ದೇಶ

ಚೀನಾದಲ್ಲಿ ನಡೆದ 19ನೇ ಏಷಿಯಾ ಚಾಂಪಿಯನ್ ಶಿಪ್: ದೇಶದ ಕೀರ್ತಿ ಪತಾಕೆ ಹಾರಿಸಿದ ಪುತ್ತೂರಿನ ಪ್ರತಿಭೆ ಪ್ರಜ್ಞಾ ವೈ. ಗಾಯತ್ರಿ

ಪುತ್ತೂರು: ಪುತ್ತೂರಿನ ಪ್ರತಿಭೆ ಪ್ರಜ್ಞಾ ವೈ ಗಾಯತ್ರಿ ಚೀನಾದ ನಡೆದ 19ನೇ ಏಷಿಯಾ ಸ್ಟೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಪಡೆದು ದೇಶದ ಕೀರ್ತಿ ಪತಾಕೆನ್ನು ಹಾರಿಸಿದ್ದಾರೆ. ಭಾರತೀಯ ಜೂನಿಯರ್ ಮಹಿಳಾ ತಂಡವನ್ನು ಪ್ರತಿನಿಧಿಸಿದ್ದು, ಅ.22ರಿಂದ 28ರವರೆಗೆ ಚೀನಾ ದೇಶದ ಬಿಧಾಯಿಯಲ್ಲಿ ನಡೆದ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ತಂಡ 3ನೇ ಸ್ಥಾನ ಪಡೆದು ಕಂಚಿನ ಪದಕ ಪಡೆದುಕೊಂಡಿತ್ತು. ಕರ್ನಾಟಕದ ಐವರು ಆಟಗಾರರು ಸೇರಿ ಒಟ್ಟು 12 ಆಟಗಾರರೊಂದಿಗಿನ ಈ ತಂಡದಲ್ಲಿ ಪುತ್ತೂರಿನ ಮರೀಲ್ ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಪ್ರಜ್ಞಾ […]

ಚೀನಾದಲ್ಲಿ ನಡೆದ 19ನೇ ಏಷಿಯಾ ಚಾಂಪಿಯನ್ ಶಿಪ್: ದೇಶದ ಕೀರ್ತಿ ಪತಾಕೆ ಹಾರಿಸಿದ ಪುತ್ತೂರಿನ ಪ್ರತಿಭೆ ಪ್ರಜ್ಞಾ ವೈ. ಗಾಯತ್ರಿ Read More »

ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ | ಒಂದೇ ಕುಟುಂಬದ ಐವರು ಮೃತ್ಯು

ಉತ್ತರ ಪ್ರದೇಶ: ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಹರ್ದೋಯ್’ನ ಸವಯಜ್ ಪುರ ಕೊಟ್ಟಾಲಿ ಪ್ರದೇಶದ ಬಿಲ್ ಹೌರ್-ಕತ್ರಾ ರಸ್ತೆಯ ಖಮಾರಿಯಾ ತಿರುವಿನ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಮೃತರು ಪಚ್ ದೇವ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಬರಕಾಂತ್ ಗ್ರಾಮದವರಾಗಿದ್ದು, ಒಂದೇ ಕುಟುಂಬದವರು ಎನ್ನಲಾಗಿದೆ. ಅಪಘಾತದ

ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ | ಒಂದೇ ಕುಟುಂಬದ ಐವರು ಮೃತ್ಯು Read More »

