ದೇಶ

ಮತ್ತೆ ದುಬಾರಿಯಾಯ್ತು ವಾಣಿಜ್ಯ ಎಲ್.ಪಿ.ಜಿ. ಸಿಲಿಂಡರ್!!

ಹೊಸದಿಲ್ಲಿ: ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳು ಮತ್ತೆ ತುಟ್ಟಿಯಾಗಿದೆ. ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು ಭಾನುವಾರ ವಾಣಿಜ್ಯ ಎಲ್ ಪಿಜಿ ಸಿಲಿಂಡರ್‌ ಗಳ ಬೆಲೆಯನ್ನು 209 ರೂ.ಗಳಷ್ಟು ಹೆಚ್ಚಿಸಿವೆ. ಇವು ತಕ್ಷಣದಿಂದಲೇ ಜಾರಿಗೆ ಬರುತ್ತವೆ. ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಗಳ ಬೆಲೆಯನ್ನು 158 ರೂ. ಕಡಿತಗೊಳಿಸಿದ ಸುಮಾರು ಒಂದು ತಿಂಗಳ ನಂತರ ಬೆಲೆಯಲ್ಲಿ ಈ ಹೆಚ್ಚಳವಾಗಿದೆ. ಗಮನಾರ್ಹವಾಗಿ, ವಾಣಿಜ್ಯ ಮತ್ತು ಗೃಹಬಳಕೆಯ ಎಲ್ ಪಿಜಿ (ದ್ರವೀಕೃತ ಪೆಟ್ರೋಲಿಯಂ […]

ಮತ್ತೆ ದುಬಾರಿಯಾಯ್ತು ವಾಣಿಜ್ಯ ಎಲ್.ಪಿ.ಜಿ. ಸಿಲಿಂಡರ್!! Read More »

2000 ರೂ. ನೋಟು ವಿನಿಮಯ ಗಡು ವಿಸ್ತರಣೆ | ಎಷ್ಟು ದಿನ ಇನ್ನು ಕಾಲಾವಕಾಶ ಇದೆ ಗೊತ್ತೇ?

ನವದೆಹಲಿ: 2000 ರೂ. ಮುಖಬೆಲೆಯ ನೋಟುಗಳನ್ನು ಹಿಂದಿರುಗಿಸಲು ಭಾರತೀಯ ರಿಸರ್ವ್‌ ಬ್ಯಾಂಕ್‌ ನೀಡಿರುವ ಗಡುವನ್ನು ಮತ್ತೆ ವಿಸ್ತರಿಸಿದೆ. ಇದಕ್ಕೂ ಮೊದಲು ಆರ್ ಬಿಐ ಸೆಪ್ಟೆಂಬರ್ 30ರಂದು ನೋಟು ವಿನಿಮಯಕ್ಕೆ ಕೊನೆ ದಿನವೆಂದು ಘೋಷಿಸಿತ್ತು. ಅದರಂತೆ ಹೆಚ್ಚಿನ ಗ್ರಾಹಕರು ಬ್ಯಾಂಕ್ ಗೆ ತೆರಳಿ ನೋಟು ವಿನಿಮಯ ಮಾಡಿಕೊಂಡಿದ್ದಾರೆ. ಆದರೆ ಆರ್ ಬಿಐ ಇಂದು ಹೊಸ ಪ್ರಕಟಣೆ ಹೊರಡಿಸಿದ್ದು, ಅದರಂತೆ ನೋಟು ವಿನಿಮಯ ಮಾಡಿಕೊಳ್ಳದೆ ಬಾಕಿ ಉಳಿದಿರುವ ಗ್ರಾಹಕರು ಅಕ್ಟೋಬರ್ 7ರವರೆಗೆ ಅವಕಾಶ ಕಲ್ಪಿಸಿದೆ. ಅದರಂತೆ ಗ್ರಾಹಕರು ಒಂದು ವೇಳೆ

