ದೇಶ

ಶಾಲೆಗೆ ಬಂದು ಗಾಳಿಯಲ್ಲಿ ಗುಂಡು: ಯುವಕ ಬಂಧನ!

ಖಾಸಗಿ ಶಾಲೆಯೊಂದಕ್ಕೆ ಏರ್‌ಗನ್‌ನೊಂದಿಗೆ ಅತಿಕ್ರಮ ಪ್ರವೇಶ ಮಾಡಿದ ಯುವಕ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ತ್ರಿಶೂರ್’ನ ನಾಯ್ಕನಾಲ್ ವಿವೇಕೋದಯಂ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದಿದೆ. ಆರೋಪಿಯನ್ನು ತ್ರಿಶೂರ್ ಬಳಿಯ ಮುಲಾಯಂ ಮೂಲದ ಜಗನ್ (19) ಎಂದು ಗುರುತಿಸಲಾಗಿದೆ. ಬೆಳಗ್ಗೆ 10.30ರ ಸುಮಾರಿಗೆ ಘಟನೆ ನಡೆದಿದ್ದು, ಪೊಲೀಸರು ಶಾಲೆಗೆ ತೆರಳಿ ಯುವಕನನ್ನು ಬಂಧಿಸಿದ್ದಾರೆ. ಘಟನೆಯಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಆತಂಕ ಸೃಷ್ಟಿಯಾಗಿದೆ. ಈತ ಶಾಲೆಯ ಹಳೆ ವಿದ್ಯಾರ್ಥಿ. ಆತನ ಹುಚ್ಚಾಟದಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ಶಾಲಾ ದಿನಗಳಲ್ಲಿಯೇ ಯುವಕ ಮಾದಕ ವ್ಯಸನಿಯಾಗಿದ್ದ […]

ಶಾಲೆಗೆ ಬಂದು ಗಾಳಿಯಲ್ಲಿ ಗುಂಡು: ಯುವಕ ಬಂಧನ! Read More »

ಲಷ್ಕರ್‌ ಎ ತೊಯ್ಬಾ ಭಯೋತ್ಪಾದಕ ಸಂಘಟನೆ: ಇಸ್ರೇಲ್‌ ಘೋಷಣೆ

ಮುಂಬೈ ಭಯೋತ್ಪಾದಕ ದಾಳಿ(26/11)ಯ 15ನೇ ವರ್ಷಾಚರಣೆಗೂ ಮುನ್ನವೇ ಮಹತ್ವದ ಬೆಳವಣಿಗೆ ಎಂಬಂತೆ ಪಾಕಿಸ್ತಾನ ಮೂಲದ ಲಷ್ಕರ್‌ ಎ ತೊಯ್ಬಾ ಭಯೋತ್ಪಾದಕ ಸಂಘಟನೆ ಎಂದು ಇಸ್ರೇಲ್ ಅಧಿಕೃತವಾಗಿ ಘೋಷಿಸಿದೆ ಎಂದು ವರದಿಯಾಗಿದೆ. ಇದೊಂದು ಮಾರಣಾಂತಿಕ ಹಾಗೂ ಖಂಡನಾರ್ಹ ಭಯೋತ್ಪಾದಕ ಸಂಘಟನೆಯಾಗಿದೆ ಎಂದು ತಿಳಿಸಿರುವ ಇಸ್ರೇಲ್‌, ಲಷ್ಕರ್‌ ಇ ತೊಯ್ಬಾ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ನಿರ್ಧರಿಸಲಾಗಿದೆ ಎಂದು ಹೇಳಿದೆ. ಆದರೆ ಈ ಬಗ್ಗೆ ಭಾರತದಿಂದ ಯಾವುದೇ ಮನವಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದೆ. ಭಾರತ ಸರ್ಕಾರ ಯಾವುದೇ ವಿನಂತಿ ಮಾಡದಿದ್ದರೂ

ಲಷ್ಕರ್‌ ಎ ತೊಯ್ಬಾ ಭಯೋತ್ಪಾದಕ ಸಂಘಟನೆ: ಇಸ್ರೇಲ್‌ ಘೋಷಣೆ Read More »

ಭಾರತ ಮೂಲದ ಹಡಗು ಕೆಂಪು ಸಮುದ್ರದಲ್ಲಿ ಅಪಹರಣ!!

