ದೇಶ

ಕೊಳಚೆ ಗುಂಡಿಗೆ ಬೀಳುವುದನ್ನು ತಪ್ಪಿಸಲು ಹೋದ ಮಹಿಳೆ ವಿದ್ಯುತ್ ಕಂಬ ಹಿಡಿದು ವಿದ್ಯುತ್ ಶಾಕ್‍ಗೆ ಬಲಿ

ಹೊಸದಿಲ್ಲಿ: ಪುತ್ತೂರು: ಕೊಳಚೆ ಗುಂಡಿಗೆ ಬೀಳುವುದನ್ನು ತಪ್ಪಿಸಲು ವಿದ್ಯುತ್ ಕಂಬವನ್ನು ಹಿಡಿದ ಮಹಿಳೆಯೊಬ್ಬರು ವಿದ್ಯುತ್ ಆಘಾತದಿಂದ ಮೃತಪಟ್ಟ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಪೂರ್ವ ದೆಹಲಿಯ ಪ್ರೀತ್ ವಿಹಾರ್ ನಿವಾಸಿ ಸಾಕ್ಷಿ ಅಹುಜಾ ಮೃತಪಟ್ಟವರು. ಇಬ್ಬರು ಮಹಿಳೆಯರು ಹಾಗೂ ಮೂವರು ಮಕ್ಕಳೊಂದಿಗೆ ಬೆಳಿಗ್ಗೆ 5.30 ರ ಸುಮಾರಿ ರೈಲು ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಸಾಕ್ಷಿ ಅಹುಜಾ ಕೊಳಚೆ ಗುಂಡಿಗೆ ಬೀಳುವುದನ್ನು ತಪ್ಪಿಸಲು ವಿದ್ಯುತ್ ಕಂಬವನ್ನು ಹಿಡಿದಿದ್ದಾರೆ. ಈ ಸಂದರ್ಭ ಭಾರೀ ಪ್ರಮಾಣದ ವಿದ್ಯುತ್‍ ಪ್ರವಹಿಸಿ […]

ಕೊಳಚೆ ಗುಂಡಿಗೆ ಬೀಳುವುದನ್ನು ತಪ್ಪಿಸಲು ಹೋದ ಮಹಿಳೆ ವಿದ್ಯುತ್ ಕಂಬ ಹಿಡಿದು ವಿದ್ಯುತ್ ಶಾಕ್‍ಗೆ ಬಲಿ Read More »

ಮಂಗಳೂರು-ದುಬೈ ವಿಮಾನ ಯಾನ ದರ ಏರಿಕೆ | ರಜೆಯ ಸಮಯ ಬಳಕೆ ಮಾಡಿಕೊಂಡ ಇಂಡಿಯೋ ಮತ್ತು ಏರ್​ ಇಂಡಿಯಾ ಎಕ್ಸ್​ಪ್ರೆಸ್

ಮಂಗಳೂರು: ಮಂಗಳೂರು-ದುಬೈ ವಿಮಾನಯಾನ ದರ ಏರಿಕೆಯಾಗಿದ್ದು, ಈ ಮೂಲಕ ಕರಾವಳಿ ಭಾಗದಿಂದ ಉದ್ಯೋಗಕ್ಕೆಂದು ದುಬೈನಲ್ಲಿ ತೆರಳುವವರಿಗೆ ಶಾಕ್​ ಎದುರಾಗಿದೆ. ಬಕ್ರೀದ್​ ರಜೆಯಲ್ಲಿ ಊರಿಗೆ ಮರಳಬೇಕು ಎಂದುಕೊಂಡಿರುವ ಮಧ್ಯಮವರ್ಗದ ಭಾರತೀಯರು ವಿಮಾನಯಾನದ ದರ ಕೇಳಿ ಸುಸ್ತಾಗಿದ್ದಾರೆ. ದುಬೈನಲ್ಲಿ ಸೆಖೆ ವಿಪರೀತಗೊಳ್ಳುವ ಹಿನ್ನೆಲೆಯಲ್ಲಿ ಹಲವೆಡೆ ಬೇಸಿಗೆ ರಜೆ ಆರಂಭಗೊಂಡಿದೆ, ಅಲ್ಲದೇ ಬಕ್ರೀದ್​ ಹಬ್ಬ ಬೇರೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ಅನೇಕರು ವೆಕೇಷನ್​ನಲ್ಲಿ ಊರಿಗೆ ಮರಳುವ ಸಿದ್ಧತೆಯಲ್ಲಿದ್ದಾರೆ. ಆದರೆ ಏಕಾಏಕಿ ಏರಿಕೆಗೊಂಡಿರುವ ವಿಮಾನಯಾನ ದರದಿಂದ ಊರಿಗೆ ಬರುವ ನಿರ್ಧಾರದಿಂದ ಹಿಂದೆ ಸರಿಯುವಂತಾಗಿದೆ.ದುಬೈ