2000 ರೂ. ನೋಟು ವಿನಿಮಯ ಗಡು ವಿಸ್ತರಣೆ | ಎಷ್ಟು ದಿನ ಇನ್ನು ಕಾಲಾವಕಾಶ ಇದೆ ಗೊತ್ತೇ? Read More »

ಗಡಿ ನುಸುಳುವಿಕೆ ಯತ್ನ ವಿಫಲ: ಇಬ್ಬರು ಉಗ್ರರ ಹತ್ಯೆ | ಉಗ್ರರಲ್ಲಿ ಪತ್ತೆಯಾಯ್ತು ಪಾಕ್ ಕರೆನ್ಸಿ!!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸುವ ಮೂಲಕ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಕಾಶ್ಮೀರ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಕುಮ್ಕಾಡಿ ಪ್ರದೇಶದಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಲಾಗಿದೆ. “ಕುಪ್ವಾರ ಪೊಲೀಸರು ನೀಡಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಮಚಲ್ ಸೆಕ್ಟರ್‌ನ ಕುಮ್ಕಾಡಿ ಪ್ರದೇಶದಲ್ಲಿ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇದುವರೆಗೆ ಒಳನುಸುಳುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ”

ಗಡಿ ನುಸುಳುವಿಕೆ ಯತ್ನ ವಿಫಲ: ಇಬ್ಬರು ಉಗ್ರರ ಹತ್ಯೆ | ಉಗ್ರರಲ್ಲಿ ಪತ್ತೆಯಾಯ್ತು ಪಾಕ್ ಕರೆನ್ಸಿ!! Read More »

ಐಇಡಿ ಸ್ಫೋಟ: ಸಿ.ಆರ್.ಪಿ.ಎಫ್. ಯೋಧ ರಾಜೇಶ್ ಕುಮಾರ್ ಸಾವು, ಅಧಿಕಾರಿಗೆ ಗಾಯ

ರಾಂಚಿ: ಜಾರ್ಖಂಡ್’ನಲ್ಲಿ ಮಾವೋವಾದಿಗಳು ಸುಧಾರಿತ ಸ್ಫೋಟಕ ಸಾಧನದಿಂದ ಸ್ಫೋಟ ನಡೆಸಿದ್ದು, ಘಟನೆಯಲ್ಲಿ ಓರ್ವ ಸಿಆರ್ ಪಿಎಫ್ ಯೋಧ ಸಾವನ್ನಪ್ಪಿದ್ದಾರೆ. ಪಶ್ಚಿಮ ಸಿಂಗ್ಬುಮ್ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಯುತ್ತಿದ್ದಾಗ ಪೊದೆಯೊಂದರಲ್ಲಿ ಇಟ್ಟಿದ್ದ ಐಇಡಿಗಳನ್ನು ನಿಷ್ಕ್ರಿಯಗೊಳಿಸುತ್ತಿದ್ದಾಗ ನಡೆದಿದೆ. ಸ್ಫೋಟದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ ಘಟಕದ ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಇಬ್ಬರನ್ನೂ ವಿಮಾನದಲ್ಲಿ ರಾಂಚಿಗೆ ಕರೆದೊಯ್ಯಲಾಗಿದೆ. ಆದರೆ ಕಾನ್‌ಸ್ಟೆಬಲ್ ರಾಜೇಶ್ ಕುಮಾರ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಐಇಡಿ ಸ್ಫೋಟ: ಸಿ.ಆರ್.ಪಿ.ಎಫ್. ಯೋಧ ರಾಜೇಶ್ ಕುಮಾರ್ ಸಾವು, ಅಧಿಕಾರಿಗೆ ಗಾಯ Read More »

ಭಾರತದ ಹಸಿರು ಕ್ರಾಂತಿಯ ಹರಿಕಾರ ಇನ್ನಿಲ್ಲ!!

