ದೇಶ

ದೇಶಾದ್ಯಂತ ಆಘಾತದ ಅಲೆಯೆಬ್ಬಿಸಿದ ಸಹೋದರಿಯರ ಸೆಕ್ಸ್‌, ಮತಾಂತರ ಜಾಲ

ಬಡ ಹೆಣ್ಣು ಮಕ್ಕಳನ್ನು ಡ್ರಗ್ಸ್‌ ಸೇವಿಸುವಂತೆ ಮಾಡಿ ಶೋಷಿಸುತ್ತಿದ್ದ ಸಹೋದರಿಯರು ನವದೆಹಲಿ: ಸೆಕ್ಸ್ ಮತ್ತು ಡ್ರಗ್ಸ್ ಜಾಲವನ್ನು ಭೇದಿಸಿದ ಮಧ್ಯಪ್ರದೇಶ ಪೊಲೀಸರು ಇಬ್ಬರು ಸಹೋದರಿಯರು ಸೇರಿದಂತೆ ಮೂವರನ್ನು ಮಂಗಳವಾರ ಬಂಧಿಸಿದ್ದಾರೆ. ಯುವತಿಯರಿಗೆ ಉದ್ಯೋಗ ಒದಗಿಸುವ ನೆಪದಲ್ಲಿ ಅತ್ಯಾಚಾರ, ಬಲವಂತದ ಮತಾಂತರ ಮತ್ತು ಲೈಂಗಿಕ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರು ಸಹೋದರಿಯರು ಮತ್ತು ಆ ಪೈಕಿ ಒಬ್ಬಾಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಬಗ್ಸೇವಾನಿಯಾ ಪೊಲೀಸರು ಹೇಳಿದ್ದಾರೆ. ಇತರ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಅವರು ತಲೆಮರೆಸಿಕೊಂಡಿದ್ದಾರೆ. ಮಧ್ಯ […]

ದೇಶಾದ್ಯಂತ ಆಘಾತದ ಅಲೆಯೆಬ್ಬಿಸಿದ ಸಹೋದರಿಯರ ಸೆಕ್ಸ್‌, ಮತಾಂತರ ಜಾಲ Read More »

ಡಾಕ್ಟರ್ ಆಗು ಎಂದಿದ್ದಕ್ಕೆ ತಂದೆಯನ್ನೇ ಭೀಕರವಾಗಿ ಹತ್ಯೆಗೈದ ಪುತ್ರ

ಲಕ್ನೋ: ಉತ್ತರ ಪ್ರದೇಶದಲ್ಲಿ ಮಗನೇ ತಂದೆಯನ್ನು ಗುಂಡಿಕ್ಕಿ ಕೊಂದು, ದೇಹವನ್ನು ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮನ್ವೇಂದ್ರ ‌ಸಿಂಗ್ ಎಂದು ಗುರುತಿಸಲಾಗಿದೆ. ಆತನ ಪುತ್ರ ಅಕ್ಷತ್ ಪ್ರತಾಪ್ ಸಿಂಗ್ ಎಂಬಾತನೇ‌ ಆರೋಪಿ.‌ ಮನ್ವೇಂದ್ರ ಅವರು ಔಷಧ ಮತ್ತು ಮದ್ಯದ ಉದ್ಯಮ ನಡೆಸುತ್ತಿದ್ದರು. ಅವರು ತಮ್ಮ ಮಗನನ್ನು ಡಾಕ್ಟರ್ ಆಗುವಂತೆ ಒತ್ತಾಯಿಸುತ್ತಿದ್ದರು. ಈ ವಿಚಾರವಾಗಿ ತಂದೆ ಮತ್ತು ಮಗನ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಈ ವಿಷಯದಲ್ಲೇ ಮಗ

ಡಾಕ್ಟರ್ ಆಗು ಎಂದಿದ್ದಕ್ಕೆ ತಂದೆಯನ್ನೇ ಭೀಕರವಾಗಿ ಹತ್ಯೆಗೈದ ಪುತ್ರ Read More »

