ದೇಶ

ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾದ ಸೋನಿಯಾ – ಸೊರೊಸ್‌ ಕಂಪನಿ ನಂಟಿನ ಆರೋಪ

ಭಾರತದ ವಿರುದ್ಧ ಪಿತೂರಿ ಮಾಡುತ್ತಿರುವ ವಿಚಾರದ ಬಗ್ಗೆ ಚರ್ಚೆ ನಡೆಸಲು ಬಿಜೆಪಿ ಪಟ್ಟು ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಉದ್ಯಮಿ ಗೌತಮ್‌ ಅದಾನಿ ನಂಟಿನ ಆರೋಪ ಮಾಡುತ್ತಿರುವ ಕಾಂಗ್ರೆಸ್‌ಗೆ ಬಿಜೆಪಿ ಸೋನಿಯಾ ಗಾಂಧಿ ಮತ್ತು ಅಮೆರಿಕದ ವಿವಾದಾತ್ಮಕ ಉದ್ಯಮಿ ಜಾರ್ಜ್ ಸೊರೊಸ್ ಒಡೆತನದ ಸಂಸ್ಥೆಗಳ ಜೊತೆಗಿರುವ ನಂಟನ್ನು ಬಹಿರಂಗಗೊಳಿಸಿ ತಿರುಗೇಟು ನೀಡಿದ್ದು, ಈ ವಿಚಾರ ಈಗ ರಾಷ್ಟ್ರ ರಾಜಕಾರಣದಲ್ಲಿ ಬಹಳ ಚರ್ಚೆಗೀಡಾಗುತ್ತಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ನಂಟು ಬಹಳ ಗಂಭೀರ ವಿಚಾರ ಎಂದು […]

ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾದ ಸೋನಿಯಾ – ಸೊರೊಸ್‌ ಕಂಪನಿ ನಂಟಿನ ಆರೋಪ Read More »

ಅಡಿಲೇಡ್‌ ಟೆಸ್ಟ್‌ : ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು

ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾಕ್ಕೆ 19 ರನ್‌ ಗುರಿ, ಮೂರೇ ದಿನಕ್ಕೆ ಆಟ ಫಿನಿಷ್‌ ಅಡಿಲೇಡ್​​: ಇಲ್ಲಿನ ಓವಲ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​​ನಲ್ಲಿ ಭಾರತ ತಂಡವು ಕೇವಲ 175 ರನ್​​ಗಳಿಗೆ ಆಲೌಟ್ ಆಗಿದೆ. ಈ ಆಲೌಟ್​​ನೊಂದಿಗೆ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್​​ನಲ್ಲಿ ಕೇವಲ 19 ರನ್​ಗಳ ಸುಲಭ ಗುರಿ ಪಡೆದುಕೊಂಡು, 10 ವಿಕೆಟ್‌ಗಳ ಅಮೋಘ ಗೆಲುವು ಸಾಧಿಸಿದೆ.ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್

ಅಡಿಲೇಡ್‌ ಟೆಸ್ಟ್‌ : ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು Read More »

ಪ್ರಧಾನಿ ಅಂಗಳ ತಲುಪಿದ ಮುಡಾ ಹಗರಣ

ಸಿಬಿಐ ತನಿಖೆಗೆ ಆಗ್ರಹಿಸಿ ನರೇಂದ್ರ ಮೋದಿಯವರಿಗೆ ಪತ್ರ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಉರುಳಾಗಿ ಪರಣಮಿಸಿರುವ ಮುಡಾ ಹಗರಣ ಈಗ ಪ್ರಧಾನಿ ಅಂಗಳ ತಲುಪಿದೆ. ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸದಿರುವುದು ಜಾರಿ ನಿರ್ದೇಶನಾಲಯದ ತನಿಖೆಯಿಂದ ಬಯಲಾದ ಬೆನ್ನಿಗೆ ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಕೀಲರೊಬ್ಬರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ. ವಕೀಲ ರವಿಕುಮಾರ್ ಎಂಬವರು ಪ್ರಧಾನ ಮಂತ್ರಿಗೆ ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ. 296 ಪುಟಗಳ ದಾಖಲೆ ಸಮೇತ ಪತ್ರ ರವಾನಿಸಲಾಗಿದೆ. ಈಗಾಗಲೇ ಪ್ರಧಾನಿಗಳ ಕಚೇರಿಗೆ ಪತ್ರ

