ದೇಶ

ಕೆಜಿ ಶುಲ್ಕ – ಪೋಷಕರಿಗೆ ಬರೆ!! | ವೈರಲ್ ಆಯ್ತು ಶುಲ್ಕ ವಿವರದ ಪೋಸ್ಟರ್: ನೆಟ್ಟಿಗರಿಂದ ಭಾರೀ ಟ್ರೋಲ್

ಇವತ್ತಿನ ಉನ್ನತ ಶಿಕ್ಷಣಕ್ಕಿಂತಲೂ ಕೆಜಿ ತರಗತಿಯ ಶುಲ್ಕವೇ ಪೋಷಕರಿಗೆ ಹೊರೆಯಾಗಿ ಪರಿಣಮಿಸಿದೆ. ಶುಲ್ಕವಷ್ಟೇ ಅಲ್ಲ, ಅದರ ಜೊತೆಗೆ ಜವಾಬ್ದಾರಿಯನ್ನು ಪೋಷಕರ ಮೇಲೆ ಹೇರುವ ಪ್ರಯತ್ನ ಮಾಡಲಾಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ಒಂದು ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಖಾಸಗಿ ಶಾಲೆಯೊಂದರ ಕೆಜಿ ತರಗತಿಯ ಶುಲ್ಕದ ವಿವರ ಅದಾಗಿದೆ. 2024-25ನೇ ಶೈಕ್ಷಣಿಕ ವರ್ಷದ ಜೂನಿಯರ್ ಕೆಜಿ ಬ್ಯಾಚ್‌ನ ಫೀಜ್ ಸ್ಟ್ರಕ್ಚರ್ ನೋಡಿ ಶಾಕ್ ಆದ ನೆಟ್ಟಿಗರು, ಅದರ ವಿರುದ್ಧ ಸಿಕ್ಕಾಪಟ್ಟೆ ಟ್ರೋಲ್ ಮಾಡಿದ್ದಾರೆ. ಶಾಲೆಗಳು ಪೋಷಕರನ್ನು […]

ಕೆಜಿ ಶುಲ್ಕ – ಪೋಷಕರಿಗೆ ಬರೆ!! | ವೈರಲ್ ಆಯ್ತು ಶುಲ್ಕ ವಿವರದ ಪೋಸ್ಟರ್: ನೆಟ್ಟಿಗರಿಂದ ಭಾರೀ ಟ್ರೋಲ್ Read More »

ಒಂದೇ ಮಂಟಪ, ಒಬ್ಬನೇ ವರ ಆದರೆ ವಧು ಮಾತ್ರ ನಾಲ್ವರು!

ಮದುವೆಯ ಪರಿಕಲ್ಪನೆಯನ್ನೇ ಬದಲಿಸುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಚರ್ಚೆಗೆ ಒಳಗಾಗುತ್ತಿದೆ. ವರನೊಬ್ಬ ಒಂದೇ ಬಾರಿಗೆ ನಾಲ್ಕು ಯುವತಿಯರನ್ನು ಮದುವೆಯಾಗಿರುವ ವಿಡಿಯೋ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ವರನು ಬಿಳಿ ಬಟ್ಟೆ ಮತ್ತು ಪೇಟವನ್ನು ಧರಿಸಿ ವೀಡಿಯೊದಲ್ಲಿ ಕಾಣಿಸಿಕೊಂಡಿದ್ದಾನೆ. ಅಲ್ಲದೇ ಸುಂದರವಾಗಿರುವ ನಾಲ್ವರು ಯುವತಿಯರನ್ನು (ವಧು) ಅಗ್ನಿಸಾಕ್ಷಿಯಾಗಿ ಮದುವೆಯಾಗುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಹೋಮಕುಂಡಕ್ಕೆ ಪ್ರದಕ್ಷಿಣೆ ಹಾಕಿದ ನಂತರ, ಈ ಹುಡುಗಿಯರು ತಮ್ಮ ಪತಿಯ ಪಾದಗಳಿಗೆ ನಮಸ್ಕರಿಸುವ ದೃಶ್ಯವೂ ವಿಡಿಯೋದಲ್ಲಿ ಸೆರೆಯಾಗಿದೆ. ಈ ಆಧುನಿಕ

ಒಂದೇ ಮಂಟಪ, ಒಬ್ಬನೇ ವರ ಆದರೆ ವಧು ಮಾತ್ರ ನಾಲ್ವರು! Read More »

ಮೋಹನ್ ಯಾದವ್‌ ಮಧ್ಯಪ್ರದೇಶ ಸಿಎಂ!