ನವದೆಹಲಿ: ಭಾರತದ ಖ್ಯಾತ ಕೃಷಿ ವಿಜ್ಞಾನಿ ಮತ್ತು ಭಾರತದ ಹಸಿರು ಕ್ರಾಂತಿಯ ಹರಿಕಾರ ಎಂ.ಎಸ್. ಸ್ವಾಮಿನಾಥನ್ ಅವರು ಗುರುವಾರ ನಿಧನ ಹೊಂದಿದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ಗುರುವಾರ ಬೆಳಿಗ್ಗೆ 11.15ಕ್ಕೆ ಸುಮಾರಿಗೆ ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ ಎಂಬ ವಿಚಾರವನ್ನು ಅವರ ಕುಟುಂಬ ಮೂಲ ಖಚಿತಪಡಿಸಿದೆ. 1960 ಮತ್ತು 1970 ರ ದಶಕದಲ್ಲಿ ಸ್ವಾಮಿನಾಥನ್ ಅವರ ಅದ್ಭುತ ಕೆಲಸವು ಭಾರತೀಯ ಕೃಷಿಯಲ್ಲಿ ಕ್ರಾಂತಿಯನ್ನುಂಟು ಮಾಡಿತು. ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದಿಂದ “ಆರ್ಥಿಕ ಪರಿಸರ ವಿಜ್ಞಾನದ ಪಿತಾಮಹ” ಎಂದು

ಭಾರತದ ಹಸಿರು ಕ್ರಾಂತಿಯ ಹರಿಕಾರ ಇನ್ನಿಲ್ಲ!! Read More »

ಶುಕ್ರ ಗ್ರಹಕ್ಕೆ ಇಸ್ರೋ ಕಣ್ಣು!! | ಯೋಜನೆ ಬಗ್ಗೆ ಮಾಹಿತಿ ಹಂಚಿಕೊಂಡ ಎಸ್. ಸೋಮನಾಥ್

ನವದೆಹಲಿ: ಇಸ್ರೋ ಗಮನ ಈಗ ಶುಕ್ರನ ಮೇಲಿದೆ. ಈ ಕುರಿತು ಇಸ್ರೋ ಮುಖ್ಯಸ್ಥ ಎಸ್‌.ಸೋಮನಾಥ್‌ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಎಸ್‌. ಸೋಮನಾಥ್‌, “ಇಸ್ರೋ ಹಲವು ಮಿಷನ್‌ಗಳನ್ನು ಕೈಗೊಳ್ಳುತ್ತಿದೆ. ಈಗ ಸೌರವ್ಯೂಹದಲ್ಲಿ ಅತಿ ಹೆಚ್ಚು ಪ್ರಕಾಶಮಾನವಾದ ಗ್ರಹ ಎಂದೇ ಖ್ಯಾತಿಯಾದ ಶುಕ್ರ ಗ್ರಹದ ಅಧ್ಯಯನಕ್ಕೆ ಯೋಜನೆ ರೂಪಿಸಲಾಗಿದೆ. ಈಗಾಗಲೇ ಶುಕ್ರಯಾನದ ಪೇಲೋಡ್‌ಗಳನ್ನೂ ಅಭಿವೃದ್ಧಿಪಡಿಸಲಾಗಿದೆ. ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಶುಕ್ರ ಗ್ರಹ ನೆರವಾಗಿದೆ. ಹಾಗಾಗಿ ಶುಕ್ರಯಾನವು ತುಂಬ ಆಸಕ್ತಿದಾಯಕ

ಶುಕ್ರ ಗ್ರಹಕ್ಕೆ ಇಸ್ರೋ ಕಣ್ಣು!! | ಯೋಜನೆ ಬಗ್ಗೆ ಮಾಹಿತಿ ಹಂಚಿಕೊಂಡ ಎಸ್. ಸೋಮನಾಥ್ Read More »

‘ಕೆನಡಾ ಖಲಿಸ್ತಾನಿ ಉಗ್ರರ ಸ್ವರ್ಗ’: ಮತ್ತೊಮ್ಮೆ ಬಯಲು ಮಾಡಿದ ಎನ್.ಐ.ಎ. | ಖಲಿಸ್ತಾನಿ- ಪಾಕ್ ನಂಟಿನ ಮಾಹಿತಿಯೂ ಬಹಿರಂಗ!!

