ದೇಶ

ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಅಂತ್ಯಕ್ರಿಯೆ

ಬೆಂಗಳೂರು: ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಬುಧವಾರ ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಎಂ.ವಿ. ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯ ಸೋಮಸುಂದರಪಾಳ್ಯ ಚಿತಾಗಾರದಲ್ಲಿ ನಡೆಯಿತು. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿಯ ನಂದನವನ ಲೇಔಟ್​​ನ ನಿವಾಸದಲ್ಲಿ ಅಂತಿಮ ದರ್ಶನದ ಬಳಿಕ ಸಕಲ ಸರಕಾರಿ ಗೌರವಗಳೊಂದಿಗೆ ತೆರೆದ ವಾಹನದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಕಲ್ಲುಬಾಳು ರಸ್ತೆ ಮೂಲಕ ಜಿಗಣಿಯ ಒಡಿಸಿ ಸರ್ಕಲ್​, […]

ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಅಂತ್ಯಕ್ರಿಯೆ Read More »

ಕ್ಯಾಪ್ಟನ್ ಪ್ರಾಂಜಲ್ ಅಮರ್ ರಹೇ | ಬೆಂಗಳೂರಿನಲ್ಲಿ ಅಂತಿಮ ನಮನ

ಬೆಂಗಳೂರು: ಮಂಗಳೂರಿನ ಸುರತ್ಕಲಿನಲ್ಲಿ ಬೆಳೆದಿದ್ದ ಕ್ಯಾಪ್ಟನ್ ‍ಪ್ರಾಂಜಲ್ ಅಮರರಾಗಿದ್ದಾರೆ. ಉಗ್ರರೊಂದಿಗೆ ನಡೆದ ಕಾಳಗದಲ್ಲಿ ವೀರ ಮರಣವನ್ನಪ್ಪಿದ್ದಾರೆ. ಅವರ ಪಾರ್ಥಿವ ಶರೀರ ಬೆಂಗಳೂರಿನ ಅವರ ನಿವಾಸಕ್ಕೆ ಶುಕ್ರವಾರ ರಾತ್ರಿ ತಲುಪಿದ್ದು, ಅಂತಿಮ ನಮನ ಸಲ್ಲಿಸಲಾಗುತ್ತಿದೆ. 29 ವರ್ಷದ ಪ್ರಾಂಜಲ್ ಅವರ ಅಂತ್ಯಕ್ರಿಯೆ ಇಂದು ಅಂದರೆ ಶನಿವಾರ ಬೆಂಗಳೂರಿನಲ್ಲಿ ನಡೆಯಲಿದೆ. ಅಂತ್ಯಕ್ರಿಯೆಯ ಮುನ್ನ ನಡೆಯುವ ವಿಧಿವಿಧಾನ ನಡೆದು ಬಳಿಕ ಮೆರವಣಿಗೆಯಲ್ಲಿ ವೀರ ಯೋಧನ ಪಾರ್ಥಿವ ಶರೀರವನ್ನು 23 ಕಿಲೋ ಮೀಟರ್ ದೂರದಲ್ಲಿರುವ ಸೋಮಸುಂದರ ಪಾಳ್ಯದ ಚಿತಾಗಾರಕ್ಕೆ ಕೊಂಡೊಯ್ಯಲಾಗುವುದು ಎಂದು ತಿಳಿದುಬಂದಿದೆ.

ಕ್ಯಾಪ್ಟನ್ ಪ್ರಾಂಜಲ್ ಅಮರ್ ರಹೇ | ಬೆಂಗಳೂರಿನಲ್ಲಿ ಅಂತಿಮ ನಮನ Read More »

ವಿಶ್ವಕಪ್​ ಟ್ರೋಫಿ ಮೇಲೆ ಕಾಲಿಟ್ಟ ಮಿಚೆಲ್​ ಮಾರ್ಷ್ ವಿರುದ್ಧ ಎಫ್​ಐಆರ್​!

