ದೇಶ

ಶುಕ್ರ ಗ್ರಹಕ್ಕೆ ಇಸ್ರೋ ಕಣ್ಣು!! | ಯೋಜನೆ ಬಗ್ಗೆ ಮಾಹಿತಿ ಹಂಚಿಕೊಂಡ ಎಸ್. ಸೋಮನಾಥ್

ನವದೆಹಲಿ: ಇಸ್ರೋ ಗಮನ ಈಗ ಶುಕ್ರನ ಮೇಲಿದೆ. ಈ ಕುರಿತು ಇಸ್ರೋ ಮುಖ್ಯಸ್ಥ ಎಸ್‌.ಸೋಮನಾಥ್‌ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಎಸ್‌. ಸೋಮನಾಥ್‌, “ಇಸ್ರೋ ಹಲವು ಮಿಷನ್‌ಗಳನ್ನು ಕೈಗೊಳ್ಳುತ್ತಿದೆ. ಈಗ ಸೌರವ್ಯೂಹದಲ್ಲಿ ಅತಿ ಹೆಚ್ಚು ಪ್ರಕಾಶಮಾನವಾದ ಗ್ರಹ ಎಂದೇ ಖ್ಯಾತಿಯಾದ ಶುಕ್ರ ಗ್ರಹದ ಅಧ್ಯಯನಕ್ಕೆ ಯೋಜನೆ ರೂಪಿಸಲಾಗಿದೆ. ಈಗಾಗಲೇ ಶುಕ್ರಯಾನದ ಪೇಲೋಡ್‌ಗಳನ್ನೂ ಅಭಿವೃದ್ಧಿಪಡಿಸಲಾಗಿದೆ. ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಶುಕ್ರ ಗ್ರಹ ನೆರವಾಗಿದೆ. ಹಾಗಾಗಿ ಶುಕ್ರಯಾನವು ತುಂಬ ಆಸಕ್ತಿದಾಯಕ […]

ಶುಕ್ರ ಗ್ರಹಕ್ಕೆ ಇಸ್ರೋ ಕಣ್ಣು!! | ಯೋಜನೆ ಬಗ್ಗೆ ಮಾಹಿತಿ ಹಂಚಿಕೊಂಡ ಎಸ್. ಸೋಮನಾಥ್ Read More »

‘ಕೆನಡಾ ಖಲಿಸ್ತಾನಿ ಉಗ್ರರ ಸ್ವರ್ಗ’: ಮತ್ತೊಮ್ಮೆ ಬಯಲು ಮಾಡಿದ ಎನ್.ಐ.ಎ. | ಖಲಿಸ್ತಾನಿ- ಪಾಕ್ ನಂಟಿನ ಮಾಹಿತಿಯೂ ಬಹಿರಂಗ!!

ಹೊಸದಿಲ್ಲಿ: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ ವಿಚಾರದಲ್ಲಿ ಭಾರತ ಮತ್ತು ಕೆನಡಾ ‘ರಾಜತಾಂತ್ರಿಕ ಸಮರ’ ಮುಂದುವರಿದಿರುವ ಹೊತ್ತಿನಲ್ಲಿಯೇ ‘ಕೆನಡಾ ಖಲಿಸ್ತಾನಿ ಉಗ್ರರ ಸ್ವರ್ಗ’ ಎಂಬ ವಾದ ಎನ್‌ಐಎ ತನಿಖೆಯಿಂದ ಇನ್ನಷ್ಟು ಬಲಗೊಂಡಿದೆ. ಖಲಿಸ್ತಾನ್- ಗ್ಯಾಂಗ್‌ಸ್ಟರ್‌ಗಳ ನಂಟನ್ನು ಕತ್ತರಿಸಲು ಹೊರಟಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ಪಂಜಾಬ್, ಹರ್ಯಾಣ, ದಿಲ್ಲಿ- ಎನ್‌ಸಿಆರ್, ರಾಜಸ್ಥಾನ, ಉತ್ತರಾಖಂಡ ಮತ್ತು ಉತ್ತರ ಪ್ರದೇಶಗಳ 50ಕ್ಕೂ ಹೆಚ್ಚು ಸ್ಥಳಗಳ ಮೇಲೆ ಬುಧವಾರ ದಾಳಿ ನಡೆಸಿದೆ. ಖಲಿಸ್ತಾನಿ- ಪಾಕಿಸ್ತಾನದ ಐಎಸ್‌ಐ ಮತ್ತು ಗ್ಯಾಂಗ್‌ಸ್ಟರ್‌ಗಳ

