ದೇಶ

ಹೆಚ್ಚುತ್ತಿದೆ ಭಾರತ – ಪಾಕ್ ಪ್ರೇಮ ಪ್ರಸಂಗ!! | ಕೋಲ್ಕತಾ ನಿವಾಸಿಯನ್ನು ವರಿಸಲು ಬಂದ ಕರಾಚಿಯ ಜವೇರಿಯಾ!

ಚಂಡೀಗಢ: ಭಾರತ-ಪಾಕಿಸ್ಥಾನಗಳ ನಡುವಿನ ಪ್ರೇಮಪ್ರಸಂಗಗಳು ಹೆಚ್ಚುತ್ತಿವೆ. ಕೆಲವು ತಿಂಗಳ ಹಿಂದೆ ಪಾಕಿಸ್ಥಾನಿ ಸೀಮಾ ಹೈದರ್‌ ಭಾರತಕ್ಕೆ ಆಗಮಿಸಿ, ಸಚಿನ್‌ ಮೀನಾರನ್ನು ವಿವಾಹವಾಗಿದ್ದಾರೆ. ಅದರ ಬೆನ್ನಲ್ಲೇ ರಾಜಸ್ಥಾನದ ಅಂಜು ಎಂಬಾಕೆ ಪಾಕಿಸ್ಥಾನಕ್ಕೆ ತೆರಳಿದ್ದರು. ಇದೀಗ ಕರಾಚಿಯ ಜವೇರಿಯಾ ಖಾನುಮ್‌ ವಾಘಾ-ಅಟ್ಟಾರಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಮಂಗಳವಾರ ಭಾರತಕ್ಕೆ ಆಗಮಿಸಿದ್ದಾರೆ. ಅವರ ಉದ್ದೇಶ ಕೋಲ್ಕತಾದಲ್ಲಿರುವ ತಮ್ಮ ಪ್ರಿಯಕರ ಸಮೀರ್‌ ಖಾನ್‌ರನ್ನು ವಿವಾಹವಾಗುವುದು. ಜವೇರಿಯಾರನ್ನು ಅಮೃತಸರ ಜಿಲ್ಲೆಯ ಅಟ್ಟಾರಿಯಲ್ಲಿ ವರನ ಕಡೆಯವರು ಆತ್ಮೀಯವಾಗಿ ಬರಮಾಡಿಕೊಂಡರು. ಮುಂದಿನ ವರ್ಷ ಜನವರಿಯಲ್ಲಿ ಸಮೀರ್‌ ಖಾನ್‌ರೊಂದಿಗೆ […]

ಹೆಚ್ಚುತ್ತಿದೆ ಭಾರತ – ಪಾಕ್ ಪ್ರೇಮ ಪ್ರಸಂಗ!! | ಕೋಲ್ಕತಾ ನಿವಾಸಿಯನ್ನು ವರಿಸಲು ಬಂದ ಕರಾಚಿಯ ಜವೇರಿಯಾ! Read More »

INDIA ಮೈತ್ರಿಕೂಟ ಸಭೆ ಮುಂದೂಡಿದ ಕಾಂಗ್ರೆಸ್!

ಪ್ರಮುಖ ಪ್ರತಿ ಪಕ್ಷದ ನಾಯಕರ ಅಲಭ್ಯತೆ ಹಿನ್ನಲೆಯಲ್ಲಿ ನಾಳೆ ಅಂದರೆ ಬುಧವಾರ ನಡೆಯಬೇಕಿದ್ದ INDIA ಮಿತ್ರಕೂಟದ ಸಭೆಯನ್ನು ಮುಂದೂಡಲಾಗಿದೆ. ಪಂಚರಾಜ್ಯಗಳ ಚುನಾವಣೆ ಹಿನ್ನಲೆ INDIA ಒಕ್ಕೂಟದ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಫಲಿತಾಂಶ ಪ್ರಕಟವಾದ ಬಳಿಕ ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದರು‌. ಹೀಗಾಗಿ ಬುಧವಾರ ದೆಹಲಿಯಲ್ಲಿ INDIA ಮೈತ್ರಿಕೂಟದ ಸಭೆ ಕರೆಯಲಾಗಿತ್ತು. ಆದರೆ ಮಿಚಾಂಗ್‌ ಚಂಡಮಾರುತದಿಂದ ತಮಿಳುನಾಡಿನಲ್ಲಿ ಭಾರಿ ಮಳೆ ಮತ್ತು ಮಳೆ ಸಂಬಂಧಿತ ಅವಘಡಗಳು ಸಂಭವಿಸಿರುವುದರಿಂದ

