ದೇಶ

ಕೇಂದ್ರ ಸರಕಾರ ಮಂಡಿಸಿರುವ ಮಹಿಳಾ ಮೀಸಲು ವಿಧೇಯಕದಲ್ಲೇನಿದೆ? ಯಾವಾಗಿನಿಂದ ಜಾರಿ?

ನವದೆಹಲಿ: ಕೇಂದ್ರ ಸರ್ಕಾರವು ಹೊಸ ಸಂಸತ್ ಭವನದ ಮೊದಲ ವಿಶೇಷ ಅಧಿವೇಶನದ ಕಲಾಪದ ವೇಳೆ, ನಿರೀಕ್ಷೆಯಂತೆ ಮಹಿಳಾ ಮೀಸಲು ವಿಧೇಯಕವನ್ನು ಮಂಡಿಸಿದೆ. ಈ ವಿಧೇಯಕಕ್ಕೆ ಕೇಂದ್ರ ಸರ್ಕಾರ ನಾರಿ ಶಕ್ತಿ ವಂದನ್ ಅಧಿನಿಯಮ್ ಎಂದು ಕರೆದಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ಮೀಸಲು ಕಲ್ಪಿಸುವ ವಿಧೇಯಕವು 27 ವರ್ಷಗಳಿಂದ ನನೆಗುದಿಗೆಗೆ ಬಿದ್ದಿತ್ತು. ಇದೀಗ ಈ ವಿಧೇಯಕವನ್ನು ಮಂಡಿಸಲಾಗಿದ್ದು, ಬಹುತೇಕ ಒಪ್ಪಿಗೆ ದೊರೆಯುವುದು ಪಕ್ಕಾ ಆಗಿದೆ. ಒಂದೊಮ್ಮೆ ಈ ವಿಧೇಯಕವು ಕಾಯ್ದೆಯಾಗಿ ಬದಲಾದರೂ, ಅದರ ಜಾರಿಗೆ […]

ಕೇಂದ್ರ ಸರಕಾರ ಮಂಡಿಸಿರುವ ಮಹಿಳಾ ಮೀಸಲು ವಿಧೇಯಕದಲ್ಲೇನಿದೆ? ಯಾವಾಗಿನಿಂದ ಜಾರಿ? Read More »

7 ದಿನಗಳ ಕೋಕರ್ನಾಗ್ ಎನ್‌ಕೌಂಟರ್ ಅಂತ್ಯ | ಎನ್’ಕೌಂಟರ್ ನಡೆದ ದಟ್ಟಾರಣ್ಯದಲ್ಲಿ ನಿರ್ಬಂಧ ಮುಂದುವರಿಸಿದ್ದೇಕೆ??

ಶ್ರೀನಗರ: ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್ ಕಮಾಂಡರ್ ಉಜೈರ್ ಖಾನ್ ಹತ್ಯೆಯಾಗಿದ್ದಾನೆ. ಮತ್ತೊಬ್ಬ ಉಗ್ರನ ಶವವನ್ನು ಸೇನೆ ಪತ್ತೆ ಮಾಡಿದೆ ಎಂದು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ಭಯೋತ್ಪಾದಕ ಉಜೈರ್ ಖಾನ್‌ ತಲೆಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಉಜೈರ್ ಹತ್ಯೆಯೊಂದಿಗೆ ಒಂದು ವಾರದ ಅನಂತನಾಗ್ ಎನ್‌ಕೌಂಟರ್ ಅಂತ್ಯಗೊಂಡಿದೆ. ಅನಂತ್‌ನಾಗ್ ಜಿಲ್ಲೆಯ ಗರೋಲ್ ಅರಣ್ಯದಲ್ಲಿ ಒಂದು ವಾರದ ಜಂಟಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಕೊನೆಗೊಂಡಿದೆ ಆದರೆ ಶೋಧ ಕಾರ್ಯಾಚರಣೆ ಮುಂದುವರಿಯುತ್ತದೆ ಎಂದು ಕಾಶ್ಮೀರ

7 ದಿನಗಳ ಕೋಕರ್ನಾಗ್ ಎನ್‌ಕೌಂಟರ್ ಅಂತ್ಯ | ಎನ್’ಕೌಂಟರ್ ನಡೆದ ದಟ್ಟಾರಣ್ಯದಲ್ಲಿ ನಿರ್ಬಂಧ ಮುಂದುವರಿಸಿದ್ದೇಕೆ?? Read More »

ಹಳೆ ಸಂಸತ್ ಭವನಕ್ಕೆ ‘ಸಂವಿಧಾನ ಸದನ’ ಎಂದು ಕರೆಯಲು ಮೋದಿ ಸೂಚಿಸಿದ್ದೇಕೆ!!??

