ದೇಶ

ನಾಳೆಯಿಂದ ಶುರುವಾಗಲಿದೆ ಐಪಿಎಲ್‌ ಹಬ್ಬ : 2 ತಿಂಗಳು ಕ್ರಿಕೆಟ್‌ ಪ್ರೇಮಿಗಳಿಗೆ ಭರಪೂರ ಮನರಂಜನೆ

ಮಾ.28ರಂದು ಆರ್‌ಸಿಬಿ-ಸನ್‌ರೈಸರ್ಸ್‌ ಹೈದರಾಬಾದ್ ಮಧ್ಯೆ ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ ಬೆಂಗಳೂರು : ಶನಿವಾರದಿಂದ ಸುಮಾರು ಎರಡು ತಿಂಗಳು ಕ್ರಿಕೆಟ್‌ ಪ್ರೇಮಿಗಳಿಗೆ ಐಪಿಎಲ್‌ ಪಂದ್ಯಗಳ ಹಬ್ಬ. ಈ ವರ್ಷದ ಐಪಿಎಲ್ ಪಂದ್ಯಗಳು ಮಾರ್ಚ್ 28ರಿಂದ ಪ್ರಾರಂಭವಾಗಲಿವೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್‌ ಹೈದರಾಬಾದ್ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಪಂದ್ಯಗಳು ಸಂಜೆ 7.30ಕ್ಕೆ ಪ್ರಾರಂಭವಾಗುತ್ತವೆ. 19ನೇ ಆವೃತ್ತಿಯ ಐಪಿಎಲ್​ನ ವೇಳಾಪಟ್ಟಿಯನ್ನು ಬಿಸಿಸಿಐ ಎರಡು ಹಂತದಲ್ಲಿ ಪ್ರಕಟಿಸಿದೆ. ಐಪಿಎಲ್ ಪಂದ್ಯಗಳು ನಡೆಯುವ ರಾಜ್ಯಗಳಲ್ಲಿ […]

ನಾಳೆಯಿಂದ ಶುರುವಾಗಲಿದೆ ಐಪಿಎಲ್‌ ಹಬ್ಬ : 2 ತಿಂಗಳು ಕ್ರಿಕೆಟ್‌ ಪ್ರೇಮಿಗಳಿಗೆ ಭರಪೂರ ಮನರಂಜನೆ Read More »

ತೃತೀಯಲಿಂಗಿ ಜೊತೆ ಬಂಗಲೆಯಲ್ಲಿ ಸಿಕ್ಕಿಬಿದ್ದ ಸಚಿವ

ವಿಡಿಯೋ ವೈರಲ್‌ ಆಗಿ ಆಡಳಿತ ಪಕ್ಷಕ್ಕೆ ಮುಜುಗರ ತಂದ ಪ್ರಕರಣ ಮುಂಬೈ : ಸಚಿವರೊಬ್ಬರು ತೃತೀಯಲಿಂಗಿ ಜತೆ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿ ಮಹಾರಾಷ್ಟ್ರ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಮಹಾರಾಷ್ಟ್ರ ಸಚಿವ, ಎನ್​ಸಿಪಿ ನಾಯಕ ನರಹರಿ ಜಿರ್ವಾಲ್ ತಮ್ಮ ಬಂಗಲೆಯಲ್ಲಿ ಟ್ರಾನ್ಸ್​ಜೆಂಡರ್ ಜತೆ ಇದ್ದ ವಿಡಿಯೋ ವೈರಲ್ ಆಗಿದೆ. ವಿರೋಧ ಪಕ್ಷ ಮಹಾ ವಿಕಾಸ್ ಅಘಾಡಿ ಅವರ ರಾಜೀನಾಮೆಗೆ ಒತ್ತಾಯಿಸಿದೆ. ಎರಡು ತಿಂಗಳಲ್ಲಿ ನರಹರಿ ಜಿರ್ವಾಲ್‌ ಹುಟ್ಟು ಹಾಕಿದ ಎರಡನೇ ವಿವಾದವಿದು. ಸಚಿವಾಲಯದಲ್ಲಿ 35 ಸಾವಿರ ರೂ.

