ದೇಶ

ಆಪರೇಷನ್‌ ಅಜಯ್‌: ಇಸ್ರೇಲ್’ನಿಂದ ಆಗಮಿಸಿದ ಮೊದಲ ವಿಮಾನ

ಹೊಸದಿಲ್ಲಿ: ಭೀಕರ ಸಮರ ನಡೆಯುತ್ತಿರುವ ಇಸ್ರೇಲ್‌ನಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರಲು ಕೇಂದ್ರ ಸರಕಾರ ಪ್ರಾರಂಭಿಸಿದ ಆಪರೇಷನ್‌ ಅಜಯ್‌ ಕಾರ್ಯಾಚರಣೆಯ ಮೊದಲ ವಿಮಾನ ಶುಕ್ರವಾರ ಬೆಳಗ್ಗೆ ದಿಲ್ಲಿಯಲ್ಲಿ ಬಂದಿಳಿದಿದೆ. 212 ಭಾರತೀಯರು ಈ ವಿಮಾನದಲ್ಲಿ ಬಂದಿದ್ದಾರೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಇಸ್ರೇಲ್‌ನಿಂದ ಆಗಮಿಸಿದ ಭಾರತೀಯರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಆಪರೇಷನ್ ಅಜಯ್ ಅಡಿಯಲ್ಲಿ ಇಸ್ರೇಲ್‌ನಿಂದ ಹಿಂತಿರುಗಲು ಬಯಸುವ ಭಾರತೀಯ ನಾಗರಿಕರಿಗೆ ಮರಳಲು ಅನುಕೂಲವಾಗುವಂತೆ ವಿಮಾನವು ಗುರುವಾರ ಸಂಜೆ ಟೆಲ್ ಅವಿವ್‌ನ ಬೆನ್ ಗುರಿಯನ್ ವಿಮಾನ ನಿಲ್ದಾಣದಿಂದ ಹೊರಟಿತ್ತು. […]

ಆಪರೇಷನ್‌ ಅಜಯ್‌: ಇಸ್ರೇಲ್’ನಿಂದ ಆಗಮಿಸಿದ ಮೊದಲ ವಿಮಾನ Read More »

ನಿಮಗಿನ್ನೂ ಎಮರ್ಜೆನ್ಸಿ ಅಲರ್ಟ್‌ ಮೆಸೇಜ್‌ ಬಂದಿಲ್ಲವೇ? ಗೊಂದಲ ಬೇಡ. ಈ ವರದಿ ಓದಿ

ಪುತ್ತೂರು: ನಿಮ್ಮ ಪಕ್ಕ ಕುಳಿತವರು, ಗೆಳೆಯರಿಗೆ, ಕುಟುಂಬಸ್ಥರ ಮೊಬೈಲ್‌ಗಳಿಗೆಲ್ಲ ಎಮರ್ಜೆನ್ಸಿ ಅಲರ್ಟ್‌ ಮೆಸೇಜ್‌ ಬಂದಿದೆ. ಆದರೆ, ನಿಮ್ಮ ಮೊಬೈಲ್‌ಗೆ ಮಾತ್ರ ಈ ಮೆಸೇಜ್‌ ಬಂದಿಲ್ಲವೇ? ಅದಕ್ಕೆ ಹಲವು ಕಾರಣಗಳಿವೆ. ಹೌದು, ದೇಶದ ಕೋಟ್ಯಂತರ ಜನರಿಗೆ ಎಮರ್ಜೆನ್ಸಿ ಅಲರ್ಟ್- ಎಕ್ಸ್‌ಟ್ರೀಮ್ ಎಂಬ ಸಂದೇಶ ರವಾನಿಸಲಾಗಿದೆ. ಈ ಸಂದೇಶವನ್ನು ಪ್ರಾಯೋಗಿಕವಾಗಿ ಕೇಂದ್ರ ಟೆಲಿಕಾಂ ಸಚಿವಾಲಯ ಕಳುಹಿಸಿದೆ. ಈ ಅಲರ್ಟ್‌ ಸುಮಾರು 11:35ಕ್ಕೆ ಫ್ಲ್ಯಾಶ್ ಸಂದೇಶ ಮತ್ತು ಆಂಡ್ರಾಯ್ಡ್ ಮತ್ತು ಐಫೋನ್‌ಗಳಿಗೆ ತುರ್ತು ಧ್ವನಿಯೊಂದಿಗೆ ಕಳುಹಿಸಿದೆ. ಒಮ್ಮೆ ಇಂಗ್ಲಿಷ್‌ನಲ್ಲಿ ಮತ್ತು ಕೆಲವೇ