ದೆಹಲಿ: ಇಂದು ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನದ ಎರಡನೇ ದಿನವಾಗಿದೆ. ಇಂದಿನಿಂದ ಹಳೆ ಸಂಸತ್‌ ಭವನದಲ್ಲಿ ಕಲಾಪಕ್ಕೆ ವಿದಾಯ ಹೇಳುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಈ ವೇಳೆ ಹಳೆಯ ಸಂಸತ್ ಭವನದ ಬಗ್ಗೆ ಹಲವಾರು ವಿಷಯಗಳನ್ನು ಹಂಚಿಕೊಂಡರು. ಹಳೆ ಸಂಸತ್ ಭವನದ ತಮ್ಮ ಕೊನೆ ಭಾಷಣದಲ್ಲಿ ಮಾತನಾಡಿದ ಅವರು, ‘ನಾವು ಹೊಸ ಭವಿಷ್ಯವನ್ನು ಆರಂಭಿಸಲಿದ್ದೇವೆ. ಹೊಸ ಸಂಸತ್ ಭವನದತ್ತ ಹೆಜ್ಜೆ ಇಡುತ್ತಿದ್ದೇವೆ. ಸೆಂಟ್ರಲ್‌ಹಾಲ್ ನಮ್ಮ ಭಾವನೆಗಳಿಂದ ತುಂಬಿದೆ. ಹಳೆ ಸಂಸತ್ ಭವನದಲ್ಲಿ 4000ಕ್ಕೂ

ಹಳೆ ಸಂಸತ್ ಭವನಕ್ಕೆ ‘ಸಂವಿಧಾನ ಸದನ’ ಎಂದು ಕರೆಯಲು ಮೋದಿ ಸೂಚಿಸಿದ್ದೇಕೆ!!?? Read More »

ಅಭಿನವ ಹಾಲಶ್ರೀ ಬಂಧನ! | ಮತ್ತಷ್ಟು ಹೊಸ ಸಾಧ್ಯತೆಗಳಿಗೆ ತೆರೆದುಕೊಂಡ ಚೈತ್ರಾ ವಂಚನೆ ಪ್ರಕರಣ!!

ಬೆಂಗಳೂರು: ಚುನಾವಣೆ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಒಡಿಶಾದ ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧಯಾಗೆ ತೆರಳುತ್ತಿದ್ದ ವೇಳೆ ಹಾಲಶ್ರೀಯನ್ನು ಇಂದು ಮುಂಜಾನೆ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ. ಈಗಾಗಲೇ ಪ್ರಕರಣ ಮುಖ್ಯ ಆರೋಪಿಗಳಾದ ಚೈತ್ರಾ ಕುಂದಾಪುರ ಹಾಗೂ ಗಗನ್ ಕಡೂರು ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀ ಬಂಧನಕ್ಕೆ ಸಿಸಿಬಿ ಬಲೆ ಬೀಸಿತ್ತು.

ಅಭಿನವ ಹಾಲಶ್ರೀ ಬಂಧನ! | ಮತ್ತಷ್ಟು ಹೊಸ ಸಾಧ್ಯತೆಗಳಿಗೆ ತೆರೆದುಕೊಂಡ ಚೈತ್ರಾ ವಂಚನೆ ಪ್ರಕರಣ!! Read More »

ನಟ ವಿಜಯ್ ಆಂಟೋನಿ ಪುತ್ರಿ ಮೀರಾ ಆತ್ಮಹತ್ಯೆ

ಚೆನ್ನೈ: ನಟ, ನಿರ್ಮಾಪಕ, ಸಂಗೀತ ನಿರ್ದೇಶಕ ವಿಯಜ್ ಆಂಟೋನಿ ಪುತ್ರಿ ಮೀರಾ (16) ಇಂದು ಮುಂಜಾನೆ ತಮ್ಮ ಮನೆಯ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಖಿನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಆಟ, ಓದುಗಳಲ್ಲಿ ಚುರುಕಾಗಿದ್ದ ಅವರ ಖಿನ್ನತೆಗೆ ಕಾರಣಗಳು ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನಟ ವಿಜಯ್ ಆಂಟೋನಿ ಪುತ್ರಿ ಮೀರಾ ಆತ್ಮಹತ್ಯೆ Read More »

ದೇವಸ್ಥಾನದೊಳಗೆ ನಮಾಜು ಮಾಡಿದ ಮಹಿಳೆಯರು!! | ಪೊಲೀಸರ ಬಳಿ ಕಾರಣ ತಿಳಿಸಿದ ತಾಯಿ – ಮಗಳು!!