ತೃತೀಯಲಿಂಗಿ ಜೊತೆ ಬಂಗಲೆಯಲ್ಲಿ ಸಿಕ್ಕಿಬಿದ್ದ ಸಚಿವ Read More »

ಭಾರತ ಪಾಕಿಸ್ತಾನದಂತೆ ದಲ್ಲಾಳಿಯಲ್ಲ: ವಿಪಕ್ಷಗಳ ಟೀಕೆಗೆ ಕೇಂದ್ರ ಸರ್ಕಾರದ ತಿರುಗೇಟು

ನವದೆಹಲಿ: ಮಧ್ಯಪ್ರಾಚ್ಯ ಬಿಕ್ಕಟ್ಟು ಶಮನಕ್ಕೆ ಭಾರತ ಪ್ರಯತ್ನ ನಡೆಸಬೇಕಿತ್ತು ಎಂಬ ವಿಪಕ್ಷಗಳ ಟೀಕೆಗೆ ಕೇಂದ್ರ ಸರ್ಕಾರ ತಕ್ಕ ತಿರುಗೇಟು ನೀಡಿದೆ. ಕೇಂದ್ರ ಸರ್ಕಾರದ ಸರ್ವಪಕ್ಷ ಸಭೆಯಲ್ಲಿ ಈ ಬಗ್ಗೆ ಮಾತನಾಡಿರುವ‌ ವಿದೇಶಾಂಗ ಸಚಿವ ಎಸ್. ಜೈಶಂಕರ್, ಯುದ್ಧ ನಿಲ್ಲಿಸುವಂತೆ ಮಾತುಕತೆ ನಡೆಸಲು ಭಾರತ‌ವು ಪಾಕಿಸ್ತಾನದ ಹಾಗೆ ದಲ್ಲಾಳಿಯಲ್ಲ. ಈ ಸಂಘರ್ಷದಿಂದ ಎಲ್ಲರಿಗೂ ತೊಂದರೆಯಾಗುತ್ತಿದ್ದು, ತಕ್ಷಣ ಇದನ್ನು ನಿಲ್ಲಿಸಬೇಕು ಎಂದು ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಮೋದಿ ಹೇಳಿದ್ದಾರೆ. ಪಾಕಿಸ್ಥಾನವು ಮಧ್ಯಸ್ಥಿಕೆ ವಹಿಸುತ್ತಿರುವುದು ಹೊಸ ವಿಚಾರವೇನಲ್ಲ. 1981ರಿಂ ದಲೂ ಅಮೆರಿಕವು

ಭಾರತ ಪಾಕಿಸ್ತಾನದಂತೆ ದಲ್ಲಾಳಿಯಲ್ಲ: ವಿಪಕ್ಷಗಳ ಟೀಕೆಗೆ ಕೇಂದ್ರ ಸರ್ಕಾರದ ತಿರುಗೇಟು Read More »

ಹರ್ಮುಜ್ ದಾಟಿ ಭಾರತದತ್ತ ಬರುತ್ತಿವೆ ಎಲ್‌ಪಿ‌ಜಿ ಹೊತ್ತ ಎರಡು ಹಡಗುಗಳು

ನವದೆಹಲಿ: 92,600 ಮೆಟ್ರಿಕ್ ಟನ್ ಎಲ್‌ಪಿ‌ಜಿ ಹೊತ್ತ ಎರಡು ಹಡಗುಗಳು ಹರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದ್ದು, ಇನ್ನೆರಡು ದಿನದಲ್ಲಿ ನವಮಂಗಳೂರು ಬಂದರಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಯುನೈಟೆಟ್ ಅರಬ್ ಎಮಿರೇಟ್ಸ್‌ನ (ಯುಎಇ) ರುವೈಸ್‌ನಿಂದ 45 ಸಾವಿರ ಮೆಟ್ರಿಕ್‌ ಎಲ್‌ಪಿಜಿ ಹೊತ್ತ ಫೈನ್‌ಗ್ಯಾಸ್ ಹಡಗು ಇದೇ 27 ರಂದು ನವಮಂಗಳೂರು ಬಂದರಿಗೆ ಆಗಮಿಸಲಿದೆ ಎಂದು ಬಂದರುಗಳು, ಹಡಗು ಸಾಗಾಣೆ ಮತ್ತು ಜಲಮಾರ್ಗಗಳ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿನ್ಹಾ ಮಾಹಿತಿ

