ದೇಶ

ಪ್ರೇಯಸಿಯನ್ನು ಮರ ಕತ್ತರಿಸುವ ಯಂತ್ರದಿಂದ ಕತ್ತರಿಸಿ, ಕುಕ್ಕರಿನಲ್ಲಿ ಬೇಯಿಸಿದ

ಮುಂಬಯಿ: ವ್ಯಕ್ತಿಯೊಬ್ಬ ಸಂಗಾತಿಯನ್ನು ಕೊಂದು ದೇಹವನ್ನು ಮರ ಕತ್ತರಿಸುವ ಯಂತ್ರದಿಂದ ಕತ್ತರಿಸಿ ಕುಕ್ಕರ್ನಲ್ಲಿ ಬೇಯಿಸಿದ ಬರ್ಬರ ಕೃತ್ಯ ಮುಂಬಯಿಯ ಮಿರಾರೋಡ್ನಲ್ಲಿ ಸಂಭವಿಸಿದೆ.ಆರೋಪಿ ಮನೋಜ್ ಸಹಾನಿಯನ್ನು (56) ಪೊಲೀಸರು ಬಂಧಿಸಿದ್ದಾರೆ. ಈತ ತನ್ನ ಲಿವ್ ಇನ್ ಪಾರ್ಟ್ನರ್ ಸಂಗಾತಿಯನ್ನೇ ಬರ್ಬರವಾಗಿ ಸಾಯಿಸಿದ್ದಾನೆ. ಸರಸ್ವತಿ ವೈದ್ಯ (36) ಹತ್ಯೆಯಾಗಿರುವ ಮಹಿಳೆ. ಪೊಲೀಸರು ಬಂದು ಬಾಗಿಲು ತೆರೆದು ಮನೆಯೊಳಗೆ ಹೋದಾಗ ಕೊಳೆತ ಸ್ಥಿತಿಯಲ್ಲಿದ್ದ ದೇಹದ ತುಂಡುಗಳು ಎಲ್ಲೆಂದರಲ್ಲಿ ಬಿದ್ದುಕೊಂಡಿದ್ದವು. ಕೊಲೆ ನಡೆದ ಮೂರ್ನಾಲ್ಕು ದಿನಗಳ ಬಳಿಕ ಇದು ಹೊರಜಗತ್ತಿಗೆ ತಿಳಿದುಬಂದಿದೆ. ಮನೋಜ್ […]

ಪ್ರೇಯಸಿಯನ್ನು ಮರ ಕತ್ತರಿಸುವ ಯಂತ್ರದಿಂದ ಕತ್ತರಿಸಿ, ಕುಕ್ಕರಿನಲ್ಲಿ ಬೇಯಿಸಿದ Read More »

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ | ಆಂಬುಲೆನ್ಸ್ ಗೆ ಬೆಂಕಿ ಹಚ್ಚಿದ ಪರಿಣಾಮ ಮೂವರು ಸಜೀವ ದಹನ

ಮಣಿಪುರ: ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ನಡೆಯುತ್ತಿದ್ದು, ಆಂಬುಲೆನ್ಸ್ ಒಂದಕ್ಕೆ ಬೆಂಕಿ ಹಚ್ಚಿದೆ ಪರಿಣಾಮ ಮೂವರು ಸಜೀವ ದಹನಗೊಂಡ ಘಟನೆ ನಡೆದಿದೆ. ಆಂಬುಲೆನ್ಸ್ ನಲ್ಲಿದ್ದ ಏಳು ವರ್ಷದ ಗಾಯಾಳು ಬಾಲಕ, ಆತನ ತಾಯಿ ಹಾಗೂ ಮತ್ತೊಬ್ಬ ಮಹಿಳೆ ಸೇರಿದಂತೆ ಮೂವರು ದಹನಗೊಂಡಿದ್ದಾರೆ. ಮಣಿಪುರದಲ್ಲಿ ಕಳೆದ ಹಲವು ದಿನಗಳಿಂದ ಮೀಸಲಾತಿ ಬಗ್ಗೆ ಘರ್ಷಣೆಗಳು ನಡೆಯುತ್ತಿದೆ.