‘ಕೆನಡಾ ಖಲಿಸ್ತಾನಿ ಉಗ್ರರ ಸ್ವರ್ಗ’: ಮತ್ತೊಮ್ಮೆ ಬಯಲು ಮಾಡಿದ ಎನ್.ಐ.ಎ. | ಖಲಿಸ್ತಾನಿ- ಪಾಕ್ ನಂಟಿನ ಮಾಹಿತಿಯೂ ಬಹಿರಂಗ!! Read More »

ಮೂಕ ವಕೀಲೆ ಸಾರಾ ಸನ್ನಿ ಹೊಸ ಇತಿಹಾಸ!! | ವರ್ಚುವಲ್ ವಿಚಾರಣೆಯಲ್ಲಿ ಸುಪ್ರೀಂ ಗಮನ ಸೆಳೆದ ಯುವ ವಕೀಲೆ!

ನವದೆಹಲಿ: ಮೊಟ್ಟಮೊದಲ ಬಾರಿಗೆ, ಕಿವುಡ ಮತ್ತು ಮೂಗ ವಕೀಲರೊಬ್ಬರು ಸಂಕೇತ ಭಾಷೆಯ (ಇಂಟರ್’ಪ್ರಿಂಟರ್) ಸಹಾಯದಿಂದ ಸುಪ್ರೀಂ ಕೋರ್ಟ್ ನಲ್ಲಿ ವಾದಿಸಿದ್ದಾರೆ. ವಕೀಲರ ಹೆಸರು ಅಡ್ವೊಕೇಟ್ ಸಾರಾ ಸನ್ನಿ. ಸಾರಾಗೆ ಸುಪ್ರೀಂ ಕೋರ್ಟ್ ಕಲಾಪದಲ್ಲಿ ಕಾಣಿಸಿಕೊಳ್ಳುವುದು ಕನಸಿನ ಮಾತಿಗಿಂತ ಕಡಿಮೆಯಿಲ್ಲ. ಅವರು ಅಭ್ಯಾಸ ಮಾಡುವ ಮೂಕ ವಕೀಲರಾಗಿ ನೋಂದಾಯಿಸಲ್ಪಟ್ಟ ಭಾರತದ ಮೊದಲ ವಕೀಲರಾಗಿದ್ದಾರೆ. ಭಾರತದ ಮುಖ್ಯ ನ್ಯಾಯಾಧೀಶ ನ್ಯಾ। ಡಿ.ವೈ. ಚಂದ್ರಚೂಡ್‌ ಅವರಿದ್ದ ಪೀಠವು ವರ್ಚುವಲ್‌ ಆಗಿ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದ ವೇಳೆ ಸಾರಾ ಸನ್ನಿ ಎಂಬ ವಾಕ್

ಮೂಕ ವಕೀಲೆ ಸಾರಾ ಸನ್ನಿ ಹೊಸ ಇತಿಹಾಸ!! | ವರ್ಚುವಲ್ ವಿಚಾರಣೆಯಲ್ಲಿ ಸುಪ್ರೀಂ ಗಮನ ಸೆಳೆದ ಯುವ ವಕೀಲೆ! Read More »