ನಿಮಗಿನ್ನೂ ಎಮರ್ಜೆನ್ಸಿ ಅಲರ್ಟ್‌ ಮೆಸೇಜ್‌ ಬಂದಿಲ್ಲವೇ? ಗೊಂದಲ ಬೇಡ. ಈ ವರದಿ ಓದಿ Read More »

ಚೀನಾದ ಉಪಟಳವಿರುವ ಹಿಮ ಕಣಿವೆಯಲ್ಲಿ ನರೇಂದ್ರ ಮೋದಿ! | ಮೈ ಕೊರೆವ ಚಳಿಯಲ್ಲಿ ಧ್ಯಾನ, ಮೌನ!

ಡೆಹ್ರಾಡೂನ್‌: ಹಿಮದಿಂದ ಕೂಡಿದ ಶಿಖರಗಳಿಲ್ಲಿ ಮೈ ಕೊರೆಯುವ ಚಳಿ. ಇಂತಹ ಚಳಿಯಲ್ಲಿ ವಿಶೇಷ ದಿರಸಿನಿಂದ ಕಂಗೊಳಿಸುತ್ತಿದ್ದ ನರೇಂದ್ರ ಮೋದಿ ಮೌನಕ್ಕೆ ಶರಣಾಗಿದ್ದರು. ಇದು ಪಾರ್ವತಿ ಕುಂಡ್‌’ನಲ್ಲಿ ನರೇಂದ್ರ ಮೋದಿ ಕಂಡ ರೀತಿ. ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಶಂಕುಸ್ಥಾಪನೆ ನೆರವೇರಿಸಲು ಉತ್ತರಾಖಂಡಕ್ಕೆ ತೆರಳಿದ್ದಾರೆ. ಇದೇ ವೇಳೆ ಅವರು ಪಿಥೋರ್‌ಗಢದಲ್ಲಿರುವ ಪಾರ್ವತಿ ಕುಂಡ್‌ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಹಿಮಚ್ಛಾದಿತ ಬೆಟ್ಟಗಳ ಮಧ್ಯೆ ಕೆಲ ನಿಮಿಷಗಳ ಕಾಲ ಧ್ಯಾನದಲ್ಲಿ

ಚೀನಾದ ಉಪಟಳವಿರುವ ಹಿಮ ಕಣಿವೆಯಲ್ಲಿ ನರೇಂದ್ರ ಮೋದಿ! | ಮೈ ಕೊರೆವ ಚಳಿಯಲ್ಲಿ ಧ್ಯಾನ, ಮೌನ! Read More »

6 ಗಂಟೆ ಎನ್ಐಎ ತಂಡವನ್ನು ಸತಾಯಿಸಿದ ಆರೋಪಿ!!