INDIA ಮೈತ್ರಿಕೂಟ ಸಭೆ ಮುಂದೂಡಿದ ಕಾಂಗ್ರೆಸ್! Read More »

ಮಿಝೋರಾಂ: ಸೋಲು ಕಂಡ ಮುಖ್ಯಮಂತ್ರಿ, ಬಹುಮತ ಗೆದ್ದ ಝಡ್.ಪಿ.ಎಂ.

ಮಿಝೋರಾಂ: ಮಿಝೋರಾಂನಲ್ಲಿ ZPM ಪಕ್ಷ ನೂತನ ಸರ್ಕಾರವನ್ನು ರಚಿಸಲು ಸಿದ್ಧವಾಗಿದೆ. ZPM ಪಕ್ಷವು 40 ಸ್ಥಾನಗಳಲ್ಲಿ 22 ಸ್ಥಾನಗಳನ್ನು ಗೆದ್ದಿದೆ ಎಂದು ಭಾರತೀಯ ಚುನಾವಣಾ ಆಯೋಗವು ತಿಳಿಸಿದೆ. ಇನ್ನೂ ಐದು ಸ್ಥಾನಗಳಲ್ಲಿ ZPM ಮುನ್ನಡೆಯನ್ನು ಸಾಧಿಸಿದೆ. ಅಲ್ಲದೆ, ಪೂರ್ವ ಐಜ್ವಾಲ್ ನಲ್ಲಿ ಪ್ರತಿಸ್ಪರ್ಧಿ ZPM ಅಭ್ಯರ್ಥಿ ಎದುರು ಮಿಝೋರಾಂ ಮುಖ್ಯಮಂತ್ರಿ ಸೋತಿದ್ದು, ZPM ಗೆ ಭಾರೀ ಮೈಲಿಗಲ್ಲನ್ನು ಸೃಷ್ಟಿಸಿದೆ. ಮುಖ್ಯಮಂತ್ರಿ ಝೊರಾಂಥಾಂಗ ವಿರುದ್ಧ ZPM ಅಭ್ಯರ್ಥಿ ಲಾಲತನಸಂಗ 2,101 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ZPMನ ಮುಖ್ಯಮಂತ್ರಿ

ಮಿಝೋರಾಂ: ಸೋಲು ಕಂಡ ಮುಖ್ಯಮಂತ್ರಿ, ಬಹುಮತ ಗೆದ್ದ ಝಡ್.ಪಿ.ಎಂ. Read More »

ಮಧ್ಯಪ್ರದೇಶ: ಸಂದೇಶ ರವಾನಿಸಿರುವ ಬಿಜೆಪಿ!

