ದೇಶ

ಹಡಗಿಗೆ ಮಹಿಳಾ ಕಮಾಂಡಿಗ್‌ ಆಫೀಸರ್‌!!

ಭಾರತೀಯ ನೌಕಾಪಡೆ ಮೊದಲ ಬಾರಿಗೆ ಸೇನೆಯ ಹಡಗೊಂದಕ್ಕೆ ಮಹಿಳಾ ಕಮಾಂಡಿಂಗ್‌ ಆಫೀಸರ್‌ ಅವರನ್ನು ನೇಮಿಸಿದೆ. ಎಲ್ಲ ಜವಾಬ್ದಾರಿಗಳು, ಶ್ರೇಣಿಗಳಲ್ಲೂ ಮಹಿಳೆಯರಿಗೆ ಸಮಾನ ಆದ್ಯತೆ ಎಂಬ ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಸ್ತುತ ನೌಕಾಪಡೆಯಲ್ಲಿ ಮಹಿಳಾ ಅಗ್ನಿವೀರರ ಸಂಖ್ಯೆ 1000 ದಾಟಿದೆ. ಈ ಸಂಖ್ಯೆ ನಮ್ಮ ಉದ್ದೇಶವನ್ನು ಸ್ಪಷ್ಟವಾಗಿಸುತ್ತದೆ ಎಂದು ನೌಕಾಪಡೆ ಮುಖ್ಯಸ್ಥ ಅಡ್ಮಿರಲ್‌ ಆರ್‌. ಹರಿಕುಮಾರ್‌ ಹೇಳಿದ್ದಾರೆ. ನಮ್ಮ ಹಡಗುಗಳು, ಸಬ್‌ಮರಿನ್‌ಗಳು, ಯುದ್ಧವಿಮಾನಗಳು ವ್ಯೂಹಾತ್ಮಕವಾಗಿ ಮಹತ್ವದ್ದಾಗಿರುವ ಸ್ಥಳಗಳಲ್ಲಿ ಉತ್ಸಾಹದಿಂದ ಕಾರ್ಯಾಚರಣೆ ನಡೆಸುತ್ತಿವೆ. ಮುಖ್ಯವಾಗಿ ಚೀನಾದ ಹಸ್ತಕ್ಷೇಪ ಹೆಚ್ಚಾಗಿರುವ […]

ಹಡಗಿಗೆ ಮಹಿಳಾ ಕಮಾಂಡಿಗ್‌ ಆಫೀಸರ್‌!! Read More »

ಸ್ಪೈಡರ್​ಮ್ಯಾನ್​ನಂತೆ ಎಸ್ಕೇಪ್ ಆದ ಚಿನ್ನ ಕಳ್ಳ​: ಖದೀಮನ ಚಾಕಚಕ್ಯತೆ ಕಂಡು ದಂಗಾದ ಪೊಲೀಸರು!!

ಆಭರಣದ ಅಂಗಡಿಯೊಂದಕ್ಕೆ ನುಗ್ಗಿ ಬರೋಬ್ಬರಿ 3 ಕೆಜಿ ತೂಕದ ಚಿನ್ನಾಭರಣಗಳನ್ನು ಕದ್ದು ಪರಾರಿ ಆಗಿದ್ದ ಖದೀಮನನ್ನು ಹಿಡಿಯಲು ಹೋದ ಪೊಲೀಸರು,​ ಆತನ ಸ್ಪೈಡರ್​ಮ್ಯಾನ್ ಸಾಹಸ ಕಂಡು ಒಂದು ಕ್ಷಣ ದಂಗಾದ ಪ್ರಸಂಗ ಜರುಗಿದೆ. ಕೊಯಮತ್ತೂರಿನ ಆಭರಣದಂಗಡಿಗೆ ನಸುಕಿನ ಜಾವದಲ್ಲಿ ಗೋಡೆಯನ್ನು ಮೊದಲು ಒಡೆಯುವ ಖದೀಮ ಕಿರಿದಾದ ಕಿಂಡಿಯನ್ನು ಮಾಡಿ, ಅದರೊಳಗೆ ನುಸುಳಿ, ಮೂರನೇ ಮಹಡಿಗೆ ಸರಸರನೇ ಏರಿ, ​ ಆಭರಣದ ಅಂಗಡಿಗೆ ನುಗ್ಗುತ್ತಾನೆ. ಇದಾದ ಬಳಿಕ ತನ್ನ ಬಟ್ಟೆಯನ್ನು ಬದಲಾಯಿಸಿಕೊಂಡು, ಎಚ್ಚರಿಕೆಯಿಂದ ಸುಮಾರು 150 ಸವರನ್​ ಅಂದರೆ,

