ದೇಶ

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂ ಧರ್ಮದವರಿಗೆ ಪೂಜೆ ಮಾಡಲು ಅನುಮತಿ | ವಾರಣಾಸಿ ನ್ಯಾಯಾಲಯ ಆದೇಶ

ವಾರಣಾಸಿ: ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಳಿಗೆಯಲ್ಲಿ ಹಿಂದೂ ಧರ್ಮದವರಿಗೆ ಪೂಜೆ ಮಾಡಲು ವಾರಣಾಸಿ ನ್ಯಾಯಾಲಯ ಅನುಮತಿ ನೀಡಿದೆ. ಬುಧವಾರ ಈ ಅನುಮತಿ ಆದೇಶ ಹೊರಡಿಸಿದ್ದು, ಆದೇಶದ ಪ್ರಕಾರ ಜ್ಞಾನವಾಪಿ ಮಸೀದಿಯೊಳಗೆ ಮುಚ್ಚಿದ ಪ್ರದೇಶದವಾದ  ವ್ಯಾಸ್ ಜೀ ಕಾ ತಹಖಾನಾದಲ್ಲಿ ಹಿಂದೂ ಭಕ್ತಾದಿಗಳು ಪ್ರಾರ್ಥನೆ ಸಲ್ಲಿಸಬಹುದು. ಈ ಕುರಿತು ಮುಂದಿನ ಏಳು ದಿನಗಳಲ್ಲಿ ವ್ಯವಸ್ಥೆಗಳನ್ನು ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಈ ಕುರಿತು ಮಾಧ್ಯಮದವರಿಗೆ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಮಾಹಿತಿ ನೀಡಿದ್ದು, ಎಲ್ಲರಿಗೂ ಪೂಜೆ […]

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂ ಧರ್ಮದವರಿಗೆ ಪೂಜೆ ಮಾಡಲು ಅನುಮತಿ | ವಾರಣಾಸಿ ನ್ಯಾಯಾಲಯ ಆದೇಶ Read More »

2024 ನೇ ಸಾಲಿನ ಪದ್ಮ ಪ್ರಶಸ್ತಿ ಪಟ್ಟಿ ಬಿಡುಗಡೆ | ಕರ್ನಾಟಕದಿಂದ 9 ಮಂದಿ ಆಯ್ಕೆ

ನವದೆಹಲಿ: 2024ನೇ ಸಾಲಿನ ಪದ್ಮ ಪ್ರಶಸ್ತಿ ಪಟ್ಟಿಯನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದ್ದು, ಕರ್ನಾಟಕ 9 ಮಂದಿ ಸೇರಿ ಒಟ್ಟು 132 ಮಂದಿ ಈ ಬಾರಿ ಪದ್ಮ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಪ್ರಶಸ್ತಿಗಳ ಪೈಕಿ 5 ಮಂದಿ ಪದ್ಮ ವಿಭೂಷಣ, 17 ಮಂದಿ ಪದ್ಮಭೂಷಣ ಹಾಗೂ 110 ಮಂದಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದಿಂದ ಆಯ್ಕೆಯಾದವರ ಪಟ್ಟಿ : ಪದ್ಮಭೂಷಣಕ್ಕೆ ಸೀತಾರಾಮ್ ಜಿಂದಾಲ್ (ವ್ಯಾಪಾರ ಮತ್ತು ಕೈಗಾರಿಕೆ), ಪದ್ಮಶ್ರೀಗೆ ರೋಹನ್ ಮಾಚಂಡ ಬೋಪಣ್ಣ (ಕ್ರೀಡೆ), ಪ್ರೇಮಾ ಧನರಾಜ್ (ವೈದ್ಯಕೀಯ),

2024 ನೇ ಸಾಲಿನ ಪದ್ಮ ಪ್ರಶಸ್ತಿ ಪಟ್ಟಿ ಬಿಡುಗಡೆ | ಕರ್ನಾಟಕದಿಂದ 9 ಮಂದಿ ಆಯ್ಕೆ Read More »

ಆರ್.ಎಸ್.ಎಸ್. ಕಾರ್ಯಕರ್ತನ ಹತ್ಯೆ ಪ್ರಕರಣ: 15 ಪಿ.ಎಫ್.ಐ. ಕಾರ್ಯಕರ್ತರಿಗೆ ಗಲ್ಲು!! | ಕೇರಳದ ಇತಿಹಾಸದಲ್ಲಿ ದೊಡ್ಡ ಸಂಖ್ಯೆಯ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಿದ್ದು ಇದೇ ಮೊದಲು!!

