ದೇಶ

ಕೇರಳ ನಟಿ ಅಪರ್ಣಾ ನಾಯರ್ ಆತ್ಮಹತ್ಯೆ

ತಿರುವನಂತಪುರ : ಖ್ಯಾತ ಧಾರವಾಹಿ, ಚನಲಚಿತ್ರ ನಟಿ ಅಪರ್ಣಾ ಪಿ. ನಾಯರ್ (31) ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರ ಸಂಜೆ ತಮ್ಮ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿರುವ ಅವರ್ಣಾ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ. ಈ ಮೂಲಕ ನಟಿ ಅರ್ಪಣಾ ನಾಯರ್ ನಿಧನ ಚಿತ್ರರಂಗಕ್ಕೆ ದೊಡ್ಡ ಆಘಾತ ಉಂಟು ಮಾಡಿದೆ. ಆತ್ಮಹತ್ಯೆಗೆ ಕಾರಣಗಳು ಇನ್ನೂ ತಿಳಿದು ಬಂದಿಲ್ಲ. ಗುರುವಾರ […]

ಕೇರಳ ನಟಿ ಅಪರ್ಣಾ ನಾಯರ್ ಆತ್ಮಹತ್ಯೆ Read More »

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ | ಶಂಕಿತ ಉಗ್ರರ ನಡುವೆ ಗುಂಡಿನ ದಾಳಿ

ಮಣಿಪುರ : ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಥಮನ್‌ಪೋಕ್ಷಿಯಲ್ಲಿ ಭದ್ರತಾ ಪಡೆಗಳು ಹಾಗೂ ಶಂಕಿತ ಕುಕಿ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದೆ. ಒಟ್ಟಾರೆ 12 ಗಂಟೆಗಳು ದಾಳಿ ನಡೆದಿದ್ದು, 8ಮಂದಿ ಮೃತಪಟ್ಟಿದ್ದಾರೆ. 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರು ಮಂದಿ ಸ್ಥಳೀಯ ಶಂಕಿತ ಕುಕಿ ಭಯೋತ್ಪಾದಕರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಗಾಯಗೊಂಡ 18 ಮಂದಿಯಲ್ಲಿ ಭದ್ರತಾ ಪಡೆಗಳ ಸಿಬ್ಬಂದಿಯೂ ಇದ್ದಾರೆ. ಗುಂಡಿನ ದಾಳಿ ನಂತರ ಬಿಷ್ಣುಪುರ ಹಾಗೂ ಕಾಂಗ್ ಭಾಯ್ ಪ್ರದೇಶದಲ್ಲಿ ಬಾಂಬ್ ಸ್ಫೋಟವೂ ಆಗಿದೆ. ಇದರಿಂದಾಗಿ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ | ಶಂಕಿತ ಉಗ್ರರ ನಡುವೆ ಗುಂಡಿನ ದಾಳಿ Read More »