ಲಖನೌ: ಉತ್ತರ ಪ್ರದೇಶದ ಬರೇಲಿಯ ಶಿವ ದೇವಸ್ಥಾನವೊಂದರಲ್ಲಿ ನಮಾಜು ಮಾಡಿದ ಆರೋಪದ ಮೇಲೆ 38 ವರ್ಷದ ಮಹಿಳೆ ಮತ್ತು ಆಕೆಯ ಮಗಳನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಓರ್ವ ಧರ್ಮಗುರುವನ್ನು ಕೂಡ ಬಂಧಿಸಲಾಗಿದೆ. ಶುಕ್ರವಾರ ಈ ಘಟನೆ ನಡೆದಿದೆ ಎಂದು ಆರೋಪಿಸಿ ಕೇಸರಪುರ ಗ್ರಾಮದ ಪ್ರೇಮ್ ಸಿಂಗ್ ಎಂಬವರು ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಧರ್ಮಗುರುವೊಬ್ಬರ ಸಲಹೆಯ ಮೇರೆಗೆ ಮಹಿಳೆ ಮತ್ತು ಅವರ ಮಗಳು ದೇವಸ್ಥಾನದ ಆವರಣದಲ್ಲಿ

ದೇವಸ್ಥಾನದೊಳಗೆ ನಮಾಜು ಮಾಡಿದ ಮಹಿಳೆಯರು!! | ಪೊಲೀಸರ ಬಳಿ ಕಾರಣ ತಿಳಿಸಿದ ತಾಯಿ – ಮಗಳು!! Read More »

ಚೌತಿಯಂದು ಪ್ರವೇಶಿಸುವ ಹೊಸ, ಅತ್ಯಾಧುನಿಕ ಸಂಸತ್ ಕಟ್ಟಡ ಭಾರತದ ಕನಸನ್ನು ನನಸಾಗಿಸಲಿದೆ ಎಂದ ಪ್ರಧಾನಿ | ಮಾಧ್ಯಮ ಪ್ರತಿನಿಧಿಗಳೊಂದಿಗಿನ ಮೋದಿ ಮಾತು ಇಲ್ಲಿದೆ…

ನವ ದೆಹಲಿ: ಸಂಸತ್ತಿನ ಈ ವಿಶೇಷ ಅಧಿವೇಶನದ ಅವಧಿ ಚಿಕ್ಕದಾಗಿದ್ದರೂ ಕೂಡ ಸಮಯ ಬಹಳ ಮಹತ್ವದ್ದಾಗಿದ್ದು, ದೊಡ್ಡದಾಗಿದೆ. ಇದೊಂದು ಐತಿಹಾಸಿಕ ನಿರ್ಧಾರಗಳ ಅಧಿವೇಶನ. ಈ ಅಧಿವೇಶನದ ವಿಶೇಷತೆ ಏನೆಂದರೆ ಸ್ವಾತಂತ್ರ್ಯ ನಂತರ ಭಾರತದ 75 ವರ್ಷಗಳ ಪಯಣ ಹೊಸ ಗಮ್ಯದಿಂದ ಆರಂಭವಾಗುತ್ತಿದೆ. ಈಗ ಹೊಸ ಜಾಗದಿಂದ ಪಯಣವನ್ನು ಮುಂದಕ್ಕೆ ಕೊಂಡೊಯ್ಯುತ್ತಿರುವಾಗಲೇ 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕಿದೆ. ಮುಂಬರುವ ಎಲ್ಲಾ ನಿರ್ಧಾರಗಳನ್ನು ಹೊಸ ಸಂಸತ್ತಿನ ಕಟ್ಟಡದಲ್ಲಿ ತೆಗೆದುಕೊಳ್ಳಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು

ಚೌತಿಯಂದು ಪ್ರವೇಶಿಸುವ ಹೊಸ, ಅತ್ಯಾಧುನಿಕ ಸಂಸತ್ ಕಟ್ಟಡ ಭಾರತದ ಕನಸನ್ನು ನನಸಾಗಿಸಲಿದೆ ಎಂದ ಪ್ರಧಾನಿ | ಮಾಧ್ಯಮ ಪ್ರತಿನಿಧಿಗಳೊಂದಿಗಿನ ಮೋದಿ ಮಾತು ಇಲ್ಲಿದೆ… Read More »

8ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡ ಭಾರತ!