ಎಐ ಶೃಂಗದಲ್ಲಿ ಅರೆ ಬೆತ್ತಲೆ ಪ್ರತಿಭಟನೆ : ಯುವ ಕಾಂಗ್ರೆಸ್‌ ಅಧ್ಯಕ್ಷನ ಬಂಧನ

ಪ್ರತಿಭಟನೆಗೆ ಸಂಚು ರೂಪಿಸಿದ್ದ ಉದಯ್‌ ಭಾನು ಚಿಬ್‌ ನವದೆಹಲಿ: ಭಾರತ ಎಐ ಇಂಪ್ಯಾಕ್ಟ್‌ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಅರೆ ಬೆತ್ತಲೆ ಪ್ರತಿಭಟನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಉದಯ್‌ ಭಾನು ಚಿಬ್‌ ಅವರನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಹಲವಾರು ಸುತ್ತಿನ ವಿಚಾರಣೆಯ ನಂತರ ಬಂಧಿಸಲಾಗಿದೆ. ತಿಲಕ್ ಮಾರ್ಗ ಪೊಲೀಸ್ ಠಾಣೆ ಪೊಲೀಸರಿಂದ ಬಂಧನ ಮಾಡಲಾಗಿದೆ. ಪೊಲೀಸ್ ಠಾಣೆ ಹೊರಗೆ ಭಾರಿ ಭದ್ರತೆ ಕಲ್ಪಿಸಲಾಗಿದೆ. ಎಐ ಸಭೆಯಲ್ಲಿ ಶರ್ಟ್‌ಲೆಸ್

ಎಐ ಶೃಂಗದಲ್ಲಿ ಅರೆ ಬೆತ್ತಲೆ ಪ್ರತಿಭಟನೆ : ಯುವ ಕಾಂಗ್ರೆಸ್‌ ಅಧ್ಯಕ್ಷನ ಬಂಧನ Read More »

ಏರ್‌ ಆಂಬುಲೆನ್ಸ್‌ ಪತನಗೊಂಡು ಏಳು ಮಂದಿ ಸಾವು

ಗಾಯಾಳುವನ್ನು ತುರ್ತು ಚಿಕಿತ್ಸೆಗಾಗಿ ಕೊಂಡೊಯ್ಯುತ್ತಿದ್ದ ಖಾಸಗಿ ಏರ್‌ ಆಂಬುಲೆನ್ಸ್‌ ಪತನ ಹೊಸದಿಲ್ಲಿ: ಜಾರ್ಖಂಡ್‌ನ ಚಾತ್ರ ಜಿಲ್ಲೆಯ ಸಿಮಾರಿಯಾ ಎಂಬಲ್ಲಿ ಸೋಮವಾರ ಸಂಜೆ ಏರ್‌ ಆಂಬುಲೆನ್ಸ್‌ ಪತನಗೊಂಡು ಅದರಲ್ಲಿದ್ದ ಎಲ್ಲ ಏಳು ಮಂದಿ ಮೃತಪಟ್ಟಿದ್ದಾರೆ. ಅಪಘಾತಕ್ಕೀಡಾದ ಏರ್ ಆ್ಯಂಬುಲೆನ್ಸ್‌ನಲ್ಲಿದ್ದ ಎಲ್ಲ ಏಳು ಮಂದಿ ಮೃತಪಟ್ಟಿದ್ದಾರೆ. ವಿಮಾನ ರಾಂಚಿಯಿಂದ ದೆಹಲಿಗೆ ತೆರಳುತ್ತಿತ್ತು ಎಂದು ಚಾತ್ರ ಜಿಲ್ಲಾಧಿಕಾರಿ ಕೀರ್ತಿಶ್ರೀ ಜಿ ಹೇಳಿದ್ದಾರೆ. ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುತ್ತಿದ್ದ ಬೀಚ್ಕ್ರಾಫ್ಟ್ ಸಿ90 (ವಿಐ-ಎಜೆವಿ) ರಾಂಚಿ ವಿಮಾನ ನಿಲ್ದಾಣದಿಂದ ರಾತ್ರಿ 7.11ಕ್ಕೆ ಟೇಕಾಫ್‌