ಭೋಪಾಲ್: ಮಧ್ಯಪ್ರದೇಶದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಫಗ್ಗನ್ ಸಿಂಗ್ ಕುಲಸ್ತೆ ಮತ್ತು ಪ್ರಹ್ಲಾದ್ ಪಟೇಲ್ ಮತ್ತು ಮಧ್ಯಪ್ರದೇಶದಿಂದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ ವರ್ಗಿಯಾ ಸೇರಿದಂತೆ ಏಳು ಲೋಕಸಭಾ ಸದಸ್ಯರನ್ನು ಕಣಕ್ಕಿಳಿಸಿತ್ತು. ಇದರಿಂದಾಗಿ ಸಿಎಂ ಹುದ್ದೆಗೆ ಆಯ್ಕೆಗಳನ್ನು ತೆರೆದಿಟ್ಟಿದ್ದು, ಅಧಿಕಾರವನ್ನು ಮತ್ತೆ ಉಳಿಸಿಕೊಂಡರೆ ಚೌಹಾಣ್ ಸ್ವಯಂಚಾಲಿತ ಆಯ್ಕೆಯಾಗದಿರಬಹುದು ಎಂಬ ಸಂದೇಶವನ್ನು ಬಿಜೆಪಿ ಕಳುಹಿಸಿದೆ. ಮಧ್ಯಪ್ರದೇಶದ ಒಟ್ಟು 230 ಸ್ಥಾನಗಳ ಪೈಕಿ ಬಿಜೆಪಿ 163 ಸ್ಥಾನಗಳನ್ನು ಗೆದ್ದುಕೊಂಡಿದೆ.

ಮಧ್ಯಪ್ರದೇಶ: ಸಂದೇಶ ರವಾನಿಸಿರುವ ಬಿಜೆಪಿ! Read More »

ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ, ಪೈಲಟ್ ಗಳ ದುರಂತ ಸಾವು!

ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ವಿಮಾನವು ತೆಲಂಗಾಣದಲ್ಲಿ ಪತನವಾಗಿದ್ದು ವಿಮಾನದಲ್ಲಿದ್ದ ಪೈಲಟ್’ಗಳು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ತೆಲಂಗಾಣದ ತೂಪ್ರಾನ್‌ನ ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ಸೋಮವಾರ ಬೆಳಗ್ಗೆ ಪಿಲಾಟಸ್ ವಿಮಾನ ಪತನಗೊಂಡಿದೆ. ದುರಂತದ ವೇಳೆ ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬುದು ತಕ್ಷಣಕ್ಕೆ ಖಚಿತವಾಗಿಲ್ಲ. ಅಪಘಾತದ ನಂತರ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ವಿಮಾನವು ಸುಟ್ಟು ಬೂದಿಯಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಐಎಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಪೈಲಟ್ ಗಳು ಸಾವನ್ನಪ್ಪಿದ್ದಾರೆ. ಪೈಲಟ್‌ಗಳಲ್ಲಿ ಒಬ್ಬ ಬೋಧಕ

ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ, ಪೈಲಟ್ ಗಳ ದುರಂತ ಸಾವು! Read More »

ರಾಜಸ್ಥಾನ: ಮುಖ್ಯಮಂತ್ರಿ ಹುದ್ದೆ ರೇಸಿನಲ್ಲಿ ವಸುಂಧರಾ ರಾಜೇ ಸಹಿತ 6 ಆಕಾಂಕ್ಷಿಗಳು

ರಾಜಸ್ಥಾನ ವಿಧಾನಸಭೆಯಲ್ಲಿ ಬಿಜೆಪಿಯ ವಿಜಯದ ಬೆನ್ನಲ್ಲೇ ಅಲ್ಲಿ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಆರಂಭಗೊಂಡಿದೆ. ಬಿಜೆಪಿ ರಾಷ್ಟ್ರೀಯ ನಾಯಕತ್ವ ಹೊಸ ಮುಖ್ಯಮಂತ್ರಿ ಹೆಸರನ್ನು ಶೀಘ್ರ ಘೋಷಿಸುವ ಸಾಧ್ಯತೆಯಿದೆ. ಸಿಎಂ ಹುದ್ದೆಗೆ ಪ್ರಸಕ್ತ ಐದು ಪ್ರಮುಖ ಹೆಸರುಗಳು ಕೇಳಿ ಬಂದಿವೆ. ಒಟ್ಟು 199 ಸ್ಥಾನಗಳ ಪೈಕಿ 101 ಮ್ಯಾಜಿಕ್ ನಂಬರ್ ಆಗಿತ್ತು. ಇದರಲ್ಲಿ ಬಿಜೆಪಿ 115 ಸ್ಥಾನ, ಕಾಂಗ್ರೆಸ್ 68 ಸ್ಥಾನ, ಬಹುಜನ್ ಸಮಾಜ ಪಾರ್ಟಿ 2 ಸ್ಥಾನ, ಇತರೆ 13 ಸ್ಥಾನಗಳನ್ನು ಪಡೆದುಕೊಂಡಿದೆ. 2018ರ ಚುನಾವಣೆಯಲ್ಲಿ ಬಿಜೆಪಿ 73