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ | ಆಂಬುಲೆನ್ಸ್ ಗೆ ಬೆಂಕಿ ಹಚ್ಚಿದ ಪರಿಣಾಮ ಮೂವರು ಸಜೀವ ದಹನ Read More »

ಒಡಿಶಾ ರೈಲು ದುರಂತ: ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ | ಗಾಯಾಳುಗಳಿಗೆ ರಕ್ತದಾನ ಮಾಡಲು ಸರತಿ ಸಾಲು

ಬಾಲಸೋರ್: ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತಕ್ಕೆ ದೇಶಾದ್ಯಂತ ಸಂತಾಪ ವ್ಯಕ್ತವಾಗುತ್ತಿದೆ. ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳದ ಭೀಕರತೆ ಪರಿಶೀಲನೆ ಮಾಡಿ, ಘಟನೆಯ ಬಗ್ಗೆ ಮಾಹಿತಿ‌ ಪಡೆದುಕೊಂಡರು. ಇನ್ನೊಂದೆಡೆ, ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಗಾಯಾಳುಗಳ ಜೀವ ಉಳಿಸಲು ರಕ್ತದ ಅವಶ್ಯಕತೆಯೂ ಹೆಚ್ಚುತ್ತಿದೆ. ಇದಕ್ಕೆ ಸಾರ್ವಜನಿಕರಿಂದ ಸ್ಪಂದನೆ ವ್ಯಕ್ತವಾಗಿದ್ದು, ರಕ್ತದಾನ ಮಾಡಲು ಜನರು ಸಾಲಿನಲ್ಲಿ ಜನರು ನಿಂತಿರುವ ದೃಶ್ಯವೂ ಕಂಡುಬಂದಿದೆ.

ಒಡಿಶಾ ರೈಲು ದುರಂತ: ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ | ಗಾಯಾಳುಗಳಿಗೆ ರಕ್ತದಾನ ಮಾಡಲು ಸರತಿ ಸಾಲು Read More »

ರೈಲುಗಳು ಮುಖಾಮುಖಿ ಢಿಕ್ಕಿ: ಸಾವು – ನೋವು

ಬಾಲಸೋರ್: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ರೈಲುಗಳೆರಡು ಮುಖಾಮುಖಿ ಡಿಕ್ಕಿ‌ ಹೊಡೆದಿದ್ದು, ಸಾವು – ನೋವಿನ ಪ್ರಮಾಣ ಹೆಚ್ಚಿದೆ. ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಸೂಪರ್‌ಫಾಸ್ಟ್ ರೈಲಿನ ಪಲ್ಟಿಯಾದ ಕೋಚ್‌ಗಳಲ್ಲಿ ಹೆಚ್ಚಿನವರು ಸಿಕ್ಕಿಹಾಕಿಕೊಂಡಿದ್ದಾರೆ. ಈ ರೈಲಿನಲ್ಲಿದ್ದ ಹಲವಾರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ವಿಶೇಷ ಪರಿಹಾರ ಆಯುಕ್ತರ ಕಚೇರಿಯ ಅಧಿಕಾರಿಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಅಪಘಾತದ ಸ್ಥಳಕ್ಕೆ ತಂಡಗಳನ್ನು ಕಳುಹಿಸಲಾಗಿದೆ ಎಂದು

ರೈಲುಗಳು ಮುಖಾಮುಖಿ ಢಿಕ್ಕಿ: ಸಾವು – ನೋವು Read More »

ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ಸ್ಫೋಟಕ ದಾಸ್ತಾನು | ಭಾರೀ ಪ್ರಮಾಣದ ಸ್ಫೋಟಕ ಅಬಕಾರಿ ಅಧಿಕಾರಿಗಳ ವಶ

