ದೇಶ

ರಾಜಸ್ಥಾನ: ಮುಖ್ಯಮಂತ್ರಿ ಹುದ್ದೆ ರೇಸಿನಲ್ಲಿ ವಸುಂಧರಾ ರಾಜೇ ಸಹಿತ 6 ಆಕಾಂಕ್ಷಿಗಳು

ರಾಜಸ್ಥಾನ ವಿಧಾನಸಭೆಯಲ್ಲಿ ಬಿಜೆಪಿಯ ವಿಜಯದ ಬೆನ್ನಲ್ಲೇ ಅಲ್ಲಿ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಆರಂಭಗೊಂಡಿದೆ. ಬಿಜೆಪಿ ರಾಷ್ಟ್ರೀಯ ನಾಯಕತ್ವ ಹೊಸ ಮುಖ್ಯಮಂತ್ರಿ ಹೆಸರನ್ನು ಶೀಘ್ರ ಘೋಷಿಸುವ ಸಾಧ್ಯತೆಯಿದೆ. ಸಿಎಂ ಹುದ್ದೆಗೆ ಪ್ರಸಕ್ತ ಐದು ಪ್ರಮುಖ ಹೆಸರುಗಳು ಕೇಳಿ ಬಂದಿವೆ. ಒಟ್ಟು 199 ಸ್ಥಾನಗಳ ಪೈಕಿ 101 ಮ್ಯಾಜಿಕ್ ನಂಬರ್ ಆಗಿತ್ತು. ಇದರಲ್ಲಿ ಬಿಜೆಪಿ 115 ಸ್ಥಾನ, ಕಾಂಗ್ರೆಸ್ 68 ಸ್ಥಾನ, ಬಹುಜನ್ ಸಮಾಜ ಪಾರ್ಟಿ 2 ಸ್ಥಾನ, ಇತರೆ 13 ಸ್ಥಾನಗಳನ್ನು ಪಡೆದುಕೊಂಡಿದೆ. 2018ರ ಚುನಾವಣೆಯಲ್ಲಿ ಬಿಜೆಪಿ 73 […]

ರಾಜಸ್ಥಾನ: ಮುಖ್ಯಮಂತ್ರಿ ಹುದ್ದೆ ರೇಸಿನಲ್ಲಿ ವಸುಂಧರಾ ರಾಜೇ ಸಹಿತ 6 ಆಕಾಂಕ್ಷಿಗಳು Read More »

ಅತಂತ್ರ ಮುನ್ಸೂಚನೆಯಲ್ಲೂ ಮಿಜೋರಾಂ ಬಿಜೆಪಿ ಮುಖ್ಯಸ್ಥನ ವಿಶ್ವಾಸದ ಮಾತು!

ಮಿಜೋರಾಂನ 40 ವಿಧಾನಸಭಾ ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು, ಮುಂದಿನ ಸರ್ಕಾರದ ಭಾಗವಾಗಿ ತಮ್ಮ ಪಕ್ಷ ಇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವನ್‌ಲಾಲ್‌ಮುಕಾ ಸೋಮವಾರ ಹೇಳಿದ್ದಾರೆ. ತಮ್ಮ ಪಕ್ಷ ಕನಿಷ್ಠ ಮೂರು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ. ನಾವು ಮೂರು ಸ್ಥಾನ ಗೆಲ್ಲುವುದು ಖಚಿತ, ಐದಕ್ಕಿಂತ ಹೆಚ್ಚು ಸ್ಥಾನಗಳ ನಿರೀಕ್ಷೆಯಲ್ಲಿದ್ದೇವೆ. ಫಲಿತಾಂಶಕ್ಕಾಗಿ ಕಾಯುತ್ತಿದ್ದು, ಸದ್ಯದಲ್ಲೇ ರಚನೆಯಾಗಲಿರುವ ಹೊಸ ಸರ್ಕಾರದಲ್ಲಿ ಬಿಜೆಪಿ ಭಾಗವಹಿಸಲಿದೆ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಕಳೆದ 2018ರಲ್ಲಿ ನಡೆದ ವಿಧಾನಸಭಾ