ಮಂಗಳೂರು-ದುಬೈ ವಿಮಾನ ಯಾನ ದರ ಏರಿಕೆ | ರಜೆಯ ಸಮಯ ಬಳಕೆ ಮಾಡಿಕೊಂಡ ಇಂಡಿಯೋ ಮತ್ತು ಏರ್​ ಇಂಡಿಯಾ ಎಕ್ಸ್​ಪ್ರೆಸ್ Read More »

ಸಾವಿರಕ್ಕೂ ಅಧಿಕ ಮಹಿಳೆಯರ ಗುಂಪಿನಿಂದ ಸೇನಾ ನೆಲೆಯ ಮೇಲೆ ದಾಳಿ | ಸೆರೆಯಲ್ಲಿದ್ದ 12 ಬಂಡುಕೋರರ ಬಿಡುಗಡೆ

ಇಂಫಾಲ : ಮಹಿಳೆಯರ ಗುಂಪೊಂದು ಸೇನಾ ನೆಲೆಗೆ ಮುತ್ತಿಗೆ ಹಾಕಿ ಸೈನಿಕರ ಸೆರೆ ಹಿಡಿದಿದ್ದ 12 ಬಂಡುಕೋರರನ್ನು ಬಿಡಿಸಿಕೊಂಡು ಹೋದ ಘಟನೆ ಮಣಿಪುರದಲ್ಲಿ ನಡೆದಿದೆ. ಪೂರ್ವ ಇಂಫಾಲದ ಇಥಾಮ್ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಮಾರು 1200 ಕ್ಕೂ ಮಿಕ್ಕಿ ಮಹಿಳೆಯರ ಗುಂಪು ಸೇನಾ ಪಡೆಯನ್ನು ಸುತ್ತುವರಿದಿದ್ದು, ಬಂಡುಕೋರರನ್ನು ಬಿಡುವಂತೆ ಒತ್ತಾಯಿಸಿದೆ. ಹೆಚ್ಚಿನ ಅನಾಹುತ ತಪ್ಪಿಸಲು ಸೇವೆ ಅವರನ್ನು ಬಿಟ್ಟು ಕಳುಹಿಸಿದೆ ಎಂದು ಸೇನೆ ಟ್ವಿಟರ್ ಮೂಲಕ ತಿಳಿಸಿದೆ. ಮೆಟಾಯಿ ಬಂಡುಕೋರರ ಗುಂಪಿಗೆ ಸೇರಿದ 12

ಸಾವಿರಕ್ಕೂ ಅಧಿಕ ಮಹಿಳೆಯರ ಗುಂಪಿನಿಂದ ಸೇನಾ ನೆಲೆಯ ಮೇಲೆ ದಾಳಿ | ಸೆರೆಯಲ್ಲಿದ್ದ 12 ಬಂಡುಕೋರರ ಬಿಡುಗಡೆ Read More »

ಎರಡು ಬಸ್‍ ಗಳು ಮುಖಾಮುಖಿ ಡಿಕ್ಕಿ : ಏಳು ಸಾವು, 40 ಮಂದಿಗೆ ಗಾಯ

ತಮಿಳುನಾಡು : ತಮಿಳುನಾಡಿನ ಕಡಲೂರು ಜಿಲ್ಲೆಯ ಮೇಲ್ಪಟ್ಟಂಪಕ್ಕಂನಲ್ಲಿ ಸೋಮವಾರ ಬೆಳಗ್ಗೆ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಏಳು ಮಂದಿ ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಕೂಡ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಸ್‌ಗಳ ಡಿಕ್ಕಿಯ ಹಿಂದಿನ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಮತ್ತು ಅಪಘಾತದಲ್ಲಿ ಭಾಗಿಯಾದವರ ಜೊತೆ ಮಾತನಾಡಿದ ನಂತರವಷ್ಟೇ ತಿಳಿಯಲಿದೆ ಎಂದು ಕಡಲೂರು ಪೊಲೀಸ್

ಎರಡು ಬಸ್‍ ಗಳು ಮುಖಾಮುಖಿ ಡಿಕ್ಕಿ : ಏಳು ಸಾವು, 40 ಮಂದಿಗೆ ಗಾಯ Read More »