ಕಾಸರಗೋಡು: ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ದಾಸ್ತಾನು ಇಟ್ಟಿದ್ದ ಭಾರೀ ಪ್ರಮಾಣದ ಸ್ಫೋಟಕಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿ ಮಹಮ್ಮದ್ ಮುಸ್ತಫಾ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, 7 ಸಾವಿರ ಡಿಟೋನೇಟರ್‌ಗಳು, 2,800 ಜಿಲೆಟಿನ್ ಕಡ್ಡಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಧಿಕಾರಿಗಳು ದಿನನಿತ್ಯದಂತೆ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಹಮ್ಮದ್ ಮುಸ್ತಫಾ ಎಂಬವನ ವಾಹನದಲ್ಲಿ ಸ್ಫೋಟಕ ಸಾಮಗ್ರಿಗಳು ಪತ್ತೆಯಾಗಿವೆ. ನಂತರ ಅವನ ಮನೆಗೆ ತೆರಳಿದಾಗ ಅಲ್ಲಿ

ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ಸ್ಫೋಟಕ ದಾಸ್ತಾನು | ಭಾರೀ ಪ್ರಮಾಣದ ಸ್ಫೋಟಕ ಅಬಕಾರಿ ಅಧಿಕಾರಿಗಳ ವಶ Read More »

9 ವರ್ಷ ಪೂರೈಸಿದ ಕೇಂದ್ರ ಸರಕಾರ: ಜನತೆಗೆ ಕೃತಜ್ಞತೆ ಸಲ್ಲಿಸಿದ ನರೇಂದ್ರ ಮೋದಿ

ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಮೇ 30ಕ್ಕೆ 9 ವರ್ಷಗಳನ್ನು ಪೂರೈಸಿದೆ. ಕೇಂದ್ರದ ಬಿಜೆಪಿ ಸರ್ಕಾರದ 9ನೇ ವರ್ಷಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕೃತಜ್ಞತೆ ತಿಳಿಸಿ ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ. ರಾಷ್ಟ್ರದ ಸೇವೆಯಲ್ಲಿ 9 ವರ್ಷಗಳನ್ನು ಪೂರೈಸುತ್ತಿರುವ ಈ ಸಂದರ್ಭದಲ್ಲಿ ನಾನು ನಮ್ರತೆ ಮತ್ತು ಕೃತಜ್ಞತೆಯಿಂದ ತುಂಬಿದ್ದೇನೆ. ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರ, ಕೈಗೊಂಡ ಪ್ರತಿಯೊಂದು ನಿರ್ಧಾರ ಜನರ ಜೀವನವನ್ನು ಸುಧಾರಿಸುವ ಬಯಕೆಯಿಂದ ಕೂಡಿದೆ.

9 ವರ್ಷ ಪೂರೈಸಿದ ಕೇಂದ್ರ ಸರಕಾರ: ಜನತೆಗೆ ಕೃತಜ್ಞತೆ ಸಲ್ಲಿಸಿದ ನರೇಂದ್ರ ಮೋದಿ Read More »