ನವದೆಹಲಿ: ಟರ್ಕಿಯಿಂದ ಭಾರತಕ್ಕೆ ಹೊರಟಿದ್ದ ಸರಕು ಸಾಗಣೆ ಹಡಗನ್ನು ಯೆಮೆನ್‌ನ ಹೌತಿ ಬಂಡುಕೋರರು ಕೆಂಪು ಸಮುದ್ರದಲ್ಲಿ ಅಪಹರಿಸಿದ್ದಾರೆ ಎಂದು ಇಸ್ರೇಲ್ ಹೇಳಿದೆ. ಟರ್ಕಿಯಿಂದ ಭಾರತಕ್ಕೆ ಹೊರಟಿದ್ದ ಸರಕು ಸಾಗಣೆ ಹಡಗನ್ನು ಯೆಮೆನ್‌ನ ಹೌತಿ ಬಂಡುಕೋರರು ಕೆಂಪು ಸಮುದ್ರದಲ್ಲಿ ಅಪಹರಿಸಿದ್ದು, ಹಡಗಿನಲ್ಲಿ ವಿವಿಧ ರಾಷ್ಟ್ರಗಳಿಗೆ ಸೇರಿದ ಸುಮಾರು 25 ಸಿಬ್ಬಂದಿ ಇದ್ದಾರೆ. ಇಸ್ರೇಲ್‌ ಹಡಗನ್ನು ಹೈಜಾಕ್ ಮಾಡಿರುವುದಾಗಿ ಹೌತಿಗಳು ಹೇಳಿದ್ದರು. ಆದರೆ ಹೌತಿಗಳ ಹೇಳಿಕೆಯನ್ನು ನಿರಾಕರಿಸಿರುವ ಇಸ್ರೇಲ್ ಸರ್ಕಾರ, ಅಪಹರಣಕ್ಕೊಳಗಾದ ಗ್ಯಾಲಕ್ಸಿ ಲೀಡರ್ ಹಡಗಿನಲ್ಲಿ ಯಾವುದೇ ಭಾರತೀಯರು ಇಲ್ಲ. ಅಲ್ಲದೆ

ಭಾರತ ಮೂಲದ ಹಡಗು ಕೆಂಪು ಸಮುದ್ರದಲ್ಲಿ ಅಪಹರಣ!! Read More »

ವಿಶ್ವಕಪ್ ನಲ್ಲಿ ಭಾರತಕ್ಕೆ ಸೋಲು: ರೋಹಿತ್ ಶರ್ಮ ಭಾವುಕ ಮಾತು

ನವದೆಹಲಿ: ನಿನ್ನೆ ನಡೆದ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸುವ ಮೂಲಕ ಅಸಂಖ್ಯಾತ ಭಾರತೀಯರ ಕನಸು ನುಚ್ಚು ನೂರಾಯಿತು. ಮಹತ್ವದ ಪಂದ್ಯದಲ್ಲಿ ಹೀನಾಯ ಸೋಲಿನ ಬಗ್ಗೆ ಮಾತನಾಡಿದ ರೋಹಿತ್ ಅವರು​, ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅಂತಿಮ ಹಣಾಹಣಿಯಲ್ಲಿ ನಮ್ಮ ತಂಡ ಉತ್ತಮವಾಗಿ ಬ್ಯಾಟಿಂಗ್​ ಮಾಡಲಿಲ್ಲ ಎಂದು ಒಪ್ಪಿಕೊಂಡರು. ನಾವು ಉತ್ತಮವಾಗಿ ಆಡಲಿಲ್ಲ: ಪಂದ್ಯದ ಬಳಿಕ ನೋವಿನಿಂದಲೇ ಮಾತನಾಡಿದ ರೋಹಿತ್​, ಫೈನಲ್‌ಗೆ ಈ ಪಿಚ್​ ತುಂಬಾ ಕಷ್ಟಕರ ಆಗಿತ್ತು, ಬಹಳ ಶುಷ್ಕದಿಂದ ಕೂಡಿತ್ತು ಮತ್ತು ಟಾಸ್ ಗೆದ್ದ

