾಯುಪಡೆ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕ ದಾಳಿ : ಓರ್ವ ಹುತಾತ್ಮ Read More »

ನಾಮಪತ್ರ ಸಲ್ಲಿಕೆ ಬೆನ್ನಲ್ಲೇ ರಾಹುಲ್ ವಿರುದ್ಧ ಪ್ರತಿಭಟನೆ

ಉತ್ತರಪ್ರದೇಶ : ರಾಯಬರೇಲಿ ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ ಬೆನ್ನಲ್ಲೇ ರಾಹುಲ್‌ ವಿರುದ್ಧ ಪ್ರತಿಭಟನೆ ಕೂಡ ನಡೆದಿದೆ. ಶುಕ್ರವಾರ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ಹಾಗೂ ಪಕ್ಷದ ಮುಖಂಡರ ಜೊತೆ ತೆರಳಿ ರಾಯಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಮೇಥಿ ಬಿಟ್ಟು ರಾಯಬರೇಲಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ಮೋದಿ, ಅಮಿತ್‌ ಶಾ ಸೇರಿ ಅನೇಕ ಬಿಜೆಪಿ ನಾಯಕರು ಟೀಕಿಸಿದ್ದು, ಅಮೇಥಿಯಿಂದ ಓಡಿದ ರಾಹುಲ್‌ ಈಗ ರಾಯಬರೇಲಿ ತಲುಪಿದ್ದಾರೆ ಎಂದು ಅಣಕಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಬೆನ್ನಲ್ಲೇ ರಾಹುಲ್ ವಿರುದ್ಧ ಪ್ರತಿಭಟನೆ Read More »

ಕೋವಿಶೀಲ್ಡ್ ಪಡೆದ ಬಳಿಕ ಇಬ್ಬರು ಹೆಣ್ಣು ಮಕ್ಕಳು ಮೃತ್ಯು | ಕಾನೂನು ಸಮರಕ್ಕೆ ಸಜ್ಜಾದ ಮಕ್ಕಳ ಹೆತ್ತವರು

ಕೊರೊನಾ ಸಮಯದಲ್ಲಿ ಭಾರೀ ಸುದ್ದಿಯಲ್ಲಿದ್ದ ಔಷಧಿಗಳ ತಯಾರಿಕಾ ಸಂಸ್ಥೆ Oxford-AstraZeneca, ಆಘಾತಕಾರಿ ಮಾಹಿತಿ ಒಂದನ್ನು ಕೊನೆಗೂ ಕೋರ್ಟ್ ಮುಂದೆ ಒಪ್ಪಿಕೊಂಡಿರುವ ಬೆನ್ನಲ್ಲೇ ಭಾರತದಲ್ಲಿ ಹೆಣ್ಣು ಮಕ್ಕಳನ್ನು ಕಳೆದುಕೊಂಡ ಪೋಷಕರು ಕಾನೂನು ಸಮರಕ್ಕೆ ಸಜ್ಜಾಗಿದ್ದಾರೆ. ಔಷಧಿ ತಯಾರಿಕಾ ಕಂಪೆನಿಯು ತಾನು ಅಭವೃದ್ಧಿಪಡಿಸಿ ಕೋಟ್ಯಾಂತರ ಜನರಿಗೆ ನೀಡಿರುವ ಕೊರೊನಾ ಲಸಿಕೆಯು ಗಂಭೀರ ಅಡ್ಡಪರಿಣಾಮ ಉಂಟುಮಾಡಬಹುದು ಎಂದು ಲಂಡನ್ ಕೋರ್ಟ್‌ನಲ್ಲಿ ಹೇಳಿದೆ. ಇದೀಗ ಭಾರತದ ಇಬ್ಬರು ಹೆಣ್ಮಕ್ಕಳ ಪೋಷಕರು ಕೋವಿಶೀಲ್ಡ್ ಲಸಿಕೆಯನ್ನು ಒದಗಿಸಿದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ವಿರುದ್ಧ

ಕೋವಿಶೀಲ್ಡ್ ಪಡೆದ ಬಳಿಕ ಇಬ್ಬರು ಹೆಣ್ಣು ಮಕ್ಕಳು ಮೃತ್ಯು | ಕಾನೂನು ಸಮರಕ್ಕೆ ಸಜ್ಜಾದ ಮಕ್ಕಳ ಹೆತ್ತವರು Read More »

ಭೋಜ್ ಪುರಿ ನಟಿ ಅಮೃತಾ ಪಾಂಡೆ ನೇಣಿಗೆ ಶರಣು !