ಮುಂಬಯಿ: ಪಿಎಫ್ಐ ಸಂಬಂಧಿತ ಪ್ರಕರಣದಲ್ಲಿ ದಾಳಿ ನಡೆಸುತ್ತಿರುವ ಎನ್ಐಎ ತಂಡ 7/11 ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಖುಲಾಸೆಗೊಳಿಸುವ ಮೊದಲು ಬುಧವಾರ ಉಪನಗರ ವಿಕ್ರೋಲಿಯ ಆತನ ನಿವಾಸಕ್ಕೆ ತೆರಳಿದ್ದು, ಈ ವೇಳೆ ಮನೆಯ ಬಾಗಿಲು ತೆರೆಯದ ಕಾರಣ ಆರು ಗಂಟೆಗಳಿಗೂ ಹೆಚ್ಚು ಕಾಲ ಮನೆಯ ಹೊರಗೆ ಕಾಯಬೇಕಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಬಿಹಾರ ಪ್ರವಾಸದ ವೇಳೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಿತ ಪಿಎಫ್ಐ ವಿರುದ್ಧ ದೇಶದ ಆರು ರಾಜ್ಯಗಳ ಹಲವು

6 ಗಂಟೆ ಎನ್ಐಎ ತಂಡವನ್ನು ಸತಾಯಿಸಿದ ಆರೋಪಿ!! Read More »

ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಪಾಕಿನಲ್ಲಿ ಹತ್ಯೆ!

ನವದೆಹಲಿ: ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ಶಾಹಿದ್ ಲತೀಫ್’ನನ್ನು ಪಾಕಿಸ್ತಾನದ ಸಿಯಾಲ್ಕೋಟ್’ನಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಶಾಹಿದ್ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ)ನ ಪ್ರಮುಖ ಸದಸ್ಯ. ಭಾರತದಲ್ಲಿ 16 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ ನಂತರ ಲತೀಫ್ ನನ್ನು 2010ರಲ್ಲಿ ವಾಘಾ ಮೂಲಕ ಗಡಿಪಾರು ಮಾಡಲಾಯಿತು. 1994ರ ನವೆಂಬರ್ 12ರಂದು ಆತನನ್ನು ಬಂಧಿಸಲಾಗಿತ್ತು. ಲತೀಫ್ ನನ್ನು ಭಾರತ ಸರ್ಕಾರವು ಭಯೋತ್ಪಾದಕ ಎಂದು ಪಟ್ಟಿ ಮಾಡಿದೆ

ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಪಾಕಿನಲ್ಲಿ ಹತ್ಯೆ! Read More »

ಪ್ರಧಾನಿ ಮೋದಿಗೆ ಕರೆ ಮಾಡಿದ ಇಸ್ರೇಲ್ ಪ್ರಧಾನಿ

ಹೊಸದಿಲ್ಲಿ: ಇಸ್ರೇಲ್ ದೇಶ ಎದುರಿಸುತ್ತಿರುವ ಸಂಕಷ್ಟದ ಸನ್ನಿವೇಶದಲ್ಲಿ ಭಾರತ ದೇಶದ ಜನರು ಇಸ್ರೇಲ್ ಜನತೆಯ ಪರವಾಗಿ ಬಲವಾಗಿ ನಿಲ್ಲುತ್ತಾರೆ ಎಂದು ಪ್ರಧಾನಿ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಭರವಸೆ ನೀಡಿದ್ದಾರೆ. ಇಸ್ರೇಲ್ ಪ್ರಧಾನಿ ಜೊತೆ ದೂರವಾಣಿ ಮೂಲಕ ಮಾತನಾಡಿದ ಪ್ರಧಾನಿ ಮೋದಿ ಅವರಿಗೆ ಇಸ್ರೇಲ್‌ನ ಸದ್ಯದ ಸ್ಥಿತಿಗತಿಗಳ ಕುರಿತಾಗಿ ಬೆಂಜಮಿನ್ ನೆತನ್ಯಾಹು ಮಾಹಿತಿ ನೀಡಿದರು. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ದೂರವಾಣಿ ಕರೆ ಮಾಡಿದ್ದಕ್ಕೆ

ಪ್ರಧಾನಿ ಮೋದಿಗೆ ಕರೆ ಮಾಡಿದ ಇಸ್ರೇಲ್ ಪ್ರಧಾನಿ Read More »

ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸ್‌ಗಢದಲ್ಲಿ ಆಪ್ ಸ್ಪರ್ಧೆ! ಇಂಡಿಯಾ ಕೂಟದಲ್ಲಿ ಬಿರುಕು?