ಸ್ಪೈಡರ್​ಮ್ಯಾನ್​ನಂತೆ ಎಸ್ಕೇಪ್ ಆದ ಚಿನ್ನ ಕಳ್ಳ​: ಖದೀಮನ ಚಾಕಚಕ್ಯತೆ ಕಂಡು ದಂಗಾದ ಪೊಲೀಸರು!! Read More »

ವಿಷಕಾರಿ ಹಣ್ಣು ಸೇವಿಸಿದ 11 ವಿದ್ಯಾರ್ಥಿಗಳು ಅಸ್ವಸ್ಥ!!

ವಿಷಯುಕ್ತ ಹಣ್ಣು ತಿಂದು 11 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಒಡಿಶಾದ ಮಲ್ಕಂಗಾರಿ ಜಿಲ್ಲೆಯ ಜಾರಪಳ್ಳಿ ಪಂಚಾಯಿತಿ ವ್ಯಾಪ್ತಿಯ ತಾಳಿಮೇಟ ಗ್ರಾಮದಲ್ಲಿ ನಡೆದಿದೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಮಕ್ಕಳು ಗ್ರಾಮದ ಹೊರವಲಯದಲ್ಲಿದ್ದ ಗಿಡವೊಂದರ ವಿಷಯುಕ್ತ ಹಣ್ಣುಗಳನ್ನು ಸೇವನೆ ಮಾಡಿದ್ದಾರೆ. ಹಣ್ಣು ತಿಂದ ಕೆಲವೇ ನಿಮಿಷಗಳಲ್ಲಿ ವಾಂತಿ ಮಾಡಿಕೊಂಡಿದ್ದಾರೆ. ಅಲ್ಲದೆ, ಅತೀವ ಹೊಟ್ಟೆನೋವು ಕಾಣಿಸಿಕೊಂಡು, ಅಸ್ವಸ್ಥರಾಗಿದ್ದಾರೆ. ಕೂಡಲೇ ಸ್ಥಳೀಯರು ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಬಳಿಕ ಇದೀಗ ಮಕ್ಕಳ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಷಕಾರಿ ಹಣ್ಣು ಸೇವಿಸಿದ 11 ವಿದ್ಯಾರ್ಥಿಗಳು ಅಸ್ವಸ್ಥ!! Read More »

ಏರ್ ಇಂಡಿಯಾ ಎಕ್ಸ್ ಪ್ರೆಸ್‍ ಹಾರಾಟ ಸಮಯ ಬದಲಾವಣೆ

ಮಂಗಳೂರು-ಬೆಂಗಳೂರು ನಡುವಿನ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟ ಸಮಯವನ್ನು ನ.30 ರಿಂದ ಡಿ. 8ರ ವರೆಗೆ ಬದಲಾಯಿಸಲಾಗಿದೆ. ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40 ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ಫ್ಲೈಟ್ 678 ಆಗಿ ಬೆಂಗಳೂರಿಗೆ ಹೊರಡಲಿದೆ. ಕಣ್ಣೂರು-ಬೆಂಗಳೂರು-ಮಂಗಳೂರು-ಬೆಂಗಳೂರು-ತಿರುವನಂತಪುರಂ ವಲಯದಲ್ಲಿ ಕಾರ್ಯನಿರ್ವಹಿಸುವ ವಿಮಾನ ಐಎಕ್ಸ್ 1795 ಬೆಂಗಳೂರಿನಿಂದ ರಾತ್ರಿ 7.20 ಕ್ಕೆ ಬಂದು ಸಂಜೆ 7.50ಕ್ಕೆ ಫ್ಲೈಟ್ ಐಎಕ್ಸ್ 792 ಆಗಿ ಬೆಂಗಳೂರಿಗೆ ಹೊರಡಲಿದೆ (ಪ್ರಸ್ತುತ ಸಂಜೆ 7.35 ಮತ್ತು ರಾತ್ರಿ 8.15ಕ್ಕೆ ನಿರ್ಗಮನ).