ವಿಶ್ವಕಪ್ ನಲ್ಲಿ ಭಾರತಕ್ಕೆ ಸೋಲು: ರೋಹಿತ್ ಶರ್ಮ ಭಾವುಕ ಮಾತು Read More »

ಎನ್‍ ಕೌಂಟರ್ ಗೆ ರಶೀದ್ ಕಾಲಿಯಾ ಬಲಿ

ಉತ್ತರಪ್ರದೇಶ: 40 ಕೊಲೆ ಪ್ರಕರಣ ಆರೋಪ ಎದುರಿಸುತ್ತಿದ್ದ ರಶೀದ್ ಕಾಲಿಯಾನನ್ನು  ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ ಶನಿವಾರ ಹತ್ಯೆ ಮಾಡಿದೆ. ಝಾನ್ಸಿ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ರಶೀದ್‌ ಕಾಲಿಯಾನನ್ನು ಹತ್ಯೆ ಮಾಡಲಾಗಿದೆ. ಪೊಲೀಸರು ಆತನ ತಲೆಗೆ 1.25 ಲಕ್ಷ ರೂ. ಬಹುಮಾನ ಘೋಷಿಸಿದ್ದರು. ಉತ್ತರ ಪ್ರದೇಶ ಪೊಲೀಸ್ ಮೂಲಗಳ ಪ್ರಕಾರ, ಕಾಲಿಯಾ ಝಾನ್ಸಿ ಜಿಲ್ಲೆಯ ಮೌರಾನಿಪುರದಲ್ಲಿ ಸುಪಾರಿ ಹತ್ಯೆಗಾಗಿ ಆಗಮಿಸಿದ್ದ ವೇಳೆ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ. ಮೌರಾನಿಪುರದಲ್ಲಿ ಕಾಲಿಯಾ ಇರುವಿಕೆಯ ಬಗ್ಗೆ ಮಾಹಿತಿ

ಎನ್‍ ಕೌಂಟರ್ ಗೆ ರಶೀದ್ ಕಾಲಿಯಾ ಬಲಿ Read More »

ವಿಶ್ವಕಪ್ : ನಾಳೆ ನಡೆಯಲಿದೆ ಭಾರತ-ಆಸ್ಟ್ರೇಲಿಯಾ ನಡುವೆ ಜಿದ್ದಾಜಿದ್ದಿನ ಸೆಣಸಾಟ | ಭಾರತದ ಗೆಲುವಿಗಾಗಿ ಪೂಜೆ-ಪುನಸ್ಕಾರಗಳು, ಶುಭ ಹಾರೈಕೆಗಳು