ಕೇರಳ ನ್ಯಾಯಾಲಯ 15 ಮಂದಿ ಪಿ.ಎಫ್.ಐ. ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ ವಿಧಿಸಿದೆ. 15 ಮಂದಿ ಅಪರಾಧಿಗಳಿಗೆ ಒಟ್ಟಿಗೆ ಗಲ್ಲು ಶಿಕ್ಷೆ ವಿಧಿಸಿರುವುದು ಕೇರಳದ ಇತಿಹಾಸದಲ್ಲೇ ಇದೇ ಮೊದಲು ಎಂದು ಹೇಳಲಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ (ಆರ್‌ ಎಸ್‌ ಎಸ್)‌ ಸಂಘದ ಕಾರ್ಯಕರ್ತ, ಬಿಜೆಪಿ ನಾಯಕ ರಂಜಿತ್‌ ಶ್ರೀನಿವಾಸನ್‌ ಹತ್ಯೆ ಪ್ರಕರಣದಲ್ಲಿ ಕೇರಳ ನ್ಯಾಯಾಲಯ ಈ ತೀರ್ಪು ನೀಡಿದೆ. ಕೇರಳದ ಮಾವೇಲಿಕರ ಅಡಿಷನಲ್ ಸೆಷನ್ಸ್ ನ್ಯಾಯಾಲಯ ನ್ಯಾಯಧೀಶೆ ವಿಜಿ ಶ್ರೀದೇವಿ ತೀರ್ಪು ಪ್ರಕಟಿಸಿದ್ದಾರೆ. 2021ರ ಡಿಸೆಂಬರ್ 19ರಂದು ರಂಜಿತ್

ಆರ್.ಎಸ್.ಎಸ್. ಕಾರ್ಯಕರ್ತನ ಹತ್ಯೆ ಪ್ರಕರಣ: 15 ಪಿ.ಎಫ್.ಐ. ಕಾರ್ಯಕರ್ತರಿಗೆ ಗಲ್ಲು!! | ಕೇರಳದ ಇತಿಹಾಸದಲ್ಲಿ ದೊಡ್ಡ ಸಂಖ್ಯೆಯ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಿದ್ದು ಇದೇ ಮೊದಲು!! Read More »

ರೈಲು  ಡಿಕ್ಕಿ : ಇಬ್ಬರು ಮೃತ್ಯು

ಕಾಸರಗೋಡು: ರೈಲು ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ಪಳ್ಳಂ ರೈಲ್ವೇ ಸೇತುವೆ ಬಳಿ ಇಂದು ಮುಂಜಾನೆ ನಡೆದಿದೆ. 20 ರಿಂದ 25 ವರ್ಷದೊಳಗಿನ ಇಬ್ಬರು ಯುವಕರು ಮೃತಪಟ್ಟಿದ್ದು, ಮೃತರ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ. ಮುಂಜಾನೆ ಸುಮಾರು 5.30 ರ ಹೊತ್ತಿಗೆ ಇಬ್ಬರು ಯುವಕರ ಮೃತದೇಹ ಪತ್ತೆಯಾಗಿದೆ. ಸ್ಥಳೀಯರು ನೀಡಿದ ದೂರಿನದಂತೆ ರೈಲ್ವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ರೈಲು  ಡಿಕ್ಕಿ : ಇಬ್ಬರು ಮೃತ್ಯು Read More »

69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ: ರಣಬೀರ್ ಅತ್ಯುತ್ತಮ ನಟ, ಆಲಿಯಾ ಅತ್ಯುತ್ತಮ ನಟಿ!