ಏರ್‌ ಆಂಬುಲೆನ್ಸ್‌ ಪತನಗೊಂಡು ಏಳು ಮಂದಿ ಸಾವು Read More »

ಸಂಭವವೀಯ ದಾಳಿಯ ಸಾಧ್ಯತೆ: ಇರಾನ್ ತೊರೆಯುವಂತೆ ಭಾರತೀಯರಿಗೆ ಮುನ್ನೆಚ್ಚರಿಕೆ

ನವದೆಹಲಿ: ಇರಾನಿನ ಮೇಲೆ ಅಮೇರಿಕಾ ವೈಮಾನಿಕ ದಾಳಿ ಸಂಭವಿಸುವ ಸಾಧ್ಯತೆ ಇದ್ದು, ಆದಷ್ಟು ಬೇಗ ಇರಾನ್ ತೊರೆಯುವಂತೆ ಭಾರತೀಯರಿಗೆ ಭಾರತ ರಾಯಭಾರ ಕಚೇರಿ ಮುನ್ನೆಚ್ಚರಿಕೆ ನೀಡಿದೆ. ವಿದ್ಯಾರ್ಥಿಗಳು, ಯಾತ್ರಿಕರು, ಉದ್ಯಮಿಗಳು ಸೇರಿದಂತೆ ಭಾರತೀಯ ಮೂಲದ ಎಲ್ಲರಿಗೂ ಸರ್ಕಾರ ಈ ಮುನ್ನೆಚ್ಚರಿಕೆ ನೀಡಿರುವುದಾಗಿದೆ. ಹಾಗೆಯೇ ಪ್ರತಿಭಟನೆಗಳು ನಡೆಯುವ ಸ್ಥಳಕ್ಕೆ ಹೋಗದಂತೆಯೂ ಸೂಚನೆ ನೀಡಲಾಗಿದೆ. ಇರಾನ್‌ನಲ್ಲಿರುವವರು ತಮ್ಮ ಪಾಸ್‌ಪೋರ್ಟ್ ಮತ್ತು ಇತರೆ ಗುರುತಿನ ದಾಖಲೆಗಳನ್ನು ಸದಾ ಕೈಯಲ್ಲಿ ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ಸಹಾಯಕ್ಕಾಗಿ ರಾಯಭಾರ ಕಚೇರಿಯ

ಸಂಭವವೀಯ ದಾಳಿಯ ಸಾಧ್ಯತೆ: ಇರಾನ್ ತೊರೆಯುವಂತೆ ಭಾರತೀಯರಿಗೆ ಮುನ್ನೆಚ್ಚರಿಕೆ Read More »

ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

ಬಂಗಾಲದ ರಾಜಕೀಯ ಚಾಣಕ್ಯ ಎಂಬ ಹಿರಿಮೆ ಹೊಂದಿದ್ದ ನಾಯಕ ಕೋಲ್ಕತ್ತಾ: ಮಾಜಿ ರೈಲ್ವೆ ಸಚಿವ ಮತ್ತು ಒಂದು ಕಾಲದಲ್ಲಿ ತೃಣಮೂಲ ಕಾಂಗ್ರೆಸ್‌ನ ಎರಡನೇ ಕಮಾಂಡರ್ ಆಗಿದ್ದ ಮುಕುಲ್ ರಾಯ್ 71ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ರಾಯ್ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಮಧ್ಯರಾತ್ರಿ 1.30ರ ಸುಮಾರಿಗೆ ಕೊನೆಯುಸಿರೆಳೆದರು. ನಿನ್ನೆ ರಾತ್ರಿ ಸುಮಾರು 1.30ರ ಸುಮಾರಿಗೆ ಅವರಿಗೆ ತೀವ್ರ ಹೃದಯಾಘಾತವಾಯಿತು. ವೈದ್ಯರ ಪ್ರಯತ್ನಗಳ ಹೊರತಾಗಿಯೂ ಅವರು ಬದುಕುಳಿಯಲು ಸಾಧ್ಯವಾಗಲಿಲ್ಲ ಎಂದು ಅವರ ಮಗ ಸುಭ್ರಾಂಗ್ಶು

ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ Read More »

ಟಿ20 ವಿಶ್ವಕಪ್‌ : ಸೂಪರ್‌ 8 ಹಂತದಲ್ಲಿ ಮುಗ್ಗರಿಸಿದ ಭಾರತ

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ನಿಂದಾಗಿ ಹೀನಾಯ ಸೋಲು ಅಹಮದಾಬಾದ್‌: ಸೂಪರ್‌ 8 ಸುತ್ತಿನ ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾದ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನ ಲೋಪಗಳೆಲ್ಲ ಬಯಲಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್‌ನ ಸೋಪರ್‌ 8 ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕ ವಿರುದ್ಧ ಹೀನಾಯವಾಗಿ ಸೋತು ಹೋದ ಭಾರತ ಕಳಪೆ ಬೌಲಿಂಗ್‌, ಅಗ್ರ ಬ್ಯಾಟರ್‌ಗಳ ಹೀನಾಯ ಪ್ರದರ್ಶನಕ್ಕೆ ಬೆಲೆತೆತ್ತಿದೆ. ಭಾರತ ತಂಡ 76 ರನ್‌ಗಳ ಹೀನಾಯ ಸೋಲು ಕಂಡಿದೆ. ಇದು ಪ್ರಸಕ್ತ ವಿಶ್ವಕಪ್‌ ಟೂರ್ನಿಯಲ್ಲಿ ಟೀಂ

ಟಿ20 ವಿಶ್ವಕಪ್‌ : ಸೂಪರ್‌ 8 ಹಂತದಲ್ಲಿ ಮುಗ್ಗರಿಸಿದ ಭಾರತ Read More »

ಹೆಂಡತಿ ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಗಂಡ

ಆರ್ಥಿಕ ಸಂಕಷ್ಟದಿಂದ ಘೋರ ಕೃತ್ಯ ಎಸಗಿರುವ ಅನುಮಾನ ಲಖನೌ : ಉತ್ತರ ಪ್ರದೇಶದ ಕಾಸಗಂಜ್ ಜಿಲ್ಲೆ ಅಮಾಪುರದ ಕೋಟ್ವಾಲಿ ವ್ಯಾಪ್ತಿಯ ಏಟಾ ರಸ್ತೆಯ ಇಂಡಿಯನ್ ಪೆಟ್ರೋಲ್ ಬಂಕ್ ಸಮೀಪ ಇರುವ ಮನೆಯಲ್ಲಿ ಒಂದೇ ಕುಟುಂಬದ ಐವರ ಶವಗಳು ಪತ್ತೆಯಾಗಿವೆ. ಮೃತರನ್ನು ಸತ್ಯವೀರ್ ಅಲಿಯಾಸ್ ಶ್ಯಾಮವೀರ್ ‘ಫೌಜಿ’ (50), ಅವರ ಪತ್ನಿ ರಾಮಶ್ರೀ (48), ಪುತ್ರಿಯರಾದ ಪ್ರಾಚಿ (12) ಮತ್ತು ಅಮರವತಿ (10), ಹಾಗೂ ಪುತ್ರ ಗಿರೀಶ್ (9) ಎಂದು ಗುರುತಿಸಲಾಗಿದೆ. ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸ್ಥಳೀಯರು

ಹೆಂಡತಿ ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಗಂಡ Read More »