ಬೆಂಗಳೂರು: ಭಾನುವಾರ ವಿಶ್ವದ ಅತೀ ದೊಡ್ಡ ಸ್ಟೇಡಿಯಂನಲ್ಲಿ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾಟ ಭಾರತ ಹಾಗೂ ಆಸ್ಟ್ರೇಲಿಯ ತಂಡಗಳ ನಡುವೆ ನಡೆಯಲಿದ್ದು, ಒಂದೆಡೆ ಭಾರತದ ಆಟಗಾರರು ಸತತ ಅಭ್ಯಾಸದಲ್ಲಿ ತೊಡಗಿಕೊಂಡಿದ್ದರೆ, ಇನ್ನೊಂದೆಡೆ ಭಾರತ ತಂಡದ ಗೆಲುವಿಗಾಗಿ ದೇವಸ್ಥಾನಗಳಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ವಿಶೇಷ ಪೂಜೆ, ಪುನಸ್ಕಾರಗಳು ನಡೆಯುತ್ತಿವೆ. ಬೆಂಗಳೂರಿನ ನಿಮಿಷಾಂಭ ದೇವಾಲಯದಲ್ಲಿ ಭಾರತ ಗೆಲುವಿಗಾಗಿ ವಿಶೇಷ ಹೋಮ ಹವನಗಳನ್ನು ನಡೆಸಲಾಗುತ್ತಿದೆ. ಮತ್ತೊಂದೆಡೆ ಕಾಪು ಕಡಲ ಕಿನಾರೆಗಳಲ್ಲಿ ಭಾರತ ಗೆಲುವಿಗಾಗಿ ಮರಳಿನಲ್ಲಿ ವಿಶ್ವಕಪ್ ಹೋಲುವ ಶಿಲ್ಪಗಳನ್ನು ರಚಿಸಿ ಶುಭ ಹಾರೈಸುವ

ವಿಶ್ವಕಪ್ : ನಾಳೆ ನಡೆಯಲಿದೆ ಭಾರತ-ಆಸ್ಟ್ರೇಲಿಯಾ ನಡುವೆ ಜಿದ್ದಾಜಿದ್ದಿನ ಸೆಣಸಾಟ | ಭಾರತದ ಗೆಲುವಿಗಾಗಿ ಪೂಜೆ-ಪುನಸ್ಕಾರಗಳು, ಶುಭ ಹಾರೈಕೆಗಳು Read More »

ಪಿಸ್ತುಲ್ ತೋರಿಸಿ ಶೋ ಮಾಡಿದ ಭೂಪ : ಮುಂದೆ ಏನಾಯ್ತು ನೋಡಿ! !

ಉತ್ತರ ಪ್ರದೇಶ, ಘಝಿಯಾಬಾದ್: ವ್ಯಕ್ತಿ ಒಬ್ಬರು ತನ್ನ ಕಾರಿನ ಕಿಟಕಿ ಮೂಲಕ ನಗರದಲ್ಲಿ ಪಿಸ್ತುಲ್ ತೋರಿಸಿ ರೋಡ್ ಶೋ ಮಾಡಿರುವ ದೃಶ್ಯ ವೈರಲ್ ಆಗಿದೆ. ಉತ್ತರಪ್ರದೇಶದ NH 24 ಸಿದ್ದಾರ್ಥ್ ವಿಹಾರ ಪ್ರದೇಶದಲ್ಲಿ ಶುಕ್ರವಾರದಂದು ಟಾಟಾ ಪಂಚ್ ಕಾರ್ ನಲ್ಲಿ ಡ್ರೈವರ್ ಪಕ್ಕದ ಸೀಟ್ ನಲ್ಲಿ ಕೂತಿದ್ದ ವ್ಯಕ್ತಿ ಒಬ್ಬರು ಪಿಸ್ತುಲ್ ತೋರಿಸುವುದರ ಮೂಲಕ ತನ್ನ ಹುಚ್ಚಾಟವನ್ನು ಪ್ರದರ್ಶಿಸಿದ್ದಾನೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ವೀಡಿಯೋ ತಿಳಿದ ಪೊಲೀಸರು ಕೃತ್ಯ ಎಸಗಿದ ಟಾಟಾ ಪಂಚ್ ಕಾರನ್ನು ವಶಕ್ಕೆ

ಪಿಸ್ತುಲ್ ತೋರಿಸಿ ಶೋ ಮಾಡಿದ ಭೂಪ : ಮುಂದೆ ಏನಾಯ್ತು ನೋಡಿ! ! Read More »