ಕೇರಳದ ಎರ್ನಾಕುಲಂನಲ್ಲಿ ಭೀಕರ ಸ್ಪೋಟ | ಓರ್ವ ಮಹಿಳೆ ಮೃತ್ಯು, 23 ಮಂದಿಗೆ ಗಾಯ

ಕೇರಳ: ಎರ್ನಾಕುಲಂನಲ್ಲಿರುವ ಕನ್ವೆನ್ಷನ್‌ ಸೆಂಟರ್‌  ನಲ್ಲಿ ಭೀಕರ ಸ್ಫೋಟ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟಿದ್ದು, 23 ಮಂದಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ಮೃತಪಟ್ಟ ಮಹಿಳೆಯ ಗುರುತು ಪತ್ತೆಯಾಗದಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಏಕಾಏಕಿ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ. ಇದೊಂದು ಉಗ್ರರ ದಾಳಿಯ ಶಂಕೆ ವ್ಯಕ್ತವಾಗಿದೆ. ಈ ಘಟನೆ ಎರ್ನಾಕುಲಂನ ಕಲಮಶ್ಶೇರಿಯಲ್ಲಿರುವ ಜಾಮ್ರಾ ಇಂಟರ್‌ನ್ಯಾಷನಲ್‌ ಸಭಾಭವನದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಬೆಳಗ್ಗಿನ ಪ್ರಾರ್ಥನೆಗಾಗಿ ನೂರಾರು ಜನ ಸೇರಿದ್ದು, ಬೆಳಿಗ್ಗೆ

ಕೇರಳದ ಎರ್ನಾಕುಲಂನಲ್ಲಿ ಭೀಕರ ಸ್ಪೋಟ | ಓರ್ವ ಮಹಿಳೆ ಮೃತ್ಯು, 23 ಮಂದಿಗೆ ಗಾಯ Read More »

ನಿಲ್ಲಿಸಿದ್ದ ಆಟೋಕ್ಕೆ ತಗುಲಿದ ಬೆಂಕಿ : ಸಂಪೂರ್ಣ ನಾಶ

ಕುಂಬಳೆ: ನಿಲ್ಲಿಸಿದ್ದ ಆಟೋರಿಕ್ಷಾವೊಂದಕ್ಕೆ ಬೆಂಕಿ ಹತ್ತಿಕೊಂಡು ಸಂಪೂರ್ಣ ನಾಶಗೊಂಡ ಘಟನೆ ಬದಿಯಡ್ಕದಲ್ಲಿ ನಡೆದಿದೆ. ಬಾಯಾರು ಬಳ್ಳೂರು ನಿವಾಸಿ ರವಿಕುಮಾರ್ ಎಂಬವರ ಆಟೋರಿಕ್ಷಾ ಬೆಂಕಿಗಾಹುತಿಯಾಗಿದ್ದು, ರೋಗಿ ಒಬ್ಬರನ್ನು ರಿಕ್ಷಾದಲ್ಲಿ ಕುಂಬಳೆ ಆಸ್ಪತ್ರೆಗೆ ತಲುಪಿಸಿ, ಬಳಿಕ ರಿಕ್ಷಾವನ್ನು ಬದಿಯಡ್ಕ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿಲ್ಲಿಸಲಾಗಿತ್ತು. ರವಿಕುಮಾರ್ ಸ್ವಲ್ಪ ದೂರದಲ್ಲಿ ನಿಂತು ಓರ್ವರಲ್ಲಿ ಮಾತನಾಡುತ್ತಿದ್ದಂತೆ ರಿಕ್ಷಾ ಉರಿಯುತ್ತಿರುವುದು ಕಂಡುಬಂದಿದೆ. ಕೂಡಲೇ ಸ್ಥಳೀಯರು ಸೇರಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾದರೂ ರಿಕ್ಷಾ ಸಂಪೂರ್ಣ ಉರಿದು ಸುಟ್ಟುಹೋಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗಲಿದೆ

ನಿಲ್ಲಿಸಿದ್ದ ಆಟೋಕ್ಕೆ ತಗುಲಿದ ಬೆಂಕಿ : ಸಂಪೂರ್ಣ ನಾಶ Read More »

ಜ.22: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ : ಪ್ರಧಾನಿ ಮೋದಿಗೆ ಆಹ್ವಾನ

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರದಲ್ಲಿ ಜ.22 ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದ್ದು, ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಮಂತ್ರಣ ನೀಡಲಾಯಿತು. ಈ ಬಗ್ಗೆ ಸ್ವತಃ ಪ್ರಧಾನಿಗಳು ಟ್ವಿಟ್ ಮಾಡಿದ್ದು, ತಮ್ಮ ಜೀವಮಾನದಲ್ಲಿ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿರುವುದಕ್ಕೆ ಧನ್ಯನಾಗಿದ್ದೇನೆ ಎಂದು ಹೇಳಿದ್ದಾರೆ. ತಮಗೆ ಆಮಂತ್ರಣ ನೀಡಿದ್ದನ್ನು ಉಲ್ಲೇಖಿಸಿರುವ ಪ್ರಧಾನಿ ನರೇಂದ್ರ ಮೋದಿ, ಜೈ ಸಿಯಾರಾಮ್! ಇಂದು ಅತ್ಯಂತ ಭಾವನಾತ್ಮಕ ದಿನವಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿಗೆ ಆಮಂತ್ರಣ ನೀಡಿದ ತೀರ್ಥ ಕ್ಷೇತ್ರ

ಜ.22: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ : ಪ್ರಧಾನಿ ಮೋದಿಗೆ ಆಹ್ವಾನ Read More »

ದಯಾ ನಾಯಕ್ ತಂಡದ ಭರ್ಜರಿ ಕಾರ್ಯಾಚರಣೆ!!