ನವದೆಹಲಿ: 2024ರ ಲೋಕಸಭೆ ಚುನಾವಣೆ ಎದರಿಸಲು ಪ್ರತಿಪಕ್ಷಗಳು ಇಂಡಿಯಾ ಹೆಸರಿನಡಿ ಕೂಟವನ್ನು ರಚಿಸಿಕೊಂಡಿವೆ. ಆದರೆ, ಈ ಕೂಟದ ಪ್ರಮುಖ ಪಕ್ಷವಾಗಿರುವ ಆಮ್ ಆದ್ಮಿ ಪಾರ್ಟಿ ಮುಂಬರುವ ಮಧ್ಯ ಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದೆ. ಅಲ್ಲದೇ, ಶೀಘ್ರವೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಆಪ್‌ನ ರಾಷ್ಟ್ರೀಯ ಸಂಚಾಲಕ, ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇದರೊಂದಿಗೆ ಇಂಡಿಯಾ ಕೂಟದ ಒಗ್ಗಟ್ಟಿಲ್ಲ ಎಂಬುದಕ್ಕೆ ಮತ್ತೊಂದು ಉದಾಹರಣೆ ದೊರೆತಿದೆ. ಭಾರತೀಯ ಕೇಂದ್ರ ಚುನಾವಣಾ ಆಯೋಗ ಮಿಜೋರಾಂ,

ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸ್‌ಗಢದಲ್ಲಿ ಆಪ್ ಸ್ಪರ್ಧೆ! ಇಂಡಿಯಾ ಕೂಟದಲ್ಲಿ ಬಿರುಕು? Read More »

ಹೊಸಪೇಟೆಯಲ್ಲಿ ಭೀಕರ ಅಪಘಾತ: 7ಕ್ಕೂ ಹೆಚ್ಚು ಮಂದಿ ಸಾವು

ವಿಜಯನಗರ : ಇಲ್ಲಿನ ಹೊಸಪೇಟೆ ಹಾಗೂ ಮರಿಯಮ್ಮನಹಳ್ಳಿ ಮಧ್ಯೆ ಲಾರಿ ಮತ್ತು ಕ್ರೂಸರ್ ನಡುವೆ ಅಪಘಾತ ಸಂಭವಿಸಿದ್ದು, 7ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಹೊಸಪೇಟೆಯಿಂದ ಮರಿಯಮ್ಮನ ಹಳ್ಳಿಯತ್ತ ಲಾರಿ ಹೊರಟಿತ್ತು. ಈ ವೇಳೆ ಮರಿಯಮ್ಮನ ಹಳ್ಳಿ ಕಡೆಯಿಂದ ಹೊಸಪೇಟೆಯತ್ತ ಮತ್ತೊಂದು ಲಾರಿ ಹಾಗೂ ಕ್ರೂಸರ್ ಬರುತ್ತಿತ್ತು. ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲ ಬದಿ ಬರುತ್ತಿದ್ದ ಕ್ರೂಸರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಎರಡು ಲಾರಿ ಮಧ್ಯೆ ಸಿಕ್ಕಿಹಾಕಿಕೊಂಡ ಕ್ರೂಸರ್ ವಾಹನ ಅಪ್ಪಚ್ಚಿ ಆಗಿದೆ.