ಕೊಲಂಬೊ: ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಲಂಕಾ ತಂಡವನ್ನು ಮಣಿಸಿ ಭಾರತ 8ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡಿದೆ. ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾಗೆ ಭಾರತೀಯ ಬೌಲರ್ ಗಳು ಮಾರಕವಾಗಿ ಕಾಡಿದರು. ಹೀಗಾಗಿ ಲಂಕಾ 50 ರನ್ ಗಳಿಗೆ ಆಲೌಟ್ ಆಗಿದ್ದು ಭಾರತಕ್ಕೆ 51 ರನ್ ಗಳ ಗುರಿ ನೀಡಿತ್ತು. ಈ ಸುಲಭ ಮೊತ್ತದ ಗುರಿ ಬೆನ್ನಟ್ಟಿದ ಭಾರತ 6.1 ಓವರ್ ಗೆ ವಿಕೆಟ್ ನಷ್ಟವಿಲ್ಲದೆ 51

8ನೇ ಬಾರಿಗೆ ಏಷ್ಯಾಕಪ್ ಮುಡಿಗೇರಿಸಿಕೊಂಡ ಭಾರತ! Read More »

ಅಬುಧಾಬಿಗೆ ತೆರಳುತ್ತಿದ್ದ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ!

ಹೊಸದಿಲ್ಲಿ: ಲಕ್ನೋದಿಂದ ಅಬುಧಾಬಿಗೆ ಹೊರಟಿದ್ದ ಇಂಡಿಗೋ ವಿಮಾನವು ಹೈಡ್ರಾಲಿಕ್ ಸಿಸ್ಟಮ್ ಸಮಸ್ಯೆಯ ಕಾರಣದಿಂದ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ. 6E 093 ಫ್ಲೈಟ್‌ ನಲ್ಲಿ 150ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ವಿಮಾನವು ಹೈಡ್ರಾಲಿಕ್ ಸಿಸ್ಟಮ್ ಸಮಸ್ಯೆಯನ್ನು ಹೊಂದಿತ್ತು ಮತ್ತು ನಂತರ ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಮೂಲಗಳು ತಿಳಿಸಿವೆ. ಘಟನೆಯ ಕುರಿತು ಇಂಡಿಗೋದಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಇದಕ್ಕೂ ಮೊದಲು,

ಅಬುಧಾಬಿಗೆ ತೆರಳುತ್ತಿದ್ದ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ! Read More »

ಒಂದೇ ಕಾರ್ಯಕ್ರಮದಲ್ಲಿ 7000ಕ್ಕೂ ಅಧಿಕ ಮಂದಿಯಿಂದ ಅಂಗಾಂಗ ದಾನದ ಪ್ರತಿಜ್ಞೆ

ಲಕ್ನೋ: ಒಂದೇ ಕಾರ್ಯಕ್ರಮದಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಮಂದಿ ಅಂಗಾಂಗ ದಾನ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.ಶನಿವಾರ(ಸೆ.16 ರಂದು)ಉತ್ತರ ಪ್ರದೇಶದ ಆಗ್ರಾದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಆರೋಗ್ಯ ಖಾತೆ ರಾಜ್ಯ ಸಚಿವ ಎಸ್ಪಿ ಸಿಂಗ್ ಬಘೇಲ್ ನೇತೃತ್ವದಲ್ಲಿ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮದಲ್ಲಿ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ 7,000 ಕ್ಕೂ ಹೆಚ್ಚು ಜನರು ಶನಿವಾರ ತಮ್ಮ ಅಂಗಾಂಗಗಳನ್ನು ದಾನ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.2024 ರ ವೇಳೆಗೆ ಉತ್ತರ ಪ್ರದೇಶದ ಪ್ರತಿ ವೈದ್ಯಕೀಯ

ಒಂದೇ ಕಾರ್ಯಕ್ರಮದಲ್ಲಿ 7000ಕ್ಕೂ ಅಧಿಕ ಮಂದಿಯಿಂದ ಅಂಗಾಂಗ ದಾನದ ಪ್ರತಿಜ್ಞೆ Read More »

error: Content is protected !!
Scroll to Top