ಉತ್ತರ ಪ್ರದೇಶ: ಏಕದಿನ ವಿಶ್ವಕಪ್​ ಟ್ರೋಫಿ ಮೇಲೆ ಕಾಲಿಟ್ಟು ವಿಶ್ರಾಂತಿ ಪಡೆದಿದ್ದ ಆಸ್ಟ್ರೇಲಿಯಾದ ಮಿಚೆಲ್​ ಮಾರ್ಷ್ ವಿರುದ್ಧ ಭಾರತದಲ್ಲಿ ಎಫ್‌ಐಆರ್ ದಾಖಲಾಗಿದೆ. ಉತ್ತರ ಪ್ರದೇಶದ ಅಲಿಘರ್‌ನ ಆರ್‌ಟಿಐ ಕಾರ್ಯಕರ್ತ ಪಂಡಿತ್ ಕೇಶವ್ ನೀಡಿದ ದೂರಿನ ಮೇರೆಗೆ ದೆಹಲಿ ಗೇಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರ್ಷ್​ ಅವರು ವಿಶ್ವಕಪ್‌ ಗೆದ್ದ ಬಳಿಕ ಡ್ರೆಸ್ಸಿಂಗ್​ ರೂಮ್​ನಲ್ಲಿ ಟ್ರೋಫಿ ಮೇಲೆ ತಮ್ಮ ಕಾಲುಗಳನ್ನು ಇಟ್ಟು ವಿಶ್ರಾಂತಿ ಪಡೆಯುವ ಶೈಲಿಯಲ್ಲಿ ಕುಳಿತ ಫೋಟೊವೊಂದು ವೈರಲ್​ ಆಗಿತ್ತು. ಈ ಫೋಟೊ ಕಂಡ ಅನೇಕ ಭಾರತೀಯ ಕ್ರಿಕೆಟ್​

ವಿಶ್ವಕಪ್​ ಟ್ರೋಫಿ ಮೇಲೆ ಕಾಲಿಟ್ಟ ಮಿಚೆಲ್​ ಮಾರ್ಷ್ ವಿರುದ್ಧ ಎಫ್​ಐಆರ್​! Read More »

ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಬೆಂಗಳೂರಿಗೆ : ಮಾಹಿತಿ ನೀಡಿದ ರಕ್ಷಣಾ ಮೂಲಗಳು

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಪಾರ್ಥಿವ ಶರೀರ ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಲಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಬುಧವಾರ ರಜೌರಿ ಸೆಕ್ಟರ್‌ನಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 63ನೇ ರಾಷ್ಟ್ರೀಯ ರೈಫಲ್ಸ್‌ನ 29 ವರ್ಷದ ಯೋಧ ಪ್ರಾಂಜಲ್ ಅವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. “ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ ಇಂದು ರಾತ್ರಿ 8 ಗಂಟೆಗೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ನಂತರ ಅವರ ಪಾರ್ಥಿವ ಶರೀರವನ್ನು

ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಬೆಂಗಳೂರಿಗೆ : ಮಾಹಿತಿ ನೀಡಿದ ರಕ್ಷಣಾ ಮೂಲಗಳು Read More »

ಅಫ್ಘಾನಿನ ದೆಹಲಿ ರಾಯಭಾರ ಕಚೇರಿ ಶಾಶ್ವತ ಬಂದ್: ಗೊಂದಲದಿಂದ ಕೂಡಿದ ಹೇಳಿಕೆ!