ಮಣಿಪುರ: ಹಿಂಸಾ ನಿರತ 40 ಕುಕಿ ಉಗ್ರರ ಹತ್ಯೆಗೈದ ಕಮಾಂಡೋ

ಹೊಸದಿಲ್ಲಿ : ಮಣಿಪುರದಲ್ಲಿ ಹಿಂಸಾಚಾರ ನಡೆಸುತ್ತಿರುವ ಕುಕಿ ಉಗ್ರರನ್ನು ನಿಗ್ರಹಿಸಲು ಅಲ್ಲಿನ ಪೊಲೀಸ್ ಪಡೆಯ ಕಮಾಂಡೋಗಳು ಉಗ್ರ ಕಾರ್ಯಾಚರಣೆ ನಡೆಸಿದ್ದಾರೆ. ಭಾನುವಾರ ಬೆಳಗ್ಗಿನಿಂದ ಮಣಿಪುರದ ವಿವಿಧೆಡೆ ಕಮಾಂಡೊಗಳು ಸಾಕಷ್ಟು ದಂಗೆಕೋರರನ್ನು ಹತ್ಯೆಗೈಯುವಲ್ಲಿ ಸಫಲರಾಗಿದ್ದಾರೆ. ಸುಮಾರು 40 ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ತಿಳಿಸಿದ್ದಾರೆ. ಈ ಉಗ್ರರು ಎಂ-16 ಮತ್ತು ಎಕೆ-47 ರೈಫಲ್​ಗಳು ಮತ್ತು ಸ್ನೈಪರ್ ಗನ್​ಗಳನ್ನು ಜನಸಾಮಾನ್ಯರ ಮೇಲೆ ಉಪಯೋಗಿಸುತ್ತಿದ್ದಾರೆ. ಹಳ್ಳಿಗಳಿಗೆ ಹೋಗಿ ಮನೆಗಳನ್ನು ಸುಟ್ಟುಹಾಕುತ್ತಿದ್ದಾರೆ. ನಮ್ಮ ಸೇನೆ ಮತ್ತು ಭದ್ರತಾ

ಮಣಿಪುರ: ಹಿಂಸಾ ನಿರತ 40 ಕುಕಿ ಉಗ್ರರ ಹತ್ಯೆಗೈದ ಕಮಾಂಡೋ Read More »

ಸಂಸತ್‌ ಭವನದಲ್ಲಿ ಸೆಂಗೋಲ್‌ ಪ್ರತಿಷ್ಠಾಪನೆ

ಹೊಸದಿಲ್ಲಿ : ಬ್ರಿಟಿಷರು ಭಾರತ ಬಿಟ್ಟು ಹೋಗುವಾಗ ಅಧಿಕಾರ ಹಸ್ತಾಂತರದ ಸಂಕೇತವಾಗಿ ನೀಡಿದ್ದ ಐತಿಹಾಸಿಕ ಸೆಂಗೋಲ್‌ ಅನ್ನು ಪ್ರಧಾನಿ ನರೇಂದ್ರ ಮೋದಿ ಇಂದು ನೂತನ ಸಂಸತ್‌ ಭವನದಲ್ಲಿ ಸ್ಪೀಕರ್‌ ಪೀಠದ ಬದಿಯಲ್ಲಿ ಪ್ರತಿಷ್ಠಾಪಿಸಿದರು. ಪುರೋಹಿತರಿಂದ ಸೆಂಗೋಲ್​​ ಸ್ವೀಕರಿಸಿದ ಪ್ರಧಾನಿ ಮೋದಿ ದಶದಿಕ್ಕುಗಳಿಗೂ ನಮಸ್ಕರಿಸಿ ಅದನ್ನು ಭಕ್ತಿಭಾವದಿಂದ ಸ್ಪೀಕರ್‌ ಆಸನದ ಬಳಿಯಲ್ಲಿ ಅದಕ್ಕಾಗಿ ರಚಿಸಿದ್ದ ಪೀಠದ ಬಳಿಗೊಯ್ದರು. ಬಳಿಕ ಸ್ಪೀಕರ್‌ ಓಂ ಬಿರ್ಲಾ ಅವರನ್ನು ಕರೆದು ಅವರ ಜತೆಗೂಡಿ ಸೆಂಗೋಲ್‌ ಪ್ರತಿಷ್ಠಾಪಿಸಿದರು. ಸಂಸತ್ ಭವನ ಪ್ರವೇಶಿಸಿದ ಮೋದಿಯವರು  ಮೊದಲಿಗೆ

ಸಂಸತ್‌ ಭವನದಲ್ಲಿ ಸೆಂಗೋಲ್‌ ಪ್ರತಿಷ್ಠಾಪನೆ Read More »

ನೂತನ ಸಂಸತ್ ಕಟ್ಟಡ ವಿವಾದ: ರಾಷ್ಟ್ರಪತಿಯೇ ಉದ್ಘಾಟಿಸಬೇಕೆಂದು ಕೋರಿ ಸುಪ್ರೀಂಗೆ ಪಿಐಎಲ್ ಸಲ್ಲಿಕೆ