ಪ್ರಧಾನಿ ಅಂಗಳ ತಲುಪಿದ ಮುಡಾ ಹಗರಣ Read More »

’ಪಿಎಂಎವೈ-ಯು’ ಯೋಜನೆ ಅನುಷ್ಟಾನಕ್ಕೆ ಇನ್ನೂ ಒಪ್ಪಂದ ಮಾಡಿಕೊಳ್ಳದ ಸಿದ್ದರಾಮಯ್ಯ ಸರ್ಕಾರ

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಯಿಂದ ಕಾಂಗ್ರೆಸ್ ಬಣ್ಣ ಬಯಲು ಮಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿ ವಾಸಿಸುವ ಬಡವರು, ಆಶ್ರಯರಹಿತರಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್‌ ಯೋಜನೆ-ನಗರ(ಪಿಎಂಎವೈ-ಯು) 2.0 ಸ್ಕೀಮ್‌ ಅನುಷ್ಠಾನಕ್ಕೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಇಲ್ಲಿವರೆಗೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ. ಆ ಮೂಲಕ ನಗರ ಪ್ರದೇಶದ ಬಡವರಿಗೆ ಸ್ವಂತ ಸೂರು ಅಥವಾ ಮನೆ ಸೌಲಭ್ಯ ಒದಗಿಸುವ ಈ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಿರಾಸಕ್ತಿ

’ಪಿಎಂಎವೈ-ಯು’ ಯೋಜನೆ ಅನುಷ್ಟಾನಕ್ಕೆ ಇನ್ನೂ ಒಪ್ಪಂದ ಮಾಡಿಕೊಳ್ಳದ ಸಿದ್ದರಾಮಯ್ಯ ಸರ್ಕಾರ Read More »

ಕಾಂಗ್ರೆಸ್‌ ಸದಸ್ಯ ಅಭಿಷೇಕ್‌ ಸಿಂಘ್ವಿ ಸೀಟಿನಡಿ ನೋಟಿನ ಬಂಡಲ್‌ಗಳು ಪತ್ತೆ

ರಾಜ್ಯಸಭೆ ಆಸನದಡಿ ಸಿಕ್ಕಿದ ರಾಶಿ ರಾಶಿ ನೋಟುಗಳು ಯಾರಿಗೆ ಸೇರಿದ್ದು? ಹೊಸದಿಲ್ಲಿ : ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಹಾಗೂ ಖ್ಯಾತ ವಕೀಲ ಅಭಿಷೇಕ್‌ ಮನು ಸಿಂಘ್ವಿ ಅವರ ಆಸನದ ಕೆಳಗೆ ಕಂತೆ ಕಂತೆ ನೋಟು ಪತ್ತೆಯಾಗಿರುವುದು ಅಧಿವೇಶನದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದೆ. ಸಂಸತ್‌ನ ಚಳಿಗಾಲದ ಅಧಿವೇಶನ ಪ್ರಸ್ತುತ ನಡೆಯುತ್ತಿದ್ದು, ರಾಜ್ಯಸಭೆ ಸಭಾಪತಿ ಜಗದೀಪ್‌ ಧನ್‌ಕರ್‌ ಅವರು ರಾಜ್ಯಸಭೆಗೆ ಅಭಿಷೇಕ್‌ ಆಸನದ ಕೆಳಗೆ ನೋಟಿನ ಬಂಡಲ್‌ಗಳು ಸಿಕ್ಕಿವೆ ಎಂದು ಸದನಕ್ಕೆ ತಿಳಿಸಿದರು.ಇದಕ್ಕೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ

ಕಾಂಗ್ರೆಸ್‌ ಸದಸ್ಯ ಅಭಿಷೇಕ್‌ ಸಿಂಘ್ವಿ ಸೀಟಿನಡಿ ನೋಟಿನ ಬಂಡಲ್‌ಗಳು ಪತ್ತೆ Read More »