ನವದೆಹಲಿ: ತಾಲಿಬಾನ್ ಆಡಳಿತವಿರುವ ಅಫಘಾನಿಸ್ತಾನವು ಭಾರತದಲ್ಲಿರುವ ರಾಯಭಾರ ಕಚೇರಿಯ ಕಾರ್ಯಾಚರಣೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿದೆ. ಸೆಪ್ಟೆಂಬರ್‌ 30ರಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ರಾಯಭಾರ ಕಚೇರಿಯನ್ನು ಈಗ ಶಾಶ್ವತವಾಗಿ ಸ್ಥಗಿತಗೊಳಿಸಿದೆ. ಈ ನಡುವೆ ತಾಲಿಬಾನ್ ನೀಡಿರುವ ಆರೋಪಗಳು, ಅದರ ದ್ವಂದ್ವ ನಿಲುವನ್ನು ಸೂಚಿಸುವಂತಿದೆ. ಮೊದಲು “ಸಾಕಷ್ಟು ಸಿಬ್ಬಂದಿ ಕೊರತೆ ಇದೆ. ಅಲ್ಲದೇ, ರಾಯಭಾರ ಕಚೇರಿ ನಿರ್ವಹಣೆಗೆ ಸಾಕಷ್ಟು ದುಡ್ಡಿಲ್ಲ” ಎಂದು ಹೇಳಿತ್ತು. ಆದರೆ ಈಗ “ಭಾರತ ಸರ್ಕಾರದಿಂದ ಎದುರಾಗುತ್ತಿರುವ ಸವಾಲುಗಳಿಂದಾಗಿ ಸ್ಥಗಿತಗೊಳಿಸಲಾಗುತ್ತಿದೆ” ಎಂದು ಆರೋಪಿಸಿದೆ. ಇದು ಈಗ ಚರ್ಚೆಗೆ ಕಾರಣವಾಗಿದೆ. ಅಫಘಾನಿಸ್ತಾನವು

ಅಫ್ಘಾನಿನ ದೆಹಲಿ ರಾಯಭಾರ ಕಚೇರಿ ಶಾಶ್ವತ ಬಂದ್: ಗೊಂದಲದಿಂದ ಕೂಡಿದ ಹೇಳಿಕೆ! Read More »

ಡೀಪ್‌ಫೇಕ್‌ಗೆ ಕಡಿವಾಣ ಹಾಕಲು ಶೀಘ್ರ ಹೊಸ ಕಾನೂನು!!

ಡೀಪ್‌ಫೇಕ್‌ಗಳು ಪ್ರಜಾಪ್ರಭುತ್ವಕ್ಕೆ ಹೊಸ ಅಪಾಯ ಎಂದ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು, ಡೀಪ್‌ಫೇಕ್‌ಗಳಿಗೆ ಕಡಿವಾಣ ಹಾಕಲು ಸರ್ಕಾರ ಶೀಘ್ರದಲ್ಲೇ ಹೊಸ ನಿಯಮಾವಳಿ ರೂಪಿಸಲಿದೆ ಎಂದು ಗುರುವಾರ ಹೇಳಿದ್ದಾರೆ. ಇಂದು ಡೀಪ್‌ಫೇಕ್ ಕುರಿತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಭೇಟಿ ಮಾಡಿ, ಚರ್ಚಿಸಿದ ಸಚಿವರು, ಪತ್ತೆ, ತಡೆಗಟ್ಟುವಿಕೆ, ವರದಿ ಮಾಡುವ ಕಾರ್ಯವಿಧಾನವನ್ನು ಬಲಪಡಿಸುವುದು ಮತ್ತು ಬಳಕೆದಾರರಿಗೆ ಜಾಗೃತಿ ಮೂಡಿಸುವಂತಹ ಕೆಲಸದ ಅಗತ್ಯವನ್ನು ಕಂಪನಿಗಳು ಒಪ್ಪಿಕೊಂಡಿವೆ ಎಂದರು. “ನಾವು ಇಂದೇ ಕರಡು ನಿಯಮಾವಳಿಯನ್ನು ಸಿದ್ಧಪಡಿಸಲು ಪ್ರಾರಂಭಿಸುತ್ತೇವೆ ಮತ್ತು ಕಡಿಮೆ

ಡೀಪ್‌ಫೇಕ್‌ಗೆ ಕಡಿವಾಣ ಹಾಕಲು ಶೀಘ್ರ ಹೊಸ ಕಾನೂನು!! Read More »

350 ರೂ.ಗಾಗಿ ಅಪ್ರಾಪ್ತನಿಂದ ಯುವಕನ ಹತ್ಯೆ!! | ಕೊಂದು ಕುಣಿದು ಕುಪ್ಪಳಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ!!