ಹರ್ಮುಜ್ ದಾಟಿ ಭಾರತದತ್ತ ಬರುತ್ತಿವೆ ಎಲ್‌ಪಿ‌ಜಿ ಹೊತ್ತ ಎರಡು ಹಡಗುಗಳು Read More »

ಲಸಿಕೆ ಭಯ: ರೇಬಿಸ್‌ಗೆ ಬಲಿಯಾಯ್ತ ಮುಗ್ಧ ಮಗುವಿನ ಜೀವ

ಮುಂಬೈ: ಚುಚ್ಚುಮದ್ದಿನ ಭಯಕ್ಕೆ ರೇಬಿಸ್ ಲಸಿಕೆಯನ್ನು ಪಡೆಯದೇ 9 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಮಹಾರಾಷ್ಟ್ರದ ಮುಂಬೈ‌ನಲ್ಲಿ ನಡೆದಿದೆ. ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಕಶಿಷ್ ಸಹಾನಿ ಎಂಬ ಬಾಲಕಿಯೇ ‌ಮೃತ ದುರ್ದೈವಿ. ಕಶಿಷ್ ಸುಮಾರು ಆರು ತಿಂಗಳ ಹಿಂದೆ ತನ್ನ ತಾತನ ಜೊತೆ ರಸ್ತೆಯಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಬೀದಿ ನಾಯಿಯೊಂದು ಆಕೆಯನ್ನು ಪರಚಿತ್ತು. ತಕ್ಷಣವೇ ಮನೆಯವರು ಅವಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಇಂಜೆಕ್ಷನ್ ಭಯ ಹೊಂದಿದ್ದ ಅವಳು ಲಸಿಕೆ ಪಡೆಯದಿರಲು ಹಠ ಮಾಡಿದ್ದಳು. ಗಾಯ ಚಿಕ್ಕದಾಗಿದ್ದು,

ಲಸಿಕೆ ಭಯ: ರೇಬಿಸ್‌ಗೆ ಬಲಿಯಾಯ್ತ ಮುಗ್ಧ ಮಗುವಿನ ಜೀವ Read More »

ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ಇಲ್ಲ : ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ಯಾವುದೇ ಧರ್ಮಕ್ಕೆ ಮತಾಂತರವಾದರೂ ಎಸ್‌ಸಿ ಸ್ಥಾನಮಾನ ನಷ್ಟ ನವದೆಹಲಿ: ಬೇರೆ ಧರ್ಮಕ್ಕೆ ಮತಾಂತರಗೊಂಡವರಿಗೆ ಪರಿಶಿಷ್ಟ ಜಾತಿಯ (ಎಸ್‌ಸಿ) ಸ್ಥಾನಮಾನ ಅನ್ವಯವಾಗುವುದಿಲ್ಲ ಎಂಬ ಐತಿಹಾಸಿಕ ತೀರ್ಪನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ನೀಡಿದೆ. ಹಿಂದೂ, ಸಿಖ್‌ ಅಥವಾ ಬೌದ್ಧ ಧರ್ಮದವರು ಎಸ್‌ಸಿ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಆದರೆ ಕ್ರೈಸ್ತ ಸೇರಿದಂತೆ ಬೇರೆ ಯಾವುದೇ ಧರ್ಮಕ್ಕೆ ಮತಾಂತರವಾದರೆ ಅವರು ಎಸ್‌ಸಿ ಸ್ಥಾನಮಾನ ಕಳೆದುಕೊಳ್ಳುತ್ತಾರೆ ಎಂದು ಭಾರಿ ಮಹತ್ವದ ತೀರ್ಪಿನಲ್ಲಿ ಹೇಳಲಾಗಿದೆ. ನ್ಯಾ. ಪಿ.ಕೆ.ಮಿಶ್ರಾ ಮತ್ತು ನ್ಯಾ.ಎನ್‌.ವಿ.ಅಂಜಾರಿಯ ಅವರನ್ನೊಳಗೊಂಡ ನ್ಯಾಯಪೀಠ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ

ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ಇಲ್ಲ : ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು Read More »