ಸತತ 11ನೇ ಸಲ ರೆಪೊ ದರ ಯಥಾಸ್ಥಿತಿ

ಮುಂಬಯಿ: ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟಿಸಿದ್ದು, ಸತತ 11ನೇ ಬಾರಿಗೆ ರೆಪೊ ದರವನ್ನು ಬದಲಿಸದೆ ಶೇಕಡಾ 6.5ರಷ್ಟು ಯಥಾಸ್ಥಿತಿ ಕಾಯ್ದಿರಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯ ಮುನ್ಸೂಚನೆಯಾದ ಶೇಕಡಾ 7.2ರ ಬದಲು ಶೇಕಡಾ 6.6ಕ್ಕೆ ತಗ್ಗಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಜುಲೈ-ಸೆಪ್ಟೆಂಬರ್ ತ್ರೈಮಾಸಿಕ ಜಿಡಿಪಿ ಬೆಳವಣಿಗೆಯು 7 ತ್ರೈಮಾಸಿಕ ಕನಿಷ್ಠ 5.4 ಶೇಕಡಾಕ್ಕೆ ಕುಸಿದಿದ್ದರೂ ಬಡ್ಡಿದರದ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ, ಪ್ರಸಕ್ತ ಹಣಕಾಸು ವರ್ಷದ ಐದನೇ ದ್ವೈಮಾಸಿಕ ವಿತ್ತೀಯ ನೀತಿಯನ್ನು ಪ್ರಕಟಿಸಿದ

ಸತತ 11ನೇ ಸಲ ರೆಪೊ ದರ ಯಥಾಸ್ಥಿತಿ Read More »

ಗೋಮಾಂಸ ಸೇವನೆ ನಿಲ್ಲಿಸಿ : ಮುಸ್ಲಿಂ ಧರ್ಮಗುರುವಿನ ಅಚ್ಚರಿಯ ಸಲಹೆ

ಇಸ್ಲಾಂನಲ್ಲಿ ಗೋಮಾಂಸ ಸೇವನೆ ಕಡ್ಡಾಯ ಅಲ್ಲ ಎಂದು ಹೇಳಿಕೆ ಲಖನೌ: ಮುಸ್ಲಿಮರು ಗೋಮಾಂಸ ಸೇವನೆ ನಿಲ್ಲಿಸಬೇಕು ಎಂದು ಕರೆ ಕೊಡುವ ಮೂಲಕ ಮುಸ್ಲಿಂ ಧರ್ಮಗುರುವೊಬ್ಬರು ಅಚ್ಚರಿಯುಂಟುಮಾಡಿದ್ದಾರೆ. ಮೌಲಾನಾ ಶಹಾಬುದ್ದೀನ್‌ ರಿಜ್ವಿ ಬರೇಲ್ವಿ ಈ ಕರೆ ನೀಡಿದವರು. ಅಸ್ಸಾಂನಲ್ಲಿ ಹೋಟೆಲ್‌ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗೋಮಾಂಸ ನಿಷೇಧಿಸಿ ಅಸ್ಸಾಂ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಮುಸ್ಲಿಂ ಧರ್ಮಗುರು, ಮುಸ್ಲಿಮರು ಗೋಮಾಂಸ ಸೇವನೆ ನಿಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ.ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಂ ವಿರೋಧಿ

ಗೋಮಾಂಸ ಸೇವನೆ ನಿಲ್ಲಿಸಿ : ಮುಸ್ಲಿಂ ಧರ್ಮಗುರುವಿನ ಅಚ್ಚರಿಯ ಸಲಹೆ Read More »

ಡ್ರಗ್ಸ್‌ ಪ್ರಕರಣ : ಖ್ಯಾತ ನಟನ ಮಗ ಸೆರೆ

ಚೆನ್ನೈ : ಕನ್ನಡ, ತಮಿಳು ಸೇರಿದಂತೆ ದಕ್ಷಿಣದ ಕೆಲವು ಭಾಷೆಗಳ ಸಿನಿಮಾದಲ್ಲಿ ನಟಿಸಿರುವ ನಟ ಮನ್ಸೂರ್ ಅಲಿ ಖಾನ್‌ರ ಪುತ್ರ ತುಘಲಕ್‌ನನ್ನು ತಮಿಳುನಾಡು ಪೊಲೀಸರು ಡ್ರಗ್ಸ್‌ ಕೇಸಿನಲ್ಲಿ ಬಂಧಿಸಿದ್ದಾರೆ. ಮನ್ಸೂರ್‌ ಅಲಿ ಖಾನ್‌ ಹೆಚ್ಚಾಗಿ ವಿಲನ್‌ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತಿರುಮಂಗಳಂ ಪೊಲೀಸರು ತುಘಲಕ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 10 ಜನರನ್ನು ಬಂಧಿಸಲಾಗಿತ್ತು. ತನಿಖೆ ಮುಂದುವರಿದಾಗ ಮನ್ಸೂರ್ ಅಲಿ ಖಾನ್ ಪುತ್ರ ತುಘಲಕ್ ಸಹ ಈ ಡ್ರಗ್ಸ್‌ ಜಾಲದಲ್ಲಿ ಶಾಮೀಲಾಗಿರುವುದು ತಿಳಿದುಬಂದಿದೆ. ಹೀಗಾಗಿ ಆತನನ್ನು