ಅಖಿಲ ಭಾರತ ಶಾಸಕಾಂಗ ಸಮ್ಮೇಳನದಲ್ಲಿ ಭಾಗಿಯಾದ ಪುತ್ತೂರು ಶಾಸಕ ಅಶೋಕ್ ರೈ

ಪುತ್ತೂರು: ಮುಂಬಯಿಯ ಜಿಯೋ ಕನ್ವೆನ್ಸ್ಯನ್ ಸೆಂಟರ್ ನಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಅಖಿಲ ಭಾರತ ಶಾಸಕಾಂಗ ಸಮ್ಮೇಳನಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಭಾಗವಹಿಸಿದರು. ಶಾಸಕರಿಗೆ ತರಬೇತಿ ಸೇರಿದಂತೆ ಶಾಸಕಾಂಗ ವಿಚಾರದಲ್ಲಿ ಮಾಹಿತಿ ಕಾರ್ಯಾಗಾರವೂ ಇಲ್ಲಿ ನಡೆಯುತ್ತದೆ. ದೇಶಾಧ್ಯಂತ ಸುಮಾರು‌2000 ಮಂದಿ ವಿವಿಧ ರಾಜ್ಯಗಳ ಶಾಸಕರು ಈ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ನಾಳೆ ಶನಿವಾರ ಸಮಾವೇಶ ಕೊನೆಗೊಳ್ಳಲಿದೆ.

ಅಖಿಲ ಭಾರತ ಶಾಸಕಾಂಗ ಸಮ್ಮೇಳನದಲ್ಲಿ ಭಾಗಿಯಾದ ಪುತ್ತೂರು ಶಾಸಕ ಅಶೋಕ್ ರೈ Read More »

ಬಾಲಕಿಯರಿಗೆ ಕಿರುಕುಳ | ಮದ್ರಸಾ ಶಿಕ್ಷಕನ ಬಂಧನ

ಕಾಸರಗೋಡು: ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪಿ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಹೌಸ್ ನಿವಾಸಿ ಅಬ್ದುಲ್ ಹಮೀದ್ (55) ಬಂಧಿತ ಆರೋಪಿ. ಕಾಸರಗೋಡಿನಲ್ಲಿ ಮದ್ರಸಾ ಶಿಕ್ಷಕನಾಗಿದ್ದ ಆರೋಪಿ 7-8 ನೇ ತರಗತಿ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿತ್ತು. ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬಾಲಕಿಯರಿಗೆ ಕಿರುಕುಳ | ಮದ್ರಸಾ ಶಿಕ್ಷಕನ ಬಂಧನ Read More »

ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

ತೆಲಂಗಾಣ : ತೆಲಂಗಾಣದಲ್ಲಿ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಮಗು ಗಂಭೀರ ಗಾಯಗೊಂಡಿದೆ. ತೆಲಂಗಾಣದ ಕಾಮರೆಡ್ಡಿ ಗಾಂಧಾರಿ ಮಂಡಲದ ಮುಧೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಾಯಿ ದಾಳಿಯಿಂದ ಬಾಲಕನ ತಲೆ ಹಾಗೂ ಹೊಟ್ಟೆಗೆ ಗಾಯವಾಗಿದೆ. ಗ್ರಾಮದ ಫಂಕ್ಷನ್ ಹಾಲ್‍ನ ಹೊರಗಡೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದೆ. ಗಾಯಗೊಂಡು ನೋವಿನಿಂದ ನರಳುತ್ತಿದ್ದ ಬಾಲಕನನ್ನು ಕಂಡು ಸ್ಥಳೀಯರು ನಾಯಿಯಿಂದ ಬಿಡಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ Read More »

ಮಣಿಪುರ ಜನಾಂಗೀಯ ಸಂಘರ್ಷ | ಲೂಟಿ ಮಾಡಿದ ಶಸ್ತ್ರಾಸ್ತ್ರಗಳು ಸರಕಾರದ ವಶಕ್ಕೆ

ಗುವಾಹತಿ: ಮಣಿಪುರದಲ್ಲಿ ಕಳೆದ ತಿಂಗಳಿನಿಂದ ನಡೆದ ಜನಾಂಗೀಯ ಸಂಘರ್ಷದ ವೇಳೆ ಉದ್ರಿಕ್ತ ಗುಂಪು ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ಭದ್ರತಾ ಸಿಬ್ಬಂದಿಗಳು ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆಯಲಾಗಿದ್ದು, 11763 ಮದ್ದುಗುಂಡುಗಳು, 896 ಶಸ್ತ್ರಾಸ್ತ್ರಗಳು ಹಾಗೂ 200 ಬಾಂಬ್‍ಗಳನ್ನು ವಶಕ್ಕೆ ಪಡೆದಿವೆ. ರಾಜ್ಯ ಸರಕಾರದ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಈ ಮಾಹಿತಿ ನೀಡಿದ್ದು, ಈ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಲೂಟಿ ಮಾಡಿರುವ ನಿಖರ ಮಾಹಿತಿ ಇಲ್ಲದಿದ್ದರೂ ಗ್ರೆನೇಡ್ ಮತ್ತು ಸಣ್ಣಪುಟ್ಟ ಫಿರಂಗಿಗಳು ಸೇರಿದಂತೆ 50 ಸಾವಿರ ಮದ್ದು ಗುಂಡುಗಳು,