ಚಂದ್ರನ ಮೇಲ್ಮೈಯಲ್ಲಿ ಪ್ರಗ್ಯಾನ್ ರೋವರ್ ಸಂಚಾರ ನಡೆಸುವ ವೀಡಿಯೋ ಹಂಚಿಕೊಂಡ ಇಸ್ರೋ

ನವದೆಹಲಿ: ಭಾರತದ ಬಾಹ್ಯಾಕಾಶ ಸಂಸ್ಥೆಯು ಚಂದ್ರನ ಮೇಲ್ಮೈಯಲ್ಲಿ ಪ್ರಗ್ಯಾನ್‌ ರೋವರ್‌ ಸಂಚಾರ ನಡೆಸುವ ವೀಡಿಯೊವನ್ನು ಹಂಚಿಕೊಂಡಿದೆ. ಚಂದ್ರನ ಮೇಲೈಯಲ್ಲಿ ಅನೇಕ ಕುಳಿಗಳು ಮತ್ತು ಬಂಡೆಗಳನ್ನು ತಪ್ಪಿಸಿ ಚಲಿಸುವ ವಿಡಿಯೋವನ್ನು ಇಸ್ರೋ ಹಂಚಿಕೊಂಡಿದ್ದು, ಬೆಂಗಳೂರಿನ ಸೆಂಟರ್‌ನಿಂದ ದೂರದಿಂದಲೇ ರೋವರ್ ಚಾಲನೆ ನಿಯಂತ್ರಿಸಲಾಗುತ್ತಿದೆ. ಮುಂದಿನ ವಾರದೊಳಗೆ (ಭೂಮಿಯ 14ದಿನಗಳು) ತನ್ನ ಪ್ರಯೋಗಳನ್ನು ಪೂರ್ಣಗೊಳಿಸುವ ಪ್ರಕ್ರಿಯೆಯಲ್ಲಿ ಪ್ರಗ್ಯಾನ್ ರೋವರ್ ತೊಡಗಿದೆ. ಸುರಕ್ಷಿತ ಮಾರ್ಗದ ಹುಡುಕಾಟದಲ್ಲಿ ರೋವರ್ ಅನ್ನು ತಿರುಗಿಸಲಾಗಿದೆ. ತಿರುಗುವಿಕೆಯನ್ನು ಲ್ಯಾಂಡ‌ ಇಮೇಜರ್ ಕ್ಯಾಮೆರಾ ಸೆರೆಹಿಡಿಯಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ

ಚಂದ್ರನ ಮೇಲ್ಮೈಯಲ್ಲಿ ಪ್ರಗ್ಯಾನ್ ರೋವರ್ ಸಂಚಾರ ನಡೆಸುವ ವೀಡಿಯೋ ಹಂಚಿಕೊಂಡ ಇಸ್ರೋ Read More »

ವಿಸ್ತಾರ ವಿಮಾನದಲ್ಲಿ 14 ತಿಂಗಳ ಮಗುವಿನ ಹೃದಯ ಸ್ತಂಭನ | ತುರ್ತು ಭೂಸ್ಪರ್ಶ ಮಾಡಿದ ಪೈಲೆಟ್‍ಗಳು

ಮಹಾರಾಷ್ಟ್ರ: 14 ತಿಂಗಳ ಮಗುವೊಂದು ವಿಸ್ತಾರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹಠಾತ್ತನೆ ಹೃದಯ ನಿಂತು ಬಿಟ್ಟ ಪರಿಣಾಮ ವಿಮಾನ ಪೈಲೆಟ್ ಗಳು ಮಾರ್ಗ ಬದಲಿಸಿ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನಿಂದ ನವದೆಹಲಿಗೆ ತೆರಳಬೇಕಿದ್ದ ವಿಸ್ತಾರಾ ವಿಮಾನ. 14 ತಿಂಗಳ ಮಗು ಹಾಗೂ ಎಲ್ಲಾ ಪ್ರಯಾಣಿಕರು ಆಕಾಶದೆತ್ತರ ಹಾರುತ್ತ ಪ್ರಯಾಣಿಸುತ್ತಿರಬೇಕಾದರೆ ಆ ಕಂದನ ಹೃದಯ ಹಠಾತ್ ನಿಂತೇ ಬಿಟ್ಟಿತು. ಮೊದಲೇ ಹೃದಯ ಸಮಸ್ಯೆ ಇದ್ದುದರಿಂದ ಮಗುವಿನ ಸ್ಥಿತಿ ತೀರ ಹದಗೆಟ್ಟಿತು. ವಿಮಾನದಲ್ಲಿದ್ದ ವೈದ್ಯರು ತಕ್ಷಣವೇ

ವಿಸ್ತಾರ ವಿಮಾನದಲ್ಲಿ 14 ತಿಂಗಳ ಮಗುವಿನ ಹೃದಯ ಸ್ತಂಭನ | ತುರ್ತು ಭೂಸ್ಪರ್ಶ ಮಾಡಿದ ಪೈಲೆಟ್‍ಗಳು Read More »