ಅತಂತ್ರ ಮುನ್ಸೂಚನೆಯಲ್ಲೂ ಮಿಜೋರಾಂ ಬಿಜೆಪಿ ಮುಖ್ಯಸ್ಥನ ವಿಶ್ವಾಸದ ಮಾತು! Read More »

ತೆಲಂಗಾಣ ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್ | 119ರಲ್ಲಿ 64 ಸ್ಥಾನ ಗೆದ್ದು, ಸರ್ಕಾರ ರಚನೆಗೆ ಹಕ್ಕು ಮಂಡನೆ

ಹೈದರಾಬಾದ್: ತೆಲಂಗಾಣದ 119 ಸ್ಥಾನಗಳ ಪೈಕಿ 64 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ರೇವಂತ್ ರೆಡ್ಡಿ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವಿವಾರ ರಾತ್ರಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಶನಿವಾರ, ಶಿವಕುಮಾರ್ ಅವರನ್ನು ತೆಲಂಗಾಣ ರಾಜ್ಯ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರನ್ನಾಗಿ ನೇಮಿಸಲಾಗಿತ್ತು. ಮತ ಎಣಿಕೆಗೆ ಮುಂಚಿತವಾಗಿ ತನ್ನ ಶಾಸಕರನ್ನು ಒಟ್ಟಾಗಿ ಇರಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿತ್ತು. ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರನ್ನು ಭೇಟಿ ಮಾಡಿದ

ತೆಲಂಗಾಣ ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್ | 119ರಲ್ಲಿ 64 ಸ್ಥಾನ ಗೆದ್ದು, ಸರ್ಕಾರ ರಚನೆಗೆ ಹಕ್ಕು ಮಂಡನೆ Read More »

ಕೈಲಾಸದೊಂದಿಗೆ ಸಹಕಾರ ಒಪ್ಪಂದ: ಸರ್ಕಾರಿ ಅಧಿಕಾರಿ ವಜಾ!!

ನಿತ್ಯಾನಂದನ ಕಾಲ್ಪನಿಕ ದೇಶ ಕೈಲಾಸದ ಪ್ರತಿನಿಧಿಗಳೊಂದಿಗೆ ‘ಸಹಕಾರ ಒಡಂಬಡಿಕೆ’ಗೆ ಸಹಿ ಹಾಕಿದ್ದ ಪೆರುಗ್ವೆ ಸರ್ಕಾರಿ ಅಧಿಕಾರಿಯನ್ನು ವಜಾಗೊಳಿಸಲಾಗಿದೆ. ಅಸ್ತಿತ್ವದಲ್ಲೇ ಇರದ ನಿತ್ಯಾನಂದನ ದೇಶದ ಜತೆ ಒಡಂಬಡಿಕೆಗೆ ಸಹಿ ಹಾಕಿದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ  ಪೆರುಗ್ವೆಯಲ್ಲಿ ದೊಡ್ಡ ಹಗರಣವನ್ನು ಹುಟ್ಟುಹಾಕಿತ್ತು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಸರ್ಕಾರ ಅಪಹಾಸ್ಯಕ್ಕೆ ಗುರಿಯಾಗಿತ್ತು. ಆದರೆ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸದ ಪ್ರತಿನಿಧಿಗಳು ಅಂತರರಾಷ್ಟ್ರೀಯ ನಾಯಕರನ್ನು ವಂಚಿಸಿದ್ದು ಇದೇ ಮೊದಲು ಅಲ್ಲ. ಈ ವರ್ಷದ ಆರಂಭದಲ್ಲಿ, ಅವರು ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಸಮಿತಿ ಸಭೆಯಲ್ಲಿ

ಕೈಲಾಸದೊಂದಿಗೆ ಸಹಕಾರ ಒಪ್ಪಂದ: ಸರ್ಕಾರಿ ಅಧಿಕಾರಿ ವಜಾ!! Read More »