ಡ್ರಗ್ಸ್‌ ಪ್ರಕರಣ : ಖ್ಯಾತ ನಟನ ಮಗ ಸೆರೆ Read More »

ಹೋಟೆಲ್‌ಗಳಲ್ಲಿ ಗೋಮಾಂಸ ಖಾದ್ಯ ಮಾರಿದರೆ 8 ವರ್ಷ ಜೈಲು

ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ, ಸೇವನೆ ನಿಷೇಧ ಗುವಾಹಟಿ: ಅಸ್ಸಾಂನ ಹೋಟೆಲ್‌ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸುವುದಾಗಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ.ಗೋಮಾಂಸ ಸೇವನೆಯ ಬಗ್ಗೆ ಕಾನೂನಿಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕಾನೂನು ಉಲ್ಲಂಘಿಸಿದರೆ 3ರಿಂದ 8 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 3ರಿಂದ 5 ಲಕ್ಷ ರೂ. ವರೆಗೆ ದಂಡ ವಿಧಿಸಬಹುದು.ಸರ್ಕಾರದ ನಿರ್ಣಯಕ್ಕೆ ವಿಪಕ್ಷಗಳು ಪ್ರಬಲ ವಿರೋಧ ವ್ಯಕ್ತಪಡಿಸಿವೆ.ಅಸ್ಸಾಂನಲ್ಲಿ ಗೋಮಾಂಸ

ಹೋಟೆಲ್‌ಗಳಲ್ಲಿ ಗೋಮಾಂಸ ಖಾದ್ಯ ಮಾರಿದರೆ 8 ವರ್ಷ ಜೈಲು Read More »

ತೆಲಂಗಾಣದಲ್ಲಿ 5.3 ತೀವ್ರತೆಯ ಭೂಕಂಪ

ಹೈದರಾಬಾದ್‌ : ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಇಂದು ಬೆಳಗ್ಗೆ 5.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಹೈದರಾಬಾದ್‌ನಾದ್ಯಂತ ಕಂಪನಗಳ ಅನುಭವಗಳಾಗಿವೆ. ಭೂಕಂಪನ ರಾಷ್ಟ್ರೀಯ ಕೇಂದ್ರದ ಪ್ರಕಾರ ಭೂಕಂಪ ಬೆಳಗ್ಗೆ 7.27ರ ವೇಳೆಗೆ ಸಂಭವಿಸಿದೆ. ಕಂಪನ ಕೇಂದ್ರ ಭೂಮಿಯ 40 ಕಿ. ಮೀ. ಆಳದಲ್ಲಿತ್ತು. ಭೂಕಂಪ ಈ ಪ್ರದೇಶಗಳ ನಿವಾಸಿಗಳಲ್ಲಿ ಭಯವನ್ನು ಉಂಟುಮಾಡಿದೆ. ಯಾವುದೇ ಪ್ರಾಣಹಾನಿ ಅಥವಾ ಗಮನಾರ್ಹ ಹಾನಿಯ ಬಗ್ಗೆ ತಕ್ಷಣದ ವರದಿಗಳು ಬಂದಿಲ್ಲ. ಅಧಿಕಾರಿಗಳು ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಜನರಿಗೆ ಜಾಗರೂಕರಾಗಿರಲು ಮತ್ತು ಕಿಕ್ಕಿರಿದ ಹಾಗೂ ಅಸುರಕ್ಷಿತ

ತೆಲಂಗಾಣದಲ್ಲಿ 5.3 ತೀವ್ರತೆಯ ಭೂಕಂಪ Read More »

error: Content is protected !!
Scroll to Top