ಶಾಲಾ ಬಸ್-ರಿಕ್ಷಾ ಡಿಕ್ಕಿ : ಐವರು ಸ್ಥಳದಲ್ಲೇ ಮೃತ್ಯು

ಕಾಸರಗೋಡು: ಶಾಲಾ ಬಸ್ ಹಾಗೂ ಆಟೋ ರಿಕ್ಷಾ ಪರಸ್ಪರ ಡಿಕ್ಕಿ ಹೊಡೆದುಕೊಂಡು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ ದಾರುಣ ಘಟನೆ ಸೆ.25 ರಂದು ಸಂಜೆ 5 ಗಂಟೆಗೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ‌ ಪೆರ್ಲ ಭಾಗದಿಂದ ಚಲಿಸುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಮತ್ತು ಮೊಗ್ರಲ್ ಪುತ್ತೂರು ಮೂಲದ ರಿಕ್ಷಾ ಅಪಘಾತಕ್ಕಿಡಾಗಿರುವುದಾಗಿ ತಿಳಿದು ಬಂದಿದೆ.  ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಡ್ರೈವರ್ ಸಹಿತ ಓರ್ವ ಪುರುಷ ಹಾಗೂ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಪೆರ್ಲ

ಶಾಲಾ ಬಸ್-ರಿಕ್ಷಾ ಡಿಕ್ಕಿ : ಐವರು ಸ್ಥಳದಲ್ಲೇ ಮೃತ್ಯು Read More »

ಗಾಂಧಿ ಜಯಂತಿಗೆ ಮೋದಿ ನೀಡಿದ ಕರೆ ಹೀಗಿದೆ ನೋಡಿ

ನವದೆಹಲಿ: ಮಹಾತ್ಮ ಗಾಂಧಿ ಜಯಂತಿಗೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 1ರಂದು ದೇಶಾದ್ಯಂತ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅಕ್ಟೋಬರ್ 1ರಂದು ಒಂದು ಗಂಟೆ ಸ್ವಚ್ಛತಾ ಕಾರ್ಯದಲ್ಲಿ ತೊಡಗುವ ಮೂಲಕ ಮಹಾತ್ಮ ಗಾಂಧೀಜಿ ಅವರಿಗೆ ಗೌರವ ಸಲ್ಲಿಸೋಣ ಎಂದು ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಕರೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಅಭಿಯಾನದ ಕುರಿತು ಮಾಹಿತಿ ಹಂಚಿಕೊಂಡಿದೆ. ಸ್ವಚ್ಛತಾ ಅಭಿಯಾನದ ಕುರಿತು

ಗಾಂಧಿ ಜಯಂತಿಗೆ ಮೋದಿ ನೀಡಿದ ಕರೆ ಹೀಗಿದೆ ನೋಡಿ Read More »

ಏಷ್ಯನ್ ಗೇಮ್ಸ್ ಏರ್ ರೈಫಲ್: ಚೀನಾದ ದಾಖಲೆ ಮುರಿದು ವಿಶ್ವ ದಾಖಲೆ ಬರೆದ ಭಾರತ!!

ಹ್ಯಾಂಗ್ ಝೂ: ಪ್ರತಿಷ್ಠಿತ 19ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಪುರುಷರ 10 ಮೀ ಏರ್ ರೈಫಲ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ವಿಶ್ವದಾಖಲೆಯನ್ನೇ ಬರೆದಿದೆ. ರುದ್ರಂಕ್ಷ್ ಪಾಟೀಲ್, ಐಶ್ವರಿ ಪ್ರತಾಪ್ ಸಿಂಗ್ ತೋಮರ್ ಮತ್ತು ದಿವ್ಯಾಂಶ್ ಸಿಂಗ್ ಪನ್ವಾರ್ ಅವರ ಮೂವರು ಒಟ್ಟು 1893.7 ಸ್ಕೋರ್‌ನೊಂದಿಗೆ ವಿಶ್ವ ದಾಖಲೆಯನ್ನು ಮುರಿದು 2023 ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕವನ್ನು ಗೆದ್ದು ಭಾರತದ ಗರಿಮೆಯನ್ನು ಮೇಲಕ್ಕೆತ್ತಿದ್ದಾರೆ. ಆಗಸ್ಟ್ 2022 ರಲ್ಲಿ ಬಾಕು ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ

ಏಷ್ಯನ್ ಗೇಮ್ಸ್ ಏರ್ ರೈಫಲ್: ಚೀನಾದ ದಾಖಲೆ ಮುರಿದು ವಿಶ್ವ ದಾಖಲೆ ಬರೆದ ಭಾರತ!! Read More »

ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್ | ಸೀಟು ಹಂಚಿಕೆಯ ಗೊಂದಲದ ಬಗ್ಗೆಯೂ ಮಾತನಾಡಿದ ಎಚ್.ಡಿ.ಕೆ.