ಬಿಹಾರ್ :  ಬಿಹಾರದ ಭಾಗಲ್‌ಪುರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಭೋಜ್‌ಪುರಿ ನಟಿ ಅಮೃತಾ ಪಾಂಡೆ ಶವವಾಗಿ ಪತ್ತೆಯಾಗಿದ್ದಾರೆ. ಅಮೃತಾ ತನ್ನ ಸೀರೆಯಿಂದ ತಮ್ಮ ನಿವಾಸದ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಮೃತಾ ಪಾಂಡೆ ಅವರು ತನ್ನ ಪತಿಯೊಂದಿಗೆ ನೆಲೆಸಿದ್ದರು. ಕೆಲ ದಿನಗಳ ಹಿಂದೆ ಸಂಬಂಧಿಕರ ಮದುವೆಯ ಹಿನ್ನೆಲೆಯಲ್ಲಿ ಬಿಹಾರದ ಭಾಗಲ್‌ಪುರಕ್ಕೆ ಭೇಟಿ ನೀಡಿದ್ದರು. ಆದರೆ ಭಾಗಲ್‌ಪುರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸಾವನ್ನಪ್ಪಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಆದರೆ, ಆತ್ಮಹತ್ಯೆ ಮಾಡಿಕೊಳ್ಳುವುದಕ್ಕಿಂತ ಕೆಲವೇ ಗಂಟೆ ಮುಂಚೆ ಅಮೃತಾ ಪಾಂಡೆ ವಾಟ್ಸ್‌

ಭೋಜ್ ಪುರಿ ನಟಿ ಅಮೃತಾ ಪಾಂಡೆ ನೇಣಿಗೆ ಶರಣು ! Read More »

ವಾಟ್ಸ್ಆ್ಯಪ್ ಬಳಕೆದಾರರಿಗೆ ಚಾಟ್ ಎನ್‍ ಕ್ರಿಪ್ಟ್ ಭೇದಿಸಲು ಹೊರಟ ಭಾರತ ಸರಕಾರ | ಭಾರತದಿಂದ ನಿರ್ಗಮಿಸುವುದಾಗಿ ದೆಹಲಿ ಹೈಕೋರ್ಟ್‍ ಗೆ ತಿಳಿಸಿದ ವಾಟ್ಸಪ್

ಮೆಟಾ ಒಡೆತನದ ವಾಟ್ಸ್ಆ್ಯಪ್ ತನ್ನ ಬಳಕೆದಾರರಿಗೆ ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಸೇವೆಯನ್ನ ಒದಗಿಸುತ್ತಿದೆ. ಮುಂದಿನ ದಿನಗಳಲ್ಲಿ ಚಾಟ್ ಎನ್‌ಕ್ರಿಪ್ಟ್ ಅನ್ನು ಭೇದಿಸಲು ಹೊರಟಿದೆ. ಇದು ಬಳಕೆದಾರರಿಗೆ ಅಸುರಕ್ಷಿತವಾಗಿದೆ. ಈ ಹಿನ್ನಲೆಯಲ್ಲಿ  ಭಾರತದಿಂದ ನಿರ್ಗಮಿಸುವುದಾಗಿ ದೆಹಲಿ ಹೈಕೋರ್ಟ್‌ಗೆ ವಾಟ್ಸ್ ಆ್ಯಪ್ ತಿಳಿಸಿದೆ. ಭಾರತ ಸರ್ಕಾರ ವಾಟ್ಸ್ಆ್ಯಪ್ ಗೌಪ್ಯತೆಯ ದೃಷ್ಟಿಯ ವಿಚಾರವಾಗಿ ಹೋರಾಡುತ್ತಿದೆ. ಅದರಲ್ಲೂ ಚಾಟ್, ಕರೆ, ವೀಡಿಯೋ ಕರೆಗಳನ್ನು ಸುರಕ್ಷಿತವಾಗಿರಿಸಲು ವಾಟ್ಸ್ಆ್ಯಪ್ ಹೋರಾಡುತ್ತಲೇ ಬಂದಿದೆ. ಆದರೆ ಸರಕಾರ ಸಂದೇಶದ ಮೂಲವನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ದೆಹಲಿ ಕೋರ್ಟ್ ಮೊರೆ ಹೋಗಿದೆ. ಮೆಟಾ-ಮಾಲೀಕತ್ವದ

ವಾಟ್ಸ್ಆ್ಯಪ್ ಬಳಕೆದಾರರಿಗೆ ಚಾಟ್ ಎನ್‍ ಕ್ರಿಪ್ಟ್ ಭೇದಿಸಲು ಹೊರಟ ಭಾರತ ಸರಕಾರ | ಭಾರತದಿಂದ ನಿರ್ಗಮಿಸುವುದಾಗಿ ದೆಹಲಿ ಹೈಕೋರ್ಟ್‍ ಗೆ ತಿಳಿಸಿದ ವಾಟ್ಸಪ್ Read More »

error: Content is protected !!
Scroll to Top