ಆಪರೇಷನ್ ಅಜಯ್: ಇಸ್ರೇಲ್’ನಿಂದ ಆಗಮಿಸಿದ ಮೊದಲ ವಿಮಾನ
ಹೊಸದಿಲ್ಲಿ: ಭೀಕರ ಸಮರ ನಡೆಯುತ್ತಿರುವ ಇಸ್ರೇಲ್ನಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರಲು ಕೇಂದ್ರ ಸರಕಾರ ಪ್ರಾರಂಭಿಸಿದ ಆಪರೇಷನ್ ಅಜಯ್ ಕಾರ್ಯಾಚರಣೆಯ ಮೊದಲ ವಿಮಾನ ಶುಕ್ರವಾರ ಬೆಳಗ್ಗೆ ದಿಲ್ಲಿಯಲ್ಲಿ ಬಂದಿಳಿದಿದೆ. 212 ಭಾರತೀಯರು ಈ ವಿಮಾನದಲ್ಲಿ ಬಂದಿದ್ದಾರೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಇಸ್ರೇಲ್ನಿಂದ ಆಗಮಿಸಿದ ಭಾರತೀಯರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಆಪರೇಷನ್ ಅಜಯ್ ಅಡಿಯಲ್ಲಿ ಇಸ್ರೇಲ್ನಿಂದ ಹಿಂತಿರುಗಲು ಬಯಸುವ ಭಾರತೀಯ ನಾಗರಿಕರಿಗೆ ಮರಳಲು ಅನುಕೂಲವಾಗುವಂತೆ ವಿಮಾನವು ಗುರುವಾರ ಸಂಜೆ ಟೆಲ್ ಅವಿವ್ನ ಬೆನ್ ಗುರಿಯನ್ ವಿಮಾನ ನಿಲ್ದಾಣದಿಂದ ಹೊರಟಿತ್ತು. […]
ಆಪರೇಷನ್ ಅಜಯ್: ಇಸ್ರೇಲ್’ನಿಂದ ಆಗಮಿಸಿದ ಮೊದಲ ವಿಮಾನ Read More »