ನವದೆಹಲಿ: ಜೆಡಿಎಸ್ ಅಧಿಕೃತವಾಗಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಸೇರಿದೆ. ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಮಾತನಾಡಿದ ಕುಮಾರಸ್ವಾಮಿ, ಅಧಿಕೃತವಾಗಿ ಮೈತ್ರಿ ಬಗ್ಗೆ ಕೆಲ ವಿಚಾರ ಚರ್ಚೆ ನಡೆಸಿದ್ದೇವೆ. ಮೈತ್ರಿ ಬಗ್ಗೆ ಎಲ್ಲಾ ರೀತಿಯಲ್ಲೂ ಸುಗಮವಾಗಿ ಚರ್ಚೆ ನಡೆಯುತ್ತಿದೆ. ಎಷ್ಟು ಸೀಟ್‌ ನಮಗೆ ಕೊಡುತ್ತಾರೆಂಬುದು ಮುಖ್ಯವಲ್ಲ ಎಂದಿದ್ದಾರೆ. ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಗೆಲ್ಲುವುದೇ ನಮ್ಮ ಗುರಿ.

ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್ | ಸೀಟು ಹಂಚಿಕೆಯ ಗೊಂದಲದ ಬಗ್ಗೆಯೂ ಮಾತನಾಡಿದ ಎಚ್.ಡಿ.ಕೆ. Read More »

ಸನಾತನ ಧರ್ಮವನ್ನು ಡೆಂಗ್ಯೂ-ಮಲೇರಿಯಾ ಎಂದಿದ್ದ ಸ್ಟಾಲಿನ್‌ಗೆ ಸಂಕಷ್ಟ!!

ನವದೆಹಲಿ: ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿ ತಮಿಳುನಾಡು ಸರ್ಕಾರ ಮತ್ತು ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. “ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ” ಎಂದು ವಿವಾದಾತ್ಮಕವಾಗಿ ಹೇಳಿಕೆ ನೀಡಿರುವ ಉದಯನಿಧಿ ಸ್ಟಾಲಿನ್ ಹಾಗೂ ಡಿಎಂಕೆ ಮಾಜಿ ಸಂಸದ ಎ. ರಾಜಾ ವಿರುದ್ಧ ಅರ್ಜಿ ದಾಖಲಾಗಿದ್ದು ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನೋಟೀಸ್ ನೀಡಿದೆ. ಸೆಪ್ಟೆಂಬರ್ 2ರಂದು ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ

ಸನಾತನ ಧರ್ಮವನ್ನು ಡೆಂಗ್ಯೂ-ಮಲೇರಿಯಾ ಎಂದಿದ್ದ ಸ್ಟಾಲಿನ್‌ಗೆ ಸಂಕಷ್ಟ!! Read More »

ಹೊಸ ಸಮವಸ್ತ್ರವನ್ನು ಸಂಸತ್ ಭದ್ರತಾ ಸಿಬ್ಬಂದಿ ಧರಿಸುವುದಿಲ್ಲವಂತೆ!!