‘ಗುಜರಾತ್​​ ಪ್ರವಾಸೋದ್ಯಮ ಇಲಾಖೆ’ ಸಹಯೋಗದೊಂದಿಗೆ 69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಗುಜರಾತ್​ನ ಗಾಂಧಿನಗರದ ಮಹಾತ್ಮ ಮಂದಿರ್​ ಕನ್ವೆನ್ಷನ್​ ಮತ್ತು ಎಕ್ಸಿವಿಷನ್​ ಸೆಂಟರ್​ನಲ್ಲಿ ಜ.27 ಹಾಗೂ ಜ.28ರಂದು ಅದ್ಧೂರಿಯಾಗಿ ನಡೆದಿದೆ. ಜನವರಿ 27ರಂದು ಬಾಲಿವುಡ್​ ಸಿನಿಮಾಗಳ ಹಲವು ತಾಂತ್ರಿಕ ವಿಭಾಗಗಳಿಗೆ ಪ್ರಶಸ್ತಿ ನೀಡಲಾಗಿತ್ತು. ಜ.28ರಂದು ಉಳಿದ ವಿಭಾಗಗಳಿಗೆ ಪ್ರಶಸ್ತಿ ನೀಡಲಾಯಿತು. 12th ಫೇಲ್ ಸಿನಿಮಾʼ ಅತ್ಯುತ್ತಮ ಚಿತ್ರವಾಗಿ ಹೊರಹೊಮ್ಮಿದೆ. ʻಅನಿಮಲ್ʼ ಚಿತ್ರಕ್ಕಾಗಿ ರಣಬೀರ್‌ ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆದ್ದರೆ,ʻರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ ಸಿನಿಮಾಗಾಗಿ

69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ: ರಣಬೀರ್ ಅತ್ಯುತ್ತಮ ನಟ, ಆಲಿಯಾ ಅತ್ಯುತ್ತಮ ನಟಿ! Read More »

ಬೆಳಿಗ್ಗೆ ರಾಜೀನಾಮೆ, ಸಂಜೆ ಪ್ರಮಾಣವಚನ | ಇದು ಬಿಹಾರದ ಸಿಎಂ ನಿತೀಶ್ ಕುಮಾರ್ ಭಾನುವಾರದ ದಿನಚರಿ

ಪಾಟ್ನಾ: ಜೆಡಿಯು – ಬಿಜೆಪಿ ನೇತೃತ್ವದ ನೂತನ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್‌ ಭಾನುವಾರ (ಜ.28 ರಂದು) ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು. ಆ ಮೂಲಕ ನಿತೀಶ್‌ ಕುಮಾರ್‌ 9ನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಭಾನುವಾರ ಮುಂಜಾನೆ ನಿತೀಶ್ ರಾಜಭವವಕ್ಕೆ ತೆರಳಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು

ಬೆಳಿಗ್ಗೆ ರಾಜೀನಾಮೆ, ಸಂಜೆ ಪ್ರಮಾಣವಚನ | ಇದು ಬಿಹಾರದ ಸಿಎಂ ನಿತೀಶ್ ಕುಮಾರ್ ಭಾನುವಾರದ ದಿನಚರಿ Read More »