ನೀಟ್ ಆಕಾಂಕ್ಷಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ

ರಾಜಸ್ಥಾನ: ರಾಜಸ್ಥಾನದ ಕೋಟಾದಲ್ಲಿ ಮತ್ತೆ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ದೇಶದ ಮಹತ್ವಾಕಾಂಕ್ಷಿ ಕೋರ್ಸ್‌ಗಳಾದ ಎಂಜಿನಿಯರ್‌, ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಮತ್ತು ನಾಗರಿಕ ಸೇವೆಗಳ ಪರೀಕ್ಷೆಗಳ ತರಬೇತಿಯ ಕೇಂದ್ರವಾದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ  ಹೆಚ್ಚಳ ಆತಂಕಕ್ಕೆ ಕಾರಣವಾಗಿದೆ. ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನೀಟ್‌ ಪರೀಕ್ಷೆಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದ ಅವಿಷ್ಕರ್ ಶುಭಾಂಗಿ ಮತ್ತು ಬಿಹಾರದ ವಿದ್ಯಾರ್ಥಿ ಆದರ್ಶ್ ಆತ್ಮಹತ್ಯೆ ಮಾಡಿಕೊಂಡವರು. ಅವಿಷ್ಕರ್ ಶುಭಾಂಗಿ ಮಹಾರಾಷ್ಟ್ರ ಮೂಲದವರಾಗಿದ್ದು, ಕೋಟಾದಲ್ಲಿ ತನ್ನ ಅಜ್ಜಿಯೊಂದಿಗೆ ನೆಲೆಸಿದ್ದರು. ಪರೀಕ್ಷೆ ಬರೆದ ಬಳಿಕ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ

ನೀಟ್ ಆಕಾಂಕ್ಷಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ Read More »

ಕರ್ನಾಟಕ 223 ಶಾಸಕರ ಒಟ್ಟು ಆಸ್ತಿ ಎಷ್ಟು ಗೊತ್ತೇ ? ಮಿಜೋರಂ, ಸಿಕ್ಕಿಂನ ಬಜೆಟ್‍ಗೆ ಸಮ ! | ಇಲ್ಲಿದೆ ಡಿಟೈಲ್ಸ್

ದೆಹಲಿ: ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗಿರುವ 223 ಶಾಸಕರ ಒಟ್ಟು ಆಸ್ತಿ 14,359 ಕೋಟಿ ರೂಪಾಯಿ. ಈ ಹಣ ಮಿಜೋರಂ ಹಾಗೂ ಸಿಕ್ಕಿಂನ 2023-24 ರ ಬಜೆಟ್ ಗೆ ಸಮ ಎಂದು ವರದಿಯೊಂದು ಹೇಳಿದೆ. ದೇಶದ 4001 ಶಾಸಕರ ಒಟ್ಟು ಆಸ್ತಿ 54,545 ಕೋಟಿ ರೂಪಾಯಿ. ಇದು ಮಿಜೋರಂ, ನಾಗಲ್ಯಾಂಡ್ ಹಾಗೂ ಸಿಕ್ಕಿಂ ರಾಜ್ಯಗಳ ಬಜೆಟ್ ಮೊತ್ತವಾದ 49,103 ಕೋಟಿ ರೂ. ಗಿಂತ ಅಧಿಕ ಎಂದು ಅಸೋಸಿಯೇಶನ್ ಫಾರ್ ಡೆಮೊಕ್ರಟಿಕ್ ರೀಸರ್ಚ್‍ (ಎಡಿಆರ್) ಹಾಗೂ ನ್ಯಾಷನಲ್ ಎಲೆಕ್ಷನ್ ವಾಚ್‍

ಕರ್ನಾಟಕ 223 ಶಾಸಕರ ಒಟ್ಟು ಆಸ್ತಿ ಎಷ್ಟು ಗೊತ್ತೇ ? ಮಿಜೋರಂ, ಸಿಕ್ಕಿಂನ ಬಜೆಟ್‍ಗೆ ಸಮ ! | ಇಲ್ಲಿದೆ ಡಿಟೈಲ್ಸ್ Read More »

ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಆದ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್