ಮಧ್ಯಪ್ರದೇಶ: ತೀವ್ರ ಕುತೂಹಲ ಕೆರಳಿಸಿದ್ದ ಮಧ್ಯಪ್ರದೇಶ ಸಿಎಂ ಆಯ್ಕೆ ಕಗ್ಗಂಟು ಕೊನೆಗೂ ಬಗೆಹರಿದಿದೆ. ಸಿಎಂ ರೇಸ್‌ನಲ್ಲಿದ್ದ ಎಲ್ಲರನ್ನೂ ಹಿಂದಿಕ್ಕಿ ಮೋಹನ್ ಯಾದವ್ ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ಬಿಜೆಪಿ ಕೇಂದ್ರ ನಾಯಕರ ನೇತೃತ್ವದಲ್ಲಿ ಮಧ್ಯಪ್ರದೇಶ ಬಿಜೆಪಿ ಶಾಸಕಾಂಗ ಸಭೆ ನಡೆಯಿತು. ಸಭೆಯಲ್ಲಿ ವೀಕ್ಷಕರಾಗಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಒಬಿಸಿ ಮೋರ್ಚಾ ಮುಖ್ಯಸ್ಥ ಕೆ. ಲಕ್ಷ್ಮಣ್ ಮತ್ತು ಕಾರ್ಯದರ್ಶಿ ಆಶಾ ಲಾಕ್ರ ಭಾಗವಹಿಸಿದ್ದರು. ಸಭೆಯಲ್ಲಿ ಮೋಹನ್ ಯಾದವ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಸಿಎಂ ರೇಸ್‌ನಲ್ಲಿ

ಮೋಹನ್ ಯಾದವ್‌ ಮಧ್ಯಪ್ರದೇಶ ಸಿಎಂ! Read More »

370 ವಿಧಿ: ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂ | ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದ ಸುಪ್ರೀಂ ಸಾಂವಿಧಾನಿಕ ಪೀಠ!

ನವದೆಹಲಿ: 370 ವಿಧಿ ರದ್ದುಗೊಳಿಸಿದ ಕೇಂದ್ರ ಸರಕಾರದ ಆದೇಶದ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಮಹತ್ವದ ತೀರ್ಪು ನೀಡಿದೆ. ಕೇಂದ್ರದ ನಿರ್ಧಾರ ಸರಿಯಾಗಿಯೇ ಇದೆ. ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ನಿರ್ಧಾರ ಸರಿ ಇದೆ. ಹಾಗಾಗಿ 2024ರ ಸೆಪ್ಟೆಂಬರ್ 30ರೊಳಗೆ ಚುನಾವಣೆ ನಡೆಸಬೇಕು. ಯಾವುದೇ ಕಾರಣಕ್ಕೂ ಚುನಾವಣೆ ವಿಳಂಬ ಮಾಡಬಾರದು. ಆದಷ್ಟು ಶೀಘ್ರದಲ್ಲಿ ರಾಜ್ಯದ ಸ್ಥಾನಮಾನ ಮರುಸ್ಥಾಪಿಸುವಂತೆ ಸುಪ್ರೀಂ ಸಾಂವಿಧಾನಿಕ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಕಾಶ್ಮೀರದ ಲಡಾಖ್ ಪ್ರತ್ಯೇಕಗೊಳಿಸಿದ ನರೇಂದ್ರ ಮೋದಿ

370 ವಿಧಿ: ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂ | ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದ ಸುಪ್ರೀಂ ಸಾಂವಿಧಾನಿಕ ಪೀಠ! Read More »

ಪಾಕ್ ಜೊತೆ ಸಂಪರ್ಕ: ನಾಲ್ವರ ಬಂಧನ!

ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿರುವ ನಾಲ್ಕು ಮಂದಿಯನ್ನು ಜಿಲ್ಲೆಯಲ್ಲಿ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪಾಕಿನ ಸೈಬರ್‌ ಅಪರಾಧ ಜಾಲದೊಂದಿಗೆ ನಂಟು ಹೊಂದಿದ್ದ ಬಂಧಿತರು ಜಾರ್ಖಂಡಿನ ರಾಜಧಾನಿ ರಾಂಚಿಯಿಂದ 105 ಕಿ.ಮೀ ದೂರದಲ್ಲಿರುವ ಕೊರ್ರಾ ಪ್ರದೇಶದಲ್ಲಿ ಸೆರೆಯಾಗಿದ್ದಾರೆ. ಈ ಗುಂಪು ಪಂಜಾಬ್‌ನಲ್ಲಿ ವ್ಯಕ್ತಿಯೊಬ್ಬರಿಗೆ ₹ 1.63 ಲಕ್ಷ ವಂಚಿಸಿತ್ತು. ಆದರೆ, ಅದಕ್ಕಾಗಿ ಬಳಸಿದ್ದ ಮೊಬೈಲ್‌ ಸಂಖ್ಯೆಯು ಜಾರ್ಖಂಡ್‌ ಪ್ರದೇಶದೊಂದಿಗೆ ಸಂಪರ್ಕ ಹೊಂದಿರುವುದು ಕಂಡುಬಂದಿತ್ತು. ಕಾರ್ಯಾಚರಣೆ ನಡೆಸಿದ ತನಿಖಾ ತಂಡ, ಬಂಧಿತರಿಂದ ಒಂದು ಕಾರು, ಎರಡು ದ್ವಿಚಕ್ರ ವಾಹನ, 10 ಮೊಬೈಲ್‌

ಪಾಕ್ ಜೊತೆ ಸಂಪರ್ಕ: ನಾಲ್ವರ ಬಂಧನ! Read More »

ಆರ್ಟಿಕಲ್ 370 ರದ್ದು: ಸುಪ್ರೀಂ ಮಹತ್ವದ ತೀರ್ಪಿಗೆ ಕ್ಷಣಗಣನೆ! | ಕಣಿವೆ ರಾಜ್ಯದಲ್ಲಿ ಬಿಗಿ ಭದ್ರತೆ

ಶ್ರೀನಗರ: ಆರ್ಟಿಕಲ್ 370 ರದ್ದಿನ ವಿರುದ್ಧ ಸುಪ್ರೀಂ ಕೋರ್ಟ್ ನಡೆಸಿದ ವಿಚಾರಣೆಯ ತೀರ್ಪು ಕೆಲವೇ ಕ್ಷಣಗಳಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. 2019ರಲ್ಲಿ ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದುಮಾಡುವ ಮೂಲಕ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿತ್ತು. ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದವು. ಹಲವು ಸುತ್ತಿನ ವಾದ-ವಿವಾದಗಳ ನಂತರ ಇಂದು ಸೋಮವಾರ ಸುಪ್ರೀಂ ಕೋರ್ಟ್ ಈ ವಿಷಯಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಲಿದೆ.  ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಈ ಹಿನ್ನೆಲೆಯಲ್ಲಿ

ಆರ್ಟಿಕಲ್ 370 ರದ್ದು: ಸುಪ್ರೀಂ ಮಹತ್ವದ ತೀರ್ಪಿಗೆ ಕ್ಷಣಗಣನೆ! | ಕಣಿವೆ ರಾಜ್ಯದಲ್ಲಿ ಬಿಗಿ ಭದ್ರತೆ Read More »

