ದೇಶ

ಜ. 25ರಿಂದ ಅಯೋಧ್ಯೆಗೆ ದೇಶದ 430 ಕಡೆಯಿಂದ 35 ರೈಲು ಸಂಚಾರ!

ನವದೆಹಲಿ: ದೇಶದ 430 ಕಡೆಯಿಂದ ಆಯೋಧ್ಯೆಗೆ ರೈಲು ಸೇವೆ ನೀಡಲು ನಿರ್ಧರಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಜನವರಿ 25 ರಿಂದ 60 ದಿನಗಳ ಕಾಲ ವಿಶೇಷ ಹಾಗೂ ಹೆಚ್ಚುವರಿ ರೈಲುಗಳು ಆಯೋಧ್ಯೆಯತ್ತ ಸಂಚರಿಸಲಿವೆ. ಪ್ರತಿ ದಿನ 35 ರೈಲುಗಳು ಆಯೋಧ್ಯೆ ತೆರಳುವ ಭಕ್ತರಿಗೆ ಸೇವೆ ನೀಡಲಿವೆ ಎಂದು ಬಿಜೆಪಿ ಸಭೆಯಲ್ಲಿ ಹೇಳಿದರು. ಈ‌ ಮೂಲಕ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಶ್ರೀರಾಮ ಮಂದಿರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಿದೆ. ದೇಶಾದ್ಯಂತ ದೀಪಾವಳಿ ಸಡಗರ ಮನೆ […]

ಜ. 25ರಿಂದ ಅಯೋಧ್ಯೆಗೆ ದೇಶದ 430 ಕಡೆಯಿಂದ 35 ರೈಲು ಸಂಚಾರ! Read More »

ಅರ್ಜುನ ಪ್ರಶಸ್ತಿ ಪಡೆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಅವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅರ್ಜುನ ಪ್ರಶಸ್ತಿಯನ್ನು ನೀಡಿದರು. 2023ರ ಏಕದಿನ ವಿಶ್ವಕಪ್‌ನಲ್ಲಿನ ಅವರ ಸಾಧನೆಯನ್ನು ಗಣನೆಗೆ ತೆಗೆದುಕೊಂಡ ನಂತರ ಬಿಸಿಸಿಐ ಶಮಿ ಹೆಸರನ್ನು ಪ್ರಶಸ್ತಿಗಾಗಿ ಶಿಫಾರಸು ಮಾಡಿತ್ತು. ಕೇವಲ 7 ಪಂದ್ಯಗಳಿಂದ 24 ವಿಕೆಟ್ ಕಬಳಿಸುವ ಮೂಲಕ ಶಮಿ 2023ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಬೌಲರ್ ಆಗಿ ಮಿಂಚಿದ್ದರು. ನಾನು ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಕ್ಕೆ ಸಂತೋಷವಾಗಿದೆ. ನನ್ನ ಜೀವನದಲ್ಲಿ ಈ ಪ್ರಶಸ್ತಿಯನ್ನು ಪಡೆದ ಅನೇಕರನ್ನು ನೋಡಿದ್ದೇನೆ.

ಅರ್ಜುನ ಪ್ರಶಸ್ತಿ ಪಡೆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ Read More »

ಚಳಿ ಕಾಯಿಸಲು ಹಾಕಿದ್ದ ಬೆಂಕಿಗೆ ಅವಳಿ ಕಂದಮ್ಮಗಳು ಸಜೀವ ದಹನ!!