ಇಸ್ರೋ : ಭಾರತದ ಮಹತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗುವ ಮೂಲಕ ಯಶಸ್ವಿಯಾಗಿದೆ. ಈ ಕುರಿತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಘೋಷಿಸಿದೆ. ಬುಧವಾರ ಸಂಜೆ ಸುಮಾರು 6.04 ರ ಹೊತ್ತಿಗೆ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡ್ ಆಗಿದೆ. ಚಂದ್ರಯಾನ-3 ಯೋಜನೆ ಯಶಸ್ಸು ಕುರಿತು ಪ್ರಧಾನಿ ಮೋದಿ ಮಾತನಾಡಿ, ಇಂತಹಾ ಐತಿಹಾಸಿಕ ಕ್ಷಣಗಳನ್ನು ನೋಡಿದಾಗ ತುಂಬಾ ಹೆಮ್ಮೆಯಾಗುತ್ತಿದೆ. ಇದು ನವ ಭಾರತದ ಉದಯ ಎಂದು ಕೊಂಡಾಡಿದರು.

ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಆದ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ Read More »

ಚಂದ್ರಯಾನ-3  ವಿಕ್ರಮ ಲ್ಯಾಂಡರ್ ಚಂದ್ರನ ನೆಲಕ್ಕಿಳಿದು ಇತಿಹಾಸ ಸೃಷ್ಟಿಸಲು ಕ್ಷಣಗಣನೆ | ಇಂದು ಸಂಜೆ 6.04 ಕ್ಕೆ ಚಂದ್ರನ ಮೇಲೆ ಕಾಲಿಡಲಿರುವ ಲ್ಯಾಂಡರ್

ಇಸ್ರೋ: ಇಂದು ಭಾರತದ ಐತಿಹಾಸಿಕ ಚಂದ್ರಚುಂಬನಕ್ಕೆ ಕ್ಷಣಗಣನೆ : ವಿಶ್ವದ ಕಣ್ಣು ಭಾರತದತ್ತ. ಆ ದಿನ ಬಂದೇ ಬಿಟ್ಟಿದೆ. ಚಂದ್ರಯಾನ-3 ಯೋಜನೆಯ ಭಾಗವಾಗಿರುವ ವಿಕ್ರಂ ಲ್ಯಾಂಡರ್‌ ಚಂದ್ರನ ನೆಲಕ್ಕಿಳಿದು ಇತಿಹಾಸ ಬರೆಯಲು ಸನ್ನದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸಂಜೆ 6.04 ನಿಮಿಷಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರತ ಕಾಲೂರಲಿದೆ. ಆ ದಿನ ಬಂದೇ ಬಿಟ್ಟಿದೆ. ಚಂದ್ರಯಾನ-3 ಯೋಜನೆಯ ಭಾಗವಾಗಿರುವ ವಿಕ್ರಂ ಲ್ಯಾಂಡರ್‌ ಚಂದ್ರನ ನೆಲಕ್ಕಿಳಿದು ಇತಿಹಾಸ ಬರೆಯಲು ಸನ್ನದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸಂಜೆ 6.04 ನಿಮಿಷಕ್ಕೆ

ಚಂದ್ರಯಾನ-3  ವಿಕ್ರಮ ಲ್ಯಾಂಡರ್ ಚಂದ್ರನ ನೆಲಕ್ಕಿಳಿದು ಇತಿಹಾಸ ಸೃಷ್ಟಿಸಲು ಕ್ಷಣಗಣನೆ | ಇಂದು ಸಂಜೆ 6.04 ಕ್ಕೆ ಚಂದ್ರನ ಮೇಲೆ ಕಾಲಿಡಲಿರುವ ಲ್ಯಾಂಡರ್ Read More »

ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪ್ರಾರ್ಥನೆ | ಸುಳ್ಯ ಅಜ್ಜಾವರದ ಅಯ್ಯಪ್ಪ ಭಕ್ತರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಪ್ರಾರ್ಥನೆ