ಡಿ.4ಕ್ಕೆ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ

ನವದೆಹಲಿ: ಕೇಂದ್ರ ಸರ್ಕಾರ ಶನಿವಾರ ಸರ್ವಪಕ್ಷ ಸಭೆ ಕರೆದಿದೆ. ನಾಡಿದ್ದು ಸೋಮವಾರ ಡಿಸೆಂಬರ್ 4ರಂದು ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದು ಅದಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆಯಲಾಗಿದೆ. ಚಳಿಗಾಲ ಅಧಿವೇಶನ ಡಿಸೆಂಬರ್ 22ಕ್ಕೆ ಮುಕ್ತಾಯವಾಗಲಿದೆ. ನಾಳೆ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಹೀಗಾಗಿ ಇಂದು ಸರ್ವಪಕ್ಷ ಸಭೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸರ್ವಪಕ್ಷ ಸಭೆ ಕರೆದಿದ್ದಾರೆ.  ಸಭೆಯಲ್ಲಿ ಕೇಂದ್ರ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಪ್ರಸ್ತುತ, 37 ಮಸೂದೆಗಳು ಸಂಸತ್ತಿನಲ್ಲಿ ಬಾಕಿ

ಡಿ.4ಕ್ಕೆ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ Read More »

ಹಡಗಿಗೆ ಮಹಿಳಾ ಕಮಾಂಡಿಗ್‌ ಆಫೀಸರ್‌!!

ಭಾರತೀಯ ನೌಕಾಪಡೆ ಮೊದಲ ಬಾರಿಗೆ ಸೇನೆಯ ಹಡಗೊಂದಕ್ಕೆ ಮಹಿಳಾ ಕಮಾಂಡಿಂಗ್‌ ಆಫೀಸರ್‌ ಅವರನ್ನು ನೇಮಿಸಿದೆ. ಎಲ್ಲ ಜವಾಬ್ದಾರಿಗಳು, ಶ್ರೇಣಿಗಳಲ್ಲೂ ಮಹಿಳೆಯರಿಗೆ ಸಮಾನ ಆದ್ಯತೆ ಎಂಬ ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಸ್ತುತ ನೌಕಾಪಡೆಯಲ್ಲಿ ಮಹಿಳಾ ಅಗ್ನಿವೀರರ ಸಂಖ್ಯೆ 1000 ದಾಟಿದೆ. ಈ ಸಂಖ್ಯೆ ನಮ್ಮ ಉದ್ದೇಶವನ್ನು ಸ್ಪಷ್ಟವಾಗಿಸುತ್ತದೆ ಎಂದು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್‌ ಆರ್‌. ಹರಿಕುಮಾರ್‌ ಹೇಳಿದ್ದಾರೆ. ನಮ್ಮ ಹಡಗುಗಳು, ಸಬ್‌ಮರಿನ್‌ಗಳು, ಯುದ್ಧವಿಮಾನಗಳು ವ್ಯೂಹಾತ್ಮಕವಾಗಿ ಮಹತ್ವದ್ದಾಗಿರುವ ಸ್ಥಳಗಳಲ್ಲಿ ಉತ್ಸಾಹದಿಂದ ಕಾರ್ಯಾಚರಣೆ ನಡೆಸುತ್ತಿವೆ. ಮುಖ್ಯವಾಗಿ ಚೀನಾದ ಹಸ್ತಕ್ಷೇಪ ಹೆಚ್ಚಾಗಿರುವ

ಹಡಗಿಗೆ ಮಹಿಳಾ ಕಮಾಂಡಿಗ್‌ ಆಫೀಸರ್‌!! Read More »

ಸ್ಪೈಡರ್​ಮ್ಯಾನ್​ನಂತೆ ಎಸ್ಕೇಪ್ ಆದ ಚಿನ್ನ ಕಳ್ಳ​: ಖದೀಮನ ಚಾಕಚಕ್ಯತೆ ಕಂಡು ದಂಗಾದ ಪೊಲೀಸರು!!