ನವದೆಹಲಿ: ಹೊಸ ಸಂಸತ್ತಿನ ಕಟ್ಟಡಕ್ಕಾಗಿ ಸರ್ಕಾರ ತಂದ ಹೊಸ ಬಟ್ಟೆಗಳನ್ನು ಸಂಸತ್ತಿನ ಭದ್ರತಾ ವಿಭಾಗವು ಇನ್ನು ಮುಂದೆ ಧರಿಸುವುದಿಲ್ಲ, ಹಲವಾರು ಭದ್ರತಾ ಸಿಬ್ಬಂದಿಗಳು ಬಟ್ಟೆಗಳ ವಸ್ತುವು ಸಿಂಥೆಟಿಕ್ ಮತ್ತು ಶಾಖವನ್ನು ಉಂಟುಮಾಡುತ್ತದೆ ಎಂದು ದೂರಿದ್ದಾರೆ. ಬುಧವಾರ ಬೆಳಿಗ್ಗೆ ತುರ್ತು ಸಭೆಯ ನಂತರ, ಹಳೆಯ ನೇವಿ ಬ್ಲೂ ಸಫಾರಿ ಸೂಟ್ಗಳನ್ನು ಧರಿಸಲು ನಿರ್ಧಾರ ತೆಗೆದುಕೊಳ್ಳಲಾಯಿತು. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿಯ ವಿನ್ಯಾಸಗಳೊಂದಿಗೆ ಟೇಬಲ್ ಆಫೀಸ್, ನೋಟಿಸ್ ಆಫೀಸ್ ಮತ್ತು ಪಾರ್ಲಿಮೆಂಟರಿ ರಿಪೋರ್ಟಿಂಗ್ ವಿಭಾಗಗಳಲ್ಲಿನ ಸಿಬ್ಬಂದಿ ಸದಸ್ಯರು ಮತ್ತು

ಹೊಸ ಸಮವಸ್ತ್ರವನ್ನು ಸಂಸತ್ ಭದ್ರತಾ ಸಿಬ್ಬಂದಿ ಧರಿಸುವುದಿಲ್ಲವಂತೆ!! Read More »

ವಾಟ್ಸಪ್ ಚಾನೆಲ್ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ | ಜನಪ್ರಿಯವಾಗುತ್ತಿರುವ ವಾಟ್ಸಪ್‍ ನ ಹೊಸ ಫೀಚರ್ ಚಾನೆಲ್

ನವದೆಹಲಿ: ಬುಧವಾರವಷ್ಟೇ ಮೆಟಾ ಕಂಪನಿ ಲಾಂಚ್ ಮಾಡಿದ್ದ ವಾಟ್ಸಾಪ್ನ ಹೊಸ ಫೀಚರ್ ‘ಚಾನೆಲ್’ ಈಗ ಜನಪ್ರಿಯವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಈಗ ವಾಟ್ಸಾಪ್ ಚಾನೆಲ್ ಆರಂಭಿಸಿದ್ದಾರೆ. ವಾಟ್ಸಾಪ್ ಚಾನೆಲ್ನಲ್ಲಿ ತಮ್ಮ ಫಾಲೋವರ್ಸ್ಗೆ ಪಠ್ಯ, ಟೆಕ್ಸ್, ಫೋಟೋ, ವಿಡಿಯೋ, ಸ್ಟಿಕರ್ಸ್ ಷೇರ್ ಮಾಡಬಹುದು. ಜತೆಗೆ ಸಮೀಕ್ಷೆ ಕೂಡ ಕೈಗೊಳ್ಳಬಹುದು. ಜನ ಸಂಪರ್ಕಕ್ಕೆ ವಾಟ್ಸಪ್ ಚಾನೆಲ್ ಆರಂಭಿಸಿದ ದೇಶದ ಮೊಟ್ಟ ಮೊದಲ ಸಿಎಂ ಸಿದ್ದರಾಮಯ್ಯ ಏನಿದು ವಾಟ್ಸಾಪ್ ಚಾನೆಲ್?: ವಾಟ್ಸಾಪ್ ಚಾನೆಲ್, ಇದು ಒನ್ ವೇ ಬ್ರಾಡಕಾಸ್ಟರ್ ಸಾಧನವಾಗಿದೆ.

ವಾಟ್ಸಪ್ ಚಾನೆಲ್ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ | ಜನಪ್ರಿಯವಾಗುತ್ತಿರುವ ವಾಟ್ಸಪ್‍ ನ ಹೊಸ ಫೀಚರ್ ಚಾನೆಲ್ Read More »

error: Content is protected !!
Scroll to Top