ಅಯೋಧ್ಯೆ ಶ್ರೀರಾಮ ದೇಗುಲದಲ್ಲಿ ಪೌರೋಹಿತ್ಯ ಸೇವೆಗೈಯಲಿದ್ದಾರೆ ಯುವ ಪುರೋಹಿತ ಮೋಹಿತ್ ಪಾಂಡೆ

ಅಯೋಧ್ಯೆ ಶೀಘ್ರದಲ್ಲೇ ಉದ್ಘಾಟನೆ ಆಗಲಿರುವ ಶ್ರೀ ರಾಮ ದೇಗುಲದಲ್ಲಿ ಶ್ರೀರಾಮನ ಪೌರೋಹಿತ್ಯ ಸೇವೆ ಮಾಡಲು ಆಯ್ಕೆಯಾದ ಯುವ ಪುರೋಹಿತ, ಸಕಲ ವೇದ ಪಾರಂಗತ ಭಾಗ್ಯವಂತ ಮೋಹಿತ್ ಪಾಂಡೆ ದೇಶದಾದ್ಯಂತ ಕರೆಯಲಾದ 3000 ಕ್ಕಿಂತಲೂ ಅಧಿಕ ಪುರೋಹಿತರ ಸಂದರ್ಶನದಲ್ಲಿ ಮತ್ತು ವೇಧಜ್ಞಾನ ಕಠಿಣ ಪರೀಕ್ಷೆಯಲ್ಲಿ ತನ್ನ ವೇದ ಮತ್ತು ಪೂಜಾ ವಿಧಿ, ವಿಧಾನಗಳ ಅಪಾರ ಪಾಂಡಿತ್ಯ ಮತ್ತು ಜ್ಞಾನದಿಂದ ಆಯ್ಕೆಯಾದ ಕೊನೆಯ 50 ಮಂದಿಯಲ್ಲಿ ಅಗ್ರಸ್ಥಾನಿಯಾಗಿ ಆಯ್ಕೆಯಾದವರು ಮೋಹಿತ್ ಪಾಂಡೆ. ಯುವ ಪುರೋಹಿತರಾಗಿದ್ದು, ಪ್ರಸ್ತುತ ಗಾಜಿಯಾಬಾದ್ ನ ಧುದೇಶ್ವರನಾಥ

ಅಯೋಧ್ಯೆ ಶ್ರೀರಾಮ ದೇಗುಲದಲ್ಲಿ ಪೌರೋಹಿತ್ಯ ಸೇವೆಗೈಯಲಿದ್ದಾರೆ ಯುವ ಪುರೋಹಿತ ಮೋಹಿತ್ ಪಾಂಡೆ Read More »

ಆಸ್ಪತ್ರೆಯ ಡಸ್ಟ್ ಬಿನ್ ನಲ್ಲಿ ನವಜಾತ ಶಿಶುವಿನ ಶವ ಪತ್ತೆ!

ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿನ ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿರುವ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದೆ. ಸಿಯಾನ್ ಆಸ್ಪತ್ರೆ ಎಂದೇ ಜನಪ್ರಿಯವಾಗಿರುವ ಲೋಕಮಾನ್ಯ ತಿಲಕ್ ಮುನ್ಸಿಪಲ್ ಜನರಲ್ ಆಸ್ಪತ್ರೆಯ ವಾಶ್ ರೂಂನ ಡಸ್ಟ್‌ಬಿನ್‌ನಲ್ಲಿ ನವಜಾತ ಶಿಶುವಿನ ಶವವೊಂದನ್ನು ಕಸ ಗುಡಿಸುವವರೊಬ್ಬರು ಪತ್ತೆ ಮಾಡಿದ್ದಾರೆ. ನಂತರ ಅದರ ಬಗ್ಗೆ ಕರ್ತವ್ಯ ನಿರತ ವೈದ್ಯರಿಗೆ ಮಾಹಿತಿ ನೀಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.  ವೈದ್ಯರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಅಪರಿಚಿತ ಮಹಿಳೆಯ ವಿರುದ್ಧ ಭಾರತೀಯ ದಂಡ