ಏರ್ ಇಂಡಿಯಾ ಎಕ್ಸ್ ಪ್ರೆಸ್‍ ಹಾರಾಟ ಸಮಯ ಬದಲಾವಣೆ Read More »

ಬೇಕಾಬಿಟ್ಟಿ ಸಿಮ್ ಖರೀದಿ ನಿಯಂತ್ರಣಕ್ಕೆ ಕೇಂದ್ರ ಸರಕಾರ ಯಾವ ನಿಯಮಗಳನ್ನು ತರಲಿದೆ | ಇಲ್ಲಿದೆ ಡಿಟೈಲ್ಸ್

ಬೇಕಾಬಿಟ್ಟಿ ಸಿಮ್ ಖರೀದಿಯನ್ನು ನಿಯಂತ್ರಿಸಲು ಕೇಂದ್ರ ಸರಕಾರ ಕಠಿಣ ನಿಯಮಗಳನ್ನು ಜ್ಯಾರಿಗೆ ತರುವ ಮಹತ್ವದ ನಿರ್ಧಾರ ಕೈಗೊಂಡಿದೆ. ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ದೇಶ ವಿರೋಧಿ ಕೃತ್ಯಗಳಿಗೆ ಕಡಿವಾಣ ಹಾಕುವ ಜತೆಗೆ ಕಾನೂನು ಬಾಹಿರ ಚಟುವಟಿಕೆಗಳಿಗೆ ದಾರಿ ಮಾಡಿಕೊಡುವ ಡೀಲರ್‍ ಗಳಿಗೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಸಿಮ್ ಖರೀದಿಯಲ್ಲಿ ಕಠಿಣ ನಿಯಮಗಳನ್ನು ತರಲಿದೆ. ಡಿ.1ರಿಂದ ಸಿಮ್ ಮಾರಾಟದ ನಿಯಮಗಳಲ್ಲಿ ಬದಲಾವಣೆಯಾಗಲಿದ್ದು, ಸಿಮ್‌ಗಳನ್ನು ಮಾರಾಟ ಮಾಡುವ ಎಲ್ಲ ಡೀಲರ್‌ಗಳು ಪರಿಶೀಲನೆಯನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ. ಅಷ್ಟೇ ಅಲ್ಲದೆ ಡೀಲರ್‌ಗಳು ಸಿಮ್‌ಗಳನ್ನು

ಬೇಕಾಬಿಟ್ಟಿ ಸಿಮ್ ಖರೀದಿ ನಿಯಂತ್ರಣಕ್ಕೆ ಕೇಂದ್ರ ಸರಕಾರ ಯಾವ ನಿಯಮಗಳನ್ನು ತರಲಿದೆ | ಇಲ್ಲಿದೆ ಡಿಟೈಲ್ಸ್ Read More »

ಅಪಹರಣವಾಗಿದ್ದ ಬಾಲಕಿ 20 ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ!

ತಿರುವನಂತಪುರಂ: ಸೋಮವಾರ ಸಂಜೆ ನಾಪತ್ತೆಯಾಗಿದ್ದ ಕೇರಳದ ಆರು ವರ್ಷದ ಬಾಲಕಿ ಕೊಲ್ಲಂನ ಆಶ್ರಮ ಮೈದಾನದಲ್ಲಿ ಪತ್ತೆಯಾಗಿದ್ದಾಳೆ. 20 ಗಂಟೆಗಳ ಹುಡುಕಾಟದ ಬಳಿಕ ಕೇರಳ ಪೊಲೀಸರು ಬಾಲಕಿಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸೋಮವಾರ ಸಂಜೆ 6 ವರ್ಷದ ಬಾಲಕಿ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಸಂಜೆ ನಾಲ್ಕು ಗಂಟೆಯ ಹೊತ್ತಿಗೆ ಟ್ಯೂಷನ್‌ಗೆ ತೆರಳುತ್ತಿದ್ದಾಗ ಅಪಹರಣಕಾರರು ಬಾಲಕಿಯನ್ನು ಅಪಹರಣ ಮಾಡಿದ್ದರು. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತ ಪೊಲೀಸರು ರಾಜ್ಯಾದ್ಯಂತ ನಾಕಾ ಬಂದಿ ನಡೆಸಿ ಬಾಲಕಿಯ ಪತ್ತೆ ಕಾರ್ಯಾಚರಣೆಗೆ ಮುಂದಾಗಿದ್ದರು. ಅಲ್ಲದೆ