ರಜತದೊಡತಿ ರಜಕ್ ಈಗ ಸೈನ್ಯದ ಮೊದಲ ಸುಬೇದಾರ್ | ಭಾರತೀಯ ಸೇನೆಯ ಅಧಿಕೃತ ಹೇಳಿಕೆ

ದೆಹಲಿ: ಭಾರತೀಯ ಸೇನೆಯ ಮೊದಲ ಮಹಿಳಾ ಸುಬೇದಾರ್ ಆಗಿ ಚಾಂಪಿಯನ್ ಟ್ರ್ಯಾಪ್ ಶೂಟರ್ ಆಗಿರುವ ಪ್ರೀತಿ ರಜಕ್ ಅವರು ನೇಮಕ ಗೊಂಡಿದ್ದಾರೆ. ಹವಾಲ್ದಾರ್ ಆಗಿದ್ದ ಪ್ರೀತಿ ರಜಕ್ ಭಾನುವಾರ ಬಡ್ತಿ ಪಡೆದ ನಂತರ ಭಾರತೀಯ ಸೇನೆಯಲ್ಲಿ ಸುಬೇದಾರ್ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಸುಬೇದಾರ್ ಪ್ರೀತಿ ರಜಕ್ ಅವರು ಡಿಸೆಂಬರ್ 2022 ರಲ್ಲಿ ಕಾರ್ಪ್ಸ್ ಆಫ್ ಮಿಲಿಟರಿ ಪೋಲೀಸ್‌ನಲ್ಲಿ ಸೈನ್ಯಕ್ಕೆ ಸೇರಿದ್ದರು. ಭಾರತೀಯ ಸೇನೆ ಈ ಕುರಿತು ಮಾಹಿತಿ ನೀಡಿದ್ದು, “ಭಾರತೀಯ ಸೇನೆ

ರಜತದೊಡತಿ ರಜಕ್ ಈಗ ಸೈನ್ಯದ ಮೊದಲ ಸುಬೇದಾರ್ | ಭಾರತೀಯ ಸೇನೆಯ ಅಧಿಕೃತ ಹೇಳಿಕೆ Read More »

ಅಯೋಧ್ಯೆ ರಾಮ ಮಂದಿರ ವಿಷಯದಲ್ಲಿ ಪಾಕ್ ಹೊಸ ಖ್ಯಾತೆ!!

ಹೊಸದಿಲ್ಲಿ: ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮವು ಕಳೆದ ವಾರ ನಡೆದಿದ್ದು, ಇಡೀ ವಿಶ್ವದ ಗಮನ ಸೆಳೆದಿತ್ತು. ಆದರೆ ಭಾರತ ಮತ್ತು ಭಾರತೀಯರ ಸಂತೋಷವನ್ನು ಸಹಿಸದ ಪಾಕಿಸ್ತಾನವು ಹೊಸ ವರಸೆ ಶುರು ಮಾಡಿದೆ. ಅಯೋಧ್ಯೆಯಲ್ಲಿ ದಶಕಗಳ ನಂತರ ದೇವಾಲಯ ಮತ್ತು ಮಸೀದಿಯ ವಿವಾದವು ಕೊನೆಗೊಂಡು ದೇವಾಲಯ ನಿರ್ಮಾಣವಾಗಿದೆ. ಆದರೆ ಪಾಕಿಸ್ತಾನವು ಮಂದಿರದ ಬಗ್ಗೆ ದೂರು ನೀಡಲು ವಿಶ್ವಸಂಸ್ಥೆಗೆ ಔಪಚಾರಿಕವಾಗಿ ಪತ್ರ ಬರೆದಿದೆ. ವಿಶ್ವಸಂಸ್ಥೆಗೆ ಪಾಕಿಸ್ತಾನದ ರಾಯಭಾರಿ ಮುನೀರ್ ಅಕ್ರಮ್ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ

ಅಯೋಧ್ಯೆ ರಾಮ ಮಂದಿರ ವಿಷಯದಲ್ಲಿ ಪಾಕ್ ಹೊಸ ಖ್ಯಾತೆ!! Read More »

ಅಯೋಧ್ಯೆಯಿಂದ ರಾಜ್ಯಕ್ಕೆ ಬರಲಿದೆಯೇ ರಾಮನ ಮೂರ್ತಿ?? | ರಾಘವೇಶ್ವರ ಶ್ರೀಗಳಿಂದ ಗೋಕರ್ಣದಲ್ಲಿ ಪ್ರತಿಷ್ಠಾಪನೆಗೆ ಚಿಂತನೆ?!