ಉತ್ತರಪ್ರದೇಶ: ಮೈನ್‌ಪುರಿ ಜಿಲ್ಲೆಯಲ್ಲಿ ಅಜಾಗರೂಕತೆಯಿಂದ ಭೀಕರ ಅಪಘಾತವೇ ಸಂಭವಿಸಿದೆ. ಮಂಚಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಆರು ತಿಂಗಳ ಅವಳಿ ಕಂದಮ್ಮಗಳು ಸಜೀವ ದಹನವಾಗಿದ್ದಾರೆ. ಮೈನ್‌ಪುರಿ ಜಿಲ್ಲೆಯ ಬೆಂಚಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮೈನ್ಪುರಿ ರಸ್ತೆ ಬಳಿ ವಾಸಿಸುವ ಗೌರವ್ ಅಲಿಯಾಸ್ ದಿಲೀನ್ ಕುಮಾರ್ ಸೋಮವಾರ ಮಧ್ಯಾಹ್ನ ಮನೆಯಿಂದ ಹೊರಗೆ ಹೋಗಿದ್ದರು. ಮನೆಯಲ್ಲಿ ಅವರ ಪತ್ನಿ ರಜನಿ ಅವರ ಆರು ತಿಂಗಳ ಅವಳಿ ಹೆಣ್ಣು ಮಕ್ಕಳಾದ ರಿದ್ಧಿ ಮತ್ತು ಸಿದ್ಧಿ ಇದ್ದರು. ರಜನಿ ಟೆರೇಸ್​​​​ನಲ್ಲಿರುವ ಕೋಣೆಯಲ್ಲಿ ನೇವಾರ್ ಕಾಟ್

ಚಳಿ ಕಾಯಿಸಲು ಹಾಕಿದ್ದ ಬೆಂಕಿಗೆ ಅವಳಿ ಕಂದಮ್ಮಗಳು ಸಜೀವ ದಹನ!! Read More »

ರಾಮಮಂದಿರ ಉದ್ಘಾಟನೆಯಂದು ಮೌನ ವ್ರತ ಮುರಿಯಲಿದ್ದಾರೆ ಮೌನಿ ಮಾತಾ!!

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ ಮೌನ ಮುರಿಯುತ್ತೇನೆ ಎಂದು ಶಪಥಗೈದಿದ್ದ ಮಹಿಳೆಯೊಬ್ಬರು ಬರೋಬ್ಬರಿ 30 ವರ್ಷದ ನಂತರ ಮಾತನಾಡಲಿದ್ದಾರೆ. ಜಾರ್ಖಂಡ್ನ 85 ವರ್ಷದ ಸರಸ್ವತಿ ದೇವಿ 1992ರ ಡಿ. 6ರಂದು ಜನ್ಮಸ್ಥಾನದಲ್ಲಿ ದಾಳಿಕೋರರು ನಿರ್ಮಿಸಿದ್ದ ಕಟ್ಟಡ ಕರಸೇವಕರಿಂದ ನೆಲಸಮವಾಗಿದ್ದು, ಅಂದು ಸರಸ್ವತಿ ದೇವಿ ಮೌನವ್ರತ ಕೈಗೊಂಡಿದ್ದರು. ಜ.22 ರಂದು ಸರಸ್ವತಿ ದೇವಿ ಅಗರ್ವಾಲ್ ತಮ್ಮ ಕನಸು ನನಸಾಗುತ್ತಿರುವುದರಿಂದ ಅಂದಿನಿಂದ ಮತ್ತೆ ಮಾತನಾಡಲು ತೀರ್ಮಾನಿಸಿದ್ದಾರೆ. 30 ವರ್ಷದ ಅವರ ಮೌನ ದೀಕ್ಷೆ ಕೊನೆಗೊಳ್ಳುವ ಕಾಲ ರಾಮಮಂದಿರ ನಿರ್ಮಾಣದೊಂದಿಗೆ ಸನ್ನಿಹಿತವಾಗಿದೆ.

ರಾಮಮಂದಿರ ಉದ್ಘಾಟನೆಯಂದು ಮೌನ ವ್ರತ ಮುರಿಯಲಿದ್ದಾರೆ ಮೌನಿ ಮಾತಾ!! Read More »

ಮೋದಿ, ಭಾರತ ವಿರೋಧಿಸಿದ್ದ ಮಾಲ್ಡೀವ್ಸ್’ಗೆ ಮರ್ಮಾಘಾತ!! | `ಬಾಯ್ಕಾಟ್ ಮಾಲ್ಡೀವ್ಸ್’ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ!

ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆಯನ್ನು ನೀಡಿದ ಮೂವರು ಸಚಿವರನ್ನು ಮಾಲ್ಡೀವ್ಸ್‌ ಸರ್ಕಾರ ಅಮಾನತುಗೊಳಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ಡೆಪ್ಯುಟಿ ಮಿನಿಸ್ಟರ್ ಮರಿಯಮ್ ಶಿಯುನಾ, ಮಲ್ಶಾ ಮತ್ತು ಹಸನ್ ಜಿಹಾನ್ ಅವರ ವಿರುದ್ಧ ಮಾಲ್ಡೀವ್ಸ್ ಸರ್ಕಾರವು ಕ್ರಮ ಕೈಗೊಂಡಿದೆ. ಪ್ರಧಾನಿ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರ ಕುರಿತು ಮಾಲ್ಡೀವ್‌ ಸಚಿವ ಮರಿಯಮ್ ಶಿಯುನಾ ಅವಹೇಳನಕಾರಿ ಮಾತುಗಳನ್ನಾಡಿದ್ದರು. ಲಕ್ಷದ್ವೀಪ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಸರಿ. ಆದರೆ ನಮ್ಮೊಟ್ಟಿಗೆ ಸ್ಪರ್ಧಿಸಲು ನಿಮಗೆ ಆಗುವುದಿಲ್ಲ ಅದು ಭ್ರಮೆ. ಭಾರತವು ಸಮುದ್ರತೀರದ ಪ್ರವಾಸೋದ್ಯಮದಲ್ಲಿ ಮಾಲ್ಡೀವ್ಸ್‌

ಮೋದಿ, ಭಾರತ ವಿರೋಧಿಸಿದ್ದ ಮಾಲ್ಡೀವ್ಸ್’ಗೆ ಮರ್ಮಾಘಾತ!! | `ಬಾಯ್ಕಾಟ್ ಮಾಲ್ಡೀವ್ಸ್’ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ! Read More »

126 ದಿನಗಳ ಪಯಣ: ಹಾಲೋ ಕಕ್ಷೆ ಸೇರಲಿರುವ ಆದಿತ್ಯ ಎಲ್-1

126 ದಿನಗಳ ಕಾಲ ಪ್ರಯಾಣಿಸಿದ ನಂತರ, ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ವೀಕ್ಷಣಾಲಯವಾದ ಆದಿತ್ಯ-ಎಲ್ 1 ಉಪಗ್ರಹ ಅಂತಿಮವಾಗಿ ಇಂದು ಶನಿವಾರ ಅಪರಾಹ್ನ 4 ಗಂಟೆ ಸುಮಾರಿಗೆ ಅದರ ಗೊತ್ತುಪಡಿಸಿದ ಹಾಲೋ ಕಕ್ಷೆ ಸೇರಲಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಜ್ಞಾನಿಗಳು ಮೊದಲ ಬಾರಿಗೆ ಲ್ಯಾಗ್ರೇಂಜ್ ಪಾಯಿಂಟ್ 1 ನಲ್ಲಿರುವ ಹಾಲೋ ಕಕ್ಷೆಯಲ್ಲಿ ಉಪಗ್ರಹವನ್ನು ಇರಿಸುವ ನಿರ್ಣಾಯಕ ಕುಶಲತೆ ಕಾರ್ಯವನ್ನು ನಿರ್ವಹಿಸಲಿದ್ದಾರೆ. ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆಯನ್ನು ಸೆ. 2, 2023 ರಂದು ಶ್ರೀಹರಿಕೋಟಾದ ಸತೀಶ್

126 ದಿನಗಳ ಪಯಣ: ಹಾಲೋ ಕಕ್ಷೆ ಸೇರಲಿರುವ ಆದಿತ್ಯ ಎಲ್-1 Read More »

ಸೊಮಾಲಿಯಾ: ಭಾರತೀಯರಿದ್ದ ಹಡಗು ಹೈಜಾಕ್!! | ರಕ್ಷಣೆಗೆ ತೆರಳಿದ ಯುದ್ಧನೌಕೆ INS ಚೆನ್ನೈ!