ಹೊಸದಿಲ್ಲಿ: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ ವಿಚಾರದಲ್ಲಿ ಭಾರತ ಮತ್ತು ಕೆನಡಾ ‘ರಾಜತಾಂತ್ರಿಕ ಸಮರ’ ಮುಂದುವರಿದಿರುವ ಹೊತ್ತಿನಲ್ಲಿಯೇ ‘ಕೆನಡಾ ಖಲಿಸ್ತಾನಿ ಉಗ್ರರ ಸ್ವರ್ಗ’ ಎಂಬ ವಾದ ಎನ್‌ಐಎ ತನಿಖೆಯಿಂದ ಇನ್ನಷ್ಟು ಬಲಗೊಂಡಿದೆ. ಖಲಿಸ್ತಾನ್- ಗ್ಯಾಂಗ್‌ಸ್ಟರ್‌ಗಳ ನಂಟನ್ನು ಕತ್ತರಿಸಲು ಹೊರಟಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ಪಂಜಾಬ್, ಹರ್ಯಾಣ, ದಿಲ್ಲಿ- ಎನ್‌ಸಿಆರ್, ರಾಜಸ್ಥಾನ, ಉತ್ತರಾಖಂಡ ಮತ್ತು ಉತ್ತರ ಪ್ರದೇಶಗಳ 50ಕ್ಕೂ ಹೆಚ್ಚು ಸ್ಥಳಗಳ ಮೇಲೆ ಬುಧವಾರ ದಾಳಿ ನಡೆಸಿದೆ. ಖಲಿಸ್ತಾನಿ- ಪಾಕಿಸ್ತಾನದ ಐಎಸ್‌ಐ ಮತ್ತು ಗ್ಯಾಂಗ್‌ಸ್ಟರ್‌ಗಳ

‘ಕೆನಡಾ ಖಲಿಸ್ತಾನಿ ಉಗ್ರರ ಸ್ವರ್ಗ’: ಮತ್ತೊಮ್ಮೆ ಬಯಲು ಮಾಡಿದ ಎನ್.ಐ.ಎ. | ಖಲಿಸ್ತಾನಿ- ಪಾಕ್ ನಂಟಿನ ಮಾಹಿತಿಯೂ ಬಹಿರಂಗ!! Read More »

ಮೂಕ ವಕೀಲೆ ಸಾರಾ ಸನ್ನಿ ಹೊಸ ಇತಿಹಾಸ!! | ವರ್ಚುವಲ್ ವಿಚಾರಣೆಯಲ್ಲಿ ಸುಪ್ರೀಂ ಗಮನ ಸೆಳೆದ ಯುವ ವಕೀಲೆ!

ನವದೆಹಲಿ: ಮೊಟ್ಟಮೊದಲ ಬಾರಿಗೆ, ಕಿವುಡ ಮತ್ತು ಮೂಗ ವಕೀಲರೊಬ್ಬರು ಸಂಕೇತ ಭಾಷೆಯ (ಇಂಟರ್’ಪ್ರಿಂಟರ್) ಸಹಾಯದಿಂದ ಸುಪ್ರೀಂ ಕೋರ್ಟ್ ನಲ್ಲಿ ವಾದಿಸಿದ್ದಾರೆ. ವಕೀಲರ ಹೆಸರು ಅಡ್ವೊಕೇಟ್ ಸಾರಾ ಸನ್ನಿ. ಸಾರಾಗೆ ಸುಪ್ರೀಂ ಕೋರ್ಟ್ ಕಲಾಪದಲ್ಲಿ ಕಾಣಿಸಿಕೊಳ್ಳುವುದು ಕನಸಿನ ಮಾತಿಗಿಂತ ಕಡಿಮೆಯಿಲ್ಲ. ಅವರು ಅಭ್ಯಾಸ ಮಾಡುವ ಮೂಕ ವಕೀಲರಾಗಿ ನೋಂದಾಯಿಸಲ್ಪಟ್ಟ ಭಾರತದ ಮೊದಲ ವಕೀಲರಾಗಿದ್ದಾರೆ. ಭಾರತದ ಮುಖ್ಯ ನ್ಯಾಯಾಧೀಶ ನ್ಯಾ। ಡಿ.ವೈ. ಚಂದ್ರಚೂಡ್‌ ಅವರಿದ್ದ ಪೀಠವು ವರ್ಚುವಲ್‌ ಆಗಿ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದ ವೇಳೆ ಸಾರಾ ಸನ್ನಿ ಎಂಬ ವಾಕ್