ಅಯೋಧ್ಯೆಯಲ್ಲಿ ನಿರ್ಮಾಣಗೊಂಡ ನೂತನ ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೆಂದು ಅಂತಿಮಗೊಂಡ ಮೂರು ಮೂರ್ತಿಗಳಲ್ಲೊಂದನ್ನು ರಾಜ್ಯಕ್ಕೆ ತರಲು ರಾಘವೇಶ್ವರ ಶ್ರೀ ಉತ್ಸಾಹಿತರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ಮೂಲದ ಶಿಲ್ಪಿ ಗಣೇಶ್‌ ಭಟ್‌ ಅವರು ರಚಿಸಿದ ವಿಗ್ರಹ ಇದಾಗಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಗೊಂಡಿದೆ. ಉಳಿದೆರಡು ವಿಗ್ರಹಗಳನ್ನು ಅಯೋಧ್ಯೆಯಲ್ಲಿ ವೀಕ್ಷಣೆಗೆ ಇಡಲಾಗಿದೆ. ಇದನ್ನು ವೀಕ್ಷಿಸಿದ ಬಳಿಕ ರಾಘವೇಶ್ವರ ಶ್ರೀ ಪ್ರತಿಕ್ರಿಯೆ ನೀಡಿದ್ದಾರೆ. ಅಯೋಧ್ಯೆಯಲ್ಲಿ ರಚಿಸಿದ ಶ್ರೀರಾಮನ ವಿಗ್ರಹವನ್ನು ರಾಜ್ಯಕ್ಕೆ ತಂದು ಪ್ರತಿಷ್ಠಾಪಿಸಬೇಕೆಂಬ ಅಭಿಲಾಷೆ ನಮಗೂ ಇದೆ.

ಅಯೋಧ್ಯೆಯಿಂದ ರಾಜ್ಯಕ್ಕೆ ಬರಲಿದೆಯೇ ರಾಮನ ಮೂರ್ತಿ?? | ರಾಘವೇಶ್ವರ ಶ್ರೀಗಳಿಂದ ಗೋಕರ್ಣದಲ್ಲಿ ಪ್ರತಿಷ್ಠಾಪನೆಗೆ ಚಿಂತನೆ?! Read More »

ಮದರಸಾಗಳಲ್ಲಿ ಶ್ರೀರಾಮನ ಅಧ್ಯಯನಕ್ಕೆ ಅವಕಾಶ!!

ರಾಮಮಂದಿರ ಉದ್ಘಾಟನೆ ಬೆನ್ನಲ್ಲೇ ದೇಶಾದ್ಯಂತ ರಾಮನ ಕುರಿತ ವಿಚಾರಗಳು ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದೆ. ಅತ್ತ ಉತ್ತರಾಖಂಡದಲ್ಲಿ ಮದರಸಾಗಳಲ್ಲಿ ರಾಮ ದೇವರ ಕುರಿತ ಅಧ್ಯಯನಕ್ಕೆ ಅವಕಾಶ ಕಲ್ಪಿಸಿರುವ ಬಗ್ಗೆ ವರದಿಯಾಗಿದೆ. ಉತ್ತರಾಖಂಡದ ಮದರಸಾಗಳಲ್ಲೂ ಶ್ರೀರಾಮನ ಕುರಿತು ಅಧ್ಯಯನ ನಡೆಯಬೇಕು ಎಂದು ಹೊಸ ಪಠ್ಯವನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಆ ಮೂಲಕ ಇನ್ನು ಮುಸ್ಲಿಂ ವಿದ್ಯಾರ್ಥಿಗಳು ಕೂಡ ರಾಮನ ಕುರಿತು ಅಧ್ಯಯನ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಕುರಿತು ಉತ್ತರಾಖಂಡ ವಕ್ಫ್‌ ಬೋರ್ಡ್‌ ಚೇರ್ಮನ್‌ ಆಗಿರುವ ಶಾದಾಬ್‌ ಶಾಮ್ಸ್‌ ಅವರೇ ಮಾಹಿತಿ ನೀಡಿದ್ದು,

ಮದರಸಾಗಳಲ್ಲಿ ಶ್ರೀರಾಮನ ಅಧ್ಯಯನಕ್ಕೆ ಅವಕಾಶ!! Read More »

error: Content is protected !!
Scroll to Top