ನವದೆಹಲಿ: ನೂತನ ಸಂಸತ್ ಕಟ್ಟಡವನ್ನು ಮೇ 28 ರಂದು  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಲೋಕ ಸಭೆಯ ಸಚಿವಾಲಯವು ರಾಷ್ಟ್ರಪತಿಗಳನ್ನು ಉದ್ಘಾಟನೆಗೆ ಆಹ್ವಾನಿಸದೆ ಸಂವಿಧಾನವನ್ನು ಉಲ್ಲಂಘಿಸಿದೆ ಎಂದು ಪಿಐಎಲ್ ನಲ್ಲಿ ಹೇಳಲಾಗಿದೆ. ನೂತನ ಸಂಸತ್ ಭವನದ ಉದ್ಘಾಟನೆ ಕುರಿತು ಮೇ 18 ರಂದು  ಲೋಕಸಭೆಯ ಕಾರ್ಯದರ್ಶಿ ನೀಡಿದ ಹೇಳಿಕೆ ಮತ್ತು ರಾಷ್ಟ್ರಪತಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು

ನೂತನ ಸಂಸತ್ ಕಟ್ಟಡ ವಿವಾದ: ರಾಷ್ಟ್ರಪತಿಯೇ ಉದ್ಘಾಟಿಸಬೇಕೆಂದು ಕೋರಿ ಸುಪ್ರೀಂಗೆ ಪಿಐಎಲ್ ಸಲ್ಲಿಕೆ Read More »

ವಿಜಯ್‌ ಮಲ್ಯ ಒಡೆತನದಲ್ಲಿದ್ದ ಟಿಪ್ಪುವಿನ ಖಡ್ಗ 145 ಕೋಟಿ ರೂ. ಗೆ ಹರಾಜು

ಬೆಂಗಳೂರು: ಮೈಸೂರಿನ ಹುಲಿ ಎಂದೇ ಖ್ಯಾತರಾಗಿರುವ ಟಿಪ್ಪು ಸುಲ್ತಾನ್ ಗೆ ಸೇರಿದ್ದ ಖಡ್ಗವನ್ನು ಮಂಗಳವಾರ ಲಂಡನ್‌ನ ಬೊನ್ಹಾಮ್‌ನಲ್ಲಿ ಹರಾಜು ಹಾಕಲಾಗಿದ್ದು, ಈ ಖಡ್ಗ ಬರೋಬ್ಬರಿ ರೂ. 145 ಕೋಟಿಗೆ ಹರಾಜಾಗಿದೆ. ಈ ಹಿಂದೆ ವಿಜಯ್‌ ಮಲ್ಯ ಒಡೆತನದಲ್ಲಿ ಇದ್ದ ಈ ಖಡ್ಗವನ್ನು ಮಲ್ಯ ಅವರಿಂದ ರೂ 1.5 ಕೋಟಿಗೆ ಪಡೆದುಕೊಳ್ಳಲಾಗಿತ್ತು. ಈ ಖಡ್ಗವನ್ನು ಮಲ್ಯ 2004ರಲ್ಲಿ ಕೊಂಡುಕೊಂಡಿದ್ದರು. ಬ್ಯಾಂಕ್‌ಗಳಿಗೆ ಸಾಲ ಮರುಪಾವತಿಸದೆ ವಂಚಿಸಿದ ಆರೋಪ ಎದುರಿಸುತ್ತಿರುವ ಮಲ್ಯ ಈ ಖಡ್ಗ ತಮ್ಮ ಕುಟುಂಬಕ್ಕೆ ದುರದೃಷ್ಟವಾಗಿದೆ ಎಂದು ಹೇಳಿಕೊಂಡು

ವಿಜಯ್‌ ಮಲ್ಯ ಒಡೆತನದಲ್ಲಿದ್ದ ಟಿಪ್ಪುವಿನ ಖಡ್ಗ 145 ಕೋಟಿ ರೂ. ಗೆ ಹರಾಜು Read More »

error: Content is protected !!
Scroll to Top