ಮಣಿಪುರ ಜನಾಂಗೀಯ ಸಂಘರ್ಷ | ಲೂಟಿ ಮಾಡಿದ ಶಸ್ತ್ರಾಸ್ತ್ರಗಳು ಸರಕಾರದ ವಶಕ್ಕೆ Read More »

ಇಂದು ಜಮ್ಮುವಿನಲ್ಲಿ ತಿರುಪತಿ ಬಾಲಾಜಿ ದೇವಸ್ಥಾನದ ಲೋಕಾರ್ಪಣೆ | ಜಮ್ಮುವಿನ ಅತೀ ದೊಡ್ಡ ದೇವಾಲಯಗಳಲ್ಲಿ ಒಂದಾಗಿರುವ ದೇವಾಲಯ

ಜಮ್ಮು: ಜಮ್ಮು ಮತ್ತು ಕಾಶ್ಮೀರ್ ಮಜೀನ್‍ನ ಶಿವಾಲಿಕ್ ಕಾಡುಗಳ ಮಧ್ಯೆ ಇರುವ ಸುಂದರವಾದ ತಿರುಪತಿ ಬಾಲಾಜಿ ದೇವಾಲಯ ಇಂದು ಉದ್ಘಾಟನೆಗೊಳ್ಳಲಿದೆ. ಜೂ.8 ರಂದು ಭಕ್ತಾದಿಗಳಿಗೆ ದೇವಸ್ಥಾನದ ಬಾಗಿಲು ತೆರೆಯಲಿದ್ದು, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶ್ರೀ ವೆಂಕಟೇಶ್ವರ ದೇವಾ;ಲಯವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಸುಮಾರು 62 ಎಕ್ರೆ ಜಾಗದಲ್ಲಿ ನಿರ್ಮಿಸಲಾದ ಈ ದೇವಸ್ಥಾನ ಜಮ್ಮು ಪ್ರದೇಶದ ಅತೀ ದೊಡ್ಡ ದೇವಾಲಯಗಳಲ್ಲಿ ಒಂದಾಗಲಿದೆ. ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ತಿರುಪತಿ ಬಾಲಾಜಿ ದೇವಾಲಯ ಆಂಧ್ರಪ್ರದೇಶದ

ಇಂದು ಜಮ್ಮುವಿನಲ್ಲಿ ತಿರುಪತಿ ಬಾಲಾಜಿ ದೇವಸ್ಥಾನದ ಲೋಕಾರ್ಪಣೆ | ಜಮ್ಮುವಿನ ಅತೀ ದೊಡ್ಡ ದೇವಾಲಯಗಳಲ್ಲಿ ಒಂದಾಗಿರುವ ದೇವಾಲಯ Read More »

ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರ 6.5 ರಲ್ಲೇ ಮುಂದುವರಿಕೆ |ಸಾಲಗಾರರಿಗೆ ಬಿಗ್ ರಿಲೀಫ್

ದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್​ ರೆಪೋ ದರವನ್ನು 6.5 ಶೇಕಡಾದಲ್ಲಿಯೇ ಮುಂದುವರಿಸಲು ನಿರ್ಧಾರ ಕೈಗೊಂಡಿದ್ದು, ಪರಿಣಾಮ ಸಾಲಗಾರರಿಗೆ ಬಿಗ್​ ರಿಲೀಫ್​ ಸಿಕ್ಕಂತಾಗಿದೆ. ಆರ್‍ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಹಣದುಬ್ಬರ ಕಡಿಮೆಯಾದ ಹಿನ್ನೆಲೆಯಲ್ಲಿ ಬಡ್ಡಿದರ ಏರಿಕೆ ಮಾಡುವ ಪ್ರಮೇಯ ಬರಲಿಲ್ಲ. ಆದರೆ ಹಣದುಬ್ಬರ ಇಳಿಕೆಯಾಗಿದ್ದರೂ ಸಹ ಸಮಾಧಾನಕರ ಸ್ಥಿತಿಗೆ ನಾವು ಬಂದಿಲ್ಲ. ನಮ್ಮ ಗುರಿ ಇನ್ನೂ ಮೇಲ್ಮಟ್ಟದಲ್ಲಿದೆ. ಹೀಗಾಗಿ ನಾವು ಹಣದುಬ್ಬರದ ಬಗ್ಗೆ ಅರ್ಜುನನ ಕಣ್ಣಿಡಬೇಕು ಎಂದು ಹೇಳಿದ್ದಾರೆ. ಕಳೆದ ಮೂರು

ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರ 6.5 ರಲ್ಲೇ ಮುಂದುವರಿಕೆ |ಸಾಲಗಾರರಿಗೆ ಬಿಗ್ ರಿಲೀಫ್ Read More »

error: Content is protected !!
Scroll to Top