ಭಾರತೀಯರಿದ್ದ ಲೈಬೀರಿಯನ್ ಧ್ವಜದ ಹಡಗನ್ನು ಸೊಮಾಲಿಯಾ ಕರಾವಳಿಯ ಬಳಿ ಅಪಹರಣ ಮಾಡಲಾಗಿದೆ ಎಂದು ಭಾರತೀಯ ನೌಕಾಪಡೆ ಹೇಳಿದೆ. ಲೈಬೀರಿಯನ್ ಧ್ವಜದ ಹಡಗು ‘ಎಂವಿ ಲೀಲಾ ನಾರ್ಫೋಕ್’ ಎಂದು ಗುರುತಿಸಲಾಗಿದ್ದು, ಇದರಲ್ಲಿ 15 ಭಾರತೀಯ ಸಿಬ್ಬಂದಿಗಳು ಇದ್ದರು ಎನ್ನಲಾಗಿದ್ದು, ಹಡಗನ್ನು ಭಾರತೀಯ ನೌಕಾಪಡೆ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿದುಬಂದಿದೆ. ಅಪಹರಣಕ್ಕೊಳಗಾದ ಹಡಗಿನ ಚಲನವಲನಗಳ ಮೇಲೆ ಜಾಗರೂಕ ನಿಗಾ ಇಡಲು ಭಾರತೀಯ ನೌಕಾಪಡೆಯ ವಿಮಾನಗಳನ್ನು ನಿಯೋಜಿಸಲಾಗಿದೆ. ಭಾರತೀಯ ನೌಕಾಪಡೆಯ ಯುದ್ಧನೌಕೆ INS ಚೆನ್ನೈಯಿಂದ ಅಪಹರಣಕ್ಕೊಳಗಾದ ಹಡಗಿನ ಕಡೆಗೆ ಚಲಿಸುತ್ತಿದೆ ಎಂದು

ಸೊಮಾಲಿಯಾ: ಭಾರತೀಯರಿದ್ದ ಹಡಗು ಹೈಜಾಕ್!! | ರಕ್ಷಣೆಗೆ ತೆರಳಿದ ಯುದ್ಧನೌಕೆ INS ಚೆನ್ನೈ! Read More »

ಅಯೋಧ್ಯೆ ಟ್ರಸ್ಟ್ ಹೆಸರಿನಲ್ಲಿ ವಂಚಕರಿಂದ ಜನರಿಗೆ ಮೋಸ: ವಿ.ಹೆಚ್.ಪಿ.

ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ನ ಹೆಸರಿನಲ್ಲಿ ಕೆಲವು ವ್ಯಕ್ತಿಗಳು ಜನರನ್ನು ವಂಚಿಸುತ್ತಿದ್ದಾರೆ ಎಂದು ವಿಶ್ವಹಿಂದೂ ಪರಿಷತ್ ಆರೋಪಿಸಿದೆ. ಟ್ರಸ್ಟ್ ನ ಅನುಮತಿ ಇಲ್ಲದೇ ದೇಣಿಗೆ ಸಂಗ್ರಹಿಸುವ ಮೂಲಕ ಹಲವು ವ್ಯಕ್ತಿಗಳು ವಂಚನೆ ಮಾಡುತ್ತಿದ್ದಾರೆ. ಈ ವಿಷಯವನ್ನು ಸಿಎಂ ಯೋಗಿ ಆದಿತ್ಯನಾಥ್, ಕೇಂದ್ರ ಗೃಹ ಸಚಿವಾಲಯದ ಗಮನಕ್ಕೂ ತರಲಾಗಿದ್ದು, ಕ್ರಮಕ್ಕೆ ಆಗ್ರಹಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಹೆಚ್ ಪಿಯ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್, ಮಂದಿರ ಟ್ರಸ್ಟ್ ಹೆಸರಿನಲ್ಲಿ