ಮುಂಬಯಿ: ಕೈಂ ಬ್ರಾಂಚ್‌ನ ಬಾಂದ್ರಾ 9ರ ಘಟಕದ ಅಧಿಕಾರಿಗಳ ತಂಡದ ಸೀನಿಯರ್ ಇನ್ಸ್‌ಪೆಕ್ಟರ್ ದಯಾ ನಾಯಕ್ ಅವರ ನೇತೃತ್ವದಲ್ಲಿ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 16 ಕೋಟಿ ರೂ. ಮೌಲ್ಯದ 5.089 ಕೆಜಿ ಎಂಡಿ (ಮೆಫೆಡೋನ್) ಡ್ರಗ್ಸ್‌ನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದೆ. ಖಾರ್ ಪಶ್ಚಿಮದ ಖಾರ್ದಂಡದ ಕಾರ್ಟರ್ ರೋಡ್‌ನ ಖಲಾ ಮೈದಾನ ಸಮೀಪದ ಸ್ಮಶಾನದ ಬಳಿ ಈ ಕಾರ್ಯಾಚರಣೆ ನಡೆಸಲಾಯಿತು. ಬಂಧಿತ ಆರೋಪಿಗಳನ್ನು ರಾಹುಲ್ ಕಿಸಾನ್ ಗವಾಲಿ ಮತ್ತು ಅತುಲ್ ಕಿಸಾನ್ ಗವಾಲಿ (32)

ದಯಾ ನಾಯಕ್ ತಂಡದ ಭರ್ಜರಿ ಕಾರ್ಯಾಚರಣೆ!! Read More »

ಹಿಂಗಾರು ಹಂಗಾಮಿನ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಶೇ. 50ರಷ್ಟು ಹೆಚ್ಚಿಸಿದ ಕೇಂದ್ರ: ಪ್ರಹ್ಲಾದ್ ಜೋಶಿ

ಬೆಂಗಳೂರು: ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಇದರಿಂದ ರೈತರು ತಾವು ಬೆಳೆದ ಬೆಳೆಗಳನ್ನು ಅತ್ಯುತ್ತಮ ಬೆಲೆಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಿದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಗೋಧಿ ಸೇರಿದಂತೆ ಪ್ರಮುಖ ಆರು ಹಿಂಗಾರು ಬೆಳೆಗಳಿಗೆ ಕೇಂದ್ರ ಸರಕಾರ ಬೆಂಬಲ ಬೆಲೆ ಹೆಚ್ಚಳ ಮಾಡಿದೆ. ರೈತರ ಆದಾಯ ವೃದ್ಧಿಸುವ ಜತೆಗೆ ಉತ್ಪಾದನೆ ಹೆಚ್ಚಳಕ್ಕೆ ಪ್ರೋತ್ಸಾಹ ನೀಡಲು

ಹಿಂಗಾರು ಹಂಗಾಮಿನ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಶೇ. 50ರಷ್ಟು ಹೆಚ್ಚಿಸಿದ ಕೇಂದ್ರ: ಪ್ರಹ್ಲಾದ್ ಜೋಶಿ Read More »