ಕೇವಲ 350 ರೂಪಾಯಿಗಾಗಿ ಅಪ್ರಾಪ್ತ ಬಾಲಕನೋರ್ವ ಯುವಕನನ್ನು 60ಕ್ಕೂ ಹೆಚ್ಚು ಬಾರಿ ಇರಿದು ಹತ್ಯೆಗೈದ ಭೀಭತ್ಸ ಘಟನೆ ಈಶಾನ್ಯ ದೆಹಲಿಯ ವೆಲ್ ಕಮ್ ರಸ್ತೆಯಲ್ಲಿ ನಡೆದಿದೆ. ಹತ್ಯೆಯ ಬಳಿಕ ಶವದ ಬಳಿ ಡ್ಯಾನ್ಸ್ ಮಾಡುತ್ತಿರುವ ಬಾಲಕನ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆಚ್ಚಿ ಬೀಳಿಸುವಂತಿದೆ. ಇರಿತಕ್ಕೊಳಗಾದ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲಿ ಪ್ರಾಣಪಕ್ಷಿ ಹಾರಿಹೋಗಿತ್ತು. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಯುವಕನ ಹತ್ಯೆಗೆ ಮೊದಲು ಬಾಲಕ ಹಣಕ್ಕಾಗಿ ಪೀಡಿಸಿದ್ದಾನೆ. ಹಣ ಕೊಡಲು ನಿರಾಕರಿಸಿದಾಗ, ಯುವಕನ ಕತ್ತು ಹಿಸುಕಿದ್ದಾನೆ.

350 ರೂ.ಗಾಗಿ ಅಪ್ರಾಪ್ತನಿಂದ ಯುವಕನ ಹತ್ಯೆ!! | ಕೊಂದು ಕುಣಿದು ಕುಪ್ಪಳಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ!! Read More »

ದೇಶ ಸೇವೆಗಾಗಿ ಪ್ರಾಣತೆತ್ತ MRPL ನಿವೃತ್ತ ಎಂ.ಡಿ.ಯ ಸುಪುತ್ರ!

ಮಂಗಳೂರು: ಜಮ್ಮು – ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರರ ಜತೆಗಿನ ಗುಂಡಿನ ಚಕಮಕಿಯಲ್ಲಿ ಸೇನೆಯ ಇಬ್ಬರು ಕ್ಯಾಪ್ಟನ್‌ಗಳು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಮೇಜರ್‌ ಮತ್ತು ಯೋಧ ಗಾಯಗೊಂಡಿದ್ದು, ಅವರನ್ನು ಉಧಂಪುರದ ಕಮಾಂಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ ಓರ್ವರಾದ ಕ್ಯಾ. ಎಂ.ವಿ. ಪ್ರಾಂಜಲ್ (29) ಅವರು ಎಂ.ಆರ್.ಪಿ.ಎಲ್.ನ ನಿವೃತ್ತ ಎಂ.ಡಿ. ಎಂ. ವೆಂಕಟೇಶ್ ಅವರ ಏಕೈಕ ಪುತ್ರ. ಪ್ರಾಂಜಲ್‌ ಎಂ.ವಿ. ಅವರು ಎಸೆಸೆಲ್ಸಿವರೆಗೆ ಎಂಆರ್‌ಪಿಎಲ್‌ ಸಮೀಪವೇ ಇರುವ ಡೆಲ್ಲಿ ಪಬ್ಲಿಕ್‌ ಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ಬಳಿಕ ನ್ಯಾಶನಲ್‌ ಡಿಫೆನ್ಸ್‌

ದೇಶ ಸೇವೆಗಾಗಿ ಪ್ರಾಣತೆತ್ತ MRPL ನಿವೃತ್ತ ಎಂ.ಡಿ.ಯ ಸುಪುತ್ರ! Read More »

ಟ್ರಕ್ಕಿಗೆ ಢಿಕ್ಕಿ ಹೊಡೆದ ವಿದ್ಯಾರ್ಥಿಗಳಿದ್ದ ಆಟೋ | ಅಪಘಾತದ ರಭಸಕ್ಕೆ ಗಾಳಿಯಲ್ಲಿ ಎಗರಿಬಿದ್ದ ಶಾಲಾ ಮಕ್ಕಳು: ಭೀಕರ ವೀಡಿಯೋ!!

ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋ ರಿಕ್ಷಾಕ್ಕೆ ಟ್ರಕ್ಕೊಂದು ಢಿಕ್ಕಿ ಹೊಡೆದ ಪರಿಣಾಮ 8 ಮಕ್ಕಳು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಬುಧವಾರ (ನ. 22ರಂದು) ನಡೆದಿದೆ. ಮುಂಜಾನೆ 7:35ರ ಸಮಯಕ್ಕೆ ಮಕ್ಕಳು ಆಟೋದಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ವಿಶಾಖಪಟ್ಟಣಂನ ಸಂಗಮ್ ಶರತ್ ಥಿಯೇಟರಿನ ಅಂಡರ್‌ ಪಾಸ್‌ ರಸ್ತೆಯಿಂದ ನುಗ್ಗಿದ ಆಟೋ ಹೆದ್ದಾರಿಯಲ್ಲಿ ಬರುತ್ತಿದ್ದ ಟ್ರಕ್ಕಿಗೆ ಢಿಕ್ಕಿ ಹೊಡೆದಿದೆ. ರಸ್ತೆ ದಾಟಲು ವೇಗವಾಗಿ ಹೋಗುತ್ತಿದ್ದ ರಿಕ್ಷಾ, ಟ್ರಕ್ಕಿಗೆ ಢಿಕ್ಕಿ ಹೊಡೆದಿದೆ. ಕ್ಷಣ ಮಾತ್ರದಲ್ಲಿ ಆಟೋ ಪಲ್ಟಿಯಾಗಿದ್ದು,

ಟ್ರಕ್ಕಿಗೆ ಢಿಕ್ಕಿ ಹೊಡೆದ ವಿದ್ಯಾರ್ಥಿಗಳಿದ್ದ ಆಟೋ | ಅಪಘಾತದ ರಭಸಕ್ಕೆ ಗಾಳಿಯಲ್ಲಿ ಎಗರಿಬಿದ್ದ ಶಾಲಾ ಮಕ್ಕಳು: ಭೀಕರ ವೀಡಿಯೋ!! Read More »

19ರ ಹರೆಯದ ತರುಣನ ಹತ್ಯೆಗೈದ ಅಪ್ರಾಪ್ತರ ತಂಡ!! | ಯುವಕನ ಪಾಲಿಗೆ ಮುಳುವಾಯ್ತೇ ಡ್ರಗ್ಸ್ ಜಾಲ ವಿರುದ್ಧದ ಕಾರ್ಯಾಚರಣೆ ??

19 ವರ್ಷದ ಯುವಕನೋರ್ವನನ್ನು ನಾಲ್ವರ ತಂಡ ಹತ್ಯೆಗೈದ ಘಟನೆ ತಿರುವನಂತಪುರಂನ ಕರಿಮಾಡೋಮ್‌ನ ಟರ್ಫ್‌ನಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಅರ್ಷದ್ ಎಂದು ಗುರುತಿಸಲಾಗಿದೆ. ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನುಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ. ಆರೋಪಿಗಳು ಅಪ್ರಾಪ್ತರು ಎಂದು ಹೇಳಲಾಗಿದೆ. ಹಿಂದಿನ ದ್ವೇಷದಿಂದ ಈ ಕೊಲೆ ನಡೆದಿದೆ ಎಂದು ಹೇಳಲಾಗಿದೆ. ಅರ್ಷದ್ ತನ್ನ ಸ್ನೇಹಿತರೊಂದಿಗೆ ಕಾಲೋನಿಯಲ್ಲಿ ಡ್ರಗ್ಸ್ ಜಾಲ ತಡೆಯುವ ತಡೆಯುವ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮಾದಕ ವ್ಯಸನದ ವಿರುದ್ಧ ಹೋರಾಡಲು ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸಲು ಅರ್ಷದ್

19ರ ಹರೆಯದ ತರುಣನ ಹತ್ಯೆಗೈದ ಅಪ್ರಾಪ್ತರ ತಂಡ!! | ಯುವಕನ ಪಾಲಿಗೆ ಮುಳುವಾಯ್ತೇ ಡ್ರಗ್ಸ್ ಜಾಲ ವಿರುದ್ಧದ ಕಾರ್ಯಾಚರಣೆ ?? Read More »

error: Content is protected !!
Scroll to Top