ಅಪಹರಣವಾಗಿದ್ದ ಬಾಲಕಿ 20 ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ! Read More »

ಗುಂಡು ಹಾರಿಸಿದ ತಂಡವನ್ನು ಬೆದರಿಸಿ ಓಡಿಸಿದ ಮಹಿಳೆ; ವೈರಲ್ ವೀಡಿಯೋ ಇಲ್ಲಿದೆ |  ಮಹಿಳೆಯ ಧೈರ್ಯಕ್ಕೆ ವ್ಯಾಪಕ ಶ್ಲಾಘನೆ

ನಡುರಸ್ತೆಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರಿಗೆ ಬೈಕಿನಲ್ಲಿ ಬಂದ ನಾಲ್ವರ ತಂಡ ಗುಂಡು ಹಾರಿಸಿದ್ದು, ಇದೇ ಸಂದರ್ಭ ಪಕ್ಕದ ಮನೆಯ ಮಹಿಳೆಯೋರ್ವರು ಕೋಲು ಹಿಡಿದು ಓಡಿಸಿದ ಘಟನೆ ನಡೆದಿದೆ. ಹರ್ಯಾಣದ ಭಿವಾನಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಇದರ ವೀಡಿಯೋ ಇದೀಗ ವೈರಲ್ ಆಗಿದೆ. ನವಂಬರ್ 27ರಂದು ಘಟನೆ ನಡೆದಿದೆ. ಘಟನೆಯ ವೀಡಿಯೋ ಇದೀಗ ಸಕ್ಕತ್ ವೈರಲ್ ಆಗಿದೆ. ಮಹಿಳೆಯ ಧೈರ್ಯಕ್ಕೆ ಶ್ಲಾಘನೆಯೂ ವ್ಯಕ್ತವಾಗಿದೆ. 58 ಸೆಕೆಂಡಿನ ಈ ವೀಡಿಯೋದಲ್ಲಿ, ವ್ಯಕ್ತಿಯೋರ್ವರು ಮನೆ ಹೊರಗಡೆ ರಸ್ತೆ ಬದಿಯಲ್ಲಿ ನಿಂತಿರುವ ದೃಶ್ಯ ಕಾಣುತ್ತದೆ.

ಗುಂಡು ಹಾರಿಸಿದ ತಂಡವನ್ನು ಬೆದರಿಸಿ ಓಡಿಸಿದ ಮಹಿಳೆ; ವೈರಲ್ ವೀಡಿಯೋ ಇಲ್ಲಿದೆ |  ಮಹಿಳೆಯ ಧೈರ್ಯಕ್ಕೆ ವ್ಯಾಪಕ ಶ್ಲಾಘನೆ Read More »

ಎಂಡೋ ಪಟ್ಟಿಯಿಂದ ಎಂಡೋ ಸಂತ್ರಸ್ತರನ್ನೇ ಹೊರಗಿಟ್ಟ ಸರಕಾರ: ಆಕ್ರೋಶ

ಕಾಸರಗೋಡು: ಎಂಡೋಸಲ್ಫಾನ್‌ ಸಿಂಪಡಣೆಯಿಂದ ಬಾಧಿತರಾಗಿರುವವರ ಪಟ್ಟಿಯಿಂದ 2011ರ ಅಕ್ಟೋಬರ್‌ ಬಳಿಕ ಜನಿಸಿದ ಮಕ್ಕಳನ್ನು ಹೊರಗೆ ಇಟ್ಟಿರುವ ಕೇರಳ ಸರಕಾರದ ತೀರ್ಮಾನಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಕಾಸರಗೋಡು ಜಿಲ್ಲೆಯ ಹಲವು ಭಾಗಗಳಲ್ಲಿ ಇನ್ನೂ ಎಂಡೋಸಲ್ಫಾನ್‌ನ ಅಂಶಗಳು ಪೂರ್ಣವಾಗಿ ನಿವಾರಣೆ ಆಗಿಲ್ಲ. ಇದರ ಹೊರತಾಗಿಯೂ ಕೂಡ ಕೇರಳ ಸರಕಾರ ಕೈಗೊಂಡ ತೀರ್ಮಾನ ಸರಿಯಲ್ಲ ಎಂದು ವಿಜ್ಞಾನಿಗಳು, ವೈದ್ಯ ಸಮುದಾಯ ಹೇಳಿದೆ. 2011ರ ಬಳಿಕ ಜನಿಸಿದ ಹಲವಾರು ಮಕ್ಕಳಲ್ಲಿ ಔಷಧದ ದುಷ್ಪರಿಣಾಮ ಕಂಡುಬಂದಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಎಂಡೋಸಲ್ಫಾನ್‌