ರಾಜಸ್ಥಾನ: ಮುಖ್ಯಮಂತ್ರಿ ಹುದ್ದೆ ರೇಸಿನಲ್ಲಿ ವಸುಂಧರಾ ರಾಜೇ ಸಹಿತ 6 ಆಕಾಂಕ್ಷಿಗಳು Read More »

ಅತಂತ್ರ ಮುನ್ಸೂಚನೆಯಲ್ಲೂ ಮಿಜೋರಾಂ ಬಿಜೆಪಿ ಮುಖ್ಯಸ್ಥನ ವಿಶ್ವಾಸದ ಮಾತು!

ಮಿಜೋರಾಂನ 40 ವಿಧಾನಸಭಾ ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು, ಮುಂದಿನ ಸರ್ಕಾರದ ಭಾಗವಾಗಿ ತಮ್ಮ ಪಕ್ಷ ಇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವನ್‌ಲಾಲ್‌ಮುಕಾ ಸೋಮವಾರ ಹೇಳಿದ್ದಾರೆ. ತಮ್ಮ ಪಕ್ಷ ಕನಿಷ್ಠ ಮೂರು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ. ನಾವು ಮೂರು ಸ್ಥಾನ ಗೆಲ್ಲುವುದು ಖಚಿತ, ಐದಕ್ಕಿಂತ ಹೆಚ್ಚು ಸ್ಥಾನಗಳ ನಿರೀಕ್ಷೆಯಲ್ಲಿದ್ದೇವೆ. ಫಲಿತಾಂಶಕ್ಕಾಗಿ ಕಾಯುತ್ತಿದ್ದು, ಸದ್ಯದಲ್ಲೇ ರಚನೆಯಾಗಲಿರುವ ಹೊಸ ಸರ್ಕಾರದಲ್ಲಿ ಬಿಜೆಪಿ ಭಾಗವಹಿಸಲಿದೆ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಕಳೆದ 2018ರಲ್ಲಿ ನಡೆದ ವಿಧಾನಸಭಾ

ಅತಂತ್ರ ಮುನ್ಸೂಚನೆಯಲ್ಲೂ ಮಿಜೋರಾಂ ಬಿಜೆಪಿ ಮುಖ್ಯಸ್ಥನ ವಿಶ್ವಾಸದ ಮಾತು! Read More »

ತೆಲಂಗಾಣ ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್ | 119ರಲ್ಲಿ 64 ಸ್ಥಾನ ಗೆದ್ದು, ಸರ್ಕಾರ ರಚನೆಗೆ ಹಕ್ಕು ಮಂಡನೆ

ಹೈದರಾಬಾದ್: ತೆಲಂಗಾಣದ 119 ಸ್ಥಾನಗಳ ಪೈಕಿ 64 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ರೇವಂತ್ ರೆಡ್ಡಿ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವಿವಾರ ರಾತ್ರಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಶನಿವಾರ, ಶಿವಕುಮಾರ್ ಅವರನ್ನು ತೆಲಂಗಾಣ ರಾಜ್ಯ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರನ್ನಾಗಿ ನೇಮಿಸಲಾಗಿತ್ತು. ಮತ ಎಣಿಕೆಗೆ ಮುಂಚಿತವಾಗಿ ತನ್ನ ಶಾಸಕರನ್ನು ಒಟ್ಟಾಗಿ ಇರಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿತ್ತು. ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರನ್ನು ಭೇಟಿ ಮಾಡಿದ