ಮೂಕ ವಕೀಲೆ ಸಾರಾ ಸನ್ನಿ ಹೊಸ ಇತಿಹಾಸ!! | ವರ್ಚುವಲ್ ವಿಚಾರಣೆಯಲ್ಲಿ ಸುಪ್ರೀಂ ಗಮನ ಸೆಳೆದ ಯುವ ವಕೀಲೆ! Read More »

ಶಾಲಾ ಬಸ್-ರಿಕ್ಷಾ ಡಿಕ್ಕಿ : ಐವರು ಸ್ಥಳದಲ್ಲೇ ಮೃತ್ಯು

ಕಾಸರಗೋಡು: ಶಾಲಾ ಬಸ್ ಹಾಗೂ ಆಟೋ ರಿಕ್ಷಾ ಪರಸ್ಪರ ಡಿಕ್ಕಿ ಹೊಡೆದುಕೊಂಡು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ ದಾರುಣ ಘಟನೆ ಸೆ.25 ರಂದು ಸಂಜೆ 5 ಗಂಟೆಗೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ‌ ಪೆರ್ಲ ಭಾಗದಿಂದ ಚಲಿಸುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಮತ್ತು ಮೊಗ್ರಲ್ ಪುತ್ತೂರು ಮೂಲದ ರಿಕ್ಷಾ ಅಪಘಾತಕ್ಕಿಡಾಗಿರುವುದಾಗಿ ತಿಳಿದು ಬಂದಿದೆ.  ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಡ್ರೈವರ್ ಸಹಿತ ಓರ್ವ ಪುರುಷ ಹಾಗೂ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಪೆರ್ಲ

ಶಾಲಾ ಬಸ್-ರಿಕ್ಷಾ ಡಿಕ್ಕಿ : ಐವರು ಸ್ಥಳದಲ್ಲೇ ಮೃತ್ಯು Read More »

ಗಾಂಧಿ ಜಯಂತಿಗೆ ಮೋದಿ ನೀಡಿದ ಕರೆ ಹೀಗಿದೆ ನೋಡಿ

ನವದೆಹಲಿ: ಮಹಾತ್ಮ ಗಾಂಧಿ ಜಯಂತಿಗೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 1ರಂದು ದೇಶಾದ್ಯಂತ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅಕ್ಟೋಬರ್ 1ರಂದು ಒಂದು ಗಂಟೆ ಸ್ವಚ್ಛತಾ ಕಾರ್ಯದಲ್ಲಿ ತೊಡಗುವ ಮೂಲಕ ಮಹಾತ್ಮ ಗಾಂಧೀಜಿ ಅವರಿಗೆ ಗೌರವ ಸಲ್ಲಿಸೋಣ ಎಂದು ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಕರೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಅಭಿಯಾನದ ಕುರಿತು ಮಾಹಿತಿ ಹಂಚಿಕೊಂಡಿದೆ. ಸ್ವಚ್ಛತಾ ಅಭಿಯಾನದ ಕುರಿತು

ಗಾಂಧಿ ಜಯಂತಿಗೆ ಮೋದಿ ನೀಡಿದ ಕರೆ ಹೀಗಿದೆ ನೋಡಿ Read More »

error: Content is protected !!
Scroll to Top