ಹರ್ಮುಜ್ ಜಲಸಂಧಿಯು ಈಗ ಹಡಗುಗಳ ಸಂಚಾರಕ್ಕೆ ಮುಕ್ತ ಎಂದ ಇರಾನ್

ನವದೆಹಲಿ: ಇರಾನಿನ ಶತ್ರು ರಾಷ್ಟ್ರಗಳನ್ನು ಹೊರತು ಪಡಿಸಿ, ಇತರ ರಾಷ್ಟ್ರಗಳಿಗೆ ಹರ್ಮುಜ್ ಜಲಸಂಧಿಯಲ್ಲಿ ಮುಕ್ತವಾಗಿ ಸಂಚರಿಸಲು ಇರಾನ್ ಅವಕಾಶ ನೀಡಿದೆ. ಅಮೆರಿಕಾ ಅಧ್ಯಕ್ಷ ಟ್ರಂಪ್ ಈ ವಿಷಯಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಂತಹ ಒಂದು ನಿರ್ಣಯಕ್ಕೆ ಇರಾನ್ ಬಂದಿದೆ. ಇರಾನಿನ ಶತ್ರು ರಾಷ್ಟ್ರಗಳ ಹಡಗುಗಳನ್ನು ಹೊರತುಪಡಿಸಿದಂತೆ ಇತರ ರಾಷ್ಟ್ರಗಳ ಹಡಗುಗಳಿಗೆ ಹರ್ಮುಜ್ ಜಲಸಂಧಿ ಮುಕ್ತವಾಗಿದೆ. ಮುಂದಿನ ನಲವತ್ತೆಂಟು ಗಂಟೆಗಳ ಒಳಗಾಗಿ ಹರ್ಮುಜ್ ಹಡಗುಗಳ ಸಂಚಾರಕ್ಕೆ ಮುಕ್ತವಾಗದೇ ಹೋದಲ್ಲಿ ಇರಾನಿನ ವಿದ್ಯುತ್ ಉತ್ಪಾದನಾ ಸ್ಥಾವರಗಳನ್ನು ಸ್ಪೋಟ ಮಾಡುವ ಬೆದರಿಕೆಯನ್ನು

ಹರ್ಮುಜ್ ಜಲಸಂಧಿಯು ಈಗ ಹಡಗುಗಳ ಸಂಚಾರಕ್ಕೆ ಮುಕ್ತ ಎಂದ ಇರಾನ್ Read More »

ಮಂಗಳೂರಿಗೆ ಆಗಮಿಸಿದ 86 ಸಾವಿರ ಮೆಟ್ರಿಕ್‌ ಟನ್‌ ತೈಲ ತುಂಬಿರುವ ಹಡಗು

ಚೀನಾಕ್ಕೆಂದು ಹೊರಟಿದ್ದ ಬೃಹತ್‌ ತೈಲ ಟ್ಯಾಂಕರ್‌ ಭಾರತಕ್ಕೆ ಯು ಟರ್ನ್‌ ಮಂಗಳೂರು: ಚೀನಾಕ್ಕೆ ಹೊರಟಿದ್ದ ರಷ್ಯಾದ ತೈಲ ತುಂಬಿದ ಟ್ಯಾಂಕರ್ ಹಡಗು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ಮಹತ್ವದ ಬೆಳವಣಿಗೆಯಿಂದ ಯುಟರ್ನ್ ಹೊಡೆದು ಶನಿವಾರ ಮಂಗಳೂರಿಗೆ ಆಗಮಿಸಿದೆ. ರಷ್ಯಾದ ಅಕ್ವಾ ಟೈಟಾನ್‌ ಹಡಗು ಸುಮಾರು 86 ಸಾವಿರ ಮೆಟ್ರಿಕ್ ಟನ್ ತೈಲ ಹೊತ್ತು ಮಂಗಳೂರಿಗೆ ಆಗಮಿಸಿದೆ. ಚೀನಾಕ್ಕೆ ಹೊರಟ ಈ ಹಡಗಿಗೆ ಜನವರಿಯಲ್ಲಿ ತೈಲ ತುಂಬಲಾಗಿದ್ದು, ಮಾರ್ಚ್ ಮಧ್ಯದಲ್ಲಿ ಆಗ್ನೇಯ ಏಷ್ಯಾದಲ್ಲಿ ಸಂಚರಿಸುತ್ತಿತ್ತು. ಈ ಸಂದರ್ಭ ಚೀನಾದ ರಿಝಾವೊ