ತೆಲಂಗಾಣ ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್ | 119ರಲ್ಲಿ 64 ಸ್ಥಾನ ಗೆದ್ದು, ಸರ್ಕಾರ ರಚನೆಗೆ ಹಕ್ಕು ಮಂಡನೆ Read More »

ಕೈಲಾಸದೊಂದಿಗೆ ಸಹಕಾರ ಒಪ್ಪಂದ: ಸರ್ಕಾರಿ ಅಧಿಕಾರಿ ವಜಾ!!

ನಿತ್ಯಾನಂದನ ಕಾಲ್ಪನಿಕ ದೇಶ ಕೈಲಾಸದ ಪ್ರತಿನಿಧಿಗಳೊಂದಿಗೆ ‘ಸಹಕಾರ ಒಡಂಬಡಿಕೆ’ಗೆ ಸಹಿ ಹಾಕಿದ್ದ ಪೆರುಗ್ವೆ ಸರ್ಕಾರಿ ಅಧಿಕಾರಿಯನ್ನು ವಜಾಗೊಳಿಸಲಾಗಿದೆ. ಅಸ್ತಿತ್ವದಲ್ಲೇ ಇರದ ನಿತ್ಯಾನಂದನ ದೇಶದ ಜತೆ ಒಡಂಬಡಿಕೆಗೆ ಸಹಿ ಹಾಕಿದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ  ಪೆರುಗ್ವೆಯಲ್ಲಿ ದೊಡ್ಡ ಹಗರಣವನ್ನು ಹುಟ್ಟುಹಾಕಿತ್ತು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಸರ್ಕಾರ ಅಪಹಾಸ್ಯಕ್ಕೆ ಗುರಿಯಾಗಿತ್ತು. ಆದರೆ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸದ ಪ್ರತಿನಿಧಿಗಳು ಅಂತರರಾಷ್ಟ್ರೀಯ ನಾಯಕರನ್ನು ವಂಚಿಸಿದ್ದು ಇದೇ ಮೊದಲು ಅಲ್ಲ. ಈ ವರ್ಷದ ಆರಂಭದಲ್ಲಿ, ಅವರು ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಸಮಿತಿ ಸಭೆಯಲ್ಲಿ

ಕೈಲಾಸದೊಂದಿಗೆ ಸಹಕಾರ ಒಪ್ಪಂದ: ಸರ್ಕಾರಿ ಅಧಿಕಾರಿ ವಜಾ!! Read More »

ಡಿ.4ಕ್ಕೆ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ

ನವದೆಹಲಿ: ಕೇಂದ್ರ ಸರ್ಕಾರ ಶನಿವಾರ ಸರ್ವಪಕ್ಷ ಸಭೆ ಕರೆದಿದೆ. ನಾಡಿದ್ದು ಸೋಮವಾರ ಡಿಸೆಂಬರ್ 4ರಂದು ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದು ಅದಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆಯಲಾಗಿದೆ. ಚಳಿಗಾಲ ಅಧಿವೇಶನ ಡಿಸೆಂಬರ್ 22ಕ್ಕೆ ಮುಕ್ತಾಯವಾಗಲಿದೆ. ನಾಳೆ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಹೀಗಾಗಿ ಇಂದು ಸರ್ವಪಕ್ಷ ಸಭೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸರ್ವಪಕ್ಷ ಸಭೆ ಕರೆದಿದ್ದಾರೆ.  ಸಭೆಯಲ್ಲಿ ಕೇಂದ್ರ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಪ್ರಸ್ತುತ, 37 ಮಸೂದೆಗಳು ಸಂಸತ್ತಿನಲ್ಲಿ ಬಾಕಿ

ಡಿ.4ಕ್ಕೆ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ Read More »

error: Content is protected !!
Scroll to Top