ಆಭರಣದ ಅಂಗಡಿಯೊಂದಕ್ಕೆ ನುಗ್ಗಿ ಬರೋಬ್ಬರಿ 3 ಕೆಜಿ ತೂಕದ ಚಿನ್ನಾಭರಣಗಳನ್ನು ಕದ್ದು ಪರಾರಿ ಆಗಿದ್ದ ಖದೀಮನನ್ನು ಹಿಡಿಯಲು ಹೋದ ಪೊಲೀಸರು,​ ಆತನ ಸ್ಪೈಡರ್​ಮ್ಯಾನ್ ಸಾಹಸ ಕಂಡು ಒಂದು ಕ್ಷಣ ದಂಗಾದ ಪ್ರಸಂಗ ಜರುಗಿದೆ. ಕೊಯಮತ್ತೂರಿನ ಆಭರಣದಂಗಡಿಗೆ ನಸುಕಿನ ಜಾವದಲ್ಲಿ ಗೋಡೆಯನ್ನು ಮೊದಲು ಒಡೆಯುವ ಖದೀಮ ಕಿರಿದಾದ ಕಿಂಡಿಯನ್ನು ಮಾಡಿ, ಅದರೊಳಗೆ ನುಸುಳಿ, ಮೂರನೇ ಮಹಡಿಗೆ ಸರಸರನೇ ಏರಿ, ​ ಆಭರಣದ ಅಂಗಡಿಗೆ ನುಗ್ಗುತ್ತಾನೆ. ಇದಾದ ಬಳಿಕ ತನ್ನ ಬಟ್ಟೆಯನ್ನು ಬದಲಾಯಿಸಿಕೊಂಡು, ಎಚ್ಚರಿಕೆಯಿಂದ ಸುಮಾರು 150 ಸವರನ್​ ಅಂದರೆ,

ಸ್ಪೈಡರ್​ಮ್ಯಾನ್​ನಂತೆ ಎಸ್ಕೇಪ್ ಆದ ಚಿನ್ನ ಕಳ್ಳ​: ಖದೀಮನ ಚಾಕಚಕ್ಯತೆ ಕಂಡು ದಂಗಾದ ಪೊಲೀಸರು!! Read More »

ವಿಷಕಾರಿ ಹಣ್ಣು ಸೇವಿಸಿದ 11 ವಿದ್ಯಾರ್ಥಿಗಳು ಅಸ್ವಸ್ಥ!!

ವಿಷಯುಕ್ತ ಹಣ್ಣು ತಿಂದು 11 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಒಡಿಶಾದ ಮಲ್ಕಂಗಾರಿ ಜಿಲ್ಲೆಯ ಜಾರಪಳ್ಳಿ ಪಂಚಾಯಿತಿ ವ್ಯಾಪ್ತಿಯ ತಾಳಿಮೇಟ ಗ್ರಾಮದಲ್ಲಿ ನಡೆದಿದೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಮಕ್ಕಳು ಗ್ರಾಮದ ಹೊರವಲಯದಲ್ಲಿದ್ದ ಗಿಡವೊಂದರ ವಿಷಯುಕ್ತ ಹಣ್ಣುಗಳನ್ನು ಸೇವನೆ ಮಾಡಿದ್ದಾರೆ. ಹಣ್ಣು ತಿಂದ ಕೆಲವೇ ನಿಮಿಷಗಳಲ್ಲಿ ವಾಂತಿ ಮಾಡಿಕೊಂಡಿದ್ದಾರೆ. ಅಲ್ಲದೆ, ಅತೀವ ಹೊಟ್ಟೆನೋವು ಕಾಣಿಸಿಕೊಂಡು, ಅಸ್ವಸ್ಥರಾಗಿದ್ದಾರೆ. ಕೂಡಲೇ ಸ್ಥಳೀಯರು ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಬಳಿಕ ಇದೀಗ ಮಕ್ಕಳ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಷಕಾರಿ ಹಣ್ಣು ಸೇವಿಸಿದ 11 ವಿದ್ಯಾರ್ಥಿಗಳು ಅಸ್ವಸ್ಥ!! Read More »