ಸಚಿನ್ ದಾಖಲೆ ಮುರಿದು ಸಾರ್ವಕಾಲಿಕ ಶ್ರೇಷ್ಠ ಸಾಧನೆ ಮಾಡಿದ ವಿರಾಟ್ ಕೊಹ್ಲಿ

ಮುಂಬೈ: ಇಲ್ಲಿನ ವಾಂಖೇಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ನ್ಯೂಝಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ದಾಖಲಿಸಿ ಏಕದಿನ ಕ್ರಿಕೆಟ್ ಮಾದರಿಯಲ್ಲಿ ಸಾರ್ವಕಾಲಿಕ ಶ್ರೇಷ್ಠ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಬುಧವಾರ ವಿಶ್ವಕಪ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಕ್ರೀಸಿಗೆ ಬಂದ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಏಕದಿನ ಮಾದರಿಯಲ್ಲಿ 50ನೇ ಶತಕ ದಾಖಲಿಸುವುದರೊಂದಿಗೆ ಸಚಿನ್ ಅವರ ಹೆಸರಲ್ಲಿದ್ದ 49 ಅತೀ ಹೆಚ್ಚು

ಸಚಿನ್ ದಾಖಲೆ ಮುರಿದು ಸಾರ್ವಕಾಲಿಕ ಶ್ರೇಷ್ಠ ಸಾಧನೆ ಮಾಡಿದ ವಿರಾಟ್ ಕೊಹ್ಲಿ Read More »

ಕಂದಕಕ್ಕೆ ಉರುಳಿದ ಬಸ್: 36 ಮಂದಿ ಮೃತ್ಯು

ದೋಡಾ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಒಂದು ಸುಮಾರು 200 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ ಕನಿಷ್ಠ 36 ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದೆ. ಕಿಶ್ತ್ವಾರದಿಂದ ಜಮ್ಮುಗೆ ಪ್ರಯಾಣಿಸುತ್ತಿದ್ದ ಬಸ್, ಅಸ್ಸಾರ್ ಪ್ರದೇಶದಲ್ಲಿನ ತೃಣಾಲ್ ಬಳಿ ಕಡಿದಾದ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದರಿಂದ ಈ ಘಟನೆ ನಡೆದಿದೆ. ಬಸ್‌ನಲ್ಲಿ 55 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಘಟನೆಯ ಕುರಿತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ತೀವ್ರ

ಕಂದಕಕ್ಕೆ ಉರುಳಿದ ಬಸ್: 36 ಮಂದಿ ಮೃತ್ಯು Read More »

ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ

ಕಾಸರಗೋಡು: ಡೆತ್ ನೋಟು ಬರೆದಿಟ್ಟು ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಲ ಸಮೀಪದ ಪದ್ಯಾಣದಲ್ಲಿ ನಡೆದಿದೆ. ಪದ್ಯಾಣದ ನಿವಾಸಿ ಸಿಲ್ವೆಸ್ಟರ್ ಕ್ರಾಸ್ತ ಎಂಬವರ ಪುತ್ರ ಐವನ್ ಕ್ರಾಸ್ತ (23) ಈ ಕೃತ್ಯ ಎಸಗಿದವರು. ಐವನ್ ತೊಕ್ಕೊಟ್ಟುವಿನ ಕಾಲೇಜೊಂದರ ಬಿ.ಎಡ್ ವಿದ್ಯಾರ್ಥಿಯಾಗಿದ್ದ. ಈತನ ಮೃತದೇಹ ಮಂಗಳವಾರ ರಾತ್ರಿ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಮನೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶೋಧ ನಡೆಸಿದಾಗ ಬಾವಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಈತ ಮಲಗುವ ಕೋಣೆಯೊಳಗೆ ಡೆತ್ ನೋಟ್ ಪತ್ತೆಯಾಗಿದ್ದು, ನನ್ನ

ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ Read More »

error: Content is protected !!
Scroll to Top