ಭಾರತೀಯರನ್ನು ಹೊತ್ತ 4ನೇ ವಿಶೇಷ ವಿಮಾನ ಭಾರತಕ್ಕೆ

ಟೆಲ್ ಅವೀವ್: ಯುದ್ಧದ ಹಿನ್ನೆಲೆಯಲ್ಲಿ ಇಸ್ರೇಲ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ಕಾರ್ಯಾಚರಣೆ ಅಂಗವಾಗಿ ವಿಶೇಷ ವಿಮಾನದಲ್ಲಿ 274 ಭಾರತೀಯರ 4ನೇ ತಂಡ ಶನಿವಾರ ಇಸ್ರೇಲ್ ನಿಂದ ವಾಪಸ್ಸಾಗಿದೆ. ಆಪರೇಷನ್ ವಿಜಯ್ ಕಾರ್ಯಾಚರಣೆಯ 4ನೇ ತಂಡ ಇದಾಗಿದ್ದು, ಅ.12ರಂದು ಮೊದಲ ತಂಡ ತಾಯ್ನಾಡಿಗೆ ವಾಪಸ್ಸಾಗಿತ್ತು. 2ನೇ ತಂಡದಲ್ಲಿ 235 ಭಾರತೀಯರು ಮತ್ತು ಮೊದಲ ತಂಡದಲ್ಲಿ 212 ಭಾರತೀಯರು ತಾಯ್ತಾಡಿಗೆ ವಾಪಸ್ಸಾಗಿದ್ದರು. ಈ ಮಧ್ಯೆ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಪ್ಯಾಲೆಸ್ತೀನ್ ಅಧ್ಯಕ್ಷ ಮೊಹ್ಮದ್ ಅಬ್ಬಾಸ್

ಭಾರತೀಯರನ್ನು ಹೊತ್ತ 4ನೇ ವಿಶೇಷ ವಿಮಾನ ಭಾರತಕ್ಕೆ Read More »

ಒಕ್ಕಲಿಗರ ಅವಹೇಳನ: ಕೆ.ಎಸ್. ಭಗವಾನ್ ಮನೆಗೆ ಮುತ್ತಿಗೆ!

ಮೈಸೂರು: ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಒಕ್ಕಲಿಗ ಸಂಘದ ಸದಸ್ಯರು ಶನಿವಾರ ವಿಚಾರವಾದಿ ಕೆ.ಎಸ್. ಭಗವಾನ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಘೋಷಣೆ ಕೂಗುತ್ತಾ ರಸ್ತೆಯಲ್ಲೇ ಧರಣಿ ಕುಳಿತರು. ಧರಣಿನಿರತರನ್ನು ಪೊಲೀಸರು ವಶಕ್ಕೆ ಪಡೆದರು. ಮಹಿಷ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಭಗವಾನ್, “ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು ಎಂದು ಕುವೆಂಪು ಹೇಳಿದ್ದರು” ಎಂದು ಹೇಳಿಕೆ ನೀಡಿದ್ದರು.

ಒಕ್ಕಲಿಗರ ಅವಹೇಳನ: ಕೆ.ಎಸ್. ಭಗವಾನ್ ಮನೆಗೆ ಮುತ್ತಿಗೆ! Read More »

ಸಿಎನ್‍ಜಿ ಆಟೋ ರಿಕ್ಷಾಕ್ಕೆ ಬೆಂಕಿ: ಇಬ್ಬರು ಸಜೀವ ದಹನ

ಆಟೋ ರಿಕ್ಷಾವೊಂದಕ್ಕೆ ಹಠಾತ್ತನೇ ಬೆಂಕಿ ತಗುಲಿ ಇಬ್ಬರು ಸಜೀವ ದಹನವಾದ ಘಟನೆ ಕಣ್ಣೂರಿನ ಕತಿರೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಅಭಿಲಾಷ್ (37) ಮತ್ತು ಆತನ ಸ್ನೇಹಿತ ಸಜೀಶ್ (36) ಸುಟ್ಟು ಕರಕಲಾಗಿದ್ದಾರೆ. ಆಟೋರಿಕ್ಷಾ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಟೋ ಪಲ್ಟಿಯಾಗಿದ್ದು, ಸಿಎನ್ ಜಿ ಸಿಲಿಂಡರ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಗೆಗೆ ಆಟೋ ರಿಕ್ಷಾದ ಹತ್ತಿರಕ್ಕೂ ಹೋಗಲು ಆಗಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದು, ಪೊಲೀಸರು ಮೃತದೇಹಗಳನ್ನು  ಹೊರ

ಸಿಎನ್‍ಜಿ ಆಟೋ ರಿಕ್ಷಾಕ್ಕೆ ಬೆಂಕಿ: ಇಬ್ಬರು ಸಜೀವ ದಹನ Read More »

error: Content is protected !!
Scroll to Top