ಟಿ20 ವಿಶ್ವಕಪ್‌ : ಇಂದು ಭಾರತ-ದಕ್ಷಿಣ ಆಫ್ರಿಕ ಸೂಪರ್‌ 8 ಮುಖಾಮುಖಿ

ಕುತೂಹಲ ಕೆರಳಿಸಿರುವ ಎರಡು ಅಜೇಯ ತಂಡಗಳ ನಡುವಿನ ಹೋರಾಟ ಅಹಮದಾಬಾದ್‌: ಟಿ20 ವಿಶ್ವಕಪ್‌ ಕೂಟದ ಗುಂಪು ಹಂತದಲ್ಲಿ ಅಜೇಯವಾಗಿ ಉಳೀದು ಸೂಪರ್‌ 8 ಸುತ್ತಿಗೆ ಬಂದಿರುವ ಭಾರತ ಮತ್ತು ದಕ್ಷಿಣ ಆಫ್ರಿಕ ತಂಡಗಳು ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸೂಒರ್‌ 8 ಸುತ್ತಿನಲ್ಲಿ ಮುಖಾಮುಖಿಯಾಗಲಿವೆ. ಭಾರತ ಗುಂಪು ಹಂತದಲ್ಲಿ ಯುಎಸ್ಎ, ನಮೀಬಿಯಾ, ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ತಂಡಗಳನ್ನು ಸೋಲಿಸುವ ಮೂಲಕ ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಇಂದಿನಿಂದ ಭಾರತಕ್ಕೆ ನಿಜವಾದ ಸವಾಲು ಎದುರಾಗಲಿದೆ. ಭಾರತದ

ಟಿ20 ವಿಶ್ವಕಪ್‌ : ಇಂದು ಭಾರತ-ದಕ್ಷಿಣ ಆಫ್ರಿಕ ಸೂಪರ್‌ 8 ಮುಖಾಮುಖಿ Read More »

ಎರಡು ವರ್ಷದ ಕಂದನನ್ನು ಕೊಂದ ಚಿಕ್ಕಮ್ಮ ಪೊಲೀಸರ ವಶಕ್ಕೆ

ನವದೆಹಲಿ: ಎರಡು ವರ್ಷದ ಮಗುವನ್ನು ಸ್ವಂತ ಚಿಕ್ಕಮ್ಮನೇ ಕತ್ತು ಹಿಸುಕಿ ‌ಕೊಂದಿರುವ ಘಟನೆ ನವದೆಹಲಿಯ ಮುಖರ್ಜಿ ನಗರದ SFS ಫ್ಲ್ಯಾ‌ಟ್‌ಗಳ ಹತ್ತಿರದ ಉದ್ಯಾನವನದಲ್ಲಿ ನಡೆದಿದೆ. ಆರೋಪಿ ಅಜ್ರಾ ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಬಾಲಕನನ್ನು ಹಾದಿ ಎಂದು ಗುರುತಿಸಲಾಗಿದ್ದು, ಆತ ತನ್ನ ತಾಯಿಯ ಜೊತೆ ಅಜ್ಜಿ ಮನೆಗೆ ಬಂದಿದ್ದ. ಮಧ್ಯಾಹ್ನದ ವೇಳೆ ಮಗುವಿನ ತಾಯಿಯ ತಂಗಿ ಹಾದಿಯನ್ನು ಉದ್ಯಾನಕ್ಕೆ ‌ಕರೆದೊಯ್ದಿದ್ದಾಳೆ. ಅಲ್ಲಿ ಅವಳು ಮಗುವನ್ನು ಕೊಂದಿರುವ ಆರೋಪ ಕೇಳಿ ಬಂದಿದೆ. ಆ ಬಳಿಕ ಶವವನ್ನು ತನ್ನ

ಎರಡು ವರ್ಷದ ಕಂದನನ್ನು ಕೊಂದ ಚಿಕ್ಕಮ್ಮ ಪೊಲೀಸರ ವಶಕ್ಕೆ Read More »

error: Content is protected !!
Scroll to Top