ಮಂಗಳೂರಿಗೆ ಆಗಮಿಸಿದ 86 ಸಾವಿರ ಮೆಟ್ರಿಕ್‌ ಟನ್‌ ತೈಲ ತುಂಬಿರುವ ಹಡಗು Read More »

ದೇಶದಲ್ಲಿ ಡಿಜಿಟಲ್ ಅರೆಸ್ಟ್ ‌ವಂಚನೆ ತಡೆಯಲು ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ

ನವದೆಹಲಿ: ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಗಳು ಭಾರತದಲ್ಲಿ ಹೆಚ್ಚುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ವಂಚನೆಗೆ ಬಳಕೆ ಮಾಡುವ ಮೊಬೈಲ್ ಡಿವೈಸ್ ಐಡಿ‌ಗಳನ್ನು ‌ಶಾಶ್ವತವಾಗಿ ಬ್ಲಾಕ್ ಮಾಡುವಂತೆ ವಾಟ್ಸಾಪ್ ‌ಸಂಸ್ಥೆಗೆ ಸೂಚನೆ ನೀಡಲಾಗಿದೆ. ವಂಚಕರು ಬಳಸುವ ಸಾಧನವನ್ನು ಗುರುತಿಸಿದ ತಕ್ಷಣ ಅದರ ಡಿವೈಸ್ ಐಡಿಯನ್ನು ನಿರ್ಬಂಧಿಸುವುದರಿಂದ, ಅದೇ ಫೋನ್ ಮೂಲಕ ಮತ್ತೆ ಖಾತೆ ತೆರೆಯುವ ಅವಕಾಶ ಕಡಿಮೆಯಾಗಲಿದೆ. ಜೊತೆಗೆ, ಅಳಿಸಲಾದ ಖಾತೆಗಳ ಮಾಹಿತಿಯನ್ನು ಕನಿಷ್ಠ 180 ದಿನಗಳವರೆಗೆ ಉಳಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ,

ದೇಶದಲ್ಲಿ ಡಿಜಿಟಲ್ ಅರೆಸ್ಟ್ ‌ವಂಚನೆ ತಡೆಯಲು ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ Read More »

ಡಾ. ರಾಜ್ ನಟನೆಯ ಚಿತ್ರದ ಹಾಡಿನ ಲಿಂಕ್ ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ: ಪ್ರಸಿದ್ಧ ಚಲನಚಿತ್ರ ನಟ, ಕರುನಾಡ ಅಣ್ಣಾವ್ರು ವರನಟ ಡಾ‌. ರಾಜ್‌ಕುಮಾರ್ ಅವರ ಅಭಿಮಾನಿಗಳ ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂತಸ ಮೂಡಿಸಿದ್ದಾರೆ. ಪ್ರಧಾನಿ ಮೋದಿ ಅವರು ರಾಜ್‌ಕುಮಾರ್ ಅವರ ಹಾಡೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದು ರಾಜ್ ಅಭಿಮಾನಿಗಳ ಖುಷಿಯನ್ನು ದುಪ್ಪಟ್ಟು ಮಾಡಿದೆ. ರಾಜ್‌ಕುಮಾರ್ ಅಭಿನಯದ ಶ್ರೀ ಕೃಷ್ಣದೇವರಾಯ ಚಿತ್ರದ ‘ಶ್ರೀ ಚಾಮುಂಡೇಶ್ವರಿ’ ಹಾಡಿನ ಯೂಟ್ಯೂಬ್ ಲಿಂಕ್ ಅನ್ನು ಹಂಚಿಕೊಂಡಿರುವ ಅವರು ‘ದೇವಿಯ ಮೇಲಿನ ನಂಬಿಕೆ ಭಕ್ತರಿಗೆ ಹೊಸ ಶಕ್ತಿ ನೀಡುತ್ತದೆ’ ಎಂದು ಬರೆದುಕೊಂಡಿದ್ದಾರೆ.

ಡಾ. ರಾಜ್ ನಟನೆಯ ಚಿತ್ರದ ಹಾಡಿನ ಲಿಂಕ್ ಹಂಚಿಕೊಂಡ ಪ್ರಧಾನಿ ಮೋದಿ Read More »

error: Content is protected !!
Scroll to Top