ಎಂಡೋ ಪಟ್ಟಿಯಿಂದ ಎಂಡೋ ಸಂತ್ರಸ್ತರನ್ನೇ ಹೊರಗಿಟ್ಟ ಸರಕಾರ: ಆಕ್ರೋಶ Read More »

6 ವರ್ಷದ ಬಾಲಕಿ ಅಪಹರಣ; ಶೀಘ್ರ ಪತ್ತೆಗೆ ಕೇರಳ ಸಿಎಂ ಆದೇಶ

ತಿರುವನಂತಪುರಂ: ದಕ್ಷಿಣ ಕೇರಳದ ಪೂಯಪ್ಪಲ್ಲಿಯಿಂದ ಸೋಮವಾರ 6 ವರ್ಷದ ಬಾಲಕಿಯ ಅಪಹರಣದ ಬಗ್ಗೆ ಹೆಚ್ಚುತ್ತಿರುವ ಆತಂಕದ ನಡುವೆ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತನಿಖೆಯನ್ನು ತೀವ್ರಗೊಳಿಸುವಂತೆ ರಾಜ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಅಪಹರಣದ ಕುರಿತು ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ ನಿರ್ದೇಶನ ನೀಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಪೊಲೀಸರು ಅಪಹರಣವಾದ ಬಾಲಕಿಯ ಪತ್ತೆಗೆ ಪೊಲೀಸರು ತಂಡ ರಚನೆ

6 ವರ್ಷದ ಬಾಲಕಿ ಅಪಹರಣ; ಶೀಘ್ರ ಪತ್ತೆಗೆ ಕೇರಳ ಸಿಎಂ ಆದೇಶ Read More »

ಹಳಿ ದಾಟುತ್ತಿದ್ದ ಆನೆಗಳಿಗೆ ಗೂಡ್ಸ್ ರೈಲು ಡಿಕ್ಕಿ: ಮರಿ ಸೇರಿ 3 ಆನೆಗಳ ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಕ್ಸಾ ಹುಲಿ ಸಂರಕ್ಷಿತ ಅರಣ್ಯದಲ್ಲಿ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ 3 ಆನೆಗಳು ಸಾವನ್ನಪ್ಪಿವೆ. ರಾಜಭಟ್ಖಾವಾ ಮತ್ತು ಕಲ್ಚಿನಿ ರೈಲು ನಿಲ್ದಾಣಗಳ ನಡುವಿನ ಶಿಖಾರಿ ಗೇಟ್ ಬಳಿ ಬೆಳಗ್ಗೆ 7 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಒಂದು ಮರಿ ಮತ್ತು ಎರಡು ವಯಸ್ಕ ಆನೆಗಳು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ. ಅಲಿಪುರ್ದೌರ್ ಜಿಲ್ಲೆಯ ಹುಲಿ ಸಂರಕ್ಷಿತ ಪ್ರದೇಶದ ಪಶ್ಚಿಮ ರಾಜಭಟ್ಖಾವಾ ಶ್ರೇಣಿಯಲ್ಲಿ ಸಂಭವಿಸಿದ ಈ ಘಟನೆಯು ಭಾರತದಲ್ಲಿ ರೈಲು

ಹಳಿ ದಾಟುತ್ತಿದ್ದ ಆನೆಗಳಿಗೆ ಗೂಡ್ಸ್ ರೈಲು ಡಿಕ್ಕಿ: ಮರಿ ಸೇರಿ 3 ಆನೆಗಳ ಸಾವು Read More »

error: Content is protected !!
Scroll to Top