ಸುಳ್ಯ: ಸೌಜನ್ಯ ಕೊಲೆ ನೈಜ ಆರೋಪಿಗಳು ಆದಷ್ಟು ಬೇಗ ಪತ್ತೆಯಾಗಿ ಸೂಕ್ತ ಶಿಕ್ಷೆಯಾಗುವಂತೆ ಅಜ್ಜಾವರ ಗ್ರಾಮದ ಶಿವಪ್ರಕಾಶ್ ಗುರುಸ್ವಾಮಿ ಅವರ ನೇತೃತ್ವದಲ್ಲಿ ತೆರಳಿದ ಅಯ್ಯಪ್ಪ ಭಕ್ತರು ಶಬರಿಮಲೆಯಲ್ಲಿ ಇಂದು ಮುಂಜಾನೆ ಪ್ರಾರ್ಥನೆ ಮಾಡಿದರು. ಈ ಪ್ರಕರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಕೆಟ್ಟ ಹೆಸರುಗಳು ಕೇಳಿ ಬರುತ್ತಿದ್ದು, ಅಯ್ಯಪ್ಪನ ಕೃಪಾಕಟಾಕ್ಷದಿಂದ ಮುಂದಿನ ಸಂಕ್ರಮಣದೊಳಗೆ ದುಷ್ಕೃತ್ಯ ಎಸಗಿದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಅಯ್ಯಪ್ಪ ಸನ್ನಿಧಾನದಲ್ಲಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಸಮಾಜ ಸೇವಕ ಡಾ.ರವಿ ಕಕ್ಕೆಪದವು ಮತ್ತಿತರರು ಉಪಸ್ಥಿತರಿದ್ದರು.

ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪ್ರಾರ್ಥನೆ | ಸುಳ್ಯ ಅಜ್ಜಾವರದ ಅಯ್ಯಪ್ಪ ಭಕ್ತರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಪ್ರಾರ್ಥನೆ Read More »

ದೊಡ್ಡಪೇಟೆ ಠಾಣೆಯಲ್ಲಿ ಒಂದು ಗಂಟೆಗಳ ಕಾಲ ಪೊಲೀಸ್ ಇನ್ ಸ್ಪೆಕ್ಟರ್ ಹುದ್ದೆ ಅಲಂಕರಿಸಿದ 8 ರ ಪೋರ

ಶಿವಮೊಗ್ಗ: ದೊಡ್ಡಪೇಟೆ ಠಾಣೆಯಲ್ಲಿ ಒಂದು ಗಂಟೆಗಳ ಕಾಲ 8 ವರ್ಷದ ಬಾಲಕ PI ಹುದ್ದೆಯನ್ನು ಅಲಂಕರಿಸುವ ಮೂಲಕ ದೊಡ್ಡ ಪೇಟೆ ಪೊಲೀಸ್ ಠಾಣೆಯ ಅತೀ ಕಿರಿಯ ಪೊಲೀಸ್ ಅಧಿಕಾರಿ ಎಂಬ ಕೀರ್ತಿಗೆ ಅಜಾನ್ ಖಾನ್ ಪಾತ್ರರಾಗಿದ್ದಾನೆ. ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿರುವ 8 ವರ್ಷದ ಪೋರನಿಗೆ ಪೊಲೀಸ್ ಅಧಿಕಾರಿ ಆಗಬೇಕೆಂಬ ಆಸೆ ,ಆದರೆ ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿರುವ ಆಜಾನ್ ಖಾನ್ ನ ತಂದೆ ಸ್ಥಳೀಯ ಪೊಲೀಸ್ ಅಧಿಕಾರಿಗೆ ತನ್ನ ಮಗನ ಆಸೆಯನ್ನು ತಿಳಿಯಪಡಿಸಿದ್ದು ತಂದೆಯ ಮನವಿಗೆ

ದೊಡ್ಡಪೇಟೆ ಠಾಣೆಯಲ್ಲಿ ಒಂದು ಗಂಟೆಗಳ ಕಾಲ ಪೊಲೀಸ್ ಇನ್ ಸ್ಪೆಕ್ಟರ್ ಹುದ್ದೆ ಅಲಂಕರಿಸಿದ 8 ರ ಪೋರ Read More »

error: Content is protected !!
Scroll to Top