ಏರ್ ಇಂಡಿಯಾ ಎಕ್ಸ್ ಪ್ರೆಸ್‍ ಹಾರಾಟ ಸಮಯ ಬದಲಾವಣೆ

ಮಂಗಳೂರು-ಬೆಂಗಳೂರು ನಡುವಿನ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟ ಸಮಯವನ್ನು ನ.30 ರಿಂದ ಡಿ. 8ರ ವರೆಗೆ ಬದಲಾಯಿಸಲಾಗಿದೆ. ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40 ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ಫ್ಲೈಟ್ 678 ಆಗಿ ಬೆಂಗಳೂರಿಗೆ ಹೊರಡಲಿದೆ. ಕಣ್ಣೂರು-ಬೆಂಗಳೂರು-ಮಂಗಳೂರು-ಬೆಂಗಳೂರು-ತಿರುವನಂತಪುರಂ ವಲಯದಲ್ಲಿ ಕಾರ್ಯನಿರ್ವಹಿಸುವ ವಿಮಾನ ಐಎಕ್ಸ್ 1795 ಬೆಂಗಳೂರಿನಿಂದ ರಾತ್ರಿ 7.20 ಕ್ಕೆ ಬಂದು ಸಂಜೆ 7.50ಕ್ಕೆ ಫ್ಲೈಟ್ ಐಎಕ್ಸ್ 792 ಆಗಿ ಬೆಂಗಳೂರಿಗೆ ಹೊರಡಲಿದೆ (ಪ್ರಸ್ತುತ ಸಂಜೆ 7.35 ಮತ್ತು ರಾತ್ರಿ 8.15ಕ್ಕೆ ನಿರ್ಗಮನ).

ಏರ್ ಇಂಡಿಯಾ ಎಕ್ಸ್ ಪ್ರೆಸ್‍ ಹಾರಾಟ ಸಮಯ ಬದಲಾವಣೆ Read More »

ಬೇಕಾಬಿಟ್ಟಿ ಸಿಮ್ ಖರೀದಿ ನಿಯಂತ್ರಣಕ್ಕೆ ಕೇಂದ್ರ ಸರಕಾರ ಯಾವ ನಿಯಮಗಳನ್ನು ತರಲಿದೆ | ಇಲ್ಲಿದೆ ಡಿಟೈಲ್ಸ್

ಬೇಕಾಬಿಟ್ಟಿ ಸಿಮ್ ಖರೀದಿಯನ್ನು ನಿಯಂತ್ರಿಸಲು ಕೇಂದ್ರ ಸರಕಾರ ಕಠಿಣ ನಿಯಮಗಳನ್ನು ಜ್ಯಾರಿಗೆ ತರುವ ಮಹತ್ವದ ನಿರ್ಧಾರ ಕೈಗೊಂಡಿದೆ. ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ದೇಶ ವಿರೋಧಿ ಕೃತ್ಯಗಳಿಗೆ ಕಡಿವಾಣ ಹಾಕುವ ಜತೆಗೆ ಕಾನೂನು ಬಾಹಿರ ಚಟುವಟಿಕೆಗಳಿಗೆ ದಾರಿ ಮಾಡಿಕೊಡುವ ಡೀಲರ್‍ ಗಳಿಗೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಸಿಮ್ ಖರೀದಿಯಲ್ಲಿ ಕಠಿಣ ನಿಯಮಗಳನ್ನು ತರಲಿದೆ. ಡಿ.1ರಿಂದ ಸಿಮ್ ಮಾರಾಟದ ನಿಯಮಗಳಲ್ಲಿ ಬದಲಾವಣೆಯಾಗಲಿದ್ದು, ಸಿಮ್‌ಗಳನ್ನು ಮಾರಾಟ ಮಾಡುವ ಎಲ್ಲ ಡೀಲರ್‌ಗಳು ಪರಿಶೀಲನೆಯನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ. ಅಷ್ಟೇ ಅಲ್ಲದೆ ಡೀಲರ್‌ಗಳು ಸಿಮ್‌ಗಳನ್ನು

ಬೇಕಾಬಿಟ್ಟಿ ಸಿಮ್ ಖರೀದಿ ನಿಯಂತ್ರಣಕ್ಕೆ ಕೇಂದ್ರ ಸರಕಾರ ಯಾವ ನಿಯಮಗಳನ್ನು ತರಲಿದೆ | ಇಲ್ಲಿದೆ ಡಿಟೈಲ್ಸ್ Read More »

error: Content is protected !!
Scroll to Top