ಹೊಸಪೇಟೆಯಲ್ಲಿ ಭೀಕರ ಅಪಘಾತ: 7ಕ್ಕೂ ಹೆಚ್ಚು ಮಂದಿ ಸಾವು Read More »

ಎರಡು ಕಬಡ್ಡಿ ತಂಡಗಳ ನಡುವೆ ಮಾರಾಮಾರಿ | ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್

ಲಕ್ಕೋ: ಎರಡು ಕಬಡ್ಡಿ ತಂಡಗಳ ಆಟಗಾರರ ನಡುವೆ ಮಾರಾಮಾರಿ ನಡೆದಿರುವ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಇದೀಗ ವೈರಲ್ ಆಗಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಕಾನ್ಪುರದಲ್ಲಿ ಶನಿವಾರ ನಡೆದ ವಾರ್ಷಿಕ ಕ್ರೀಡಾಕೂಟದಲ್ಲಿ ಈ ಘಟನೆ ನಡೆದಿದೆ. ಕಬಡ್ಡಿ ಪಂದ್ಯ ನಡೆಯುತ್ತಿದ್ದ ಗ್ರೌಂಡ್’ನಲ್ಲಿ ಎರಡು ತಂಡಗಳು ಹೊಡೆದಾಡಿಕೊಂಡಿದೆ. ಆಟಗಾರರು ಪರಸ್ಪರ ಹಲ್ಲೆ ನಡೆಸಿದ್ದು, ಮೈದಾನದಲ್ಲಿದ್ದ ಕುರ್ಚಿಗಳನ್ನು ಪುಡಿಗೈದಿದ್ದಾರೆ. ತಂಡಗಳ ಆಟಗಾರರು ಒಬ್ಬರನ್ನೊಬ್ಬರು ಒದೆಯುವುದು, ಕೆಲವರು ಪರಸ್ಪರ ಕುರ್ಚಿಗಳನ್ನು ಎಸೆಯುವುದನ್ನು ವೀಡಿಯೊದಲ್ಲಿ ಕಾಣಬಹುದು. ವರದಿಯ ಪ್ರಕಾರ, ಎರಡೂ

ಎರಡು ಕಬಡ್ಡಿ ತಂಡಗಳ ನಡುವೆ ಮಾರಾಮಾರಿ | ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ Read More »

ಪಂಚರಾಜ್ಯ ಚುನಾವಣೆ ಘೋಷಿಸಿದ ಕೇಂದ್ರ ಚುನಾವಣಾ ಆಯೋಗ | ನವಂಬರ್’ನಲ್ಲಿ ಚುನಾವಣೆ, ಡಿಸೆಂಬರ್ 3ರಂದು ಫಲಿತಾಂಶ

ನವದೆಹಲಿ: ಪಂಚರಾಜ್ಯ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ರಾಜಸ್ಥಾನ್, ಛತ್ತೀಸ್’ಗಡ, ಮದ್ಯಪ್ರದೇಶ, ತೆಲಂಗಾಣ, ಮಿಜೋರಾಂ ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ದಿನಾಂಕವನ್ನು ಪ್ರಕಟ ಮಾಡಲಾಗಿದೆ. ಮಿಜೋರಾಂನಲ್ಲಿ ನವಂಬರ್ 7, ಮಧ್ಯಪ್ರದೇಶದಲ್ಲಿ ನವಂಬರ್ 17, ರಾಜಸ್ಥಾನದಲ್ಲಿ ನವಂಬರ್ 23, ತೆಲಂಗಾಣದಲ್ಲಿ ನವಂಬರ್ 30ರಂದು ಚುನಾವಣೆ ನಡೆಯಲಿದೆ. ಡಿ. 3ರಂದು ಪಂಚರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

ಪಂಚರಾಜ್ಯ ಚುನಾವಣೆ ಘೋಷಿಸಿದ ಕೇಂದ್ರ ಚುನಾವಣಾ ಆಯೋಗ | ನವಂಬರ್’ನಲ್ಲಿ ಚುನಾವಣೆ, ಡಿಸೆಂಬರ್ 3ರಂದು ಫಲಿತಾಂಶ Read More »

error: Content is protected !!
Scroll to Top