ಆಸ್ಪತ್ರೆಯ ಡಸ್ಟ್ ಬಿನ್ ನಲ್ಲಿ ನವಜಾತ ಶಿಶುವಿನ ಶವ ಪತ್ತೆ! Read More »

ಅಕ್ಬರುದ್ದಿನ್ ಓವೈಸಿ ತೆಲಂಗಾಣದ ಹಂಗಾಮಿ ಸ್ಪೀಕರ್: ವಿರೋಧ

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿ ತೆಲಂಗಾಣದಲ್ಲಿ ಸರ್ಕಾರ ರಚನೆ ಮಾಡಿದೆ. ಇದೀಗ ಎಐಎಂಐಎಂ ಶಾಸಕ ಅಕ್ಬರುದ್ದಿನ್ ಓವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ. ಈ ನಿರ್ಧಾರಕ್ಕೆ ಇದೀಗ ತೀವ್ರ ವಿರೋಧ ವ್ಯಕ್ತವಾಗಿದೆ. ಅಕ್ಬರುದ್ದಿನ್ ಓವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿದ ನಿರ್ಧಾರವನ್ನು ವಿರೋಧಿಸಿದ ಬಿಜೆಪಿ ಶಾಸಕರು, ಅವರಿಂದ ಪ್ರಮಾಣ ವಚನ ಸ್ವೀಕರಿಸಲೂ ನಿರಾಕರಿಸಿದ್ದಾರೆ. ಓವೈಸಿ ಅವರಿಂದ ಪಕ್ಷದ ಶಾಸಕರು ಪ್ರಮಾಣ ವಚನ ಸ್ವೀಕರಿಸುವುದಿಲ್ಲ ಎಂದು

ಅಕ್ಬರುದ್ದಿನ್ ಓವೈಸಿ ತೆಲಂಗಾಣದ ಹಂಗಾಮಿ ಸ್ಪೀಕರ್: ವಿರೋಧ Read More »

ಈರುಳ್ಳಿ ರಫ್ತಿನ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಈರುಳ್ಳಿ ರಫ್ತಿನ ಮೇಲೆ ಸಂಪೂರ್ಣ ನಿಷೇಧ ಹೇರಿದೆ. ಈ ಕ್ರಮ 31 ಮಾರ್ಚ್ 2024ರವರೆಗೆ ಜಾರಿಯಲ್ಲಿರಲಿದೆ. ಈರುಳ್ಳಿ, ಟೊಮೇಟೊ ಬೆಲೆ ಏರಿಕೆಯಿಂದ ಥಾಲಿ ಬೆಲೆ ಏರಿಕೆಯಾಗಿದೆ ಎಂಬ ಸುದ್ದಿ ದಿನದ ಹಿಂದೆಯಷ್ಟೇ ಬಂದಿತ್ತು. ಕಳೆದ ಅಕ್ಟೋಬರ್‌ನಲ್ಲಿ ಈರುಳ್ಳಿ ಶತಮಾನದ ಗಡಿ ದಾಟಿದಾಗ ಸರ್ಕಾರ ಈರುಳ್ಳಿ ರಫ್ತಿಗೆ ಕನಿಷ್ಠ ಬೆಲೆ ನಿಗದಿ ಮಾಡಿತ್ತು. ಬೆಲೆಗಳನ್ನು ಎಷ್ಟು ನಿಗದಿಪಡಿಸಲಾಗಿದೆ ಎಂದರೆ ಆ ಬೆಲೆಗೆ ಪ್ರಪಂಚದಾದ್ಯಂತ ಭಾರತೀಯ ಈರುಳ್ಳಿಯನ್ನು ಖರೀದಿಸಲು ಯಾರು ಮುಂದೆ ಬಂದಿಲ್ಲ. ಹೀಗಾಗಿ ಇದರಿಂದಾಗಿ ಈರುಳ್ಳಿ

ಈರುಳ್ಳಿ ರಫ್ತಿನ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ Read More »

error: Content is protected !!
Scroll to Top