ಅಯೋಧ್ಯೆ ಟ್ರಸ್ಟ್ ಹೆಸರಿನಲ್ಲಿ ವಂಚಕರಿಂದ ಜನರಿಗೆ ಮೋಸ: ವಿ.ಹೆಚ್.ಪಿ. Read More »

ಇತಿಹಾಸ ಬರೆದ ಇಸ್ರೋ: ಎಕ್ಸ್‌ಪೋಸ್ಯಾಟ್‌ ಯಶಸ್ವಿ ಉಡಾವಣೆ

ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಉಡಾವಣೆ ಮಾಡಿದ್ದು, ಎಕ್ಸ್‌ಪೋಸ್ಯಾಟ್‌ ಉಪಗ್ರಹವನ್ನು ಹೊತ್ತ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್‌ (PSLV) ಸಿ58 ನೌಕೆ ಯಶಸ್ವಿಯಾಗಿ ನಭಕ್ಕೆ ಹಾರಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್‌ ಮೂಲಕ ಉಪಗ್ರಹವನ್ನು ಉಡಾವಣೆ ಮಾಡಲಾಗಿದ್ದು, ಆ ಮೂಲಕ ಇಸ್ರೋ ಹೊಸ ವರ್ಷದ ದಿನವೇ ಇಸ್ರೋ ಇತಿಹಾಸ ಸೃಷ್ಟಿಸಿದೆ. ದೇಶದ ಮೊದಲ ಎಕ್ಸ್-ರೇ ಪೋಲರಿಮೀಟರ್ ಉಪಗ್ರಹ ಎಕ್ಸ್‌ಪೋಸ್ಯಾಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದ್ದು, ಇದರ ಜೊತೆಗೆ

ಇತಿಹಾಸ ಬರೆದ ಇಸ್ರೋ: ಎಕ್ಸ್‌ಪೋಸ್ಯಾಟ್‌ ಯಶಸ್ವಿ ಉಡಾವಣೆ Read More »

ಮಣಿಪುರದಲ್ಲಿ ಮತ್ತೆ ಹಿಂಸಾಚಾರ | ಓರ್ವ ಗುಂಡೇಟಿಗೆ ಬಲಿ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೈತೈ ಮತ್ತು ಕುಕಿ ಗುಂಪುಗಳ ನಡುವೆ ನಡೆದ ಹಿಂಸಾಚಾರದಲ್ಲಿ ಮೈತೈ ಸಮುದಾಯದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇಂಫಾಲ್ ಪಶ್ಚಿಮದ ನಿವಾಸಿ ನಿಂಗೋಮ್ಬಾಮ್ ಜೇಮ್ಸ್ (32) ಗುಂಡೇಟಿಗೆ ಬಲಿಯಾದ ವ್ಯಕ್ತಿ. ಮಣಿಪುರ  ಗಡಿಭಾಗದ ಮೊರೆಹ್ ಪಟ್ಟಣದಲ್ಲಿ ಪೊಲೀಸ್ ಕಮಾಂಡೋಗಳು ಮತ್ತು ಸಶಸ್ತ್ರದಾರಿ ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್‌ ಪೇದೆ ಗಾಯಗೊಂಡಿದ್ದಾರೆ. ಘರ್ಷಣೆ ವೇಳೆ ಗಾಯಗೊಂಡಿದ್ದ ನಿಂಗೋಂಬಮ್ ಜೇಮ್ಸ್‌ನ್ನು ಇಂಫಾಲ್‌ನ ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ | ಓರ್ವ ಗುಂಡೇಟಿಗೆ ಬಲಿ Read More »

error: Content is protected !!
Scroll to Top